ಕರಾವಳಿ

ಪ್ರಧಾನ ಮಂತ್ರಿ ಧನ್-ಧಾನ್ಯ ಕೃಷಿ ಯೋಜನೆ ಮತ್ತು ದ್ವಿದಳ ಧಾನ್ಯಗಳ ಸ್ವಾವಲಂಬನೆ ಮಿಷನ್ ಗೆ ಮೋದಿ ಚಾಲನೆ

(ನ್ಯೂಸ್‌ ಕಡಬ) newskadaba.com,  ಅ .13. ಗುಡಿಬಂಡೆ: ಕೇಂದ್ರ ಸರ್ಕಾರದ ನೂತನ ಯೋಜನೆಯಾದ ಪ್ರಧಾನಮಂತ್ರಿ ಧನ್-ಧನ್ಯ ಕೃಷಿ ಯೋಜನೆ ಹಾಗೂ ದ್ವಿದಳ ಧಾನ್ಯಗಳ ಸ್ವಾವಲಂಬನೆ ಮಿಷನ್ ಯೋಜನೆಯ ಉದ್ಘಾಟನೆಯ ನೇರ ಪ್ರಸಾರ ಕಾರ್ಯಕ್ರಮವನ್ನು ಗುಡಿಬಂಡೆಯ ಕೃಷಿ ಇಲಾಖೆಯ ಕಚೇರಿಯಲ್ಲಿ ಏರ್ಪಡಿಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಸಹಾಯಕ ಕೃಷಿ ನಿರ್ದೇಶಕ ಕೇಶವರೆಡ್ಡಿ, ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಧನ್-ಧನ್ಯ ಕೃಷಿ ಯೋಜನೆ ಹಾಗೂ ದ್ವಿದಳ ಧಾನ್ಯಗಳ ಸ್ವಾವಲಂಬನೆ ಮಿಷನ್ ಎಂಬ ನೂತನ ಯೋಜನೆಯನ್ನು ಜಾರಿಗೊಳಿಸಲಾಗಿದೆ.. ಈ ಯೋಜನೆ ಅಡಿಯಲ್ಲಿ ಕೃಷಿ […]

ಪ್ರಧಾನ ಮಂತ್ರಿ ಧನ್-ಧಾನ್ಯ ಕೃಷಿ ಯೋಜನೆ ಮತ್ತು ದ್ವಿದಳ ಧಾನ್ಯಗಳ ಸ್ವಾವಲಂಬನೆ ಮಿಷನ್ ಗೆ ಮೋದಿ ಚಾಲನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರಿನ ಶಾಂತಿಗೋಡಿನಲ್ಲಿ ಸಿಡಿಲು ಬಡಿದು ವ್ಯಕ್ತಿಯೋರ್ವ ಮೃತ

(ನ್ಯೂಸ್‌ ಕಡಬ) newskadaba.com,  ಅ .13. ಪುತ್ತೂರು: ಶಾಂತಿಗೋಡು ಗ್ರಾಮದ ನೆಕ್ಲರೆ ಆನಡ್ಕದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬ ಮೃತಪಟ್ಟ ಶಂಕೆ ವ್ಯಕ್ತವಾಗಿದೆ. ಮೃತಪಟ್ಟವರನ್ನು ದಿನಗೂಲಿ ಕಾರ್ಮಿಕರಾದ ವಾಮನ ನಾಯ್ಕ (40) ಎಂದು ಗುರುತಿಸಲಾಗಿದೆ. ವಾಮನ ಅವರು ಕೆಲಸ ಮುಗಿಸಿ ಸಂಜೆ 5.40ರ ಸುಮಾರಿಗೆ ಮನೆಗೆ ಹಿಂದಿರುಗಿದ್ದರು. ಅವರು ಮನೆಯ ಮುಂದೆ ಕುಳಿತಿದ್ದಾಗ ಸಿಡಿಲು ಬಡಿದು, ಗಂಭೀರ ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಪುತ್ತೂರಿನ ಶಾಂತಿಗೋಡಿನಲ್ಲಿ ಸಿಡಿಲು ಬಡಿದು ವ್ಯಕ್ತಿಯೋರ್ವ ಮೃತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿ

(ನ್ಯೂಸ್‌ ಕಡಬ) newskadaba.com  ಅ. 13. ಪಶುಪಾಲನಾ ಇಲಾಖೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಮಂಗಳೂರು ಇದರ ವತಿಯಿಂದ ಅಕ್ಟೋಬರ್-2025ರ ಮಾಹೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆಸಕ್ತ ರೈತರಿಗೆ ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿಯನ್ನು ಏರ್ಪಡಿಸಲಾಗಿದೆ. ತರಬೇತಿ ವಿವರ:- ಅಕ್ಟೋಬರ್ 16ರಿಂದ 17ರವರೆಗೆ ರೈತರಿಗೆ ಕೋಳಿ ಸಾಕಾಣಿಕೆ ತರಬೇತಿ ಹಾಗೂ ಅಕ್ಟೋಬರ್ 28 ರಿಂದ 29ರ ವರೆಗೆ ಹಂದಿ ಸಾಕಾಣಿಕೆ ತರಬೇತಿ ನೀಡಲಾಗುತ್ತದೆ. ಆಸಕ್ತ ರೈತರು ಹೆಚ್ಚಿನ ಮಾಹಿತಿಗೆ ಮತ್ತು ನೋಂದಣಿ ಮಾಡಿಕೊಳ್ಳಲು ಮಂಗಳೂರು ತಾಲೂಕು ದೂ.ಸಂ–

ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿ Read More »

ಕರಾವಳಿ, ಕರ್ನಾಟಕ

ಕಾರ್ಕಳದ ಯುವಕನ ಆತ್ಮಹತ್ಯೆ ಪ್ರಕರಣ; ತನಿಖೆಗಾಗಿ ನಾಲ್ವರು ಗೆಳೆಯರ ಮೊಬೈಲ್ ವಶಕ್ಕೆ

(ನ್ಯೂಸ್‌ ಕಡಬ) newskadaba.com,  ಅ.11 ಕಾರ್ಕಳ: ಸ್ನೇಹಿತರಿಂದ ಬ್ಲಾಕ್‌ಮೇಲ್‌ಗೆ ಒಳಗಾದ ಬಗ್ಗೆ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿ ಆತ್ಮಹತ್ಯೆ ಮಾಡಿಕೊಂಡಿರುವ ನಿಟ್ಟೆಯ ಯುವಕನ ಪ್ರಕರಣದ ಕುರಿತು ಪೊಲೀಸರ ತನಿಖೆ ಮುಂದುವರಿದಿದ್ದು, ನಾಲ್ವರು ಗೆಳೆಯರ ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಅವುಗಳನ್ನು ವಿವಿಧ ತಾಂತ್ರಿಕ ಆಯಾಮದಲ್ಲಿ ಪರಿಶೀಲಿಸಲಾಗುತ್ತಿದೆ. ನಿಟ್ಟೆ ಗ್ರಾಮದ ಪರಪ್ಪಾಡಿ ನಿವಾಸಿ ಅಭಿಷೇಕ್ ಆಚಾರ್ಯ (23) ಮೃತ ಯುವಕ. ಅವರು ಗುರುವಾರ ಬೆಳ್ಮಣ್‌ನಲ್ಲಿರುವ ಖಾಸಗಿ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂಬಂಧ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಾಥಮಿಕ

ಕಾರ್ಕಳದ ಯುವಕನ ಆತ್ಮಹತ್ಯೆ ಪ್ರಕರಣ; ತನಿಖೆಗಾಗಿ ನಾಲ್ವರು ಗೆಳೆಯರ ಮೊಬೈಲ್ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಳ್ಳಾರಿ: ಸಮೀಕ್ಷಾ ಕರ್ತವ್ಯಕ್ಕೆ ಗೈರು – ಇಬ್ಬರು ಶಿಕ್ಷಕರು ಅಮಾನತು

