ಕರಾವಳಿ

ಮಂಗಳೂರು: ದಸರಾ , ನವರಾತ್ರಿ ಪ್ರಯುಕ್ತ ದೇವಾಲಯ ಭೇಟಿಗೆ ಕೆಎಸ್‌ಆರ್‌ಟಿಸಿ ವಿಶೇಷ ಪ್ಯಾಕೇಜ್‌ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಸೆ.22  ಮಂಗಳೂರು : ದಸರಾ ಮತ್ತು ನವರಾತ್ರಿ ಆಚರಣೆಯ ಸಮಯದಲ್ಲಿ, ದೂರದೂರದ ಯಾತ್ರಾರ್ಥಿಗಳು ಮತ್ತು ಪ್ರವಾಸಿಗರಿಗೆ ಕರಾವಳಿ ದೇವಾಲಯಗಳಿಗೆ ಭೇಟಿ ನೀಡುವ ಅವಕಾಶವನ್ನು ಒದಗಿಸಲು ಕೆಎಸ್ಆರ್‌ಟಿಸಿ ಮಂಗಳೂರು ವಿಭಾಗವು ವಿಶೇಷ ದಸರಾ ಪ್ಯಾಕೇಜ್ ಪ್ರವಾಸಗಳನ್ನು ಪರಿಚಯಿಸಿದೆ. ಈ ಕ್ರಮವು ಕರಾವಳಿ ಪ್ರವಾಸೋದ್ಯಮವನ್ನು ಉತ್ತೇಜಿಸುವುದರ ಜೊತೆಗೆ ಭಕ್ತರಿಗೆ ದೈವಿಕ ದರ್ಶನದ ಭಾಗ್ಯವನ್ನು ನೀಡುತ್ತದೆ. ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ, ಕೆಎಸ್ಆರ್‌ಟಿಸಿ ಮಂಗಳೂರಿನ ಸುತ್ತಮುತ್ತಲಿನ ಪ್ರಮುಖ ದೇವಾಲಯಗಳು ಹಾಗೂ ಮಡಿಕೇರಿ, ಕೊಲ್ಲೂರು ಮತ್ತು […]

ಮಂಗಳೂರು: ದಸರಾ , ನವರಾತ್ರಿ ಪ್ರಯುಕ್ತ ದೇವಾಲಯ ಭೇಟಿಗೆ ಕೆಎಸ್‌ಆರ್‌ಟಿಸಿ ವಿಶೇಷ ಪ್ಯಾಕೇಜ್‌ ಬಿಡುಗಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯಮಟ್ಟದ ಈಜು ಸ್ಪರ್ಧೆಗೆ ಕಾರ್ಕಳದ ಕ್ರೈಸ್ಟ್‌ಕಿಂಗ್ ಪಿ.ಯು. ಕಾಲೇಜಿನ ವಿದ್ಯಾರ್ಥಿ ಆಯ್ಕೆ

(ನ್ಯೂಸ್‌ ಕಡಬ) newskadaba.com,  ಸೆ.22 ಕಾರ್ಕಳ : ಕಾರ್ಕಳದ ಕ್ರೈಸ್ಟ್‌ಕಿಂಗ್  ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಆರ್ಯನ್ ಆರ್ ಕೋಟ್ಯಾನ್ ರಾಜ್ಯಮಟ್ಟದ ಈಜು ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ. ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜು, ಉಡುಪಿ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬಾಲಕರ ಈಜು ಸ್ಪರ್ಧೆಯಲ್ಲಿ ಆರ್ಯನ್ ಆರ್ ಕೋಟ್ಯಾನ್ 1500 ಮೀ ಫ್ರೀಸ್ಟೈಲ್ ಹಾಗೂ 400 ಮೀ ಫ್ರೀಸ್ಟೈಲ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದು ರಾಜ್ಯಮಟ್ಟದ ಈಜು

ರಾಜ್ಯಮಟ್ಟದ ಈಜು ಸ್ಪರ್ಧೆಗೆ ಕಾರ್ಕಳದ ಕ್ರೈಸ್ಟ್‌ಕಿಂಗ್ ಪಿ.ಯು. ಕಾಲೇಜಿನ ವಿದ್ಯಾರ್ಥಿ ಆಯ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಕೆಎಸ್‌ಆರ್‌ಟಿಸಿ ಬಸ್ ಮತ್ತೊಂದು ಅಪಘಾತದಲ್ಲಿ ಭಾಗಿ

