ಕರಾವಳಿ

ಮಂಗಳೂರು: ಕಂಬಳಕ್ಕೆ ಹೊಸ ನಿಯಮ!

(ನ್ಯೂಸ್‌ ಕಡಬ) newskadaba.com, ಡಿ.08: ತುಳು ನಾಡಿನ ಪರಂಪರೆಯ ಕಂಬಳದಲ್ಲಿ ಈ ವರ್ಷದಿಂದ ಹಲವು ಮಹತ್ವದ ಬದಲಾವಣೆಗಳನ್ನು ಜಾರಿಗೊಳಿಸಲಾಗುತ್ತಿದೆ. ಹಗ್ಗ ಹಿರಿಯ, ಹಗ್ಗ ಕಿರಿಯ, ನೇಗಿಲು ಹಿರಿಯ, ನೇಗಿಲು ಕಿರಿಯ, ಅಡ್ಡ ಹಲಗೆ ಮತ್ತು ಕನೆ ಹಲಗೆ ಎಂಬ ಆರು ವಿಭಾಗಗಳಲ್ಲಿ ನಡೆಯುವ ಕಂಬಳ ಸ್ಪರ್ಧೆಗಳಿಗೆ ಸಮಯ ನಿರ್ವಹಣೆ ಮತ್ತು ಅಂಕ ನಿರ್ಧಾರಕ್ಕೆ ಸಂಬಂಧಿಸಿದಂತೆ ಕಂಬಳ ಸಮಿತಿ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಕನೆ ಹಲಗೆ ವಿಭಾಗದಲ್ಲಿ ಈಗಾಗಲೇ ಇದ್ದ ಗೊಂದಲದ ನಿರ್ವಹಣೆಗೆ ಈ ಬಾರಿ ಸಮಿತಿ […]

ಮಂಗಳೂರು: ಕಂಬಳಕ್ಕೆ ಹೊಸ ನಿಯಮ! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ: ಸೈಂಟ್ ಜೋಕಿಮ್ಸ್ ಪ್ರೌಢಶಾಲೆಯಲ್ಲಿ ‘ಉತ್ಸವ 2K25’ ಆಚರಣೆ

(ನ್ಯೂಸ್‌ ಕಡಬ) newskadaba.com, ಡಿ.08: ಸೈಂಟ್ ಜೋಕಿಮ್ಸ್ ಪ್ರೌಢಶಾಲೆಯ ವಾರ್ಷಿಕ ದಿನಾಚರಣೆ ‘ಉತ್ಸವ್ 2K25’ ಸಂಸ್ಥೆಯ ಸಭಾಂಗಣದಲ್ಲಿ ನೆರವೇರಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಸಂಸ್ಥೆಯ ಹಳೆ ವಿದ್ಯಾರ್ಥಿನಿ  ನಿಶ್ಚಿತಾ ಚೇತನ್ ಕಾರ್ಯಕ್ರಮಕ್ಕೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳನ್ನು ಇಂದಿನ ಆಧುನಿಕ ಯುಗದಲ್ಲಿ ಸಮಾನವಾಗಿ ಕಾಣುವ ಸನ್ನಿವೇಶ ನಮ್ಮ ಮುಂದಿದೆ. ಕೌಶಲ್ಯಗಳನ್ನು ರೂಢಿಸಿಕೊಳ್ಳಲು ಹೊಸ ಹೊಸ ಪರಿಕಲ್ಪನೆಯ ಇಂತಹ ರಚನಾತ್ಮಕ ಕಾರ್ಯಕ್ರಮಗಳು ಅಗತ್ಯ ಎಂದು ಅತಿಥಿ ಭಾಷಣದಲ್ಲಿ ಅವರು ಹೇಳಿದರು.

