ಕರಾವಳಿ

ಮಾಹೆ ಮತ್ತು ಎಸ್ ಎಸ್ ವಿ ಎಂ ಇ ಐ ನಡುವೆ ಉನ್ನತ ವಿದ್ಯಾಭ್ಯಾಸದಲ್ಲಿ ನಾವಿನ್ಯತೆಗೆ ಜ್ಞಾಪಕ ಪತ್ರಕ್ಕೆ ಸಹಿ

(ನ್ಯೂಸ್‌ ಕಡಬ) newskadaba.com,ಆ.23 ಮಣಿಪಾಲ : ದೇಶದ ಪ್ರತಿಷ್ಠಿತ ಇನ್‌ಸ್ಟಿಟ್ಯೂಷನ್ ಆಫ್ ಎಮಿನೆನ್ಸ್ ಡೀಮ್ಡ್ ಟು ಬಿ ಯುನಿವರ್ಸಿಟಿ ಆಗಿರುವ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ), ಶ್ರೀ ಸೋದೆ ವಾದಿರಾಜ ಮಠ ವಿದ್ಯಾಭ್ಯಾಸ ಸಂಸ್ಥೆ (ಎಸ್ ಎಸ್ ವಿ ಎಂ ಇ ಐ) ಜೊತೆ ಆಗಸ್ಟ್ 22, 2025 ರಂದು ಮಣಿಪಾಲ ಕ್ಯಾಂಪಸ್‌ನಲ್ಲಿ ಮಹತ್ವದ ಮೆಮೊರಾಂಡಂ ಆಫ್ ಅಂಡರ್‌ಸ್ಟ್ಯಾಂಡಿಂಗ್ ಅಥವಾ ಜ್ಞಾಪಕ ತಿಳುವಳಿಕೆ ಪತ್ರಕ್ಕೆ ಸಹಿ ಮಾಡಿತು. ಕರ್ನಾಟಕದ ಶಿಕ್ಷಣ ಪರಿಸರವನ್ನು ಬಲಪಡಿಸುವ ಹಾಗೂ […]

ಮಾಹೆ ಮತ್ತು ಎಸ್ ಎಸ್ ವಿ ಎಂ ಇ ಐ ನಡುವೆ ಉನ್ನತ ವಿದ್ಯಾಭ್ಯಾಸದಲ್ಲಿ ನಾವಿನ್ಯತೆಗೆ ಜ್ಞಾಪಕ ಪತ್ರಕ್ಕೆ ಸಹಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೈಬರಹದ ಮೂಲಕ ಕುರ್’ಆನ್ ಬರೆದು ಸಾಧನೆ ಬೈತಡ್ಕದ ಸಜ್‌ಲಾ ಇಸ್ಮಾಯಿಲ್ ರಿಗೆ ಸನ್ಮಾನ ಮತ್ತು ಕುರ್’ಆನ್ ಪ್ರದರ್ಶನ

(ನ್ಯೂಸ್ ಕಡಬ) newskadaba.com ಬೈತಡ್ಕ, ಆ. 23. ಜುಮ್ಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಬೈತಡ್ಕ ಇದರ ವತಿಯಿಂದ ಮಷಿ ಹಾಗೂ ಕಲಂ ಬಳಸಿ ಕೈಬರಹದ ಮೂಲಕ ಪರಿಶುದ್ಧ ಕುರಾನ್’ನ 30 ಕಾಂಡ(ಜುಝುಅ)ಗಳನ್ನು ಬರೆದು ಅದ್ಭುತ ಸಾಧನೆ ಮಾಡಿ ಇತಿಹಾಸ ಸೃಷ್ಟಿಸಿದ ಸಜ್‌ಲಾ ಇಸ್ಮಾಯಿಲ್ ಬೈತಡ್ಕ ರವರ ಪರವಾಗಿ ಆಕೆಯ ತಂದೆ ಬೈತಡ್ಕ ಜಮಾಅತ್ ಸಮಿತಿ ಸದಸ್ಯರು ಆಗಿರುವ ಬಿ.ಪಿ ಇಸ್ಮಾಯಿಲ್ ಹಾಜಿ ರವರಿಗೆ ಸನ್ಮಾನ ಹಾಗೂ ಕುರಾನ್ ಪ್ರದರ್ಶನ ಕಾರ್ಯಕ್ರಮವು ಬೈತಡ್ಕ ಮಸ್ಜಿದ್ ನಲ್ಲಿ ಶುಕ್ರವಾರ

