ಕರಾವಳಿ

ಮಂಗಳೂರಿನ ಹಂಪನಕಟ್ಟೆಯಲ್ಲಿ ಭಾರೀ ಬೆಂಕಿ ಅವಘಡ: ಶೂ ಅಂಗಡಿ ಸಂಪೂರ್ಣ ಭಸ್ಮ!

(ನ್ಯೂಸ್‌ ಕಡಬ) newskadaba.com,  ಜು.28 ಮಂಗಳೂರು: ಮಂಗಳೂರಿನ ಪ್ರಮುಖ ವಾಣಿಜ್ಯ ಪ್ರದೇಶವಾದ ಹಂಪನಕಟ್ಟೆಯಲ್ಲಿರುವ ಶೂ ಅಂಗಡಿಯೊಂದರಲ್ಲಿ ಮಂಗಳವಾರ ಬೆಳಗಿನ ಜಾವ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಅಂಗಡಿ ಸಂಪೂರ್ಣ ಭಸ್ಮಗೊಂಡಿದೆ. ಬೆಂಕಿಯ ಕೆನ್ನಾಲಿಗೆ ತೀವ್ರವಾಗಿದ್ದರಿಂದ ಪಕ್ಕದಲ್ಲಿದ್ದ ಎರಡು ಅಂಗಡಿಗಳಿಗೂ ಬೆಂಕಿ ವ್ಯಾಪಿಸಿದೆ. ಘಟನೆಯಲ್ಲಿ ‘ಯುರೋಪ್’ ಹೆಸರಿನ ಪ್ರಸಿದ್ಧ ಶೂ ಅಂಗಡಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಸತತ ಪ್ರಯತ್ನ ನಡೆಸಿ ಬೆಂಕಿಯನ್ನು ಹತೋಟಿಗೆ ತರುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಮೇಲ್ನೋಟಕ್ಕೆ ವಿದ್ಯುತ್ […]

ಮಂಗಳೂರಿನ ಹಂಪನಕಟ್ಟೆಯಲ್ಲಿ ಭಾರೀ ಬೆಂಕಿ ಅವಘಡ: ಶೂ ಅಂಗಡಿ ಸಂಪೂರ್ಣ ಭಸ್ಮ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪತ್ನಿಯನ್ನು ಕೊಂದು ಅತ್ತೆ-ಮಾವನಿಗೆ ವೀಡಿಯೋ ಕಾಲ್ ಮಾಡಿದ ಪತಿ!

(ನ್ಯೂಸ್‌ ಕಡಬ) newskadaba.com,  ಜು.28 ಬಾಗಲಕೋಟೆ: ಜಿಲ್ಲೆಯ ಬೀಳಗಿ ತಾಲೂಕಿನ ಗಲಗಲಿ ಗ್ರಾಮದಲ್ಲಿ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದ್ದು, ಪತ್ನಿಯನ್ನ ಹತ್ಯೆಗೈದು ಆಕೆ ಪ್ರಾಣಕ್ಕಾಗಿ ಒದ್ದಾಡುತ್ತಿದ್ದ ದೃಶ್ಯವನ್ನು ಅತ್ತೆ-ಮಾವನಿಗೆ ವೀಡಿಯೋ ಕಾಲ್ ಮೂಲಕ ತೋರಿಸಿದ ಕ್ರೂರ ಘಟನೆ ನಡೆದಿದೆ. ಮೃತ ಮಹಿಳೆಯನ್ನ ಭಾಗ್ಯಶ್ರೀ ಜಿಗಳೂರು (23) ಎಂದು ಗುರುತಿಸಲಾಗಿದೆ. ಅನೈತಿಕ ಸಂಬಂಧದ ಶಂಕೆಯಿಂದ ಗಂಡ ಪ್ರವೀಣ್ ಜಿಗಳೂರು ಎಂಬಾತ ಪತ್ನಿಯೊಂದಿಗೆ ಜಗಳವಾಡಿ, ಕಟ್ಟಿಗೆಯಿಂದ ಹಲ್ಲೆ ನಡೆಸಿ ನೇಣು ಬಿಗಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಕೊಲೆಯ ಬಳಿಕ ಆ

