ಕರಾವಳಿ

ಸೂಜಿ ಮೀನು ಹೊಟ್ಟೆಗೆ ಚುಚ್ಚಿ ಮೀನುಗಾರ ಸಾವು

(ನ್ಯೂಸ್‌ ಕಡಬ) newskadaba.com,  ಅ.18: ಕಾರವಾರ: ತೀಕ್ಷ್ಣ ಮೂಗಿನ ಸೂಜಿ ಮೀನು ಹೊಟ್ಟೆಗೆ ಚುಚ್ಚಿದ್ದರಿಂದ ಮೀನುಗಾರನೊಬ್ಬ ಸಾವನ್ನಪ್ಪಿರುವ ವಿಚಿತ್ರ ಘಟನೆಯೊಂದು ಕಾರವಾರದಲ್ಲಿ ನಡೆದಿದೆ. ಮೃತನನ್ನು ಮಾಜಾಳಿ ದಂಡೇಭಾಗದ ನಿವಾಸಿ ಅಕ್ಷಯ್ ಅನಿಲ್ ಮಾಜಾಳಿಕರ್ (24) ಎಂದು ಗುರುತಿಸಲಾಗಿದೆ. ಅಕ್ಟೋಬರ್‌ 14ರಂದು ಅಕ್ಷಯ್‌, ಆಳ ಸಮುದ್ರದಲ್ಲಿ ಮೀನಿನ ಬೇಟೆಗೆ ತೆರಳಿದ್ದ. ದೋಣಿಯಲ್ಲಿದ್ದಾಗಲೇ 8ರಿಂದ 10 ಇಂಚು ಉದ್ದದ ಚೂಪು ಮೂತಿಯ ಸೂಜಿ ಮೀನು, ನೀರಿನಿಂದ ಜಿಗಿದು ಬಂದು ಅಕ್ಷಯ್ ಹೊಟ್ಟೆಗೆ ಚುಚ್ಚಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅಕ್ಷಯ್‌ನನ್ನ ಕೂಡಲೇ […]

ಸೂಜಿ ಮೀನು ಹೊಟ್ಟೆಗೆ ಚುಚ್ಚಿ ಮೀನುಗಾರ ಸಾವು Read More »

ಕರಾವಳಿ, ಕರ್ನಾಟಕ

ಬೆಂಗಳೂರು ವಿದ್ಯಾರ್ಥಿನಿ ಕೊಲೆ ಪ್ರಕರಣ: ‘ಮಿಷನ್ ಯಾಮಿನಿ’ ಬೇಧಿಸಿ ಪೊಲೀಸರು; ಇಬ್ಬರ ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ಅ.18 ಬೆಂಗಳೂರು: ಪ್ರೀತಿಸಲು ನಿರಾಕರಿಸಿದ ಕಾರಣಕ್ಕೆ ವಿದ್ಯಾರ್ಥಿನಿಯ ಮುಖಕ್ಕೆ ಖಾರದ ಪುಡಿ ಎರಚಿ ಚಾಕುವಿನಿಂದ ಕತ್ತು ಕೊಯ್ದು ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಉತ್ತರ ವಿಭಾಗದ ಶ್ರೀರಾಂಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕೃತ್ಯ ಎಸಗಿದ್ದ ವಿಘ್ನೇಶ್ (28) ಹಾಗೂ ಆತನಿಗೆ ನೆರವಾಗಿದ್ದ ಹರೀಶ್ (36) ಬಂಧಿತರು. ಕೃತ್ಯದ ಬಳಿಕ ಆರೋಪಿ ತಪ್ಪಿಸಿಕೊಳ್ಳಲು ಹರೀಶ್ ನೆರವಾಗಿದ್ದ ಎಂದು ಪೊಲೀಸರು ಹೇಳಿದರು. ಶ್ರೀರಾಂಪುರ ಸಮೀಪದ ಸ್ವತಂತ್ರಪಾಳ್ಯ ನಿವಾಸಿ ಯಾಮಿನಿ ಪ್ರಿಯಾ ಅವರನ್ನು ಕೊಲೆ

ಬೆಂಗಳೂರು ವಿದ್ಯಾರ್ಥಿನಿ ಕೊಲೆ ಪ್ರಕರಣ: ‘ಮಿಷನ್ ಯಾಮಿನಿ’ ಬೇಧಿಸಿ ಪೊಲೀಸರು; ಇಬ್ಬರ ಆರೆಸ್ಟ್ Read More »