ಕೈಬರಹದ ಮೂಲಕ ಕುರ್’ಆನ್ ಬರೆದು ಸಾಧನೆ ಬೈತಡ್ಕದ ಸಜ್‌ಲಾ ಇಸ್ಮಾಯಿಲ್ ರಿಗೆ ಸನ್ಮಾನ ಮತ್ತು ಕುರ್’ಆನ್ ಪ್ರದರ್ಶನ Read More »

ಕರಾವಳಿ

ಧರ್ಮಸ್ಥಳ ಕೇಸ್:‌ ವಿಚಾರಣೆಗೆ ಹಾಜರಾಗಲು ಯೂಟ್ಯೂಬರ್‌ ಸಮೀರ್‌ಗೆ ನೋಟಿಸ್‌

(ನ್ಯೂಸ್‌ ಕಡಬ) newskadaba.com, ಆ.23: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಲಾಗಿದೆ ಎಂಬ ಆರೋಪದ ಬಗ್ಗೆ ದೂತ ಯೂಟ್ಯೂಬ್‌ ಚಾನಲ್‌ನಲ್ಲಿ ವಿಡಿಯೋ ಪ್ರಸಾರ ಮಾಡಿದ್ದ ಆರೋಪದ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಮೀರ್‌ ಎಂ.ಡಿ. ಅವರಿಗೆ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ. ಒಂದು ವೇಳೆ ವಿಚಾರಣೆಗೆ ಹಾಜರಾಗದಿದ್ದರೆ ಕೋರ್ಟ್‌ ಆದೇಶ ಉಲ್ಲಂಘನೆಯಾಗಿ ನ್ಯಾಯಾಂಗ ನಿಂದನೆಯಾಗಲಿದೆ. ವಿಡಿಯೋ ಪ್ರಸಾರದ ಬಗ್ಗೆ ಜು.12ರಂದು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಮೀರ್‌ಗೆ 3 ಬಾರಿ ನೋಟಿಸ್‌ ಜಾರಿ ಮಾಡಲಾಗಿತ್ತು. ಸಮೀರ್‌ನ್ನು ಬಂಧಿಸಲು ಧರ್ಮಸ್ಥಳ

ಧರ್ಮಸ್ಥಳ ಕೇಸ್:‌ ವಿಚಾರಣೆಗೆ ಹಾಜರಾಗಲು ಯೂಟ್ಯೂಬರ್‌ ಸಮೀರ್‌ಗೆ ನೋಟಿಸ್‌ Read More »

ಕರಾವಳಿ

ಆಗಸ್ಟ್ 25 ರಂದು ಗಣೇಶ ಚತುರ್ಥಿ ವಿಶೇಷ ವಸ್ತು ಪ್ರದರ್ಶನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ತಾಲೂಕು ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಗಣೇಶ ಹಬ್ಬದ ವಿಶೇಷ ಸಂಜೀವಿನಿ ಮಾಸಿಕ ಸಂತೆ ವಸ್ತು ಪ್ರದರ್ಶನ ಮತ್ತು ಮಾರಾಟ  ಮಂಗಳೂರು ತಾಲೂಕು ಪಂಚಾಯತ್ ಆವರಣದಲ್ಲಿ  ಆಗಸ್ಟ್ 25 ರಂದು  ಬೆಳಿಗ್ಗೆ 10 ರಿಂದ ನಡೆಯಲಿದೆ. ಗ್ರಾಮೀಣ ಮಹಿಳೆಯರು ಮನೆಯಲ್ಲೇ ತಯಾರಿಸಿದ ಹೋಮ್ ಪ್ರಾಡಕ್ಟ್‍ ಗಳು,

ಆಗಸ್ಟ್ 25 ರಂದು ಗಣೇಶ ಚತುರ್ಥಿ ವಿಶೇಷ ವಸ್ತು ಪ್ರದರ್ಶನ Read More »

ಕರಾವಳಿ

ದೇವಸ್ಥಾನ ವ್ಯವಸ್ಥಾಪನಾ ಸಮಿತಿ ರಚಿಸಲು ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ದ.ಕ ಜಿಲ್ಲೆಯ ಪ್ರವರ್ಗ “ಬಿ” ಮತ್ತು “ಸಿ” ವರ್ಗದ ಈ ಕೆಳಕಂಡ ಅಧಿಸೂಚಿತ ಸಂಸ್ಥೆಗಳಿಗೆ 9 ಜನ ಸದಸ್ಯರಿರುವ ವ್ಯವಸ್ಥಾಪನಾ ಸಮಿತಿಯನ್ನು ರಚಿಸುವ ಸಲುವಾಗಿ ಆಸಕ್ತ ಭಕ್ತಾಧಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಅಂತಿಮ ಸೆಪ್ಟೆಂಬರ್ 12 ರೊಳಗಾಗಿ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರು ಸಲ್ಲಿಸಬೇಕು. ಪ್ರಕಟಣೆಗೆ ಸ್ಪಂದಿಸಿ ಅರ್ಜಿಗಳು ಸ್ವೀಕೃತವಾಗದಿರುವ ದೇವಸ್ಥಾನಗಳಿಗೆ ಮರುಪ್ರಕಟಣೆ ಹೊರಡಿಸಲಾದ ವಿವರ:- 1) ಮೂಡಬಿದ್ರೆ ತಾಲೂಕಿನ ಧರೆಗುಡ್ಡೆ

