ಕರಾವಳಿ

ದೇವಾಸ್ :ನೀರಿನ ಡ್ರಮ್‍ ನಲ್ಲಿ ಮುಳುಗಿಸಿ ಪ್ರಿಯತಮೆ ಹತ್ಯೆ

(ನ್ಯೂಸ್‌ ಕಡಬ) newskadaba.com,  ಅ.04 ಕಡಬ: ದೇವಾಸ್ :- ಪ್ರೇಮಿಯೊಬ್ಬಳು ತನ್ನ ಪ್ರಿಯಕರನ ಮನೆಗೆ ಅವನನ್ನು ಭೇಟಿಯಾಗಲು ಬಂದು ಬರ್ಬರವಾಗಿ ಹತ್ಯೆಯಾದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಪ್ರಿಯಕರ ತನ್ನ ಗೆಳತಿಗೆ ಬೇರೊಬ್ಬರ ಜೊತೆ ಅಕ್ರಮ ಸಂಬಂಧ ಇದೆ ಎಂದು ಅನುಮಾನಗೊಂಡು ಆಕೆಯನ್ನು ಅತೀ ಭೀಕರವಾಗಿ ಹತ್ಯೆಗೈದಿದ್ದಾನೆ. ಈ ಘಟನೆ ಮಧ್ಯಪ್ರದೇಶದ ದೇವಾಸ್‍ನ ಕಾಲೋನಿಯಲ್ಲಿ ನಡೆದಿದೆ. ಈ ಹುಚ್ಚು ಪ್ರೇಮಿ ಆಕೆಯ ಕೈಕಾಲು ಹಗ್ಗದಿಂದ ಕಟ್ಟಿ ಅವಳನ್ನು ಡ್ರಮ್‍ನಲ್ಲಿ ಮುಳುಗಿಸಿ ಕೊಂದು ನಂತರ ಪರಾರಿಯಾಗಿದ್ದನು. ಎರಡು ದಿನಗಳ ನಂತರ, ಆರೋಪಿ […]

ದೇವಾಸ್ :ನೀರಿನ ಡ್ರಮ್‍ ನಲ್ಲಿ ಮುಳುಗಿಸಿ ಪ್ರಿಯತಮೆ ಹತ್ಯೆ Read More »

ಕರಾವಳಿ

ಪಿಲ್ಯ ಮೆಗಾ ಆಫರ್ ONE TIME PAYEMENT ಸೀಝನ್-2 ನಾಳೆ ಪ್ರಥಮ 20 ಉಚಿತ ಡ್ರಾ..

(ನ್ಯೂಸ್‌ ಕಡಬ) newskadaba.com ಕಡಬ, ಅ. 04. ಕಳೆದ ಹಲವಾರು ವರ್ಷಗಳಿಂದ ಗ್ರಾಹಕರ ನಂಬಿಕೆ ಮತ್ತು ವಿಶ್ವಾಸಕ್ಕೆ ಪಾತ್ರರಾಗಿ ಗುಣಮಟ್ಟದ ವಸ್ತ ಪಿಲ್ಯ ಫ್ಯಾಶನ್, ಪಿಲ್ಯ ಮ್ಯಾಚಿಂಗ್ ಸೆಂಟರ್, ಪಿಲ್ಯ ಮೆಗಾ ಆಫರ್ ಸೀಸನ್- 1 ಪಾರದರ್ಶಕವಾಗಿ ಮುಗಿಸಿ ಇದೀಗ ಅಪಾರ ಗ್ರಾಹಕರ ಅಪೇಕ್ಷೆ ಮೇರೆಗೆ ಪಿಲ್ಯ ಮೆಗಾ ಆಫರ್ ಸೀಸನ್- 2  ಅನಾವರಣಗೊಳಿಸಿ ಪ್ರಥಮ 20 ಡ್ರಾ ಅಕ್ಟೋಬರ್ 5 ರಂದು ಸಂಜೆ 5:00ಕ್ಕೆ ಸರಿಯಾಗಿ ಪಿಲ್ಯ ಫ್ಯಾಷನ್ ನಲ್ಲಿ ಗ್ರಾಹಕರ ಸಮ್ಮುಖದಲ್ಲಿ  ನಡೆಯಲಿದೆ. ಈ

