ಕರಾವಳಿ

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ- ಸರಸ್ವತೀ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಾಂತ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ. 28. ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಪ್ರೇರಣಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕಡಲಕೆರೆ ಮೂಡಬಿದ್ರೆಯಲ್ಲಿ ನಡೆದ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ 14ರ ವಯೋಮಾನದ ಬಾಲಕಿಯರ ಅಥ್ಲೆಟಿಕ್ಸ್ ವಿಭಾಗದಲ್ಲಿ 8ನೇ ತರಗತಿಯ ಲಿಖಿತ ಪ್ರಥಮ ಸ್ಥಾನ, 14ರ ವಯೋಮಾನದ ಬಾಲಕರ ಅಥ್ಲೆಟಿಕ್ಸ್ ವಿಭಾಗದಲ್ಲಿ ಪೂಜನ್ ಡಿ.ಆರ್ 8ನೇ ತರಗತಿ ಪ್ರಥಮ ಸ್ಥಾನ, 17ರ ವಯೋಮಾನದ ಬಾಲಕರ ರಿದಮಿಕ್ಸ್ ಸ್ಪರ್ಧೆಯಲ್ಲಿ 9ನೇ ತರಗತಿಯ ದಿಗಂತ್ ಪ್ರಥಮ ಸ್ಥಾನ, ಅಥ್ಲೆಟಿಕ್ಸ್ […]

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ- ಸರಸ್ವತೀ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಾಂತ ಮಟ್ಟಕ್ಕೆ ಆಯ್ಕೆ Read More »

ಕರಾವಳಿ

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಮೃತರ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

(ನ್ಯೂಸ್‌ ಕಡಬ) newskadaba.com, ಆ.28 ಶ್ರೀನಗರ : ಭೀಕರ ಮಳೆಯಿಂದಾಗಿ ಜಮ್ಮು ಮತ್ತು ಕಾಶ್ಮೀರ ತತ್ತರಿಸಿ ಹೋಗಿದ್ದು, ಭೂ ಕುಸಿತ, ಪ್ರವಾಹ ಹಾಗೂ ಮಳೆಯಿಂದಾಗಿ ಸಂಭವಿಸಿದ ಅನಾಹುತದಿಂದ ಸಾವಿನ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಮಳೆಯಿಂದಾಗಿ ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ 36ಕ್ಕೆ ಏರಿದೆ. ಇದರ ಜೊತೆಗೆ ಮಳೆ ಸಂಬಂಧಿತ ಅವಘಡದಲ್ಲಿ ಮೃತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ರೆಸಾಯಿಯ ಅರ್ಧ್ ಕುವರಿಯಲ್ಲಿ ಆರು ಮಂದಿ ಮೃತಪಟ್ಟಿದ್ದು, ಅತಿಹೆಚ್ಚಿನ ಸಾವು ನೋವು ಇಲ್ಲಿ

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಮೃತರ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ Read More »

ಕರಾವಳಿ

ವಿದ್ಯಾರ್ಥಿಗಳಿಗೆ ತುಳು ಸಾಹಿತ್ಯದ ಆಸಕ್ತಿ ಮೂಡಿಸಿ : ನಾರಾಯಣ ರೈ ಕುಕ್ಕುವಳ್ಳಿ

(ನ್ಯೂಸ್ ಕಡಬ) newskadaba.com ಆ. 28. ವಿದ್ಯಾರ್ಥಿಗಳಿಗೆ ತುಳು ಸಾಹಿತ್ಯದ ಓದಿನ ಅಭಿರುಚಿ ಮೂಡಿಸುವುದು ಇಂದಿನ ಅಗತ್ಯವಾಗಿದೆ ಎಂದು ಮಕ್ಕಳ ಸಾಹಿತಿ ಹಾಗೂ ನಿವೃತ್ತ ಶಿಕ್ಷಕ ನಾರಾಯಣ ರೈ ಕುಕ್ಕುವಳ್ಳಿ ಹೇಳಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಶ್ರೀ ನಾರಾಯಣಗುರು ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ‘ಅಕಾಡೆಮಿಡ್ ಒಂಜಿ ದಿನ ಬಲೆ ತುಳು ಓದುಗ’ ಅಭಿಯಾನದ ಎಂಟನೇ ಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮುಂದಿನ ತಲೆಮಾರಿಗೆ ತುಳು ಭಾಷೆಯನ್ನು ಕೊಂಡೊಯ್ಯುವ ಮಹತ್ತರ ಜವಬ್ದಾರಿ ವಿದ್ಯಾರ್ಥಿಗಳಲ್ಲಿದೆ ಎಂದು  ಅವರು

