ಕರಾವಳಿ

ತುಳುನಾಡಿನಲ್ಲಿ ಯಶಸ್ಸು ಕಾಣುತ್ತಿರುವ ‘ಕಾಂತಾರ’ ಖ್ಯಾತಿ ಸ್ವರಾಜ್ ಶೆಟ್ಟಿ ‘ನೆತ್ತರುಕೆರೆ’ ಸಿನಿಮಾ

(ನ್ಯೂಸ್‌ ಕಡಬ) newskadaba.com,  ಸೆ .01 : ತುಳುನಾಡಿನಲ್ಲಿ ರಿಲೀಸ್ ಆಗಿರುವ ‘ನೆತ್ತರುಕೆರೆ’ ಸಿನಿಮಾ 150 ನೇ  ತುಳು ಸಿನಿಮಾ ಆಗಿದೆ.  ಕಳೆದ ತಿಂಗಳು ಆಗಸ್ಟ್ 29ರಂದು  ತುಳುನಾಡಿನಲ್ಲಿ ಬಿಡುಗಡೆ ಕಂಡು ಯಶಸ್ವೀ ಪ್ರದರ್ಶನ ಕಾಣುತ್ತಿದೆ. ‘ಕಾಂತಾ’ರ ಖ್ಯಾತಿಯ ಸ್ವರಾಜ್ ಶೆಟ್ಟಿ ಅಭಿನಯಿಸಿ ನಿರ್ದೇಶಿಸಿರುವ ‘ನೆತ್ತರಕೆರೆ’ ಚಿತ್ರವು ಇದೀಗ ತುಳುನಾಡಿನಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದಲ್ಲಿ ಬಹುಭಾಷಾ ನಟ ಸುಮನ್ ತಲ್ವಾರ್ ಪ್ರಥಮ ಬಾರಿಗೆ ತುಳು ಸಿನಿಮಾದಲ್ಲಿ ಅಭಿನಯಿಸಿ, ತಮ್ಮ ವಿಶಿಷ್ಠ ಪಾತ್ರದ ಮೂಲಕ ಇಡೀ […]

ತುಳುನಾಡಿನಲ್ಲಿ ಯಶಸ್ಸು ಕಾಣುತ್ತಿರುವ ‘ಕಾಂತಾರ’ ಖ್ಯಾತಿ ಸ್ವರಾಜ್ ಶೆಟ್ಟಿ ‘ನೆತ್ತರುಕೆರೆ’ ಸಿನಿಮಾ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಅಭಿವೃದ್ದಿಯ ಹೊಸ ರೂಪ ಪಡೆಯುತ್ತಿರುವ ಬಂಟ್ವಾಳದ ರೈಲು ನಿಲ್ದಾಣ

(ನ್ಯೂಸ್‌ ಕಡಬ) newskadaba.com, ಸೆ.01 ಬಂಟ್ವಾಳ :  ಅಮೃತ ಭಾರತ್ ಯೋಜನೆಯಡಿ ದ.ಕ. ಜಿಲ್ಲೆಯ ಬಂಟ್ವಾಳ ರೈಲು ನಿಲ್ದಾಣ ಅಭಿವೃದ್ಧಿ ಹೊಂದುತ್ತಿದ್ದು, ಕಳೆದ ಜನವರಿಯಿಂದೀಚೆಗೆ ಕಾಮಗಾರಿ ವೇಗ ಪಡೆದಿದೆ. 28.49 ಕೋಟಿ ರೂ. ವೆಚ್ಚದಲ್ಲಿ ನವವಿನ್ಯಾಸದೊಂದಿಗೆ ಕಾಮಗಾರಿ ನಡೆಯುತ್ತಿದ್ದು, ನಿಲ್ದಾಣಕ್ಕೆ ಹೊಸ ರೂಪ ನೀಡಲಾಗುತ್ತಿದೆ 2024ರ ಫೆಬ್ರವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದ್ದು, ಆಗಿನ ಸಂಸದ ನಳಿನ್ ಕುಮಾರ್ ಕಟೀಲ್ , ಶಾಸಕ ರಾಜೇಶ್ ನಾಯ್ಕ್ ರೈಲು ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಅಭಿವೃದ್ದಿಯ ಹೊಸ ರೂಪ ಪಡೆಯುತ್ತಿರುವ ಬಂಟ್ವಾಳದ ರೈಲು ನಿಲ್ದಾಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

