ಕರಾವಳಿ

ರಸ್ತೆ ಅಪಘಾತ- ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನಾಧಿಕಾರಿ ದುರ್ಮರಣ

(ನ್ಯೂಸ್ ಕಡಬ) newskadaba.com ಜೂ. 30. ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಂಟ್ವಾಳದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮೃತಪಟ್ಟ ಘಟನೆ ಬಿ.ಸಿ.ರೋಡಿನ ಅಜ್ಜಿಬೆಟ್ಟು ಕ್ರಾಸ್‌ ಬಳಿ ನಡೆದಿದೆ.   ಮೃತರನ್ನು ಶಂಭೂರು ಕೊಪ್ಪಳ ನಿವಾಸಿ ಚಿದಾನಂದ (50) ಎಂದು ಗುರುತಿಸಲಾಗಿದೆ. ಇವರು ತನ್ನ ದ್ವಿಚಕ್ರ ವಾಹನದಲ್ಲಿ ಬಿ.ಸಿ.ರೋಡ್‌ ಪೇಟೆಯಿಂದ ಅಜ್ಜಿಬೆಟ್ಟು ಕ್ರಾಸ್‌ ಕಡೆಗೆ ದಾಟುವ ಸಂದರ್ಭ ಮಂಗಳೂರು ಕಡೆಗೆ ಸಾಗುತ್ತಿದ್ದ ಟ್ಯಾಂಕರ್‌ ಲಾರಿ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಚಿದಾನಂದರು ಚಕ್ರದಡಿಗೆ […]

ರಸ್ತೆ ಅಪಘಾತ- ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನಾಧಿಕಾರಿ ದುರ್ಮರಣ Read More »

ಕರಾವಳಿ, ಕ್ರೈಮ್ ನ್ಯೂಸ್

ದಕ್ಷಿಣ ಕನ್ನಡ: ಶಾಲಾ ಮಕ್ಕಳಲ್ಲಿ ಹೆಚ್ಚುತ್ತಿರುವ ದೃಷ್ಟಿದೋಷ ಪ್ರಕರಣ

(ನ್ಯೂಸ್ ಕಡಬ) newskadaba.com ಜೂ. 30. ದ.ಕ. ಜಿಲ್ಲೆಯ ಶಾಲಾ ಮಕ್ಕಳಲ್ಲಿ ದೃಷ್ಟಿದೋಷ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಆಘಾತಕಾರಿ ಅಂಶ ವರದಿಯಾಗಿದೆ. ಜಿಲ್ಲೆಯ ಸುಮಾರು ಆರು ಸಾವಿರ ಮಕ್ಕಳಲ್ಲಿ ದೃಷ್ಟಿ ಸಮಸ್ಯೆ ಕಂಡು ಬಂದಿದ್ದು, ಅಂದಾಜು ಐದು ಸಾವಿರ ಮಕ್ಕಳಿಗೆ ಕನ್ನಡಕದ ಅನಿವಾರ್ಯತೆ ಇದೆ ಎಂದು ಹೇಳಲಾಗುತ್ತಿದೆ. ಮಕ್ಕಳಲ್ಲಿ ಅತಿಯಾದ ಮೊಬೈಲ್ ಫೋನ್ ಬಳಕೆಯೇ ಇದಕ್ಕೆ ಕಾರಣ ಎಂದು ಆರೋಗ್ಯ ಇಲಾಖೆ ಅಭಿಪ್ರಾಯಪಟ್ಟಿದೆ.   ಅಂದಾಜು 6ರಿಂದ 16 ವರ್ಷ ವಯಸ್ಸಿನ ಮಕ್ಕಳಲ್ಲಿ ದೃಷ್ಟಿ ದೋಷ ಪ್ರಕರಣ

ದಕ್ಷಿಣ ಕನ್ನಡ: ಶಾಲಾ ಮಕ್ಕಳಲ್ಲಿ ಹೆಚ್ಚುತ್ತಿರುವ ದೃಷ್ಟಿದೋಷ ಪ್ರಕರಣ Read More »

ಕರಾವಳಿ

ಜಿಲ್ಲಾ ಕಾರಾಗೃಹದಲ್ಲಿ ಮೊಬೈಲ್ ಪತ್ತೆ..!