ಪಿಲ್ಯ ಮೆಗಾ ಆಫರ್ ONE TIME PAYEMENT ಸೀಝನ್-2 ನಾಳೆ ಪ್ರಥಮ 20 ಉಚಿತ ಡ್ರಾ.. Read More »

ಕರಾವಳಿ

ಚನ್ನಪಟ್ಟಣ : ವಿದ್ಯುತ್ ಶಾಕ್ ಗೆ ಆನೆ ಬಲಿ

(ನ್ಯೂಸ್‌ ಕಡಬ) newskadaba.com,  ಅ.04 ರಾಮನಗರ: ವಿದ್ಯುತ್ ಸ್ಪರ್ಶದಿಂದ ಕಾಡಾನೆ‌ ಸಾವನ್ನಪ್ಪಿರುವ ಘಟನೆ ಚನ್ನಪಟ್ಟಣ ತಾಲೂಕಿನ ಚಿಕ್ಕವಿಠಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ.ಶುಕ್ರವಾರ(ಅ.04) ರಾತ್ರಿ ಜಮೀನೊಂದರಲ್ಲಿ ತೆಂಗಿನಮರದ ಸುಳಿಯನ್ನು ಕಿತ್ತು ತಿನ್ನಲು‌ ಯತ್ನಿಸಿದಾಗ ತೆಂಗಿನ‌ ಮರ‌ದ‌ ಗರಿ 11ಕೆವಿ ವಿದ್ಯುತ್ ತಂತಿಗೆ ತಗುಲಿದ್ದರಿಂದ‌ ಸ್ಥಳದಲ್ಲೇ ಕಾಡಾನೆ‌ ಸಾವಿಗೀಡಾಗಿದೆ. ಸುಮಾರು 40 ವರ್ಷದ ಹೆಣ್ಣು ಆನೆಯಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ರಾಮಕೃಷ್ಣಪ್ಪ ಸಾಗರ್ ತಿಳಿಸಿದ್ದಾರೆ.ಘಟನೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿನೀಡಿ ಪರಿಶೀಲನೆ ಪಶು ವೈದ್ಯರನ್ನು ಸ್ಥಳಕ್ಕೆ ಕರೆಸಿ‌ ಮೃತ ಆನೆಯ ಮರಣೋತ್ತರ

ಚನ್ನಪಟ್ಟಣ : ವಿದ್ಯುತ್ ಶಾಕ್ ಗೆ ಆನೆ ಬಲಿ Read More »

ಕರಾವಳಿ

ಚಿನ್ನದ ದರದಲ್ಲಿ ಮತ್ತೆ ಹೆಚ್ಚಳ

(ನ್ಯೂಸ್‌ ಕಡಬ) newskadaba.com,  ಅ.04 : ಚಿನ್ನದ ದರದಲ್ಲಿ ಇಂದು (ಅ. 4) ರಂದು ಭಾರೀ ಏರಿಕೆ ಕಂಡು ಬಂದಿದೆ. 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 80 ರೂ. ಏರಿಕೆ ಕಂಡಿದ್ದು, 10,945 ರೂ. ಆಗಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 87 ರೂ. ಏರಿಕೆಯಾಗಿ 11,940 ರೂ. ಪಾವತಿಸಬೇಕು. 22 ಕ್ಯಾರಟ್‌ನ 8 ಗ್ರಾಂ ಚಿನ್ನ 87,560 ಬಾಳಿದರೆ, 10 ಗ್ರಾಂಗೆ ನೀವು 1,09,450 ಹಾಗೂ 100 ಗ್ರಾಂಗೆ 10,94,500

ಚಿನ್ನದ ದರದಲ್ಲಿ ಮತ್ತೆ ಹೆಚ್ಚಳ Read More »

