ಕರಾವಳಿ

ಮಂಗಳೂರಿನಲ್ಲಿ ಗಾಂಜಾ ಸೇವನೆ ಆರೋಪ; ಇಬ್ಬರು ಪೊಲೀಸರ ವಶಕ್ಕೆ

(ನ್ಯೂಸ್‌ ಕಡಬ) newskadaba.com,  ನ.12 ಮಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕಂಕನಾಡಿ ನಗರ ಠಾಣೆ ವ್ಯಾಪ್ತಿಯ ಎಕ್ಕೂರು ಮೈದಾನ ಬಳಿ ಮತ್ತು ಪಡೀಲ್ ರೈಲ್ವೆ ಬ್ರಿಡ್ಜ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಎಕ್ಕೂರಿನಲ್ಲಿ ಹರಿಪ್ರಸಾದ್ ನನ್ನು ಹಾಗೂ ಪಡೀಲ್ ನಲ್ಲಿ ಮುಹಮ್ಮದ್ ಶಾರೂಕ್ ನನ್ನು ಬಂಧಿಸಲಾಗಿದೆ. ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಆರೋಪಿಗಳ […]

ಮಂಗಳೂರಿನಲ್ಲಿ ಗಾಂಜಾ ಸೇವನೆ ಆರೋಪ; ಇಬ್ಬರು ಪೊಲೀಸರ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಮುಂಬೈ ಮೂಲದ ಯುವತಿ ಕಣ್ಮರೆ

(ನ್ಯೂಸ್‌ ಕಡಬ) newskadaba.com,  ನ.12 ಬಂಟ್ವಾಳ: ಬೆಂಜನಪದವಿನಲ್ಲಿರುವ ತನ್ನ ಅತ್ತೆಯ ಮನೆಯಲ್ಲಿ ವಾಸವಾಗಿದ್ದ ಮುಂಬೈ ಮೂಲದ ಅವಿವಾಹಿತ ಯುವತಿಯೊಬ್ಬಳು ನವೆಂಬರ್ 9 ರಿಂದ ಕಾಣೆಯಾಗಿದ್ದಾಳೆ ಎಂದು ವರದಿಯಾಗಿದೆ.ನಾಪತ್ತೆಯಾದ ಯುವತಿಯನ್ನು ಬೆಂಜನಪದವಿನ ಶಿವಾಜಿನಗರದ ನಿವಾಸಿ ಮರಿಯಾ ಆಲ್ಬರ್ಟ್ ಡಿಸೋಜಾ ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ಮರಿಯಾ ಒಂದು ವರ್ಷದ ಹಿಂದೆ ತನ್ನ ತಾಯಿಯನ್ನು ಕಳೆದುಕೊಂಡ ನಂತರ, ಬೆಂಜನಪದವಿನಲ್ಲಿರುವ ತನ್ನ ಅತ್ತೆ ಮೊಲ್ಲಿ ಟೆಲ್ಲಿಸ್ ಅವರೊಂದಿಗೆ ವಾಸವಾಗಿದ್ದಳು. ಆಕೆಯ ತಂದೆ ಆಲ್ಬರ್ಟ್ ಡಿಸೋಜಾ ಅವರು ಮುಂಬೈನಲ್ಲಿ ನೆಲೆಸಿದ್ದಾರೆ. ನವೆಂಬರ್ 9

ಬಂಟ್ವಾಳ: ಮುಂಬೈ ಮೂಲದ ಯುವತಿ ಕಣ್ಮರೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಕ್ಕೆ ಸುಬ್ರಹ್ಮಣ್ಯ: ಪ್ರಥಮ ಬೆಳ್ಳಿ ರಥೋತ್ಸವ ಸೇವೆ

