ಕರಾವಳಿ

ಪುತ್ತೂರು: ಯುವತಿಯೊಂದಿಗೆ ಕೆಎಸ್ಆರ್ ಟಿಸಿ ಬಸ್ ನಲ್ಲಿ ಅನುಚಿತ ವರ್ತನೆ-ಆರೋಪಿ ವಶ

(ನ್ಯೂಸ್‌ ಕಡಬ) newskadaba.com ಜು.23: ಜುಲೈ 22ರಂದು ಪುತ್ತೂರು ಕೆ.ಎಸ್.ಆರ್.ಟಿಸಿ ಬಸ್ ನಲ್ಲಿ ವ್ಯಕ್ತಿಯೋರ್ವ ಯುವತಿಯ ಪಕ್ಕದಲ್ಲಿ ಕುಳಿತು ಅನುಚಿತವಾಗಿ ವರ್ತಿಸಿದ ಘಟನೆ ನಡೆದಿದೆ. ಈ ಬಗ್ಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ. ಪ್ರಕರಣ ಸಂಬಂಧ ಮಂಗಳೂರಿನ ಮಹಮ್ಮದ್ ತೌಹೀದ್ ಎಂಬಾತನನ್ನು ಪೊಲೀಸ್ ವಶಕ್ಕೆ ಪಡೆದಿದ್ದಾರೆ. ದೂರುದಾರ ಯುವತಿ ಜುಲೈ 22ರಂದು ಕಾಲೇಜು ಮುಗಿಸಿಕೊಂಡು ಸಂಜೆ ಮಂಗಳೂರಿನಿಂದ ಪುತ್ತೂರು ಬರುವ ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು. ಸಂಜೆ ಸುಮಾರು […]

ಪುತ್ತೂರು: ಯುವತಿಯೊಂದಿಗೆ ಕೆಎಸ್ಆರ್ ಟಿಸಿ ಬಸ್ ನಲ್ಲಿ ಅನುಚಿತ ವರ್ತನೆ-ಆರೋಪಿ ವಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತುಮಕೂರು: ಬೇಕರಿಗೆ ನುಗ್ಗಿದ ಲಾರಿ, ಮೂವರು ಸಾವು

(ನ್ಯೂಸ್‌ ಕಡಬ) newskadaba.com ಜು. 22:  ತುಮಕೂರು: ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಕೋಳಾಲದಲ್ಲಿ ಮಂಗಳವಾರ ಗೊಬ್ಬರ ತುಂಬಿದ್ದ ಲಾರಿಯೊಂದು ರಸ್ತೆ ಬದಿಯ ಬೇಕರಿಗೆ ನುಗ್ಗಿದ ಪರಿಣಾಮ ಮೂವರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಇಂದು ಬೆಳಗ್ಗೆ ಗೊಬ್ಬರ ತುಂಬಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬೇಕರಿಗೆ ನುಗ್ಗಿದೆ. ಭೀಕರ ಅಪಘಾತದಲ್ಲಿ ಕಾಟೇನಹಳ್ಳಿ ನಿವಾಸಿ ರಂಗಶಾಮಯ್ಯ(65)ಹಾಗೂ ಪುರದಳ್ಳಿಯ ಬೈಲಪ್ಪ(65) ಸೇರಿ ಮೂವರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಕಾಂತರಾಜು, ಸಿದ್ಧಗಂಗಮ್ಮ, ಜಯಣ್ಣ ಹಾಗೂ ಮೋಹನ್ ಕುಮಾರ್ ಅವರು ಗಾಯಗೊಂಡಿದ್ದು, ಅವರನ್ನು

ತುಮಕೂರು: ಬೇಕರಿಗೆ ನುಗ್ಗಿದ ಲಾರಿ, ಮೂವರು ಸಾವು Read More »

ಕರಾವಳಿ, ಕರ್ನಾಟಕ

ಶ್ರೀಕ್ಷೇತ್ರ ಧರ್ಮಸ್ಥಳ ಬೆನ್ನಿಗೆ ನಿಂತ ಸ್ಪೀಕರ್ ಯು.ಟಿ ಖಾದರ್! ಮತ್ತೆ ಪದ್ಮಲತಾ ಕೇಸ್ ಮುನ್ನಲೆಗೆ

