ಕರಾವಳಿ

ಬೆಥನಿ ಐಟಿಐಯಲ್ಲಿ 25 ವರ್ಷ ಸೇವೆ ಸಲ್ಲಿಸಿದ ಸಿಬ್ಬಂದಿಗಳಿಗೆ ಗೌರವ

(ನ್ಯೂಸ್ ಕಡಬ) newskadaba.com, ಆ. 01: ನೆಲ್ಯಾಡಿ: ಬೆಥನಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 25 ವರ್ಷಗಳ ಸೇವೆ ಯಶಸ್ವಿಯಾಗಿ ಪೂರೈಸಿದ ಶ್ರೀ ಪ್ರಕಾಶ್ ಕೆ ವೈ ಹಾಗೂ ಶ್ರೀ ಸುನಿಲ್ ಜೋಸೆಫ್ ಅವರಿಗೆ ಗೌರವ ಸೂಚ್ಯವಾಗಿ ಅಭಿನಂದನಾ ಕಾರ್ಯಕ್ರಮವನ್ನು ಸಂಸ್ಥೆಯ ವತಿಯಿಂದ ನೆರವೇರಿಸಲಾಯಿತು. ಈ ಭಾವಪೂರ್ಣ ಕ್ಷಣದಲ್ಲಿ ಬೆಥನಿ ವಿದ್ಯಾ ಸಂಸ್ಥೆಗಳು ನೆಲ್ಯಾಡಿ ಇದರ ಸಂಚಾಲಕರಾದ ರೆ. ಫಾ. ಜೈಸನ್ ಸೈಮನ್ ಓಐಸಿ ಅವರು ಮಾತನಾಡಿ, “ನಿಸ್ವಾರ್ಥ ಸೇವೆಯನ್ನು 25 ವರ್ಷಗಳ ಕಾಲ ನಿರಂತರವಾಗಿ ನೀಡಿದ ಇಬ್ಬರೂ […]

ಬೆಥನಿ ಐಟಿಐಯಲ್ಲಿ 25 ವರ್ಷ ಸೇವೆ ಸಲ್ಲಿಸಿದ ಸಿಬ್ಬಂದಿಗಳಿಗೆ ಗೌರವ Read More »

ಕರಾವಳಿ

ತುಳು ಭಾಷೆಗೆ ಅಧಿಕೃತ ಸ್ಥಾನಮಾನ: ಮಾನದಂಡಗಳ ಅಧ್ಯಯನಕ್ಕೆ ಸಮಿತಿ ರಚನೆ

(ನ್ಯೂಸ್ ಕಡಬ) newskadaba.com, ಆ. 01: ಮಂಗಳೂರು: ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಗುರುತಿಸುವ ಉಪಕ್ರಮದ ಭಾಗವಾಗಿ, ಮಾನದಂಡಗಳ ಅಧ್ಯಯನ ನಡೆಸಲು ರಾಜ್ಯ ಸರ್ಕಾರ ಐದು ಸದಸ್ಯರ ಸಮಿತಿಯನ್ನು ರಚಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಗಾಯತ್ರಿ ಕೆ.ಎಂ. ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಈ ಸಮಿತಿಯು ಆಂಧ್ರಪ್ರದೇಶದಲ್ಲಿ ಅನುಸರಿಸುತ್ತಿರುವ ಮಾನದಂಡಗಳನ್ನು ವಿವರವಾಗಿ ಅಧ್ಯಯನ ನಡೆಸುವ ಜವಾಬ್ದಾರಿ ವಹಿಸಲಾಗಿದೆ. ಸಮಿತಿಯಲ್ಲಿ ಕಾನೂನು ಇಲಾಖೆಯ ಉಪ ಕಾರ್ಯದರ್ಶಿ ವನಿತಾ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ

ತುಳು ಭಾಷೆಗೆ ಅಧಿಕೃತ ಸ್ಥಾನಮಾನ: ಮಾನದಂಡಗಳ ಅಧ್ಯಯನಕ್ಕೆ ಸಮಿತಿ ರಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಶವ ಹೂತು ಪ್ರಕರಣ: ಕೇಶವ್‌ಗೌಡನ ಸ್ಪಷ್ಟನೆ, SIT ತನಿಖೆಗೆ ಆಗ್ರಹ

