ಕರಾವಳಿ

ಮಂಗಳೂರು: ವಿಶ್ವದ ಮೊದಲ ‘ಎಐ ಕಾರ್ಡ್’ ಡೀಲರ್‌ ಆಗಲು ಸುವರ್ಣ ಅವಕಾಶ

(ನ್ಯೂಸ್‌ ಕಡಬ) newskadaba.com ಆ. 19 ಮಂಗಳೂರು: ಕೃತಕ ಬುದ್ಧಿಮತ್ತೆಯು ವಿಶ್ವದ ಭವಿಷ್ಯವಾಗಿರುವ ಈ ಕಾಲದಲ್ಲಿ, ಎಐ ಮೇಲಿನ ಹೂಡಿಕೆಯೆಂದರೆ ಚಿನ್ನದೇ ಫಸಲೇ ಸರಿ. ಇಂತಹ ಅವಕಾಶವೊಂದು ಈಗ ತೆರೆದುಕೊಂಡಿದೆ. ಶಿಕ್ಷಣದಲ್ಲಿ ಎಐ ಅಳವಡಿಕೆಯ ಚೊಚ್ಚಲ ಹೆಜ್ಜೆಯಾದ ʻವಿಶ್ವದ ಮೊದಲ ಎಐ ಕಾರ್ಡ್ʼ ಹೆಗ್ಗಳಿಕೆಯ ʻಯತಿಕಾರ್ಪ್ ಎಐ ಕಾರ್ಡ್ʼ ಇದೀಗ ರಾಜ್ಯಾದ್ಯಂತ ಡೀಲರ್‌ಶಿಪ್ ಪಡೆಯಲು ಅರ್ಜಿ ಆಹ್ವಾನಿಸಿದೆ. ಈಗಾಗಲೇ ಮೊದಲ ಹಂತದಲ್ಲಿ ಒಂದು ಲಕ್ಷಕ್ಕೂ ಅಧಿಕವಾದ ಫಲಾನುಭವಿಗಳು ಈ ಕಾರ್ಡ್‌ನ ಬಳಕೆದಾರರಾಗಿದ್ದಾರೆ. ಇದೀಗ ಸಂಸ್ಥೆಯು 2ನೇ ಹಂತದ […]

ಮಂಗಳೂರು: ವಿಶ್ವದ ಮೊದಲ ‘ಎಐ ಕಾರ್ಡ್’ ಡೀಲರ್‌ ಆಗಲು ಸುವರ್ಣ ಅವಕಾಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಪವಿತ್ರ ಕುರಾನ್ ಅನ್ನು ಕೈಬರಹದಲ್ಲಿ ಬರೆದು ದಾಖಲೆ ಬರೆದ ಯುವತಿ

(ನ್ಯೂಸ್‌ ಕಡಬ) newskadaba.com ಆ. 19. ಪವಿತ್ರ ಕುರಾನ್ ನ 30 ಕಾಂಡ(ಜುಝ್)ಗಳನ್ನು ಕೈಯಲ್ಲಿ ಬರೆಯುವ ಮೂಲಕ ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ಪುತ್ತೂರು ತಾಲೂಕಿನ ಬೈತಡ್ಕ ಇಸ್ಮಾಯಿಲ್ ಹಾಜಿ ಮತ್ತು ಝಕ್‌ರಾ ಜಾಸ್ಮಿನ್ ದಂಪತಿ ಪುತ್ರಿ ಸಜ್‌ಲ ಇಸ್ಮಾಯಿಲ್ ಅವರು ಗಮನ ಸೆಳೆದಿದ್ದಾರೆ.   2021ರ ಜನವರಿಯಲ್ಲಿ ಕುರಾನ್ ಬರವಣಿಗೆಯನ್ನು ಆರಂಭಿಸಿದ್ದ ಅವರು 2025ರ ಆಗಸ್ಟ್ ನಲ್ಲಿ ಪೂರ್ಣಗೊಳಿಸಿದ್ದಾರೆ. ಸಜ್‌ಲ ಅವರು ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನಲ್ಲಿ ಬಿಕಾಂ ಪದವಿ ವ್ಯಾಸಂಗ ಮಾಡುತ್ತಿದ್ದರು.