(ನ್ಯೂಸ್‌ ಕಡಬ) newskadaba.com,  ಸೆ.22 ಮಂಗಳೂರು : ಈ ಹಿಂದೆ 2 ಪ್ರತ್ಯೇಕ ಅಪಘಾತಗಳಿಗೆ ಕಾರಣವಾಗಿ, ಮೂವರ ಸಾವಿಗೆ ಕಾರಣವಾಗಿದ್ದ ಕೆಎಸ್‌ಆರ್‌ಟಿಸಿ ಬಸ್, ಇದೀಗ ಮತ್ತೊಂದು ಅಪಘಾತದಲ್ಲಿ ಭಾಗಿಯಾಗಿದ್ದು, ಇಬ್ಬರು ಯುವಕರಿಗೆ ಗಂಭೀರ ಗಾಯಗಳಾಗಿವೆ.ಸೆಪ್ಟೆಂಬರ್ 20ರಂದು ಬಂಟ್ವಾಳ ತಾಲೂಕಿನ ಮಣಿಮೂಲೂರು ಗ್ರಾಮದ ಉಜಿರಂಡಿಪಲ್ಕೆ ಬಳಿ ಕೆಎಸ್‌ಆರ್‌ಟಿಸಿ ಬಸ್ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ದೀಕ್ಷಿತ್ ಮತ್ತು ಧನುಷ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಅಪಘಾತದ ಬಳಿಕ, ಇದೇ ಬಸ್ ಹಿಂದೆ 2 ಪ್ರಾಣಾಂತಿಕ ಅಪಘಾತಗಳಿಗೆ

ಮಂಗಳೂರು : ಕೆಎಸ್‌ಆರ್‌ಟಿಸಿ ಬಸ್ ಮತ್ತೊಂದು ಅಪಘಾತದಲ್ಲಿ ಭಾಗಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಿ.ಸಿ ರೋಡ್ ಬಸ್ ನಿಲ್ದಾಣದಲ್ಲಿ ಪ್ರಯಾಣಿಕನ ಜೇಬಿನಿಂದ 1 ಲಕ್ಷ ರೂ. ನಗದು ಕದ್ದ ಕೇರಳದ ಮೂಲದ ವ್ಯಕ್ತಿ ಬಂಧನ

(ನ್ಯೂಸ್‌ ಕಡಬ) newskadaba.com,  ಸೆ.22 ಬಂಟ್ವಾಳ :  ಬಿ.ಸಿ ರೋಡ್ ಬಸ್ ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಪ್ರಯಾಣಿಕನ ಜೇಬಿನಿಂದ 1 ಲಕ್ಷ ರೂ. ಕದ್ದ ಆರೋಪದ ಮೇಲೆ ಕೇರಳ ವ್ಯಕ್ತಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಕೇರಳದ ತ್ರಿಶೂರ್ ಜಿಲ್ಲೆಯ ನಝೀರ್ ಪುನ್ನಯ್ಯಾರ್ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಕುಂದಾಪುರದ ರಂಗನಾಥ ಬೆಳ್ಳಾಲ ಅವರು ತಮ್ಮ ಕಾರನ್ನು ಮಾರಾಟ ಮಾಡಿ 1.60 ಲಕ್ಷ ರೂ. ಹಣದೊಂದಿಗೆ ಮತ್ತೊಂದು ಉಪಯೋಗಿಸಿದ ಕಾರು ಖರೀದಿಸಲು ಆಗಸ್ಟ್ 14 ರಂದು ಬಿ.ಸಿ.

ಬಿ.ಸಿ ರೋಡ್ ಬಸ್ ನಿಲ್ದಾಣದಲ್ಲಿ ಪ್ರಯಾಣಿಕನ ಜೇಬಿನಿಂದ 1 ಲಕ್ಷ ರೂ. ನಗದು ಕದ್ದ ಕೇರಳದ ಮೂಲದ ವ್ಯಕ್ತಿ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಂದಾಪುರ: ತಾಂತ್ರಿಕ ಸಮಸ್ಯೆಯಿಂದ ಹಂಗಾರಕಟ್ಟೆ ಬಳಿ ಬೋಟ್ ಅಪಘಾತ; 5 ಜನ ಪಾರು, ಲಕ್ಷಾಂತರ ರೂ. ನಷ್ಟ

