ಕರಾವಳಿ

ಮಾದಕ ವಸ್ತು ಪ್ರಕರಣ ಆರೋಪಿಯನ್ನು ಪತ್ತೆ ಹಚ್ಚಲು ತೆರಳುತ್ತಿದ್ದ ಪೊಲೀಸ್ ಕಾನ್ಸ್‌ಟೇಬಲ್ ಅಪಘಾತಕ್ಕೆ ಬಲಿ

(ನ್ಯೂಸ್‌ ಕಡಬ) newskadaba.com,  ಸೆ.26 ಕಾಸರಗೋಡು:ಮಾದಕ ವಸ್ತು ಪ್ರಕರಣದ ಆರೋಪಿಯನ್ನು ಪತ್ತೆ ಹಚ್ಚಲು ಕಾರಿನಲ್ಲಿ ತೆರಳುತ್ತಿದ್ದ ಪೊಲೀಸ್ ಕಾನ್ಸ್‌ಟೇಬಲ್ ಅಪಘಾತಕ್ಕೆ ಬಲಿಯಾದ ಘಟನೆ ಶುಕ್ರವಾರ ಮುಂಜಾನೆ ನಗರ ಹೊರವಲಯದ ಚೆಂಗಳ ನಾಲ್ಕನೇ ಮೈಲ್ ನಲ್ಲಿ ನಡೆದಿದೆ.ಬೇಕಲ ಡಿವೈಎಸ್‌ಪಿ ನೇತೃತ್ವದ ವಿಶೇಷ ತಂಡದ ಪೊಲೀಸ್ ಕಾನ್ಸ್ ಟೇಬಲ್ ಕೆ.ಕೆ ಸಜೀಶ್ (40) ಮೃತಪಟ್ಟವರು. ಮುಂಜಾನೆ 2.45 ರ ಸುಮಾರಿಗೆ ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಈ ಅಪಘಾತ ನಡೆದಿದೆ. ಕಾರಿನಲ್ಲಿದ್ದ ಇನ್ನೋರ್ವ ಪೊಲೀಸ್ ಗಾಯ ಹೊಂದಿದ್ದಾರೆ. ಕಾರು ಚಲಾಯಿಸುತ್ತಿದ್ದ […]

ಮಾದಕ ವಸ್ತು ಪ್ರಕರಣ ಆರೋಪಿಯನ್ನು ಪತ್ತೆ ಹಚ್ಚಲು ತೆರಳುತ್ತಿದ್ದ ಪೊಲೀಸ್ ಕಾನ್ಸ್‌ಟೇಬಲ್ ಅಪಘಾತಕ್ಕೆ ಬಲಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕುಂದಾಪುರ: ತೋಡಿಗೆ ಕಾಲು ಜಾರಿ ಬಿದ್ದು ಕೃಷಿ ಕಾರ್ಮಿಕ ಮೃತ್ಯು

(ನ್ಯೂಸ್‌ ಕಡಬ) newskadaba.com,  ಸೆ.26 ಕುಂದಾಪುರ: ತೆಂಗಿನ ತೋಟದಲ್ಲಿ ಕಾಯಿ ಕೊಯ್ದು ಸಾಗಾಟ ಮಾಡುವ ಕಾರ್ಯ ನಿರ್ವಹಿಸುತ್ತಿದ್ದ ಕಾರ್ಮಿಕನೋರ್ವ ಮಳೆಯಿಂದ ನೀರು ತುಂಬಿದ್ದ ತೋಡಿಗೆ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಬೇಳೂರು ಗ್ರಾಮದ ಚಾಮ್ತಾಡಿ ಕೈಲೇರಿ ಬಳಿ ಬುಧವಾರ ನಡೆದಿದೆ.ಮೃತರನ್ನು ಅಚ್ಲಾಡಿ ಅಂಬೇಡ್ಕರ್ ಕಾಲೋನಿಯ ನಿವಾಸಿ ಶರತ್ (32) ಎಂದು ಗುರುತಿಸಲಾಗಿದೆ. ಶರತ್ ಅವರು ಬುಧವಾರ ತಮ್ಮ ಮನೆಯ ಸಮೀಪದ ಅಚ್ಲಾಡಿಯಲ್ಲಿ ಗುತ್ತಿಗೆದಾರರೊಬ್ಬರೊಂದಿಗೆ ತೆಂಗಿನ ತೋಟದಲ್ಲಿ ಕೆಲಸಕ್ಕೆ ತೆರಳಿದ್ದರು. ಮರದಿಂದ ತೆಂಗು ಕೊಯ್ದು ಟೆಂಪೋಗೆ ತುಂಬಿಸುವ

