ಕರಾವಳಿ

ಮಂಗಳೂರು: ಕೊಂಕಣಿ ಸಂಗೀತ ಮತ್ತು ಸಾಂಸ್ಕೃತಿಕ ಪರಂಪರೆಯ ಶ್ರೇಷ್ಠ ಕಲಾವಿದ ಎರಿಕ್ ಒಜಾರಿಯೊ ನಿಧನ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 29 ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದ ಕೊಂಕಣಿ ಸಂಗೀತ ಮತ್ತು ಸಾಂಸ್ಕೃತಿಕ ಪರಂಪರೆಯ ಶ್ರೇಷ್ಠ ಕಲಾವಿದ ಎರಿಕ್ ಅಲೆಕ್ಸಾಂಡರ್ ಒಜಾರಿಯೊ(76) ಅವರು ಆಗಸ್ಟ್ 29 ರಂದು ನಗರದಲ್ಲಿ ನಿಧನರಾದರು. ಅವರು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಎರಿಕ್ ಒಜಾರಿಯೊ ಎಂದು ಜನಪ್ರಿಯರಾಗಿದ್ದ ಇವರು ಮೇ 18, 1949 ರಂದು ಮಂಗಳೂರಿನ ಜೆಪ್ಪುವಿನಲ್ಲಿ ಜನಿಸಿದರು. ಇವರು ಪ್ರಸಿದ್ಧ ಕೊಂಕಣಿ ಸಂಗೀತ ಸಂಯೋಜಕ, ಸಾಂಸ್ಕೃತಿಕ ಕಾರ್ಯಕರ್ತ ಮತ್ತು ಕೊಂಕಣಿ ಸಮುದಾಯದ ಬಗ್ಗೆ ಅಪಾರ […]

ಮಂಗಳೂರು: ಕೊಂಕಣಿ ಸಂಗೀತ ಮತ್ತು ಸಾಂಸ್ಕೃತಿಕ ಪರಂಪರೆಯ ಶ್ರೇಷ್ಠ ಕಲಾವಿದ ಎರಿಕ್ ಒಜಾರಿಯೊ ನಿಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆ; ಆರೆಂಜ್ ಅಲರ್ಟ್ ಘೋಷಣೆ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 29 ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಶುಕ್ರವಾರ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ‘ಆರೆಂಜ್‌ ಅಲರ್ಟ್’ ಘೋಷಿಸಿದೆ. ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯ ಹಲವು ಭಾಗಗಳಲ್ಲಿ ಇಂದು ಬೆಳಿಗ್ಗೆ ಭಾರೀ ಮಳೆಯಾಗಿದ್ದು, ಹಲವೆಡೆ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಕಲಬುರಗಿ ಜಿಲ್ಲೆಯಲ್ಲಿ, ರಾತ್ರಿಯಿಡೀ ಸುರಿದ ಭಾರೀ ಮಳೆಗೆ ಹೆಚ್ಚಿನ ಪ್ರಮಾಣದ ಹುಚ್ಚೆಳ್ಳು (Niger Seeds) ಬೆಳೆ ನಾಶವಾಗಿದ್ದು, ರೈತರಿಗೆ ಭಾರೀ ನಷ್ಟವಾಗಿದೆ ಎಂದು ತಿಳಿದುಬಂದಿದೆ. ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ

ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆ; ಆರೆಂಜ್ ಅಲರ್ಟ್ ಘೋಷಣೆ Read More »

ಕರಾವಳಿ

ಕಡಬ: ಹುಚ್ಚುನಾಯಿ ಕಡಿದು ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಆ. 29. ವ್ಯಕ್ತಿಯೋರ್ವರಿಗೆ ಹುಚ್ಚುನಾಯಿ ಕಡಿದು ಗಂಭೀರ ಗಾಯಗೊಂಡ ಘಟನೆ ಕಡಬ ತಾಲೂಕಿನ ವಿದ್ಯಾನಗರ ಎಂಬಲ್ಲಿ ಶುಕ್ರವಾರದಂದು ನಡೆದಿದೆ. ಗಾಯಗೊಂಡವರನ್ನು ಕಡಬ ವಿದ್ಯಾನಗರ ನಿವಾಸಿ ಕೊರಗಪ್ಪ ಗೌಡ ಆದ್ರ ಎಂದು ಗುರುತಿಸಲಾಗಿದೆ. ಬೀದಿಯಲ್ಲಿ ಅಲೆದಾಡುತ್ತಿದ್ದ ಹುಚ್ಚು ನಾಯಿಯೊಂದು ಕೊರಗಪ್ಪ ಎಂಬವರಿಗರ ಕಚ್ಚಿದ್ದು, ಕೂಡಲೇ ಅವರನ್ನು ಕಡಬ ಸರಕಾರಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕೊಂಡೊಯ್ಯುವಂತೆ ವೈದ್ಯರು ಸೂಚಿಸಿದ್ದಾರೆ. ಆಸ್ಪತ್ರೆಗೆ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲೀಲಾವತಿ, ಪಟ್ಟಣ ಪಂಚಾಯತ್ ಸದಸ್ಯ ಹನೀಫ್