(ನ್ಯೂಸ್‌ ಕಡಬ) newskadaba.com,  ಸೆ.20 ಕುಂದಾಪುರ: ಕೋಡಿಬೆಂಗ್ರೆ ನಿವಾಸಿ ಮಹೇಶ್ ಎಂಬುವರಿಗೆ ಸೇರಿದ ‘ಮಹಾಕಾಳಿ’ ಎಂಬ ಹೆಸರಿನ ಬೋಟ್ ಸೆಪ್ಟೆಂಬರ್ 17ರಂದು ಬೆಳಗ್ಗೆ ಕೋಡಿ ಬೆಂಗ್ರೆ ಮೀನುಗಾರಿಕಾ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು. ಮಧ್ಯಾಹ್ನ ಹಂಗಾರಕಟ್ಟೆ ಬಂದರು ಬಳಿ ಮೀನುಗಾರಿಕೆ ನಡೆಸುತ್ತಿದ್ದಾಗ ಬೋಟ್‌ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡು ಇಂಜಿನ್ ಸ್ಥಗಿತಗೊಂಡಿದೆ. ಎಷ್ಟೇ ಪ್ರಯತ್ನಿಸಿದರೂ ಇಂಜಿನ್ ಪುನಃ ಆರಂಭಗೊಂಡಿಲ್ಲ. ಈ ನಡುವೆ, ಬಿರುಗಾಳಿ ಮತ್ತು ಅಲೆಗಳ ರಭಸಕ್ಕೆ ಬೋಟ್ ಸಮುದ್ರ ತೀರಕ್ಕೆ ಬಂದು ಕೋಡಿ ಕನ್ಯಾನ ಗ್ರಾಮದ ಕೋಡಿ ಸಮೀಪ

ಕುಂದಾಪುರ: ತಾಂತ್ರಿಕ ಸಮಸ್ಯೆಯಿಂದ ಹಂಗಾರಕಟ್ಟೆ ಬಳಿ ಬೋಟ್ ಅಪಘಾತ; 5 ಜನ ಪಾರು, ಲಕ್ಷಾಂತರ ರೂ. ನಷ್ಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಮಹಿಳೆಯೊಬ್ಬರ ಚಿನ್ನದ ಮಾಂಗಲ್ಯ ಸರ ಕಳ್ಳತನ ಪ್ರಕರಣ; ಆರೋಪಿಗೆ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ

(ನ್ಯೂಸ್‌ ಕಡಬ) newskadaba.com,  ಸೆ.20  ಬೆಳ್ತಂಗಡಿ: ಕೊಯ್ಯೂರು ಗ್ರಾಮದಲ್ಲಿ ಮಹಿಳೆಯ ಮಾಂಗಲ್ಯ ಸರವನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 3 ವರ್ಷಗಳ ಕಠಿಣ ಶಿಕ್ಷೆ ಹಾಗೂ 5,000 ರೂ. ದಂಡ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. 2024ರ ಡಿಸೆಂಬರ್ 9 ರಂದು ಕೊಯ್ಯೂರು ಗ್ರಾಮದಲ್ಲಿ ಮಹಿಳೆಯೊಬ್ಬರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಆರೋಪಿ ಉಮೇಶ್ ಗೌಡ ಆಕೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದನು. ಈ ಸಂಬಂಧ ಆರೋಪಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಅದೇ ದಿನ

ಬೆಳ್ತಂಗಡಿ: ಮಹಿಳೆಯೊಬ್ಬರ ಚಿನ್ನದ ಮಾಂಗಲ್ಯ ಸರ ಕಳ್ಳತನ ಪ್ರಕರಣ; ಆರೋಪಿಗೆ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾರ್ಕಳ : ಜಿಲ್ಲಾ ಮಟ್ಟದ ಅಂತರ್ ಕಾಲೇಜು ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಮಿಂಚಿದ ಕ್ರೈಸ್ಟ್‌ಕಿಂಗ್ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳು

(ನ್ಯೂಸ್‌ ಕಡಬ) newskadaba.com,  ಸೆ.20  ಕಾರ್ಕಳ : ಜಿಲ್ಲಾ ಮಟ್ಟದ ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಕಾರ್ಕಳ ತಾಲ್ಲೂಕು ತಂಡವನ್ನು ಪ್ರತಿನಿಧಿಸಿದ್ದ ಕಾರ್ಕಳದ ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದಿದ್ದಾರೆ. ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಸೈಂಟ್ ಮೇರಿ ಪಿ.ಯು. ಕಾಲೇಜು, ಶಿರ್ವ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಅಂತರ್ ಕಾಲೇಜು ಫುಟ್‌ಬಾಲ್ ಪಂದ್ಯಾವಳಿಯು ನಡೆಯಿತು. ಬಾಲಕಿಯರ ವಿಭಾಗದಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ರವಿನಾ ಕನ್ವರ್ ಮತ್ತು ಪ್ರಥಮ ವಾಣಿಜ್ಯ ವಿಭಾಗದ ಸುಪ್ರಭಾ ರನ್ನರ್-ಅಪ್ ಸ್ಥಾನ ಪಡೆದಿದ್ದಾರೆ.