ಕುಂದಾಪುರ: ತೋಡಿಗೆ ಕಾಲು ಜಾರಿ ಬಿದ್ದು ಕೃಷಿ ಕಾರ್ಮಿಕ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ನಿಂತಿದ್ದ ಪಿಕ್ ಅಪ್ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿ; ಪಾದಚಾರಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ಸೆ.26 ಉಡುಪಿ: ಟಿಪ್ಪರ್ ಲಾರಿಯೊಂದು ನಿಂತಿದ್ದ ಪಿಕ್ ಅಪ್ ವಾಹನಕ್ಕೆ ಡಿಕ್ಕಿ ಹೊಡೆದು, ಬಳಿಕ ಪಾದಚಾರಿಯೊಬ್ಬರಿಗೆ ಗುದ್ದಿದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿಯ ಕಾಮತ್ ಪೆಟ್ರೋಲ್ ಪಂಪ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೆಪ್ಟೆಂಬರ್ 25ರಂದು ಸಂಭವಿಸಿದೆ. ಮೃತರನ್ನು ಬಿಹಾರ ಮೂಲದ ರಾಜಕುಮಾರ್ ಶರ್ಮಾ (23) ಎಂದು ಗುರುತಿಸಲಾಗಿದೆ. ಮೃತರು ಎರ್ಮಾಳ್‌ನಲ್ಲಿರುವ ಪ್ಲೈವುಡ್ ಕಾರ್ಖಾನೆಯಲ್ಲಿ ವಲಸೆ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಅಪಘಾತ ಸಂಭವಿಸುವಾಗ ಅವರು ತಮ್ಮ ಸಹೋದ್ಯೋಗಿಗಳೊಂದಿಗೆ ಪಡುಬಿದ್ರಿಯ ಕಡೆಗೆ

ಉಡುಪಿ: ನಿಂತಿದ್ದ ಪಿಕ್ ಅಪ್ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿ; ಪಾದಚಾರಿ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿಯ ಕಲ್ಸಂಕ ಬಳಿ ಡಿವೈಡರ್ ಮೇಲೇರಿದ ಟಿಪ್ಪರ್ ಬೈಕ್ ಗೆ ಡಿಕ್ಕಿ – ಸವಾರರಿಗೆ ಗಂಭೀರ ಗಾಯ

(ನ್ಯೂಸ್‌ ಕಡಬ) newskadaba.com,  ಸೆ.26 ಉಡುಪಿ : ಡಿವೈಡರ್ ಮೇಲೇರಿದ ಟಿಪ್ಪರ್ ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ಉಡುಪಿ ಕಲ್ಸಂಕ-ಗುಂಡಿಬೈಲು ಸಮೀಪ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರ ಹಾಗೂ ಸಹಸವಾರನಿಗೆ ಗಂಭೀರ ಗಾಯಗಳಾಗಿದೆ..ಬೈಕ್ ಸವಾರ ಗಣೇಶ್ ಕರ್ಕೇರ, ಸಹಸವಾರ ಗಜೇಂದ್ರ ಅವರನ್ನು ಸ್ಥಳೀಯರ ಸಹಕಾರದಿಂದ ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ..ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಉಡುಪಿಯ ಕಲ್ಸಂಕ ಬಳಿ ಡಿವೈಡರ್ ಮೇಲೇರಿದ ಟಿಪ್ಪರ್ ಬೈಕ್ ಗೆ ಡಿಕ್ಕಿ – ಸವಾರರಿಗೆ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸೆ.27ರಿಂದ ಸೆ.30ರವರೆಗೆ ಶ್ರೀ ಶಾರದಾ ರಜತ ಸಂಭ್ರಮ ಮಹೋತ್ಸವ ಸಂಭ್ರಮ

