ಕರಾವಳಿ

ಕಡಬ: ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸೈಂಟ್ ಆನ್ಸ್ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಜು. 30. ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಪುತ್ತೂರು ಹಾಗೂ ಸಂತ ಜೋಕಿಮ್ ಪ್ರಾಥಮಿಕ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಕಡಬ ಸೈಂಟ್ ಜೋಕಿಮ್ಸ್ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಪ್ರೌಢಶಾಲಾ ಹಾಗೂ ಪ್ರಾಥಮಿಕ ವಿಭಾಗದ ಮಕ್ಕಳ 17ರ ಹಾಗೂ 14ನೇ ವಯೋಮಾನದ ಪಂದ್ಯಾಟದಲ್ಲಿ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು, 17ರ ವಯೋಮಾನದ ಕೆಳಗಿನ ಹಾಗೂ 14ನೇ ವಯೋಮಾನದ ಕೆಳಗಿನ ಬಾಲಕ ಹಾಗೂ ಬಾಲಕಿಯರು ಪ್ರಥಮ ಸ್ಥಾನವನ್ನು […]

ಕಡಬ: ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸೈಂಟ್ ಆನ್ಸ್ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪ್ರಧಾನಿ ಮೋದಿ ವೀಡಿಯೊ ಬ್ಲಾಕ್ ಪ್ರಕರಣ: ಕೇಂದ್ರ ಸರ್ಕಾರಕ್ಕೆ ಮೆಟಾ ಕ್ಷಮೆಯಾಚನೆ!

(ನ್ಯೂಸ್‌ ಕಡಬ) newskadaba.com,  ಜು.30  : ಜುಲೈ 23ರಂದು ಪರೀಕ್ಷಾ ಪತ್ರಿಕೆ ಸೋರಿಕೆ ವಿರೋಧಿಸಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆಗೆ ಸಂಬಂಧಿಸಿದಂತೆ, ಪ್ರಧಾನಿ ನರೇಂದ್ರ ಮೋದಿ ಅವರು ‘ಜೆನ್ ಝಿ’ ಯುವಕರನ್ನು ಉದ್ದೇಶಿಸಿ ಮಾತನಾಡಿದ್ದ ವೀಡಿಯೊವನ್ನು ಫೇಸ್‌ಬುಕ್‌ನಲ್ಲಿ ತಾತ್ಕಾಲಿಕವಾಗಿ ಬ್ಲಾಕ್ ಮಾಡಲಾಗಿತ್ತು. ಕೃತಕ ಬುದ್ಧಿಮತ್ತೆ ಆಧಾರಿತ ಕಂಟೆಂಟ್ ಮಾಡರೇಶನ್ ವ್ಯವಸ್ಥೆಯಲ್ಲಾದ ದೋಷದಿಂದ ಹೀಗಾಗಿದೆ ಎಂದು ಸ್ಪಷ್ಟನೆ ನೀಡಿದ ಮೆಟಾ, ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಕ್ಷಮೆಯಾಚಿಸಿದೆ.ಮೆಟಾ ಸಂಸ್ಥೆಯ ಕ್ಷಮೆಯಾಚನೆಯನ್ನು ಸ್ವೀಕರಿಸಿದರೂ, “ತಾಂತ್ರಿಕ ದೋಷ” ಎಂಬ ಕಾರಣಕ್ಕೆ ಸರ್ಕಾರ ತೃಪ್ತಿ

ಪ್ರಧಾನಿ ಮೋದಿ ವೀಡಿಯೊ ಬ್ಲಾಕ್ ಪ್ರಕರಣ: ಕೇಂದ್ರ ಸರ್ಕಾರಕ್ಕೆ ಮೆಟಾ ಕ್ಷಮೆಯಾಚನೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ:ಸರಕಾರಿ ಮಾದರಿ ಶಾಲೆಗೆ ವಿಜ್ಞಾನ ಮಾದರಿಗಳ ಕೊಡುಗೆ

