ಕರಾವಳಿ

ಮಂಗಳೂರು: ನಕಲಿ ದಾಖಲೆಗಳನ್ನು ಸೃಷ್ಟಿಸಿ ಕ್ರಿಮಿನಲ್ ಪ್ರಕರಣಗಳ ಆರೋಪಿಗಳಿಗೆ ಜಾಮೀನು ಕೊಡಿಸುತ್ತಿದ್ದ ಜಾಲ ಬಂಧನ

(ನ್ಯೂಸ್‌ ಕಡಬ) newskadaba.com,  ಸೆ.13 ಮಂಗಳೂರು : ನಕಲಿ ದಾಖಲೆ ಸೃಷ್ಟಿಸಿ ಆರೋಪಿಗಳಿಗೆ ಜಾಮೀನು ಕೊಡಿಸುತ್ತಿದ್ದ ಗ್ಯಾಂಗ್ಗಳನ್ನು ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಭೇದಿಸಿದ್ದಾರೆ. ಖಚಿತ ಮಾಹಿತಿಯ ಆಧಾರದ ಮೇಲೆ, ಉರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಅಬ್ದುಲ್ ರೆಹಮಾನ್ ಎಂಬಾತನನ್ನು ಸಿಸಿಬಿ ಪೊಲೀಸರು ಸೆಪ್ಟೆಂಬರ್ 9ರಂದು ವಶಕ್ಕೆ ಪಡೆದಿದ್ದಾರೆ. ಈತ ವಿವಿಧ ಪ್ರಕರಣಗಳ ಆರೋಪಿಗಳಿಗೆ ಜಾಮೀನು ಕೊಡಿಸಲು ನಕಲಿ ಆಧಾರ್ ಕಾರ್ಡ್‌ಗಳು ಮತ್ತು ಆಸ್ತಿ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುತ್ತಿದ್ದ ಎಂದು ತಿಳಿದುಬಂದಿದೆ. ವಿಚಾರಣೆ ವೇಳೆ ಈತ […]

ಮಂಗಳೂರು: ನಕಲಿ ದಾಖಲೆಗಳನ್ನು ಸೃಷ್ಟಿಸಿ ಕ್ರಿಮಿನಲ್ ಪ್ರಕರಣಗಳ ಆರೋಪಿಗಳಿಗೆ ಜಾಮೀನು ಕೊಡಿಸುತ್ತಿದ್ದ ಜಾಲ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ತಮನ್ನಾ‌ ಜಬೀನ್, ಉಪಾಧ್ಯಕ್ಷರಾಗಿ ನೀಲಾವತಿ‌ ಶಿವರಾಂ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 12. ಕಡಬ ಪಟ್ಟಣ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ನ ತಮನ್ನಾ ಜಮೀನ್ ಹಾಗೂ ಉಪಾಧ್ಯಕ್ಷರಾಗಿ ನೀಲಾವತಿ ಶಿವರಾಂ ಆಯ್ಕೆಯಾಗಿದ್ದಾರೆ. ಹೊಸದಾಗಿ ರಚನೆಯಾದ ಪಟ್ಟಣ ಪಂಚಾಯತ್ ಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 8 ಸ್ಥಾನ ಹಾಗೂ ಬಿಜೆಪಿ 5 ಸ್ಥಾನ ಗೆದ್ದುಕೊಂಡಿತ್ತು. ಇಂದು ನಡೆದ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ನ ಅಧ್ಯಕ್ಷ ಅಭ್ಯರ್ಥಿ ತಮನ್ನಾ ಜಮೀನ್ ಹಾಗೂ ಉಪಾಧ್ಯಕ್ಷ ಅಭ್ಯರ್ಥಿಯಾಗಿ ನೀಲಾವತಿ ಶಿವರಾಂ ಮತ್ತು ಬಿಜೆಪಿಯ

ಕಡಬ ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ತಮನ್ನಾ‌ ಜಬೀನ್, ಉಪಾಧ್ಯಕ್ಷರಾಗಿ ನೀಲಾವತಿ‌ ಶಿವರಾಂ ಆಯ್ಕೆ Read More »

ಕರಾವಳಿ

ಉಡುಪಿ: ಮದುವೆ ನಿರಾಕರಿಸಿದ ಯುವತಿಗೆ ಚಾಕುವಿನಿಂದ ಇರಿದ ನೆರೆಮನೆಯ ಯುವಕ!

