ಕರಾವಳಿ

ಕಡಬದ ಕದಂಬ ಕ್ರಾಕರ್ಸ್ ನಲ್ಲಿ ದೀಪಾವಳಿ ಪಟಾಕಿ ಮೇಳ – ಟಿವಿ, ಮಿಕ್ಸಿ ಗೆಲ್ಲುವ ಅವಕಾಶ

(ನ್ಯೂಸ್ ಕಡಬ) newskadaba.com ಕಡಬ, ಅ.20. ದೀಪಾವಳಿ ಹಬ್ಬದ ಪ್ರಯುಕ್ತ ಕಡಬದ ಮಾಡ ದೈವಸ್ಥಾನದ ಬಳಿ ಆರಂಭಗೊಂಡಿರುವ ಕದಂಬ ಕ್ರಾಕರ್ಸ್ ನಲ್ಲಿ ವಿಶೇಷ ರಿಯಾಯಿತಿ ದರದಲ್ಲಿ ಪಟಾಕಿ‌ ಮಾರಾಟ ಆರಂಭಗೊಂಡಿದೆ‌. 2 ಸಾವಿರ ಮೇಲ್ಪಟ್ಟ ಖರೀದಿಗೆ ಟಿವಿ ಹಾಗೂ ಮಿಕ್ಸಿ ಜೊತೆಗೆ ಆಕರ್ಷಕ ಬಹುಮಾನಗಳನ್ನು ಗೆಲ್ಲುವ ಅವಕಾಶ ಕಲ್ಪಿಸಲಾಗಿದ್ದು, ಅಕ್ಟೋಬರ್ 22 ರಂದು ಸಂಜೆ 6 ಗಂಟೆಗೆ ಲೈವ್ ಡ್ರಾ ಇರಲಿದೆ. ಗ್ರಾಹಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಮಾಲಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಡಬದ ಕದಂಬ ಕ್ರಾಕರ್ಸ್ ನಲ್ಲಿ ದೀಪಾವಳಿ ಪಟಾಕಿ ಮೇಳ – ಟಿವಿ, ಮಿಕ್ಸಿ ಗೆಲ್ಲುವ ಅವಕಾಶ Read More »

ಕರಾವಳಿ

ಪುತ್ತೂರಿನಲ್ಲಿ ಸಿಡಿಲು ಬಡಿದು ಮನೆ ಸಂಪೂರ್ಣವಾಗಿ ಹಾನಿ- ಮಗು ಸಹಿತ 5 ಮಂದಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಅ.20 ಪುತ್ತೂರು:  ಭಾನುವಾರ ಸಂಜೆ ಸುರಿದ ಭಾರೀ ಗಾಳಿ ಮಳೆಯ ಜೊತೆಗೆ ಸಿಡಿಲು ಬಡಿದು ಮನೆ ಸಂಪೂರ್ಣ ಹಾನಿಯಾಗಿ, ಮನೆಯಲ್ಲಿದ್ದ ಮಗು ಸಹಿತ ಐದು ಮಂದಿ ಸಣ್ಣಪುಟ್ಟ ಗಾಯಗೊಂಡ ಘಟನೆ ಪುತ್ತೂರು ನರಿಮೊಗ್ರು ಗ್ರಾಮದ ಬೆದ್ರಾಳದಲ್ಲಿ ನಡೆದಿದೆ. ಬೆದ್ರಾಳ ನಿವಾಸಿ ದಯಾನಂದ ಮೂಲ್ಯ ಅವರಿಗೆ ಸೇರಿದ ಮನೆಗೆ ಸಿಡಿಲು ಬಡಿದು ಹಂಚಿನ ಛಾವಣಿ ಸಂಪೂರ್ಣ ಹಾನಿಯಾಗಿದೆ. ಗೋಡೆ ಕುಸಿತಗೊಂಡಿದ್ದು, ಒಂದು ಭಾಗಕ್ಕೆ ಹಾಕಿದ್ದ ಸಿಮೆಂಟ್ ಶೀಟ್ ಹಾನಿಯಾಗಿದೆ. ಮನೆ ಮಂದಿಗೆ ಹೆಂಚಿನ ತುಂಡುಗಳು