ಕರಾವಳಿ

ಹನಿಟ್ರ್ಯಾಪ್: ಕೇರಳ ಮೂಲದ ಉದ್ಯಮಿಗೆ ಲಕ್ಷಾಂತರ ರೂ. ವಂಚನೆ; ಆರೋಪ

(ನ್ಯೂಸ್‌ ಕಡಬ) newskadaba.com,  ಅ.18 ಮಂಗಳೂರು: ರಾಜ್ಯದಲ್ಲಿ ಹನಿಟ್ರ್ಯಾಪ್ ತಂಡಗಳು ಸಕ್ರಿಯವಾಗಿದ್ದು, ಅಸಹಾಯಕ ಹೆಣ್ಣು ಮಕ್ಕಳನ್ನು ಮುಂದಿಟ್ಟು ಉದ್ಯಮಿಗಳಿಗೆ ಬಲೆ ಬೀಸುವ ಕಾರ್ಯಗಳು ಅವ್ಯಾಹತವಾಗಿ ನಡೆಯುತ್ತಿದೆ. ಮರ್ಯಾದೆಗೆ ಅಂಜಿ ಬಹಳಷ್ಟು ಮಂದಿ ಲಕ್ಷಾಂತರ ರೂ. ನೀಡಿ ಮೋಸ ಹೋಗುತ್ತಿದ್ದಾರೆ. ಇಂತಹ ಸಂತ್ರಸ್ತರು ಮುಂದೆ ಬಂದಲ್ಲಿ ಅವರಿಗೆ ಉಚಿತವಾಗಿ ಕಾನೂನು ನೆರವು ನೀಡಲು ಸಿದ್ಧ ಎಂದು ಬೆಂಗಳೂರಿನ ನ್ಯಾಯವಾದಿ ಸೌದಾ ಹೇಳಿದ್ದಾರೆ. ಮಂಗಳೂರಿನಲ್ಲಿ ಶುಕ್ರವಾರ ಕರೆದ ಸುದ್ದಿಗೋಷ್ಠಿಯಲ್ಲಿ ಅವರು, ಕೇರಳ ಮೂಲದ ಗಲ್ಫ್ ಉದ್ಯಮಿಯೊಬ್ಬರಿಗೆ ಬಂಟ್ವಾಳದ ಹನಿಟ್ರ್ಯಾಪ್ ತಂಡವೊಂದು ಮೋಸ

ಹನಿಟ್ರ್ಯಾಪ್: ಕೇರಳ ಮೂಲದ ಉದ್ಯಮಿಗೆ ಲಕ್ಷಾಂತರ ರೂ. ವಂಚನೆ; ಆರೋಪ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೀಪಾವಳಿ ಹಬ್ಬದ ಪ್ರಯುಕ್ತ ನೈಋತ್ಯ ರೈಲ್ವೆಯಿಂದ ವಿಶೇಷ ರೈಲು ಸೇವೆ

(ನ್ಯೂಸ್‌ ಕಡಬ) newskadaba.com,  ಅ.18 ಬೆಂಗಳೂರು: ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗವು ದೀಪಾವಳಿ ಮತ್ತು ಛತ್ ಪೂಜಾ ಸಮಯದಲ್ಲಿ ಜನರ ಸಂಚಾರ ದಟ್ಟಣೆಯನ್ನು ಹಾಗೂ ದೀರ್ಘ ವಾರಾಂತ್ಯದ ಜನಸಂದಣಿಯನ್ನು ನಿಭಾಯಿಸಲು ಬೃಹತ್ ಯೋಜನೆಯನ್ನು ರೂಪಿಸಿದೆ. SWR ಬೆಂಗಳೂರು, ಮೈಸೂರು ಮತ್ತು ಹುಬ್ಬಳ್ಳಿ ವಿಭಾಗಗಳ ಪ್ರಮುಖ ನಿಲ್ದಾಣಗಳಲ್ಲಿ 136 ವಿಶೇಷ ರೈಲುಗಳು (338 ಟ್ರಿಪ್‌ಗಳು), 540 ಹೆಚ್ಚುವರಿ ಬೋಗಿಗಳು, ವರ್ಧಿತ ಭದ್ರತೆ, ಸಹಾಯ ಕೇಂದ್ರಗಳು, ವೈದ್ಯಕೀಯ ತಂಡಗಳು ಮತ್ತು ಸುಧಾರಿತ ಪ್ರಯಾಣಿಕರ ಮಾರ್ಗದರ್ಶನ ಸೌಲಭ್ಯ ನೀಡುತ್ತಿದೆ. ರೈಲು ಅವಶ್ಯಕತೆಗಳನ್ನು

