ಕರಾವಳಿ

ಆ.10 : ಚೆನ್ನಾವರದಲ್ಲಿ 4ನೇ ವರ್ಷದ ಆಟಿದ ಕೂಟ ಕೆಸರ್‌ಡ್ ಒಂಜಿ ದಿನ ವಾಲಿಬಾಲ್ ,ತ್ರೋಬಾಲ್, ಹಗ್ಗಜಗ್ಗಾಟ ಸೇರಿದಂತೆ ವಿವಿಧ ಸ್ಫರ್ಧೆಗಳು

(ನ್ಯೂಸ್‌ ಕಡಬ) newskadaba.com, ಆ.08: ಸವಣೂರು : ಅಭ್ಯುದಯ ಯುವಕ ಮಂಡಲ (ರಿ.) ಚೆನ್ನಾವರ ಪಾಲ್ತಾಡಿ ಇದರ ವತಿಯಿಂದ ಉಳ್ಳಾಕುಲು ಸೇವಾ ಸಮಿತಿ ಚೆನ್ನಾವರ ಇದರ ಸಹಯೋಗದಲ್ಲಿ  4ನೇ ವರ್ಷದ ಆಟಿದ ಕೂಟ-ಕೆಸರ್‌ಡ್ ಒಂಜಿ ದಿನ ಕಾರ್ಯಕ್ರಮ ಆ.10ರಂದು  ಚೆನ್ನಾವರ ಗುತ್ತಿನ ಗದ್ದೆಯಲ್ಲಿ ನಡೆಯಲಿದೆ.   ಚೆನ್ನಾವರ ಉಳ್ಳಾಕುಲು ಸೇವಾ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ ಚೆನ್ನಾವರಗುತ್ತು ಕಾರ್ಯಕ್ರಮ ಉದ್ಘಾಟಿಸುವರು. ಕ್ರೀಡಾಂಗಣ ಉದ್ಘಾಟನೆಯನ್ನು ಅಬುದಾಭಿ ಇಂಡಿಯನ್ ಸ್ಕೂಲ್, ಅಬುದಾಭಿಯ ದೈಹಿಕ ಶಿಕ್ಷಣ ನಿರ್ದೇಶಕ ದಿನೇಶ್ ಎನ್.ಸುವರ್ಣ ನೆರವೇರಿಸುವರು. […]

ಆ.10 : ಚೆನ್ನಾವರದಲ್ಲಿ 4ನೇ ವರ್ಷದ ಆಟಿದ ಕೂಟ ಕೆಸರ್‌ಡ್ ಒಂಜಿ ದಿನ ವಾಲಿಬಾಲ್ ,ತ್ರೋಬಾಲ್, ಹಗ್ಗಜಗ್ಗಾಟ ಸೇರಿದಂತೆ ವಿವಿಧ ಸ್ಫರ್ಧೆಗಳು Read More »

ಕರಾವಳಿ, ಕ್ರೀಡಾ ನ್ಯೂಸ್

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್‌ಗಳ ಮೇಲೆ ಹಲ್ಲೆ – ಓರ್ವನ ಬಂಧನ; 7 FIR ದಾಖಲು

(ನ್ಯೂಸ್‌ ಕಡಬ) newskadaba.com, ಆ.08: ಧರ್ಮಸ್ಥಳ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಬಂಧ ಧರ್ಮಸ್ಥಳ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬುಧವಾರ ನಡೆದ ಯೂಟ್ಯೂಬರ್ ಮತ್ತು ಸುದ್ದಿ ವಾಹಿನಿಯ ಪತ್ರಕರ್ತನ ಮೇಲಿನ ದಾಳಿಗೆ ಸಂಬಂಧಿಸಿದಂತೆ ಧರ್ಮಸ್ಥಳದಲ್ಲಿ ನಾಲ್ಕು ಮತ್ತು ಬೆಳ್ತಂಗಡಿ ಪೊಲೀಸ್ ಠಾಣೆಗಳಲ್ಲಿ ಮೂರು ಸೇರಿದಂತೆ ಒಟ್ಟು ಏಳು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಧರ್ಮಸ್ಥಳ ಗ್ರಾಮ ಕನ್ಯಾಡಿ ನಿವಾಸಿ, ಜೀಪು ಚಾಲಕ ಸೋಮನಾಥ ಸಪಲ್ಯ (48) ಬಂಧಿತ ಆರೋಪಿ. ಸದ್ಯ ಆರೋಪಿಯನ್ನು14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್‌ಗಳ ಮೇಲೆ ಹಲ್ಲೆ – ಓರ್ವನ ಬಂಧನ; 7 FIR ದಾಖಲು Read More »