(ನ್ಯೂಸ್‌ ಕಡಬ) newskadaba.com,  ಸೆ.26 ಬಂಟ್ವಾಳ : ತುಂಬೆ ರಾಮಲ್ ಕಟ್ಟೆ ಶ್ರೀ ಶಾರದಾ ಸೇವಾ ಪ್ರತಿಷ್ಠಾನ (ರಿ.) ಶ್ರೀ ಶಾರದಾ ರಜತ ಮಹೋತ್ಸವ ಸಮಿತಿ ಇದರ ವತಿಯಿಂದ ಶ್ರೀ ಶಾರದಾ ಸಮುದಾಯ ಭವನ ಉದ್ಘಾಟನಾ ಸಮಾರಂಭ ಮತ್ತು ಶ್ರೀ ಶಾರದಾ ರಜತ ಸಂಭ್ರಮ 2025 ಕಾರ್ಯಕ್ರಮ ಸೆ.27ರಿಂದ ಸೆ.30 ರ ವರೆಗೆ ಶ್ರೀರಾಮ ನಗರ ರಾಮಲ್ ಕಟ್ಟೆ ತುಂಬೆ ಇಲ್ಲಿ ನಡೆಯಲಿದೆ ಎಂದು ಸಮಿತಿಯ ಪ್ರಧಾನ ಸಂಚಾಲಕ ತೇವು ತಾರಾನಾಥ ಕೊಟ್ಟಾರಿಯವರು ತಿಳಿಸಿದರು. ಅವರು ತುಂಬೆ

ಸೆ.27ರಿಂದ ಸೆ.30ರವರೆಗೆ ಶ್ರೀ ಶಾರದಾ ರಜತ ಸಂಭ್ರಮ ಮಹೋತ್ಸವ ಸಂಭ್ರಮ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿದ್ಯುತ್ ತಂತಿ ಮೇಲೆ ಬಿದ್ದಿದ್ದ ತಾಳೆಗರಿಯನ್ನು ತೆರವುಗೊಳಿಸುವಾಗ ಬಾವಿಗೆ ಬಿದ್ದು ಯುವಕನೋರ್ವ ಸಾವು

(ನ್ಯೂಸ್‌ ಕಡಬ) newskadaba.com,  ಸೆ.26  ಕಾಸರಗೋಡು : ವಿದ್ಯುತ್ ತಂತಿ ಮೇಲೆ ಬಿದ್ದಿದ್ದ ತಾಳೆಗರಿಯನ್ನು ತೆಗೆಯಲೆತ್ನಿಸುತ್ತಿದ್ದಾಗ ಬಾವಿಗೆ ಬಿದ್ದು ಯುವಕ ಮೃತಪಟ್ಟ ಘಟನೆ ಉದುಮ ಸಮೀಪದ ವಳಿಯವಲಪ್ಪು ಎಂಬಲ್ಲಿ ನಡೆದಿದೆ. ವಳಿಯವಲಪ್ಪುವಿನ ಅಶ್ವಿನ್ ಅರವಿಂದ (18) ಮೃತಪಟ್ಟವರು. ಸರ್ವೀಸ್ ವಯರ್ ಮೇಲೆ ಬಿದ್ದಿದ್ದ ತಾಳೆಗರಿಯನ್ನು ಬಾವಿಯ ಕಟ್ಟೆಗೆ ಹತ್ತಿ ತೆಗೆಯಲೆತ್ನಿಸುತ್ತಿದ್ದಾಗ ಅಶ್ವಿನ್ ಬಾವಿಗೆ ಬಿದ್ದಿದ್ದು, ಕಾಸರಗೋಡಿನಿಂದ ಆಗಮಿಸಿದ ಅಗ್ನಿ ಶಾಮಕ ದಳದ ಸಿಬಂದಿಗಳು ಮೇಲಕ್ಕೆತ್ತಿ ಆಸ್ಪತ್ರೆಗೆ ತಲುಪಿಸಿದರೂ ಆತ ಅದಾಗಲೇ ಸಾವನ್ನಪ್ಪಿದನು ಎಂದು ವೈದ್ಯರು ತಿಳಿಸಿದ್ದಾರೆ.

