ಕರಾವಳಿ

ರಾತ್ರಿ ಸಂಚರಿಸುವ ವಾಹನಗಳಿಗೆ ಚಾರ್ಮಾಡಿ ಘಾಟ್‌ನಲ್ಲಿ ಹೊಸ ನಿಯಮ ಜಾರಿ

(ನ್ಯೂಸ್‌ ಕಡಬ) newskadaba.com,  ಸೆ. 19 ಬೆಳ್ತಂಗಡಿ :  ಚಿಕ್ಕಮಗಳೂರು ಮತ್ತು ಕರಾವಳಿಯನ್ನು ಸಂಪರ್ಕಿಸುವ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಘಾಟ್ ವಿಭಾಗದ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರವೇಶಿಸುವ ವಾಹನಗಳಿಗೆ ಹೊಸ ಸಂಚಾರ ನಿಯಮ ಜಾರಿಗೆ ಬಂದಿದೆ. ಹೊಸ ನಿಯಮದ ಪ್ರಕಾರ, ರಾತ್ರಿ ಪ್ರಯಾಣಿಸುವ ವಾಹನಗಳನ್ನು ಇನ್ನು ಮುಂದೆ ಪ್ರತ್ಯೇಕವಾಗಿ ಅಥವಾ ಜೋಡಿಯಾಗಿ ಸಾಗಲು ಬಿಡುವುದಿಲ್ಲ. ಕನಿಷ್ಠ 5 ವಾಹನಗಳು ಗುಂಪಾಗಿ ಬಂದ ನಂತರವೇ ಅವುಗಳಿಗೆ ಮುಂದುವರಿಯಲು ಅನುಮತಿ ನೀಡಲಾಗುತ್ತದೆ. ಕೊಟ್ಟಿಗೆಹಾರ ಚೆಕ್‌ಪೋಸ್ಟ್‌ನಲ್ಲಿ, ರಾತ್ರಿ ಸಮಯದಲ್ಲಿ […]

ರಾತ್ರಿ ಸಂಚರಿಸುವ ವಾಹನಗಳಿಗೆ ಚಾರ್ಮಾಡಿ ಘಾಟ್‌ನಲ್ಲಿ ಹೊಸ ನಿಯಮ ಜಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಕಲಿ‌ ಆಧಾರ್, ಪಹಣಿ ಪತ್ರ ಸೃಷ್ಟಿಸಿ ವಂಚಿಸುತ್ತಿದ್ದ ಪ್ರಕರಣ – ಉಳಾಯಿಬೆಟ್ಟು ನಿವಾಸಿ ಮುಹಮ್ಮದ್ ಅಲಿ ಸೆರೆ

(ನ್ಯೂಸ್‌ ಕಡಬ) newskadaba.com,  ಸೆ. 19 ಮಂಗಳೂರು :  ನಕಲಿ‌ ಆಧಾರ್ ಕಾರ್ಡ್, ಪಹಣಿ ಪತ್ರ ಸೃಷ್ಟಿಸಿ ವಂಚಿಸುತ್ತಿದ್ದ ಪ್ರಕರಣ ಸಂಬಂಧ ಸುರತ್ಕಲ್ ಪೊಲೀಸರು ಮತ್ತೋರ್ವನನ್ನು ಬಂಧಿಸಿದ್ದಾರೆ. ಅಲಿ ಬಂಧನದೊಂದಿಗೆ ನಕಲಿ‌ ಆಧಾರ್ ಕಾರ್ಡ್, ಪಹಣಿ ಪತ್ರ ಸೃಷ್ಟಿಸಿ ವಂಚಿಸಿ ಬಂಧನಕ್ಕೊಳಗಾದವರ ಸಂಖ್ಯೆ 6ಕ್ಕೆ ಏರಿದಂತಾಗಿದೆ. ಆರೋಪಿಯನ್ನು ಗುರುಪುರದಲ್ಲಿ ಬಂಧಿಸಿದ್ದ ಪೊಲೀಸರು, ಗುರುವಾರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಈ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಸಾಧ್ಯತೆ ಇದ್ದು, ಸದ್ಯ ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಕಸ್ಟಡಿಗೆ ಪಡೆದುಕೊಳ್ಳುವ

