ಕರಾವಳಿ

ಉಡುಪಿಯ ವಿಟ್ಲಪಿಂಡಿಯಲ್ಲಿ ವಿರಾಟ್ ಕೊಹ್ಲಿ ಹೋಲಿಕೆ ಇರುವ ಯುವಕ

(ನ್ಯೂಸ್‌ ಕಡಬ) newskadaba.com,  ಸೆ.17 ಉಡುಪಿ: ಶ್ರೀ ಕೃಷ್ಣ ಮಠದ ರಥಬೀದಿಯಲ್ಲಿ ನಡೆದ ವಿಟ್ಲಪಿಂಡಿ ಸಂಭ್ರಮಾಚರಣೆಗಳು ಈ ವರ್ಷ ಭಾರೀ ವಿಶೇಷವಾಗಿತ್ತು. ಕ್ರಿಕೆಟ್ ಅಭಿಮಾನಿಗಳಿಗೆ ಈ ಬಾರಿ ಅಚ್ಚರಿ ಕಾದಿತ್ತು. ಸಾಂಪ್ರದಾಯಿಕ ಮೆರವಣಿಗೆ ಮತ್ತು ಸಾಂಸ್ಕೃತಿಕ ಪ್ರದರ್ಶನಗಳ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಜಯೋತ್ಸವ ಪ್ರಮುಖ ಆಕರ್ಷಣೆಯಾಗಿತ್ತು. ಇದರಲ್ಲಿ ವಿರಾಟ್ ಕೊಹ್ಲಿ ಹೋಲಿಕೆ ಇರುವ ಯುವಕ ಎಲ್ಲರ ಗಮನ ಸೆಳೆದರು. ಆರ್‌ಸಿಬಿ ತಾರೆಯರಾದ ವಿರಾಟ್ ಕೊಹ್ಲಿ, ಕ್ರಿಸ್ ಗೇಲ್, ರೊಮಾರಿಯೋ ಶೆಫರ್ಡ್ ಮತ್ತು ಡ್ಯಾನಿಶ್ […]

ಉಡುಪಿಯ ವಿಟ್ಲಪಿಂಡಿಯಲ್ಲಿ ವಿರಾಟ್ ಕೊಹ್ಲಿ ಹೋಲಿಕೆ ಇರುವ ಯುವಕ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆರಾಯನ ಆಗಮನ

(ನ್ಯೂಸ್‌ ಕಡಬ) newskadaba.com,  ಸೆ.16 ಮಂಗಳೂರು/ಉಡುಪಿ: ಸ್ವಲ್ಪ ಸಮಯದ ವಿರಾಮದ ಬಳಿಕ, ಕರಾವಳಿ ಪ್ರದೇಶದ ಹಲವಾರು ಭಾಗಗಳಲ್ಲಿ ಸೋಮವಾರ ಬೆಳಿಗ್ಗೆ ಮತ್ತು ಮಧ್ಯಾಹ್ನ ಸಾಧಾರಣ ಮಳೆಯಾಗಿದೆ. ಕೆಲವು ಪ್ರದೇಶಗಳಲ್ಲಿ ಬರಗಾಲದಿಂದಾಗಿ ಭತ್ತದ ಬೆಳೆಗಳಿಗೆ ನೀರಿನ ಕೊರತೆ ಉಂಟಾಗಿತ್ತು, ಆದರೆ ಮಳೆಯು ಕೊಂಚ ರೈತರಿಗೆ ನೆಮ್ಮದಿ ತಂದಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸೋಮವಾರ ಸಾಧಾರಣ ಮಳೆಯಾಗಿದೆ. ಮಂಗಳೂರು, ಉಳ್ಳಾಲ, ಮೂಲ್ಕಿ ಮತ್ತು ಬಂಟ್ವಾಳದಲ್ಲಿ ಬೆಳಿಗ್ಗೆ ಮತ್ತು ಸಂಜೆ ಮಳೆಯಾದರೆ, ಉಳಿದ ದಿನಗಳಲ್ಲಿ ಬಿಸಿಲು ಮತ್ತು ಮೋಡ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆರಾಯನ ಆಗಮನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಸೌದಿ ಅರೇಬಿಯಾದಲ್ಲಿ ಭೀಕರ ಬಸ್ ಅಪಘಾತ; ಉಳ್ಳಾಲದ ಯುವಕನೋರ್ವ ಮೃತ್ಯು