* ಸುಳ್ಯ : ಅಡ್ತಲೆಯಲ್ಲಿ ಮುಂದುವರೆದ ಕಾಡಾನೆ ದಾಳಿ

(ನ್ಯೂಸ್‌ ಕಡಬ) newskadaba.com, ಸೆ.01 : ಸುಳ್ಯ ಅರಂತೋಡು ಗ್ರಾಮದ ಅಡ್ತಲೆಯಲ್ಲಿ ತೋಟಗಳಿಗೆ ಕಾಡಾನೆಗಳ ದಾಳಿ ಮುಂದುವರಿದಿದ್ದು, ಬೆಳೆ ನಾಶವಾದ ಘಟನೆ ನಡೆದಿದೆ. ರಾತ್ರಿ ಕಾಡಾನೆಗಳು ತೋಟಗಳಿಗೆ ದಾಳಿ ನಡೆಸಿ ಅಪಾರ ಪ್ರಮಾಣದ ಬೆಳೆಗಳನ್ನು ನಾಶಪಡಿಸಿದೆ. ಅಡ್ತಲೆ ಯಲ್ಲಿ ದಿನಕೊಂದು ಕಡೆ ಸತತವಾಗಿ 3- 4 ತಿಂಗಳುಗಳಿಂದ ಆನೆ ದಾಳಿ ಮಾಡಿ ಕೃಷಿ ನಾಶ ಮಾಡುತ್ತಿವೆ. ಅಡ್ತಲೆ ಯ ಕಿನಾಲ ಮೋಹನ್ ಅವರ ಆನೆ ಓಡಿಸುವ ಯಂತ್ರದ ಹತ್ತಿರ ಮಾತ್ರ ಬಾರದೆ , ತೋಟದ ಎಲ್ಲಾ ಕಡೆ

* ಸುಳ್ಯ : ಅಡ್ತಲೆಯಲ್ಲಿ ಮುಂದುವರೆದ ಕಾಡಾನೆ ದಾಳಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಪರಿಚಿತನಿಂದ ರಿಕ್ಷಾ ಚಾಲಕನಿಗೆ ಇರಿತ- ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com ಸೆ. 01. ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಾನೆ ಎಂಬ ಆರೋಪದಲ್ಲಿ ಅಪರಿಚಿತನಿಂದ ರಿಕ್ಷಾ ಚಾಲಕನಿಗೆ ಇರಿದು ಗಾಯಗೊಳಿಸಿರುವ ಘಟನೆ ಮಂಗಳೂರಿನ ಫಳ್ನೀರ್‌ ಬಳಿ ನಡೆದಿದೆ. ಹಲ್ಲೆಗೊಳಗಾದ ರಿಕ್ಷಾ ಚಾಲಕನನ್ನು ಬಶೀರ್ ಎಂದು ಗುರುತಿಸಲಾಗಿದೆ. ಚಾಲಕನ ಹೊಟ್ಟೆಗೆ ಇರಿದು ಗಾಯಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ಇನ್ನು ಘಟನೆಯ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸಿ.ಎಚ್ ಪ್ರತಿಕ್ರಿಯೆ ನೀಡಿದ್ದು, ಘಟನೆ ಬಗ್ಗೆ ಗಾಯಾಳು ಆಟೋ ಚಾಲಕನಿಂದ ಮಾಹಿತಿ ಪಡೆಯಲಾಗುವುದು ಎಂದು ತಿಳಿಸಿದ್ದಾರೆ.

ಅಪರಿಚಿತನಿಂದ ರಿಕ್ಷಾ ಚಾಲಕನಿಗೆ ಇರಿತ- ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಮದ್ಯ ತಯಾರಿಕಾ ಘಟಕಕ್ಕೆ ಪೊಲೀಸ್ ದಾಳಿ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 01. ಅಕ್ರಮ ಮದ್ಯ ತಯಾರಿ ನಡೆಸುತ್ತಿದ್ದ ಮನೆಗೆ ದಾಳಿ ನಡೆಸಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ರವಿವಾರದಂದು ವರದಿಯಾಗಿದೆ. ಬಂಧಿತರನ್ನು ಕಾಸರಗೋಡು ನಿವಾಸಿ ಪ್ರಣವ್ ವಿ ಶೆಣೈ (24) ಮತ್ತು ತಾಳಿಪಡ್ಪು ನಿವಾಸಿ ಅನೂಷ್ ಆರ್ .(24)‌ ಎಂದು ಗುರುತಿಸಲಾಗಿದೆ. ಆರೋಪಿಗಳು ಕೊಣಾಜೆ ಠಾಣಾ ವ್ಯಾಪ್ತಿಯ ಪಜೀರು ಗ್ರಾಮ ದ ಕಂಬಳಪದವು ಶ್ರೀ ದುರ್ಗಾ ಕಾಳಿ ದೇವಸ್ಥಾನದ ರಸ್ತೆಯಲ್ಲಿರುವ ಮನೆಯೊಂದರಲ್ಲಿ ತೋಮಸ್ ಮತ್ತು ಮಣಿಕುಟ್ಟನ್ ಜೊತೆ ಸೇರಿಕೊಂಡು

