ಕರಾವಳಿ

ಮೂಡುಬಿದಿರೆ ಸಾವಿರ ಕಂಬದ ಬಸದಿಗೆ ಯಾಂತ್ರೀಕೃತ ಆನೆ ಕೊಡುಗೆ ನೀಡಿದ ರವೀನಾ ಟಂಡನ್ ಪುತ್ರಿ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 : ಬಾಲಿವುಡ್ ನಟಿ ರವೀನಾ ಟಂಡನ್ ಮತ್ತು ಅವರ ಪುತ್ರಿ ರಾಶಾ ಥಡಾನಿ ಅವರು ಮೂಡುಬಿದಿರೆಯ ಐತಿಹಾಸಿಕ ಸಾವಿರ ಕಂಬದ ಬಸದಿಗೆ, ಅಂದರೆ ಜೈನ ಕಾಶಿಗೆ, ಜೀವಂತ ಆನೆಯಂತೆ ಕಾಣುವ ಯಾಂತ್ರೀಕೃತ ಆನೆಯನ್ನು ಕೊಡುಗೆಯಾಗಿ ನೀಡಿದ್ದಾರೆ. ಈ ಉಪಕ್ರಮವು ಪೆಟಾ ಇಂಡಿಯಾ ಮುಂಬೈ ಶಾಖೆಯಿಂದ ಪ್ರೇರಿತವಾಗಿದೆ. ಪೆಟಾ ಸಂಸ್ಥೆಯು ತರಬೇತಿ ಪಡೆದ ಜೀವಂತ ಆನೆಗಳ ಬದಲಾಗಿ ಯಾಂತ್ರಿಕ ಆನೆಗಳನ್ನು ಬಳಸುವಂತೆ ಪ್ರತಿಪಾದಿಸುತ್ತದೆ. ಏಕೆಂದರೆ ಜೀವಂತ ಆನೆಗಳಿಗೆ ಸಾಮಾನ್ಯವಾಗಿ ಹಿಂಸೆ ನೀಡಲಾಗುತ್ತದೆ. […]

ಮೂಡುಬಿದಿರೆ ಸಾವಿರ ಕಂಬದ ಬಸದಿಗೆ ಯಾಂತ್ರೀಕೃತ ಆನೆ ಕೊಡುಗೆ ನೀಡಿದ ರವೀನಾ ಟಂಡನ್ ಪುತ್ರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಕೇಸ್; ಎಸ್‌ಐಟಿಗೆ 500 ಪುಟಗಳ ದಾಖಲೆ ನೀಡಿದ ಗಿರೀಶ್ ಮಟ್ಟಣ್ಣನವರ್

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 : ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಬೆಳವಣಿಗೆ ನಡೆಯುತ್ತಿದೆ. ಇದೀಗ, ಎಸ್‌ಐಟಿಗೆ 500 ಪುಟುಗಳ ದಾಖಲೆಯನ್ನು ಗಿರೀಶ್ ಮಟ್ಟಣ್ಣನವರ್ ನೀಡಿದ್ದಾರೆ. ಧರ್ಮಸ್ಥಳದಲ್ಲಿ ಕೆಲವು ಅಸಹಜ ಸಾವುಗಳ ಸರಿಯಾದ ತನಿಖೆ ನಡೆದಿಲ್ಲ. ಆ ಸಾವುಗಳ ತನಿಖೆ ನಡೆಸಿ ಎಂದು ಗಿರೀಶ್ ಮಟ್ಟಣ್ಣನವರ್, ಎಸ್‌ಐಟಿ ಮುಂದೆ ಮನವಿ ಮಾಡಿದ್ದಾರೆ. ಕಳೆದ 35 ವರ್ಷಗಳಲ್ಲಿ ಧರ್ಮಸ್ಥಳದಲ್ಲಿ ಆಗಿರುವ ಅಸಹಜ ಸಾವುಗಳ ವಿವರವಾದ ದಾಖಲೆ ನೀಡಿದ್ದಾರೆ. ಈ ಸಾವುಗಳಲ್ಲಿ ಬಹುತೇಕ ಸಾವುಗಳ ತನಿಖೆಯೇ ನಡೆದಿಲ್ಲ. ಧರ್ಮಸ್ಥಳ

ಧರ್ಮಸ್ಥಳ ಕೇಸ್; ಎಸ್‌ಐಟಿಗೆ 500 ಪುಟಗಳ ದಾಖಲೆ ನೀಡಿದ ಗಿರೀಶ್ ಮಟ್ಟಣ್ಣನವರ್ Read More »