ಪತ್ನಿಯನ್ನು ಕೊಂದು ಅತ್ತೆ-ಮಾವನಿಗೆ ವೀಡಿಯೋ ಕಾಲ್ ಮಾಡಿದ ಪತಿ! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬ್ಯಾಂಕ್ ಆಫ್ ಬರೋಡಾ ಗ್ರಾಹಕರ ಗಮನಕ್ಕೆ: ನೆಟ್ ಬ್ಯಾಂಕಿಂಗ್, ‘bob World’ ಆಪ್ PIN ತಕ್ಷಣವೇ ಬದಲಾಯಿಸಿ!

(ನ್ಯೂಸ್‌ ಕಡಬ) newskadaba.com,  ಜು.28 : ಭಾರತದ 3ನೇ ಅತಿ ದೊಡ್ಡ ಸರ್ಕಾರಿ ಬ್ಯಾಂಕ್ ಆದ ‘ಬ್ಯಾಂಕ್ ಆಫ್ ಬರೋಡಾ’ದ 1,000 GB (1 TB) ಸೂಕ್ಷ್ಮ ಮಾಹಿತಿ ಡಾರ್ಕ್ ವೆಬ್‌ನಲ್ಲಿ ಸೋರಿಕೆಯಾಗಿದೆ.‘ಟ್ರಿಪಲ್ ಎಕ್ಸ್’ ಎಂಬ ಹ್ಯಾಕರ್ಸ್ ಗುಂಪು ಬ್ಯಾಂಕಿನ ಇಮೇಲ್ ವ್ಯವಸ್ಥೆಯಲ್ಲಿದ್ದ ಲೋಪವನ್ನು ಬಳಸಿಕೊಂಡು ಈ ದಾಳಿ ನಡೆಸಿದೆ. ಏನೆಲ್ಲಾ ಸೋರಿಕೆಯಾಗಿದೆ ಎನ್ನುವುದಾದರೆ ಗ್ರಾಹಕರ ಖಾಸಗಿ ವಿವರ 1 ರಿಂದ 3 ಲಕ್ಷ ಗ್ರಾಹಕರ ಅಪ್ಲಿಕೇಶನ್ ಫಾರ್ಮ್‌ಗಳು, ಫೋಟೋಗಳು, ಹೆಸರು, ಮೊಬೈಲ್ ಸಂಖ್ಯೆ ಹಾಗೂ ಆಧಾರ್

ಬ್ಯಾಂಕ್ ಆಫ್ ಬರೋಡಾ ಗ್ರಾಹಕರ ಗಮನಕ್ಕೆ: ನೆಟ್ ಬ್ಯಾಂಕಿಂಗ್, ‘bob World’ ಆಪ್ PIN ತಕ್ಷಣವೇ ಬದಲಾಯಿಸಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಸರಗೋಡು: ಮನೆ ಯಲ್ಲೇ ನೇಣು ಬಿಗಿದುಕೊಂಡು ನಿವೃತ್ತ ಎಸ್‌ಐ ಧನ್ ರಾಜ್ ಮೃತ್ಯು

