ಕರಾವಳಿ

ಕಡಬ: ನೂಜಿಬಾಳ್ತಿಲ ಮನೆಯಲ್ಲಿ ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,  ನ.20 ಕಡಬ: ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಆಕೋಟ ನಿವಾಸಿ ಚೇತನ್ ಲಾರೆನ್ಸ್ ಎಂದು ಗುರುತಿಸಲಾಗಿದೆ. ಕಡಬ ಸಮುದಾಯ ಆಸ್ಪತ್ರೆಯಲ್ಲಿ ಶವದ ಮಹಜರು ಮಾಡಲಾಗಿದೆ. ಇಂದು ನೂಜಿಬಾಳ್ತಿದ ಸೇಂಟ್ ಮೇರಿಸ್ ಕ್ಯಾಥೆಡ್ರಲ್‌ ಚರ್ಚಿನಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ. ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳಿಪು ನಿವಾಸಿ ರಾಕೇಶ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಬಳಿಕ ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೊಬ್ಬರು ಕುಟ್ರುಪಾಡಿ ಕಾಯರಡ್ಕ ನಿವಾಸಿ ಜೋಬಿ […]

ಕಡಬ: ನೂಜಿಬಾಳ್ತಿಲ ಮನೆಯಲ್ಲಿ ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ನಿಯಂತ್ರಣ ತಪ್ಪಿ ಹೋಟೆಲ್‌ನ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಖಾಸಗಿ ಸ್ಲೀಪರ್ ಬಸ್

(ನ್ಯೂಸ್‌ ಕಡಬ) newskadaba.com,  ನ.19 : ಖಾಸಗಿ ಸ್ಲೀಪರ್ ಬಸ್ಸೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಬದಿಯ ಹೋಟೆಲ್‌ನ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಘಟನೆ ಓಂತಿಬೆಟ್ಟು ಬಳಿ ಬುಧವಾರ ಮುಂಜಾನೆ ನಡೆದಿದೆ. ಈ ಬಸ್ ಉಡುಪಿಯಿಂದ ಹಿರಿಯಡ್ಕ ಕಡೆಗೆ ಸಂಚರಿಸುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ವಾಹನ ರಸ್ತೆಯಿಂದ ಬದಿಗೆ ಸರಿದು ಹೋಟೆಲ್‌ನ ಕಾಂಪೌಂಡ್‌ಗೆ ಡಿಕ್ಕಿಹೊಡೆದಿದೆ. ಅಪಘಾತದ ತೀವ್ರತೆಗೆ ಬಸ್ ಪಕ್ಕಕ್ಕೆ ವಾಲಿದ್ದು, ಹೋಟೆಲ್ ಕಟ್ಟಡಕ್ಕೆ ತಾಗಿಕೊಂಡು ನಿಂತಿದೆ. ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ.  

ಉಡುಪಿ: ನಿಯಂತ್ರಣ ತಪ್ಪಿ ಹೋಟೆಲ್‌ನ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಖಾಸಗಿ ಸ್ಲೀಪರ್ ಬಸ್ Read More »

ಕರಾವಳಿ

ಸುಳ್ಯ: ಬೆನಿಫಿಟ್ ಸ್ಕೀಂ ವಂಚನೆ ಪ್ರಕರಣ: ಮೂರು ಆರೋಪಿಗಳಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ

(ನ್ಯೂಸ್‌ ಕಡಬ) newskadaba.com,  ನ.19 : ಸುಳ್ಯ ದಲ್ಲಿ ಬೆನಿಫಿಟ್‌ ಸ್ಕೀಂ ಮೂಲಕ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ವಂಚಿಸಿದ ಆರೋಪಿಗಳಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಕಸಬಾ ಗ್ರಾಮದ ವಿವೇಕಾನಂದ ಸರ್ಕಲ್ ಬಳಿ ಅಂಬಡೆಡ್ಕ ಎಂಬಲ್ಲಿ ತತ್ವಮಸಿ ಚಾರಿಟೇಬಲ್ ಟ್ರಸ್ಟ್(ರಿ) ಮತ್ತು ತತ್ವಮಸಿ ಎಂಟರ್ ಪ್ರೈಸಸ್ (ರಿ) ಎಂಬ ಹೆಸರಿನಲ್ಲಿ ಸಂಸ್ಥೆ ಹೆಸರಿನಲ್ಲಿ ಬೆನಿಫಿಟ್ ಸ್ಕೀಂ ಪ್ರಾರಂಭಿಸಿ, ಏಜೆಂಟರುಗಳ ಮೂಲಕ ಸಾರ್ವಜನಿಕರಿಂದ ಕಂತುಗಳ‌ ಮೂಲಕ ಹಣಸಂಗ್ರಹ ಮಾಡಿ, 4115 ಸದಸ್ಯರನ್ನು ಸೇರಿಸಿಕೊಂಡು ಅವರಿಂದ ಕೋಟ್ಯಾಂತರ ಹಂವನ್ನು ಸಂಗ್ರಹಿಸಿದ್ದರು. ಆ