(ನ್ಯೂಸ್‌ ಕಡಬ) newskadaba.com,  ಜು.30  ಕಡಬ: ಕುತೂಹಲಗಳೇ ಹಲವು ಸಂಶೋಧನೆಗಳಿಗೆ ಕಾರಣವಾಗಿದೆ ಎನ್ನುವುದು ನಮಗೆಲ್ಲಾ ತಿಳಿದ ಸಂಗತಿಯಾಗಿದೆ. ಅದೇ ರೀತಿ ಮಕ್ಕಳು ಎಳೆವೆಯಲ್ಲಿಯೇ ವೈಜ್ಞಾನಿಕತೆಯ ಬಗ್ಗೆ ಆಸಕ್ತಿ ಅಗತ್ಯ ತೆಳೆಯುವುದರಿಂದ ಅದು ಭವಿಷ್ಯದಲ್ಲಿ  ಹೆಚ್ಚಿನ ಸಾಧನೆಗಳಿಗೆ ಬುನಾದಿಯಾಗಲು ಸಾಧ್ಯ ಎಂದು ಬ್ಯಾಂಕ್‌ ಆಫ್‌ ಬರೋಡ ಸಂಯೋಜಿತ ವಿಜಯ ಗ್ರಾಮೀಣ ಅಭಿವೃದ್ಧಿ  ಪ್ರತಿಷ್ಠಾನದ ಕಾರ್ಯದರ್ಶಿ ಬೆಳ್ಳಿಪ್ಪಾಡಿ ರಾಜೇಂದ್ರ ರೈ ಅವರು ಅಭಿಪ್ರಾಯಪಟ್ಟರು. ಅವರು  ಕಡಬ ಸರಕಾರಿ ಮಾದರಿ ಹಿ.ಪ್ರಾ.ಶಾಲೆಯ ವಿಜ್ಞಾನ ಪ್ರಯೋಗಾಲಯಕ್ಕೆ    ಬ್ಯಾಂಕ್‌ ಆಫ್‌ ಬರೋಡ ಸಂಯೋಜಿತ ವಿಜಯ

ಕಡಬ:ಸರಕಾರಿ ಮಾದರಿ ಶಾಲೆಗೆ ವಿಜ್ಞಾನ ಮಾದರಿಗಳ ಕೊಡುಗೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಶಟಲ್ ಬ್ಯಾಡ್ಮಿಂಟನ್ ಕ್ನಾನಾಯ ಜ್ಯೋತಿ ಇಂಗ್ಲಿಷ್ ಮೀಡಿಯಂ ಶಾಲೆಗೆ ಅವಳಿ ಸಂಭ್ರಮ

(ನ್ಯೂಸ್ ಕಡಬ) newskadaba.com ಕಡಬ, ಜು. 30. ಕಡಬ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಕ್ನಾನಾಯ ಜ್ಯೋತಿ ಇಂಗ್ಲಿಷ್ ಮೀಡಿಯಂ ಶಾಲಾ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ಶಾಲೆಗೆ ಹೆಮ್ಮೆ ತಂದಿದ್ದಾರೆ. ಅಂಡರ್-14 ಬಾಲಕಿಯರ ವಿಭಾಗ ಹಾಗೂ ಅಂಡರ್-17 ಬಾಲಕರ ವಿಭಾಗ ಎರಡರಲ್ಲೂ ಶಾಲೆಯ ತಂಡಗಳು ಪ್ರಥಮ ಸ್ಥಾನ ಪಡೆದು ತಾಲ್ಲೂಕು ಮಟ್ಟದ ಪಂದ್ಯಾಟಕ್ಕೆ ಅರ್ಹತೆ ಗಳಿಸಿವೆ.   ಅಂಡರ್-14 ಬಾಲಕಿಯರ ವಿಭಾಗದಲ್ಲಿ ಅರುಷಿ, ಸನಾ ಫಾತಿಮಾ, ಮಧುಶ್ರೀ ಹಾಗೂ ಸಾಧ್ವಿ ಅವರನ್ನೊಳಗೊಂಡ ತಂಡ ಅದ್ಭುತ