(ನ್ಯೂಸ್ ಕಡಬ) newskadaba.com, ಆ. 01: ಧರ್ಮಸ್ಥಳದ ಬಳಿ ಶವಗಳನ್ನು ಹೂತಿಟ್ಟ ಆರೋಪದ ಕುರಿತು ಗ್ರಾಪಂ ಮಾಜಿ ಅಧ್ಯಕ್ಷ ಕೇಶವ್‌ಗೌಡ ಸ್ಪಷ್ಟನೆ ನೀಡಿದ್ದಾರೆ. “ಷಡ್ಯಂತ್ರದ ಹಿಂದೆ ಯಾರು ಇದ್ದಾರೆ ಎಂಬುದು ನಮಗೆ ಗೊತ್ತಿದೆ,” ಎಂದವರು ಹೇಳಿದ್ದಾರೆ. ದೂರದಾರನುPreviously notoriety ಇರುವ ವ್ಯಕ್ತಿ ಎಂದು ಹೇಳಿದ ಅವರು, ಮೃತದೇಹಗಳು ಸಿಕ್ಕರೂ ಅಚ್ಚರಿಯಿಲ್ಲ ಎಂದಿದ್ದಾರೆ. ಮಂಪರು ಪರೀಕ್ಷೆ ಮಾಡಬೇಕೆಂದೂ, ಎಲ್ಲರ ಮೇಲೆ ಸಮಗ್ರ ತನಿಖೆ ಅಗತ್ಯವಿದೆ ಎಂದು ಒತ್ತಾಯಿಸಿದ್ದಾರೆ. “ಬಣ್ಣ ಬಣ್ಣದ ಕಾಗೆಗಳನ್ನು ಹಾರಿಸುತ್ತಿದ್ದಾರೆ” ಎಂದು ಆರೋಪಕರ ವಿರುದ್ಧ ವ್ಯಂಗ್ಯವಾಡಿದ್ದಾರೆ.

ಧರ್ಮಸ್ಥಳ ಶವ ಹೂತು ಪ್ರಕರಣ: ಕೇಶವ್‌ಗೌಡನ ಸ್ಪಷ್ಟನೆ, SIT ತನಿಖೆಗೆ ಆಗ್ರಹ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ಆದಷ್ಟು ಬೇಗ ಎನ್‌ಐಎ ಕಚೇರಿ ಸ್ಥಾಪಿಸಲು ಗೃಹ ಸಚಿವರಿಗೆ ಸಂಸದ ಕ್ಯಾ.ಚೌಟ ಮನವಿ

(ನ್ಯೂಸ್ ಕಡಬ) newskadaba.com, ಆ. 01: ಹಿಂದೂ ಕಾರ್ಯಕರ್ತರ ಹತ್ಯೆ, ಡ್ರಗ್ಸ್ ಮಾಫಿಯಾ, ಭಟ್ಕಳ, ಕಾಸರಗೋಡು ಸೇರಿದಂತೆ ಕರಾವಳಿ ಭಾಗದಲ್ಲಿ ಉಗ್ರ ಚಟುವಟಿಕೆಯ ಸ್ಲೀಪರ್ ಸೆಲ್‌ಗಳ ಆತಂಕದ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ಆದಷ್ಟು ಬೇಗ ರಾಷ್ಟ್ರೀಯ ತನಿಖಾ ದಳ(NIA)ದ ಕಚೇರಿ ಸ್ಥಾಪಿಸಬೇಕೆಂದು ಕೋರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಮನವಿ ಸಲ್ಲಿಸಿದ್ದಾರೆ. ಗುರುವಾರ ಬೆಳಗ್ಗೆ ದೆಹಲಿಯಲ್ಲಿ ಸಚಿವರನ್ನು ಅವರ ಕಚೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ ಅವರು, ಮಂಗಳೂರು ತನ್ನ