(ನ್ಯೂಸ್‌ ಕಡಬ) newskadaba.com,  ನ.12 ಸುಬ್ರಹ್ಮಣ್ಯ: ಸುಳ್ಯ ಡಾ.ರೇಣುಕಾಪ್ರಸಾದ್ ಕೆ.ವಿ. ಮತ್ತು ಮನೆಯವರು ಸೇವಾರೂಪದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಸಮರ್ಪಣೆ ಮಾಡಿದ ಬೆಳ್ಳಿರಥದಲ್ಲಿ, ಪ್ರಥಮ ಬೆಳ್ಳಿ ರಥೋತ್ಸವ ಸೇವೆ ಸೋಮವಾರ ರಾತ್ರಿ ಜರುಗಿತು.ಬೆಳ್ಳಿರಥ ನೀಡಿದ ಡಾ.ರೇಣುಕಾಪ್ರಸಾದ್ ಮತ್ತು ಮನೆಯವರು ಪ್ರಥಮ ಬೆಳ್ಳಿ ರಥೋತ್ಸವ ಸೇವೆ ನೆರವೇರಿಸಿದರು. ರಾತ್ರಿ ದೇವರ ಮಹಾಪೂಜೆ ಬಳಿಕ ಒಳಾಂಗಣ ಉತ್ಸವ ಜರುಗಿತು. ಆರಂಭದಲ್ಲಿ ಪಲ್ಲಕ್ಕಿಯಲ್ಲಿ ದೇವರ ಉತ್ಸವ ಜರುಗಿತು. ಬಳಿಕ ಬೆಳ್ಳಿರಥದಲ್ಲಿ ದೇವರ ರಥೋತ್ಸವ ಜರುಗಿತು. ಸಹಸ್ರಾರು ಭಕ್ತರು ರಥೋತ್ಸವವನ್ನು ಕಣ್ತುಂಬಿಕೊಂಡರು.

ಕುಕ್ಕೆ ಸುಬ್ರಹ್ಮಣ್ಯ: ಪ್ರಥಮ ಬೆಳ್ಳಿ ರಥೋತ್ಸವ ಸೇವೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್., ಕಾರ್ಯದರ್ಶಿಯಾಗಿ ಸಿದ್ದಿಕ್ ನೀರಾಜೆ, ರಾಜ್ಯ ಕಾರ್ಯಕಾರಿಣಿ ಸಮಿತಿಗೆ ಶ್ರೀನಿವಾಸ ನಾಯಕ್ ಆಯ್ಕೆ

(ನ್ಯೂಸ್‌ ಕಡಬ) newskadaba.com,ನ.12 ಪುತ್ತೂರು: ಮುಂದಿನ 3 ವರ್ಷಗಳ  ಅವಧಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪದಾಧಿಕಾರಿಗಳ ಹಾಗೂ ಕಾರ್ಯಕಾರಿಣಿ ಸಮಿತಿಗೆ ಸದಸ್ಯರ  ಆಯ್ಕೆಗೆ ನ.09 ರಂದು ಮಂಗಳೂರಿನಲ್ಲಿರುವ ದ.ಕ ಜಿಲ್ಲಾ ವಾರ್ತಾ ಇಲಾಖೆಯ ಸಭಾಂಗಣದಲ್ಲಿ ಚುನಾವಣೆ ನಡೆಯಿತು… ಬೆಳಗ್ಗೆ 9 ರಿಂದ ಸಂಜೆ 3 ಗಂಟೆ ತನಕ ಚುನಾವಣೆ ನಡೆದು ಬಳಿಕ ಮತ ಎಣಿಕೆ ನಡೆಯಿತು. ಅಧ್ಯಕ್ಷರಾಗಿ ವಾರ್ತಾಭಾರತಿಯ ಮಂಗಳೂರು ಚೀಫ್ ಬ್ಯೂರೋ ,ಕಡಬ ತಾಲೂಕಿನ ಕೊಯಿಲ ನಿವಾಸಿ ಪುಷ್ಪರಾಜ್

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್., ಕಾರ್ಯದರ್ಶಿಯಾಗಿ ಸಿದ್ದಿಕ್ ನೀರಾಜೆ, ರಾಜ್ಯ ಕಾರ್ಯಕಾರಿಣಿ ಸಮಿತಿಗೆ ಶ್ರೀನಿವಾಸ ನಾಯಕ್ ಆಯ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೆಟ್ಟಣದ ರೈಲ್ವೇ ಮೇಲ್ಸೇತುವೆ ಸಮೀಪ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್‌ ಕಡಬ) newskadaba.com,  ನ.11 ಕಡಬ: ಬಿಳಿನೆಲೆ ಗ್ರಾಮದ ನೆಟ್ಟಣ ರೈಲ್ವೇ ಓವರ್ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು,ಈ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತಪಟ್ಟ ವ್ಯಕ್ತಿಯನ್ನು ತಮಿಳುನಾಡು ಮೂಲದ ನೀಲಗಿರೀಸ್ ಇಂದ್ರಾ ನಗರ ನಿವಾಸಿ ಷಣ್ಮುಗನಾಥನ್(65)ಎಂದು ಗುರುತಿಸಲಾಗಿದೆ. ತಮಿಳನಾಡಿನಿಂದ ಬಿಳಿನೆಲೆ ಗ್ರಾಮದ ವಾಲ್ತಾಜೆಯಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದ ಇವರು ಊರಿಗೆ ವಾಪಸ್ ಹೋಗದೆ ನೆಟ್ಟಣ ಪರಿಸರದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು..ರಾತ್ರಿ ಮದ್ಯ ಸೇವಿಸಿ ಅಲ್ಲೇಅಂಗಡಿಯ ಬದಿಯಲ್ಲಿ ಮಲಗುತ್ತಿದ್ದರು ಎನ್ನಲಾಗಿದೆ…