ಕರಾವಳಿ, ಕರ್ನಾಟಕ

ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಸೇರಿ ರಾಜ್ಯದಲ್ಲಿ ಮುನುವರೆದ ಮಳೆ ಆರ್ಭಟ, ಹಲವೆಡೆ ಪ್ರವಾಹಭೀತಿ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30:  ರಾಜ್ಯದ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಆರ್ಭಟ ಮುಂದುವರೆದಿದ್ದು, ಭಾರೀ ಮಳೆ ಮತ್ತು ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರು ಹೊರಬಿಡುತ್ತಿರುವುದರಿಂದ ಪ್ರವಾಹಭೀತಿ ಎದುರಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಮಳೆಯ ಅಬ್ಬರಕ್ಕೆ ಜನರು ಭಾರೀ ತೊಂದರೆ ಅನುಭವಿಸುವಂತಾಗಿದೆ. ಮಳೆ ಹಿನ್ನೆಲೆಯಲ್ಲಿ ಇಂದು ಅಂಗನವಾಡಿ ಹಾಗೂ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್‌.ಆರ್‌.ಪುರ ತಾಲ್ಲೂಕುಗಳ

ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಸೇರಿ ರಾಜ್ಯದಲ್ಲಿ ಮುನುವರೆದ ಮಳೆ ಆರ್ಭಟ, ಹಲವೆಡೆ ಪ್ರವಾಹಭೀತಿ Read More »

ಕರಾವಳಿ

ಸೆಪ್ಟೆಂಬರ್ 1 ರಿಂದ ಚಿಕ್ಕಮಗಳೂರಿನಲ್ಲಿ ವಾಹನಗಳ ಪ್ರವೇಶಕ್ಕೆ ಮಿತಿ: ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ!

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ಚಿಕ್ಕಮಗಳೂರು: ಸೆಪ್ಟೆಂಬರ್ 1 ರಿಂದ ಮುಳ್ಳಯ್ಯನಗಿರಿ, ಸೀತಾಲಯನಗಿರಿ, ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಮತ್ತು ಮಾಣಿಕ್ಯಧಾರಕ್ಕೆ ಹೋಗುವ ಪ್ರವಾಸಿಗರು ಕಿರಿದಾದ ಬೆಟ್ಟದ ರಸ್ತೆಗಳಲ್ಲಿನ ದಟ್ಟಣೆಯನ್ನು ಕಡಿಮೆ ಮಾಡಲು ಚಿಕ್ಕಮಗಳೂರು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ತಾಲ್ಲೂಕಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಮತ್ತು ಮಾಣಿಕ್ಯಧಾರ ಪ್ರವಾಸಿ ತಾಣಗಳಿಗೆ ಆಗಮಿಸುವ ಪ್ರವಾಸಿಗರ ವಾಹನ ದಟ್ಟಣೆಯನ್ನು ನಿಯಂತ್ರಿಸಲು ಜಿಲ್ಲಾಡಳಿತ ಹೊಸ ನಿಯಮ ಜಾರಿಗೊಳಿಸಿದೆ.

ಸೆಪ್ಟೆಂಬರ್ 1 ರಿಂದ ಚಿಕ್ಕಮಗಳೂರಿನಲ್ಲಿ ವಾಹನಗಳ ಪ್ರವೇಶಕ್ಕೆ ಮಿತಿ: ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ! Read More »