(ನ್ಯೂಸ್‌ ಕಡಬ) newskadaba.com ಜು. 22:  ಮಂಗಳೂರು: ಧರ್ಮಸ್ಥಳದಲ್ಲಿ ಶವ ಹೂತುಹಾಕಿದ ಪ್ರಕರಣವು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಹಿನ್ನೆಲೆಯಲ್ಲಿ, ಪ್ರಕರಣದ ಸಮಗ್ರ ತನಿಖೆಗಾಗಿ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದೆ. ಈ ಕುರಿತಂತೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದು, ತನಿಖೆ ಮೂಲಕ ಸತ್ಯಾಂಶ ಹೊರಬರಲಿ ಎಂಬ ಆಶಯ ವ್ಯಕ್ತಪಡಿಸಿದರು.  

ಶ್ರೀಕ್ಷೇತ್ರ ಧರ್ಮಸ್ಥಳ ಬೆನ್ನಿಗೆ ನಿಂತ ಸ್ಪೀಕರ್ ಯು.ಟಿ ಖಾದರ್! ಮತ್ತೆ ಪದ್ಮಲತಾ ಕೇಸ್ ಮುನ್ನಲೆಗೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ಯುವ ಉದ್ಯಮಿ ನಿತಿನ್ ಸುವರ್ಣ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com ಜು. 22:  ಮಂಗಳೂರಿನ ಯುವ ಉದ್ಯಮಿ ಹೋಟೆಲ್ ಹಾಗೂ ಇನ್ನಿತರ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ನಿತಿನ್ ಸುವರ್ಣ ಅವರು ಸೋಮವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಿಜೆಪಿ ಹಾಗೂ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ನಿತಿನ್ ಅವರು ಹಲವು ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನು ತಿಳಿದುಬಂದಿಲ್ಲ. ಅವರು ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ. ಮೂಲತಃ ಮರೋಳಿ ನಿವಾಸಿಯಾದ ನಿತಿನ್ ಅವರು

ಮಂಗಳೂರು: ಯುವ ಉದ್ಯಮಿ ನಿತಿನ್ ಸುವರ್ಣ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ

ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣ: ಸಹಾಯವಾಣಿ ಆರಂಭಿಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹ

(ನ್ಯೂಸ್‌ ಕಡಬ) newskadaba.com ಜು. 22: ಮಂಗಳೂರು: ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್ಐಟಿ)ದ ಅಧಿಕಾರಿಗಳು ದೂರುಗಳ ಆಲಿಸಲು ಸಹಾಯವಾಣಿ ಆರಂಭಿಸುವಂತೆ ನಾಪತ್ತೆಯಾಗಿರುವ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ಅವರ ಪರ ವಕೀಲರು ಮನವಿ ಮಾಡಿದ್ದಾರೆ. ಪ್ರಕರಣದ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ದಳ ಸ್ಥಾಪಿಸಿದೆ. ನಾಪತ್ತೆಯಾಗಿರುವ ವಿದ್ಯಾರ್ಥಿನಿ ಅನನ್ಯ ಭಟ್ ಪ್ರಕರಣ ಹಾಗೂ ಭವಿಷ್ಯದಲ್ಲಿ ಬೆಳಕಿಗೆ ಬರುವ ಪ್ರಕರಣಗಳನ್ನೂ ತನಿಖೆ ನಡೆಸುವಂತೆ ಸೂಚಿಸಿದೆ. ಎಸ್ಐಟಿ ರಚನೆ

ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣ: ಸಹಾಯವಾಣಿ ಆರಂಭಿಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಟ, ನಿರ್ದೇಶಕ ರಾಜ್ ಬಿ. ಶೆಟ್ಟಿ ಭೇಟಿ