ಕರಾವಳಿ

ಇಟಲಿಯಲ್ಲಿ ಭೀಕರ ರಸ್ತೆ ಅಪಘಾತ; ಭಾರತೀಯ ಮೂಲದ ದಂಪತಿ ಸ್ಥಳದಲ್ಲೇ ಮೃತ್ಯು

(ನ್ಯೂಸ್‌ ಕಡಬ) newskadaba.com,  ಅ.04 ರೋಮ್: ಇಟಲಿಯಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಭಾರತೀಯ ಮೂಲದ ಉದ್ಯಮಿ ಮತ್ತು ಆತನ ಪತ್ನಿ ಮೃತಪಟ್ಟಿದ್ದು, ದಂಪತಿಯ ಪುತ್ರಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.. ಗ್ರೊಸೆಟೊ ಬಳಿಯ ಔರೆಲಿಯಾ ಹೆದ್ದಾರಿಯಲ್ಲಿ ಏಷ್ಯನ್ ಮೂಲದ ಪ್ರವಾಸಿಗರನ್ನು ಹೊತ್ತ ವ್ಯಾನ್ ಮತ್ತು ಮಿನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಮಿನಿಬಸ್ ಚಾಲಕ ಮತ್ತು ಭಾರತದ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಈ ಅಪಘಾತದಲ್ಲಿ ನಾಗ್ಪುರ ಮೂಲದ ಹೋಟೆಲಿಯರ್ ಜಾವೇದ್ ಅಖ್ತರ್ (55) ಮತ್ತು

ಇಟಲಿಯಲ್ಲಿ ಭೀಕರ ರಸ್ತೆ ಅಪಘಾತ; ಭಾರತೀಯ ಮೂಲದ ದಂಪತಿ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಸಿಂಧುದುರ್ಗ: ಒಂದೇ ಕುಟುಂಬದ ನಾಲ್ವರು ಸಮುದ್ರ ಪಾಲು

(ನ್ಯೂಸ್‌ ಕಡಬ) newskadaba.com,  ಅ.04 ಸಿಂಧುದುರ್ಗ: ಒಂದೇ ಕುಟುಂಬದ ನಾಲ್ವರು ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಮಹಾರಾಷ್ಟ್ರದ ಸಿಂಧುದುರ್ಗದ ಶಿರೋಡಾ-ವೇಲಗರ್ ಬೀಚ್‌ನಲ್ಲಿ ಶುಕ್ರವಾರ ಸಂಜೆ ನಡೆದಿದೆ. ಇನ್ನು ಮೂವರು ಕಣ್ಮರೆಯಾಗಿದ್ದು, ಅವರಿಗಾಗಿ ಶೋಧ ಕಾರ್ಯಾಚರಣೆಯನ್ನು ಮುಂದುವರಿಸಲಾಗಿದೆ. ಪಿಕ್ನಿಕ್ ಗೆಂದು ಬಂದ ಕುಟುಂಬಕ್ಕೆ ಇದು ಬಹುದೊಡ್ಡ ಆಘಾತವನ್ನು ನೀಡಿದೆ. ಮೃತರಲ್ಲಿ ಇಬ್ಬರು ಸಿಂಧುದುರ್ಗದ ಕುಡಾಲ್ ಮೂಲದವರಾಗಿದ್ದರೆ, ಇತರ 6 ಮಂದಿ ಕರ್ನಾಟಕದ ಬೆಳಗಾವಿಯಿಂದ ಬಂದಿದ್ದರು ಎನ್ನಲಾಗಿದೆ. ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಅರೇಬಿಯನ್ ಸಮುದ್ರದಲ್ಲಿ ಶುಕ್ರವಾರ ಸಂಜೆ 4 ಗಂಟೆ ಸುಮಾರಿಗೆ

ಸಿಂಧುದುರ್ಗ: ಒಂದೇ ಕುಟುಂಬದ ನಾಲ್ವರು ಸಮುದ್ರ ಪಾಲು Read More »

