ಕರಾವಳಿ

ಮಂಗಳೂರು ವಿವಿ: ವಿವಿಧ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 23. ಶೈಕ್ಷಣಿಕ ವರ್ಷ 2025-26ನೇ ಸಾಲಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಆವರಣ, ಮಂಗಳ ಗಂಗೋತ್ರಿ ಮತ್ತು ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು/ ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜಿತ ಕಾಲೇಜುಗಳು (ಸರಕಾರಿ ಕೋಟಾದ ಸೀಟುಗಳು) ಮತ್ತು ಸರಕಾರಿ ಕಾಲೇಜುಗಳಲ್ಲಿ ನಡೆಸಲಾಗುವ ಸ್ನಾತಕೋತ್ತರ/ ಬಿ.ಪಿ.ಎಡ್/ಡಿಪ್ಲೋಮಾ/ ಸರ್ಟಿಫಿಕೇಟ್ ಕಾರ್ಯಕ್ರಮಗಳ ಪ್ರವೇಶಾತಿಗೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗೆ ಮಂಗಳೂರು ವಿಶ್ವವಿದ್ಯಾನಿಲಯದ ವೆಬ್‍ಸೈಟ್ www.mangaloreuniversity.ac.in ನಿಂದ ಪಡೆದುಕೊಳ್ಳಬಹುದು ಎಂದು ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು ವಿವಿ: ವಿವಿಧ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಡಾ:ಬಿ.ಆರ್ ಅಂಬೇಡ್ಕರ್ ನಿಗಮದಿಂದ ವಿವಿದೆಡೆ ಜಮೀನು ಖರೀದಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 23. ಡಾ:ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಪ್ರತಿಷ್ಠಿತ ಭೂ ಒಡೆತನ ಯೋಜನೆಯನ್ನು ಅನುಷ್ಠಾನಗೊಳಿಸಲು ಪರಿಶಿಷ್ಟ ಜಾತಿಯ ಭೂ ರಹಿತ ಮಹಿಳಾ ಅರ್ಜಿದಾರರಿಂದ ಎಡಮಂಗಲ (ಕಡಬ ತಾಲೂಕು), ಸುಳ್ಯ ಕಸಬ (ಸುಳ್ಯ), ಜಾಲ್ಸೂರು (ಸುಳ್ಯ), ಕಡೇಶಿವಾಲಯ (ಬಂಟ್ವಾಳ ತಾಲೂಕು) ಗ್ರಾಮಗಳಲ್ಲಿ ಅರ್ಜಿಗಳು ಸ್ವೀಕೃತಗೊಂಡಿರುತ್ತದೆ. ಫಲಾಪೇಕ್ಷಿಗಳಿಗೆ ನಿಗಮದ ಮುಖಾಂತರ ಕನಿಷ್ಟ 0.50 ರಿಂದ 1.00 ಎಕ್ರೆ ಕೃಷಿ ಮತ್ತು ಕೃಷಿ ಯೋಗ್ಯ ಜಮೀನನ್ನು ಖರೀದಿ ಮಾಡಿ ನೀಡಬೇಕಾಗಿರುವುದರಿಂದ ನಿಗಮಕ್ಕೆ ಜಮೀನು ಮಾರಾಟ ಮಾಡಲು

ಡಾ:ಬಿ.ಆರ್ ಅಂಬೇಡ್ಕರ್ ನಿಗಮದಿಂದ ವಿವಿದೆಡೆ ಜಮೀನು ಖರೀದಿಗೆ ಅರ್ಜಿ ಆಹ್ವಾನ Read More »

ಕರಾವಳಿ

ವಿಕಲಚೇತನ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 23. 2025ನೇ ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆಯಲ್ಲಿ ಕೇಂದ್ರ ಸರಕಾರದ ವತಿಯಿಂದ ನ್ಯಾಷನಲ್ ಇ-ಸ್ಕಾಲರ್‍ ಶಿಪ್ ಯೋಜನೆಯಡಿ, ಪ್ರಿ ಮೆಟ್ರಿಕ್ ಟಾಪ್, ಟಾಪ್ ಕ್ಲಾಸ್, ಪೋಸ್ಟ್ ಮೆಟ್ರಿಕ್ ವಿಕಲಚೇತನ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್‍ಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ವಿಕಲಚೇತನ ವಿದ್ಯಾರ್ಥಿಗಳು ಶಾಲಾ ಕಾಲೇಜು, ಶಿಕ್ಷಣ ಸಂಸ್ಥೆಗಳ ಮುಖಾಂತರ ಯೋಜನೆಗೆ ನ್ಯಾಷನಲ್ ಸ್ಕಾಲರ್‍ ಶಿಪ್ ಪೋರ್ಟಲ್ https://scholarships.gov.in ಮೂಲಕ ಅರ್ಜಿ ಸಲ್ಲಿಸಬಹುದು.