ಕಡಬ: ಶಟಲ್ ಬ್ಯಾಡ್ಮಿಂಟನ್ ಕ್ನಾನಾಯ ಜ್ಯೋತಿ ಇಂಗ್ಲಿಷ್ ಮೀಡಿಯಂ ಶಾಲೆಗೆ ಅವಳಿ ಸಂಭ್ರಮ Read More »

ಕರಾವಳಿ, ಕ್ರೀಡಾ ನ್ಯೂಸ್

ಖಾದಿ ವಸ್ತ್ರ ಮಾರಾಟ: ಆಗಸ್ಟ್ 7 ರವರೆಗೆ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 30. ಖಾದಿ ಬಳಕೆಯನ್ನು ಉತ್ತೇಜಿಸಲು ಎಲ್ಲಾ ಸರ್ಕಾರಿ/ ಅನುದಾನಿತ ಸಂಸ್ಥೆಗಳು/ ನಿಗಮ/ಮಂಡಳಿ/ಸ್ವಾಯತ್ತ ಸಂಸ್ಥೆಗಳು/ ವಿಶ್ವವಿದ್ಯಾಲಯಗಳ ಅಧಿಕಾರಿ/ನೌಕರರುಗಳು ಸ್ವಯಂ ಪ್ರೇರಣೆಯಿಂದ ಪ್ರತಿ ತಿಂಗಳ ಮೊದಲ ಶನಿವಾರದಂದು ಖಾದಿ ಉಡುಪನ್ನು ಧರಿಸಲು ಹಾಗೂ  ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವ ಸೇರಿದಂತೆ ಎಲ್ಲಾ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವಾಗ ಖಾದಿ ಉಡುಪನ್ನು ಧರಿಸುವಂತೆ ಇಲಾಖೆಗಳ ಅಧಿಕಾರಿ/ಸಿಬ್ಬಂದಿಗಳಿಗೆ ಸೂಚಿಸಲಾಗಿದೆ.   ಅದರಂತೆ, ರೂರಲ್ ರಿಸೋರ್ಸಸ್ ಡೆವಲಪ್‍ ಮೆಂಟ್ ಅಸೋಸಿಯೇಷನ್ ಸಂಘದವರು ಮಂಗಳೂರಿನಲ್ಲಿ ದೈನಂದಿನ ಬಳಕೆಯ ಖಾದಿ

ಖಾದಿ ವಸ್ತ್ರ ಮಾರಾಟ: ಆಗಸ್ಟ್ 7 ರವರೆಗೆ ವಿಸ್ತರಣೆ Read More »

ಕರಾವಳಿ

ಎಸ್.ಸಿ ಅಭ್ಯರ್ಥಿಗಳಿಗೆ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 30. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಇವರ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ಧಾರವಾಡ, ಸಿಡಾಕ್, ಮಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ, ಹಾಗೂ ಜಿಲ್ಲಾ ಕೌಶಲ್ಯ ಮಿಶನ್ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸುವ ಪರಿಶಿಷ್ಟ ಜಾತಿಯ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗಾಗಿ  ಹತ್ತು ದಿನಗಳ ಉದ್ಯವiಶೀಲತಾ ಅಭಿವೃದ್ಧಿ ಕಾರ್ಯಕ್ರಮವನ್ನು  ಆಗಸ್ಟ್ ತಿಂಗಳ ಎರಡನೇ ವಾರದಲ್ಲಿ ಮಂಗಳೂರಿನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ.   ಕಾರ್ಯಕ್ರಮದಲ್ಲಿ

ಎಸ್.ಸಿ ಅಭ್ಯರ್ಥಿಗಳಿಗೆ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ: ಅರ್ಜಿ ಆಹ್ವಾನ Read More »