ವಿದ್ಯುತ್ ತಂತಿ ಮೇಲೆ ಬಿದ್ದಿದ್ದ ತಾಳೆಗರಿಯನ್ನು ತೆರವುಗೊಳಿಸುವಾಗ ಬಾವಿಗೆ ಬಿದ್ದು ಯುವಕನೋರ್ವ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಜೇಶ್ವರದ ಕುಂಜತ್ತೂರು ಶಾಲಾ ಮೇಲ್ಛಾವಣಿ ಕುಸಿತ – ತಪ್ಪಿದ ಭಾರೀ ಅನಾಹುತ

(ನ್ಯೂಸ್‌ ಕಡಬ) newskadaba.com,  ಸೆ.26  ಮಂಜೇಶ್ವರ :  ಶಾಲಾ ಮೇಲ್ಛಾವಣಿ ಕುಸಿದು ಬಿದ್ದ ಘಟನೆ ಸೆ.೨೫ರಂದು ಉದ್ಯಾವರ ದಲ್ಲಿರುವ ಕುಂಜತ್ತೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದ್ದು, ತರಗತಿಯಲ್ಲಿ ಮಕ್ಕಳು ಇಲ್ಲದೆ ಇದ್ದುದರಿಂದ ಭಾರೀ ಅಪಾಯ ಸ್ವಲ್ಪದರಲ್ಲೇ ತಪ್ಪಿದೆ . ಬೆಳಿಗ್ಗೆ 8.30 ರ ಸುಮಾರಿಗೆ ಘಟನೆ ನಡೆದಿದೆ 2ನೇ ತರಗತಿಯ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಈ ಸಮಯದಲ್ಲಿ ಮಕ್ಕಳು ತರಗತಿಗೆ ತಲುಪಿರಲಿಲ್ಲ. ಹಂಚು ಹಾಸಿದ ಶಾಲೆಯ ಕೆಳಗೆ ಅಳವಡಿಸಲಾದ ಸ್ಲಾಬ್ ಕುಸಿದು ಬಿದ್ದಿದೆ . ಸಮೀಪದಲ್ಲಿದ್ದ

ಮಂಜೇಶ್ವರದ ಕುಂಜತ್ತೂರು ಶಾಲಾ ಮೇಲ್ಛಾವಣಿ ಕುಸಿತ – ತಪ್ಪಿದ ಭಾರೀ ಅನಾಹುತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಶಾರದಾ ವಿದ್ಯಾ ಸಂಸ್ಥೆಯಲ್ಲಿ ಶಾರದಾ ಮಹೋತ್ಸವ ಸಂಭ್ರಮಾಚರಣೆ

(ನ್ಯೂಸ್‌ ಕಡಬ) newskadaba.com,  ಸೆ.25 ಮಂಗಳೂರು : ನಗರದ ಕೊಡಿಯಾಲಬೈಲಿನ ಶಾರದಾ ವಿದ್ಯಾ ಸಂಸ್ಥೆಯಲ್ಲಿ ಶಾರದಾ ಮಹೋತ್ಸವವನ್ನು ಅತ್ಯಂತ ಭಕ್ತಿ ಸಡಗರದಿಂದ ಆಚರಿಸಲಾಯಿತು.  ಈ ಕಾರ್ಯಕ್ರಮದಂಗವಾಗಿ ಪ್ರಾರಂಭದಲ್ಲಿ ವಿದ್ಯಾ ಸಂಸ್ಥೆಯ ಧ್ಯಾನಮಂದಿರದಲ್ಲಿ ವಿದ್ಯಾಧಿದೇವತೆ ಶ್ರೀ ಶಾರದಾ ಮಾತೆಯ ವಿಗ್ರಹದ ಮುಂದೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರು ಭಜನಾ ಸಂಕೀರ್ತನೆಗೈದರು. ಬಳಿಕ ಪೂಜೆ ಹಾಗೂ ಮಂಗಳಾರತಿ ನೆರವೇರಿತು. ಅದೇ ರೀತಿ ವಿದ್ಯಾಲಯದ ಭೂವರಾಹ ಬಯಲು ಸಭಾಂಗಣದ ವೇದಿಕೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಕಾಸರಗೋಡು ಜಿಲ್ಲೆಯ ಶ್ರೀ ಎಡನೀರು ಮಠದ

