ಕರಾವಳಿ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ಅ.5 ರವರೆಗೂ ರಾಜ್ಯದಲ್ಲಿ ಮಳೆ ಪ್ರಮಾಣ ಹೆಚ್ಚಳ

(ನ್ಯೂಸ್‌ ಕಡಬ) newskadaba.com,  ಸೆ. 30 ಬೆಂಗಳೂರು ; ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುತ್ತಿರುವ ಹಿನ್ನೆಲೆಯಲ್ಲಿ ಅ.5 ರವರೆಗೂ ರಾಜ್ಯದಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ.ಬಂಗಾಳಕೊಲ್ಲಿಯಲ್ಲಿ ಮೇಲೈ ಸುಳಿಗಾಳಿ ಉಂಟಾಗಿರುವುದರ ಪರಿಣಾಮ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಅಲ್ಲದೆ ಬಂಗಾಳಕೊಲ್ಲಿಯಲ್ಲಿ ನಾಳೆ ವೇಳೆಗೆ ವಾಯುಭಾರ ಕುಸಿತವೂ ಆಗಿರುವುದರಿಂದ ಮಳೆಯ ಪ್ರಮಾಣ ಹೆಚ್ಚುವ ಸಾಧ್ಯತೆಗಳಿವೆ. ನಿನ್ನೆ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಭಾಗದಲ್ಲಿ ಹಗುರದಿಂದ ಸಾಧಾರಣ ಪ್ರಮಾಣದ ವ್ಯಾಪಕ ಮಳೆಯಾಗಿದೆ. ಪ್ರವಾಹ ಹಾಗೂ ಅತಿವೃಷ್ಟಿಗೆ ಒಳಗಾಗಿದ್ದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆ ಪ್ರಮಾಣ […]

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ಅ.5 ರವರೆಗೂ ರಾಜ್ಯದಲ್ಲಿ ಮಳೆ ಪ್ರಮಾಣ ಹೆಚ್ಚಳ Read More »

ಕರಾವಳಿ

ಬಿಗ್ ಬಾಸ್ ಕನ್ನಡ 12 ಮೂರನೇ ವಾರದಲ್ಲೇ ಫೈನಲ್

(ನ್ಯೂಸ್‌ ಕಡಬ) newskadaba.com,  ಸೆ. 30 ಬಿಗ್ ಬಾಸ್ ಕನ್ನಡ ಸೀಸನ್ 12 ಶುರುವಾದ ಮೊದಲ ದಿನವೇ ಸ್ಪರ್ಧಿಗಳಿಗೆ ಶಾಕ್ ಮೇಲೆ ಶಾಕ್ ನಿಡಲಾಗುತ್ತಿದೆ. ಒಂದರ ಹಿಂದೆ ಒಂದರಂತೆ ಆಘಾತ ಅನುಭವಿಸುತ್ತಿದ್ದಾರೆ. ಮನೆಯೊಳಗೆ ಕಾಲಿಟ್ಟ ಕೆಲವೇ ಗಂಟೆಗಳಲ್ಲಿ ರಕ್ಷಿತಾ ಶೆಟ್ಟಿ ಎಲಿಮಿನೇಟ್ ಆಗಿ ಆಚೆ ಹೋಗಬೇಕಾಯಿತು. ಒಂಟಿ ಸದಸ್ಯರ ಗುಂಪು ಒಮ್ಮತದಿಂದ ಚರ್ಚಿಸಿ ಸ್ಪಂದನಾ, ಗಾಯಕ ಮಾಳು ಹಾಗೂ ರಕ್ಷಿತಾ ಶೆಟ್ಟಿ ಪೈಕಿ ಒಬ್ಬರನ್ನು ಹೊರಗೆ ಕಳುಹಿಸಬೇಕಿತ್ತು. ಅದರಂತೆ ಇವರೆಲ್ಲ ರಕ್ಷಿತಾ ಅವರನ್ನು ಆಯ್ಕೆ ಮಾಡಿ ಎಲಿಮಿನೇಟ್

ಬಿಗ್ ಬಾಸ್ ಕನ್ನಡ 12 ಮೂರನೇ ವಾರದಲ್ಲೇ ಫೈನಲ್ Read More »