ವಿಕಲಚೇತನ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್: ಅರ್ಜಿ ಆಹ್ವಾನ Read More »

ಕರಾವಳಿ

ಆನ್ ಲೈನ್ ದರೋಡೆ- ಮೆಸೇಜಿಂಗ್ ಆ್ಯಪ್ ನಿಂದ 15.5 ಲಕ್ಷ ಹಣ ವಂಚನೆ

(ನ್ಯೂಸ್‌ ಕಡಬ) newskadaba.com ಜು.23: ಉಡುಪಿ: ಮೆಸೇಜಿಂಗ್ ಆ್ಯಪ್ ಮೂಲಕ ಹೂಡಿಕೆ ಯೋಜನೆಗೆ ಆಮಿಷವೊಡ್ಡಲ್ಪಟ್ಟ ಬಳಿಕ 34 ವರ್ಷದ ವ್ಯಕ್ತಿಯೊಬ್ಬ ಆನ್‌ಲೈನ್ ವಂಚನೆಗೆ ಒಳಗಾಗಿ 15.5 ಲಕ್ಷ ರೂ.ಗೂ ಹೆಚ್ಚು ಹಣವನ್ನು ಕಳೆದುಕೊಂಡಿದ್ದಾನೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಅಶ್ವಿತ್ ಎಂದು ಗುರುತಿಸಲಾದ ಸಂತ್ರಸ್ತ ಈ ಸಂಬಂಧ ಕಾರ್ಕಳ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದರು. ಪೊಲೀಸರ ಪ್ರಕಾರ, ಅಶ್ವಿತ್‌ಗೆ ಜನವರಿ 28 ರಂದು ಮೀನಾ ಸಕ್ಪಾಲ್

ಆನ್ ಲೈನ್ ದರೋಡೆ- ಮೆಸೇಜಿಂಗ್ ಆ್ಯಪ್ ನಿಂದ 15.5 ಲಕ್ಷ ಹಣ ವಂಚನೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮನೆ ಬಾಗಿಲಿಗೆ ಆರೋಗ್ಯ ಸೇವೆ-14 ರೋಗಗಳ ತಪಾಸಣೆ- ಕೈಪಿಡಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 23. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ವೆನ್‍ ಲಾಕ್ ಆಸ್ಪತ್ರೆ ಇವರ ಸಹಯೋಗದೊಂದಿಗೆ ಗೃಹ ಆರೋಗ್ಯ ಯೋಜನೆ ಕಾರ್ಯಾಗಾರ ಹಾಗೂ ಆಶಾ ಕೈಪಿಡಿ ಬಿಡುಗಡೆ ಕಾರ್ಯಕ್ರಮವು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು. ಶಾಸಕ ಐವನ್ ಡಿ’ಸೋಜ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಗೃಹ ಆರೋಗ್ಯ ಸೇವೆ ಮನೆಬಾಗಿಲಿಗೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಅಸಾಂಕ್ರಾಮಿಕ

ಮನೆ ಬಾಗಿಲಿಗೆ ಆರೋಗ್ಯ ಸೇವೆ-14 ರೋಗಗಳ ತಪಾಸಣೆ- ಕೈಪಿಡಿ ಬಿಡುಗಡೆ Read More »

ಕರಾವಳಿ

ಜನನ-ಮರಣ: 21 ದಿನಗಳೊಳಗೆ ನೋಂದಣಿ ಕಡ್ಡಾಯ– ಅಪರ ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 23. ಪ್ರತಿಯೊಂದು ಜನನ ಮರಣದ ನೋಂದಣಿ ಕಡ್ಡಾಯವಾಗಿದ್ದು, ಘಟನೆ ಸಂಭವಿಸಿದ 21 ದಿನಗಳೊಳಗೆ ನಗರ/ ಗ್ರಾಮ ಪಂಚಾಯತ್  ನೋಂದಣಾಧಿಕಾರಿಗಳ ಮೂಲಕ ನೋಂದಣಿ ಮಾಡಿಸಬೇಕು  ಎಂದು ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಜನನ-ಮರಣ ನೋಂದಣಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಗರ ವ್ಯಾಪ್ತಿಯಲ್ಲಿ ಬೇರೆ ಜಿಲ್ಲೆಯ ವ್ಯಕ್ತಿಯು ಅಪಘಾತ ಅಥವಾ ಇನ್ನಿತರ ಅಪರಾಧ ಕೃತ್ಯಗಳ