ಅಕ್ರಮ ಮದ್ಯ ತಯಾರಿಕಾ ಘಟಕಕ್ಕೆ ಪೊಲೀಸ್ ದಾಳಿ- ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು ಢಿಕ್ಕಿ: ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 01. ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವ ಗಾಯಗೊಂಡಿರುವ ಘಟನೆ ಮುಕ್ಕ ಜಂಕ್ಷನ್ ನಲ್ಲಿ ನಡೆದಿದೆ. ಮೃತಪಟ್ಟವರನ್ನು ಚೇಳಾಯರು ನಿವಾಸಿ ಕರುಣಾಕರ ಶೆಟ್ಟಿ ಎಂದು ಗುರುತಿಸಲಾಗಿದೆ. ಗಾಯಗೊಂಡ ವಿಶ್ವನಾಥ (16) ಎಂಬವರು ಮುಕ್ಕದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತ ನಡೆಸಿದ್ದ ಕಾರು ಚಾಲಕ ಹಳೆಯಂಗಡಿ ನಿವಾಸಿ ಮುಹಮ್ಮದ್ ತೌಫೀಕ್ ಎಂಬಾತನನ್ನು ಸಂಚಾರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಕಾರು ಢಿಕ್ಕಿ: ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

216 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶಿಸಿ ವಿಶ್ವ ದಾಖಲೆ ನಿರ್ಮಿಸಿದ ವಿದುಷಿ ದೀಕ್ಷಾ

(ನ್ಯೂಸ್‌ ಕಡಬ) newskadaba.com ಉಡುಪಿ, ಸೆ. 01. ನಿರಂತರವಾಗಿ 216 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶಿಸುವ ಮೂಲಕ ಉಡುಪಿಯ ವಿದುಷಿ ದೀಕ್ಷಾ ವಿ ಅವರು ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ. ಈ ಮೂಲಕ ದೀಕ್ಷಾ ಹಿಂದಿನ 170 ಗಂಟೆಗಳ ದಾಖಲೆಯನ್ನು ಮುರಿದಿದ್ದಾರೆ. ದಾಖಲೆಯ ಮ್ಯಾರಥಾನ್ ಪ್ರದರ್ಶನವು ಆಗಸ್ಟ್ 21 ರಂದು ಮಧ್ಯಾಹ್ನ 3:30 ಕ್ಕೆ ಪ್ರಾರಂಭವಾಯಿತು. ಮತ್ತು ಇದು  ಒಂಬತ್ತು ದಿನಗಳ ಕಾಲ ಮುಂದುವರಿದು, ಇದೀಗ 216 ಗಂಟೆಗಳಲ್ಲಿ ಪೂರ್ಣಗೊಂಡಿದೆ. ಬ್ರಹ್ಮಾವರ ತಾಲ್ಲೂಕಿನ ಮುಂಕಿಜಡ್ಡು ಮೂಲದ ವಿದುಷಿ ದೀಕ್ಷಾ ವಿ,

216 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶಿಸಿ ವಿಶ್ವ ದಾಖಲೆ ನಿರ್ಮಿಸಿದ ವಿದುಷಿ ದೀಕ್ಷಾ Read More »

ಕರಾವಳಿ

ಭಾಗ್ಯಲಕ್ಷ್ಮಿ ಪರಿಪಕ್ವ ಮೊತ್ತ ಪಾವತಿ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 01. ಭಾಗ್ಯಲಕ್ಷ್ಮಿ ಯೋಜನೆಯಡಿ ನೋಂದಾಯಿಸಿರುವ 18 ವರ್ಷ ತುಂಬಿದ ಅರ್ಹ ಫಲಾನುಭವಿಗಳ ಪರಿಪಕ್ವ ಮೊತ್ತ  ಪಾವತಿಗೆ ಅರ್ಜಿ ಆಹ್ವಾನಿಸಲಾಗಿದೆ. ಭಾಗ್ಯಲಕ್ಷ್ಮಿ ಯೋಜನೆಯಡಿ ನೊಂದಾಯಿಸಲ್ಪಟ್ಟ 2006-7ನೇ ಸಾಲಿನ 701 ಫಲಾನುಭವಿಗಳಲ್ಲಿ ಅರ್ಹರಾದ (ಮರಣ ಹೊಂದಿದ ಫಲಾನುಭವಿಗಳನ್ನು ಹೊರತುಪಡಿಸಿ) ಫಲಾನುಭವಿಗಳಿಗೆ ಪರಿಪಕ್ವ ಮೊತ್ತ (Maturity Claim Amount) ರೂ. 32,351 ನ್ನು ಎಲ್.ಐ.ಸಿ ಸಂಸ್ಥೆಯಿಂದ ನೇರವಾಗಿ ಫಲಾನುಭವಿಗಳ ಖಾತೆಗೆ ಪಾವತಿಸುವ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ. ಇದರಲ್ಲಿ ಕೆಲವು ಫಲಾನುಭವಿಗಳು ವಲಸೆ ಹೋಗಿರುವುದು ಮತ್ತು ದಾಖಲಾತಿಗಳನ್ನು