ನಕಲಿ‌ ಆಧಾರ್, ಪಹಣಿ ಪತ್ರ ಸೃಷ್ಟಿಸಿ ವಂಚಿಸುತ್ತಿದ್ದ ಪ್ರಕರಣ – ಉಳಾಯಿಬೆಟ್ಟು ನಿವಾಸಿ ಮುಹಮ್ಮದ್ ಅಲಿ ಸೆರೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಖ್ಯಾತ ಸಂಶೋಧಕ, ಸಾಹಿತಿ , ನಿವೃತ್ತ ಉಪನ್ಯಾಸಕ ಡಾ. ಕೆ. ಜಿ ವಸಂತ ಮಾಧವ ನಿಧನ

(ನ್ಯೂಸ್‌ ಕಡಬ) newskadaba.com,  ಸೆ. 19 ಮಂಗಳೂರು : ಮುಲ್ಕಿ ಹಳೆಯಂಗಡಿ ಸಮೀಪದ ಪಾವಂಜೆ ನಿವಾಸಿ ಖ್ಯಾತ ಸಂಶೋಧಕ, ನಿವೃತ್ತ ಉಪನ್ಯಾಸಕ ಡಾ.. ವಸಂತ ಮಾಧವ (88) ಅವರು ಬುಧವಾರ ರಾತ್ರಿ ಬೆಂಗಳೂರಿನ ತನ್ನ ಮಗಳ ಮನೆಯಲ್ಲಿ ನಿಧನರಾದರು. ಅವರು ಪತ್ನಿ, ಒಬ್ಬ ಪುತ್ರ ಹಾಗೂ ಒಬ್ಬ ಪುತ್ರಿಯನ್ನು ಅಗಲಿದ್ದಾರೆ. ಪ್ರೊ. ಡಾ. ಕೆ.ಜಿ. ವಸಂತ ಮಾಧವ (ಗುಜ್ಜಾಡಿ ವಸಂತ ಮಾಧವ ಕೊಡಂಚ)ರವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಇತಿಹಾಸದಲ್ಲಿ ಸ್ನಾತಕೋತ್ತರ ಪದವಿಯನ್ನು ಮತ್ತು ಕೆನರಾದ ರಾಜಕೀಯ ಇತಿಹಾಸ :

ಮಂಗಳೂರು : ಖ್ಯಾತ ಸಂಶೋಧಕ, ಸಾಹಿತಿ , ನಿವೃತ್ತ ಉಪನ್ಯಾಸಕ ಡಾ. ಕೆ. ಜಿ ವಸಂತ ಮಾಧವ ನಿಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಂಬಳದ ಹಿರಿಯ ಅನುಭವಿ ಓಟಗಾರ ಪೇಜಾವರ ಭಾಸ್ಕರ್ ಶೆಟ್ಟಿ ಯವರು ಅಸೌಖ್ಯದಿಂದ ನಿಧನ

(ನ್ಯೂಸ್‌ ಕಡಬ) newskadaba.com,  ಸೆ. 19 ಮಂಗಳೂರು: ಕಂಬಳದ ಹಿರಿಯ ಓಟಗಾರರಾದ ಭಾಸ್ಕರ ಶೆಟ್ಟಿಯವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 74ವರ್ಷ ವಯಸ್ಸಾಗಿತ್ತು. ಬಜ್ಪೆಯ ಪೆರ್ಕೋಡಿಯ ಪೇಜಾವರ ಭಾಸ್ಕರ ಶೆಟ್ಟಿ 1970ರಲ್ಲಿ ಕಂಬಳದಲ್ಲಿ ಓಟಗಾರರಾಗಿ ಪ್ರಸಿದ್ಧಿಯನ್ನು ಪಡೆದಿದ್ದರು. ಬಾಲ್ಯದಿಂದಲೂ ಇವರು ಕಂಬಳ ಕ್ಶೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದರು. ಕೃಷಿ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಗೊಂಡಿದ್ದು, ಕಂಬಳ ಓಟಗಾರರಾಗಿ ಹಲವಾರು ಪ್ರಶಸ್ತಿಯನ್ನು ಶೆಟ್ಟಿಯವರು ಪಡೆದಿದ್ದಾರೆ. ಇತ್ತೀಚೆಗೆ ನಡೆದ ಕಂಬಳದಲ್ಲಿ ಹಿರಿಯ ಕಂಬಳ ಓಟಗಾರ ಎಂಬ ಗೌರವಕ್ಕೂ ಪಾತ್ರದಾಗಿದ್ದರು. ಭಾಸ್ಕರ ಶೆಟ್ಟಿಯವರು ಇದೀಗ