ಮಂಗಳೂರಿನಲ್ಲಿ ಆದಷ್ಟು ಬೇಗ ಎನ್‌ಐಎ ಕಚೇರಿ ಸ್ಥಾಪಿಸಲು ಗೃಹ ಸಚಿವರಿಗೆ ಸಂಸದ ಕ್ಯಾ.ಚೌಟ ಮನವಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ನಾಪತ್ತೆಯಾಗಿದ್ದ ಹೇಮಂತ್ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com, ಆ. 01: ಕಳೆದ 4 ದಿನಗಳ ಹಿಂದೆ ನಾಪತ್ತೆಯಾಗಿದ್ದ ಕಡೇಶಿವಾಲಯ ನಿವಾಸಿ ಹೇಮಂತ್ ಆಚಾರ್ಯ(21)ಎಂಬಾತನ ಮೃತದೇಹವು ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಬಜಾಲ್ ಮುಗೇರು ಬಳಿ ನೇತ್ರಾವತಿ ನದಿಯ ಮಧ್ಯದಲ್ಲಿ ಅವರ ದೇಹ ತೇಲುತ್ತಿರುವುದು ಪತ್ತೆಯಾಗಿದೆ. ಜು 27 ರಂದು ಹೇಮಂತ್ ನಾಪತ್ತೆಯಾಗಿದ್ದು, ಈ ಕುರಿತಾಗಿ ಜು.28 ರಂದು ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿತ್ತು. ಜು.29 ರಂದು ಹೇಮಂತ್ ನ ದ್ವಿಚಕ್ರ ವಾಹನ ಜಕ್ರಿಬೆಟ್ಟುವಿನಲ್ಲಿ ಪತ್ತೆಯಾಗಿದ್ದು, ಅದರಲ್ಲಿ ಮೊಬೈಲ್

ಬಂಟ್ವಾಳ: ನಾಪತ್ತೆಯಾಗಿದ್ದ ಹೇಮಂತ್ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮತಗಳ್ಳತನ: ‘ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ’- ಸಿಎಂ

(ನ್ಯೂಸ್ ಕಡಬ) newskadaba.com, ಜು. 31: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಹದೇವಪುರ ಮತ್ತು ರಾಜಾಜಿನಗರದಲ್ಲಿ ಮತಗಳ್ಳತನ ಆಗಿರುವ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನ ಹಿಲ್ಟನ್ ಹೋಟೆಲಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು. ಆಗಸ್ಟ್ 4 ರಂದು ಪ್ರತಿಭಟನೆ ಹಮ್ಮಿಕೊಂಡಿದ್ದು, ರಾಹುಲ್‌ ಗಾಂಧಿ ಅವರು ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ಮಾಡಲು ಬರುತ್ತಿದ್ದಾರೆ. ಬಳಿಕ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳನ್ನು

ಮತಗಳ್ಳತನ: ‘ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ’- ಸಿಎಂ Read More »

ಕರಾವಳಿ, ಕರ್ನಾಟಕ

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ಆರನೇ ಗುರುತಿನಲ್ಲಿ ಪತ್ತೆಯಾದ ಶವದ ಅವಶೇಷ..!!!

(ನ್ಯೂಸ್ ಕಡಬ) newskadaba.com, ಜು. 31: ಧರ್ಮಸ್ಥಳ: ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬ೦ಧಿಸಿದ೦ತೆ ಜು.31ರಂದು 6ನೇ ಗುರುತಿನ ಉತ್ಪನನದಲ್ಲಿ ಶವದ ಅವಶೇಷ ಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ. ಧರ್ಮಸ್ಥಳ ಗ್ರಾಮ ಮತ್ತು ಆಸುಪಾಸಿನ ಪ್ರದೇಶದಲ್ಲಿ ಕೊಲೆಯಾದ ಮತ್ತು ಅತ್ಯಾಚಾರಕ್ಕೀಡಾಗಿ ಕೊಲೆಯಾದ ಮೃತದೇಹಗಳನ್ನು ಬೆದರಿಸಿ ಹೂತು ಹಾಕಿಸಲಾಗಿದೆ ಎಂದು ದೂರು ದಾಖಲಿಸಿರುವ ಅನಾಮಧೇಯ ವ್ಯಕ್ತಿಯೊಂದಿಗೆ ಎಸ್.ಐ.ಟಿ. ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಿರಂತರವಾಗಿ ಶೋಧ ಕಾರ್ಯ ನಡೆಸಲಾಗುತ್ತಿದ್ದು ಇದೀಗ ಬುರುಡೆ ಪತ್ತೆಯಾಗಿದೆ. ಕೆಲ ಮೂಳೆಗಳು ಪತ್ತೆಯಾಗಿದ್ದು, ವಿಧಿವಿಜ್ಞಾನ ಇಲಾಖಾ ಅಧಿಕಾರಿಗಳು