ವಿದ್ಯಾರ್ಥಿಗಳಿಗೆ ತುಳು ಸಾಹಿತ್ಯದ ಆಸಕ್ತಿ ಮೂಡಿಸಿ : ನಾರಾಯಣ ರೈ ಕುಕ್ಕುವಳ್ಳಿ Read More »

ಕರಾವಳಿ

ಪರಿಶಿಷ್ಟ ಪಂಗಡದ ಸಾಧಕರಿಗೆ ವಾಲ್ಮೀಕಿ ಪ್ರಶಸ್ತಿ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಆ. 28. ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಪರಿಶಿಷ್ಟ ಪಂಗಡದ ಜನಾಂಗದ ಏಳಿಗೆಗಾಗಿ ಶ್ರಮಿಸಿದ ಪರಿಶಿಷ್ಟ ಪಂಗಡಕ್ಕೆ ಸೇರಿದ ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ ಹಾಗೂ ಇನ್ನಿತರೆ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ರಾಜ್ಯಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಿ ಗೌರವಿಸಲು ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 7 ರಂದು ನಡೆಯುವ ರಾಜ್ಯ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಪ್ರಶಸ್ತಿಯನ್ನು ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಸೆಪ್ಟೆಂಬರ್ 10. ಅರ್ಜಿ ಸಲ್ಲಿಸುವವರು

ಪರಿಶಿಷ್ಟ ಪಂಗಡದ ಸಾಧಕರಿಗೆ ವಾಲ್ಮೀಕಿ ಪ್ರಶಸ್ತಿ: ಅರ್ಜಿ ಆಹ್ವಾನ Read More »

ಕರಾವಳಿ

ಉಡುಪಿ: ಮಲ್ಪೆ ಬೀಚ್‌ನಲ್ಲಿ ಕಡಲತೀರಕ್ಕೆ ತೇಲಿ ಬಂದ ಕಸ ರಾಶಿ – ಶೀಘ್ರ ತೆರವಿಗೆ ಜನರ ಒತ್ತಾಯ

(ನ್ಯೂಸ್‌ ಕಡಬ) newskadaba.com, ಆ.28 ಉಡುಪಿ :  ಮಳೆಗಾಲದಲ್ಲಿ ಸಮುದ್ರ ಅಲೆಗಳೊಂದಿಗೆ ಬಂದ ಕಸಕಡ್ಡಿಗಳು ಮಲ್ಪೆ ಕಡಲತೀರಕ್ಕೆ ಬಂದು ಬಿದ್ದಿದ್ದು, ತ್ಯಾಜ್ಯದ ದೊಡ್ಡ ರಾಶಿಗಳು ಇನ್ನೂ ತೆರವುಗೊಳಿಸದೆ ಉಳಿದಿದ್ದು, ಪ್ರವಾಸಿಗರು ಮತ್ತು ನಿವಾಸಿಗಳು ಕಸದ ರಾಶಿ ಕರಾವಳಿಯ ಸೌಂದರ್ಯವನ್ನು ಹಾಳು ಮಾಡುತ್ತಿದೆ ಎಂದು ಟೀಕಿಸುತ್ತಿದ್ದಾರೆ. ಪ್ಲಾಸ್ಟಿಕ್ ತ್ಯಾಜ್ಯ, ಬಾಟಲಿಗಳು, ಡೈಪರ್‌ಗಳು, ಪಾದರಕ್ಷೆಗಳು, ತ್ಯಜಿಸಿದ ಆಟಿಕೆಗಳು ಮತ್ತು ಆಹಾರ ಹೊದಿಕೆಗಳು ಕಡಲತೀರದ ಸುಮಾರು ಎರಡು ಕಿಲೋಮೀಟರ್‌ಗಳಷ್ಟು ಹರಡಿಕೊಂಡಿವೆ. ಕಳೆದ ವರ್ಷ ಕಡಲತೀರದ ನಿರ್ವಹಣೆಯ ಜವಾಬ್ದಾರಿಯನ್ನು ಕಡಲತೀರ ಅಭಿವೃದ್ಧಿ ಸಮಿತಿಯಿಂದ