ಕರಾವಳಿ, ಕರ್ನಾಟಕ

ಮಂಗಳೂರು : ರೋಷನ್ ಸಲ್ಡಾನಾ ಪ್ರಕರಣ – ಇಡಿ ತನಿಖೆಯಿಂದ ಬಹುಕೋಟಿ ವಂಚನೆ ಬಯಲು

(ನ್ಯೂಸ್‌ ಕಡಬ) newskadaba.com, ಆ.08: ಬಹುಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಮೂಲದ ರೋಷನ್ ಸಲ್ಡಾನಾ ಮತ್ತು ಅವರ ಪತ್ನಿಗೆ ಸೇರಿದ ಆಸ್ತಿಗಳ ಬಗ್ಗೆ ಜಾರಿ ನಿರ್ದೇಶನಾಲಯ (ಇಡಿ) ತನಿಖೆ ಆರಂಭಿಸಿದೆ. ನಗರದ ಐದು ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಕಡಿಮೆ ಬಡ್ಡಿದರದಲ್ಲಿ ಸಾಲ ವ್ಯವಸ್ಥೆ ಮಾಡುವ ನೆಪದಲ್ಲಿ ವಿವಿಧ ಉದ್ಯಮಿಗಳಿಂದ ಹಣ ಸಂಗ್ರಹಿಸಿ, ಸ್ಟಾಂಪ್ ಡ್ಯೂಟಿಗೆ ಹಣವನ್ನು ಪಡೆದು, ಭರವಸೆ ನೀಡಿದ ಸಾಲಗಳನ್ನು ನೀಡುವಲ್ಲಿ ವಿಫಲರಾದ ಆರೋಪದ ಮೇಲೆ ರೋಷನ್ ಸಲ್ಡಾನಾ

ಮಂಗಳೂರು : ರೋಷನ್ ಸಲ್ಡಾನಾ ಪ್ರಕರಣ – ಇಡಿ ತನಿಖೆಯಿಂದ ಬಹುಕೋಟಿ ವಂಚನೆ ಬಯಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ

(ನ್ಯೂಸ್‌ ಕಡಬ) newskadaba.com, ಆ.08:‌ಕಡಬ : ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ಚಂದನ ಸಾಹಿತ್ಯ ವೇದಿಕೆ ಸುಳ್ಯ ವತಿಯಿಂದ 2024 ನೇ ಸಾಲಿನ ಚಂದನ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.  ವೇದಿಕೆಯ 20ನೇ ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮ ಆಗಸ್ಟ್ 03 ರಂದು ಸುಳ್ಯ ದಲ್ಲಿ ನಡೆದಿದ್ದು, ಸಾಹಿತ್ಯ ಕೃಷಿಗಾಗಿ ಈ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಇವರು ಕಡಬ ತಾಲೂಕಿನ ಹೊಸಂಗಡಿ ಬಸದಿ ನೂಜಿಬಾಳ್ತಿಲದ ಧರಣೇoದ್ರ ಇಂದ್ರ ಮತ್ತು ಮಂಜುಳಾರವರ ಸುಪುತ್ರರಾಗಿರುತ್ತಾರೆ.

ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ Read More »

ಕರಾವಳಿ, ಕರ್ನಾಟಕ

ಪತ್ರಕರ್ತರ ಮೇಲೆ ಹಲ್ಲೆ : ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂದ ಸಿಎಂ

(ನ್ಯೂಸ್‌ ಕಡಬ) newskadaba.com, ಆ.08: ನವದೆಹಲಿ: ಧರ್ಮಸ್ಥಳದಲ್ಲಿ ಪತ್ರಕರ್ತರು ಹಾಗೂ ಯೂಟ್ಯೂಬರ್‌ಗಳ ಮೇಲೆ ಹಲ್ಲೆಯಾಗಿದ್ದರೆ ತಪ್ಪಿತಸ್ಥರ ವಿರುದ್ಧ ಕ್ರಮಜರುಗಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಲಾಲ್‌ಬಾಗ್‌ನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು ಯಾರೇ ತಪ್ಪು ಮಾಡಿದರೂ ಕಾನೂನು ಪ್ರಕಾರ ಕ್ರಮಕೈಗೊಳ್ಳಲಾಗುತ್ತದೆ ಎಂದು ಹೇಳಿದರು. ದೆಹಲಿಯಲ್ಲಿ ಇಂಡಿಯಾ ರಾಜಕೀಯ ಮೈತ್ರಿಕೂಟದ ನಾಯಕರಿಗೆ ಔತಣಕೂಟ ಆಯೋಜಿಸಲಾಗಿದೆ. ಅದರಲ್ಲಿ ಭಾಗವಹಿಸಲು ನಾನು ದೆಹಲಿಗೆ ತೆರಳುತ್ತಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು. ಬಿಜೆಪಿಯವರ ಮತಗಳ್ಳತನದ ವಿರುದ್ಧ ನಾಳೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಅವರು ತಿಳಿಸಿದರು.

ಪತ್ರಕರ್ತರ ಮೇಲೆ ಹಲ್ಲೆ : ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂದ ಸಿಎಂ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಹೇಶ್‌ ಶೆಟ್ಟಿ, ಗಿರೀಶ್‌ ಮಟ್ಟಣನವರ್‌, ಸಮೀರ್‌ ವಿರುದ್ದ ಎಫ್‌ಐಆರ್‌ ದಾಖಲು

(ನ್ಯೂಸ್‌ ಕಡಬ) newskadaba.com, ಆ.07:‌ ಖಾಸಗಿ ವಾಹಿನಿಯ ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಮಹೇಶ್‌ ಶೆಟ್ಟಿ ತಿಮರೋಡಿ, ಗಿರೀಶ್‌ ಮಟ್ಟಣನವರ್‌ ಹಾಗೂ ಯೂಟ್ಯೂಬರ್‌ ಸಮೀರ್‌ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ವರದಿಗಾರ ಹರೀಶ್‌ ಅವರ ದೂರಿನಂತೆ ಎಫ್‌ಐಆರ್‌ ದಾಖಲಾಗಿದೆ. ಎಫ್‌ಐಆರ್‌ನಲ್ಲಿ ಗಿರೀಶ್‌ ಮಟ್ಟಣನವರ್(ಎ1), ಮಹೇಶ್‌ ಶೆಟ್ಟಿ ತಿಮರೋಡಿ(ಎ2), ಯೂಟ್ಯೂಬರ್‌ ಸಮೀರ್(ಎ3) ಹಾಗೂ ಜಯಂತ್‌(ಎ4) ಎಂದು ಇತರರ ಹೆಸರನ್ನು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

ಮಹೇಶ್‌ ಶೆಟ್ಟಿ, ಗಿರೀಶ್‌ ಮಟ್ಟಣನವರ್‌, ಸಮೀರ್‌ ವಿರುದ್ದ ಎಫ್‌ಐಆರ್‌ ದಾಖಲು Read More »