(ನ್ಯೂಸ್‌ ಕಡಬ) newskadaba.com,  ಸೆ.12 ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೊಕ್ಕರ್ಣೆಯಲ್ಲಿ 24 ವರ್ಷದ ಯುವತಿಯೊಬ್ಬರಿಗೆ ನೆರೆಮನೆಯ ಯುವಕ ಚಾಕುವಿನಿಂದ ಇರಿದ ಘಟನೆ ಶುಕ್ರವಾರ ನಡೆದಿದೆ. ಇರಿತಕ್ಕೊಳಗಾದ ಯುವತಿ ಸ್ಥಿತಿ ಗಂಭೀರವಾಗಿದೆ. ಕೊಕ್ಕರ್ಣೆಯ ಚೆಗ್ರಿಬೆಟ್ಟು ನಿವಾಸಿ ಸುರೇಶ್ ಪೂಜಾರಿ ಅವರ ಪುತ್ರಿ ರಕ್ಷಿತಾ ಅವರು ಇಂದು ಬೆಳಗ್ಗೆ 8.30 ರ ಸುಮಾರಿಗೆ ಪುಟ್ಟನಕಟ್ಟೆ ಬಳಿ ಬಸ್ ನಿಲ್ದಾಣದ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಕಾರ್ತಿಕ್(27) ಎಂಬ ಯುವಕ ಚಾಕುವಿನಿಂದ ಯುವತಿ ಮೇಲೆ ದಾಳಿ ನಡೆಸಿದ್ದಾರೆ. ಯುವತಿ ಬ್ರಹ್ಮಾವರದ ಸರ್ವೇ

ಉಡುಪಿ: ಮದುವೆ ನಿರಾಕರಿಸಿದ ಯುವತಿಗೆ ಚಾಕುವಿನಿಂದ ಇರಿದ ನೆರೆಮನೆಯ ಯುವಕ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಅತ್ಯುತ್ತಮ ಸೇವೆ ಸಲ್ಲಿಸಿದ 172 ಪೊಲೀಸ್‌ ಅಧಿಕಾರಿ, ಸಿಬ್ಬಂದಿಗೆ ಗೌರವಾರ್ಪಣೆ

(ನ್ಯೂಸ್‌ ಕಡಬ) newskadaba.com,  ಸೆ.12 ಮಂಗಳೂರು: ಅಪರಾಧ ಪ್ರಕರಣಗಳನ್ನು ಭೇದಿಸುವಲ್ಲಿ ಮತ್ತು ವಿವಿಧ ಕ್ಷೇತ್ರಗಳಲ್ಲಿ ಕರ್ತವ್ಯ ನಿರ್ವಹಿಸಿ ಕಾರ್ಯ ದಕ್ಷತೆಯನ್ನು ಮೆರೆದ ಮಂಗಳೂರು ನಗರ ಪೊಲೀಸರು ಸೆಪ್ಟೆಂಬರ್ 12 ರ ಶುಕ್ರವಾರ ಜಿಲ್ಲಾ ಪರೇಡ್ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಸನ್ಮಾನಿಸಿದರು. ಪೊಲೀಸ್ ಆಯುಕ್ತರು 32 ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸಾ ಪತ್ರಗಳನ್ನು ಮತ್ತು 121 ಸಿಬ್ಬಂದಿಗೆ ಪ್ರಮಾಣಪತ್ರಗಳೊಂದಿಗೆ ನಗದು ಬಹುಮಾನಗಳನ್ನು ನೀಡಿದರು. ಇದಲ್ಲದೆ, ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಮತ್ತು ಶಾಂತಿಯನ್ನು ಕಾಪಾಡುವಲ್ಲಿ ನೀಡಿದ