ಕಾರ್ಕಳ : ಜಿಲ್ಲಾ ಮಟ್ಟದ ಅಂತರ್ ಕಾಲೇಜು ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಮಿಂಚಿದ ಕ್ರೈಸ್ಟ್‌ಕಿಂಗ್ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ- ಸವಾರ ಮೃತ್ಯು

(ನ್ಯೂಸ್‌ ಕಡಬ) newskadaba.com,  ಸೆ.20 ಬೆಳ್ತಂಗಡಿ : ಬಂಟ್ವಾಳ-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಕಾವಳಕಟ್ಟೆಯ ಬಳಿಯ ಎನ್‌ಸಿ ರಸ್ತೆಯ ಬಳಿ, ಕೆಎಸ್‌ಆರ್‌ಟಿಸಿ  ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರನೊಬ್ಬ ಮೃತಪಟ್ಟದ್ದಾನೆ.. ಮೃತನನ್ನು ಬೆಳ್ತಂಗಡಿ ತಾಲೂಕಿನ ಬಜಿರೆ ಕ್ರಾಸ್ ಕಟ್ಟೆ ನಿವಾಸಿ ರಾಜೇಶ್ (36) ಎಂದು ಗುರುತಿಸಲಾಗಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಧರ್ಮಸ್ಥಳದಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ವಗ್ಗದಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ರಾಜೇಶ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ- ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ನಗರ ಪಂಚಾಯತಿ ಕಸ ವಿಲೇವಾರಿ ಘಟಕ ಪರಿಶೀಲನೆಗೆ ಸಾರ್ವಜನಿಕರಿಂದ ಒತ್ತಾಯ

(ನ್ಯೂಸ್‌ ಕಡಬ) newskadaba.com,  ಸೆ.20 ಸುಳ್ಯ: ತಾಲೂಕಿನ ಆಲೆಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲೆರ್ಪೆಯಲ್ಲಿ ಅಸಮರ್ಪಕವಾಗಿ ನಡೆಯುತ್ತಿರುವ ನಗರ ಪಂಚಾಯತಿ ಕಸ ವಿಲೇವಾರಿ ಘಟಕದ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಲೆಟ್ಟಿ ಪಂಚಾಯತ್ ವ್ಯಾಪ್ತಿಯ ಕಲ್ಚೆರ್ಪೆ ಸಮೀಪದ ಜನರು ಒತ್ತಾಯಿಸಿದ್ದಾರೆ. ಒಂದು ವೇಳೆ ತಪ್ಪಿದಲ್ಲಿ ಸುಳ್ಯ ನಗರ ಪಂಚಾಯತ್ ಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದು ಸ್ಥಳೀಯರು ಎಚ್ಚರಿ ನೀಡಿದ್ದಾರೆ. ಸುಮಾರು 6 ತಿಂಗಳ ಹಿಂದೆ ಶಾಸಕರ ಮತ್ತು ನಗರ ಪಂಚಾಯತ್ ಆಡಳಿತ ಮಂಡಳಿಯವರ

ಸುಳ್ಯ: ನಗರ ಪಂಚಾಯತಿ ಕಸ ವಿಲೇವಾರಿ ಘಟಕ ಪರಿಶೀಲನೆಗೆ ಸಾರ್ವಜನಿಕರಿಂದ ಒತ್ತಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಂಚಾರ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ – ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,  ಸೆ.19 ಮಂಗಳೂರು : ನಗರದ ಸ್ಟೇಟ್‌ಬ್ಯಾಂಕ್ ಹತ್ತಿರ ವ್ಯಕ್ತಿಯೊಬ್ಬ ಟ್ರಾಫಿಕ್‌ನಲ್ಲಿ ಕರ್ತವ್ಯನಿರತ ಹೆಡ್‌ಕಾನ್‌ ಸ್ಟೇಬಲ್‌ರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸ್ಟೇಟ್‌ಬ್ಯಾಂಕ್ ವೃತ್ತದ ಬಳಿ ಮಹಿಳೆಯೊಬ್ಬರು ರಸ್ತೆ ದಾಟುತ್ತಿದ್ದಾಗ ಟ್ರಾಫಿಕ್ ಎಚ್‌ಸಿ ವಾಹನಗಳನ್ನು ನಿಲ್ಲಿಸುವಂತೆ ಸೂಚನೆ ನೀಡಿದ್ದರು. ಆದರೆ ಸ್ಕೂಟರ್ ಸವಾರ ನಾಟೆಕಲ್‌ನ ಆಸಿಫ್ ಬಾವ ಎಂಬಾತ ಅದನ್ನು ಲೆಕ್ಕಿಸದೆ ಸ್ಕೂಟರ್ ಚಲಾಯಿಸಿದ್ದು, ಈ ಸಂದರ್ಭ ಎಚ್‌ಸಿ ಸ್ಕೂಟರ್ ಸವಾರನಿಗೆ ಏಯ್ ಅಂತ ಹೇಳಿ ಕೈಯಿಂದ

ಸಂಚಾರ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ – ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top