(ನ್ಯೂಸ್‌ ಕಡಬ) newskadaba.com,  ಅ.11 ಬಳ್ಳಾರಿ : ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಗೈರಾದ ಬಳ್ಳಾರಿ ಜಿಲ್ಲೆಯಲ್ಲಿ ಇಬ್ಬರು ಶಿಕ್ಷಕರನ್ನ ಸೇವೆಯಿಂದ ಅಮಾನತು ಮಾಡಲಾಗಿದೆ. ಗಣತಿದಾರ ರವಿಚಂದ್ರ ಬಿ.ಸಿ ಹಾಗೂ ಮೇಲ್ವಿಚಾರಕ ರಾಘವೇಂದ್ರ ರಾವ್ ಅಮಾನತಾದ ಶಿಕ್ಷಕರು. ಕಂಪ್ಲಿಯ ಬಾಲಕರ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲೆ ವಿಭಾಗದ ಶಿಕ್ಷಕ ರವಿಚಂದ್ರ ಹಾಗೂ ಸಂಡೂರಿನ ಆದರ್ಶ ವಿದ್ಯಾಲಯದ ಶಿಕ್ಷಕ ರಾಘವೇಂದ್ರ ಇಬ್ಬರನ್ನೂ ಸಮೀಕ್ಷೆಗೆ ನಿಯೋಜಿಸಲಾಗಿತ್ತು. ಸಮೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿದ್ದರೂ ಇಬ್ಬರೂ ಶಿಕ್ಷಕರು ನಿರ್ಲಕ್ಷ್ಯ ತೋರಿದ್ದರು

ಬಳ್ಳಾರಿ: ಸಮೀಕ್ಷಾ ಕರ್ತವ್ಯಕ್ಕೆ ಗೈರು – ಇಬ್ಬರು ಶಿಕ್ಷಕರು ಅಮಾನತು Read More »

ಕರಾವಳಿ

ಮಂಗಳೂರಿನ ಹೋಲ್‌ಸೇಲ್ ಮಾರಾಟ ಮಳಿಗೆಯಲ್ಲಿ ಇಟ್ಟಿದ್ದ 3.5 ಲಕ್ಷ ರೂ. ನಗದು ಕಳ್ಳತನ

(ನ್ಯೂಸ್‌ ಕಡಬ) newskadaba.com,  ಅ.11 ಮಂಗಳೂರು : ಸುರತ್ಕಲ್ ಮಾರ್ಕೆಟ್ ಮುಂಭಾಗದ ಹೋಲ್‌ಸೇಲ್ ಮಾರಾಟ ಮಳಿಗೆಯೊಂದರಲ್ಲಿ ಇಟ್ಟಿದ್ದ ಬರೋಬ್ಬರಿ 3.5 ಲಕ್ಷ ರೂ. ನಗದು ಕಳ್ಳತನವಾಗಿರುವ ಘಟನೆ ಶುಕ್ರವಾರ(ಅ.10) ಬೆಳಕಿಗೆ ಬಂದಿದೆ.ಮಾಲೀಕರು ದಿನನಿತ್ಯದಂತೆ ಅಂಗಡಿ ತೆರೆಯಲು ಬಂದಾಗ ಅಂಗಡಿಯ ಬೀಗ ಮುರಿದು ಕಳ್ಳತನ ಮಾಡಿರುವುದು ತಿಳಿದುಬಂದಿದೆ. ರಾತ್ರಿಯ ಸಮಯದಲ್ಲಿ ಅಂಗಡಿಯ ಬೀಗವನ್ನು ಒಡೆಯಲಾಗಿದೆ ಎನ್ನಲಾಗಿದೆ. ವರದಿಗಳ ಪ್ರಕಾರ, ಅಂಗಡಿ ಮಾಲೀಕರಾದ ಶಮೀರ್ ಅವರು ಸಾಮಾನ್ಯವಾಗಿ ವ್ಯಾಪಾರದ ನಂತರ ದಿನದ ಹಣವನ್ನು ಮನೆಗೆ ತೆಗೆದುಕೊಂಡು ಹೋಗುತ್ತಿದ್ದರು. ಆದರೆ, ಮರುದಿನ