ದೇವಸ್ಥಾನ ವ್ಯವಸ್ಥಾಪನಾ ಸಮಿತಿ ರಚಿಸಲು ಅರ್ಜಿ ಆಹ್ವಾನ Read More »

ಕರಾವಳಿ

ಸೌಜನ್ಯ ತಾಯಿ ಷಡ್ಯಂತ್ರಕ್ಕೆ ಬಲಿಯಾಗಿರಬಹುದು, ಅವರನ್ನು ವಿಚಾರಣೆ ನಡೆಸಿ: ಸೂಲಿಬೆಲೆ

(ನ್ಯೂಸ್‌ ಕಡಬ) newskadaba.com, ಆ.23:‌‌ ಸೌಜನ್ಯ ತಾಯಿ ಕೂಡ ಷಡ್ಯಂತ್ರಕ್ಕೆ ಬಲಿಯಾಗಿರಬಹುದು. ಹಾಗಾಗಿ ಅವರನ್ನು ಕೂಡ ವಿಚಾರಣೆಗೆ ಒಳಪಡಿಸಬೇಕು ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಜಾತಾ ಭಟ್‌ ಅವರನ್ನು ಹೇಗೆ ಆ ಗುಂಪು ಷಡ್ಯಂತ್ರ ಮಾಡಿ ಧರ್ಮಸ್ಥಳದ ವಿರುದ್ದ ಅಪಪ್ರಚಾರ ಮಾಡಿತ್ತು. ಸುಜಾತಾ ಭಟ್‌ ಅವರನ್ನು ಮುಂದಿಟ್ಟುಕೊಂಡು ದಿನದಿಂದ ದಿನಕ್ಕೆ ಕಟ್ಟುಕಥೆ ಹೆಣೆದಿತ್ತು. ಇದೀಗ ಸುಜಾತಾ ಭಟ್‌ ಅವರೇ ಯಾರೋ ತನ್ನನ್ನು ಹೆದರಿಸಿ ಹೀಗೆ ಮಾಡಿಸಿದ್ದಾರೆ ಎಂದು ಹೇಳಿದ್ದಾರೆ ಎಂದಿದ್ದಾರೆ. ಸೌಜನ್ಯ

ಸೌಜನ್ಯ ತಾಯಿ ಷಡ್ಯಂತ್ರಕ್ಕೆ ಬಲಿಯಾಗಿರಬಹುದು, ಅವರನ್ನು ವಿಚಾರಣೆ ನಡೆಸಿ: ಸೂಲಿಬೆಲೆ Read More »

ಕರಾವಳಿ, ಕರ್ನಾಟಕ

ಬಿಜೈ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಗಣೇಶೋತ್ಸವ

(ನ್ಯೂಸ್ ಕಡಬ) newskadaba.com ಆ. 23. ಶ್ರೀ ವಿದ್ಯಾಗಣಪತಿ ಸೇವಾ ಟ್ರಸ್ಟ್, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಮಂಗಳೂರು ವಿಭಾಗ ಇದರ 40 ನೇ ವರ್ಷದ ಗಣೇಶೋತ್ಸವವು ಆಗಸ್ಟ್ 27 ರಿಂದ ಆಗಸ್ಟ್ 31 ರವರೆಗೆ ಮಂಗಳೂರಿನ ಕೆ.ಎಸ್.ಆರ್.ಟಿ.ಸಿ ಬಿಜೈ ಬಸ್ಸು ನಿಲ್ದಾಣದ ಆವರಣದಲ್ಲಿ ನಡೆಯಲಿದೆ. ಪ್ರತೀ ದಿನ ಸಂಜೆ 4ರಿಂದ ಭಜನಾ ಕಾರ್ಯಕ್ರಮ ಹಾಗೂ ಸಂಜೆ 7 ರಿಂದ ಜರಗುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಆಗಸ್ಟ್ 27ರಂದು ನೃತ್ಯ ವೈಭವ, ಆಗಸ್ಟ್ 28 ರಂದು ಭಕ್ತಿ