(ನ್ಯೂಸ್‌ ಕಡಬ) newskadaba.com,  ಸೆ.16 ಮಂಗಳೂರು : ಸೌದಿ ಅರೇಬಿಯಾದಲ್ಲಿ ರವಿವಾರ ಸಂಜೆ ನಡೆದ ಭೀಕರ ಬಸ್ ಅಪಘಾತದಲ್ಲಿ ಉಳ್ಳಾಲದ ಮಿಲ್ಲತ್ ನಗರದ ಯುವಕ ಸಾವನ್ನಪ್ಪಿದ್ದಾರೆ. ಮೃತರನ್ನು ಉಳ್ಳಾಲದ ಮಿಲ್ಲತ್ ನಗರದ ನಿವಾಸಿ ಮೊಹಮ್ಮದ್ ಅವರ ಪುತ್ರ ಅಬ್ದುಲ್ ರಝಿಕ್ (27) ಎಂದು ಗುರುತಿಸಲಾಗಿದೆ. ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದ ರಝಿಕ್, ರವಿವಾರ ಸಂಜೆ ನೈಟ್ ಶಿಫ್ಟ್‌ಗೆ ತೆರಳುತ್ತಿದ್ದಾಗ ಅವರು ಪ್ರಯಾಣಿಸುತ್ತಿದ್ದ ಬಸ್ ಇನ್ನೊಂದು ಬಸ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೊಹಮ್ಮದ್

ಮಂಗಳೂರು: ಸೌದಿ ಅರೇಬಿಯಾದಲ್ಲಿ ಭೀಕರ ಬಸ್ ಅಪಘಾತ; ಉಳ್ಳಾಲದ ಯುವಕನೋರ್ವ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ಳಾರೆ ಮೂಲದ ವ್ಯಕ್ತಿ ತೆಂಗಿನಕಾಯಿ ಕೀಳುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ಸೆ.16 ಸುಳ್ಯ: ತೆಂಗಿನ ಮರದಿಂದ ಕಾಯಿ ಕೀಳುತ್ತಿದ್ದಾಗ ಅಲ್ಯೂಮೀನಿಯಂ ಗಳೆ ವಿದ್ಯುತ್ ಲೈನಿಗೆ ತಗುಲಿ ಕಾಯಿ ಕೊಯ್ಯುತ್ತಿದ್ದ ವ್ಯಕ್ತಿ ಮೃತಪಟ್ಟ ಘಟನೆ  ಬೆಳ್ಳಾರೆ ಬಳಿಯ ಅಯ್ಯನಕಟ್ಟೆಯಿಂದ ಸಂಭವಿಸಿದೆ. ಮೃತರಾದ ವ್ಯಕ್ತಿ ತಂಬಿನಮಕ್ಕಿಯ ರಾಮ ಎಂಬುವವರು ಎಂದು ಗುರುತಿಸಲಾಗಿದೆ.. ‌ ಅಯ್ಯನಕಟ್ಟೆಯ ಗೋಕುಲಂ ಎದುರುಗಡೆ ಇರುವ ಸಿದ್ದಿಕ್ ಎಂಬರಿಗೆ ಸೇರಿದ ತೆಂಗಿನ ಮರದಿಂದ ಕಾಯಿ ಕೀಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಳ್ಳಾರೆ ಮೂಲದ ವ್ಯಕ್ತಿ ತೆಂಗಿನಕಾಯಿ ಕೀಳುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದು ಮತ್ತು ನಾಳೆ ಅಡಿಗ ಟಿವಿಎಸ್ ವತಿಯಿಂದ ಹಬ್ಬದ ವಿಶೇಷ ಲೋನ್ ಮೇಳ ಹಾಗೂ ಎಕ್ಸ್ಚೇಂಜ್ ಮೇಳ