ಕಡಬ: ಪವಿತ್ರ ಕುರಾನ್ ಅನ್ನು ಕೈಬರಹದಲ್ಲಿ ಬರೆದು ದಾಖಲೆ ಬರೆದ ಯುವತಿ Read More »

ಕರಾವಳಿ

ಮಾದಕ ದ್ರವ್ಯ ಮುಕ್ತ ಕರ್ನಾಟಕ ಅಭಿಯಾನ ಆರಂಭ

(ನ್ಯೂಸ್‌ ಕಡಬ) newskadaba.com ಆ. 19. ಸಂಜೀವಿನಿಯಡಿಯಲ್ಲಿ ಕರ್ತವ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳು ಮಾದಕ ವ್ಯಸನದಿಂದ ಸಮಾಜವನ್ನು ಹೊರಗೆ ತರಲು ಮಾಹಿತಿಯನ್ನು ಜನರಿಗೆ ಮುಟ್ಟಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಾಡೆ ವಿನಾಯಕ ಕಾರ್ಭಾರಿ ತಿಳಿಸಿದ್ದಾರೆ. ಅವರು ಸೋಮವಾರದಂದು ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಮಾದಕ ವ್ಯಸನ ಮುಕ್ತ ಸಮಾಜದ ಕುರಿತ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದರು. ದೀನದಯಾಳ್ ಅಂತ್ಯೋದಯ ಯೋಜನೆಯಡಿ ವಿವಿಧ ಸರ್ಕಾರಿ ಇಲಾಖೆಗಳ ಸಹಯೋಗದೊಂದಿಗೆ ರಾಜ್ಯಾದ್ಯಂತ ಎರಡು ತಿಂಗಳ ಸಮಗ್ರ “ಮಾದಕ ದ್ರವ್ಯ ಮುಕ್ತ

ಮಾದಕ ದ್ರವ್ಯ ಮುಕ್ತ ಕರ್ನಾಟಕ ಅಭಿಯಾನ ಆರಂಭ Read More »

ಕರಾವಳಿ

ಆ. 23, 24 ರಂದು ಕೆಲವು ರೈಲುಗಳು ರದ್ದು, ಸಂಚಾರದಲ್ಲಿ ಬದಲಾವಣೆ

(ನ್ಯೂಸ್‌ ಕಡಬ) newskadaba.com ಆ. 19. ಆಗಸ್ಟ್ 24ರಂದು ಅರಸೀಕೆರೆ-ಬಾಣಾವರ ಹಾಗೂ ಅರಸೀಕೆರೆ-ಹಬ್ಬನಘಟ್ಟ ನಿಲ್ದಾಣಗಳ ನಡುವೆ ಪ್ರಮುಖ ಸಿಗ್ನಲಿಂಗ್ ಮತ್ತು ಬ್ಲಾಕ್ ಇನ್‌ಸ್ಟ್ರುಮೆಂಟ್ ಬದಲಾವಣೆ ಕಾಮಗಾರಿಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ, ಅಂದು ಕೆಲವು ರೈಲು ಸೇವೆಗಳನ್ನು ರದ್ದುಗೊಳಿಸಲಾಗಿದೆ. ಇನ್ನು ಕೆಲವು ರೈಲುಗಳ ಸಂಚಾರ ಭಾಗಶಃ ರದ್ದುಗೊಳಿಸಲಾಗಿದೆ. ಕೆಲವು ರೈಲುಗಳ ಪ್ರಯಾಣದ ಸಮಯ ಮರು ನಿಗದಿಪಡಿಸಲಾಗುತ್ತದೆ ಮತ್ತು ನಿಯಂತ್ರಿಸಲಾಗಿದೆ ಎಂದು ಭಾರತೀಯ ರೈಲ್ವೆಯ ನೈರುತ್ಯ ರೈಲ್ವೆ ವಲಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆಗಸ್ಟ್ 23ರಂದು, ರೈಲು ಸಂಖ್ಯೆ 06270 ಎಸ್ಎಂವಿಟಿ

ಆ. 23, 24 ರಂದು ಕೆಲವು ರೈಲುಗಳು ರದ್ದು, ಸಂಚಾರದಲ್ಲಿ ಬದಲಾವಣೆ Read More »

ಕರಾವಳಿ, ಕರ್ನಾಟಕ

ಪಿ.ಯು ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com ಆ. 19.  ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧೀನದಲ್ಲಿರುವ ಫರಂಗಿಪೇಟೆ ಮೌಲಾನ ಆಜಾದ್ ಮಾದರಿ ಪದವಿ ಪೂರ್ವ ಕಾಲೇಜು ಇಲ್ಲಿಗೆ ಭೌತಶಾಸ್ತ್ರ ಹಾಗೂ ಆಂಗ್ಲ ಭಾಷಾ  ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ತಿಂಗಳಿಗೆ ರೂ. 14,000 ವೇತನ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 9742972679 ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿಸ್ತರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಿ.ಯು ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶ: ಅವಧಿ ವಿಸ್ತರಣೆ

(ನ್ಯೂಸ್‌ ಕಡಬ) newskadaba.com ಆ. 19. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ./ ಪ.ವರ್ಗದ ಸಾಮಾನ್ಯ ಪದವಿ ಕೋರ್ಸ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು  ಆಗಸ್ಟ್ 25 ರವರೆಗೆ ಅವಧಿ ವಿಸ್ತರಿಸಲಾಗಿದೆ. ಪ್ರವರ್ಗ-1, ಎಸ್.ಸಿ.& ಎಸ್.ಟಿ. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ

ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶ: ಅವಧಿ ವಿಸ್ತರಣೆ Read More »

ಕರಾವಳಿ

ಉಡುಪಿ – ಸಿಯಾಚಿನ್‌ನಲ್ಲಿ ತ್ರಿವರ್ಣ ಧ್ವಜ ಹಾರಿಸಲು 1,300 ಕಿ.ಮೀ ದೂರ ಬೈಕ್‌ ಸವಾರಿ ಮಾಡಿದ 57 ನೇ ವಯಸ್ಸಿನ ಮಹಿಳೆಯ ಸಾಹಸ !

(ನ್ಯೂಸ್ ಕಡಬ) newskadaba.com ಆ. 18 ಉಡುಪಿ : ಸಾಹಸಕ್ಕೆ ವಯಸ್ಸು ಅಡ್ಡಿಯಾಗಲ್ಲ ಎಂದು ಕುಂದಾಪುರದ 57 ವರ್ಷದ ವಿಲ್ಮಾ ಕ್ರಾಸ್ತಾ ಕಾರ್ವಾಲ್ಹೋ ಮತ್ತೊಮ್ಮೆ ಅದನ್ನು ಸಾಬೀತುಪಡಿಸಿದ್ದಾರೆ. 2023 ರಲ್ಲಿ ವಿಶ್ವದ ಅತಿ ಎತ್ತರದ ಪ್ರದೇಶವಾದ ಪಾಸ್ ಉಮ್ಲಿಂಗ್ ಗೆ ತನ್ನ ಮಗಳು ಚೆರಿಶ್ ಕರ್ವಾಲೋ ಜೊತೆ ಧೈರ್ಯಶಾಲಿಯಾಗಿ ಬೈಕ್‌ ಸವಾರಿ ಮೂಲಕ ಗಮನ ಸೆಳೆದ ನಂತರ, ವಿಲ್ಮಾ ಈಗ ಮತ್ತೊಂದು ಗಮನಾರ್ಹ ಸಾಧನೆ ಮಾಡಿದ್ದಾರೆ. ಆಗಸ್ಟ್‌ 15 ಸ್ವಾತಂತ್ರ್ಯ ದಿನದಂದು, ವಿಶ್ವದ ಅತ್ಯಂತ ಸವಾಲಿನ ಭೂಪ್ರದೇಶಗಳಲ್ಲಿ ಒಂದಾದ ಸಿಯಾಚಿನ್

ಉಡುಪಿ – ಸಿಯಾಚಿನ್‌ನಲ್ಲಿ ತ್ರಿವರ್ಣ ಧ್ವಜ ಹಾರಿಸಲು 1,300 ಕಿ.ಮೀ ದೂರ ಬೈಕ್‌ ಸವಾರಿ ಮಾಡಿದ 57 ನೇ ವಯಸ್ಸಿನ ಮಹಿಳೆಯ ಸಾಹಸ ! Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್
crime, arrest, suspected

ಅಕ್ರಮ ಕೆಂಪುಕಲ್ಲು ಸಾಗಾಟ ಆರೋಪ- ಟಿಪ್ಪರ್ ವಶಕ್ಕೆ

(ನ್ಯೂಸ್ ಕಡಬ) newskadaba.com ಆ. 18. ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯೊಂದನ್ನು ಉಡುಪಿ ನಗರ ಪೊಲೀಸರು 76 ಬಡಗುಬೆಟ್ಟು ಗ್ರಾಮದ ಕುಕ್ಕಿಕಟ್ಟೆ ಬಬ್ಬುಸ್ವಾಮಿ ದೇವಸ್ಥಾನದ ಬಳಿ ವಶಪಡಿಸಿಕೊಂಡಿರುವ ಕುರಿತು ವರದಿಯಾಗಿದೆ. ಅಲೆವೂರು ಕಡೆಯಿಂದ ಕುಕ್ಕಿಕಟ್ಟೆ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಲಾರಿಯನ್ನು ತಡೆದು ಪರಿಶೀಲಿಸಿದಾಗ, ವಾಹನದಲ್ಲಿ 15,750 ರೂ. ಮೌಲ್ಯದ ಸುಮಾರು 350 ಕೆಂಪುಕಲ್ಲು ಇರುವುದು ಕಂಡುಬಂದಿದ್ದು, ಇದನ್ನು ಮಂಚಿಕೇರಿ ಎಂಬಲ್ಲಿಂದ ಕಳವು ಮಾಡಿ ಸಾಗಾಟ ಮಾಡಲಾಗುತ್ತಿತ್ತೆನ್ನಲಾಗಿದೆ. ಘಟನಾ ಸಂಬಂಧ ವಾಹನ ಚಾಲಕ ಮತ್ತು

