ಕರಾವಳಿ

ಯುವನಿಧಿ ಫಲಾನುಭವಿಗಳಿಗೆ ಅಲ್ಪಾವಧಿ ಉಚಿತ ಕೌಶಲ್ಯ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 08. ನಗರದ ಕದ್ರಿಹಿಲ್ಸ್‍ ನಲ್ಲಿರುವ ಮಹಿಳಾ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆಜಿಟಿಟಿಐ)ಯಲ್ಲಿ ಡಿಪ್ಲೋಮಾ/ಪದವಿ ಪೂರೈಸಿರುವ ಯುವನಿಧಿ ಫಲಾನುಭವಿಗಳಿಗೆ ಉಚಿತ ಕೌಶಲ್ಯ ತರಬೇತಿ ನೀಡಿ ಉದ್ಯೋಗಸ್ಥರನ್ನಾಗಿಸುವ ಉದ್ದೇಶದಿಂದ ಅರ್ಹ ಅಭ್ಯರ್ಥಿಗಳಿಗೆ ಉಚಿತ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ:0824-2211477, 8277741731 ಸಂಪರ್ಕಿಸಬಹುದು ಎಂದು ಕೆ.ಜಿ.ಟಿ.ಟಿ.ಐ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯುವನಿಧಿ ಫಲಾನುಭವಿಗಳಿಗೆ ಅಲ್ಪಾವಧಿ ಉಚಿತ ಕೌಶಲ್ಯ ತರಬೇತಿ Read More »

ಕರಾವಳಿ

ಸರಸ್ವತೀ ವಿದ್ಯಾಲಯದ ವಿದ್ಯಾರ್ಥಿಗಳು ಕಬಡ್ಡಿಯಲ್ಲಿ ಪ್ರಾಂತ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 08.  ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಶ್ರೀರಾಮ ಶಾಲೆ ಕಲ್ಲಡ್ಕದಲ್ಲಿ ಸೆಪ್ಟೆಂಬರ್ 5 ರಂದು ನಡೆದ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ 14ರ ವಯೋಮಾನದ ಬಾಲಕರ ವಿಭಾಗದಲ್ಲಿ ಸರಸ್ವತೀ ವಿದ್ಯಾಲಯದ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದು ಪ್ರಾಂತ ಮಟ್ಟಕ್ಕೆ ಆಯ್ಕೆಯಾಗಿರುದ್ದಾರೆ. ಪಂದ್ಯಾಟದಲ್ಲಿ ಚೈತ್ರೇಶ್ 8ನೇ ತರಗತಿ ಬೆಸ್ಟ್ ಆಲ್ ರೌಂಡರ್ ಆಗಿ, ಹೇಮಂತ್ ಎಂ.ಎ 8ನೇ ತರಗತಿ ಉತ್ತಮ ಹಿಡಿತಗಾರರಾಗಿ ಆಯ್ಕೆಯಾಗಿರುತ್ತಾರೆ. ತಂಡದಲ್ಲಿ 7ನೇ ತರಗತಿಯ ನಿಶ್ಮಿತ್ ಪುರಿಯ,

ಸರಸ್ವತೀ ವಿದ್ಯಾಲಯದ ವಿದ್ಯಾರ್ಥಿಗಳು ಕಬಡ್ಡಿಯಲ್ಲಿ ಪ್ರಾಂತ ಮಟ್ಟಕ್ಕೆ ಆಯ್ಕೆ Read More »

ಕರಾವಳಿ, ಕ್ರೀಡಾ ನ್ಯೂಸ್

ಇನ್ನೂ ಬಗೆಹರಿಯದ ಕೆಂಪು ಕಲ್ಲು ಗಣಿಗಾರಿಕೆ ಸಮಸ್ಯೆ; ರಾಜ್ಯ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಸೆ.16ರಂದು ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನಾ ಧರಣಿ: ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 08. ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗದಲ್ಲಿ ಕೆಂಪು ಕಲ್ಲು ಗಣಿಗಾರಿಕೆ ಸಂಬಂಧ ರಾಯಲ್ಟಿ ಹೆಚ್ಚಳ ಮಾಡಿ ಕಠಿಣ ನಿಯಮ ರೂಪಿಸಿರುವುದರಿಂದ ಎದುರಾಗಿರುವ ಗಂಭೀರ ಸಮಸ್ಯೆಗೆ ಇನ್ನು ಕೂಡ ರಾಜ್ಯ ಕಾಂಗ್ರೆಸ್‌ ಸರ್ಕಾರದಿಂದ ಸೂಕ್ತ ಪರಿಹಾರ ದೊರೆಯದಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಘಟಕದಿಂದ  ಸೆ. 1‍6ರಂದು ಬೃಹತ್‌ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಮಂಗಳೂರು

ಇನ್ನೂ ಬಗೆಹರಿಯದ ಕೆಂಪು ಕಲ್ಲು ಗಣಿಗಾರಿಕೆ ಸಮಸ್ಯೆ; ರಾಜ್ಯ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಸೆ.16ರಂದು ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನಾ ಧರಣಿ: ಸಂಸದ ಕ್ಯಾ. ಚೌಟ Read More »

ಕರಾವಳಿ

ಸರಸ್ವತಿ ವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 08. ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಸೆಪ್ಟೆಂಬರ್ 6ರಂದು ಆಚರಿಸಲಾಯಿತು. 10ನೇ ತರಗತಿಯ ವಿದ್ಯಾರ್ಥಿಗಳಾದ ಸಿಂಚನಾ ಕೆ.ಎಸ್ ಮತ್ತು ರಕ್ಷಾ ಎಂ.ಜೆ. ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಜೀವನದ ಘಟನೆಗಳನ್ನು ಹೇಳುತ್ತಾ ಶಿಕ್ಷಕರ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ಶ್ರೀಮತಿ ಶೈಲಾ ಶ್ರೀ ರೈ ಎಸ್. ಹಾಗೂ ಎಲ್ಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಸರಸ್ವತಿ ವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ Read More »

ಕರಾವಳಿ

ಮಂಗಳೂರು : ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಎದುರಿನ ರಸ್ತೆಯಲ್ಲಿ ಡ್ರೈನೇಜ್ ದುಸ್ಥಿತಿ

(ನ್ಯೂಸ್‌ ಕಡಬ) newskadaba.com,  ಸೆ.08 ಮಂಗಳೂರು: ಸ್ಮಾರ್ಟ್ ಸಿಟಿ ಹೆಸರಿನಲ್ಲಿ ಅಭಿವೃದ್ದಿ ಹೊಂದುತ್ತಿರುವ ಮಂಗಳೂರು ನಗರದ ಕೆಲವು ರಸ್ತೆಗಳು ಯಾವ ದುಸ್ಥಿತಿಯಲ್ಲಿವೆ ಎಂದು ಎಲ್ಲರಿಗೂ ತಿಳಿದಿರುವ ವಿಚಾರ. ಇದರ ಜೊತೆ ನಗರದ ಕೆಲವೆಡೆ ಡ್ರೈನೇಜ್ ಹೋಲ್ ಗಳು ಬಾಯ್ದೆರೆದು ಗಲೀಜು ನೀರು ರಸ್ತೆಯಲ್ಲಿ ಹರಿಯುತ್ತಿರುವ ಸನ್ನಿವೇಶಗಳು ಪದೇ ಪದೇ ಬೆಳಕಿಗೆ ಬರುತ್ತಿವೆ. ಇದೇ ರೀತಿಯ ಸಮಸ್ಯೆ ಮಂಗಳೂರಿನ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದ ಎದುರಿನ ರಸ್ತೆಯಲ್ಲಿ ಕಂಡು ಬಂದಿದೆ. ಈ ಭಾಗದಲ್ಲಿ ಕಾಪಿಕಾಡ್ ಗೆ ಹೋಗುವ

ಮಂಗಳೂರು : ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಎದುರಿನ ರಸ್ತೆಯಲ್ಲಿ ಡ್ರೈನೇಜ್ ದುಸ್ಥಿತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಿಕ್ಷಕಿಯರಿಗೆ ಶಿವಳ್ಳಿ ಸ್ಪಂದನ ಸನ್ಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 08. ಶಿವಳ್ಳಿ ಸ್ಪಂದನ ಕದ್ರಿವಲಯದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ  ಶಿಕ್ಷಕಿಯರಾದ  ಅಹಲ್ಯ ವೆಂಕಟರಾಜ್ ಮತ್ತು  ಪದ್ಮನಯನ ಸಂಪತ್ ಕುಮಾರ್ ಅವರನ್ನು ಅವರ ಮನೆಯಲ್ಲಿ ಸನ್ಮಾನಿಸಲಾಯಿತು. ಮಂಗಳೂರು ಶಿವಳ್ಳಿ ಸ್ಪಂದನ ಉಪಾಧ್ಯಕ್ಷ ರಾಮಚಂದ್ರ ಭಟ್ ಎಲ್ಲೂರು, ದ.ಕ. ಜಿಲ್ಲಾ ಪತ್ರಕರ್ತ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಶಿವಳ್ಳಿ ಸ್ಪಂದನ ಮಹಿಳಾ ಘಟಕದ ಅಧ್ಯಕ್ಷೆ ರಮಾಮಣಿ, ಶಿವಳ್ಳಿ ಸ್ಪಂದನ  ಕದ್ರಿವಲಯದ ಕಾರ್ಯದರ್ಶಿ ಶೀಲಾ ಜಯಪ್ರಕಾಶ, ಜೊತೆಕಾರ್ಯದರ್ಶಿ ವನಿತಾ ಎಲ್ಲೂರು, ಕೋಶಾಧಿಕಾರಿ ರವಿಕಾಂತ ಭಟ್,