ಪುತ್ತೂರಿನಲ್ಲಿ ಸಿಡಿಲು ಬಡಿದು ಮನೆ ಸಂಪೂರ್ಣವಾಗಿ ಹಾನಿ- ಮಗು ಸಹಿತ 5 ಮಂದಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಸ್‌ಎಸ್‌ಎಲ್ಸಿ ಹಾಗೂ ಪಿಯುಸಿ ತೇರ್ಗಡೆಗೆ ಕನಿಷ್ಠ ಅಂಕ ೩೩ಕ್ಕೆ ಇಳಿಕೆ ಸರಿಯಲ್ಲ : ಶಿಕ್ಷಣ ಸಚಿವ ಎಂ.ಸಿ.ಸುಧಾಕರ್

(ನ್ಯೂಸ್‌ ಕಡಬ) newskadaba.com,  ಅ.20 ಉಡುಪಿ-ಎಸ್‌ಎಸ್‌ಎಲ್ಸಿ ಹಾಗೂ ಪಿಯುಸಿ ತೇರ್ಗಡೆಗೆ ಕನಿಷ್ಠ ಅಂಕ ೩೩ಕ್ಕೆ ಇಳಿಕೆ ಮಾಡಿರುವ ಶಾಲಾ ಶಿಕ್ಷಣ ಮಂತ್ರಿಗಳ ಈ ನಿರ್ಧಾರದ ಬಗ್ಗೆ ಚರ್ಚೆಯಾಗುತ್ತಿದೆ. ಮುಖ್ಯಮಂತ್ರಿಗಳು ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ. ೩೫ ಅಂಕ ಇರುವುದನ್ನು ೩೩ಕ್ಕೆ ಇಳಿಸಿದ್ದಾರೆ ಈ ಬಗ್ಗೆ ಇನ್ನಷ್ಟು ಚರ್ಚೆಗಳು ಆಗಬೇಕು ಎಂಬ ಅಭಿಪ್ರಾಯವಿದೆ. ಶಾಲಾ ಶಿಕ್ಷಣ ಮಂತ್ರಿಗಳು ಯಾವ ಉದ್ದೇಶ ಇಟ್ಟುಕೊಂಡು ಇದನ್ನು ಮಾಡಿದ್ದಾರೆ ಎಂಬ ಮಾಹಿತಿ ಇಲ್ಲ. ಈ ರೀತಿ ಅಂಕ ಕಡಿಮೆ ಮಾಡಿರುವುದು ಸರಿಯಲ್ಲ. ಸಂಪುಟ ಸಭೆಯಲ್ಲಿ ಈ

ಎಸ್‌ಎಸ್‌ಎಲ್ಸಿ ಹಾಗೂ ಪಿಯುಸಿ ತೇರ್ಗಡೆಗೆ ಕನಿಷ್ಠ ಅಂಕ ೩೩ಕ್ಕೆ ಇಳಿಕೆ ಸರಿಯಲ್ಲ : ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ Read More »

ಕರಾವಳಿ

ದೀಪಾವಳಿ ಹಬ್ಬದ ದಿನವೇ ‘ಜಿಟಿ ಮಾಲ್’ ನಿಂದ ಬಿದ್ದು ತರುಣ ಆತ್ಮಹತ್ಯೆ!