ಮಂಗಳೂರು: ಅತ್ಯುತ್ತಮ ಸೇವೆ ಸಲ್ಲಿಸಿದ 172 ಪೊಲೀಸ್‌ ಅಧಿಕಾರಿ, ಸಿಬ್ಬಂದಿಗೆ ಗೌರವಾರ್ಪಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಹೆದ್ದಾರಿ ಪ್ರಾಧಿಕಾರ, ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

(ನ್ಯೂಸ್‌ ಕಡಬ) newskadaba.com,  ಸೆ.12 ಮಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿನ ಗುಂಡಿಗಳಿಂದ ಸಂಭವಿಸಿದ ಅಪಘಾತಗಳಿಂದ ಹಲವಾರು ಸಾವು ನೋವುಗಳು ಸಂಭವಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ನಂತೂರು ವೃತ್ತದಲ್ಲಿ ಭಾರತೀಯ ಹೆದ್ದಾರಿ ಪ್ರಾಧಿಕಾರ ಮತ್ತು ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ಭಾಗವಾಗಿ, ಕಾಂಗ್ರೆಸ್ ನಾಯಕರು ಅಪಘಾತಗಳಲ್ಲಿ ಮೃತಪಟ್ಟವರ ಸಂಕೇತವಾಗಿ ನಕಲಿ ಮೃತದೇಹವನ್ನು ಹೊತ್ತುಕೊಂಡು ಪಂಪ್‌ವೆಲ್‌ನಲ್ಲಿರುವ ಎನ್‌ಎಚ್‌ಎಐ ಕಚೇರಿಗೆ ಮೆರವಣಿಗೆ ನಡೆಸಿದರು. ಅಲ್ಲಿ ಅವರು ಕಚೇರಿಗೆ ಘೇರಾವ್ ಹಾಕಲು ಪ್ರಯತ್ನಿಸಿದರು. ನಂತರ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದರು. NHAI

ಮಂಗಳೂರು: ಹೆದ್ದಾರಿ ಪ್ರಾಧಿಕಾರ, ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಾದಕ ದ್ರವ್ಯ ನಿಯಂತ್ರಣ: ಸಮನ್ವಯದಿಂದ ಕಾರ್ಯಾಚರಿಸಲು ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್‌ ಕಡಬ) newskadaba.com ಮಂಗಳೂರು,, ಸೆ. 12. ಮಾದಕ ದ್ರವ್ಯ ಚಟುವಟಿಕೆಗಳನ್ನು ನಿಯಂತ್ರಿಸಲು ಮತ್ತು ಜಾಗೃತಿ ಮೂಡಿಸಲು ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಲು ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಸೂಚಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾದಕ ದ್ರವ್ಯ ಸಮನ್ವಯ (ಓಅಔಖಆ)  ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾದಕ ದ್ರವ್ಯ ಕಳ್ಳಸಾಗಣೆ ಮತ್ತು ದುರುಪಯೋಗವನ್ನು ನಿಯಂತ್ರಿಸಲು ಕೇಂದ್ರ ಮತ್ತು ರಾಜ್ಯ ಸರಕಾರದ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಲು ಈ ಸಮಿತಿ ರಚಿಸಲಾಗಿದೆ. ಈ ನಿಟ್ಟಿನಲ್ಲಿ ವಿವಿಧ

ಮಾದಕ ದ್ರವ್ಯ ನಿಯಂತ್ರಣ: ಸಮನ್ವಯದಿಂದ ಕಾರ್ಯಾಚರಿಸಲು ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ

ಮಟ್ಕಾ ಲಾಟರಿ ಕಟ್ಟುನಿಟ್ಟಿನ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್‌ ಕಡಬ) newskadaba.com ಮಂಗಳೂರು, ಸೆ. 12. ಜಿಲ್ಲೆಯಲ್ಲಿ ಮಟ್ಕಾ ಹಾಗೂ ಲಾಟರಿ ಹಾವಳಿಯನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಸೂಚಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅನಧಿಕೃತ ಲಾಟರಿ ಹಾವಳಿಯ ನಿಯಂತ್ರಣದ ಸಂಬಂಧ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಲಾಟರಿ ಮತ್ತು ಮಟ್ಕಾಕ್ಕೆ ಸಂಪೂರ್ಣ ನಿಷೇಧವಿದ್ದು, ಈ ನಿಟ್ಟಿನಲ್ಲಿ ಆಗ್ಗಿಂದಾಗೆ ತಪಾಸಣೆ ನಡೆಸುವಂತೆ ಅವರು ತಿಳಿಸಿದರು. ಸಣ್ಣ ಉಳಿತಾಯ ಇಲಾಖೆ ಸಹಾಯಕ ನಿರ್ದೇಶಕ ಪ್ರಸನ್ನ ಅವರು ಮಾತನಾಡಿ,

ಮಟ್ಕಾ ಲಾಟರಿ ಕಟ್ಟುನಿಟ್ಟಿನ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ

ವೆನ್‍ ಲಾಕ್ ಕ್ಯಾಥ್‍ ಲ್ಯಾಬ್ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್‌ ಕಡಬ) newskadaba.com ಸೆ. 12. ಹೃದ್ರೋಗಕ್ಕೆ ಸಂಬಂಧಪಟ್ಟ ಉನ್ನತ ಚಿಕಿತ್ಸೆ ಒದಗಿಸಲು ಜಿಲ್ಲಾ ವೆನ್‍ ಲಾಕ್ ಆಸ್ಪತ್ರೆಯಲ್ಲಿ ನಿರ್ಮಾಣಗೊಂಡಿರುವ ಕ್ಯಾಥ್‍ಲ್ಯಾಬ್ ಘಟಕವನ್ನು ಶೀಘ್ರದಲ್ಲಿ ಕಾರ್ಯಚರಣೆಗೊಳಿಸುವಂತೆ ಜಿಲ್ಲಾಧಿಕಾರಿ ಹೆಚ್. ವಿ  ದರ್ಶನ್ ಸೂಚಿಸಿದ್ದಾರೆ. ಅವರು ಗುರುವಾರದಂದು ಜಿಲ್ಲಾ ವೆನ್‍ ಲಾಕ್ ಆಸ್ಪತ್ರೆಯಲ್ಲಿ ನಡೆದ ಆರೋಗ್ಯ ರಕ್ಷಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೆನ್‍ ಲಾಕ್ ಹೊಸ ಸರ್ಜಿಕಲ್ ಕಟ್ಟಡದ ತಳ ಅಂತಸ್ತಿನಲ್ಲಿ ಸುಸಜ್ಜಿತ ಕ್ಯಾಥ್‍ಲ್ಯಾಬ್ ನಿರ್ಮಾಣಗೊಂಡಿದ್ದು, ಅತ್ಯಾಧುನಿಕ ವೈದ್ಯಕೀಯ ಉಪಕರಣಗಳು, ತಜ್ಞ ವೈದ್ಯರು ಮತ್ತು ತಂತ್ರಜ್ಞಾನ ಸಿಬ್ಬಂದಿಗಳನ್ನು

ವೆನ್‍ ಲಾಕ್ ಕ್ಯಾಥ್‍ ಲ್ಯಾಬ್ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ

ಸೌಂದರ್ಯ ಸ್ಪರ್ಧೆಯಲ್ಲಿ ಮಿಂಚಿದ ಮಂಗಳೂರು ಸಹೋದರ – ಸಹೋದರಿ!