(ನ್ಯೂಸ್‌ ಕಡಬ) newskadaba.com,  ಜು.28  ಕಾಸರಗೋಡು ಜಿಲ್ಲೆಯಲ್ಲಿ ಪೊಲೀಸ್ ವೃತ್ತಿಯಲ್ಲಿ ಹಲವಾರು ಪ್ರಮುಖ ಕ್ರಿಮಿನಲ್ ಪ್ರಕರಣಗಳನ್ನು ಭೇದಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ನಿವೃತ್ತ ಸಬ್ ಇನ್ಸ್‌ಪೆಕ್ಟರ್ ಧನ್ ರಾಜ್ (65) ಜುಲೈ 27 ರ ಸೋಮವಾರ  ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಕಾಸರಗೋಡು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳು ಹಾಗೂ ಅಪರಾಧ ವಿಭಾಗದಲ್ಲಿ ದಕ್ಷ ಮತ್ತು ಚತುರ ತನಿಖಾ ಅಧಿಕಾರಿಯಾಗಿ ಸೇವೆ ಸಲ್ಲಿಸಿ, ಹಲವಾರು ಪ್ರಮುಖ ಕ್ರಿಮಿನಲ್ ಪ್ರಕರಣಗಳನ್ನು ಭೇದಿಸಿದ್ದರು. ನಿವೃತ್ತಿಯ ನಂತರ ಚೆರ್ಕಳದ ಖಾಸಗಿ

ಕಾಸರಗೋಡು: ಮನೆ ಯಲ್ಲೇ ನೇಣು ಬಿಗಿದುಕೊಂಡು ನಿವೃತ್ತ ಎಸ್‌ಐ ಧನ್ ರಾಜ್ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ ತಾಲೂಕಿನಲ್ಲಿ ಮುಂದುವರಿದ ಕಾಡಾನೆ ಭೀತಿ: ಅರಣ್ಯ ಇಲಾಖೆಯ ಕ್ರಮಕ್ಕೆ ಒತ್ತಾಯ

(ನ್ಯೂಸ್‌ ಕಡಬ) newskadaba.com,  ಜು.28  ಸುಳ್ಯ: ತಾಲೂಕಿನಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ರೈತರ ತೋಟಗಳಿಗೆ ನುಗ್ಗಿ ಬೆಳೆ ನಾಶಪಡಿಸುತ್ತಿರುವುದರಿಂದ ರೈತರು ತೀವ್ರ ಆರ್ಥಿಕ ನಷ್ಟ ಎದುರಿಸುವಂತಾಗಿದೆ. ಉಬರಡ್ಕ ಮಿತ್ತೂರು ಗ್ರಾಮದಲ್ಲಿ ಇಂದು ಮುಂಜಾನೆ ರೈತರ ತೋಟಗಳಿಗೆ ದಾಳಿ ಇಟ್ಟ ಕಾಡಾನೆಗಳ ಹಿಂಡು, ಅಪಾರ ಪ್ರಮಾಣದ ಬಾಳೆ ಹಾಗೂ ತೆಂಗಿನ ಮರಗಳನ್ನು ಧ್ವಂಸಗೊಳಿಸಿವೆ. ಈಗಾಗಲೇ ಅಡಿಕೆ ಎಲೆ ಚುಕ್ಕಿ ಮತ್ತು ಹಳದಿ ರೋಗದಿಂದ ಕಂಗೆಟ್ಟಿದ್ದ ತಾಲೂಕಿನ ರೈತರಿಗೆ, ಕಾಡಾನೆಗಳ ಸರಣಿ ಉಪಟಳ ಗಾಯದ ಮೇಲೆ ಬರೆ ಎಳೆದಂತಾಗಿದೆ. ಶೀಘ್ರವೇ

ಸುಳ್ಯ ತಾಲೂಕಿನಲ್ಲಿ ಮುಂದುವರಿದ ಕಾಡಾನೆ ಭೀತಿ: ಅರಣ್ಯ ಇಲಾಖೆಯ ಕ್ರಮಕ್ಕೆ ಒತ್ತಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನಿಂದ ಖಾದಿ ವಸ್ತ್ರಗಳ ವಿಶೇಷ ರಿಯಾಯಿತಿ ಮಾರಾಟ