ಕಡಬ: ಸೈಂಟ್ ಜೋಕಿಮ್ಸ್ ಪ್ರೌಢಶಾಲೆಯಲ್ಲಿ ‘ಉತ್ಸವ 2K25’ ಆಚರಣೆ Read More »

ಕರಾವಳಿ

ಉಡುಪಿ: ಪೊಲೀಸ್ ಇಲಾಖೆಯಿಂದ ‘ಪೀಕ್ ಕ್ಯಾಪ್’ ಹಸ್ತಾಂತರ

(ನ್ಯೂಸ್‌ ಕಡಬ) newskadaba.com, ಡಿ.08: ರಾಜ್ಯ ಸರ್ಕಾರದ ಆದೇಶದಂತೆ, ಎಲ್ಲಾ ಪೊಲೀಸ್ ಸಿಬ್ಬಂದಿಗೆ ‘ಪೀಕ್ ಕ್ಯಾಪ್’ ವಿತರಿಸುವ ಪ್ರಕ್ರಿಯೆ ಪ್ರಾರಂಭವಾಗಿದ್ದು, ಉಡುಪಿ ಜಿಲ್ಲೆಯಲ್ಲಿಯೂ ಇದನ್ನು ಜಾರಿಗೆ ತರಲಾಗಿದೆ. ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಅವರು ಸಾಂಕೇತಿಕವಾಗಿ ಕ್ಯಾಪ್‌ಗಳನ್ನು ವಿತರಿಸಿದರು. ಜಿಲ್ಲೆಯಲ್ಲಿ 1,400 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳಿದ್ದಾರೆ. ಇವರಲ್ಲಿ ಸುಮಾರು 200 ಪೀಕ್ ಕ್ಯಾಪ್‌ಗಳು ಈಗಾಗಲೇ ಬಂದಿದ್ದು, ವಿತರಣಾ ಪ್ರಕ್ರಿಯೆ ನಡೆಯುತ್ತಿದೆ. ಪೊಲೀಸ್ ಇಲಾಖೆಯ ಮೂಲಗಳ ಪ್ರಕಾರ, ಉಳಿದ ಕ್ಯಾಪ್‌ಗಳು ಹಂತ ಹಂತವಾಗಿ ಬರಲಿವೆ.

ಉಡುಪಿ: ಪೊಲೀಸ್ ಇಲಾಖೆಯಿಂದ ‘ಪೀಕ್ ಕ್ಯಾಪ್’ ಹಸ್ತಾಂತರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಅಲ್ಪ ಇಳಿಕೆ ಇಂದಿನ ಚಿನ್ನದ ದರ

(ನ್ಯೂಸ್‌ ಕಡಬ) newskadaba.com, ಡಿ.06  ಚಿನ್ನದ ದರದಲ್ಲಿ ಇಂದು ಭಾರೀ ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 50 ರೂ. ಇಳಿಕೆ ಕಂಡು ಬಂದಿದ್ದು 11,930 ರೂ ಇದೆ. 24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನ 54 ರೂ. ಇಳಿಕೆ ಕಂಡು ಬಂದಿದ್ದು, 13,015 ರೂ. ಇದೆ. 22 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 95,440 ರೂ. ಇದ್ದರೆ, 10 ಗ್ರಾಂಗೆ ನೀವು 1,19,300 ರೂ. ಮತ್ತು 100

ಅಲ್ಪ ಇಳಿಕೆ ಇಂದಿನ ಚಿನ್ನದ ದರ Read More »

ಕರಾವಳಿ, ಕರ್ನಾಟಕ

ಮಂಗಳೂರು : ಆರೋಪಿಗಳು ಸೆರೆಸಿಕ್ಕರೂ ವಾಹನ ಕಳವು ಸರಣಿಗೆ ಬೀಳದ ಬ್ರೇಕ್ !