ನೆಟ್ಟಣದ ರೈಲ್ವೇ ಮೇಲ್ಸೇತುವೆ ಸಮೀಪ ವ್ಯಕ್ತಿಯ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಟ್ಲದ ಚರಂಡಿಯಲ್ಲಿ ಮೃತದೇಹ ಪತ್ತೆ

(ನ್ಯೂಸ್‌ ಕಡಬ) newskadaba.com,  ನ.11 ವಿಟ್ಲ:ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಕಾಲೇಜಿಗೆ ಅಡ್ಡರಸ್ತೆಯ ಚರಂಡಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ನಡೆದಿದೆ.. ವ್ಯಕ್ತಿ ಸಮೀಪದ ಕೋಟಿಕೆರೆ ನಿವಾಸಿ ಮಂಜುನಾಥ್ (55) ಎಂದು ಗುರುತಿಸಲಾಗಿದೆ… ಸ್ಥಳಕ್ಕೆ ವಿಟ್ಲ ಠಾಣಾ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಕಲೆಹಾಕಿದ್ದಾರೆ.

ವಿಟ್ಲದ ಚರಂಡಿಯಲ್ಲಿ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಲ್ಲುಮುಟ್ಲು ಅಂಗನವಾಡಿ ಕೇಂದ್ರದ ತಡೆಗೋಡೆ ಕುಸಿತ: SDPI ನಾಯಕರ ಭೇಟಿ

(ನ್ಯೂಸ್‌ ಕಡಬ) newskadaba.com,  ನ.11  ಸುಳ್ಯ: ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಕಲ್ಲುಮುಟ್ಲು ಅಂಗನವಾಡಿ ಕೇಂದ್ರದ ತಡೆಗೋಡೆ ಕುಸಿದಿದೆ. ಕಳೆದ ವರ್ಷ ತಡೆಗೋಡೆ ಅರ್ಧ ಕುಸಿದಿತ್ತು,ಆದರೆ ಮರು ನಿರ್ಮಾಣ ಅಥವಾ ದುರಸ್ತಿ ಕಾರ್ಯ ಮಾಡಿರಲಿಲ್ಲ. ಹಾಗಾಗಿ ಅದರ ಉಳಿದ ಸ್ವಲ್ಪ ಬಾಗ ಇಂದು ಕುಸಿದು ಬಿದ್ದಿದೆ. ಸಣ್ಣ ಮಕ್ಕಳು ಅಂಗನವಾಡಿಯಲ್ಲಿರುದರಿಂದ ಮುಂದಿನ ಬಾರಿ ವೈಜ್ಞಾನಿಕವಾಗಿ ಕಾಂಕ್ರೀಟ್ ತಡೆಗೋಡೆ ನಿರ್ಮಿಸಿ ಸಂಭಾವ್ಯ ಅಪಾಯವನ್ನು  ತಪ್ಪಿಸಲು ಸಂಭಂದ ಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಲು ಎಸ್ ಡಿ ಪಿ ಐ

ಕಲ್ಲುಮುಟ್ಲು ಅಂಗನವಾಡಿ ಕೇಂದ್ರದ ತಡೆಗೋಡೆ ಕುಸಿತ: SDPI ನಾಯಕರ ಭೇಟಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಎಂ, ಗೃಹ ಸಚಿವರ ರಾಜೀನಾಮೆಗೆ ವಿಜಯೇಂದ್ರ ಆಗ್ರಹ

(ನ್ಯೂಸ್‌ ಕಡಬ) newskadaba.com,  ನ.08: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯವನ್ನು ಖಂಡಿಸಿ ಯುವ ಮೋರ್ಚಾ ವತಿಯಿಂದ ಹಮ್ಮಿಕೊಂಡಿದ್ದ ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಪ್ರತಿಭಟನೆಯಲ್ಲಿ ಅವರು ಭಾಗವಹಿಸಿದ್ದರು. ಬಳಿಕ ಮಾತನಾಡಿದ ಅವರು, ಪರಪ್ಪನ ಅಗ್ರಹಾರ ಜೈಲು ಒಂದು ರೀತಿ ನೈಟ್ ಕ್ಲಬ್ ಆಗಿ, ಮನರಂಜನಾ ಕ್ಲಬ್ ಆಗಿ ಪರಿವರ್ತನೆಗೊಂಡಿದೆ. ಭಯೋತ್ಪಾದಕರು, ಐಎಸ್‍ಐ