ಮಂಗಳೂರಿನ ಹೋಲ್‌ಸೇಲ್ ಮಾರಾಟ ಮಳಿಗೆಯಲ್ಲಿ ಇಟ್ಟಿದ್ದ 3.5 ಲಕ್ಷ ರೂ. ನಗದು ಕಳ್ಳತನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಗರದ ಜನತಾ ಡಿಲಕ್ಸ್ ಹೊಟೇಲ್ ಮಾಲಕ, ಉದ್ಯಮಿ ಪತ್ತುಮುಡಿ ಸೂರ್ಯನಾರಾಯಣ ರಾವ್ ವಿದಿವಶ

(ನ್ಯೂಸ್‌ ಕಡಬ) newskadaba.com,  ಅ.11 ಮಂಗಳೂರು: ಜನತಾ ಡಿಲಕ್ಸ್ ಮಾಲಕ ಪತ್ತುಮುಡಿ ಸೂರ್ಯನಾರಾಯಣ್ ರಾವ್ ಶುಕ್ರವಾರ ನಿಧನರಾದರು. ಪತ್ನಿ, ಪುತ್ರಿ ಹಾಗೂ ಅಪಾರ ಬಂಧುಮಿತ್ರರನ್ನು ಮೃತರು ಅಗಲಿದ್ದಾರೆ. ಸಣ್ಣ ವಯಸ್ಸಿನಲ್ಲೇ ಪಾಕ ವಿದ್ಯೆಯಲ್ಲಿ ಪರಿಣಿತರಾದ ಸೂರ್ಯನಾರಾಯಣ ರಾವ್ ಹೈಸ್ಕೂಲ್ ವಿದ್ಯಾಭ್ಯಾಸದ ನಂತರ ಅಡುಗೆ ಸಹಾಯಕರಾಗಿ, ಸಣ್ಣ ಅಂಗಡಿ ವ್ಯವಹಾರ ನಡೆಸಿ ಉದ್ಯಮ ಕ್ಷೇತ್ರದ ತೊಡಗಿಸಿಕೊಂಡರು.ಬಳಿಕ ಹೊಟೇಲ್ ಉದ್ಯಮದಲ್ಲಿ ತೊಡಗಿಸಿಕೊಂಡು ಹಂತ ಹಂತವಾಗಿ ಯಶಸ್ಸು ಕಂಡರು. ಮೊದಲಿಗೆ ನಗರದ ಕೆ.ಎಸ್.ರಾವ್ ರಸ್ತೆಯಲ್ಲಿ ಜನತಾ ಡಿಲಕ್ಸ್ ಹೆಸರಿನಲ್ಲಿ ಹೋಟೆಲ್ ಉದ್ಯಮ

ನಗರದ ಜನತಾ ಡಿಲಕ್ಸ್ ಹೊಟೇಲ್ ಮಾಲಕ, ಉದ್ಯಮಿ ಪತ್ತುಮುಡಿ ಸೂರ್ಯನಾರಾಯಣ ರಾವ್ ವಿದಿವಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭರತ್ ಕುಮ್ಡೇಲು ನ್ಯಾಯಾಲಯಕ್ಕೆ ಶರಣು

(ನ್ಯೂಸ್‌ ಕಡಬ) newskadaba.com,  ಅ.10:  ನಗರದಲ್ಲಿ ಅಶ್ರಫ್ ಕಲಾಯಿ ಹಾಗೂ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹಾಗೂ ಹಿಂದೂ ಸಂಘಟನೆಯ ಮುಖಂಡನಾದ ಭರತ್ ಕುಮ್ಡೇಲು ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಶರಣಾಗಿದ್ದಾನೆ. 2017 ರ ಕಲಾಯಿ ಅಶ್ರಫ್ ಕೊಲೆಯ ಪ್ರಮುಖ ಆರೋಪಿ ಭರತ್ ಕುಮ್ಡೇಲ್, ಬಂಧನದಿಂದ ತಪ್ಪಿಸಿಕೊಳ್ಳಲು ಸುಮಾರು ಎಂಟು ವರ್ಷಗಳ ಕಾಲ ಕಳೆದ ನಂತರ ಗುರುವಾರ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಮುಂದೆ ಹಾಜರಾಗಿದ್ದಾನೆ. ಅಶ್ರಫ್ ಕಲಾಯಿ ಕೊಲೆ

ಭರತ್ ಕುಮ್ಡೇಲು ನ್ಯಾಯಾಲಯಕ್ಕೆ ಶರಣು Read More »