ಭಾಗ್ಯಲಕ್ಷ್ಮಿ ಪರಿಪಕ್ವ ಮೊತ್ತ ಪಾವತಿ: ಅರ್ಜಿ ಆಹ್ವಾನ Read More »

ಕರಾವಳಿ

ತಪ್ಪು ಯಾರು ಮಾಡಿದರೂ ತಪ್ಪೇ, ಸಹಾಯ ಯಾರು ಮಾಡಿದರೂ ಸಹಾಯವೇ – ಮುಳಿಯ ಗೋಪಾಲಕೃಷ್ಣ ಭಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 01. ತಪ್ಪು ಯಾರು ಮಾಡಿದರೂ ತಪ್ಪೇ; ಸಹಾಯ ಯಾರು ಮಾಡಿದರೂ ಸಹಾಯವೇ ಎಂದು ಸಾಹಿತಿ ಮುಳಿಯ ಗೋಪಾಲಕೃಷ್ಣ ಭಟ್ ನುಡಿದರು. ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾ| ಘಟಕದ ವತಿಯಿಂದ ಹಿರಿಯ ಸಾಹಿತಿ ಮನೆಗೆ ಭೇಟಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.   ಉದ್ಯೋಗದಿಂದ ಸ್ವಯಂ ನಿವೃತ್ತಿ ಪಡೆದು, ವಕೀಲ ವೃತ್ತಿಯನ್ನು ಕೈಗೊಂಡು, ಎಂಬತ್ತೈದನೆಯ ವಯಸ್ಸಿನಲ್ಲಿ ವಕೀಲ ವೃತ್ತಿಯನ್ನು ನಿಲ್ಲಿಸಿದ ಬಳಿಕ ಸಾಹಿತ್ಯದ ನಂಟಿನಿಂದ ಇದೀಗ ಆರು ವರ್ಷಗಳಲ್ಲಿ ಐದು

ತಪ್ಪು ಯಾರು ಮಾಡಿದರೂ ತಪ್ಪೇ, ಸಹಾಯ ಯಾರು ಮಾಡಿದರೂ ಸಹಾಯವೇ – ಮುಳಿಯ ಗೋಪಾಲಕೃಷ್ಣ ಭಟ್ Read More »

ಕರಾವಳಿ

ಮೂಡುಬಿದಿರೆ ಸಾವಿರ ಕಂಬದ ಬಸದಿಗೆ ಯಾಂತ್ರೀಕೃತ ಆನೆ ಕೊಡುಗೆ ನೀಡಿದ ರವೀನಾ ಟಂಡನ್ ಪುತ್ರಿ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 : ಬಾಲಿವುಡ್ ನಟಿ ರವೀನಾ ಟಂಡನ್ ಮತ್ತು ಅವರ ಪುತ್ರಿ ರಾಶಾ ಥಡಾನಿ ಅವರು ಮೂಡುಬಿದಿರೆಯ ಐತಿಹಾಸಿಕ ಸಾವಿರ ಕಂಬದ ಬಸದಿಗೆ, ಅಂದರೆ ಜೈನ ಕಾಶಿಗೆ, ಜೀವಂತ ಆನೆಯಂತೆ ಕಾಣುವ ಯಾಂತ್ರೀಕೃತ ಆನೆಯನ್ನು ಕೊಡುಗೆಯಾಗಿ ನೀಡಿದ್ದಾರೆ. ಈ ಉಪಕ್ರಮವು ಪೆಟಾ ಇಂಡಿಯಾ ಮುಂಬೈ ಶಾಖೆಯಿಂದ ಪ್ರೇರಿತವಾಗಿದೆ. ಪೆಟಾ ಸಂಸ್ಥೆಯು ತರಬೇತಿ ಪಡೆದ ಜೀವಂತ ಆನೆಗಳ ಬದಲಾಗಿ ಯಾಂತ್ರಿಕ ಆನೆಗಳನ್ನು ಬಳಸುವಂತೆ ಪ್ರತಿಪಾದಿಸುತ್ತದೆ. ಏಕೆಂದರೆ ಜೀವಂತ ಆನೆಗಳಿಗೆ ಸಾಮಾನ್ಯವಾಗಿ ಹಿಂಸೆ ನೀಡಲಾಗುತ್ತದೆ.

ಮೂಡುಬಿದಿರೆ ಸಾವಿರ ಕಂಬದ ಬಸದಿಗೆ ಯಾಂತ್ರೀಕೃತ ಆನೆ ಕೊಡುಗೆ ನೀಡಿದ ರವೀನಾ ಟಂಡನ್ ಪುತ್ರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top