ಸುಳ್ಯ: ಬೆನಿಫಿಟ್ ಸ್ಕೀಂ ವಂಚನೆ ಪ್ರಕರಣ: ಮೂರು ಆರೋಪಿಗಳಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸುಳ್ಯ: ಕುಕ್ಕರ್ ಸಿಡಿದು ಅಡುಗೆ ಮನೆಗೆ ಹಾನಿಯಾಗಿ ಮನೆಯವರು ಅಪಾಯದಿಂದ ಪಾರು

(ನ್ಯೂಸ್‌ ಕಡಬ) newskadaba.com,  ನ.19  ಸುಳ್ಯ:  ಬೋರುಗುಡ್ಡೆ ಅಬ್ಬುಲ ಅಡ್ಕತ್ಬೈಲ್ ಅವರ ಮನೆಯಲ್ಲಿ ನ.19ರಂದು ಮುಂಜಾನೆ ಉಪಹಾರ ತಯಾರಿಸುವ ವೇಳೆ ಗ್ಯಾಸ್ ಸ್ಟೌವ್ ನಲ್ಲಿ ಇದ್ದ ಕುಕ್ಕರ್ ಸಿಡಿದು ಅಡುಗೆಮನೆಗೆ ಹಾನಿಯಾಗಿ ಮನೆಯವರು ಅಪಾಯದಿಂದ ಪಾರಾಗಿರುವ ಘಟನೆ ಸುಳ್ಯದಲ್ಲಿ ವರದಿಯಾಗಿದೆ. ಬೆಳಗಿನ ಉಪಹಾರ ತಯಾರಿಸುವ ವೇಳೆ ಗ್ಯಾಸ್ ಒಲೆಯ ಮೇಲೆ ಇಟ್ಟಿದ್ದ ಕುಕ್ಕರ್ ಹಠಾತ್ ಸಿಡಿದ ಪರಿಣಾಮ ಅಡುಗೆಮನೆಯ ಗೋಡೆ, ಟೈಲ್ಸ್‌, ಮೇಲ್ಚಾವಣಿ ಹಾಗೂ ಅಡುಗೆ ಸಾಮಾನುಗಳು ಹಾನಿಗೊಳಗೊಂಡಿವೆ. ಘಟನೆ ಸಂಭವಿಸಿದ ವೇಳೆ ಮನೆಮಂದಿ ಅಡುಗೆಮನೆ ಸಮೀಪದಲ್ಲೇ

ಸುಳ್ಯ: ಕುಕ್ಕರ್ ಸಿಡಿದು ಅಡುಗೆ ಮನೆಗೆ ಹಾನಿಯಾಗಿ ಮನೆಯವರು ಅಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಡ್ಯಾರ್ ಕಣ್ಣೂರಿನಲ್ಲಿ ಮಂಗಳೂರಿಗೆ ನೀರು ಪೂರೈಸುವ ಪೈಪ್ ಲೈನ್ ಬ್ಲಾಸ್ಟ್ ; ಎರಡು ದಿನಗಳಿಂದ ನೀರು ವ್ಯತ್ಯಯ

(ನ್ಯೂಸ್‌ ಕಡಬ) newskadaba.com,  ನ.19 : ನೀರು ವ್ಯತ್ಯಯದಿಂದಾಗಿ ಪಡೀಲ್, ಮರೋಳಿ, ಕಂಕನಾಡಿ, ಮಂಗಳಾದೇವಿ, ಜೆಪ್ಪು ಪನ್ನೀರ್, ಮುಳಿಹಿತ್ತು ಬೋಳಾರ, ಕಾರ್ ಸ್ಟ್ರೀಟ್, ಮಣ್ಣಗುಡ್ಡ, ಪಾಂಡೇಶ್ವರ, ಸ್ಟೇಟ್ ಬ್ಯಾಂಕ್, ಶಕ್ತಿನಗರ, ಕಣ್ಣೂರು, ಬಜಾಲ್, ಜಪ್ಪಿನಮೊಗರು, ಅಳಪೆ, ಅತ್ತಾವರ, ಉಲ್ಲಾಸ್‌ ನಗರ, ಚಿಲಿಂಬಿ, ಕೋಡಿಕಲ್, ಉರ್ವಾ ಸ್ಟೋರ್, ಅಶೋಕನಗರ, ಕುಡುಪು, ವಾಮಂಜೂರು, ಬೋಂದೆಲ್, ಕಾವೂರು, ಮರಕದ ಮುಂತಾದ ಭಾಗದಲ್ಲಿ ನೀರು ಸರಬರಾಜಿನಲ್ಲಿ ತೊಂದರೆಯಾಗಲಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ. ಮಂಗಳೂರು ಮಹಾನಗರಕ್ಕೆ ನೀರು ಪೂರೈಸುವ ತುಂಬೆ ರೇಚಕ ಸ್ಥಾವರದಿಂದ