ಶಿಕ್ಷಕಿಯರಿಗೆ ಶಿವಳ್ಳಿ ಸ್ಪಂದನ ಸನ್ಮಾನ Read More »

ಕರಾವಳಿ

ಬಂಟ್ವಾಳ: ಬ್ರಹ್ಮ ಶ್ರೀ ನಾರಾಯಣ ಗುರುಗಳ 171 ನೇ ಜನ್ಮ ದಿನಾಚರಣೆಯ ಅಂಗವಾಗಿ ಗುರು ಜಯಂತಿ ಆಚರಣೆ

(ನ್ಯೂಸ್‌ ಕಡಬ) newskadaba.com,  ಸೆ.08 ಬಂಟ್ವಾಳ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬಂಟ್ವಾಳ ಇದರ ಆಶ್ರಯದಲ್ಲಿ ನಾರಾಯಣ ಗುರು ವಸತಿ ಶಾಲೆ ಪುಂಜಾಲಕಟ್ಟೆ, ಯುವವಾಹಿನಿ (ರಿ.) ಬಂಟ್ವಾಳ ತಾಲೂಕು ಘಟಕ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ (ರಿ.) ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಂಘ ಇದರ ಸಹಯೋಗದೊಂದಿಗೆ ಬ್ರಹ್ಮ ಶ್ರೀ ನಾರಾಯಣ ಗುರುಗಳ 171 ನೇ ಜನ್ಮದಿನಾಚರಣೆಯ ಅಂಗವಾಗಿ ತಾಲೂಕು ಮಟ್ಟದ ಗುರು ಜಯಂತಿ ಆಚರಣೆ ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು

ಬಂಟ್ವಾಳ: ಬ್ರಹ್ಮ ಶ್ರೀ ನಾರಾಯಣ ಗುರುಗಳ 171 ನೇ ಜನ್ಮ ದಿನಾಚರಣೆಯ ಅಂಗವಾಗಿ ಗುರು ಜಯಂತಿ ಆಚರಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ-ಕಾಡಾನೆಗಳ ಹಿಂಡು ಲಗ್ಗೆ- ವಾಹನ ಸಂಚಾರಕ್ಕೆ ತಡೆ, ಕೃಷಿ ನಾಶ

(ನ್ಯೂಸ್‌ ಕಡಬ) newskadaba.com,  ಸೆ.06 ಸುಳ್ಯ:ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಪಾಲಡ್ಕ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಸ್ಥಳೀಯರ ತೋಟಗಳಿಗೆ ನುಗ್ಗಿದ ಕಾಡಾನೆಗಳು ,ಅಡಿಕೆ,ತೆಂಗು,ಬಾಳೆ ಇತರ ಕೃಷಿಗಳನ್ನು ನಾಶ ಮಾಡಿದ ಪರಿಣಾಮ ರೈತರಿಗೆ ಅಪಾರ ಬೆಳೆ ನಷ್ಟವಾದ ಘಟನೆ ಉಂಟಾಗಿದೆ. ಬಳಿಕ ಸ್ಥಳೀಯರೆಲ್ಲ ಸೇರಿ ಆನೆಗಳನ್ನು ಕಾಡಿಗೆ ಅಟ್ಟಿದ್ದರು. ಪೂಮಲೆ ಕಾಡಿನಲ್ಲಿ ಕಾಡಾನೆಗಳು ಹಗಲು ಹೊತ್ತಿನಲ್ಲಿ ಬೀಡುಬಿಡುತ್ತಿದ್ದು, ಮತ್ತೆ ರಾತ್ರಿ ಸಮಯ ಕಾಡಾನೆಗಳು ರಾಷ್ಟ್ರೀಯ ಹೆದ್ದಾರಿ ಅಂಚಿನಲ್ಲಿರುವ ತೋಟಗಳಿಗೆ ನುಗ್ಗಿ ಬೆಳೆ ನಾಶ ಪಡಿಸುತ್ತಿವೆ. ಬೆಳೆ