ಉಡುಪಿ: ಮಲ್ಪೆ ಬೀಚ್‌ನಲ್ಲಿ ಕಡಲತೀರಕ್ಕೆ ತೇಲಿ ಬಂದ ಕಸ ರಾಶಿ – ಶೀಘ್ರ ತೆರವಿಗೆ ಜನರ ಒತ್ತಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೆದ್ದಾರಿ ಭೂಸ್ವಾಧೀನ – ಪರಿಹಾರ ಪಾವತಿ ಆಗಸ್ಟ್ 30 ರಂದು

(ನ್ಯೂಸ್ ಕಡಬ) newskadaba.com ಆ. 28. ರಾಷ್ಟ್ರೀಯ ಹೆದ್ದಾರಿ ಸಾಣೂರು – ಬಿಕರ್ನಕಟ್ಟೆ ವಿಭಾಗದ ರಸ್ತೆ ಅಗಲೀಕರಣಕ್ಕಾಗಿ ಭೂಸ್ವಾಧೀನ ಪಡಿಸಲಾದ ಜಮೀನಿನ ಮಾಲೀಕರಿಗೆ ಪರಿಹಾರ ಪಾವತಿ ಹಾಗೂ ಕ್ಲೈಮ್‍ ಗಳನ್ನು ಪಡೆಯುವ ಅದಾಲತ್ ಕಾರ್ಯಕ್ರಮವು ಆಗಸ್ಟ್ 30 ರಂದು ಬೆಳಿಗ್ಗೆ 10.30 ಗಂಟೆಗೆ ಮೂಡಬಿದ್ರೆಯ ತಾಲೂಕು ಆಡಳಿತ ಸೌಧ ಸಭಾಭವನದಲ್ಲಿ ನಡೆಯಲಿದೆ. ಸಾಣೂರು, ಬೆಳುವಾಯಿ, ಪಡುಮಾರ್ನಾಡ್, ಮಾರ್ಪಾಡಿ, ಪುತ್ತಿಗೆ, ತೋಡಾರು, ಬಡಗಮಿಜಾರು, ತೆಂಕ ಮಿಜಾರು ಗ್ರಾಮಗಳ ಜಮೀನಿನ ಮಾಲೀಕರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗಿ ಪರಿಹಾರ ಮೊತ್ತವನ್ನು ಪಡೆಯಬಹುದು.

ಹೆದ್ದಾರಿ ಭೂಸ್ವಾಧೀನ – ಪರಿಹಾರ ಪಾವತಿ ಆಗಸ್ಟ್ 30 ರಂದು Read More »

ಕರಾವಳಿ

ಕಡಬ : ಭಾರೀ ಮಳೆ – ಇಂದು ಶಾಲೆಗಳಿಗೆ ರಜೆ ಘೋಷಣೆ

(ನ್ಯೂಸ್‌ ಕಡಬ) newskadaba.com, ಆ.28 ಕಡಬ : ತಾಲೂಕಿನಲ್ಲಿ ನಿನ್ನೆ ಸಂಜೆ ಮೊದಲು ಆರಂಭವಾದ ನಿರಂತರ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಕಡಬ ತಾಲೂಕಿನ ಎಲ್ಲ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ, ಜೊತೆಗೆ ಅಂಗನವಾಡಿ ಕೇಂದ್ರಗಳಿಗೆ ಮಳೆಯ ತೀವ್ರತೆ ಹೆಚ್ಚಿರುವ ಹಿನ್ನೆಲೆಯಲ್ಲಿ, ಇಂದು (ಆ. 28) ರಜೆ ಘೋಷಿಸಲಾಗಿದೆ. ಜಿಲ್ಲಾ ಆಡಳಿತ ಈ ನಿರ್ಧಾರವನ್ನು ಮಳೆಗಾಲದ ಹಿನ್ನಲೆಯಲ್ಲಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ತೆಗೆದುಕೊಂಡಿದೆ.

ಕಡಬ : ಭಾರೀ ಮಳೆ – ಇಂದು ಶಾಲೆಗಳಿಗೆ ರಜೆ ಘೋಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ ತಾಲೂಕಿನ ಶಾಲಾ-ಕಾಲೇಜುಗಳಿಗೆ ಇಂದು (ಆ.28) ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಕಡಬ, ಆ.28. ಕಳೆದ ರಾತ್ರಿಯಿಂದ ನಿರಂತರ ಮಳೆ ಸುರಿಯುತ್ತಿರುವುದರಿಂದಾಗಿ ಕಡಬ ತಾಲೂಕಿನ ಶಾಲಾ ಕಾಲೇಜುಗಳಿಗೆ ಗುರುವಾರದಂದು ರಜೆ ಘೋಷಿಸಲಾಗಿದೆ. ಕಡಬ ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಆಗಸ್ಟ್ 28 ರಂದು ರಜೆ ಘೋಷಿಸಲಾಗಿದೆ ಎಂದು ಕಡಬ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಡಬ ತಾಲೂಕಿನ ಶಾಲಾ-ಕಾಲೇಜುಗಳಿಗೆ ಇಂದು (ಆ.28) ರಜೆ ಘೋಷಣೆ Read More »