(ನ್ಯೂಸ್‌ ಕಡಬ) newskadaba.com,  ಸೆ.16 : ಅಡಿಗ ಟಿವಿಎಸ್ ವತಿಯಿಂದ ಹಬ್ಬದ ವಿಶೇಷ ಲೋನ್ ಮೇಳ ಹಾಗೂ ಎಕ್ಸ್ಚೇಂಜ್ ಮೇಳ ಇಂದು ಮತ್ತು ನಾಳೆ ನಡೆಯಲಿದ್ದು. *➤ ಜಿ ಎಸ್ ಟಿ ದರ ಕಡಿತದ ಲಾಭ 15000 ವರೆಗೆ ➤ ಪ್ರಿ – ಬುಕಿಂಗ್ ಆಫರ್ ಲಾಭ 5000/- ವರೆಗೆ ಹಾಗೂ ಅನೇಕ ಆಕರ್ಷಕ ಉಡುಗೊರೆಗಳು ಕಡಬ ತಾಲೂಕಿನಲ್ಲಿ ಕಳೆದ 9 ವರ್ಷಗಳಿಂದ ಟಿವಿಎಸ್ ವಾಹನಗಳ ಮಾರಾಟ ಹಾಗೂ ಸೇವೆಯಲ್ಲಿ ಹೆಸರುವಾಸಿಯಾಗಿರುವ,  ಟಿವಿಎಸ್ ಕಂಪೆನಿಯ ಅಧಿಕೃತ ಡೀಲರ್

ಇಂದು ಮತ್ತು ನಾಳೆ ಅಡಿಗ ಟಿವಿಎಸ್ ವತಿಯಿಂದ ಹಬ್ಬದ ವಿಶೇಷ ಲೋನ್ ಮೇಳ ಹಾಗೂ ಎಕ್ಸ್ಚೇಂಜ್ ಮೇಳ Read More »

ಕರಾವಳಿ

ಉಡುಪಿಯಲ್ಲಿ ಶ್ರೀ ಕೃಷ್ಣ ಲೀಲೋತ್ಸವ ಅದ್ಧೂರಿ ಸಂಭ್ರಮ – ಲಕ್ಷಾಂತರ ಭಕ್ತರು ಸಾಕ್ಷಿ

(ನ್ಯೂಸ್‌ ಕಡಬ) newskadaba.com,  ಸೆ.16 ಉಡುಪಿ :  ಬಹುನಿರೀಕ್ಷಿತ ಶ್ರೀ ಕೃಷ್ಣ ವಿಟ್ಲ ಪಿಂಡಿ ಮಹೋತ್ಸವ ಸೋಮವಾರ ಉಡುಪಿಯಲ್ಲಿ ಅದ್ಧೂರಿ ಸಂಭ್ರಮಕ್ಕೆ ಸಾಕ್ಷಿಯಾಯಿತು. ಈ ದಿನ ಲಕ್ಷಾಂತರ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ ಸಂಭ್ರಮಿಸಿದರು ಸೌರಮಾನ ಪಂಚಾಂಗದ ಪ್ರಕಾರ ರವಿವಾರ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮಧ್ಯರಾತ್ರಿ ಸಾಂಪ್ರದಾಯಿಕ ಅರ್ಘ್ಯ ಪ್ರಧಾನ ವಿಧಿವಿಧಾನದ ಬಳಿಕ ಹಬ್ಬದ ಆಚರಣೆಗಳು ಆರಂಭವಾದವು. ಸರಿಯಾಗಿ 12:11 ಕ್ಕೆ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ಶ್ರೀ

ಉಡುಪಿಯಲ್ಲಿ ಶ್ರೀ ಕೃಷ್ಣ ಲೀಲೋತ್ಸವ ಅದ್ಧೂರಿ ಸಂಭ್ರಮ – ಲಕ್ಷಾಂತರ ಭಕ್ತರು ಸಾಕ್ಷಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಹಲವು ವಿಷಯಗಳ ಬಗ್ಗೆ ಕುರಿತು ಗಂಭೀರ ಚರ್ಚೆ