ಕರಾವಳಿ

ಕುಂದಾಪುರ: ಕೊಲ್ಲೂರು ಸೌಪರ್ಣಿಕಾ ನದಿಯಲ್ಲಿ ಬೆಂಗಳೂರು ವಿವಾಹಿತ ಮಹಿಳೆ ಕಲ್ಮರೆ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ಕುಂದಾಪುರ: 2 ದಿನಗಳ ಹಿಂದೆ ಕೊಲ್ಲೂರಿಗೆ ಆಗಮಿಸಿದ್ದ ಮಹಿಳೆಯೊಬ್ಬರು ಸೌಪರ್ಣಿಕಾ ನದಿಯ ಬಳಿ ನಾಪತ್ತೆಯಾಗಿದ್ದು, ಅವರ ನಾಪತ್ತೆಯ ಬಗ್ಗೆ ಹಲವು ಊಹಾಪೋಹಗಳು ಕೇಳಿಬಂದಿವೆ. ನಾಪತ್ತೆಯಾದ ವಿವಾಹಿತೆಯನ್ನು ಬೆಂಗಳೂರಿನ ತ್ಯಾಗರಾಜನಗರದ ನಿವಾಸಿ ಸಿ.ಆರ್. ಗೋವಿಂದರಾಜು ಅವರ ಪುತ್ರಿ ವಸುಧಾ ಚಕ್ರವರ್ತಿ (46) ಎಂದು ಗುರುತಿಸಲಾಗಿದೆ. ಆಗಸ್ಟ್ 28ರಂದು ಅವರು ಕೊಲ್ಲೂರಿಗೆ ಆಗಮಿಸಿ, ಖಾಸಗಿ ಲಾಡ್ಜ್ ಬಳಿ ತಮ್ಮ ಕಾರನ್ನು ನಿಲ್ಲಿಸಿ ದೇವಸ್ಥಾನಕ್ಕೆ ತೆರಳಿದ್ದರು. ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಸ್ವಲ್ಪ ಸಮಯ ಕಳೆದ

ಕುಂದಾಪುರ: ಕೊಲ್ಲೂರು ಸೌಪರ್ಣಿಕಾ ನದಿಯಲ್ಲಿ ಬೆಂಗಳೂರು ವಿವಾಹಿತ ಮಹಿಳೆ ಕಲ್ಮರೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕ್ಷೇತ್ರದ ಭಕ್ತಾದಿಗಳಿಗೆ ಮಹತ್ವದ ಕರೆ ಕೊಟ್ಟ ವೀರೇಂದ್ರ ಹೆಗ್ಗಡೆ

(ನ್ಯೂಸ್‌ ಕಡಬ) newskadaba.com, ಆ.30: ಧರ್ಮಸ್ಥಳದ ಬೆಳವಣಿಗೆಯಿಂದ ಪುರುಷರಿಗಿಂತ ಮಹಿಳೆಯರೇ ಹೆಚ್ಚು ಕಣ್ಣೀರಿಟ್ಟಿದ್ದಾರೆ, ವೇದನೆ ಪಡುತ್ತಿದ್ದಾರೆ. ಕೆಲವು ಹೆಣ್ಣುಮಕ್ಕಳು ಯಾವುದೇ ರೀತಿಯ ಹೋರಾಟ, ಪ್ರತಿಭಟನೆಗೂ ಸಿದ್ದರಿದ್ದಾರೆ. ಆದರೆ, ಅಂತಹ ಹೋರಾಟದ ಅವಶ್ಯಕತೆ ಇಲ್ಲ. ಎಲ್ಲವನ್ನೂ ಮಂಜುನಾಥ ಸ್ವಾಮಿಗೆ ಬಿಟ್ಟಿದ್ದೇವೆ. ನಾನು ಯಾವತ್ತೂ ಸತ್ಯ ಬಿಟ್ಟು ಹೋಗಿಲ್ಲ, ಹೋಗುವುದೂ ಇಲ್ಲ. ಎಲ್ಲರೂ ಶಾಂತತೆಯನ್ನು ಕಾಪಾಡಬೇಕು ಹಾಗೂ ತಾಳ್ಮೆಯಿಂದ ಇರಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಶ್ರೀಕ್ಷೇತ್ರದ ಭಕ್ತಾಧಿಗಳಲ್ಲಿ ಮನವಿ ಮಾಡಿದ್ದಾರೆ. ಧರ್ಮಸ್ಥಳ ಅಪಪ್ರಚಾರ ಖಂಡಿಸಿ ನಡೆದ ಕಾರ್ಯಕ್ರಮದಲ್ಲಿ

ಕ್ಷೇತ್ರದ ಭಕ್ತಾದಿಗಳಿಗೆ ಮಹತ್ವದ ಕರೆ ಕೊಟ್ಟ ವೀರೇಂದ್ರ ಹೆಗ್ಗಡೆ Read More »