ಕರಾವಳಿ

ಭಾರತದಲ್ಲಿ ಅಕ್ಟೋಬರ್ 1 ರಿಂದ ಹೊಸ ನಿಯಮಗಳು ಜಾರಿ

(ನ್ಯೂಸ್‌ ಕಡಬ) newskadaba.com,  ಸೆ. 30 ನವದೆಹಲಿ: ನಾಳೆಯಿಂದ ಭಾರತದಲ್ಲಿ ಹಲವು ಹೊಸ ನಿಯಮಗಳು ಜಾರಿಗೆ ಬರಲಿವೆ. ಯುಪಿಐ ವಹಿವಾಟು ,ರೈಲ್ವೆ ಟಿಕೆಟ್ ಬುಕಿಂಗ್ ,ಎನ್‌ಪಿಎಸ್, ಎಲ್‌ಪಿಜಿ ಬೆಲೆಗಳಿಂದ ಹಿಡಿದು ಆನ್‌ಲೈನ್ ಗೇಮಿಂಗ್‌ವರೆಗೆ ಈ ಬದಲಾವಣೆಗಳು ಸಾಮಾನ್ಯ ಜನರ ಮೇಲೆ ಪರಿಣಾಮ ಬೀರಲಿವೆ. ಯುಪಿಐ ವಹಿವಾಟು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಯುಪಿಐನಲ್ಲಿ ಪೀರ್-ಟು-ಪೀರ್ (P2P) ‘ಕಲೆಕ್ಟ್ ರಿಕ್ವೆಸ್ಟ್’ ಅಥವಾ ‘ಪುಲ್ ಟ್ರಾನ್ಸಾಕ್ಷನ್’ ಸೌಲಭ್ಯವನ್ನು ಅಕ್ಟೋಬರ್ 2 ರಿಂದ ಸ್ಥಗಿತಗೊಳಿಸಲಿದೆ. ಫೋನ್‌ಪೇ, ಗೂಗಲ್ ಪೇ, ಪೇಟಿಎಂನಂತಹ

ಭಾರತದಲ್ಲಿ ಅಕ್ಟೋಬರ್ 1 ರಿಂದ ಹೊಸ ನಿಯಮಗಳು ಜಾರಿ Read More »

ಕರಾವಳಿ

ಬೆಂಗಳೂರು: ಶ್ರೀಮುರಳಿ ಹೊಸ ಸಿನಿಮಾ ಪರಾಕ್ ಮುಹೂರ್ತ

(ನ್ಯೂಸ್‌ ಕಡಬ) newskadaba.com,  ಸೆ. 30 ಬೆಂಗಳೂರು: ಬಘೀರ ಸಿನಿಮಾದ ಸಕ್ಸಸ್ ಬಳಿಕ ರೋರಿಂಗ್ ಸ್ಟಾರ್ ಶ್ರೀಮುರಳಿ ಪರಾಕ್ ಎಂಬ ಚಿತ್ರ ಒಪ್ಪಿಕೊಂಡಿದ್ದಾರೆ. ಇಂದು ಬೆಂಗಳೂರಿನ ಬಂಡಿ ಮಹಾಕಾಳಿ ದೇಗುಲದಲ್ಲಿ ಪರಾಕ್ ಚಿತ್ರದ ಮುಹೂರ್ತ ನೆರವೇರಿದೆ. ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಕ್ಲ್ಯಾಪ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು. ಬಳಿಕ ಸುದ್ದಿಗಾರರೊಂದಿಗೆ ಶ್ರೀಮುರಳಿ ಮಾತನಾಡಿದ್ದಾರೆ. ಮುಂದಿನ ಚಿತ್ರ ಯಾವ ರೀತಿ ಕಥೆ ಆಯ್ಕೆ ಮಾಡಬೇಕು ಎಂಬ ಟೆನ್ಷನ್ ಇತ್ತು.. ಪರಾಕ್ ಸಿನಿಮಾ ತಂಡದ ಜೊತೆ 2 ವರ್ಷ

ಬೆಂಗಳೂರು: ಶ್ರೀಮುರಳಿ ಹೊಸ ಸಿನಿಮಾ ಪರಾಕ್ ಮುಹೂರ್ತ Read More »

