ಕರಾವಳಿ

ಕಡಬ, ಸುಳ್ಯ ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು (ಜು.03) ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಕಡಬ, ಜು.03. ಕಡಬ, ಸುಳ್ಯ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು (ಜು.03) ಕಡಬ ಮತ್ತು ಸುಳ್ಯ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದ್ದು, ಮಳೆಯ ಆರ್ಭಟ ಜೋರಾಗಿರುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ತಾಲೂಕು ತಹಶಿಲ್ದಾರರು ಈ ಆದೇಶ ನೀಡಿದ್ದಾರೆ.

ಕಡಬ, ಸುಳ್ಯ ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು (ಜು.03) ರಜೆ ಘೋಷಣೆ Read More »

ಕರಾವಳಿ

ತಿರುಪತಿಗೆ ಹೋಗಲು ರೆಡಿಯಾಗಿರುವ ಭಕ್ತರಿಗೆ TTD ಪ್ರಮುಖ ಸೂಚನೆ

(ನ್ಯೂಸ್‌ ಕಡಬ) newskadaba.com ಜು.02: ವಿಶ್ವವಿಖ್ಯಾತ ತಿರುಮಲ ತಿರುಪತಿ ದೇವಸ್ಥಾನ ಹಿಂದೂಗಳಿಗೆ ಪವಿತ್ರ ಸ್ಥಳ.. ಪ್ರಪಂಚದಾದ್ಯಂತದ ತಿರುಮಲ ಶ್ರೀವಾರಿಯ ಭಕ್ತರು ಭಗವಂತನ ದರ್ಶನ ಪಡೆಯಲು ಬರುತ್ತಾರೆ. ಬೇಸಿಗೆ ಕಾಲ ಮುಗಿದ ನಂತರವೂ ತಿರುಮಲದಲ್ಲಿ ಭಕ್ತರ ಸಂಖ್ಯೆ ಇನ್ನೂ ಹೆಚ್ಚುತ್ತಿದೆ.. ತಿರುಮಲದಲ್ಲಿ ಭಕ್ತರ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಭಕ್ತರು ಕಂಪಾರ್ಟ್‌ಮೆಂಟ್‌ಗಳಲ್ಲಿ ಕಾಯುತ್ತಿದ್ದಾರೆ. ಎನ್‌ಜಿ ಶೆಡ್‌ಗಳವರೆಗೆ ಸರತಿ ಸಾಲು ಇದೆ. ಈ ಹಿನ್ನೆಲೆಯಲ್ಲಿ, ತಿರುಮಲ ತಿರುಪತಿ ದೇವಸ್ಥಾನಗಳು ಶ್ರೀವಾರಿಯ ಎಲ್ಲಾ ದರ್ಶನ ಪಡೆಯಲು 20 ಗಂಟೆಗಳು ಬೇಕಾಗುತ್ತದೆ ಎಂದು

ತಿರುಪತಿಗೆ ಹೋಗಲು ರೆಡಿಯಾಗಿರುವ ಭಕ್ತರಿಗೆ TTD ಪ್ರಮುಖ ಸೂಚನೆ Read More »

ಕರಾವಳಿ

ಬೈಕ್​ ಟ್ಯಾಕ್ಸಿ ಪ್ರಯಾಣಕ್ಕೆ ಕೇಂದ್ರದಿಂದ ಹಸಿರು ನಿಶಾನೆ

(ನ್ಯೂಸ್‌ ಕಡಬ) newskadaba.com ಜು.02: ಮೋಟಾರು ವಾಹನ ಅಗ್ರಿಗೇಟರ್​ ಮಾರ್ಗಸೂಚಿ-2025ರ ಅನುಸಾರ ಪ್ರಯಾಣಿಕರ ಪ್ರಯಾಣಕ್ಕೆ ಸಾರಿಗೇತರ (ಖಾಸಗಿ) ಮೋಟಾರ್​ಸೈಕಲ್​ ಬಳಕೆಗೆ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಅನುಮತಿ ನೀಡಿದೆ. ಈ ಮೂಲಕ ಬೈಕ್​ ಟ್ಯಾಕ್ಸಿಯಂತಹ ವಾಹನಗಳ ಕುರಿತು ಕೇಂದ್ರ ಸರ್ಕಾರ ಸ್ಪಷ್ಟ ನಿಲುವು ತಳೆದಿದೆ. ಮೋಟಾರ್​ ವಾಹನ ಅಗ್ರಿಗೇಟರ್​ ಮಾರ್ಗಸೂಚಿ-2025ರ ಹೊಸ ಮಾರ್ಗಸೂಚಿಯು ಬಳಕೆದಾರರ ಸುರಕ್ಷತೆ, ಭದ್ರತೆ ಹಾಗೂ ಚಾಲಕನ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಒಂದು ನಿಯಂತ್ರಣ ವ್ಯವಸ್ಥೆ ಒದಗಿಸಲು ಪ್ರಯತ್ನಿಸುತ್ತದೆ ಎಂದು ಸಚಿವಾಲಯ ತಿಳಿಸಿದೆ. ರಾಜ್ಯ