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ಆರನೇ ಗುರುತಿನಲ್ಲಿ ಪತ್ತೆಯಾದ ಶವದ ಅವಶೇಷ..!!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

‘ಪಾಕ್ ಭಯೋತ್ಪಾದನೆಗೆ ಶಾಶ್ವತ ಬೆಂಬಲ ತ್ಯಜಿಸುವವರೆಗೆ ಸಿಂಧೂ ಜಲ ಒಪ್ಪಂದ ಸ್ಥಗಿತ’- ಜೈಶಂಕರ್

(ನ್ಯೂಸ್ ಕಡಬ) newskadaba.com, ಜು. 30. ರಕ್ತ ಮತ್ತು ನೀರು ಒಟ್ಟಿಗೆ ಹರಿಯುವುದಿಲ್ಲ, ಪಾಕಿಸ್ತಾನ ಭಯೋತ್ಪಾದನೆಗೆ ತನ್ನ ಬೆಂಬಲವನ್ನು ಶಾಶ್ವತವಾಗಿ ತ್ಯಜಿಸುವವರೆಗೆ ಸಿಂಧೂ ನದಿ ಜಲ ಒಪ್ಪಂದವನ್ನು ಸ್ಥಗಿತಗೊಳಿಸಲಾಗುವುದು ಎಂದು ವಿದೇಶಾಂಗ ಸಚಿವ ಜೈಶಂಕರ್ ಹೇಳಿದ್ದಾರೆ. ಆಪರೇಷನ್ ಸಿಂಧೂರದ ಚರ್ಚೆಯ ಭಾಗವಾಗಿ ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ‘ಸಿಂಧೂ ಜಲ ಒಪ್ಪಂದವು ಬಹಳ ವಿಶಿಷ್ಟವಾದ ಒಪ್ಪಂದವಾಗಿದೆ. ನಾನು ಈವರೆಗೂ ಯಾವುದೇ ಒಂದು ದೇಶವು ತನ್ನ ಪ್ರಮುಖ ನದಿಗಳನ್ನು ಯಾವುದೇ ಹಕ್ಕುಗಳಿಲ್ಲದೆ ಬೇರೊಂದು ದೇಶಕ್ಕೆ ಅನುಮತಿಸಿದ್ದನ್ನು ನಾನು ನೋಡಿಲ್ಲ. ಆದ್ದರಿಂದ

‘ಪಾಕ್ ಭಯೋತ್ಪಾದನೆಗೆ ಶಾಶ್ವತ ಬೆಂಬಲ ತ್ಯಜಿಸುವವರೆಗೆ ಸಿಂಧೂ ಜಲ ಒಪ್ಪಂದ ಸ್ಥಗಿತ’- ಜೈಶಂಕರ್ Read More »