ಜನನ-ಮರಣ: 21 ದಿನಗಳೊಳಗೆ ನೋಂದಣಿ ಕಡ್ಡಾಯ– ಅಪರ ಜಿಲ್ಲಾಧಿಕಾರಿ Read More »

ಕರಾವಳಿ

ಬಂದರು, ಶಿಪ್ಪಿಂಗ್ ಹಾಗೂ ಜಲಮಾರ್ಗಗಳ ಸಚಿವಾಲಯ ಕಾರ್ಯದರ್ಶಿಯನ್ನು ಭೇಟಿಯಾದ ಸಂಸದ ಕ್ಯಾ.ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 23. ಕಡಲನಗರಿ ಮಂಗಳೂರಿನಲ್ಲಿ ವೀರ ವನಿತೆ ಅಬ್ಬಕ್ಕ ರಾಣಿ ಹೆಸರಿನಲ್ಲಿ ಪ್ರತ್ಯೇಕ ಮೆರಿಟೈಮ್ ವಿಶ್ವವಿದ್ಯಾನಿಲಯ ಸ್ಥಾಪಿಸಬೇಕೆಂದು ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ಕೇಂದ್ರ ಬಂದರು, ಶಿಪ್ಪಿಂಗ್‌ ಹಾಗೂ ಜಲಮಾರ್ಗಗಳ ಸಚಿವಾಲಯದ ಕಾರ್ಯದರ್ಶಿ ಟಿ.ಕೆ. ರಾಮಚಂದ್ರನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.   ನವದೆಹಲಿಯಲ್ಲಿ ಸಚಿವಾಲಯದ ಕಾರ್ಯದರ್ಶಿಯನ್ನು ಭೇಟಿ ಮಾಡಿದ ಸಂಸದರು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಮ್ಮ ದೇಶದ ಮೆರಿಟೈಮ್

ಬಂದರು, ಶಿಪ್ಪಿಂಗ್ ಹಾಗೂ ಜಲಮಾರ್ಗಗಳ ಸಚಿವಾಲಯ ಕಾರ್ಯದರ್ಶಿಯನ್ನು ಭೇಟಿಯಾದ ಸಂಸದ ಕ್ಯಾ.ಚೌಟ Read More »

ಕರಾವಳಿ

ನಾಪತ್ತೆಯಾಗಿ ಪತ್ತೆಯಾಗಿದ್ದ ಯುವತಿ ಧರ್ಮಸ್ಥಳದ ಸನಿಹ ಅನುಮಾನಸ್ಪದ ಸಾವು!

(ನ್ಯೂಸ್‌ ಕಡಬ) newskadaba.com ಜು.23: ಧರ್ಮಸ್ಥಳದ ಸನಿಹ ಬೆಳಾಲು ಗ್ರಾಮದ ಕುಕ್ಕೊಟ್ಟುವಿನ ವೀಣಾ(19) ಎನ್ನುವ ಯುವತಿ ಅನುಮಾನಸ್ಪದವಾಗಿ ಸಾವು ಕಂಡಿರುವ ಘಟನೆ ನಡೆದಿದೆ. ಕಳೆದ ಜುಲೈ 11 ರಂದು ವೀಣಾಳ ಮೃತದೇಹ ಮನೆಯ ಪಕ್ಕದ ಕೆರೆಯಲ್ಲಿ ತೇಲಾಡುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಧರ್ಮಸ್ಥಳ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವೀಣಾ ಅವರು ಕಳೆದ ಮೇ.10ರಂದು ನಾಪತ್ತೆಯಾಗಿದ್ದರು. ಈ ಬಗ್ಗೆ ಕೇಸು ದಾಖಲಿಸಿಕೊಂಡಿದ್ದ ಪೊಲೀಸರು ಆಕೆಯ ಪತ್ತೆಗಾಗಿ ಪ್ರಕಟಣೆ ಹೊರಡಿಸಿದ್ದರು. ಆದಾದ ಕೆಲವೇ ದಿನಗಳಲ್ಲಿ