ಬೈಕ್​ ಟ್ಯಾಕ್ಸಿ ಪ್ರಯಾಣಕ್ಕೆ ಕೇಂದ್ರದಿಂದ ಹಸಿರು ನಿಶಾನೆ Read More »

ಕರಾವಳಿ

ಆಟೋ ಚಾಲಕರಿಗೆ ಬಿಸಿ ಮುಟ್ಟಿಸಿದ ಸಾರಿಗೆ ಇಲಾಖೆ; 260 ಕೇಸ್‌, 98 ಆಟೋಗಳು ಸೀಜ್‌ !

(ನ್ಯೂಸ್‌ ಕಡಬ) newskadaba.com ಜು.02: ರಾಜಧಾನಿ ಬೆಂಗಳೂರಿನಲ್ಲಿ ಕಳೆದೊಂದು ವಾರದಿಂದ ಆಟೋ ಚಾಲಕರು ಪ್ರಯಾಣಿಕರ ಮಧ್ಯೆ ಬಾಡಿಗೆ ಹೊಂದಿಸುವಲ್ಲಿ ಮಾತಿನ ಚಕಮಕಿ, ಜಗಳ ಘಟನೆಗಳು ಹೆಚ್ಚಾಗಿದ್ದು ಕಂಡು ಬಂದಿದೆ. ಕೆಲವು ಆಟೋ ಚಾಲಕರು ಸದ್ಯದ ಪರಿಸ್ಥಿತಿ ನೋಡಿಕೊಂಡು ದುಪಟ್ಟು ಹಣ ವಸೂಲಿಗೆ ಮುಂದಾಗುತ್ತಿರುವುದು ಇದಕ್ಕೆ ಕಾರಣವಾಗಿದೆ. ಕರ್ನಾಟಕ ಹೈಕೋರ್ಟ್‌ ಇತ್ತೀಚೆಗೆ ರಾಪಿಡೋ ಬೈಕ್ ಹಾಗೂ ಒಲಾ, ಊಬರ್ ಟ್ಯಾಕ್ಸಿ ಸೇವೆಗಳನ್ನು ರದ್ದು ಮಾಡಿ ಆದೇಶಿಸಿದೆ. ಈ ನಿಷೇಧ ಆದೇಶ ಬಳಿಕ ಸಾರ್ವಜನಿಕರು ಆಟೋ, ಬಸ್ ಇತರ ಸಾರಿಗೆ

ಆಟೋ ಚಾಲಕರಿಗೆ ಬಿಸಿ ಮುಟ್ಟಿಸಿದ ಸಾರಿಗೆ ಇಲಾಖೆ; 260 ಕೇಸ್‌, 98 ಆಟೋಗಳು ಸೀಜ್‌ ! Read More »

ಕರಾವಳಿ

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ಮಂತ್ರಿಮಂಡಲ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಜು. 02. ಸರಸ್ವತೀ ಪ್ರೌಢಶಾಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿ ಸರಕಾರ ಮತ್ತು ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ ಹಾಗೂ ಪ್ರತಿಜ್ಞಾವಿಧಿ ಬೋಧನಾ ಕಾರ್ಯಕ್ರಮವು ಜೂನ್ 30ರಂದು ಕಡಬ ಹನುಮಾನ್ ನಗರದ ಯಾದವಶ್ರೀ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪುತ್ತೂರಿನ ವಕೀಲರಾದ ಶ್ರೀ ಲತನ್ ರೈ ಗುತ್ತುಪಾಲು ದೀಪ ಬೆಳಗಿಸಿ ಉದ್ಘಾಟಿಸಿ, ನಾಯಕತ್ವದಲ್ಲಿ ನಿರ್ಧಾರ ತೆಗೆದುಕೊಳ್ಳುವುದು ಪ್ರಾಮುಖ್ಯವಾಗಿದೆ. ತಂದೆ-ತಾಯಿಯನ್ನು ಪ್ರೀತಿಸಿ, ಗೌರವಿಸಿ, ಹಿರಿಯರ ಶಿಕ್ಷಕರ ಮಾತನ್ನು ಕೇಳುವವರ ಜೀವನ ಉತ್ತಮವಾಗಿರುತ್ತದೆ. ದುಶ್ಚಟಗಳಿಂದ