ಕರಾವಳಿ, ಕರ್ನಾಟಕ

ಮಂಗಳೂರು: ಅಕ್ರಮವಾಗಿ ಮರಳು ಸಾಗಾಟ – ಆರೋಪಿ ಪೊಲೀಸ್‌ ವಶಕ್ಕೆ

(ನ್ಯೂಸ್ ಕಡಬ) newskadaba.com, ಜು. 30. ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪಿಕಪ್‌ ವಾಹನ ಹಾಗೂ ಅದರ ಬೆಂಗಾವಲಿಗೆ ಬಳಕೆ ಮಾಡುತ್ತಿದ್ದ ಸ್ಕೂಟರ್‌ನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳವಾರದಂದು ಪೊಲೀಸ್‌ ಉಪನಿರೀಕ್ಷಕ ಶಿವಕುಮಾರ್‌ ಅವರು ವಾಹನಗಳ ತಪಾಸಣೆ ನಡೆಸುತ್ತಿದ್ದಾಗ ಆಡಂಕುದ್ರುವಿನ ಚಾಪೆಲ್‌ ಚರ್ಚ್‌ ರಸ್ತೆಯಲ್ಲಿ ಬೆಳಗ್ಗೆ 6.30ಕ್ಕೆ ಬರುತ್ತಿದ್ದ ಪಿಕಪ್‌ನ ಚಾಲಕನು ಪೊಲೀಸರನ್ನು ಕಂಡು ವಾಹನವನ್ನು ನಿಲ್ಲಿಸಿ ಕೆಳಗೆ ಇಳಿದು ಓಡಿ ಹೋಗಿದ್ದಾನೆ. ಅದರ ಹಿಂದಿನಿಂದ ಬರುತ್ತಿದ್ದ ಸ್ಕೂಟರ್‌ನ ಸವಾರ ನೌಷದ್‌ ಆಲಿಯನ್ನು

ಮಂಗಳೂರು: ಅಕ್ರಮವಾಗಿ ಮರಳು ಸಾಗಾಟ – ಆರೋಪಿ ಪೊಲೀಸ್‌ ವಶಕ್ಕೆ Read More »

ಕರಾವಳಿ, ಕರ್ನಾಟಕ

ಧರ್ಮಸ್ಥಳ ಪ್ರಕರಣ: ಶವಗಳ ಹೂತಿಟ್ಟ ಜಾಗ ಅಗೆದಾಗ ಹರಿದ ಕೆಂಪು ಬ್ಲೌಸ್, PAN- ATM ಕಾರ್ಡ್‌ಗಳು ಪತ್ತೆ!

(ನ್ಯೂಸ್ ಕಡಬ) newskadaba.com, ಜು. 30. ಮಂಗಳೂರು: ಧರ್ಮಸ್ಥಳ ದೂರಿಗೆ ಸಂಬಂಧಿಸಿದಂತೆ ಸಾಕ್ಷಿ ದೂರುದಾರ ಗುರುತು ಪಡಿಸಿದ ಸ್ಥಳಗಳ ಪೈಕಿ ಮೊದಲನೇ ಗುರುತಿನ ಸ್ಥಳವನ್ನು ಅಗೆಯುವ ವೇಳೆ ಸೈಟ್ ಸಂಖ್ಯೆ 1ರಲ್ಲಿ ವಿಶೇಷ ತನಿಖಾ ತಂಡ(ಎಸ್‌ಐಟಿ)ವು ಮಹತ್ವದ ಸಾಕ್ಷ್ಯಗಳನ್ನು ಪತ್ತೆ ಹಚ್ಚಿದೆ ಎಂದು ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಾರೆ ಎನ್ನಲಾದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ಅವರ ತಾಯಿ ಸುಜಾತಾ ಭಟ್ ಪರ ವಕೀಲ ಮಂಜುನಾಥ್ ಎನ್ ಅವರು ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟನೆ ನೀಡಿರುವ ಅವರು, ಎಸ್ಐಟಿಯ ಕಾರ್ಯಾಚರಣೆಯು

ಧರ್ಮಸ್ಥಳ ಪ್ರಕರಣ: ಶವಗಳ ಹೂತಿಟ್ಟ ಜಾಗ ಅಗೆದಾಗ ಹರಿದ ಕೆಂಪು ಬ್ಲೌಸ್, PAN- ATM ಕಾರ್ಡ್‌ಗಳು ಪತ್ತೆ! Read More »

ಕರಾವಳಿ, ಕರ್ನಾಟಕ
Scroll to Top