ಕರಾವಳಿ

ಉಡುಪಿ ನಗರಸಭೆಗೆ ಸೇರಿದ ಅಲೆವೂರು ಕಸ ವಿಲೇವಾರಿ ಘಟಕದಲ್ಲಿ ಭಾರಿ ಅಗ್ನಿ ಅವಘಡ: ಅಪಾರ ಪ್ರಮಾಣದ ಹಾನಿ

(ನ್ಯೂಸ್‌ ಕಡಬ) newskadaba.com,  ಅ.04 ಉಡುಪಿ: ನಗರಸಭೆಗೆ ಸೇರಿದ ಅಲೆವೂರು ಕಸ ವಿಲೇವಾರಿ ಘಟಕದಲ್ಲಿ ಶುಕ್ರವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಅಪಾರ ಪ್ರಮಾಣದ ಹಾನಿಯಾಗಿದೆ. ನಗರದ ತ್ಯಾಜ್ಯವನ್ನು ಸಂಗ್ರಹಿಸಿ ಸಂಸ್ಕರಿಸುವ ಈ ಘಟಕವು ಘಟನೆಯಿಂದ ತೀವ್ರವಾಗಿ ಹಾನಿಗೊಳಗಾಗಿದೆ. ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಸ್ಥಳೀಯ ನಿವಾಸಿಗಳ ನೆರವಿನೊಂದಿಗೆ ಬೆಂಕಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಮೂಲಗಳ ಪ್ರಕಾರ, ಕಸದ ರಾಶಿಯಿಂದಲೇ ಅಗ್ನಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆಯ ನಿಖರ ಪ್ರಮಾಣ ಇನ್ನಷ್ಟೇ ತಿಳಿದುಬರಬೇಕಿದೆ. ಅಪಾರ ಪ್ರಮಾಣದ

ಉಡುಪಿ ನಗರಸಭೆಗೆ ಸೇರಿದ ಅಲೆವೂರು ಕಸ ವಿಲೇವಾರಿ ಘಟಕದಲ್ಲಿ ಭಾರಿ ಅಗ್ನಿ ಅವಘಡ: ಅಪಾರ ಪ್ರಮಾಣದ ಹಾನಿ Read More »

ಕರಾವಳಿ

ಬೆಂಗಳೂರು : ರಸ್ತೆ ಗುಂಡಿ ಅವಾಂತರ- ಸಹೋದರಿಯರು ದುರ್ಮರಣ..!

(ನ್ಯೂಸ್‌ ಕಡಬ) newskadaba.com,  ಅ.04 : ಬೆಂಗಳೂರು: ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಕಳಪೆ ನಿರ್ವಹಣೆಯಿಂದಾಗಿ 22 ವರ್ಷದ ವಿದ್ಯಾರ್ಥಿನಿ ಧನುಶ್ರೀ ಸಾವನ್ನಪ್ಪಿದ ಘಟನೆ ಬೆನ್ನಲ್ಲೇ ಹೊಸಕೋಟೆ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೂ ಇದೇ ರೀತಿಯ ಮತ್ತೊಂದು ಘಟನೆ ವರದಿಯಾಗಿದ್ದು, ಇಬ್ಬರು ಸಹೋದರಿಯರು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಮೃತರನ್ನು ಶೈಲಾ (25) ಮತ್ತು ಆಕೆಯ ಸಹೋದರಿ ಶ್ವೇತಾ (22) ಎಂದು ಗುರುತಿಸಲಾಗಿದೆ. ಶುಕ್ರವಾರ (ಅ.03) ಮಧ್ಯಾಹ್ನ 1.45 ರ ಸುಮಾರಿಗೆ ಕೈವಾರ ತಾತಯ್ಯ ದೇವಸ್ಥಾನದಿಂದ ಹೊಸಕೋಟೆಯಲ್ಲಿರುವ ತಮ್ಮ

ಬೆಂಗಳೂರು : ರಸ್ತೆ ಗುಂಡಿ ಅವಾಂತರ- ಸಹೋದರಿಯರು ದುರ್ಮರಣ..! Read More »