(ನ್ಯೂಸ್‌ ಕಡಬ) newskadaba.com,  ಸೆ.16 ಬಂಟ್ವಾಳ  : ಬಂಟ್ವಾಳ ಪುರಸಭೆಯ ಸಾಮಾನ್ಯ ಸಭೆಯು ಪುರಸಭಾ ಅಧ್ಯಕ್ಷ ವಾಸು ಪೂಜಾರಿಯವರ ಅಧ್ಯಕ್ಷತೆಯಲ್ಲಿ ಸೋಮವಾರ(ಸೆ.15) ದಂದು ನಡೆಯಿತು. ಸಾಮಾನ್ಯ ಸಭೆಯಲ್ಲಿ ಯಾವುದೇ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಒಂದೇ ಒಂದು ಕಾನೂನು ಪ್ರಕಾರ ದಾಖಲೆಗಳು ಸಿಗುತ್ತಿಲ್ಲ. ಪುರಸಭೆಯ ಸದಸ್ಯರುಗಳಿಗೆ ಮರ್ಯಾದೆ ಇಲ್ಲವೇ? ನಾವೇನು ಕೆಲಸವಿಲ್ಲದೆ ಬಂದು ಇಲ್ಲಿ ಕುಳಿತುಕೊಂಡಿದ್ದೇವಾ? ಎಂದು ಅಧಿಕಾರಿಗಳಿಗೆ ಹಿರಿಯ ಸದಸ್ಯ ಎ.ಗೋವಿಂದ ಪ್ರಭುರವರು ಪ್ರಶ್ನಿಸಿದರು. ಘನತ್ಯಾಜ್ಯ ವಾಹನವೊಂದಕ್ಕೆ ಒಬ್ಬ ಡ್ರೈವರನ್ನು ನಿಯೋಜಿಸಿ ಆತನಿಗೆ ಫೆ.ಯಿಂದ ಜೂನ್ ವರೆಗೆ

ಬಂಟ್ವಾಳ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಹಲವು ವಿಷಯಗಳ ಬಗ್ಗೆ ಕುರಿತು ಗಂಭೀರ ಚರ್ಚೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿಯ ಪರ್ಕಳದಲ್ಲಿ ರಸ್ತೆ ದುರಸ್ತಿ ಕಾರ್ಯ ಆರಂಭ; ಪ್ರಯಾಣಿಕರು ನಿರಾಳ

(ನ್ಯೂಸ್‌ ಕಡಬ) newskadaba.com,  ಸೆ.15  : ಸಾರ್ವಜನಿಕರ ನಿರಂತರ ಬೇಡಿಕೆಯ ನಂತರ ಕೆಳ ಪರ್ಕಳದಲ್ಲಿ ರಸ್ತೆ ದುರಸ್ತಿ ಕಾರ್ಯ ಅಂತಿಮವಾಗಿ ಪ್ರಾರಂಭವಾಗಿದೆ. ಉಡುಪಿ-ಚಿಕ್ಕಮಗಳೂರು ಸಂಸದ ಶ್ರೀನಿವಾಸ್ ಪೂಜಾರಿ ಅವರು ಸ್ಥಳಕ್ಕೆ ಭೇಟಿ ನೀಡಿ ತಕ್ಷಣ ರಸ್ತೆ ದುರಸ್ತಿಪಡಿಸುವಂತೆ ಮತ್ತು ಸೆಪ್ಟೆಂಬರ್ 15, ಸೋಮವಾರದಿಂದಲೇ ಕಾಮಗಾರಿ ಆರಂಭಿಸುವಂತೆ ಸೂಚಿಸಿದ್ದರು. ಸಂಸದರು, ಶಾಸಕರು ಮತ್ತು ಜಿಲ್ಲಾಧಿಕಾರಿಗಳ ಆದೇಶದಂತೆ ಸೆಪ್ಟೆಂಬರ್ 15ರಿಂದ ರಸ್ತೆ ದುರಸ್ತಿ ಕಾಮಗಾರಿ ಆರಂಭಗೊಂಡಿದೆ. ಮೊದಲ ದಿನ, ಗುತ್ತಿಗೆದಾರರು ಕೆಳ ಪರ್ಕಳದ ಹತ್ತಿರ ಕಾಮಗಾರಿ ಆರಂಭಿಸಿದ್ದಾರೆ. ರಸ್ತೆ ಡಾಂಬರೀಕರಣ

ಉಡುಪಿಯ ಪರ್ಕಳದಲ್ಲಿ ರಸ್ತೆ ದುರಸ್ತಿ ಕಾರ್ಯ ಆರಂಭ; ಪ್ರಯಾಣಿಕರು ನಿರಾಳ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ಎಂಜಿನ್ ವೈಫಲ್ಯದಿಂದ ಮೀನುಗಾರಿಕಾ ಬೋಟ್‌ ಪಲ್ಟಿ – 13 ಮೀನುಗಾರರು ಅಪಾಯದಿಂದ

