ಕರಾವಳಿ

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ನ.25 : ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ದಿನದಿಂದ ದಿನಕ್ಕೆ ಚಳಿ ಹೆಚ್ಚಾಗುತ್ತಿದೆ. ಇಂದು ಸಹ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಚಳಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ಹೆಚ್ಚಿನ ಚಳಿ ಇರಲಿದೆ ಎಂದು ಇಲಾಖೆ ತಿಳಿಸಿದೆ…….. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ […]

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನ.26ರಂದು ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವ

(ನ್ಯೂಸ್‌ ಕಡಬ) newskadaba.com,  ನ.25 :ಜಾಲ್ಲೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವವು ನ. 26ರಂದು ಬ್ರಹ್ಮಶ್ರೀ ಕುಂಟಾರು ಶ್ರೀ ವಾಸುದೇವ ತಂತ್ರಿಯವರ ನೇತೃತ್ವದಲ್ಲಿ ನಡೆಯಲಿದೆ. ಬೆಳಿಗ್ಗೆ ಶ್ರೀ ಗಣಪತಿ ಹೋಮ, ನವಕ ಪೂಜೆ, ಪಂಚಾಮೃತಾಭಿಷೇಕ, ನವಕಾಭಿಷೇಕ, ತುಲಾಭಾರ ನಡೆಯಲಿದೆ. ಮಧ್ಯಾಹ್ನ ಶ್ರೀದೇವರಿಗೆ ಮಹಾಪೂಜೆ ನಡೆದು ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ದೀಪಾರಾಧನೆ, ಮಂಗಳಾರತಿ, ಶ್ರೀ ರಕೇಶ್ವರಿ ತಂಬಿಲ, ಪ್ರಸಾದ ವಿತರಣೆ ನಡೆದು ಅನ್ನಸಂತರ್ಪಣೆ ಜರಗಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ

ನ.26ರಂದು ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೆ.ಸೆಟ್ ಪರೀಕ್ಷೆಯಲ್ಲಿ ಸುಳ್ಯದವರು ತೇರ್ಗಡೆ

(ನ್ಯೂಸ್‌ ಕಡಬ) newskadaba.com,  ನ.25 :ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲ್ಪಟ್ಟಿರುವ ಸಹಾಯಕ ಪ್ರಾಧ್ಯಾಪಕ ಅರ್ಹತಾ ಪರೀಕ್ಷೆ (ಕೆ.ಸೆಟ್-2025) ಯಲ್ಲಿ ಸುಳ್ಯದ ಕೇತನ ಕೆ.ಎಸ್., ಸುಹಾಸ್ ಮಲ್ಲಾರ, ಮೇಘಾ ಪಿ.ಎಂ. ಧನ್ಯಶ್ರೀ ಬಚ್ಚನಡ್ಕ, ಲಿಖಿತ ಮಂಡೂರು ಕೇತನ ಕೆ.ಎಸ್.: ಕುಃ ಕೇತನ ಕೆ.ಎಸ್. ಇವರು ಗೃಹ ವಿಜ್ಞಾನ ವಿಷಯದಲ್ಲಿ ಉತ್ತೀರ್ಣರಾಗಿ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆದಿರುತ್ತಾರೆ. ಇವರು ಎನ್ ಟಿಎ ನಡೆಸಿದ ಯುಜಿಸಿ ನೆಟ್ ಪರೀಕ್ಷೆಯಲ್ಲೂ ಉತ್ತೀರ್ಣ ರಾಗಿ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಹರಾಗಿದ್ದಾರೆ. ಇವರು ಅಮರ ಪಡೂರು

ಕೆ.ಸೆಟ್ ಪರೀಕ್ಷೆಯಲ್ಲಿ ಸುಳ್ಯದವರು ತೇರ್ಗಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರಕಾರಿ ಶಾಲೆಗಳ ಉಳಿಸಿ ಬೆಳೆಸುವ ಧ್ಯೇಯದೊಂದಿಗೆ ಮ್ಯಾರಥಾನ್ ಓಟ ಎಸ್‌ಡಿಎಂಸಿ ಮತ್ತು ಹಿರಿಯ ವಿದ್ಯಾರ್ಥಿ ಸಂಘ ಕೆಮ್ಮಾರ ಆಯೋಜಿಸಿದ ಅರ್ಥಪೂರ್ಣ ಕಾರ್ಯಕ್ರಮ