ಕರಾವಳಿ

2021ನೇ ಸಾಲಿನ ಕನ್ನಡ ಸಿನಿಮಾಗಳಿಗೆ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ; ‘777 ಚಾರ್ಲಿ’ ಸಿನಿಮಾದ ಅಭಿನಯಕ್ಕಾಗಿ ರಕ್ಷಿತ್ ಶೆಟ್ಟಿ ಯವರಿಗೆ ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿ

(ನ್ಯೂಸ್‌ ಕಡಬ) newskadaba.com,  ಅ.04 : 2021ನೇ ಸಾಲಿನ ಕನ್ನಡ ಸಿನಿಮಾಗಳಿಗೆ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ 2025 ರಲ್ಲಿ ಪ್ರಕಟ ಆಗಿದ್ದು, ‘777 ಚಾರ್ಲಿ’ ಸಿನಿಮಾದ ಅಭಿನಯಕ್ಕಾಗಿ ರಕ್ಷಿತ್ ಶೆಟ್ಟಿ ಅವರು ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.‘ದೊಡ್ಡಹಟ್ಟಿ ಬೋರೆಗೌಡ’ ಚಿತ್ರಕ್ಕೆ ಮೊದಲನೇ ಅತ್ಯುತ್ತಮ ಚಿತ್ರ ಪ್ರಶಸ್ತಿ ನೀಡಲಾಗಿದೆ. ‘777 ಚಾರ್ಲಿ’ ಸಿನಿಮಾ ‘2ನೇ ಅತ್ಯುತ್ತಮ ಚಿತ್ರ’ ಪ್ರಶಸ್ತಿ ಪಡೆದುಕೊಂಡಿದೆ.ಹೃದಯಶಿವ ನಿರ್ದೇಶನ ಮಾಡಿದ ‘ಬಿಸಿಲು ಕುದುರೆ’ ಸಿನಿಮಾಗೆ 3ನೇ ಅತ್ಯುತ್ತಮ ಚಿತ್ರ ಪ್ರಶಸ್ತಿ ನೀಡಲಾಗಿದೆ. ‘ರತ್ನನ್

2021ನೇ ಸಾಲಿನ ಕನ್ನಡ ಸಿನಿಮಾಗಳಿಗೆ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ; ‘777 ಚಾರ್ಲಿ’ ಸಿನಿಮಾದ ಅಭಿನಯಕ್ಕಾಗಿ ರಕ್ಷಿತ್ ಶೆಟ್ಟಿ ಯವರಿಗೆ ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿ Read More »

ಕರಾವಳಿ

ಹಿರಿಯೂರು ಬಳಿ ಭೀಕರ ಅಪಘಾತ; ಮಗು ಸೇರಿ ಮೂವರು ಸಾವು

(ನ್ಯೂಸ್‌ ಕಡಬ) newskadaba.com,  ಅ.04 ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಮೇಟಿಕುರ್ಕೆ ಬಳಿ ಶುಕ್ರವಾರ(ಅ.03) ಕಾರು ಪಲ್ಟಿಯಾಗಿದ್ದು, ಭೀಕರ ಅಪಘಾತದಲ್ಲಿ ಮಗು ಸೇರಿ ಮೂವರು ಮೃತಪಟ್ಟಿದ್ದಾರೆ. ಯಾದಗಿರಿ ಮೂಲದ ಮಲ್ಲಮ್ಮ(26), ಸರೋಜಮ್ಮ(25) ಮತ್ತು ಪುಟ್ಟ ಮಗು ಮೃತ ದುರ್ದೈವಿಗಳು. ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಈ ದುರಂತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಸ್ಥಳಕ್ಕೆ ಡಿವೈಎಸ್​​ಪಿ ಶಿವಕುಮಾರ್ ಮತ್ತು ಸಿಪಿಐ ಗುಡ್ಡಪ್ಪ ಅವರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಹಿರಿಯೂರು ಗ್ರಾಮಾಂತರ ಠಾಣಾಯಲ್ಲಿ

ಹಿರಿಯೂರು ಬಳಿ ಭೀಕರ ಅಪಘಾತ; ಮಗು ಸೇರಿ ಮೂವರು ಸಾವು Read More »

ಕರಾವಳಿ
Scroll to Top