ಕರಾವಳಿ

ದೇವರ ದರ್ಶನ ಪಡೆದು ದೇವಾಲಯದ ಮೆಟ್ಟಿಲಲ್ಲಿ ಕುಳಿತಿದ್ದ ವೃದ್ಧೆ ಕಾರು ಡಿಕ್ಕಿಯಾಗಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ಸೆ. 30 ಬೆಂಗಳೂರು –  ದೇವಾಲಯದ ಮೆಟ್ಟಿಲಲ್ಲಿ ಕುಳಿತಿದ್ದ ವೃದ್ಧೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ಚಿಕ್ಕಬಾಣವಾರ ಸಂಚಾರಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. ದಾಸರಹಳ್ಳಿ ನಿವಾಸಿ ಗಂಗಮ (65) ಮೃತಪಟ್ಟ ವೃದ್ಧೆ. ಕಾರು ಚಾಲಕ ಅಪಘಾತದ ನಂತರ ಪರಾರಿಯಾಗಿದ್ದಾನೆ.ನಿನ್ನೆ ಸಂಜೆ ಗಂಗಮ ಅವರು ದಾಸರಹಳ್ಳಿಯ ನೆಲಮಹೇಶ್ವರಮ ದೇವಸ್ಥಾನಕ್ಕೆ ಹೋಗಿದ್ದು, ದೇವಿ ದರ್ಶನ ಪಡೆದು ನಂತರ ಮಾರುತಿ ಮಂದಿರದಲ್ಲಿ ದರ್ಶನ ಮಾಡಿ, ಮಂದಿರದ ಮೆಟ್ಟಿಲುಗಳ ಮೇಲೆ 7

ದೇವರ ದರ್ಶನ ಪಡೆದು ದೇವಾಲಯದ ಮೆಟ್ಟಿಲಲ್ಲಿ ಕುಳಿತಿದ್ದ ವೃದ್ಧೆ ಕಾರು ಡಿಕ್ಕಿಯಾಗಿ ಮೃತ್ಯು Read More »

ಕರಾವಳಿ

ಲಂಡನ್‌ನ ಟ್ಯಾವಿಸ್ಟಾಕ್ ಸ್ಕ್ವೇರ್‌ನಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ ; ಕ್ರಮಕ್ಕೆ ಒತ್ತಾಯ

(ನ್ಯೂಸ್‌ ಕಡಬ) newskadaba.com,  ಸೆ. 30 ಲಂಡನ್: ಲಂಡನ್‌ನ  ವಿಶ್ವವಿದ್ಯಾಲಯದ ಬಳಿ ಮಹಾತ್ಮ ಗಾಂಧಿ ಪ್ರತಿಮೆಯನ್ನು ಧ್ವಂಸಗೊಳಿಸಿರುವ ಘಟನೆ ನಡೆದಿದೆ.ಭಾರತದ ಹೈಕಮಿಷನ್ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ವಿರೂಪಗೊಳಿಸಿರುವ ಘಟನೆಯನ್ನು ಖಂಡಿಸಿದೆ. ಇದು ನಾಚಿಕೆಗೇಡಿನ ಕೃತ್ಯ ಮತ್ತು ಅಹಿಂಸೆಯ ಪರಂಪರೆಯ ಮೇಲಿನ ದಾಳಿ ಎಂದು ಕಿಡಿಕಾರಿದೆ. ರಾಷ್ಟ್ರಪಿತರವರು ಧ್ಯಾನಸ್ಥ ಭಂಗಿಯಲ್ಲಿ ಕುಳಿತಿರುವುದನ್ನು ಚಿತ್ರಿಸುವ ಈ ಪ್ರತಿಮೆಯ ಪೀಠದ ಮೇಲೆ ಭಾರತ ವಿರೋಧಿ ಬರಹಗಳು ಬರೆದಿರುವುದು ಕಂಡುಬಂದಿವೆ. ಪ್ರತಿಮೆಯ ಮೇಲೆ ಬಿಳಿ ಬಣ್ಣವನ್ನು ಬಳಿಯಲಾಗಿತ್ತು. ವಿಶ್ವಸಂಸ್ಥೆಯು ಅಕ್ಟೋಬರ್ 2ರಂದು ಅಂತಾರಾಷ್ಟ್ರೀಯ