ಕಂಬಳದ ಹಿರಿಯ ಅನುಭವಿ ಓಟಗಾರ ಪೇಜಾವರ ಭಾಸ್ಕರ್ ಶೆಟ್ಟಿ ಯವರು ಅಸೌಖ್ಯದಿಂದ ನಿಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ ಲಾರಿಯ ಚಕ್ರ ಮಣ್ಣಿನಡಿ ಹೂತು ಹೋಗಿ ಸಂಚಾರಕ್ಕೆ ಅಡ್ಡಿ

(ನ್ಯೂಸ್‌ ಕಡಬ) newskadaba.com,  ಸೆ. 19 ಸುಳ್ಯ: ಪೊಲೀಸ್ ಠಾಣೆಯ ಮುಂಭಾಗದಲ್ಲಿ ಚೆನ್ನಕೇಶವ ದೇವಸ್ಥಾನಕ್ಕೆ ತಿರುಗುವ ಜಂಕ್ಷನ್ನಲ್ಲಿ ಲಾರಿಯ ಚಕ್ರವೊಂದು ಹೂತುಹೋಗಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಕಳೆದ ರಾತ್ರಿ ಜೆಸಿಬಿಯಲ್ಲಿ ರಸ್ತೆ ಅಗೆದು ಪೈಪ್ ಕಾಮಗಾರಿ ಮಾಡಿ ಬೆಳಿಗ್ಗೆ ಮುಚ್ಚಿದ್ದು, ಅಲ್ಲಿ ವಾಹನ ಸಂಚಾರ ಸಂದರ್ಭ ಇಂದು ಬೆಳಿಗ್ಗೆ ವಾಹನ ಹೂತು ರಸ್ತೆ ಬ್ಲಾಕ್ ಆಗಿತ್ತು. ಅರ್ಧ ಗಂಟೆಯ ಬಳಿಕ ವಾಹನವನ್ನು ತೆಗೆದು ರಸ್ತೆ ಗುಂಡಿಯನ್ನು ಮುಚ್ಚಲಾಗಿತ್ತು. ಇದೀಗ ಸಂಜೆ ಮತ್ತೆ ಲಾರಿಯೊಂದರ ಚಕ್ರ ಹೂತುಹೋಗಿದೆ. ಪರಿಣಾಮವಾಗಿ

ಸುಳ್ಯ ಲಾರಿಯ ಚಕ್ರ ಮಣ್ಣಿನಡಿ ಹೂತು ಹೋಗಿ ಸಂಚಾರಕ್ಕೆ ಅಡ್ಡಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರಿನ ಪ್ರಮುಖ ಉದ್ಯಮಿಗಳಲ್ಲಿ ಒಬ್ಬರಾದ ಪೂಂಜಾ ಇಂಟರ್‌ನ್ಯಾಷನಲ್‌ನ ಮಾಲೀಕ ಪ್ರಭಾಕರ ಪೂಂಜಾ ನಿಧನ

(ನ್ಯೂಸ್‌ ಕಡಬ) newskadaba.com,  ಸೆ.18 ಮಂಗಳೂರು : ಪೂಂಜಾ ಇಂಟರ್‌ನ್ಯಾಷನಲ್‌ನ ಮಾಲೀಕ ಪ್ರಭಾಕರ ಪೂಂಜಾ(72) ಮಂಗಳವಾರ ನಿಧನರಾದರು. ಪ್ರಭಾಕರ ಪೂಂಜಾ ಅವರ ಮರಣದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಇದು ಸಹಜ ಕಾರಣಗಳಿಂದ ಸಂಭವಿಸಿದ ಸಾವೇ ಅಥವಾ ಬೇರೆ ಕಾರಣಗಳಿದೆಯೇ ಎಂಬುದು ತಿಳಿದುಬಂದಿಲ್ಲ. ಕುಟುಂಬ ಅಥವಾ ಅಧಿಕೃತ ಮೂಲಗಳಿಂದ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಪ್ರಭಾಕರ ಪೂಂಜಾ ಅವರು ತಮ್ಮ ವ್ಯಾಪಾರ ಕೌಶಲ್ಯ ಮತ್ತು ಸ್ಥಳೀಯ ವಾಣಿಜ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳಿಂದಾಗಿ ಈ ಪ್ರದೇಶದಲ್ಲಿ ವ್ಯಾಪಕ ಗೌರವವನ್ನು ಗಳಿಸಿದ್ದರು. ಅವರ