(ನ್ಯೂಸ್‌ ಕಡಬ) newskadaba.com,  ಅ.20 ಬೆಂಗಳೂರು: ನಾಡಿನಾದ್ಯಂತ ಇಂದು ದೀಪಾವಳಿ ಹಬ್ಬದ ಸಡಗರ, ಸಂಭ್ರಮ ಮನೆಮಾಡಿರುವಂತೆಯೇ ನಗರದ ಪ್ರತಿಷ್ಠಿತ ಮಾಲ್ ಗಳಲ್ಲಿ ಒಂದಾದ ಮಾಗಡಿ ರಸ್ತೆಯ ಜಿಟಿ ಮಾಲ್ ನಿಂದ ಬಿದ್ದು ಯುವಕನೋರ್ವ ಮೃತಪಟ್ಟಿದ್ದಾನೆ. GTವರ್ಲ್ಡ್ ಮಾಲ್ ನ ಮೂರನೇ ಅಂತಸ್ಥಿನಿಂದ ಬಿದ್ದು ಯುವಕ ಸಾವನ್ನಪ್ಪಿದ್ದಾನೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮೃತ ಯುವಕನ ಗುರುತು ಇನ್ನೂ ಪತ್ತೆಯಾಗಿಲ್ಲ. ಸ್ಥಳಕ್ಕೆ ಮಾಗಡಿ ರಸ್ತೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…

ದೀಪಾವಳಿ ಹಬ್ಬದ ದಿನವೇ ‘ಜಿಟಿ ಮಾಲ್’ ನಿಂದ ಬಿದ್ದು ತರುಣ ಆತ್ಮಹತ್ಯೆ! Read More »

ಕರಾವಳಿ

ಡಿ. 7ಕ್ಕೆ ಶಿಕ್ಷಕರ ಅರ್ಹತಾ ಪರೀಕ್ಷೆ -ಶಿಕ್ಷಣ ಇಲಾಖೆ ಘೋಷಣೆ

(ನ್ಯೂಸ್‌ ಕಡಬ) newskadaba.com,  ಅ.20 ಬೆಂಗಳೂರು: ಡಿಸೆಂಬರ್ 7ರಂದು ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ದಿನಾಂಕ ಘೋಷಣೆ ಮಾಡಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ. ಡಿ.7ಕ್ಕೆ ಟಿಇಟಿ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಿದ್ದು, ಡಿ.31ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಶಿಕ್ಷಕರ ಅರ್ಹತಾ ಪರೀಕ್ಷೆ (TET) ಕುರಿತ ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಅಭ್ಯರ್ಥಿಗಳು ಅ.23ರಿಂದ ನ.09ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶದ ಮತ್ತು ಉಳಿದ ಶಿಕ್ಷಕರ ಹುದ್ದೆಗಳ

ಡಿ. 7ಕ್ಕೆ ಶಿಕ್ಷಕರ ಅರ್ಹತಾ ಪರೀಕ್ಷೆ -ಶಿಕ್ಷಣ ಇಲಾಖೆ ಘೋಷಣೆ Read More »

ಕರಾವಳಿ

ಮಂಗಳೂರು : ಮನೆಗೆ ಸಿಡಿಲು ಬಡಿತ – ಮೂವರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಅ.20 ಮಂಗಳೂರು: ಹೊರವಲಯದ ಸುರತ್ಕಲ್, ಕೊಡಿಪಾಡಿ ಮಾಧವ ನಗರದಲ್ಲಿ ಚಂದ್ರಹಾಸ್ ಎಂಬವರ ಮನೆಗೆ ಸಿಡಿಲು ಬಡಿದು ಮೂವರು ಗಾಯಗೊಂಡ ಘಟನೆ ನಡೆದಿದೆ. ಶನಿವಾರ(ಅ.18) ರಾತ್ರಿ 7.30 ರ ಸುಮಾರಿಗೆ ಸಿಡಿಲು ಬಡಿದಿದೆ.ಮನೆಯೊಳಗಿನ ಕೋಣೆಯೊಂದರಲ್ಲಿ ಓದಿಕೊಳ್ಳುತ್ತಿದ್ದ ಲಾವಣ್ಯ ಹಾಗೂ ಸೌಜನ್ಯ ಅವರ ತಲೆಯ ಭಾಗಕ್ಕೆ ಸಿಡಿಲೇಟು ಬಿದ್ದಿದ್ದರೆ, ಅಜ್ಜಿ ಬೇಬಿ ಅವರಿಗೆ ಕೈ ಭಾಗಕ್ಕೆ ತರಚಿದ ಗಾಯವಾಗಿದೆ. ಮನೆಯ ವಿದ್ಯುತ್ ಲೈನ್ ಗಳು ಸುಟ್ಟು ಹೋಗಿ ಹೊರಬಂದಿದ್ದು, ಗೋಡೆ ಬಿರುಕು ಬಿಟ್ಟಿದೆ. ಸ್ಥಳೀಯ ಮಹಾನಗರ