ಮಂಗಳೂರು : ಶಾರದಾ ವಿದ್ಯಾ ಸಂಸ್ಥೆಯಲ್ಲಿ ಶಾರದಾ ಮಹೋತ್ಸವ ಸಂಭ್ರಮಾಚರಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಮಾದಕ ದ್ರವ್ಯ ಮಾರಾಟ ಪ್ರಕರಣ- ಇಬ್ಬರನ್ನು ಬಂಧನ

(ನ್ಯೂಸ್‌ ಕಡಬ) newskadaba.com,  ಸೆ.25 ಮಂಗಳೂರು: ಮಾದಕ ದ್ರವ್ಯ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಮಂಗಳೂರು ಸೆಂಟ್ರಲ್ ಉಪ ವಿಭಾಗದ ಎಸಿಪಿ ನೇತೃತ್ವದ ತಂಡ ಹಾಗೂ ಬರ್ಕೆ ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತರಿಂದ 186 ಗ್ರಾಂ ಓಪಿಯಂ ಮಾದಕ ದ್ರವ್ಯ ವಶಕ್ಕೆ ಪಡೆಯಲಾಗಿದೆ. ಬಂಧಿತರನ್ನು ರಾಜಸ್ತಾನ ಮೂಲದ ಸದ್ಯ ಮಂಗಳೂರಿನಲ್ಲಿ ನೆಲೆಸಿರುವ ವಾಸುದೇವ (48), ಮಂಗಲ್ ಚೌಧರಿ (45) ಎಂದು ಗುರುತಿಸಲಾಗಿದೆ. ಬಂಧಿತರಿಂದ 40 ಸಾವಿರ ರೂ. ಮೌಲ್ಯದ ಐಫೋನ್, 50 ಸಾವಿರ ರೂ.

ಮಂಗಳೂರು: ಮಾದಕ ದ್ರವ್ಯ ಮಾರಾಟ ಪ್ರಕರಣ- ಇಬ್ಬರನ್ನು ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಸರಗೋಡು: ಆಟೋ ಚಾಲಕನೊಬ್ಬ ಆಸಿಡ್ ಸೇವಿಸಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ಸೆ.25 ಕಾಸರಗೋಡು : ಶಾಲಾ ವಿದ್ಯಾರ್ಥಿಗಳ ರಸ್ತೆ ಅಪಘಾತದಿಂದ ಮನನೊಂದ ಆಟೋ ಚಾಲಕನೊಬ್ಬ ಮಂಗಳವಾರ ಸಂಜೆ ಬೇಡಡ್ಕದಲ್ಲಿ ಆಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಪಲ್ಲಂಜಿ ನಿವಾಸಿ ಕೆ. ಅನೀಶ್ (40) ಎಂದು ಗುರುತಿಸಲಾಗಿದೆ.ಮಂಗಳವಾರ ಸಂಜೆ ಅನೀಶ್ ಬೈತೂರ್‌ಪಾರ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಿಂದ ಪಲ್ಲಂಜಿ ಕಡೆಗೆ ಪ್ಲಸ್-ಒನ್ ವಿದ್ಯಾರ್ಥಿಗಳ ಗುಂಪನ್ನು ಕರೆದೊಯ್ಯುತ್ತಿದ್ದಾಗ, ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಅವರ ಆಟೋದ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ,

ಕಾಸರಗೋಡು: ಆಟೋ ಚಾಲಕನೊಬ್ಬ ಆಸಿಡ್ ಸೇವಿಸಿ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top