(ನ್ಯೂಸ್‌ ಕಡಬ) newskadaba.com ಜು. 22: ಜನಪ್ರಿಯ ನಟ, ನಿರ್ದೇಶಕ ರಾಜ್ ಬಿ. ಶೆಟ್ಟಿ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೊಸ ಮಾರಿಗುಡಿಗೆ ಭೇಟಿ ನೀಡಿದ್ದಾರೆ. ರಾಜ್ ಬಿ. ಶೆಟ್ಟಿ ಅವರು ನೂತನವಾಗಿ ನಿರ್ಮಾಣಗೊಂಡಿರುವ ಮಾರಿಗುಡಿ ದೇಗುಲ ದರ್ಶನ ಮಾಡಿ, ಪೂಜೆ ಸಲ್ಲಿಸಿದ್ದಾರೆ. ದೇವಾಲಯದ ವತಿಯಿಂದ ರಾಜ್ ಬಿ ಶೆಟ್ಟಿ ಅವರನ್ನು ಗೌರವಿಸಲಾಯಿತು. ಸದ್ಯ ತಮ್ಮ ಲಾಫಿಂಗ್ ಬುದ್ಧ ಸಂಸ್ಥೆಯಿಂದ ನಿರ್ಮಾಣಗೊಂಡಿರುವ ಸು ಫ್ರಂ ಸೋ ಸಿನಿಮಾ ಬಿಡುಗಡೆಯ ನಿರೀಕ್ಷೆಯಲ್ಲಿರುವ ರಾಜ್ ಶೆಟ್ಟಿ, ಸಿನಿಮಾ ಪ್ರಚಾರ ಸಲುವಾಗಿ

ಉಡುಪಿ: ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಟ, ನಿರ್ದೇಶಕ ರಾಜ್ ಬಿ. ಶೆಟ್ಟಿ ಭೇಟಿ Read More »

ಕರಾವಳಿ

ಧರ್ಮಸ್ಥಳ ಪ್ರಕರಣ- ಎಸ್‌ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ಧವಾಗಿ ನಡೆಯಲಿ: ಬೊಮ್ಮಾಯಿ

(ನ್ಯೂಸ್ ಕಡಬ) newskadaba.com, ಜು. 21. ಬೆಂಗಳೂರು: ಧರ್ಮಸ್ಥಳ ಪ್ರಕರಣದ ಕುರಿತು ಎಸ್‌ಐಟಿ (SIT) ತನಿಖೆಗೆ ನೀಡಿರುವುದನ್ನು ಸ್ವಾಗತ ಮಾಡುತ್ತೇವೆ. ಕಾಲಮಿತಿಯಲ್ಲಿ ಕಾನೂಬದ್ಧವಾಗಿ ಎಸ್‌ಐಟಿ ತನಿಖೆಯಾಗಬೇಕು. ಯಾರನ್ನೋ ಗುರಿಯಾಗಿಸಿಕೊಂಡು ತನಿಖೆ ನಡೆಯಬಾರದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದ ಬಗ್ಗೆ ಸ್ಥಳೀಯರು ಹಾಗೂ ಅಲ್ಲಿ ಬಹಳ ದಿನಗಳವರೆಗೆ ಕೆಲಸ ಮಾಡಿರುವ ಪೊಲಿಸರಿಗೆ ಗೊತ್ತಿರುತ್ತದೆ. ದೂರು ಕೊಟ್ಟವರು ತಮ್ಮ ಮೇಲೆ ಒತ್ತಡ ಇದೆ ಎಂದು ಹೇಳಿದ್ದಾರೆ.

ಧರ್ಮಸ್ಥಳ ಪ್ರಕರಣ- ಎಸ್‌ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ಧವಾಗಿ ನಡೆಯಲಿ: ಬೊಮ್ಮಾಯಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಾಳೆಯಿಂದ ಮುಂದಿನ ಮೂರು ದಿನ ಯಾರನ್ನೂ ಭೇಟಿಯಾಗಲ್ಲ: ಡಿಕೆ ಶಿವಕುಮಾರ್

(ನ್ಯೂಸ್ ಕಡಬ) newskadaba.com, ಜು. 21. ಬೆಂಗಳೂರು: ಅನ್ಯಕಾರ್ಯ ನಿಮಿತ್ತ ನಾಳೆಯಿಂದ ಮುಂದಿನ ಮೂರು ದಿನಗಳವರೆಗೆ ಸಾರ್ವಜನಿಕರು, ಪಕ್ಷದ ಕಾರ್ಯಕರ್ತರು ಅಥವಾ ನಾಯಕರೊಂದಿಗೆ ಯಾವುದೇ ಸಭೆ ಸೇರಿದಂತೆ ಸಾರ್ವಜನಿಕ ಕಾರ್ಯಕ್ರಮಗಳಿಗೆ ಲಭ್ಯವಿರುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ. “ಸಾರ್ವಜನಿಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ನಾನು ಯಾರನ್ನೂ ಭೇಟಿ ಆಗಲು ಸಾಧ್ಯವಾಗುವುದಿಲ್ಲ. ಇದಕ್ಕಾಗಿ ವಿಷಾದಿಸುತ್ತೇನೆ. ಯಾರೂ ತಪ್ಪು ತಿಳಿಯಬಾರದು ” ಎಂದು ಡಿಕೆ ಶಿವಕುಮಾರ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಮೈಸೂರಿನಲ್ಲಿ ಶನಿವಾರ ನಡೆದ