(ನ್ಯೂಸ್‌ ಕಡಬ) newskadaba.com, ಡಿ.06 : ನಗರದಲ್ಲಿ ದ್ವಿಚಕ್ರ ವಾಹನ ಕಳ್ಳತನ ಸರಣಿ ಮುಂದುವರಿದಿದ್ದು, ಈಗಾಗಲೇ ಇಬ್ಬರು ಆರೋಪಿಗಳು ಪೊಲೀಸರ ಕೈಗೆ ಸಿಕ್ಕಿಬಿದ್ದರೂ, ಕಳ್ಳತನ ಸರಣಿಗೆ ಬ್ರೇಕ್‌ ಬಿದ್ದಿಲ್ಲ. ಹಾಗಾಗಿ ಇದು ಒಂದೇ ತಂಡದ ಕೃತ್ಯವಲ್ಲ. ಬೇರೆ ಬೇರೆ ತಂಡಗಳು ಅಥವಾ ವ್ಯಕ್ತಿಗಳು ಇದರ ಹಿಂದೆ ಇರುವುದು ಬಹುತೇಕ ಖಚಿತವಾಗಿದೆ. ಸದ್ಯ ಸಿಕ್ಕಿ ಬಿದ್ದಿರುವ ಇಬ್ಬರು ಆರೋಪಿಗಳು ಕೇರಳ ಮೂಲದವರಾಗಿದ್ದು, ಯಾವುದೋ ಉದ್ದೇಶಕ್ಕೆ ನಗರಕ್ಕೆ ಬಂದವರು ಹೋಗುವಾಗ ದ್ವಿಚಕ್ರ ವಾಹನ ಕಳವು ಮಾಡಿಕೊಂಡು ಹೋಗಿದ್ದರು. ಬಂಧಿತರಿಂದ ಕಳವು ಮಾಡಿದ್ದ ಎರಡು

ಮಂಗಳೂರು : ಆರೋಪಿಗಳು ಸೆರೆಸಿಕ್ಕರೂ ವಾಹನ ಕಳವು ಸರಣಿಗೆ ಬೀಳದ ಬ್ರೇಕ್ ! Read More »

ಕರಾವಳಿ

ಕಾರಿಗೆ ಡಿಕ್ಕಿ ಹೊಡೆದು ಮನೆ ಮೇಲೆ ಬಿದ್ದ ಬೃಹತ್ ಕ್ರೇನ್; ಮನೆಗೆ ಹಾನಿ

(ನ್ಯೂಸ್‌ ಕಡಬ) newskadaba.com, ಡಿ.05 : ಬೃಹತ್ ಕ್ರೇನ್‌ವೊಂದು ಕಾರೊಂದಕ್ಕೆ ಢಿಕ್ಕಿ ಹೊಡೆದು ಮನೆ ಮೇಲೆ ಬಿದ್ದ ಪರಿಣಾಮ ಮನೆ ಜಖಂಗೊಂಡ ಘಟನೆ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊರಂತಬೆಟ್ಟು ಬಳಿ ಡಿ. 5ರಂದು ಸಂಭವಿಸಿದೆ. ಮುಲ್ಕಿ- ಮೂಡುಬಿದಿರೆ ರಾಜ್ಯ ಹೆದ್ದಾರಿಯಲ್ಲಿ ಕಲ್ಲಮುಂಡ್ಕೂರಿನ ಮೊರಂತಬೆಟ್ಡುವಿನ ತಿರುವಿನಲ್ಲಿ ಈ ಘಟನೆ ನಡೆದಿದೆ. ಅತೀ ವೇಗದಲ್ಲಿ ಸಂಚರಿಸುತ್ತಿದ್ದ ಕ್ರೇನ್ ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದಿದೆ. ಇದರಿಂದ ಮನೆಗೆ ಹಾನಿ ಸಂಭವಿಸಿದೆ. ಅವಘಡದ ವೇಳೆ ಮನೆಮಂದಿ ಮನೆಯ ಇನ್ನೊಂದು

ಕಾರಿಗೆ ಡಿಕ್ಕಿ ಹೊಡೆದು ಮನೆ ಮೇಲೆ ಬಿದ್ದ ಬೃಹತ್ ಕ್ರೇನ್; ಮನೆಗೆ ಹಾನಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಇಂಡಿಗೋ ವಿಮಾನ ಸೇವೆಯಲ್ಲಿ ವ್ಯತ್ಯಯ 10 ವಿಮಾನಗಳ ಸಂಚಾರ ರದ್ದು