(ನ್ಯೂಸ್ ಕಡಬ) newskadaba.com ಜು. 27. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ದಕ್ಷಿಣ ಕನ್ನಡ ಇದರ ವತಿಯಿಂದ ಜುಲೈ 28ರಿಂದ ಆಗಸ್ಟ್ 1ರ ವರೆಗೆ ನಗರದ ಮಿನಿ ವಿಧಾನಸೌಧದ ಆವರಣದಲ್ಲಿರುವ ಜಿಲ್ಲಾ ಸರ್ಕಾರಿ ನೌಕರರ ಸಂಘದ ಕರಾವಳಿ ಸಭಾಂಗಣದಲ್ಲಿ ಖಾದಿ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಪ್ರದರ್ಶನದಲ್ಲಿ ಸರಕಾರಿ ನೌಕರರ ದೈನಂದಿನ ಬಳಕೆಯ ಉಡುಪುಗಳು, ಗೃಹೋಪಯೋಗಿ ಉತ್ಪನ್ನಗಳು ಮತ್ತು ಆಯ್ದ ಗುಣಮಟ್ಟದ ಖಾದಿ ಸಾಮಗ್ರಿಗಳನ್ನು ವಿಶೇಷ ರಿಯಾಯಿತಿ ದರದಲ್ಲಿ ಮಾರಾಟ

ಇಂದಿನಿಂದ ಖಾದಿ ವಸ್ತ್ರಗಳ ವಿಶೇಷ ರಿಯಾಯಿತಿ ಮಾರಾಟ Read More »

ಕರಾವಳಿ

ಜುಲೈ 29ರಂದು ಜಿಲ್ಲಾಡಳಿತ ವತಿಯಿಂದ ಹಡಪದ ಅಪ್ಪಣ್ಣ ಜಯಂತಿ

(ನ್ಯೂಸ್ ಕಡಬ) newskadaba.com ಜು. 27. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಕಾರದೊಂದಿಗೆ ಹಡಪದ ಅಪ್ಪಣ್ಣ ಜಯಂತಿ ಜುಲೈ 29 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಉರ್ವಾಸ್ಟೋರ್ ತುಳುಭವನದಲ್ಲಿ ನಡೆಯಲಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಡಿ.ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ. ಮೂಡಬಿದಿರೆ ಆಳ್ವಾಸ್ ಕಾಲೇಜು ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಹರೀಶ್ ಟಿ.ಜಿ ಅವರು ಜಯಂತಿ ಸಂದೇಶವನ್ನು

ಜುಲೈ 29ರಂದು ಜಿಲ್ಲಾಡಳಿತ ವತಿಯಿಂದ ಹಡಪದ ಅಪ್ಪಣ್ಣ ಜಯಂತಿ Read More »

ಕರಾವಳಿ

ಆಗಸ್ಟ್ 1ರಂದು ಜಿಲ್ಲಾಡಳಿತದ ವತಿಯಿಂದ ವ್ಯಸನ ಮುಕ್ತ ದಿನಾಚರಣೆ

(ನ್ಯೂಸ್ ಕಡಬ) newskadaba.com ಜು. 27. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಹಾಗೂ ಕೆನರಾ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಶ್ರೀ ಮ.ನಿ.ಪ್ರ ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆ ಆಗಸ್ಟ್ 1ರಂದು  ಬೆಳಿಗ್ಗೆ 11 ಗಂಟೆಗೆ ನಗರದ ಕೆನರಾ ಕಾಲೇಜಿನಲ್ಲಿ ನಡೆಯಲಿದೆ. ಆರೋಗ್ಯ ಮತ್ತು ಕುಟುಂಬ

ಆಗಸ್ಟ್ 1ರಂದು ಜಿಲ್ಲಾಡಳಿತದ ವತಿಯಿಂದ ವ್ಯಸನ ಮುಕ್ತ ದಿನಾಚರಣೆ Read More »