ಕಡಬ: ಹುಚ್ಚುನಾಯಿ ಕಡಿದು ವ್ಯಕ್ತಿ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಗಣಪತಿ ವಿಸರ್ಜನೆ ಹಿನ್ನೆಲೆ – ರಸ್ತೆ ಬದಿಯಲ್ಲಿ ವಾಹನ ನಿಲುಗಡೆಗೊಳಿಸದಂತೆ ಪೊಲೀಸರ ಸೂಚನೆ

(ನ್ಯೂಸ್ ಕಡಬ) newskadaba.com ಕಡಬ, ಆ. 29. ಇಂದು ಕಡಬದಲ್ಲಿ ಗಣಪತಿ ವಿಸರ್ಜನೆ ಇರುವುದರಿಂದ ಕಡಬ ಪೇಟೆಯ ರಸ್ತೆ ಬದಿಯಲ್ಲಿ ವಾಹನ ಪಾರ್ಕಿಂಗ್ ಮಾಡದಂತೆ ಕಡಬ ಠಾಣೆಯ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆ. 29ರ ಮದ್ಯಾಹ್ನ 12.00 ಗಂಟೆಯಿಂದ ರಾತ್ರಿ 12.00 ಗಂಟೆಯವರೆಗೆ ನಗರದಲ್ಲಿ ವಾಹನ ನಿಲುಗಡೆಯನ್ನು ಸಂಪೂರ್ಣ ನಿಷೇಧಿಸಿದೆ. ಎಲ್ಲಾ ವಾಹನದ ಮಾಲೀಕರು ತಮ್ಮ ವಾಹನಗಳನ್ನು ಅನುಗ್ರಹ ಹಾಲ್ ನಿಂದ ಕಡಬ ಜಂಕ್ಷನ್ ಬಸ್ಟ್ಯಾಂಡ್ ವರೆಗೆ ರಸ್ತೆಯ ಎರಡು ಬದಿಯಲ್ಲಿ ವಾಹನ ನಿಲ್ಲಿಸದಂತೆ ಸೂಚನೆ

ಕಡಬ: ಗಣಪತಿ ವಿಸರ್ಜನೆ ಹಿನ್ನೆಲೆ – ರಸ್ತೆ ಬದಿಯಲ್ಲಿ ವಾಹನ ನಿಲುಗಡೆಗೊಳಿಸದಂತೆ ಪೊಲೀಸರ ಸೂಚನೆ Read More »

ಕರಾವಳಿ

ಉಡುಪಿ: ತೊಟ್ಟಂ ಬೀಚ್ ಹತ್ತಿರ ಮಗುಚಿದ ದೋಣಿ; ನಾಲ್ವರು ಮೀನುಗಾರರ ರಕ್ಷಣೆ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 29 ಉಡುಪಿ : ಸಮುದ್ರದ ಪ್ರಕ್ಷುಬ್ಧತೆಯಿಂದಾಗಿ ಮೀನುಗಾರಿಕಾ ದೋಣಿ ಮಗುಚಿ ಬಿದ್ದ ಘಟನೆ ಮಲ್ಪೆಯ ತೊಟ್ಟಂ ಬೀಚ್ ಬಳಿ ಆಗಸ್ಟ್ 29 ರಂದು ನಡೆದಿದೆ. ಸಮುದ್ರಕ್ಕೆ ಇಳಿದಿದ್ದ ನಾಲ್ವರು ಮೀನುಗಾರರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತೊಟ್ಟಂ ವಾರ್ಡ್ ಪುರಸಭೆ ಸದಸ್ಯ ಯೋಗೇಶ್ ಅವರು ತಕ್ಷಣ ವೃತ್ತಿಪರ ಸಮಾಜ ಸೇವಕ ಈಶ್ವರ್ ಮಲ್ಪೆ ಮತ್ತು ಅವರ ತಂಡಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಈಶ್ವರ್ ಅವರು, ಸ್ಥಳೀಯರಾದ ಪ್ರವೀಣ್ ಮತ್ತು ಉದಯ್