ಕರಾವಳಿ

ಮೂಡಬಿದಿರೆ: ನಗ- ನಗದು ಎಗರಿಸಿ ವಂಚಿಸಿದ ಯುವಕ- ನೊಂದ ಮಹಿಳೆ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ಮೂಡಬಿದಿರೆ: ಮಂಕುಬೂದಿ ಎರಚಿ ಮಹಿಳೆಯೊಬ್ಬರಿಂದ ನಗ-ನಗದು ಎಗರಿಸಿಕೊಂಡು ವಂಚಿಸಿದ ಯುವಕನ ವರ್ತಿನೆಯಿಂದ ನೊಂದ ಮಹಿಳೆ ಬದುಕಿಗೆ ಅಂತ್ಯ‌ಹೇಳಿದ ಘಟನೆ ಮೂಡುಬಿದಿರೆ ತೋಡಾರಿನಲ್ಲಿ ನಡೆದಿದೆ.‌ ಮಂಗಳೂರು ಉಳ್ಳಾಲದ ಕಲ್ಲಾಪು ಮೂಲದ ಮಹಿಳೆ ಶಫ್ರೀನಾ ಬಾನು(31) ಘಟನೆಯಲ್ಲಿ ನೊಂದು ಆತ್ಮಹತ್ಯೆ ಮಾಡಿಕೊಂಡವರು. ಕಳೆದ 14 ವರ್ಷಗಳ ಹಿಂದೆ ಮೂಡುಬಿದಿರೆ ಬೆಳುವಾಯಿ ನವಾಝ್ ರೊಂದಿಗೆ‌ ದಾಂಪತ್ಯ‌ ಜೀವನಕ್ಕೆ ಕಾಲಿರಿಸಿದ ಶಫ್ರೀನಾ ಬಾನು ತೋಡಾರು ಗ್ರಾಮದ ಏರ್ ಇಂಡಿಯಾ ನಾಮಾಂಕಿತದ ಅಪಾರ್ಟ್ ಮೆಂಟ್ ನಲ್ಲಿರುವ ಫ್ಲಾಟ್

ಮೂಡಬಿದಿರೆ: ನಗ- ನಗದು ಎಗರಿಸಿ ವಂಚಿಸಿದ ಯುವಕ- ನೊಂದ ಮಹಿಳೆ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ತಲಪಾಡಿನ ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದ ಕೆಎಸ್‌ಆರ್‌ಟಿಸಿ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ಮಂಗಳೂರು: ಕರ್ನಾಟಕ-ಕೇರಳ ಗಡಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ 66ರ ತಲಪಾಡಿ ಬಳಿ ಗುರುವಾರ ಸಂಭವಿಸಿದ ಅಪಘಾತಕ್ಕೆ ಬಸ್‌ನ ಬ್ರೇಕ್ ವೈಫಲ್ಯ ಕಾರಣವಲ್ಲ, ಬದಲಾಗಿ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಕೆಎಸ್‌ಆರ್‌ಟಿಸಿ ಸ್ಪಷ್ಟಪಡಿಸಿದೆ. ಅಧಿಕಾರಿಗಳ ಪ್ರಕಾರ, ಮಂಗಳೂರು-1ನೇ ಘಟಕದ ಚಾಲಕ ನಿಜಲಿಂಗಪ್ಪ ಚಲವಾದಿ ಅವರು ಕಾಸರಗೋಡಿನಿಂದ ಮಂಗಳೂರಿಗೆ ಬಸ್ ಚಲಾಯಿಸುತ್ತಿದ್ದರು. ಮಧ್ಯಾಹ್ನ 1:45ರ ಸುಮಾರಿಗೆ, ಇಳಿಜಾರಿನಲ್ಲಿ ತಲಪಾಡಿ ಟೋಲ್ ಗೇಟ್ ಸಮೀಪಿಸುತ್ತಿದ್ದಾಗ ಅವರು ಬಸ್ ಅನ್ನು ಅತಿ ವೇಗವಾಗಿ ಚಲಾಯಿಸಿದ್ದಾರೆ. ಆಟೋರಿಕ್ಷಾವೊಂದಕ್ಕೆ ಡಿಕ್ಕಿ

ಮಂಗಳೂರು: ತಲಪಾಡಿನ ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದ ಕೆಎಸ್‌ಆರ್‌ಟಿಸಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಾಳೆ(ಆ.30) ಶಾಲೆಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಹವಾಮಾನ ಇಲಾಖೆಯು ದ.ಕ. ಜಿಲ್ಲೆಗೆ ಆಗಸ್ಟ್ 30ರಂದು ರೆಡ್ ಅಲರ್ಟ್ ಘೋಷಿಸಿದ್ದು, ಮುಂಜಾಗ್ರತಾ ಕ್ರಮವಾಗಿ ನಾಳೆ (ಶನಿವಾರ) ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೊಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ನಾಳೆ(ಆ.30) ಶಾಲೆಗಳಿಗೆ ರಜೆ ಘೋಷಣೆ Read More »

ಕರಾವಳಿ
Scroll to Top