ಕರಾವಳಿ

ಧರ್ಮಸ್ಥಳ ಪ್ರಕರಣ : 13ನೇ ಪಾಯಿಂಟ್‌ನಲ್ಲಿ ಅಸ್ತಿಪಂಜರಗಳಿಗಾಗಿ ಎಸ್‌‍ಐಟಿ ಹುಡುಕಾಟ

(ನ್ಯೂಸ್‌ ಕಡಬ) newskadaba.com, ಆ.07: ಧರ್ಮಸ್ಥಳದಲ್ಲಿ ಅನುಮಾನಾಸ್ಪದ ಸಾವುಗಳ ಆರೋಪ ಕುರಿತು ತನಿಖೆ ನಡೆಸುತ್ತಿರುವ ಎಸ್‌‍ಐಟಿ ಅಧಿಕಾರಿಗಳು ಇಂದು 13ನೇ ಪಾಯಿಂಟ್‌ನಲ್ಲಿ ಉತ್ಖನನ ನಡೆಸಲಿದ್ದಾರೆ.ಈ ಮೊದಲು ಬಂಗ್ಲಗುಡ್ಡದಲ್ಲಿ ತಾನು ತೋರಿಸಿದ್ದ ಜಾಗ ಹೊರತುಪಡಿಸಿ ಮತ್ತೊಂದು ಸ್ಥಳಕ್ಕೆ ಎಸ್‌‍ಐಟಿ ಅಧಿಕಾರಿಗಳನ್ನು ಅನಾಮಧೇಯ ವ್ಯಕ್ತಿ ಕರೆದುಕೊಂಡು ಹೋಗಿದ್ದರು. ಅಲ್ಲಿ ಭೂಮಿಯ ಮೇಲ್ಭಾಗದಲ್ಲೇ ಹಲವಾರು ಅಸ್ಥಿಗಳು ದೊರೆತ್ತಿದ್ದವು ಅವುಗಳನ್ನು ಜಪ್ತಿ ಮಾಡಿರುವ ಎಸ್‌‍ಐಟಿ ಅಧಿಕಾರಿಗಳು ಬಹುಶಃ ಬಂಗ್ಲಗುಡ್ಡದ ಮೇಲೆ ಆತಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿರಬಹುದು, ಹೀಗಾಗಿ ಭೂಮಿಯ ಮೇಲ್ಭಾಗದಲ್ಲಿ ಸಿಕ್ಕಿರುವ ಅಸ್ತಿಗಳ ಕುರಿತು

ಧರ್ಮಸ್ಥಳ ಪ್ರಕರಣ : 13ನೇ ಪಾಯಿಂಟ್‌ನಲ್ಲಿ ಅಸ್ತಿಪಂಜರಗಳಿಗಾಗಿ ಎಸ್‌‍ಐಟಿ ಹುಡುಕಾಟ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ : ಕೆಎಸ್ಆರ್‌ಟಿ‍ಸಿ ಬಸ್ಸಿಗೆ ದುಷ್ಕರ್ಮಿಗಳಿಂದ ಕಲ್ಲೆಸೆತ – ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com, ಆ.07: ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ದುಷ್ಕರ್ಮಿಗಳು ಧರ್ಮಸ್ಥಳ ಗ್ರಾಮದ ಪುದುವೆಟ್ಟು ಕ್ರಾಸ್ ಬಳಿ ಕಲ್ಲು ಹೊಡೆದು ಬಸ್ಸಿಗೆ ಹಾನಿಯುಂಟು ಮಾಡಿದ ಘಟನೆ ಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ಧರ್ಮಸ್ಥಳ ಡಿಪ್ಪೋದ ಸಂಚಾರ ನಿಯಂತ್ರಕ ಪಿ ದಾವೂದ್ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ. ಬಸ್ಸನ್ನು ಚಾಲಕ ಧರ್ಮಸ್ಥಳ ದಿಂದ ಸುಬ್ರಹ್ಮಣ್ಯದ ಕಡೆಗೆ ಚಲಾಯಿಸುತ್ತಿದ್ದ ವೇಳೆ ಧರ್ಮಸ್ಥಳ ಗ್ರಾಮದ ಪುದುವೆಟ್ಟು ಕ್ರಾಸ್ ಸಮೀಪ ಎದುರಿನಿಂದ ದ್ವಿಚಕ್ರ

ಬೆಳ್ತಂಗಡಿ : ಕೆಎಸ್ಆರ್‌ಟಿ‍ಸಿ ಬಸ್ಸಿಗೆ ದುಷ್ಕರ್ಮಿಗಳಿಂದ ಕಲ್ಲೆಸೆತ – ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಶೋಧಕಾರ್ಯ ವೇಳೆ ಗೊಂದಲ: ಎಸಿ ಸ್ಟೆಲ್ಲಾ ವರ್ಗೀಸ್ ನಡೆಗೆ ಎಸ್ಐಟಿ ಅಸಮಾಧಾನ