ದೀಪಾವಳಿ ಹಬ್ಬದ ಪ್ರಯುಕ್ತ ನೈಋತ್ಯ ರೈಲ್ವೆಯಿಂದ ವಿಶೇಷ ರೈಲು ಸೇವೆ Read More »

ಕರಾವಳಿ

ಉಡುಪಿ: ಅಣ್ಣ ತಂಗಿ ನೇಣಿಗೆ ಶರಣು-ಕಾರಣ ನಿಗೂಢ

(ನ್ಯೂಸ್‌ ಕಡಬ) newskadaba.com,  ಅ.18: ಅಣ್ಣ-ತಂಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಲೇಬರ್ ಕಾಲೋನಿಯ ಜೋಪಡಿಯಲ್ಲಿ ನಡೆದಿದೆ. ಮಲ್ಲೇಶ್ (23) ಮತ್ತು ಪವಿತ್ರಾ (17) ಮೃತರಾಗಿದ್ದು, ಪವಿತ್ರಾ ತಾಯಿ ಮನೆಯಲ್ಲಿ ಇಲ್ಲದ ವೇಳೆ ಇಬ್ಬರೂ ನೇಣಿಗೆ ಕೊರಳೊಡ್ಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ನಿಗೂಢವಾಗಿದ್ದು ಅಕ್ಕ ಮತ್ತು ತಂಗಿಯರ ಮಕ್ಕಳಾಗಿರೋ ಇವರಿಬ್ಬರು ಯಾಕೆ ಇಂತಹ ನಿರ್ಧಾರ ತೆಗೆದುಕೊಂಡರು ಎಂಬುದು ಪ್ರಶ್ನೆಯಾಗಿಯೇ ಉಳಿದಿದೆ. ಬೇರೊಂದು ಮನೆಯಲ್ಲಿ ಕೆಲಸ ಮಾಡಿ, ಉಡುಪಿಯ ಪ್ರತಿಷ್ಠಿತ ಸರ್ಕಾರಿ ಕಾಲೇಜಿನಲ್ಲಿ ಪವಿತ್ರಾ ಪ್ರಥಮ

ಉಡುಪಿ: ಅಣ್ಣ ತಂಗಿ ನೇಣಿಗೆ ಶರಣು-ಕಾರಣ ನಿಗೂಢ Read More »

ಕರಾವಳಿ, ಕ್ರೈಮ್ ನ್ಯೂಸ್

ಭಾರತದ ಸ್ವದೇಶಿ ಯುದ್ಧ ವಿಮಾನ ತೇಜಸ್ ಎಂಕೆ1ಎ -ಮೊದಲ ಹಾರಾಟ ಯಶಸ್ಸು

(ನ್ಯೂಸ್‌ ಕಡಬ) newskadaba.com,  ಅ.18 ನಾಸಿಕ್ : ಯುದ್ಧ ವಿಮಾನ ತೇಜಸ್ ಎಂಕೆ1ಎ ಇಂದು ತನ್ನ ಮೊದಲ ಹಾರಾಟ ನಡೆಸಿದೆ. ನಾಸಿಕ್‌ನಲ್ಲಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನ ವಿಮಾನ ಉತ್ಪಾದನಾ ವಿಭಾಗದಲ್ಲಿ ಈ ಹಾರಾಟ ನಡೆಯಿತು. ಭಾರತದಲ್ಲಿ ಯುದ್ಧ ವಿಮಾನ ತಯಾರಿಕೆಯ ಅಭಿವೃದ್ಧಿಯಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇದೇ ವೇಳೆ ರಾಜನಾಥ್ ಸಿಂಗ್ ಅವರು LCA ಎಂಕೆ1ಎಯ ಮೂರನೇ ಉತ್ಪಾದನಾ ಘಟಕ ಮತ್ತು ಎಚ್‌ಟಿಟಿ-40