ಅಡ್ಯಾರ್ ಕಣ್ಣೂರಿನಲ್ಲಿ ಮಂಗಳೂರಿಗೆ ನೀರು ಪೂರೈಸುವ ಪೈಪ್ ಲೈನ್ ಬ್ಲಾಸ್ಟ್ ; ಎರಡು ದಿನಗಳಿಂದ ನೀರು ವ್ಯತ್ಯಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಇಂದಿನ ಚಿನ್ನದ ಬೆಲೆ

(ನ್ಯೂಸ್‌ ಕಡಬ) newskadaba.com,  ನ.19  ಕಳೆದ ಕೆಲವು ದಿನಗಳಿಂದ ಗಣನೀಯವಾಗಿ ಚಿನ್ನದ ಬೆಲೆಯಲ್ಲಿ ಕುಸಿತ ಕಂಡು ಬರುತ್ತಿದೆ. ಬೆಲೆ ಇಳಿಕೆಯಾಗುವ ಸಂದರ್ಭದಲ್ಲಿ ಚಿನ್ನ ಮತ್ತು ಬೆಳ್ಳಿಯನ್ನು ಖರೀದಿಸೋದು ಸೂಕ್ತ ಎಂದು ತಜ್ಞರು ಹೇಳುತ್ತಾರೆ….. ದೇಶದಲ್ಲಿಂದು 24 ಕ್ಯಾರಟ್ ಚಿನ್ನದ ಬೆಲೆ 1 ಗ್ರಾಂ: 12,486 ರೂಪಾಯಿ 8 ಗ್ರಾಂ: 99,888 ರೂಪಾಯಿ 10 ಗ್ರಾಂ: 1,24,860 ರೂಪಾಯಿ 100 ಗ್ರಾಂ: 12,48,600 ರೂಪಾಯಿ ದೇಶದಲ್ಲಿಂದು ಬೆಳ್ಳಿ ಬೆಲೆ ಕಳೆದ ಎರಡು ದಿನಗಳಿಂದ ಚಿನ್ನದ ಜೊತೆಯಲ್ಲಿಯೇ ಬೆಳ್ಳಿ ದರವೂ

ಇಂದಿನ ಚಿನ್ನದ ಬೆಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

“ಎರಡು ತಿಂಗಳ ಗೃಹಲಕ್ಷ್ಮಿ ಹಣವನ್ನು ಶೀಘ್ರದಲ್ಲೇ ಬಿಡುಗಡೆ ಮಾಡ್ತೇವೆ” – ಲಕ್ಷ್ಮೀ ಹೆಬ್ಬಾಳ್ಕರ್

(ನ್ಯೂಸ್‌ ಕಡಬ) newskadaba.com,  ನ.19  ತುಮಕೂರು: ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳ ಗೃಹಲಕ್ಷ್ಮಿ ಹಣವನ್ನು ಆದಷ್ಟು ಬೇಗ ಬಿಡುಗಡೆ ಮಾಡುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳ ಗೃಹಲಕ್ಷ್ಮಿ ಹಣ ಇನ್ನೂ ಬಿಡುಗಡೆಯಾಗಿಲ್ಲ. ಆದಷ್ಟು ಬೇಗ ಬಿಡುಗಡೆ ಮಾಡ್ತೀವಿ. ಕರ್ನಾಟಕವನ್ನು ರೋಲ್ ಮಾಡಲ್ ಮಾಡಿಕೊಂಡು ಹೋಗುತ್ತಿದ್ದಾರೆ ಎಂದು ಹೇಳಿದರು………… ನ.28ಕ್ಕೆ ನಾವು ಅಂಗನವಾಡಿ ಆರಂಭಿಸಿ 50 ವರ್ಷ ಆಯಿತು. ಕರ್ನಾಟಕದಿಂದಲೇ ಅಂಗನವಾಡಿ