ಸಿಎಂ, ಗೃಹ ಸಚಿವರ ರಾಜೀನಾಮೆಗೆ ವಿಜಯೇಂದ್ರ ಆಗ್ರಹ Read More »

ಕರಾವಳಿ

ಎಡಮಂಗಲ ರೈಲ್ವೆ ನಿಲ್ದಾಣದಲ್ಲಿ ಎಕ್ಸ್‌ಪ್ರೆಸ್ ರೈಲು ನಿಲುಗಡೆಗೆ ಮನವಿ

(ನ್ಯೂಸ್‌ ಕಡಬ) newskadaba.com,  ನ.10 ಎಡಮಂಗಲ : ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರತಿ ಮುರುಳ್ಯ ಅವರು ಇಂದು ಎಡಮಂಗಲದಲ್ಲಿ ನಡೆದ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಜೀವೇಂದ್ರ ಎಡಮಂಗಲ ಅವರು ಎಡಮಂಗಲ ರೈಲ್ವೆ ನಿಲ್ದಾಣದಲ್ಲಿ ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆ ಸೌಲಭ್ಯ ನೀಡುವಂತೆ ಸಂಸದರನ್ನು ಒತ್ತಾಯಿಸಲು ಶಾಸಕರಿಗೆ ಮನವಿ ಸಲ್ಲಿಸಿದರು. ಎಡಮಂಗಲ ಪ್ರದೇಶದ ಜನತೆಗೆ ರೈಲು ಪ್ರಯಾಣದ ಅನುಕೂಲತೆ ಹೆಚ್ಚಿಸಲು ಈ ನಿಲುಗಡೆ ಅತ್ಯಂತ ಅಗತ್ಯ ಎಂದು ಜೀವೇಂದ್ರ ಅಭಿಪ್ರಾಯಪಟ್ಟರು. ಸ್ಥಳೀಯರು ಈ ಮನವಿಗೆ ಬೆಂಬಲ

ಎಡಮಂಗಲ ರೈಲ್ವೆ ನಿಲ್ದಾಣದಲ್ಲಿ ಎಕ್ಸ್‌ಪ್ರೆಸ್ ರೈಲು ನಿಲುಗಡೆಗೆ ಮನವಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ : ರಾಜ್ಯ ಮಟ್ಟದ ವೇಟ್ ಲಿಪ್ಟಿಂಗ್ ಚಾಂಪಿಯನ್ ಷಿಪ್ ಪಂದ್ಯಾಟ

(ನ್ಯೂಸ್‌ ಕಡಬ) newskadaba.com,  ನ.10 ಸುಳ್ಯ: ರಾಜ್ಯ ಮಟ್ಟದ ಜೂನಿಯರ್, ಸಬ್ ಜೂನಿಯರ್, ಹಾಗೂ ಸೀನಿಯರ್ ವಿಭಾಗದ ಪುರುಷ ಮತ್ತು ಮಹಿಳೆಯರ ವೇಟ್ ಲಿಪ್ಟಿಂಗ್ ಚಾಂಪಿಯನ್ ಷಿಪ್ ೨೦೨೫ ಸುಳ್ಯದ ಯುವಜನ ಸಂಯುಕ್ತ ಮಂಡಳಿ ಬಳಿಯ ಸುಳ್ಯದ ಜೂನಿಯಲ್ ಕಾಲೇಜು ಮೈದಾನದಲ್ಲಿ ಆರಂಭಗೊಂಡಿದೆ.ಕರ್ನಾಟಕ ರಾಜ್ಯ ವೇಟ್ ಲಿಫ್ಟಿಂಗ್ ಸಂಸ್ಥೆ ಬೆಂಗಳೂರು ಇವರ ಮೂಲಕ ಸುಳ್ಯದ ಸ್ಪೋರ್ಟ್ಸ್ ಮತ್ತು ಆರ್ಟ್ಸ್ ಎಸೋಸಿಯೇಶನ್ ಇದರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ವೇಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಇದರ ಸಂಘಟನಾ ಸಮಿತಿಯ ಸಹಯೋಗದಲ್ಲಿ

ಸುಳ್ಯ : ರಾಜ್ಯ ಮಟ್ಟದ ವೇಟ್ ಲಿಪ್ಟಿಂಗ್ ಚಾಂಪಿಯನ್ ಷಿಪ್ ಪಂದ್ಯಾಟ Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top