ಕರಾವಳಿ

ಉದ್ಯೋಗವಕಾಶ: ಆಗಸ್ಟ್ 1 ರಂದು ಸಂದರ್ಶನ

(ನ್ಯೂಸ್ ಕಡಬ) newskadaba.com ಜು. 30. ಅಪೊಲೊ ಫಾರ್ಮಸಿ ಕಂಪೆನಿಯ ವತಿಯಿಂದ ಪುತ್ತೂರು, ಕುಂಬ್ರ, ಸುಳ್ಯ, ಬಿ.ಸಿ.ರೋಡ್, ವಿಟ್ಲ ಹಾಗೂ ಮಂಗಳೂರಿನಲ್ಲಿ ಖಾಲಿ ಇರುವ ಫಾರ್ಮಾಸಿಸ್ಟ್, ಫಾರ್ಮಾಸಿ ಎಡ್, ಸಿ.ಎಸ್.ಎ, ಅಪ್ರೆಂಟಿಸ್ ಹುದ್ದೆಗೆ ನೇರ ಸಂದರ್ಶನವನ್ನು ಆಗಸ್ಟ್ 1 ರಂದು ಬೆಳಗ್ಗೆ 10:30ರಿಂದ ಸಂಜೆ 5 ಗಂಟೆಯವರೆಗೆ  ಪುತ್ತೂರು ಮಿನಾರ್ ಕಾಂಪ್ಲೆಕ್ಸ್ ನೆಲಮಹಡಿಯಲ್ಲಿರುವ ಶಾಪ್ ನಂ: 06 & 07 ರಲ್ಲಿ ಆಯೋಜಿಸಲಾಗಿದೆ. ನೇರ ಸಂದರ್ಶನದಲ್ಲಿ ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಯಾವುದೇ ಪದವಿ ಅಥವಾ ಡಿ.ಫಾರ್ಮಾ, ಬಿ.ಫಾರ್ಮಾ ಹೊಂದಿರುವ

ಉದ್ಯೋಗವಕಾಶ: ಆಗಸ್ಟ್ 1 ರಂದು ಸಂದರ್ಶನ Read More »

ಕರಾವಳಿ

ಬಂಟ್ವಾಳ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ – ತಪ್ಪಿದ ದೊಡ್ಡ ಅನಾಹುತ

(ನ್ಯೂಸ್‌ ಕಡಬ) newskadaba.com,  ಜು.30 : ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ನಿವಾಸಿ ಚಂದ್ರಹಾಸ ಅವರ ಮನೆಯಲ್ಲಿ ವಿದ್ಯುತ್ ಸಂಪರ್ಕದ ತಾಂತ್ರಿಕ ದೋಷದಿಂದ ಏಕಾಏಕಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಕಾಣಿಸಿಕೊಂಡಿದೆ. ಮನೆಯಲ್ಲಿದ್ದ ಪೀಠೋಪಕರಣಗಳು, ಹಾಸಿಗೆ, ಅಲಮಾರಿಯಲ್ಲಿದ್ದ ವಸ್ತುಗಳು, ಬಟ್ಟೆಗಳು ಹಾಗೂ ಗೃಹೋಪಯೋಗಿ ಸಾಮಗ್ರಿಗಳು ಬೆಂಕಿಗಾಹುತಿಯಾಗಿದ್ದು, ಕುಟುಂಬಕ್ಕೆ ಭಾರಿ ಆರ್ಥಿಕ ನಷ್ಟ ಸಂಭವಿಸಿದೆ. ಅವಘಡದ ವೇಳೆ ಮನೆಯಲ್ಲಿದ್ದವರು ತಕ್ಷಣವೇ ಹೊರಬಂದಿದ್ದರಿಂದ ಯಾವುದೇ ಜೀವಹಾನಿ ಸಂಭವಿಸಿಲ್ಲ.ಸಾರ್ವಜನಿಕರು ಹಾಗೂ ಸ್ಥಳೀಯರು ತಕ್ಷಣ ಸ್ಪಂದಿಸಿ ಬೆಂಕಿ ನಂದಿಸಿದ್ದರಿಂದ ಹೆಚ್ಚಿನ ಅನಾಹುತ