ಮಂಗಳೂರಿನ ಪ್ರಮುಖ ಉದ್ಯಮಿಗಳಲ್ಲಿ ಒಬ್ಬರಾದ ಪೂಂಜಾ ಇಂಟರ್‌ನ್ಯಾಷನಲ್‌ನ ಮಾಲೀಕ ಪ್ರಭಾಕರ ಪೂಂಜಾ ನಿಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ಆಟೋ ಮತ್ತು ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ, 27 ವರ್ಷದ ತರುಣ ಮೃತ್ಯು

(ನ್ಯೂಸ್‌ ಕಡಬ) newskadaba.com,  ಸೆ.18 ಮಂಗಳೂರು : ಆಟೋ ರಿಕ್ಷಾ ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ 27 ವರ್ಷದ ಯುವಕ ಸಾವನ್ನಪ್ಪಿದ ಘಟನೆ ಮಂಗಳೂರಿನ ಯಯ್ಯಾಡಿ ಬಳಿ ಮಂಗಳವಾರ(ಸೆ.16) ದಂದು ಸಂಭವಿಸಿದೆ. ವರದಿಗಳ ಪ್ರಕಾರ, ಆಟೋರಿಕ್ಷಾ ಕೆಪಿಟಿಯಿಂದ ಹರಿಪದವ್ ಕಡೆಗೆ ತೆರಳುತ್ತಿತ್ತು. ದ್ವಿಚಕ್ರ ವಾಹನ ಯಯ್ಯಾಡಿ ಮುಖ್ಯ ಜಂಕ್ಷನ್‌ನಿಂದ ಬಾರೆಬೈಲ್ ಕಡೆಗೆ ಸಾಗುತ್ತಿತ್ತು. ಆಟೋ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಕೌಶಿಕ್ ರಸ್ತೆಗೆ ಬಿದ್ದು, ಸಮೀಪದ

ಮಂಗಳೂರಿನಲ್ಲಿ ಆಟೋ ಮತ್ತು ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ, 27 ವರ್ಷದ ತರುಣ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರಿನ ಗೇಲ್ ಕಂಪೆನಿಯ ದಿವ್ಯ ನಿರ್ಲಕ್ಷ್ಯ- ಹೊಂಡಕ್ಕೆ ಬಿದ್ದ ನಾಯಿಯ ರಕ್ಷಣೆ

(ನ್ಯೂಸ್‌ ಕಡಬ) newskadaba.com,  ಸೆ.17 ಮಂಗಳೂರು :  ಗೇಲ್ ಕಂಪೆನಿ ದಿವ್ಯ ನಿರ್ಲಕ್ಷ್ಯಕ್ಕೆ ನಾಯೊಂದು ಹೊಂಡಕ್ಕೆ ಬಿದ್ದ ಘಟನೆ ಬೆಳಕಿಗೆ ಬಂದಿದೆ. ಕಂಪೆನಿ ಪೈಪ್ ಲೈನ್ ತೆರದು ಮುಚ್ಚದೆ ಹಾಗೇ ಬಿಟ್ಟಿತ್ತು. ಮಲ್ಲಿಕಟ್ಟೆ ಮಾರುಕಟ್ಟೆ ಬಳಿ ಮುಚ್ಚದೆ ಬಿಟ್ಟ ಕಾರಣ ನಾಯಿ ಹೊಂಡಕ್ಕೆ ಬಿದ್ದಿದೆ. ಬಳಿಕ ಹೊಂಡಕ್ಕೆ ಬಿದ್ದ ನಾಯಿಯನ್ನು ಅನಿಮಲ್ ಕೇರ್ ಟ್ರಸ್ಟ್ ನಿಂದ  ರಕ್ಷಣೆ ಮಾಡಲಾಗಿದೆ  

ಮಂಗಳೂರಿನ ಗೇಲ್ ಕಂಪೆನಿಯ ದಿವ್ಯ ನಿರ್ಲಕ್ಷ್ಯ- ಹೊಂಡಕ್ಕೆ ಬಿದ್ದ ನಾಯಿಯ ರಕ್ಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಹೊನ್ನೆಕಟ್ಟೆ-ಕಾನ ಮೇಲ್ಸೇತುವೆ ಸೆ.17 ರಿಂದ30ರ ತನಕ ಸಂಚಾರ ನಿಷೇಧ