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ಮಂತ್ರಿಮಂಡಲ ಉದ್ಘಾಟನೆ Read More »

ಕರಾವಳಿ

ಕಡಬ: ಮೂರಾಜೆ ಅಂಗನವಾಡಿ ಕೇಂದ್ರದ ಹೊರಭಾಗದಲ್ಲಿ ಶೀಟ್ ಹಾಕುವಂತೆ ತಹಶೀಲ್ದಾರ್ ಗೆ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಜು. 02. ಕಡಬ ತಾಲೂಕಿನ ಕೋಡಿoಬಾಳ ಗ್ರಾಮದ ಮೂರಾಜೆ ಅಂಗನವಾಡಿ ಕೇಂದ್ರವೊಂದರಲ್ಲಿನ ಪುಟಾಣಿ ಮಕ್ಕಳು ಮಳೆಗಾಲದಲ್ಲಿ ಒದ್ದೆಯಾಗಿಕೊಂಡು ಶೌಚಾಲಯಕ್ಕೆ ಹೋಗುತ್ತಿದ್ದು, ಶೌಚಾಲಯಕ್ಕೆ ತೆರಳುವಲ್ಲಿ ಮೇಲ್ಛಾವಣಿ ಮತ್ತು ನೆಲಕ್ಕೆ ಕಾಂಕ್ರೀಟ್ ಹಾಕುವಂತೆ ಕಡಬ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗೆ ಪತ್ರದ ಮೂಲಕ ಮನವಿ ಮಾಡಲಾಯಿತು. ಈ ಸಂದರ್ಭ ಕಡಬ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಡೆನ್ನಿಸ್ ಫೆರ್ನಾಂಡಿಸ್, ಅಂಗನವಾಡಿ ಶಿಕ್ಷಕಿ ವಿಮಲಾ ಮತ್ತು ಮುರಳಿ ಮೂರಾಜೆ ಜೊತೆಗಿದ್ದರು.

ಕಡಬ: ಮೂರಾಜೆ ಅಂಗನವಾಡಿ ಕೇಂದ್ರದ ಹೊರಭಾಗದಲ್ಲಿ ಶೀಟ್ ಹಾಕುವಂತೆ ತಹಶೀಲ್ದಾರ್ ಗೆ ಮನವಿ Read More »

ಕರಾವಳಿ

ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಬೆಂಕಿಗಾಹುತಿಯಾದ ಕಾರು- ಚಾಲಕ ಪಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 02. ನಾಯಿ ಅಡ್ಡಬಂದ ಪರಿಣಾಮ ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಬೆಂಕಿಗಾಹುತಿಯಾದ ಘಟನೆ ಮಂಗಳೂರು ಹೊರವಲಯದ ಗಂಜಿಮಠದ ಕೈಗಾರಿಕಾ ವಲಯದ ಬಳಿ ನಡೆದಿದೆ.   ಮೊಗರುಕಟ್ಟೆಯಿಂದ ಗಂಜಿಮಠದ ಕಡೆಗೆ ತೆರಳುತ್ತಿದ್ದ ಕಾರೊಂದು ತಡರಾತ್ರಿ ಸುಮಾರು 2 ಗಂಟೆಗೆ ನಾರ್ಲಪದವು ಎಂಬಲ್ಲಿ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿದೆ. ಪರಿಣಾಮ ಕಾರಿನ ಎಸಿ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದೆ. ಅವಘಡದಲ್ಲಿ ಕಾರು ಸಂಪೂರ್ಣ ಭಸ್ಮಗೊಂಡಿದ್ದು, ಕಾರಿನಲ್ಲಿದ್ದ ಚಾಲಕ

ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಬೆಂಕಿಗಾಹುತಿಯಾದ ಕಾರು- ಚಾಲಕ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2025 ಸಮೀಕ್ಷೆ