ಕರಾವಳಿ

ದೃಶ್ಯಕಲೆಯಲ್ಲಿ ಸ್ನಾತಕೋತ್ತರ ಪದವಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜು. 27. ಮೈಸೂರು ವಿಶ್ವವಿದ್ಯಾನಿಲಯದ 2026-27ನೇ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷದ ಎಂ.ವಿ.ಎ ಸ್ನಾತಕೋತ್ತರ ಪದವಿ ಪ್ರವೇಶಾತಿಗಾಗಿ ಬಿ.ವಿ.ಎ/ಸಮಾನಾಂತರ ಕೋರ್ಸುಗಳಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು  ಜುಲೈ  31 ಕೊನೆಯ ದಿನ. ಎಂ.ವಿ.ಎ. ಸ್ನಾತಕೋತ್ತರ ಪದವಿಯು ದೃಶ್ಯಕಲೆಯಲ್ಲಿ 2 ವರ್ಷಗಳ 4 ಸೆಮಿಸ್ಟರ್ “ಸಿಬಿಸಿಎಸ್” (CBCS) ಪದ್ಧತಿಯ ಕೋರ್ಸ್ ಆಗಿದ್ದು, ಈ ಸ್ನಾತಕೋತ್ತರ ಪದ್ಧತಿಯು ಚಿತ್ರಕಲೆ (Painting), ಶಿಲ್ಪಕಲೆ (Sculpture), ಮತ್ತು ಅಚ್ಚುಕಲೆ (Graphics), ವಿಷಯಗಳಲ್ಲಿ ವಿಶೇಷ ಅಧ್ಯಯನವನ್ನು ಒಳಗೊಂಡಿರುತ್ತದೆ.

ದೃಶ್ಯಕಲೆಯಲ್ಲಿ ಸ್ನಾತಕೋತ್ತರ ಪದವಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಅಡುಗೆ ಮನೆಗೆ ಮಸಾಲೆ ಬಿಸಿ: ದರದಲ್ಲಿ ಭಾರಿ ಜಿಗಿತ!

(ನ್ಯೂಸ್‌ ಕಡಬ) newskadaba.com,  ಜು.27 ಅಕ್ಕಿ, ತುಪ್ಪ ಸೇರಿದಂತೆ ನಿತ್ಯಬಳಕೆಯ ದಿನಸಿ ವಸ್ತುಗಳ ದರ ಏರಿಕೆಯ ಬೆನ್ನಲ್ಲೇ, ಇದೀಗ ಅಡುಗೆಗೆ ಬಳಸುವ ಪ್ರಮುಖ ಮಸಾಲೆ ಪದಾರ್ಥಗಳ ಬೆಲೆಯೂ ಹೆಚ್ಚಳವಾಗಿದ್ದು, ಮಧ್ಯಮ ವರ್ಗದ ಕುಟುಂಬಗಳಿಗೆ ಹೊರೆಯಾಗಿದೆ. ಸಾಗಾಣಿಕೆ ವೆಚ್ಚ ಹೆಚ್ಚಾಗಿರುವುದು, ಕೆಲವು ಮಸಾಲೆ ಬೆಳೆಗಳ ಉತ್ಪಾದನೆ ಕುಸಿತ ಹಾಗೂ ಮಾರುಕಟ್ಟೆಯಲ್ಲಿ ಸರಬರಾಜು ಕಡಿಮೆಯಾಗಿರುವುದು ದರ ಏರಿಕೆಗೆ ಪ್ರಮುಖ ಕಾರಣ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ. ಏಲಕ್ಕಿ ದರ ಪ್ರತಿ ಕೆ.ಜಿ.ಗೆ ₹3,800 ರಿಂದ ₹4,300 ಕ್ಕೆ ಏರಿಕೆಯಾಗಿದ್ದರೆ, ಲವಂಗದ ಬೆಲೆ

ಅಡುಗೆ ಮನೆಗೆ ಮಸಾಲೆ ಬಿಸಿ: ದರದಲ್ಲಿ ಭಾರಿ ಜಿಗಿತ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top