(ನ್ಯೂಸ್‌ ಕಡಬ) newskadaba.com, ಡಿ.05 : ದೇಶಾದ್ಯಂತ ಇಂಡಿಗೋ ವಿಮಾನ ಸೇವೆಯಲ್ಲಿ ಉಂಟಾದ ವ್ಯತ್ಯಯವು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯಾಚರಣೆಯ ಮೇಲೂ ಪರಿಣಾಮ ಬೀರಿದೆ. ಇದರ ಪರಿಣಾಮವಾಗಿ ಡಿಸೆಂಬರ್ 4 ರಂದು ಆಗಮಿಸುವ ಮತ್ತು ನಿರ್ಗಮಿಸುವ ಒಟ್ಟು 10 ವಿಮಾನಗಳು ರದ್ದಾಗಿವೆ. ಮುಂಬೈ, ನವದೆಹಲಿ ಮತ್ತು ಬೆಂಗಳೂರಿಗೆ ಹೋಗುವ ಮತ್ತು ಬರುವ ವಿಮಾನಗಳು ಗುರುವಾರ ರದ್ದಾಗಿದೆ. ಅನೇಕ ಪ್ರಯಾಣಿಕರಿಗೆ ಕೆಲವು ಗಂಟೆಗಳ ಮುಂಚಿತವಾಗಿ ಮಾಹಿತಿ ರವಾನೆ ಆದ ಕಾರಣದಿಂದ ಬಹುತೇಕರು ವಿಮಾನ ನಿಲ್ದಾಣಕ್ಕೆ ಆಗಮಿಸಲಿಲ್ಲ. ಆದರೆ

ಮಂಗಳೂರು: ಇಂಡಿಗೋ ವಿಮಾನ ಸೇವೆಯಲ್ಲಿ ವ್ಯತ್ಯಯ 10 ವಿಮಾನಗಳ ಸಂಚಾರ ರದ್ದು Read More »

ಕರಾವಳಿ

ಮಂಗಳೂರಿನಲ್ಲಿ ‘ಡಿಜಿಟಲ್ ಅರೆಸ್ಟ್’ ವಂಚನೆ ಯತ್ನ: ಬ್ಯಾಂಕ್ ಮ್ಯಾನೇಜರ್ ಸಮಯಪ್ರಜ್ಞೆಯಿಂದ ₹84 ಲಕ್ಷ ಹಣ ಉಳಿತಾಯ

(ನ್ಯೂಸ್‌ ಕಡಬ) newskadaba.com, ಡಿ.05 : ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿಯಲ್ಲಿ ವೃದ್ಧ ದಂಪತಿಯನ್ನು ಗುರಿಯಾಗಿಸಿ ನಡೆದ ಭೀಕರ ‘ಡಿಜಿಟಲ್ ಅರೆಸ್ಟ್’ (Digital Arrest) ವಂಚನೆಯ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ವಂಚನೆಯಲ್ಲಿ ದಂಪತಿಗಳ 84 ಲಕ್ಷ ರೂ. ಮೊತ್ತದ ಹಣವನ್ನು ಕದಿಯಲು ಯತ್ನಿಸಲಾಗಿತ್ತು. ಆದರೆ, ದಂಪತಿಯ ಬ್ಯಾಂಕ್ ಮ್ಯಾನೇಜರ್‌ ಅವರ ಸಮಯಪ್ರಜ್ಞೆ ಮತ್ತು ತಕ್ಷಣದ ಕ್ರಮದಿಂದಾಗಿ ಬೃಹತ್ ವಂಚನೆಯು ತಪ್ಪಿದ್ದು, ಮಂಗಳೂರು ಗ್ರಾಮಾಂತರ ಭಾಗದ ಜನರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಿದೆ. ಡಿ. 1ರ ಸಂಜೆ,

ಮಂಗಳೂರಿನಲ್ಲಿ ‘ಡಿಜಿಟಲ್ ಅರೆಸ್ಟ್’ ವಂಚನೆ ಯತ್ನ: ಬ್ಯಾಂಕ್ ಮ್ಯಾನೇಜರ್ ಸಮಯಪ್ರಜ್ಞೆಯಿಂದ ₹84 ಲಕ್ಷ ಹಣ ಉಳಿತಾಯ Read More »