ಲಂಡನ್‌ನ ಟ್ಯಾವಿಸ್ಟಾಕ್ ಸ್ಕ್ವೇರ್‌ನಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ ; ಕ್ರಮಕ್ಕೆ ಒತ್ತಾಯ Read More »

ಕರಾವಳಿ

ಕಾರಿನಲ್ಲಿ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಗೆ 10 ವರ್ಷ ಜೈಲು ಶಿಕ್ಷೆ

(ನ್ಯೂಸ್‌ ಕಡಬ) newskadaba.com,  ಸೆ. 30 ಕಾಸರಗೋಡು :  ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ, 1 ಲಕ್ಷ ರೂಪಾಯಿ ದಂಡ ವಿಧಿಸಿದೆ. ಶಿಕ್ಷೆಗೆ ಒಳಗಾದ ವ್ಯಕ್ತಿಯು ವೆಲ್ಲರಿಕುಂಡು ತಾಲೂಕಿನ ಭೀಮನಡಿ ಕುನ್ನಂಗೈ ನಿವಾಸಿ ನೌಫಲ್ ಕೆ. ಕೆ. ಆಗಿದ್ದಾನೆ. ದಂಡ ಪಾವತಿಸಲು ವಿಫಲವಾದರೆ, ಆತನು ಹೆಚ್ಚುವರಿಯಾಗಿ 3 ತಿಂಗಳ ಸೆರೆವಾಸವನ್ನು ಅನುಭವಿಸಬೇಕು ಎಂದು ನ್ಯಾಯಾಧೀಶೆ ಕೆ. ಪ್ರಿಯಾ ಅವರು ತೀರ್ಪು ನೀಡಿದ್ದಾರೆ.ಇದೇ

ಕಾರಿನಲ್ಲಿ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಗೆ 10 ವರ್ಷ ಜೈಲು ಶಿಕ್ಷೆ Read More »

ಕರಾವಳಿ

ಎಪಿಎಂಸಿ ಪೊಲೀಸ್ ಠಾಣೆಯ ಎಎಸ್‌ಐ ಶ್ರೀನಿವಾಸ್ ರಾವ್ ಹೃದಯಾಘಾತದಿಂದ ಸಾವು

(ನ್ಯೂಸ್‌ ಕಡಬ) newskadaba.com,  ಸೆ. 30 ಬಳ್ಳಾರಿ: ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮದ ಕರ್ತವ್ಯದಲ್ಲಿದ್ದ ಎಪಿಎಂಸಿ ಪೊಲೀಸ್ ಠಾಣೆಯ ಎಎಸ್‌ಐ ಶ್ರೀನಿವಾಸ್ ರಾವ್ (52) ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ನೇತೃತ್ವದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆದಿತ್ತು. ಈ ವೇಳೆ ಭದ್ರತಾ ಕರ್ತವ್ಯದಲ್ಲಿದ್ದ ಶ್ರೀನಿವಾಸ್ ರಾವ್ ದಿಢೀರನೆ ದಿಢೀರನೆ ಕುಸಿದು ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ. ತಕ್ಷಣವೇ ಅವರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೇ ಸಾವನಪ್ಪಿದ್ದಾರೆ

ಎಪಿಎಂಸಿ ಪೊಲೀಸ್ ಠಾಣೆಯ ಎಎಸ್‌ಐ ಶ್ರೀನಿವಾಸ್ ರಾವ್ ಹೃದಯಾಘಾತದಿಂದ ಸಾವು Read More »

ಕರಾವಳಿ

ಬೆಂಗಳೂರು : ರಾಜ್ಯ ಸರ್ಕಾರವು ಅತಿಥಿ ಉಪನ್ಯಾಸಕರ ನೇಮಕಕ್ಕೆ ಗ್ರೀನ್ ಸಿಗ್ನಲ್..!