(ನ್ಯೂಸ್‌ ಕಡಬ) newskadaba.com,  ಸೆ.17 ಮಂಗಳೂರು: ಹೊನ್ನೆಕಟ್ಟೆ-ಕಾನ ರೈಲ್ವೆ ಮೇಲ್ವೇತುವೆಯ ಮೇಲೆ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 16ರ ವರೆಗೆ 30 ದಿನಗಳ ಕಾಲ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸೇತುವೆಯ ಮೇಲೆ ಕಾಂಕ್ರೀಟಿಕರಣ ಕಾಮಗಾರಿ ನಡೆಯುತ್ತಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಈ ಅವಧಿಯಲ್ಲಿ ಈ ಕೆಳಗಿನಂತೆ ಸಂಚಾರ ಮಾರ್ಗಗಳನ್ನು ಬದಲಾಯಿಸಲಾಗಿದೆ: ಕುಲಾಯಿ-ಹೊನ್ನೆಕಟ್ಟೆ ಮಾರ್ಗವಾಗಿ ಮಂಗಳೂರಿನಿಂದ ಎಂಆರ್‌ಪಿಎಲ್ (ಒಎನ್‌ಜಿಸಿ) ಕಡೆಗೆ ಸಂಚರಿಸುವ ವಾಹನಗಳು ಹೊಸಬೆಟ್ಟು-ಸುರತ್ಕಲ್ ಜಂಕ್ಷನ್ ಮಾರ್ಗವನ್ನು ಬಳಸಿಕೊಂಡು ಎಂಆರ್‌ಪಿಎಲ್ ತಲುಪಬೇಕು. ಎಂಆರ್‌ಪಿಎಲ್‌ನಿಂದ ಮಂಗಳೂರು ಕಡೆಗೆ ಬರುವ

ಮಂಗಳೂರು: ಹೊನ್ನೆಕಟ್ಟೆ-ಕಾನ ಮೇಲ್ಸೇತುವೆ ಸೆ.17 ರಿಂದ30ರ ತನಕ ಸಂಚಾರ ನಿಷೇಧ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಿಳಿಯಾರಿನಲ್ಲಿ ಈದ್ ಮಿಲಾದ್ ಪ್ರಯುಕ್ತ ಇಷ್ಕೆ ಮದೀನಾ ಬುರ್ದಾ ಮಜ್ಲಿಸ್ ಅಲಾಪನ ಕಾರ್ಯಕ್ರಮ

(ನ್ಯೂಸ್‌ ಕಡಬ) newskadaba.com,  ಸೆ.17 : ಹಿಮಾಯತುಲ್ ಇಸ್ಲಾಂ ಕಮಿಟಿ ಖಿಳ್ರಿಯ ಮಸ್ಜಿದ್ ಬಿಳಿಯಾರು ಅರಂತೋಡು ಇದರ ಆಶ್ರಯದಲ್ಲಿ   ಬಿಳಿಯಾರು ಮಸೀದಿ ವಠಾರದಲ್ಲಿ 15 ರಂದು ಬಿಳಿಯಾರು ಮಸೀದಿ ವಠಾರದಲ್ಲಿ  ನಡೆಯಿತು. ಇಷ್ಕೆ ಮದೀನಾ ಪ್ರಯುಕ್ತ ಪಯ್ಯಕ್ಕಿ ಉಸ್ತಾದ್ ಮೆಮೋರಿಯಲ್ ಕಾಲೇಜು ವಿದ್ಯಾರ್ಥಿ ಗಳಿಂದ ಬುರ್ದ ಮಜ್ಲಿಸ್ ಕಾರ್ಯಕ್ರಮ ನಡೆಯಿತು. ರಾತ್ರಿ 7 ಗಂಟೆಗೆ ಸಭಾ ಕಾರ್ಯಕ್ರಮ ವನ್ನೂ ಬಹು ಸಯ್ಯದ್ ಫಝಲ್ ಹಾಮಿದ್ ಕೊಯಮ್ಮ ತಂಘಲ್ ದುಗಲಡ್ಕ ಉದ್ಘಾಟಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಮೀದ್ ಹಾಜಿ ವಹಿಸಿದರು.ಪ್ರಾಸ್ತಾವಿಕ ಭಾಷಣ

ಬಿಳಿಯಾರಿನಲ್ಲಿ ಈದ್ ಮಿಲಾದ್ ಪ್ರಯುಕ್ತ ಇಷ್ಕೆ ಮದೀನಾ ಬುರ್ದಾ ಮಜ್ಲಿಸ್ ಅಲಾಪನ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top