ಅಕ್ರಮ ಕೆಂಪುಕಲ್ಲು ಸಾಗಾಟ ಆರೋಪ- ಟಿಪ್ಪರ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಶಿಕ್ಷಕಿಯರಾಗಲು ನಿಮಗಿದೋ ಸುವರ್ಣಾವಕಾಶ..! ಕಡಬದ ಜ್ಞಾನಸುಧಾ ವಿದ್ಯಾಲಯದಲ್ಲಿ ಒಂದೇ ವರ್ಷದಲ್ಲಿ ಪಡೆಯಿರಿ ಮೊಂಟೆಸ್ಸರಿ ಶಿಕ್ಷಣ

(ನ್ಯೂಸ್ ಕಡಬ) newskadaba.com ಕಡಬ, ಆ. 18. ಕಡಬದ ಸೈಂಟ್ ಜೋಕಿಮ್ಸ್ ಚರ್ಚ್ ನ ಎದುರು ಭಾಗದಲ್ಲಿ ಕಾರ್ಯಾಚರಿಸುತ್ತಿರುವ ಮಹಾಗಣಪತಿ ಬಿಲ್ಡಿಂಗ್ ನಲ್ಲಿ ಕಳೆದ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಜನರ ವಿಶ್ವಾಸಕ್ಕೆ ಪಾತ್ರವಾಗಿರುವ ಜ್ಞಾನಸುಧಾ ವಿದ್ಯಾಲಯದಲ್ಲಿ ಮೊಂಟೆಸ್ಸರಿ ಶಿಕ್ಷಣವನ್ನು ಒದಗಿಸಲಾಗುತ್ತಿದೆ.     ಪ್ರತಿವರ್ಷವೂ ಈ ವಿದ್ಯಾ ಕೇಂದ್ರದಲ್ಲಿ ಮೊಂಟೆಸ್ಸರಿ ತರಬೇತಿ ಪಡೆಯುವ ಶಿಕ್ಷಣಾರ್ಥಿಗಳು ವಿಶಿಷ್ಟ ಶ್ರೇಣಿಯೊಂದಿಗೆ ತೇರ್ಗಡೆಗೊಂಡು ಸಂಸ್ಥೆಗೆ 100% ಫಲಿತಾಂಶ ನೀಡುವ ಮೂಲಕ ಸಂಸ್ಥೆಯ ಗುಣಮಟ್ಟದ ಶಿಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ. ಅಲ್ಲದೇ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ

ಶಿಕ್ಷಕಿಯರಾಗಲು ನಿಮಗಿದೋ ಸುವರ್ಣಾವಕಾಶ..! ಕಡಬದ ಜ್ಞಾನಸುಧಾ ವಿದ್ಯಾಲಯದಲ್ಲಿ ಒಂದೇ ವರ್ಷದಲ್ಲಿ ಪಡೆಯಿರಿ ಮೊಂಟೆಸ್ಸರಿ ಶಿಕ್ಷಣ Read More »

ಕರಾವಳಿ

ರಾಜ್ಯದಲ್ಲಿ ಮುಂದುವರೆದ ಮಳೆ ಅಬ್ಬರ, 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಆ. 18 ಬೆಂಗಳೂರು: ಮುಂಗಾರು ಮಳೆಯ ಆರ್ಭಟ ಮುಂದುವರೆದಿದೆ. ಮಳೆಯ ಅಬ್ಬರಕ್ಕೆ ಹಳ್ಳಕೊಳ್ಳಗಳು ಭರ್ತಿಯಾಗಿ ಹೊಲಗದ್ದೆಗಳು ಜಲಾವೃತಗೊಂಡು ರಸ್ತೆ ಸಂಪರ್ಕ ಕಡಿತಗೊಂಡಿದೆ. ಮಲೆನಾಡು ಭಾಗದಲ್ಲಿ ಗುಡ್ಡ ಕುಸಿತ ಉಂಟಾಗಿ ಸಂಚಾರಕ್ಕೆ ಅಡಚಣೆಯಾಗಿದೆ. 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕೊಡಗಿನಲ್ಲಿ ಬಿಟ್ಟೂಬಿಡದೆ ಮಳೆ ಸುರಿಯುತ್ತಿದ್ದು, ನಿರಂತರ ಮಳೆಗೆ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಬೃಹತ್‌ ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳಿರುವುದರಿಂದ ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ. ರಸ್ತೆ ಸಂಪರ್ಕ ಸಮರ್ಪಕವಾಗಿಲ್ಲದೆ ಜನ ಪರದಾಡುವಂತಾಗಿದೆ. ಹಾಸನದಲ್ಲಿ

ರಾಜ್ಯದಲ್ಲಿ ಮುಂದುವರೆದ ಮಳೆ ಅಬ್ಬರ, 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top