(ನ್ಯೂಸ್‌ ಕಡಬ) newskadaba.com,  ಸೆ.15  ಮಂಗಳೂರು : ಮೀನುಗಾರಿಕೆಗಾಗಿ ಆಳ ಸಮುದ್ರಕ್ಕೆ ತೆರಳಿದ್ದ ಮೀನುಗಾರಿಕೆ ಬೋಟ್‌ ಎಂಜಿನ್ ವೈಫಲ್ಯದಿಂದ ಸಮುದ್ರ ತಟದ ಕಲ್ಲು ಬಂಡೆಗಳಿಗೆ ಬಡಿದು ಪಲ್ಟಿ ಹೊಡೆದ ಘಟನೆ ಉಳ್ಳಾಲ ಸೀಗ್ರೌಂಡ್‌ನಲ್ಲಿ ಸೋಮವಾರ ಬೆಳಗ್ಗೆ ಘಟನೆ ನಡೆದಿದೆ. ಹಡಗಿನಲ್ಲಿದ್ದ 13 ಜನ  ಮೀನುಗಾರರ ಪ್ರಾಣ ಅಪಾಯದಿಂದ ಪಾರಾಗಿದ್ದಾರೆ. ಬುರಾಕ್ ಟ್ರಾಲರ್ ಎಂಬ ದೋಣಿ ಉಳ್ಳಾಲದ ಮುಕ್ಕಚ್ಚೇರಿ ನಿವಾಸಿ ಮೊಹಮ್ಮದ್ ಅಶ್ಫಾಕ್ ಅವರಿಗೆ ಸೇರಿದ್ದು, ರವಿವಾರ ರಾತ್ರಿ ಈ ಹಡಗು ಮಂಗಳೂರು ಬಂದರಿನಿಂದ ಕೇರಳದ ಕಡೆಗೆ ಆಳ

ಮಂಗಳೂರಿನಲ್ಲಿ ಎಂಜಿನ್ ವೈಫಲ್ಯದಿಂದ ಮೀನುಗಾರಿಕಾ ಬೋಟ್‌ ಪಲ್ಟಿ – 13 ಮೀನುಗಾರರು ಅಪಾಯದಿಂದ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸೆ. 16 ರಿಂದ ಮಂಗಳೂರಿನಲ್ಲಿ ಒಂದು ವಾರ ಪುಸ್ತಕ ಪ್ರದರ್ಶನ – ‘ಮಿಲಾಗ್ರಿಸ್‌ ಬುಕ್ ಕ್ವೆಸ್ಟ್’ ಆಯೋಜನೆ

(ನ್ಯೂಸ್‌ ಕಡಬ) newskadaba.com,  ಸೆ.15  ಮಂಗಳೂರು : ಮಿಲಾಗ್ರಿಸ್ ಕಾಲೇಜು ‘ಯೂಸ್ಡ್ ಬುಕ್ಸ್ ಆರ್’ ಸಹಯೋಗದೊಂದಿಗೆ ‘ಮಿಲಾಗ್ರಿಸ್ ಬುಕ್ ಕ್ವೆಸ್ಟ್ ಎಂಬ ಶೀರ್ಷಿಕೆಯಡಿಯಲ್ಲಿ ಒಂದು ವಾರದ ಪುಸ್ತಕ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಕಾಲೇಜು ಸಭಾಂಗಣದಲ್ಲಿ ಆಯೋಜಿಸುತ್ತಿದೆ. ಪ್ರದರ್ಶನವು ಸೆಪ್ಟೆಂಬರ್ 16 ರಿಂದ 21 ರವರೆಗೆ ನಡೆಯಲಿದೆ. ಈ ಕಾರ್ಯಕ್ರಮದ ಸಮಯದಲ್ಲಿ 3,000 ಕ್ಕೂ ಹೆಚ್ಚು ಪುಸ್ತಕಗಳನ್ನು ಪ್ರದರ್ಶಿಸಲಾಗುವುದು ಮತ್ತು ಮಾರಾಟಕ್ಕೂ ಲಭ್ಯವಿದೆ. ಪುಸ್ತಕ ಪ್ರಿಯರ ಜೊತೆಗೆ ಮಂಗಳೂರು ನಗರದ ಹಲವಾರು ಶಾಲೆಗಳು ಮತ್ತು ಕಾಲೇಜುಗಳ ವಿದ್ಯಾರ್ಥಿಗಳು

ಸೆ. 16 ರಿಂದ ಮಂಗಳೂರಿನಲ್ಲಿ ಒಂದು ವಾರ ಪುಸ್ತಕ ಪ್ರದರ್ಶನ – ‘ಮಿಲಾಗ್ರಿಸ್‌ ಬುಕ್ ಕ್ವೆಸ್ಟ್’ ಆಯೋಜನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top