(ನ್ಯೂಸ್‌ ಕಡಬ) newskadaba.com,  ಸೆ. 30 ಬೆಂಗಳೂರು: ಅತಿಥಿ ಉಪನ್ಯಾಸಕರ ನೇಮಕಕ್ಕೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸಿದ ವ್ಯಾಪಕ ಪ್ರತಿಭಟನೆಗಳಿಗೆ ಕೊನೆಗೂ ಮಣಿದ ರಾಜ್ಯ ಸರ್ಕಾರ, ಸೋಮವಾರ ನೇಮಕಾತಿಗೆ ಗ್ರೀನ್ ಸಿಗ್ನಲ್ ನೀಡಿದೆ.ಅತಿಥಿ ಉಪನ್ಯಾಸಕರ ನೇಮಕ ವಿಚಾರ ಸಂಬಂಧ ಸೆಪ್ಟೆಂಬರ್ 29 ರಂದು ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸಂಜಯ್ ಬಿ.ಎಸ್. ಅವರು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಬರೆದ ಪತ್ರ ಬರೆದಿದ್ದಾರೆ. ಪತ್ರದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ 2025-26ನೇ ಶೈಕ್ಷಣಿಕ ಸಾಲಿನ

ಬೆಂಗಳೂರು : ರಾಜ್ಯ ಸರ್ಕಾರವು ಅತಿಥಿ ಉಪನ್ಯಾಸಕರ ನೇಮಕಕ್ಕೆ ಗ್ರೀನ್ ಸಿಗ್ನಲ್..! Read More »

ಕರಾವಳಿ

ಕಣ್ಮರೆಯಾಗಿದ್ದ ಬಂಟ್ವಾಳದ ಉದ್ಯಮಿ ಮಂತ್ರಾಲಯದಲ್ಲಿ ಪತ್ತೆ; ಸುರಕ್ಷಿತವಾಗಿ ಮನೆಗೆ ಕರೆತಂದ ಪೊಲೀಸರು

(ನ್ಯೂಸ್‌ ಕಡಬ) newskadaba.com,  ಸೆ.29 ಬಂಟ್ವಾಳ: ಮನೆಯಲ್ಲಿ ಮೊಬೈಲ್ ಫೋನ್ ಇಟ್ಟು ನಾಪತ್ತೆಯಾಗಿದ್ದ ಉದ್ಯಮಿಯೊಬ್ಬರು ಮಂತ್ರಾಲಯ ದೇವಸ್ಥಾನದ ಬಳಿ ಪತ್ತೆಯಾಗಿದ್ದು, ಬಳಿಕ ಪೊಲೀಸರು ಅವರನ್ನು ಸುರಕ್ಷಿತವಾಗಿ ಮನೆಗೆ ಕರೆತಂದಿದ್ದಾರೆ.ನಾಪತ್ತೆಯಾಗಿದ್ದ ವ್ಯಕ್ತಿಯನ್ನು ಬಂಟ್ವಾಳ ತಾಲೂಕಿನ ಸಜಿಪನಡದ ಕಂದೂರು ನಿವಾಸಿ, ಸದಾನಂದ (50) ಎಂದು ಗುರುತಿಸಲಾಗಿದೆ. ಅವರು ಕಂದೂರಿನಲ್ಲಿ ಎಸ್.ಕೆ. ಸುವರ್ಣ ಸೌಂಡ್ಸ್ ಅಂಡ್ ಲೈಟಿಂಗ್ ಅಂಗಡಿಯ ಮಾಲೀಕರಾಗಿದ್ದಾರೆ. ಸೆಪ್ಟೆಂಬರ್ 16ರಂದು ಸಂಜೆ 4:30ರ ಸುಮಾರಿಗೆ ಸದಾನಂದ ಅವರು ತಮ್ಮ ಮೊಬೈಲ್ ಫೋನ್ ಅನ್ನು ಮನೆಯ ಬಳಿ ಇರುವ ಟೆಂಪೋದಲ್ಲಿ

ಕಣ್ಮರೆಯಾಗಿದ್ದ ಬಂಟ್ವಾಳದ ಉದ್ಯಮಿ ಮಂತ್ರಾಲಯದಲ್ಲಿ ಪತ್ತೆ; ಸುರಕ್ಷಿತವಾಗಿ ಮನೆಗೆ ಕರೆತಂದ ಪೊಲೀಸರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top