(ನ್ಯೂಸ್‌ ಕಡಬ) newskadaba.com,  ನ.25  ಉಪ್ಪಿನಂಗಡಿ : ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕೆಮ್ಮಾರ ಇದರ ಹಿರಿಯ ವಿದ್ಯಾರ್ಥಿ ಸಂಘ ಮತ್ತು ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿಯ ಸಹಯೋಗದೊಂದಿಗೆ ಸರಕಾರಿ ಶಾಲೆ ಉಳಿಸಿ ಬೆಳೆಸಿರಿ ಎಂಬ ಧ್ಯೇಯದೊಂದಿಗೆ ಮ್ಯಾರಥಾನ್ ಓಟವನ್ನು ಆಯೋಜಿಸಲಾಯಿತು. ಬೆಳಿಗೆ 7 ಗಂಟೆಗೆ ಸರಿಯಾಗಿ ಪೆರಿಯಡ್ಕ ಜಂಕ್ಷನಿನಲ್ಲಿ ನಡೆದ ಕಾರ್ಯಕ್ರಮವನ್ನು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀಯುತ ಕನಕರಾಜ್ ರವರು ಉದ್ಘಾಟಿಸಿ, ಮ್ಯಾರಥಾನ್ ಓಟದ ಸದುದ್ದೇಶಗಳ ಬಗ್ಗೆ ಅರಿವು ಮೂಡಿಸಿದರು. ಶಾಲಾಭಿವೃದ್ದಿ ಸಮಿತಿ

ಸರಕಾರಿ ಶಾಲೆಗಳ ಉಳಿಸಿ ಬೆಳೆಸುವ ಧ್ಯೇಯದೊಂದಿಗೆ ಮ್ಯಾರಥಾನ್ ಓಟ ಎಸ್‌ಡಿಎಂಸಿ ಮತ್ತು ಹಿರಿಯ ವಿದ್ಯಾರ್ಥಿ ಸಂಘ ಕೆಮ್ಮಾರ ಆಯೋಜಿಸಿದ ಅರ್ಥಪೂರ್ಣ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ಎಸ್‌ಡಿಪಿಐ ಬೆಂಬಲಿತ ಚುನಾಯಿತ ಪಂಚಾಯತ್ ಸದಸ್ಯರ ವಾರ್ಡ್ ಗಳಿಗೆ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ರವರ ನೇತೃತ್ವದ ನಿಯೋಗ ಭೇಟಿ

(ನ್ಯೂಸ್‌ ಕಡಬ) newskadaba.com,  ನ.25 ಸುಳ್ಯ : ಎಸ್‌ಡಿಪಿಐ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರನ್ನು ಹೊಂದಿರುವ ವಾರ್ಡ್ ಗಳಲ್ಲಿ ನಡೆಸಿದ ಅಭಿವೃದ್ಧಿ ಯೋಜನೆ, ಕುಂದುಕೊರತೆ, ಹಾಗೂ ಕಾರ್ಯಕರ್ತರು ಮತ್ತು ಚುನಾಯಿತ ಸದಸ್ಯರೊಂದಿಗೆ ಸಮಾಲೋಚನಾ ಸಭೆ ನಡೆಸುವ ಪಕ್ಷದ ತೀರ್ಮಾನದಂತೆ ಪಕ್ಷದ ಮಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಸುಳ್ಯ ವಿಧಾನಸಭಾ ಕ್ಷೇತ್ರದ ಸವಣೂರು, ಮಾಂತೂರು, ಶಾಂತಿ ನಗರ,  ಆತೂರಿನ ಕೊಯಿಲ ವಾರ್ಡ್, ಮಠ ವಾರ್ಡ್ ಗಳಿಗೆ SDPI ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ನೇತೃತ್ವದ ನಿಯೋಗ ಭೇಟಿ ನೀಡಿ

ಸುಳ್ಯ: ಎಸ್‌ಡಿಪಿಐ ಬೆಂಬಲಿತ ಚುನಾಯಿತ ಪಂಚಾಯತ್ ಸದಸ್ಯರ ವಾರ್ಡ್ ಗಳಿಗೆ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ರವರ ನೇತೃತ್ವದ ನಿಯೋಗ ಭೇಟಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟ

(ನ್ಯೂಸ್‌ ಕಡಬ) newskadaba.com,  ನ.25 ಕಡಬ :ಸೈಂಟ್ ಜೋಕಿಮ್ಸ್ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಕಾಲೇಜು ವಿಭಾಗಗಳ ವಾರ್ಷಿಕ ಕ್ರೀಡಾಕೂಟವು ವಿದ್ಯುಕ್ತವಾಗಿ ಶಾಲಾ ಕ್ರೀಡಾಂಗಣದಲ್ಲಿ ನೆರವೇರಿತು. ಕಡಬ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ  ಹನೀಫ್ ಕೆ.ಎಂ. ಮುಖ್ಯ ಅತಿಥಿಗಳಾಗಿ ಆಗಮಿಸಿ, ಕ್ರೀಡಾಕೂಟವನ್ನು ಉದ್ಘಾಟಿಸಿದರು. ಕ್ರೀಡೆಯು  ಶಿಸ್ತು ಹಾಗೂ ಸಂಯಮವನ್ನು ಕಾಪಾಡಿಕೊಳ್ಳಲು ಅಗತ್ಯ, ಗ್ರಾಮೀಣ ಪ್ರತಿಭೆಗಳು ಕ್ರೀಡಾ ಕ್ಷೇತ್ರದಲ್ಲಿ ಬೆಳಗಿದಾಗ ರಾಷ್ಟ್ರದ ಕ್ರೀಡಾ ಪ್ರಗತಿ ಸಾಧ್ಯ, ಈ ದಿಶೆಯಲ್ಲಿ  ಗ್ರಾಮೀಣ ಕ್ರೀಡಾಕೂಟಗಳು ಶಿಕ್ಷಣ ಸಂಸ್ಥೆಗಳ ಮೂಲಕ ಹೆಚ್ಚು

ಕಡಬ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು : ರಾಜ್ಯ ಸ್ಪೀಡ್ ಸ್ಕೇಟಿಂಗ್ – ಯುವರಾಜ್, ತಸ್ಮಯಿಗೆ ಚಿನ್ನ

(ನ್ಯೂಸ್‌ ಕಡಬ) newskadaba.com,  ನ.24 :  ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ 41ನೇ ರಾಜ್ಯ ಮಟ್ಟದ ಸ್ಪೀಡ್ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರು ನಗರದ ಕ್ರೀಡಾಪಟುಗಳು ಅತ್ಯುತ್ತಮ ಪ್ರದರ್ಶನ ನೀಡಿ ಪದಕಗಳ ಮಳೆ ಸುರಿಸಿದ್ದಾರೆ. ಕರ್ನಾಟಕ ರಾಜ್ಯ ಸ್ಕೇಟಿಂಗ್ ಅಸೋಸಿಯೇಷನ್ ಆಯೋಜಿಸಿದ್ದ ಈ ಸ್ಪರ್ಧೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಿಂದ ಆಯ್ಕೆಯಾದ 400ಕ್ಕೂ ಅಧಿಕ ಸ್ಕೇಟಿಂಗ್ ಪಟುಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಮಂಗಳೂರು ರೋಲರ್ ಸ್ಕೇಟಿಂಗ್ ಕ್ಲಬ್‌ನ ಸ್ಕೇಟಿಂಗ್ ಪಟುಗಳಾದ ಯುವರಾಜ್ ಕುಂದರ್ 2 ಚಿನ್ನದ ಪದಕ ಗೆದ್ದುಕೊಂಡರೆ, ತಸ್ಮಯಿ ಶೆಟ್ಟಿ

ಮಂಗಳೂರು : ರಾಜ್ಯ ಸ್ಪೀಡ್ ಸ್ಕೇಟಿಂಗ್ – ಯುವರಾಜ್, ತಸ್ಮಯಿಗೆ ಚಿನ್ನ Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಹತೋಭಾರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವೈಭವದ ಲಕ್ಷ ದೀಪೋತ್ಸವ ಕುಣಿತ ಭಜನೆಗೆ ಹೆಜ್ಜೆ ಹಾಕಿದ ಸಾವಿರಾರು ಭಜಕರು

(ನ್ಯೂಸ್‌ ಕಡಬ) newskadaba.com,  ನ.24: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಮಹೋತ್ಸವದ ಅಂಗವಾಗಿ ನ.19 ರಾತ್ರಿ ವೈಭವದ ಲಕ್ಷದೀಪೋತ್ಸವ ನೆರವೇರಿತು.ಪಂಚ ಶಿಖರಗಳನ್ನೊಳಗೊಂಡ ಚಂದ್ರಮಂಡಲ ರಥದಲ್ಲಿ ಸುಬ್ರಹ್ಮಣ್ಯ ದೇವರ ಉತ್ಸವ ನಡೆಯಿತು. ದೇವಸ್ಥಾನದ ಅರ್ಚಕರು ಉತ್ಸವದ ವಿಧಿ ವಿಧಾನ ನೆರವೇರಿಸಿದರು.ಕುಕ್ಕೆ ಸುಬ್ರಹ್ಮಣ್ಯದ ಹಲವೆಡೆ ಬೆಳಗುದ ಲಕ್ಷ ಹಣತೆ ದೀಪದ ನಡುವೆ ಭಕ್ತರ ಪರಾಕುಗಳೊಂದಿಗೆ ಶ್ರೀ ದೇವರ ಲಕ್ಷದೀಪೋತ್ಸವ ರಥೋತ್ಸವ ನೆರವೇರಿತು ಇದಕ್ಕೂ ಪೂರ್ವದಲ್ಲಿ ಸಂಜೆ ಆದಿ ಸುಬ್ರಹ್ಮಣ್ಯದಲ್ಲಿ ದೀಪಾಂಕೃತ ರಂಗಪೂಜೆ ನಡೆಯಿತು. ಬಳಿಕ ಪ್ರಧಾನ ದೇವಾಲಯದಲ್ಲಿ

ಮಹತೋಭಾರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವೈಭವದ ಲಕ್ಷ ದೀಪೋತ್ಸವ ಕುಣಿತ ಭಜನೆಗೆ ಹೆಜ್ಜೆ ಹಾಕಿದ ಸಾವಿರಾರು ಭಜಕರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅರ್ಜಿ ಆಹ್ವಾನ: ಮಹಿಳಾ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆ

(ನ್ಯೂಸ್‌ ಕಡಬ) newskadaba.com,  ನ.24 ಮಂಗಳೂರು/ಉಡುಪಿ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ 2025-26ನೇ ಸಾಲಿನ ಧನಶ್ರೀ ಯೋಜನೆ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆ, ಉದ್ಯೋಗಿನಿ ಹಾಗೂ ಎಸ್ ಸಿಪಿ/ಟಿಎಸ್ ಪಿ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಮಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನ. ದ.ಕ.

ಅರ್ಜಿ ಆಹ್ವಾನ: ಮಹಿಳಾ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

5 ರಿಂದ 17 ವರ್ಷದೊಳಗಿನ ಮಕ್ಕಳ ಆಧಾರ್ ಕಾರ್ಡ್ ಅಪ್ ಡೇಟ್ ಇನ್ನು ಮುಂದೆ ಉಚಿತ

(ನ್ಯೂಸ್‌ ಕಡಬ) newskadaba.com,  ನ.24 ಹೊಸದಿಲ್ಲಿ: ಐದರಿಂದ 17 ವರ್ಷದೊಳಗಿನ ಮಕ್ಕಳಿಗೆ ನೀಡಲಾಗುವ ‘ಬಾಲ’ ಅಥವಾ ನೀಲಿ ಆಧಾ‌ರ್ ಕಾರ್ಡ್‌ಗಳ ಬಯೋಮೆಟ್ರಿಕ್ ಅನ್ನು ಕಡ್ಡಾಯವಾಗಿ ಅಪ್‌ಡೇಟ್ ಮಾಡುವುದಕ್ಕೆ ವಿಧಿಸಲಾಗುವ ಎಲ್ಲಾ ಶುಲ್ಕಗಳನ್ನು ವಿಶಿಷ್ಟ ಗುರುತುಚೀಟಿ ಪ್ರಾಧಿಕಾರ ಶುಕ್ರವಾರ ರದ್ದುಪಡಿಸಿದೆ. ಕ್ರಮವಾಗಿ 5ರಿಂದ 7 ಹಾಗೂ 15-17 ವರ್ಷದೊಳಗಿನ ಮಕ್ಕಳ ಆಧಾರ್ ಕಾರ್ಡ್‌ಗಳಿಗೆ ನಡೆಸಲಾಗುವ ಮೊದಲ ಹಾಗೂ ಎರಡನೇ ಎಂಬಿಯುಗಳು ಇನ್ನು ಮುಂದೆ ಸಂಪೂರ್ಣವಾಗಿ ಉಚಿತವಾಗಿರುತ್ತವೆ ಎಂದು ವಿಶಿಷ್ಟ ಗುರುತುಚೀಟಿ ಪ್ರಾಧಿಕಾರ ಅಧಿಕೃತ ಹೇಳಿಕೆಯೊಂದರಲ್ಲಿ ತಿಳಿಸಿದೆ. ಐದು ವರ್ಷ

5 ರಿಂದ 17 ವರ್ಷದೊಳಗಿನ ಮಕ್ಕಳ ಆಧಾರ್ ಕಾರ್ಡ್ ಅಪ್ ಡೇಟ್ ಇನ್ನು ಮುಂದೆ ಉಚಿತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top