“ಎರಡು ತಿಂಗಳ ಗೃಹಲಕ್ಷ್ಮಿ ಹಣವನ್ನು ಶೀಘ್ರದಲ್ಲೇ ಬಿಡುಗಡೆ ಮಾಡ್ತೇವೆ” – ಲಕ್ಷ್ಮೀ ಹೆಬ್ಬಾಳ್ಕರ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ ತಾಲೂಕು ಬಂಟರ ಯಾನೆ ನಾಡವರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,  ನ.19  ಸುಳ್ಯ ತಾಲೂಕು ಬಂಟರ ಯಾನೆ ನಾಡವರ ಸಂಘದಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ಡಿಸೆಂಬರ್ ತಿಂಗಳ 28ರಂದು ನಡೆಯಲಿದ್ದು, 2024 -25 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ 85ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರುವ ಸ್ವಜಾತಿಯ ವಿದ್ಯಾರ್ಥಿಗಳು ಅಂಕಪಟ್ಟಿಯ ಜೆರಾಕ್ಸ್ ಪ್ರತಿಯೊಂದಿಗೆ ತಮ್ಮ ಪಾಸ್ ಪೋರ್ಟ್ ಸೈಜ್ ಭಾವಚಿತ್ರ ಮತ್ತು ಸ್ವ-ವಿಳಾಸದ ವಿವರವನ್ನು ತಮ್ಮ ತಮ್ಮ ವಲಯ ಅಧ್ಯಕ್ಷರಲ್ಲಿ ಅಥವಾ ಕಚೇರಿ ಕಾರ್ಯದರ್ಶಿ-ಕುಸುಮಾಧರ ರೈ (9343243257) ಯವರಲ್ಲಿ

ಸುಳ್ಯ ತಾಲೂಕು ಬಂಟರ ಯಾನೆ ನಾಡವರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ಳಾರೆ: ಕೆಪಿಎಸ್ ಶಾಲೆಯಲ್ಲಿ ನೂತನ ಕೊಠಡಿಗಳಿಗೆ ಶಾಸಕರಿಂದ ಗುದ್ದಲಿಪೂಜೆ

(ನ್ಯೂಸ್‌ ಕಡಬ) newskadaba.com,  ನ.19  ಸುಳ್ಯ: ಬೆಳ್ಳಾರೆ ಕೆ.ಪಿ.ಎಸ್ ಶಾಲೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ನೂತನ ಕೊಠಡಿಗಳಿಗೆ ಶಾಸಕಿ ಭಾಗೀರಥಿ ಮುರುಳ್ಯ ಗುದ್ದಲಿಪೂಜೆ ನೆರವೇರಿಸಿದರು. ಸಿ.ಆರ್.ಎಸ್ ಅನುದಾನದಡಿ ೬೩ ಲಕ್ಷದ ರೂ ವೆಚ್ಚದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಕೊಠಡಿಗಳು ನಿರ್ಮಾಣ ಆಗಲಿದೆ. ಈ ಸಂದರ್ಭದಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಗ್ರಾಮ ಪಂಚಾಯತಿ ಅಧ್ಯಕ್ಷೆ ನಮಿತ ರೈ, ಎಸ್.ಡಿ.ಎಂ.ಸಿ ಅಧ್ಯಕ್ಷ ಹರ್ಷ ಭಟ್, ಮಾಜಿ ಜಿಲ್ಲಾ ಪಂಚಾಯಿ ಸದಸ್ಯೆ ರಾಜೀವಿ ರೈ, ಕಾಲೇಜು ಪ್ರಾಂಶುಪಾಲರು,

ಬೆಳ್ಳಾರೆ: ಕೆಪಿಎಸ್ ಶಾಲೆಯಲ್ಲಿ ನೂತನ ಕೊಠಡಿಗಳಿಗೆ ಶಾಸಕರಿಂದ ಗುದ್ದಲಿಪೂಜೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ನ.19 : ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರುನಾಡು ಮುಂದಿನ ಎರಡು ದಿನಗಳ ಕಾಲ ಚಳಿಗೆ ನಡುಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಕರ್ನಾಟಕದ ಹಲವು ಜಿಲ್ಲೆಗಳಿಗೆ ತೀವ್ರ ಚಳಿಗಾಳಿಯ ಎಚ್ಚರಿಕೆ ನೀಡಲಾಗಿದೆ. ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿಗೆ ತೀವ್ರ ಚಳಿಗಾಳಿಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top