ಬಂಟ್ವಾಳ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ – ತಪ್ಪಿದ ದೊಡ್ಡ ಅನಾಹುತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರಸ್ವತೀ ವಿದ್ಯಾಲಯ ಕಡಬ ಗುರುಪೂರ್ಣಿಮೆಯ ಅಂಗವಾಗಿ ದಾಸ ಸಾಹಿತ್ಯ ಎಂಬ ಜೀವನ ಮೌಲ್ಯಗಳ ಗಣಿತ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಜು. 29. ಕಡಬ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ ಮತ್ತು ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಹಾಗೂ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಕಡಬ ತಾಲೂಕು ಸಮಿತಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಗುರು ಪೂರ್ಣಿಮೆಯ ಅಂಗವಾಗಿ ‘ದಾಸ ಸಾಹಿತ್ಯ ಎಂಬ ಜೀವನ ಮೌಲ್ಯಗಳ ಗಣಿ ಎನ್ನುವ ಉಪನ್ಯಾಸ ಕಾರ್ಯಕ್ರಮವು ಜುಲೈ 29ರ ಬುಧವಾರದಂದು ಕೇವಳ ಹನುಮಾನ್ ನಗರದ ಯಾದವಶ್ರೀ ಸಭಾಂಗಣದಲ್ಲಿ ನಡೆಯಿತು.   ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಐ.ಡಿ.ಎಸ್.ಜಿ ಸರಕಾರಿ ಕಾಲೇಜು ಚಿಕ್ಕಮಗಳೂರು

ಸರಸ್ವತೀ ವಿದ್ಯಾಲಯ ಕಡಬ ಗುರುಪೂರ್ಣಿಮೆಯ ಅಂಗವಾಗಿ ದಾಸ ಸಾಹಿತ್ಯ ಎಂಬ ಜೀವನ ಮೌಲ್ಯಗಳ ಗಣಿತ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ Read More »

ಕರಾವಳಿ

ಬೆಂಗಳೂರು: ಐಪಿಎಸ್ ಲೇಔಟ್‌ನಲ್ಲಿ ರೇವ್ ಪಾರ್ಟಿ ಅಡ್ಡೆಗೆ ಸಿಸಿಬಿ ದಾಳಿ ಮೂವರ ಬಂಧನ

(ನ್ಯೂಸ್‌ ಕಡಬ) newskadaba.com  ಜು.29 ಬೆಂಗಳೂರು: ಹೆಚ್‌ಎಸ್‌ಆರ್ ಲೇಔಟ್‌ನ 6ನೇ ಸೆಕ್ಟರ್‌ನಲ್ಲಿರುವ ಐಪಿಎಸ್ ಲೇಔಟ್‌ನ ವಿಲ್ಲಾವೊಂದರಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಅಡ್ಡೆ ಮೇಲೆ ಸಿಸಿಬಿ ಮಹಿಳಾ ಘಟಕದ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ. ಬಂಧಿತ ಆರೋಪಿಗಳು ದೀಕ್ಷಿತ್, ವೇದಾಂತ್ ಪಂಡಿತ್ ಮತ್ತು ಶಂಕರ್. ‘ರೆವ್ ಕೀ ಹಾಸ್ಪಿಟಾಲಿಟಿ ಸರ್ವಿಸ್’ ವಿಲ್ಲಾವನ್ನು ದಿನಕ್ಕೆ ₹20,000 ಬಾಡಿಗೆಗೆ ಪಡೆದು ಪಾರ್ಟಿ ಆಯೋಜಿಸಲಾಗಿತ್ತು. ‘ಅಮಿಗೋಸ್’ ಆಪ್ ಬಳಸಿ ಯುವಕ-ಯುವತಿಯರನ್ನು ಕರೆಯಿಸಲಾಗಿತ್ತು. ಪ್ರವೇಶ ಶುಲ್ಕವಾಗಿ ಯುವಕರಿಗೆ ₹1,099 ಹಾಗೂ ಯುವತಿಯರಿಗೆ

ಬೆಂಗಳೂರು: ಐಪಿಎಸ್ ಲೇಔಟ್‌ನಲ್ಲಿ ರೇವ್ ಪಾರ್ಟಿ ಅಡ್ಡೆಗೆ ಸಿಸಿಬಿ ದಾಳಿ ಮೂವರ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top