ಕರಾವಳಿ

ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: “ಯುದ್ಧ ಇಲಾಖೆ” ಬಗ್ಗೆ ಟ್ರಂಪ್ ಒಲವು!

(ನ್ಯೂಸ್‌ ಕಡಬ) newskadaba.com, ಆ.26 : ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತೆಗೆದುಕೊಳ್ಳುತ್ತಿರುವ ನಿರ್ಧಾರಗಳು ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಲೇ ಇರುತ್ತದೆ. ಈಗ ಟ್ರಂಪ್ ಪ್ರಸ್ತಾಪಿಸಿರುವ ಯುದ್ಧ ಇಲಾಖೆ ಸುದ್ದಿಯಲ್ಲಿದೆ. ಅಮೆರಿಕದ ರಕ್ಷಣಾ ಇಲಾಖೆಯನ್ನು “ಯುದ್ಧ ಇಲಾಖೆ” ಎಂದು ಮರುನಾಮಕರಣ ಮಾಡುವ ಉದ್ದೇಶವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ. ರಕ್ಷಣಾ ಇಲಾಖೆ ಎಂದು ಹೇಳುವುದಕ್ಕಿಂತಲೂ ಯುದ್ಧ ಇಲಾಖೆ (Department Of War) ಎನ್ನುವುದು ಹೆಚ್ಚು ಬಲವಾಗಿ ಧ್ವನಿಸುತ್ತದೆ ಎಂಬುದು ಟ್ರಂಪ್ ಅಭಿಪ್ರಾಯ. ಅಮೆರಿಕ ಅಧ್ಯಕ್ಷರು

ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: “ಯುದ್ಧ ಇಲಾಖೆ” ಬಗ್ಗೆ ಟ್ರಂಪ್ ಒಲವು! Read More »

ಕರಾವಳಿ

ಮಹೇಶ್‌ ತಿಮರೋಡಿ ಮನೆಯಲ್ಲಿ ಎಸ್‌ಐಟಿ ಶೋಧ; ಚಿನ್ನಯ್ಯನ ಮೊಬೈಲ್‌ ವಶಕ್ಕೆ

(ನ್ಯೂಸ್‌ ಕಡಬ) newskadaba.com, ಆ.26 : ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಸೌಜನ್ಯಾಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ನಿವಾಸದ ಮೇಲೆ ವಿಶೇಷ ತನಿಖಾ ತಂಡ ಮಂಗಳವಾರ ದಾಳಿ ನಡೆಸಿ, ಪರಿಶೀಲನೆ ನಡೆಸಿದೆ. ಸಾಕ್ಷಿಯಾಗಿ ಬಂದು, ಈಗ ಆರೋಪಿಯಾಗಿರುವ ಮಾಸ್ಕ್‌ ಮ್ಯಾನ್‌ ಚಿನ್ನಯ್ಯನ ಹೇಳಿಕೆಯಂತೆ ಪೊಲೀಸರು ಕೋರ್ಟ್‌ ಸರ್ಚ್‌ ವಾರಂಟ್‌ ಪಡೆದು ತಿಮರೋಡಿ ನಿವಾಸಕ್ಕೆ ತೆರಳಿದ್ದಾರೆ. ಪರಿಶೀಲನೆ ವೇಳೆ ಚಿನ್ನಯ್ಯನ ಮೊಬೈಲ್‌ ಸೇರಿ ಇನ್ನಿತರ ವಸ್ತುಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ನಾನು ತಿಮರೋಡಿಯ ನಿವಾಸಕ್ಕೆ ಹೋಗುತ್ತಿದ್ದೆ.

ಮಹೇಶ್‌ ತಿಮರೋಡಿ ಮನೆಯಲ್ಲಿ ಎಸ್‌ಐಟಿ ಶೋಧ; ಚಿನ್ನಯ್ಯನ ಮೊಬೈಲ್‌ ವಶಕ್ಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top