ಕರಾವಳಿ, ಕರ್ನಾಟಕ

ದ್ವೇಷ ಭಾಷಣ ಪ್ರಕರಣ: ರಿಯಾಝ್ ಕಡಂಬುಗೆ 14 ದಿನಗಳ ನ್ಯಾಯಾಂಗ ಬಂಧನ

(ನ್ಯೂಸ್‌ ಕಡಬ) newskadaba.com,  ಅ.10 : ದ್ವೇಷ ಭಾಷಣ ಪ್ರಕರಣದ ಜಾಮೀನು ಷರತ್ತು ಪಾಲಿಸದ ಆರೋಪದ ಮೇಲೆ ಎಸ್‌ಡಿಪಿಐ ಮುಖಂಡ ರಿಯಾಝ್ ಕಡಂಬು ಅವರನ್ನು ಉಡುಪಿ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ರಿಯಾಝ್ ಕಡಂಬು ವಿರುದ್ಧ ದ್ವೇಷ ಭಾಷಣಕ್ಕೆ ಸಂಬಂಧಿಸಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಅವರು ಹೈಕೋರ್ಟ್ ನಿಂದ ಜಾಮೀನು ಪಡೆದಿದ್ದು, ಇದರಲ್ಲಿ 15 ದಿನಗಳಲ್ಲಿ ಉಡುಪಿ ನಗರ ಪೊಲೀಸ್ ಠಾಣೆಗೆ ಹಾಜರಾಗಬೇಕೆಂಬ ಷರತ್ತು ವಿಧಿಸಲಾಗಿತ್ತು.

ದ್ವೇಷ ಭಾಷಣ ಪ್ರಕರಣ: ರಿಯಾಝ್ ಕಡಂಬುಗೆ 14 ದಿನಗಳ ನ್ಯಾಯಾಂಗ ಬಂಧನ Read More »

ಕರಾವಳಿ, ಕರ್ನಾಟಕ

ವಿಶ್ವ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸಿ ದೇಶದ ನಿಲುವನ್ನು ಪ್ರಸ್ತುತಪಡಿಸಿದ ಕ್ಯಾ. ಚೌಟ

(ನ್ಯೂಸ್‌ ಕಡಬ) newskadaba.com,  ಅ.10: ಅಮೆರಿಕಾದ ನ್ಯೂಯಾರ್ಕ್ ನಲ್ಲಿ ನಡೆಯುತ್ತಿರುವ ೮೦ನೇ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನದಲ್ಲಿ ಭಾರತವನ್ನು ಪ್ರತಿನಿಧಿಸಿರುವ ದಕ್ಷಿಣ ಕನ್ನಡ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಅವರು ನಮ್ಮ ದೇಶದ ಸುಸ್ಥಿರ ಅಭಿವೃದ್ಧಿಯ ಬಗ್ಗೆ ವಿಷಯ ಮಂಡಿಸಿದ್ದಾರೆ. ಆ ಮೂಲಕ ವಿಶ್ವದ ಅತ್ಯುನ್ನತ ವೇದಿಕೆಯಲ್ಲಿ ದೇಶವನ್ನು ಪ್ರತಿನಿಧಿಸುವ ಮೂಲಕ ಕರ್ನಾಟಕಕ್ಕೆ ಹೆಮ್ಮೆ ತಂದಿದ್ದಾರೆ. ಭಾರತದಿಂದ ಸರ್ವ ಪಕ್ಷಗಳ ಸಂಸದರನ್ನು ಒಳಗೊಂಡಿರುವ ಪಿಪಿ ಚೌಧರಿ ನೇತೃತ್ವದ ನಿಯೋಗವು ನ್ಯೂಯಾರ್ಕ್ನಲ್ಲಿ ಅ.೮ರಿಂದ ೧೪ರವರೆಗೆ ನಡೆಯುವ ವಿಶ್ವಸಂಸ್ಥೆಯ

ವಿಶ್ವ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸಿ ದೇಶದ ನಿಲುವನ್ನು ಪ್ರಸ್ತುತಪಡಿಸಿದ ಕ್ಯಾ. ಚೌಟ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top