(ನ್ಯೂಸ್‌ ಕಡಬ) newskadaba.com, ಆ.05: ಬೆಳ್ತಂಗಡಿ: ಧರ್ಮಸ್ಥಳ ಶವಗಳನ್ನು ಹೂತಿಟ್ಟ ಶೋಧಕಾರ್ಯ ಪ್ರಕರಣದಲ್ಲಿ ಸಹಾಯಕ ಆಯುಕ್ತೆ (ಎಸಿ) ಸ್ಟೆಲ್ಲಾ ವರ್ಗೀಸ್ ಹಾಗೂ ವಿಶೇಷ ತನಿಖಾ ತಂಡ (ಎಸ್ಐಟಿ) ನಡುವಿನ ಗೊಂದಲ ಮತ್ತೊಮ್ಮೆ ಬೆಳಕಿಗೆ ಬಂದಿದೆ. ನಿನ್ನೆ ಶೋಧಕಾರ್ಯಕ್ಕಾಗಿ ನಿಗದಿಪಡಿಸಿದ 11ನೇ ಪಾಯಿಂಟ್ ಬಿಟ್ಟು, ಪುತ್ತೂರು ಉಪ ವಿಭಾಗ ಎಸಿ ಸ್ಟೆಲ್ಲಾ ವರ್ಗೀಸ್ ಹೊಸ ಸ್ಥಳದಲ್ಲಿ ಮಹಜರು ನಡೆಸಲು ಸೂಚಿಸಿದ ಕ್ರಮಕ್ಕೆ ಎಸ್ಐಟಿ ಅಸಮಾಧಾನ ವ್ಯಕ್ತಪಡಿಸಿದೆ.   ಈ ಹೊಸ ಸ್ಥಳದಲ್ಲಿ ಭೂಮಿಯ ಮೇಲ್ಮೈಯಲ್ಲೇ ಒಬ್ಬ ಪುರುಷನ ಸಂಪೂರ್ಣ

ಧರ್ಮಸ್ಥಳ ಶೋಧಕಾರ್ಯ ವೇಳೆ ಗೊಂದಲ: ಎಸಿ ಸ್ಟೆಲ್ಲಾ ವರ್ಗೀಸ್ ನಡೆಗೆ ಎಸ್ಐಟಿ ಅಸಮಾಧಾನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬದಲ್ಲಿ ಆರ್‌ಎಎಫ್ ಪಡೆಯಿಂದ ಪಥ ಸಂಚಲನ

(ನ್ಯೂಸ್ ಕಡಬ) newskadaba.com ಕಡಬ, ಆ.05. ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಂಗಳವಾರದಂದು ಕಡಬ ಪೇಟೆಯಲ್ಲಿ ಆರ್‌ಎಎಫ್ ಪಡೆಯಿಂದ ಪಥ ಸಂಚಲನ ನಡೆಯಿತು. ಆರ್‌ಎಎಫ್ ಪಡೆಯ ಜೊತೆಗೆ ಕಡಬ ಪೊಲೀಸರು ಪಥ ಸಂಚಲನದಲ್ಲಿ ಭಾಗಿಯಾದರು. ಪಥ ಸಂಚಲನವು ಕಡಬ ಅನುಗ್ರಹ ಸಭಾಭವನ ಹಾಲ್ ಸಮೀಪದಿಂದ ಪ್ರಾರಂಭವಾಗಿ, ಪೇಟೆಯ ಮುಖಾಂತರ ಸಾಗಿದ್ದು ಸೈಂಟ್ ಜೋಕಿಂ ಚರ್ಚ್ ವರೆಗೆ ನಡೆಯಿತು. ಸಾರ್ವಜನಿಕರಲ್ಲಿ ಭದ್ರತೆ ಹಾಗೂ ವಿಶ್ವಾಸ ಮೂಡಿಸುವ ಉದ್ದೇಶದಿಂದ ಪಥ ಸಂಚಲನ ನಡೆಯಿತು. ಈ

ಕಡಬದಲ್ಲಿ ಆರ್‌ಎಎಫ್ ಪಡೆಯಿಂದ ಪಥ ಸಂಚಲನ Read More »

ಕರಾವಳಿ
Scroll to Top