ಮಂಗಳೂರು : ಮನೆಗೆ ಸಿಡಿಲು ಬಡಿತ – ಮೂವರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ಯುವತಿಯರ ವೀಡಿಯೋ ಬಳಸಿ ಹನಿಟ್ರ್ಯಾಪ್ ಆರೋಪ – ನಿರೀಕ್ಷಾ ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ಅ.20 ಮಂಗಳೂರು: ಯುವತಿ ಬಟ್ಟೆ ಬದಲಾಯಿಸುವ ವೀಡಿಯೋ ಮಾಡಿ ಬ್ಲ್ಯಾಕ್ ಮೇಲ್ ಮಾಡಿರುವ ಆರೋಪದಡಿಯಲ್ಲಿ ಯುವತಿಯೊಬ್ಬಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಮೂಲದ, ಮಂಗಳೂರಿನ ಕಂಕನಾಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ನಿರೀಕ್ಷಾ ಎಂಬಾಕೆ ಬಂಧಿತ ಆರೋಪಿ. ಇತ್ತೀಚೆಗೆ ಕಾರ್ಕಳದ ನಿಟ್ಟೆಯ ಅಭಿಷೇಕ್ ಆಚಾರ್ಯ ಆತ್ಮಹತ್ಯೆ ಪ್ರಕರಣದಲ್ಲಿಯೂ ನಿರೀಕ್ಷಾ ವಿರುದ್ಧ ಹನಿ ಟ್ರ್ಯಾಪ್ ಆರೋಪದ ಕೇಳಿ ಬಂದಿತ್ತು. ಮಂಗಳೂರಿನ ಕದ್ರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ಹಿನ್ನೆಲೆಯಲ್ಲಿ ನಿರೀಕ್ಷಾಳನ್ನು ಭಾನುವಾರ (ಅ.19) ಬಂಧಿಸಿರುವ ಪೊಲೀಸರು

ಮಂಗಳೂರಿನಲ್ಲಿ ಯುವತಿಯರ ವೀಡಿಯೋ ಬಳಸಿ ಹನಿಟ್ರ್ಯಾಪ್ ಆರೋಪ – ನಿರೀಕ್ಷಾ ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಿಲಿಕುಳ: ಅಕ್ಟೋಬರ್ 20 ರಂದು ಪ್ರವಾಸಿಗರ ವೀಕ್ಷಣೆಗೆ ಅವಕಾಶ

(ನ್ಯೂಸ್‌ ಕಡಬ) newskadaba.com,  ಅ.18 ಮಂಗಳೂರು:  ಶಾಲಾ ಮಕ್ಕಳ ದಸರಾ ರಜೆಯ ಪ್ರಯುಕ್ತ ಅಕ್ಟೋಬರ್ 20 ರಂದು (ಸೋಮವಾರ) ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಎಲ್ಲಾ ವಿಭಾಗಗಳಾದ ಮೃಗಾಲಯ, ಪ್ರಾದೇಶಿಕ ವಿಜ್ಞಾನ ಕೇಂದ್ರ, ತಾರಾಲಯ, ಲೇಕ್ ಗಾರ್ಡನ್, ಬೊಟಾನಿಕಲ್ ಮ್ಯೂಸಿಯಂ ಮತ್ತು ಸಂಸ್ಕøತಿ ಗ್ರಾಮವು ಸಾರ್ವಜನಿಕರ ವೀಕ್ಷಣೆಗೆ ಇತರೆ ಎಲ್ಲಾ ದಿನಗಳಂತೆ ತೆರೆದಿರುತ್ತದೆ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.    