(ನ್ಯೂಸ್‌ ಕಡಬ) newskadaba.com,  ಸೆ.12 ಮಂಗಳೂರು : ನಗರದ ಬಜಾಲ್‌ನ ಸಹೋದರ-ಸಹೋದರಿಯರಾದ 11 ವರ್ಷದ ವಿಯಾ ಸಾಯಿ ಮತ್ತು 5 ವರ್ಷದ ಲಹರ್ ಸಾಯಿ, ಬೆಂಗಳೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಸೌಂದರ್ಯ ಸ್ಪರ್ಧೆಯಲ್ಲಿ ಮಿಂಚಿದ್ದಾರೆ. ಇವರ ಸಾಧನೆ ಮಂಗಳೂರಿಗರಿಗೆ ಹೆಮ್ಮೆ ಮತ್ತು ಸಂತೋಷದ ವಿಷಯವಾಗಿದೆ. ಬೆಂಗಳೂರಿನ ಕಿಂಗ್ಸ್ ಮೆಡಮ್ಸ್ ಹೋಟೆಲ್ ನಲ್ಲಿ ಆಯೋಜಿಸಿದ್ದ ರಾಷ್ಟ್ರಮಟ್ಟದ ಮಿಸ್ ಅಂಡ್ ಮಿಸ್ಸೆಸ್ ಅಸ್ತ್ರಲ್ ಸೌಂದರ್ಯ ಸ್ಪರ್ಧೆಯಲ್ಲಿ, ಲಿಟಲ್ ಮಿಸ್ಟರ್ ಇಂಡಿಯಾ ರನ್ನರ್ ಅಪ್ ಪ್ರಶಸ್ತಿಯನ್ನು ಲಹರಿ ಸಾಯಿ ಹಾಗೂ ಸಹೋದರಿ ವಿಯಾ

ಸೌಂದರ್ಯ ಸ್ಪರ್ಧೆಯಲ್ಲಿ ಮಿಂಚಿದ ಮಂಗಳೂರು ಸಹೋದರ – ಸಹೋದರಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಾರ್’ಇವಾನಿಯೋಸ್ ಕಾಲೇಜು ಕುಂತೂರು ಬಿ.ಇಡಿ ಪ್ರಶಿಕ್ಷಾರ್ಥಿಗಳ ಪರೀಕ್ಷಾ ಫಲಿತಾಂಶ ಪ್ರಕಟ

(ನ್ಯೂಸ್‌ ಕಡಬ) newskadaba.com ಕಡಬ, ಸೆ. 12. ಮಂಗಳೂರು ವಿಶ್ವ ವಿದ್ಯಾನಿಲಯದ ಬಿ.ಇಡಿ ವಿಭಾಗದಲ್ಲಿ 2025ರ ಆಗಸ್ಟ್‍ ನಲ್ಲಿ ನಡೆದ ಪ್ರಥಮ ಹಾಗೂ ತೃತೀಯ ಸೆಮಿಸ್ಟರ್ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಿಂದ ಪರೀಕ್ಷೆಗೆ ಹಾಜರಾದ ಎಲ್ಲಾ ಪ್ರಶಿಕ್ಷಣಾರ್ಥಿಗಳು ಉತ್ತಮ ಅಂಕಗಳೊಂದಿಗೆ ಉತ್ತಿರ್ಣರಾಗಿದ್ದು, ಪ್ರಥಮ ಸೆಮಿಸ್ಟರ್‍ ನಲ್ಲಿ ಶೇ.97 ಮತ್ತು ತೃತೀಯ ಸೆಮಿಸ್ಟರ್‍ ನಲ್ಲಿ ಶೇ.100 ಫಲಿತಾಂಶ ಬಂದಿರುತ್ತದೆ. ಪ್ರಥಮ ಸೆಮಿಸ್ಟರ್‍ ನಲ್ಲಿ ಪರೀಕ್ಷೆಗೆ ಹಾಜರಾದ 47 ಪ್ರಶಿಕ್ಷಣಾರ್ಥಿಗಳಲ್ಲಿ 40 ಪ್ರಶಿಕ್ಷಣಾರ್ಥಿಗಳು ಅತಿ

ಮಾರ್’ಇವಾನಿಯೋಸ್ ಕಾಲೇಜು ಕುಂತೂರು ಬಿ.ಇಡಿ ಪ್ರಶಿಕ್ಷಾರ್ಥಿಗಳ ಪರೀಕ್ಷಾ ಫಲಿತಾಂಶ ಪ್ರಕಟ Read More »

ಕರಾವಳಿ
Scroll to Top