ಸುಳ್ಯ-ಕಾಡಾನೆಗಳ ಹಿಂಡು ಲಗ್ಗೆ- ವಾಹನ ಸಂಚಾರಕ್ಕೆ ತಡೆ, ಕೃಷಿ ನಾಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಉಜಿರೆಯಲ್ಲಿ ಬೈಕ್‌ಗೆ ಲಾರಿ ಢಿಕ್ಕಿ; ಚಿಕಿತ್ಸೆ ಫಲಿಸದೆ ಸವಾರ ಸಾವು

(ನ್ಯೂಸ್‌ ಕಡಬ) newskadaba.com,  ಸೆ.06 ಬೆಳ್ತಂಗಡಿ : ರಾಷ್ಟ್ರೀಯ ಹೆದ್ದಾರಿಯ ಉಜಿರೆ-ಚಾರ್ಮಾಡಿ ರಸ್ತೆಯಲ್ಲಿ ಸೆ. ೩ರಂದು ಲಾರಿ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸೆ. 4ರ ಸಂಜೆ ಮೃತಪಟ್ಟಿದ್ದಾರೆ. ಮೃತರನ್ನು ಕಡಿರುದ್ಯಾವರ ಗ್ರಾಮದ ಮಲ್ಲಡ್ಕ ಸಮೀಪದ ನಿವಾಸಿ ಪುರುಷೋತ್ತಮ ಅಲಿಯಾಸ್ ಬಾಲು (44) ಎಂದು ಗುರುತಿಸಲಾಗಿದೆ. ಮೃತರು ಕ್ವಾರಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಅವರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಬೆಳ್ತಂಗಡಿ: ಉಜಿರೆಯಲ್ಲಿ ಬೈಕ್‌ಗೆ ಲಾರಿ ಢಿಕ್ಕಿ; ಚಿಕಿತ್ಸೆ ಫಲಿಸದೆ ಸವಾರ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಪಿಲ್ಯ ಮೆಗಾ ಆಫರ್!!! ವಿಜೇತ ಮಹಿಳೆಗೆ ಮಾರುತಿ ಸ್ವಿಫ್ಟ್ ಕಾರು ಹಸ್ತಾಂತರ

(ನ್ಯೂಸ್‌ ಕಡಬ) newskadaba.com ಸೆ.06 : ಕಡಬ: ಕಡಬದ ಪ್ರಸಿದ್ಧ ವಸ್ತ್ರ ಪಿಲ್ಯ ಫ್ಯಾಶನ್ ಮತ್ತು ಪಿಲ್ಯ ಮ್ಯಾಚಿಂಗ್ ಸೆಂಟರ್ ಆಯೋಜಿಸಲಾಗಿದ್ದ 180 ದಿನ 180 ಬಹುಮಾನ ಮೆಗಾ ಆಫರ್ ಬಂಪರ್ ಬಹುಮಾನ ಕಡಬ ತಾಲೂಕಿನ ಮರ್ಧಾಳ ನಿವಾಸಿ ರಂಝೀನ ಎಂಬ ಮಹಿಳೆಗೆ ಮಾರುತಿ ಸ್ವಿಫ್ಟ್ ರಾರು ಒಳಿದಿತ್ತು. ಈ ಕಾರು ಹಸ್ತಾಂತರ ಕಾರ್ಯಕ್ರಮ ಸೆ.4 ರಂದು ಕಢಬದಲ್ಲಿ  ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ದಯಾನಂದ ನಾಯ್ಕ್ ಮೇಲಿನ ಮನೆ ವಹಿಸಿದ್ದರು. ಕಾರ್ಯಕ್ರಮ ದಲ್ಲಿ ಗಣ್ಯ ಅಥಿತಿಗಳಾಗಿ ಸೈಯ್ಯದ್ ಮಿರಾನ್

ಕಡಬ: ಪಿಲ್ಯ ಮೆಗಾ ಆಫರ್!!! ವಿಜೇತ ಮಹಿಳೆಗೆ ಮಾರುತಿ ಸ್ವಿಫ್ಟ್ ಕಾರು ಹಸ್ತಾಂತರ Read More »

ಕರಾವಳಿ
Scroll to Top