ಉಡುಪಿ: ತೊಟ್ಟಂ ಬೀಚ್ ಹತ್ತಿರ ಮಗುಚಿದ ದೋಣಿ; ನಾಲ್ವರು ಮೀನುಗಾರರ ರಕ್ಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
crime, arrest, suspected

ಲಂಚ ಸ್ವೀಕಾರ ಆರೋಪ- ಓರ್ವ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 29. ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಲಂಚದ ಹಣದ ಸಮೇತ ಆರೋಪಿಯನ್ನು ಬಂಧಿಸಿದ ಘಟನೆ ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯಲ್ಲಿ ಗುರುವಾರ ಸಂಜೆ ನಡೆದಿದೆ.   ಪುತ್ತೂರು ತಾಲೂಕಿನ ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯ ಎಫ್.ಡಿ.ಎ ಸುನೀಲ್ ಎಂಬಾತ ದೂರುದಾರರಿಂದ 12,000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಮಂಗಳೂರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಲಂಚ ಸ್ವೀಕಾರ ಆರೋಪ- ಓರ್ವ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಪೆರಿಯಶಾಂತಿ: ಚರಂಡಿಗೆ ಬಿದ್ದು ಲಾರಿ ಚಾಲಕ ಮೃತ್ಯು..!

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ. 29. ಹೆದ್ದಾರಿ ಬದಿಯ ಕಾಂಕ್ರಿಟ್ ಚರಂಡಿಗೆ ಬಿದ್ದು ಲಾರಿ ಚಾಲಕ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಪೆರಿಯಶಾಂತಿ ಬಳಿಯ ನೇಲ್ಯಡ್ಕ ಎಂಬಲ್ಲಿ ಗುರುವಾರದಂದು ಮುಂಜಾನೆ ನಡೆದಿದೆ. ಮೃತಪಟ್ಟವರನ್ನು ಬೆಂಗಳೂರು ನೆಲಮಂಗಲ ನಿವಾಸಿ ಲಾರಿ ಚಾಲಕ ಹನುಮಂತರಾಯಪ್ಪ (60) ಎಂದು ಗುರುತಿಸಲಾಗಿದೆ. , ಆಗಸ್ಟ್ 27ರಂದು ರಾತ್ರಿ ಮಂಗಳೂರಿನಿಂದ ಬೆಂಗಳೂರು ಕಡೆಗೆ ಲಾರಿಯನ್ನು ಚಲಾಯಿಸಿಕೊಂಡು ಬರುತ್ತಿದ್ದ ಇವರು, ಆ.28ರಂದು ಮಧ್ಯರಾತ್ರಿ 1 ಗಂಟೆ ಸುಮಾರಿಗೆ ನೇಲ್ಯಡ್ಕದ ರಾಷ್ಟ್ರೀಯ ಹೆದ್ದಾರಿ

ಪೆರಿಯಶಾಂತಿ: ಚರಂಡಿಗೆ ಬಿದ್ದು ಲಾರಿ ಚಾಲಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ: ಯಾವುದೇ ಜಾತಿಗಳು ಬಿಟ್ಟು ಹೋಗಿದ್ದರೆ ಮಾಹಿತಿ ನೀಡಲು ಸೆ.1ರ ವರೆಗೆ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕರ್ನಾಟಕ ರಾಜ್ಯದಲ್ಲಿರುವ ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ ಎಲ್ಲ ಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸರ್ಕಾರದ ಆದೇಶಾನುಸಾರ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ, ಹಿಂದುಳಿದ ವರ್ಗಗಳು ಮತ್ತು ಇತರೆ ಜಾತಿ/ಉಪಜಾತಿಗಳ ಬಗ್ಗೆ ಸಾರ್ವಜನಿಕರ ಮಾಹಿತಿಗಾಗಿ ಯಾವುದೇ ಜಾತಿ/ಉಪಜಾತಿಗಳು ಬಿಟ್ಟು ಹೋಗಿದ್ದಲ್ಲಿ, ಅಂತಹ ಅಂಶಗಳ ಬಗ್ಗೆ ಸಲಹೆ/ ಸೂಚನೆ, ಮನವಿಗಳನ್ನು ನೀಡಲು ಸೆಪ್ಟೆಂಬರ್ 1ರ ವರೆಗೆ

ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ: ಯಾವುದೇ ಜಾತಿಗಳು ಬಿಟ್ಟು ಹೋಗಿದ್ದರೆ ಮಾಹಿತಿ ನೀಡಲು ಸೆ.1ರ ವರೆಗೆ ಅವಧಿ ವಿಸ್ತರಣೆ Read More »

ಕರಾವಳಿ

ಡೆಲಿವರಿ ಕೆಲಸ ಮಾಡುವ ಕಾರ್ಮಿಕರಿಗೆ ನೋಂದಣಿ ಅಭಿಯಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ದೇಶದಾದ್ಯಂತ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ವ್ಯಾಪ್ತಿಯನ್ನು ವಿಸ್ತರಿಸಲು ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯವು ಇ-ಶ್ರಮ್ ಪೋರ್ಟಲ್ ಅಭಿವೃದ್ಧಿಪಡಿಸಿದ್ದು, ಇದರಲ್ಲಿ ಸ್ವಿಗ್ಗಿ, ಝೊಮಾಟೋಗಳಂತಹ ಸಂಸ್ಥೆಗಳಲ್ಲಿ ಪುಢ್ ಡೆಲಿವರಿ ಮಾಡುವ ಹಾಗೂ ಅಮೆಜಾನ್, ಫ್ಲಿಪ್‍ಕಾರ್ಟ್, ಪೋರ್ಟರ್, ಫಾರ್ಮಸಿ, ಬ್ಲಿಂಕಿಟ್, ಜೆಪ್ಟೋ, ಬಿಗ್‍ ಬಾಸ್ಕೆಟ್, ಡಾಮಿನೋಸ್ ಮುಂತಾದ ಸಂಸ್ಥೆಗಳಲ್ಲಿ ಡೆಲಿವರಿ ಕೆಲಸ ನಿರ್ವಹಿಸುವ ಪ್ಲಾಟ್‍ಫಾರ್ಮ್ ಕಾರ್ಮಿಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಲು ಸೆಪ್ಟೆಂಬರ್ 5 ರವರೆಗೆ ವಿಶೇಷ ಅಭಿಯಾನವನ್ನು ನಡೆಸಲಾಗುತ್ತಿದೆ.

ಡೆಲಿವರಿ ಕೆಲಸ ಮಾಡುವ ಕಾರ್ಮಿಕರಿಗೆ ನೋಂದಣಿ ಅಭಿಯಾನ Read More »

ಕರಾವಳಿ

ಗುಂಡಿ ಬಿದ್ದ ಮಂಗಳೂರು ಏರ್‌ಪೋರ್ಟ್ ರಸ್ತೆ- ವಾಹನ ಸವಾರರಿಗೆ ಸಂಕಷ್ಟ

(ನ್ಯೂಸ್‌ ಕಡಬ) newskadaba.com ಆ. 29. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ ಪ್ರಮುಖ ರಸ್ತೆಯಾದ ಮಂಗಳೂರಿನ ಮರವೂರು ಬಳಿ ಇರುವ ಏರ್‌ ಪೋರ್ಟ್ ರಸ್ತೆಯಲ್ಲಿ ದೊಡ್ಡ-ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಮತ್ತು ಪ್ರಯಾಣಿಕರಿಗೆ ಗಂಭೀರ ಅಪಾಯ ತಂದೊಡ್ಡಿದೆ.   ಇದೇ ರಸ್ತೆಯಲ್ಲಿ ಸಾರ್ವಜನಿಕ ಸಾರಿಗೆ ಮತ್ತು ತುರ್ತು ಸೇವೆಗಳ ವಾಹನಗಳು ಸೇರಿದಂತೆ ದಿನನಿತ್ಯ ಭಾರೀ ಪ್ರಮಾಣದಲ್ಲಿ ವಾಹನಗಳು ಸಂಚರಿಸುತ್ತಿದ್ದು, ಹಾನಿಗೊಳಗಾದ ಈ ರಸ್ತೆಯಿಂದಾಗಿ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಅಲ್ಲದೇ ಮಳೆಗಾಲದಲ್ಲಿ ಅಥವಾ ರಾತ್ರಿಯ

ಗುಂಡಿ ಬಿದ್ದ ಮಂಗಳೂರು ಏರ್‌ಪೋರ್ಟ್ ರಸ್ತೆ- ವಾಹನ ಸವಾರರಿಗೆ ಸಂಕಷ್ಟ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top