ನಾಪತ್ತೆಯಾಗಿ ಪತ್ತೆಯಾಗಿದ್ದ ಯುವತಿ ಧರ್ಮಸ್ಥಳದ ಸನಿಹ ಅನುಮಾನಸ್ಪದ ಸಾವು! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಹಿರಿಯ ತುಳು ರಂಗಭೂಮಿ ಕಲಾವಿದ, ಚಲನಚಿತ್ರ ನಟ ರಮೇಶ್ ಕಲ್ಲಡ್ಕ ನಿಧನ

(ನ್ಯೂಸ್‌ ಕಡಬ) newskadaba.com ಜು.23: ತುಳು ರಂಗಭೂಮಿ ಹಿರಿಯ ಕಲಾವಿದ, ಚಲನಚಿತ್ರ ನಟ ಚಿ.ರಮೇಶ್ ಕಲ್ಲಡ್ಕ (68) ಹೃದಯಾಘಾತದಿಂದ ಬುಧವಾರ ಬೆಳಗ್ಗೆ ಕಲ್ಲಡ್ಕದ ಕೊಳಕೀರು ಮನೆಯಲ್ಲಿ ನಿಧನ ಹೊಂದಿದ್ದಾರೆ. ಅವರು ಒಬ್ಬ ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ರಂಗಭೂಮಿಯಲ್ಲಿ 30 ವರ್ಷಗಳಿಗೂ ಹೆಚ್ಚು ಕಾಲ ಕಲಾಸೇವೆಗೈದಿರುವ ರಮೇಶ್ ಕಲ್ಲಡ್ಕ ಕಳೆದ 20 ವರ್ಷಗಳಿಂದ ವಿಜಯಕುಮಾರ್ ಕೊಡಿಯಾಲ್ ಬೈಲ್ ರ ಕಲಾಸಂಗಮದಲ್ಲಿ ಕಲಾವಿದರಾಗಿ ಕಲಾಸೇವೆ ಮಾಡುತ್ತಿದ್ದರು. ವಿಜಯಕುಮಾರ್ ಕೊಡಿಯಾಲ್ ಬೈಲ್ ಅವರಿಂದ ತರಬೇತಿ ಪಡೆದ ರಮೇಶ್ ಕಲ್ಲಡ್ಕ ಕಲಾಸಂಗಮದ

ಬಂಟ್ವಾಳ: ಹಿರಿಯ ತುಳು ರಂಗಭೂಮಿ ಕಲಾವಿದ, ಚಲನಚಿತ್ರ ನಟ ರಮೇಶ್ ಕಲ್ಲಡ್ಕ ನಿಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ವೀರರಾಣಿ ಅಬ್ಬಕ್ಕ ಹೆಸರಿನಲ್ಲಿ ಮೆರಿಟೈಮ್‌ ವಿಶ್ವವಿದ್ಯಾಲಯ ಸ್ಥಾಪನೆಗೆ ಕ್ಯಾ. ಬ್ರಿಜೇಶ್‌ ಚೌಟ ಮನವಿ

(ನ್ಯೂಸ್‌ ಕಡಬ) newskadaba.com ಜು.23: ಕಡಲನಗರಿ ಮಂಗಳೂರಿನಲ್ಲಿ ವೀರ ವನಿತೆ ಅಬ್ಬಕ್ಕ ರಾಣಿ ಹೆಸರಿನಲ್ಲಿ ಪ್ರತ್ಯೇಕ ಮೆರಿಟೈಮ್‌ ವಿಶ್ವವಿದ್ಯಾನಿಲಯ ಸ್ಥಾಪಿಸಬೇಕೆಂದು ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ಕೇಂದ್ರ ಬಂದರು, ಶಿಪ್ಪಿಂಗ್‌ ಹಾಗೂ ಜಲಮಾರ್ಗಗಳ ಸಚಿವಾಲಯದ ಕಾರ್ಯದರ್ಶಿ ಟಿ.ಕೆ. ರಾಮಚಂದ್ರನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ಮಂಗಳೂರಿನಲ್ಲಿ ವೀರರಾಣಿ ಅಬ್ಬಕ್ಕ ಹೆಸರಿನಲ್ಲಿ ಮೆರಿಟೈಮ್‌ ವಿಶ್ವವಿದ್ಯಾಲಯ ಸ್ಥಾಪನೆಗೆ ಕ್ಯಾ. ಬ್ರಿಜೇಶ್‌ ಚೌಟ ಮನವಿ Read More »

ಕರಾವಳಿ, ಕರ್ನಾಟಕ
Scroll to Top