ಐಷಾರಾಮಿ ಕಾರು ತೆರಿಗೆ ವಂಚನೆ; ಲೋಕಾಯುಕ್ತ ಅಧಿಕಾರಿಗಳಿಂದ ಮಂಗಳೂರು, ಉಡುಪಿ ಆರ್.ಟಿ.ಓ. ಕಡತಗಳ ಪರಿಶೀಲನೆ
(ನ್ಯೂಸ್ ಕಡಬ) newskadaba.com, ನ.18 : ಐಷಾರಾಮಿ ಕಾರು ನೋಂದಣಿಯ ವೇಳೆ ತೆರಿಗೆ ವಂಚನೆಗೆ ಸಂಬಂಧಿಸಿದ ಪ್ರಕರಣದಲ್ಲಿ, ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಮಂಗಳೂರು ಮತ್ತು ಉಡುಪಿ ಆರ್.ಟಿ.ಓ ಕಚೇರಿಗಳಲ್ಲಿ ಕಡತಗಳ ಪರಿಶೀಲನೆ ನಡೆಸಿದ್ದಾರೆ. ಉಡುಪಿ ಆರ್.ಟಿ.ಓ. ಕಚೇರಿಯಲ್ಲಿ ತೆರಿಗೆ ಮೊತ್ತವನ್ನು ಕಡಿಮೆ ಮಾಡಿ ಒಂದು ಬಿಎಂಡಬ್ಲ್ಯು ಕಾರನ್ನು ನೋಂದಣಿ ಮಾಡಲಾಗಿದೆ. ಇದರಿಂದ ಸರ್ಕಾರಕ್ಕೆ ಸುಮಾರು 85 ಲಕ್ಷ ರೂ.ಗಳಷ್ಟು ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಈ ಸಂಬಂಧ ಈಗಾಗಲೇ ಪ್ರಕರಣ ದಾಖಲಾಗಿದೆ. ವಾಹನದ ನೋಂದಣಿಗೆ ಸಂಬಂಧಿಸಿದ ಕೆಲವೊಂದು ಪ್ರಕ್ರಿಯೆಗಳು […]