ಪಿಲಿಕುಳ: ಅಕ್ಟೋಬರ್ 20 ರಂದು ಪ್ರವಾಸಿಗರ ವೀಕ್ಷಣೆಗೆ ಅವಕಾಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಆಟೋ ಚಾಲಕನ ಮೇಲೆ ಟ್ರಾಫಿಕ್ ಪೊಲೀಸರಿಂದ ಹಲ್ಲೆ

(ನ್ಯೂಸ್‌ ಕಡಬ) newskadaba.com,  ಅ.18 ಪುತ್ತೂರು: ದರ್ಬೆ ಸಮೀಪ ಆಟೋ ರಿಕ್ಷಾ ಚಾಲಕರೊಬ್ಬರ ಮೇಲೆ ಸಂಚಾರಿ ಪೊಲೀಸರು ಹಲ್ಲೆ ನಡೆಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆ ಇಂದು ಸಂಜೆ ದರ್ಬೆಯಿಂದ ಮಾಣಿ ಮೈಸೂರು ಹೆದ್ದಾರಿಗೆ ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿ ನಡೆದಿದೆ. ಸಂಚಾರಿ ಪೊಲೀಸರ ವರ್ತನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ, ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಸಂಚಾರಿ ಠಾಣೆಯ ಪೊಲೀಸರು ಆಟೋ ರಿಕ್ಷಾಕ್ಕೆ ಅಡ್ಡಲಾಗಿ ಬಂದು ಚಾಲಕನ ಮೇಲೆ

ಪುತ್ತೂರು: ಆಟೋ ಚಾಲಕನ ಮೇಲೆ ಟ್ರಾಫಿಕ್ ಪೊಲೀಸರಿಂದ ಹಲ್ಲೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು: ವ್ಯಕ್ತಿಯೊಬ್ಬರ ಮೊಬೈಲ್ ಫೋನ್ ಹ್ಯಾಕ್; 64,000 ರೂ. ವಂಚನೆ

(ನ್ಯೂಸ್‌ ಕಡಬ) newskadaba.com,  ಅ.18 ಮಂಗಳೂರು: ಇ ಪರಿವಾಹನ್ ಚಲನ್ ಆಧಾರಿತ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಯೊಬ್ಬರ ಮೊಬೈಲ್ ಫೋನ್ ಹ್ಯಾಕ್ ಆಗಿ 64,000 ರೂ. ಕಳೆದುಕೊಂಡ ಘಟನೆಗೆ ಸಂಬಂಧಿಸಿದಂತೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರು ಅಕ್ಟೋಬರ್ 5 ರಂದು ಸ್ನೇಹಿತರನ್ನು ಭೇಟಿ ಮಾಡಲು ನಗರಕ್ಕೆ ಬಂದಿದ್ದರು. ಅಂದು ಸಂಜೆ, ಅವರಿಗೆ ಅಪರಿಚಿತ ಸಂಖ್ಯೆಯಿಂದ ಇ ಪರಿವಾಹನ್ ಚಲನ್ ಆಧಾರಿತ ಲಿಂಕ್ ಇರುವ ವಾಟ್ಸಾಪ್ ಸಂದೇಶ ಬಂದಿತ್ತು. ಆ ರಾತ್ರಿ, ಅವರು ಅದನ್ನು ಪರಿಶೀಲಿಸಲು ಆ

ಮಂಗಳೂರು: ವ್ಯಕ್ತಿಯೊಬ್ಬರ ಮೊಬೈಲ್ ಫೋನ್ ಹ್ಯಾಕ್; 64,000 ರೂ. ವಂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top