ನಾಳೆಯಿಂದ ಮುಂದಿನ ಮೂರು ದಿನ ಯಾರನ್ನೂ ಭೇಟಿಯಾಗಲ್ಲ: ಡಿಕೆ ಶಿವಕುಮಾರ್ Read More »

ಕರಾವಳಿ, ಕರ್ನಾಟಕ

ಭೀಕರ ಸರಣಿ ಅಪಘಾತ: ತಂದೆ – ಮಗ ಸೇರಿ ಮೂವರ ದುರ್ಮರಣ

(ನ್ಯೂಸ್ ಕಡಬ) newskadaba.com, ಜು. 21. ಬೆಂಗಳೂರು-ಚೆನೈ ರಾಷ್ಟ್ರೀಯ ಹೆದ್ದಾರಿಯ ಹೊಸೂರು ಸಮೀಪದ ಕುರುಬರಪಳ್ಳಿ ಬಳಿ ಇಂದು ಮುಂಜಾನೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ತಂದೆ- ಮಗ ಸೇರಿ ಮೂವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಕರ್ನಾಟಕ ರಾಜ್ಯಗಡಿಭಾಗ ತಮಿಳುನಾಡಿನ ಕೃಷ್ಣಗಿರಿ ಸಮೀಪದ ಕುರುಬರಪಳ್ಳಿ ಬಳಿ ಹನ್ನೆರಡಕ್ಕೂ ಅಧಿಕ ವಾಹನಗಳ ನಡುವೆ ಅಪಘಾತ ಸಂಭವಿಸಿದ್ದು ಬಹುತೇಕ ವಾಹನಗಳು ಜಖಂಗೊಂಡಿವೆ. ರಸ್ತೆ ಕಾಮಗಾರಿ ನಡೆಯುತ್ತಿದ್ದ ಹಿನ್ನೆಲೆ ವಾಹನಗಳು ನಿಧಾನವಾಗಿ ಚಲಿಸುತ್ತಿದ್ದ ವೇಳೆ ಲಾರಿಯೊಂದು ಅತಿವೇಗವಾಗಿ ಬಂದು ಚಾಲಕನ ನಿಯಂತ್ರಣ ತಪ್ಪಿ

ಭೀಕರ ಸರಣಿ ಅಪಘಾತ: ತಂದೆ – ಮಗ ಸೇರಿ ಮೂವರ ದುರ್ಮರಣ Read More »

ಕರಾವಳಿ, ಕರ್ನಾಟಕ

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ಭಾರೀ ಮಳೆ ಸಾಧ್ಯತೆ: IMD ಮುನ್ಸೂಚನೆ

(ನ್ಯೂಸ್ ಕಡಬ) newskadaba.com, ಜು. 21. ಬೆಂಗಳೂರು: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಸೋಮವಾರ ಮುನ್ಸೂಚನೆ ನೀಡಿದೆ. ಉಡುಪಿ ಜಿಲ್ಲೆಯ ಹಂಗಳೂರು ಜಿಲ್ಲೆಯಲ್ಲಿ ಭಾನುವಾರ ಅತಿ ಹೆಚ್ಚು ಮಳೆಯಾಗಿದ್ದು, 92 ಮಿಮೀ ಮಳೆಯಾಗಿದೆ. ಗದಗ ಜಿಲ್ಲೆಯಲ್ಲಿ 77.1 ಮಿಮೀ ಮಳೆಯಾಗಿದೆ, ಇದು ಜುಲೈನಲ್ಲಿ ಇದುವರೆಗಿನ ಅತಿ ಹೆಚ್ಚು ಮಳೆಯಾಗಿದೆ ಎಂದು ಅದು ಹೇಳಿದೆ. 2005

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ಭಾರೀ ಮಳೆ ಸಾಧ್ಯತೆ: IMD ಮುನ್ಸೂಚನೆ Read More »

ಕರಾವಳಿ, ಕರ್ನಾಟಕ
Scroll to Top