ಕರಾವಳಿ

ಮಂಗಳೂರು – ಶಬರಿಮಲೆ ವಿಶೇಷ ರೈಲುಗಳ ಓಡಾಟ

(ನ್ಯೂಸ್‌ ಕಡಬ) newskadaba.com, ಡಿ.04 : ಶಬರಿಮಲೆ ಯಾತ್ರಾರ್ಥಿಗಳ ದಟ್ಟಣೆಯ ಹಿನ್ನೆಲೆಯಲ್ಲಿ ಮಂಗಳೂರು ಜಂಕ್ಷನ್‌ ಮತ್ತು ತಿರುವನಂತಪುರ ನಾರ್ತ್‌ ನಿಲ್ದಾಣ ಗಳ ನಡುವೆ ವಿಶೇಷ ರೈಲುಗಳು ಸಂಚರಿಸಲಿವೆ. ಮಂಗಳೂರು ಜಂಕ್ಷನ್‌-ತಿರುವನಂತಪುರ ನಾರ್ತ್‌ ವೀಕ್ಲಿ ಎಕ್ಸ್‌ ಪ್ರೆಸ್‌ ಸ್ಪೆಷಲ್‌ (ನಂ. 06041) ರೈಲು ಡಿ.7ರಿಂದ ಜ.18ರ ವರಗೆ ಪ್ರತಿ ರವಿವಾರ ಸಂಜೆ 6ಕ್ಕೆ ಮಂಗಳೂರು ಜಂಕ್ಷನ್‌ನಿಂದ ಹೊರಟು ಮರುದಿನ ಬೆಳಗ್ಗೆ 6.30ಕ್ಕೆ ತಿರುವನಂತಪುರ ನಾರ್ತ್‌ ತಲುಪಲಿದೆ. ಅದೇ ರೀತಿ ತಿರುವನಂತಪುರ ನಾರ್ತ್‌-ಮಂಗಳೂರು ಜಂಕ್ಷನ್‌ ವೀಕ್ಲಿ ಎಕ್ಸ್‌ಪ್ರೆಸ್‌ ಸ್ಪೆಷಲ್‌ (ನಂ.06042)

ಮಂಗಳೂರು – ಶಬರಿಮಲೆ ವಿಶೇಷ ರೈಲುಗಳ ಓಡಾಟ Read More »

ಕರಾವಳಿ

ಸಿಂಗಲ್ ಸೈಟ್, 9/11 ಅರ್ಜಿಗಳ ಕಾಲ ಮಿತಿಯಲ್ಲಿ ಇತ್ಯರ್ಥ – ಸ್ಪೀಕರ್ ಸೂಚನೆ

(ನ್ಯೂಸ್‌ ಕಡಬ) newskadaba.com, ಡಿ.04 : ಸಿಂಗಲ್ ಸೈಟ್ ಹಾಗೂ 9/11  ಅರ್ಜಿಗಳನ್ನು   ಅನಗತ್ಯ ವಿಳಂಬ ಮಾಡದೆ ಕಾಲಮಿತಿಯಲ್ಲಿ ಇತ್ಯರ್ಥಗೊಳಿಸುವಂತೆ  ವಿಧಾನಸಭೆ  ಸ್ಪೀಕರ್  ಯು.ಟಿ ಖಾದರ್  ಸೂಚಿಸಿದ್ದಾರೆ.ಅವರು ಮಂಗಳವಾರ  ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಳ್ಳಾಲ ತಾಲೂಕಿನ 9/11   ಸಮಸ್ಯೆಗಳ  ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು. 9/11  ದಾಖಲೆಗಳಿಗೆ ಸಾರ್ವಜನಿಕರು ಸಲ್ಲಿಸುವ ಅರ್ಜಿಗಳನ್ನು ದೀರ್ಘಕಾಲದಲ್ಲಿ ಇಟ್ಟುಕೊಳ್ಳುತ್ತಿರುವ ಬಗ್ಗೆ  ಹಾಗೂ ಕಚೇರಿಯಿಂದ ಕಚೇರಿಗೆ ಇದಕ್ಕಾಗಿ ಅಲೆದಾಡುವ ಬಗ್ಗೆ   ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬರುತ್ತಿದೆ ಎಂದು ಅವರು  ತೀವ್ರ ಅಸಮಾಧಾನ

ಸಿಂಗಲ್ ಸೈಟ್, 9/11 ಅರ್ಜಿಗಳ ಕಾಲ ಮಿತಿಯಲ್ಲಿ ಇತ್ಯರ್ಥ – ಸ್ಪೀಕರ್ ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top