ಭಾರತದ ಸ್ವದೇಶಿ ಯುದ್ಧ ವಿಮಾನ ತೇಜಸ್ ಎಂಕೆ1ಎ -ಮೊದಲ ಹಾರಾಟ ಯಶಸ್ಸು Read More »

ಕರಾವಳಿ

ಕಾರಣೀಕ ಕ್ಷೇತ್ರ ಬಂಟ್ವಾಳದ ಪಣೋಲಿಬೈಲು ಕಲ್ಲುರ್ಟಿ ದೇವಸ್ಥಾನದಲ್ಲಿ ಹೊಸ ಅಕ್ಕಿ ಅಗೆಲು ಸೇವೆ

(ನ್ಯೂಸ್‌ ಕಡಬ) newskadaba.com,  ಅ.18 ಬಂಟ್ವಾಳ: ಪಣೋಲಿಬೈಲು ಕಲ್ಲುರ್ಟಿ ದೇವಸ್ಥಾನದಲ್ಲಿ ಅ.17 ರಂದು ಶುಕ್ರವಾರ ಮಧ್ಯಾಹ್ನ ಹೊಸ ಅಕ್ಕಿ ಅಗೆಲು ಸೇವೆ ನಡೆಯಿತು.ಪ್ರತೀ ವರ್ಷ ಕಾವೇರಿ ಸಂಕ್ರಮಣದಂದು ಕ್ಷೇತ್ರದಲ್ಲಿ ಹೊಸ ಅಕ್ಕಿಯ ಅಗೆಲು ಸೇವೆ ನಡೆಯುತ್ತದೆ. ಊರ ಪರ ಊರ ಭಕ್ತರು ಪುದ್ದಾರ್ ಅಗೆಲು ಸೇವೆಗೆ ವಿವಿಧ ಬಗೆಯ ತರಕಾರಿಗಳನ್ನು ನೀಡುತ್ತಾರೆ . ಈ ದಿನ ಅಗೆಲು ಸೇವೆಯಲ್ಲಿ ತರಕಾರಿಗಳನ್ನು ಬಿಡಿಸುವುದು ವಿಶೇಷವಾಗಿದೆ. ಇಲ್ಲಿ ಇತರೆ ದಿನಗಳಲ್ಲಿ ನಡೆಯುವ ಅಗೆಲು ಸೇವೆಯಂತೆ ದೈವಕ್ಕೆ ಅಗೆಲು ಸೇವೆ ಈ

ಕಾರಣೀಕ ಕ್ಷೇತ್ರ ಬಂಟ್ವಾಳದ ಪಣೋಲಿಬೈಲು ಕಲ್ಲುರ್ಟಿ ದೇವಸ್ಥಾನದಲ್ಲಿ ಹೊಸ ಅಕ್ಕಿ ಅಗೆಲು ಸೇವೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ : ಸಾರ್ವಜನಿಕ ಸ್ಥಳದಲ್ಲಿ ಯುವಕರ ನಡುವೆ ಘರ್ಷಣೆ – ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,  ಅ.17 ಬಂಟ್ವಾಳ : ಗ್ರಾಮದ ಮಂಚಿಕಟ್ಟೆ ಎಂಬ ಸ್ಥಳದಲ್ಲಿ ಯುವಕರ ಗುಂಪೊಂದು ಸಾರ್ವಜನಿಕವಾಗಿ ಗಲಾಟೆ ಮಾಡಿದ್ದು, ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ತಲುಪಿದಾಗ, ವಿಜೇತ್, ರಕ್ಷಿತ್ ಕೊಟ್ಟಾರಿ, ಪುಷ್ಪರಾಜ್, ಅಜಯ್, ಜಮೀರ್ ಮತ್ತು ಮೊಹಮ್ಮದ್ ಮುಸ್ತಫಾ ಎಂಬ ಯುವಕರ ಗುಂಪು ತೀವ್ರ ವಾಗ್ವಾದದಲ್ಲಿ ತೊಡಗಿದ್ದರು. ಅವರು ಅವಾಚ್ಯ ಶಬ್ದಗಳನ್ನು ಬಳಸಿ ಸಾರ್ವಜನಿಕ ಶಾಂತಿ ಮತ್ತು ಕೋಮು ಸಾಮರಸ್ಯವನ್ನು ಕದಡುವ ರೀತಿಯಲ್ಲಿ ಹೊಡೆದಾಡುತ್ತಿದ್ದರು ಎಂದು ಆರೋಪಿಸಲಾಗಿದೆ. ಬಂಟ್ವಾಳ