ಬಿಜೈ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಗಣೇಶೋತ್ಸವ Read More »

ಕರಾವಳಿ

ಕೆಲಸದ ಸ್ಥಳಗಳಲ್ಲಿ ಆಂತರಿಕ ದೂರು ಸಮಿತಿ ರಚಿಸಲು ಸೂಚನೆ

(ನ್ಯೂಸ್ ಕಡಬ) newskadaba.com ಆ. 23. ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ ಮತ್ತು ನಿವಾರಿಸುವಿಕೆ) ಕಾಯ್ದೆಯ ಅನುಷ್ಠಾನಕ್ಕಾಗಿ ಸರ್ವೋಚ್ಛ ನ್ಯಾಯಾಲಯದ ಆದೇಶಗಳನ್ವಯ ಕಾಯ್ದೆಯು ಅನ್ವಯಿಸುವ 10 ಮತ್ತು 10 ಕ್ಕಿಂತ ಹೆಚ್ಚಿನ ಕಾರ್ಮಿಕರನ್ನು ಹೊಂದಿರುವ ಪ್ರತಿ ಸಂಸ್ಥೆಯ ಮಾಲೀಕರು ತಮ್ಮ ಸಂಸ್ಥೆಯಲ್ಲಿ ಆಂತರಿಕ ದೂರು ಸಮಿತಿಯನ್ನು ರಚಿಸುವುದು ಕಡ್ಡಾಯವಾಗಿರುತ್ತದೆ. ಹಲವು ಸಂಸ್ಥೆಗಳು ಇದುವರೆಗೂ ಆಂತರಿಕ ಸಮಿತಿಯನ್ನು ರಚಿಸದೇ ಮತ್ತು ರಚಿಸಿರುವ ಬಗ್ಗೆ ಮಾಹಿತಿ ನೀಡದಿರುವುದು ಕಂಡು ಬಂದಿರುತ್ತದೆ. ಹಾಗಾಗಿ ಸರ್ವೋಚ್ಛ ನ್ಯಾಯಾಲಯವು

ಕೆಲಸದ ಸ್ಥಳಗಳಲ್ಲಿ ಆಂತರಿಕ ದೂರು ಸಮಿತಿ ರಚಿಸಲು ಸೂಚನೆ Read More »

ಕರಾವಳಿ

ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಆ. 23. 2025-26ನೇ ಶೈಕ್ಷಣಿಕ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ಹಾಸ್ಟೆಲ್‍ ಗಳಲ್ಲಿ (ಎಲ್ಲಾ ಮೆಟ್ರಿಕ್ ನಂತರದ ಕೋರ್ಸುಗಳ ವಿದ್ಯಾರ್ಥಿಗಳಿಗೆ) ಆನ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ  ಸೆಪ್ಟೆಂಬರ್  15. ಎಸ್.ಎಚ್.ಪಿ (ರಾಜ್ಯ ಹಾಸ್ಟೆಲ್ ಪೋರ್ಟಲ್) ವೆಬ್‍ ಸೈಟ್  https://shp.karnataka.gov.in/ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಸಲ್ಲಿಸುವ ವಿಧಾನ ಮತ್ತು ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ವೆಬ್‍ ಸೈಟ್ https://dom.karnataka.gov.in

ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶ: ಅರ್ಜಿ ಆಹ್ವಾನ Read More »

ಕರಾವಳಿ

ಅತಿಥಿ ಶಿಕ್ಷಕರ ಮತ್ತು ಸಹಾಯಕಿ ಹುದ್ದೆ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಆ. 23. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನ ಆಜಾದ್ ಪೂರ್ವ ಪ್ರಾಥಮಿಕ ಶಾಲೆ (ಎಲ್.ಕೆ.ಜಿ-ಯು.ಕೆ.ಜಿ) ಪುತ್ತೂರು, ಮಂಜನಾಡಿ, ಗುರುಕಂಬಳ ಮತ್ತು ಪುದು ಫರಂಗಿಪೇಟೆ ಇಲ್ಲಿಗೆ ಅತಿಥಿ ಶಿಕ್ಷಕಿ ಮತ್ತು ಸಹಾಯಕಿ (ಆಯಾ) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಮೊ.ಸಂ :9686445399, 9743243036, 9743013073, 8660948731 ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ  ಕಲ್ಯಾಣ  ಇಲಾಖೆ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅತಿಥಿ ಶಿಕ್ಷಕರ ಮತ್ತು ಸಹಾಯಕಿ ಹುದ್ದೆ- ಅರ್ಜಿ ಆಹ್ವಾನ Read More »

ಕರಾವಳಿ
Scroll to Top