(ನ್ಯೂಸ್ ಕಡಬ) newskadaba.com ಜು. 02. ಸ್ವಚ್ಛ ಭಾರತ್ ಮಿಷನ್(ಗ್ರಾ) ಯೋಜನೆಯಡಿ ಗ್ರಾಮೀಣ ಸ್ವಚ್ಛತೆ, ನೈರ್ಮಲ್ಯ ಕಾಪಾಡುವಿಕೆ, ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ, ಬಯಲು ಬಹಿರ್ದೆಸೆ ಮುಕ್ತ ಸುಸ್ಥಿರತೆ ಕಾಯ್ದುಕೊಳ್ಳಲು ಹಲವು ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಎಲ್ಲಾ ಘಟಕಾಂಶಗಳ ಪ್ರಗತಿ ಹಾಗೂ ಸುಸ್ಥಿರತೆಯಲ್ಲಿ ಸಮುದಾಯ ಭಾಗವಹಿಸುವಿಕೆಗೆ ಹಮ್ಮಿಕೊಂಡಿರುವ ಹಲವು ಚಟುವಟಿಕೆಗಳ ಕುರಿತು ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವತಿಯಿಂದ ಪ್ರತಿ ವರ್ಷ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2025 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ಪ್ರಸ್ತುತ “ಸ್ವಚ್ಛ ಸರ್ವೇಕ್ಷಣ

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2025 ಸಮೀಕ್ಷೆ Read More »

ಕರಾವಳಿ

ಗ್ರಾಮ ಸಭೆ ನಡೆಸಲು ಪುತ್ತೂರು ತಾಲೂಕು ಪಂಚಾಯತ್ ಸೂಚನೆ

(ನ್ಯೂಸ್ ಕಡಬ) newskadaba.com ಜು. 02. ಪುತ್ತೂರು ತಾಲೂಕು ಪಂಚಾಯತ್  2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಸಂಬಂಧಪಟ್ಟ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿಗಳು ವಾರ್ಡ್ ಸಭೆ ಮತ್ತು ಗ್ರಾಮ ಸಭೆಯ ಬಗ್ಗೆ ವ್ಯಾಪಕ ಪ್ರಚಾರ ನಡೆಸಿ ಜನ ಪ್ರತಿನಿಧಿಗಳಿಗೆ ಮಾಹಿತಿಯನ್ನು ನೀಡಲು ಸೂಚಿಸಲಾಗಿದೆ. ಅನಿವಾರ್ಯ ಕಾರಣಗಳಿಂದ ನಿಗದಿಪಡಿಸಿದ ದಿನಾಂಕದಂದು ಗ್ರಾಮ ಸಭೆಯನ್ನು ನಡೆಸಲು ಅಸಾಧ್ಯವಾದಲ್ಲಿ ಬದಲಿ ಗ್ರಾಮ ಸಭೆಯ ದಿನಾಂಕವನ್ನು ನಿಗದಿಪಡಿಸುವಾಗ ಸಂಬಂಧಪಟ್ಟ ಹೋಬಳಿಯಲ್ಲಿ ಗ್ರಾಮ ಸಭೆಗಳು ಪೂರ್ವ ನಿಗದಿಯಾಗಿದೆಯೇ

ಗ್ರಾಮ ಸಭೆ ನಡೆಸಲು ಪುತ್ತೂರು ತಾಲೂಕು ಪಂಚಾಯತ್ ಸೂಚನೆ Read More »

ಕರಾವಳಿ

ಹಿಂದುಳಿದ ವರ್ಗಗಳ ಶುಲ್ಕ ಮರುಪಾವತಿ: ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 02. ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ಓದುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು, 2024-25 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಶುಲ್ಕ ಮರುಪಾವತಿ” ಕಾರ್ಯಕ್ರಮದ ಸೌಲಭ್ಯಕ್ಕಾಗಿ ಆನ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ರಾಜೀವ್ ಗಾಂಧಿ ವಿಶ್ವವಿದ್ಯಾಲಯ ಕೋರ್ಸುಗಳಿಗೆ  ಶುಲ್ಕ ಮರುಪಾವತಿ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಲು ಜುಲೈ 10ರ ವರೆಗೆ ಅವಧಿ ವಿಸ್ತರಿಸಲಾಗಿದೆ. ವೆಬ್‍ಸೈಟ್ www.ssp.postmatric.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು

ಹಿಂದುಳಿದ ವರ್ಗಗಳ ಶುಲ್ಕ ಮರುಪಾವತಿ: ಅವಧಿ ವಿಸ್ತರಣೆ Read More »

ಕರಾವಳಿ
Scroll to Top