ಬಂಟ್ವಾಳ : ಸಾರ್ವಜನಿಕ ಸ್ಥಳದಲ್ಲಿ ಯುವಕರ ನಡುವೆ ಘರ್ಷಣೆ – ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಟೋ ರಿಕ್ಷಾಕ್ಕೆ ಲಾರಿ ಢಿಕ್ಕಿ; ಚಾಲಕ ಸಾವು

(ನ್ಯೂಸ್‌ ಕಡಬ) newskadaba.com,  ಅ.17 ಪಡುಬಿದ್ರೆ: ಲಾರಿಯೊಂದು ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿ ಬೈಪಾಸ್ ಬಳಿ ಶುಕ್ರವಾರ (ಅ 16) ಬೆಳಗ್ಗೆ ನಡೆದಿದೆ. ಹೆಜಮಾಡಿ ಮಾಸ್ತಿಕಟ್ಟೆ ನಿವಾಸಿ ರಫೀಕ್ (37) ಮೃತ ದುರ್ದೈವಿ. ರಫೀಕ್ ಶುಕ್ರವಾರ ಮುಂಜಾನೆ ಮನೆಯಿಂದ ಮಸೀದಿಗೆ ರಿಕ್ಷಾದಲ್ಲಿ ತೆರಳಿದ್ದರು. ಈ ವೇಳೆ ಹೆಜಮಾಡಿ ಬೈಪಾಸ್ ಬಳಿ ಮಂಗಳೂರು ಕಡೆಯಿಂದ ಬಂದ ಲಾರಿಯೊಂದು ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಆಟೋ ಚಾಲಕ

ಆಟೋ ರಿಕ್ಷಾಕ್ಕೆ ಲಾರಿ ಢಿಕ್ಕಿ; ಚಾಲಕ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾರ್ಕಳದಲ್ಲಿ ಕೋಟ್ಯಂತರ ಮೌಲ್ಯದ ಅಕ್ರಮ ಪಟಾಕಿ ದಾಸ್ತಾನು; ಮೂವರು ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ಅ.17 ಕಾರ್ಕಳ: ದೀಪಾವಳಿ ಹಬ್ಬದ ಸಿದ್ಧತೆ ಹಿನ್ನೆಲೆಯಲ್ಲಿ, ಕಾರ್ಕಳ ತಾಲೂಕಿನ ಮಿಯಾರಿನಲ್ಲಿ ಭಾರೀ ಪ್ರಮಾಣದಲ್ಲಿ ಅಕ್ರಮವಾಗಿ ಪಟಾಕಿಗಳನ್ನು ಸಂಗ್ರಹಿಸಿದ್ದ ಮೂವರನ್ನು ಕಾರ್ಕಳ ಪೊಲೀಸರು ಬಂಧಿಸಿದ್ದು, ಕೋಟಿಗಟ್ಟಲೆ ರೂಪಾಯಿ ಮೌಲ್ಯದ ಉತ್ಪನ್ನಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಮಿಯಾರು ನಿವಾಸಿಗಳಾದ ಸತ್ಯೇಂದ್ರ ನಾಯಕ್ (70), ಶ್ರೀಕಾಂತ್ ನಾಯಕ್ (37) ಮತ್ತು ರಾಮಾನಂದ ನಾಯಕ್ (48) ಎಂದು ಗುರುತಿಸಲಾಗಿದೆ. ಈ ಮೂವರು ಯಾವುದೇ ಪರವಾನಗಿ ಇಲ್ಲದೆ ಮತ್ತು ಮಾನವ ಜೀವಕ್ಕೆ ಅಪಾಯ ತಂದೊಡ್ಡುವ ರೀತಿಯಲ್ಲಿ ಸ್ಫೋಟಕ ಪಟಾಕಿಗಳನ್ನು ಸಂಗ್ರಹಿಸಿದ್ದರು

ಕಾರ್ಕಳದಲ್ಲಿ ಕೋಟ್ಯಂತರ ಮೌಲ್ಯದ ಅಕ್ರಮ ಪಟಾಕಿ ದಾಸ್ತಾನು; ಮೂವರು ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top