(ನ್ಯೂಸ್ ಕಡಬ) newskadaba.com ಜೂ. 30. ನಗರದ ಕೊಡಿಯಾಲ್‌ ಬೈಲಿನ ಜಿಲ್ಲಾ ಕಾರಾಗೃಹದಲ್ಲಿ ಪೊಲೀಸ್ ತಪಾಸಣೆಯ ವೇಳೆ 1 ಕೀಪ್ಯಾಡ್ ಮೊಬೈಲ್ ಮತ್ತು 2 ಟಚ್ ಸ್ಕ್ರೀನ್ ಮೊಬೈಲ್ ಫೋನ್ ಹಾಗೂ ಎರಡು ಬಂಡಲ್ ಬೀಡಿಗಳು ಪತ್ತೆಯಾಗಿರುವ ಕುರಿತು ವರದಿಯಾಗಿದೆ.   ಜೈಲಿನಲ್ಲಿ ಇತ್ತೀಚೆಗೆ ನಡೆದ ಹಲ್ಲೆ ಪ್ರಕರಣದ ಬಳಿಕ ಕೇಂದ್ರ ಉಪ ವಿಭಾಗದ ಎಸಿಪಿ ಪ್ರತಾಪ್ ಸಿಂಗ್ ಥೋರಟ್ ಜೈಲಿನ ಸುರಕ್ಷತೆಯ ದೃಷ್ಟಿಯಿಂದ ಶೋಧ ಕೈಗೊಂಡಿದ್ದರು. ಈ ವೇಳೆ ಇವೆಲ್ಲ ಪತ್ತೆಯಾಗಿದೆ.   ಮಹಜರು ನಡೆಸಿ

ಜಿಲ್ಲಾ ಕಾರಾಗೃಹದಲ್ಲಿ ಮೊಬೈಲ್ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಕೆಂಪುಕಲ್ಲು ಪಾಯ ಬಂದ್- ಲಾರಿ ಮಾಲಕರಿಂದ ಬೃಹತ್ ಪ್ರತಿಭಟನೆಗೆ ನಿರ್ಧಾರ

(ನ್ಯೂಸ್ ಕಡಬ) newskadaba.com ಜೂ. 30. ಪೊಲೀಸ್ ಇಲಾಖೆಯ ಕಟ್ಟುನಿಟ್ಟಿನ ಕ್ರಮದಿಂದಾಗಿ ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು ಪಾಯಗಳು ಬಂದ್ ಆಗಿದ್ದು, ಇದಕ್ಕೆ ಪರಿಹಾರ ಕಲ್ಪಿಸದಿದ್ದಲ್ಲಿ ಜುಲೈ 3ರಂದು ಬೃಹತ್ ಪ್ರತಿಭಟನೆ ನಡೆಸಲು ದ.ಕ ಜಿಲ್ಲಾ ಕೆಂಪುಕಲ್ಲು ಪಾಯ ಹಾಗೂ ಲಾರಿ ಮಾಲಕರ ಒಕ್ಕೂಟ ನಿರ್ಧರಿಸಿದೆ.   ಈ ಬಗ್ಗೆ ಒಕ್ಕೂಟವು ಬಿಸಿರೋಡಿನ ಖಾಸಗಿ ಸಭಾಂಗಣವೊಂದರಲ್ಲಿ ಸಭೆ ನಡೆಸಿ ಚರ್ಚಿಸಿದ್ದು, ಜೂನ್ 30(ಇಂದು) ನಡೆಯಲಿರುವ ಸಭೆಯಲ್ಲಿ ಈ ಸಮಸ್ಯೆಗೆ ಪರಿಹಾರ ಸಿಗದಿದ್ದಲ್ಲಿ ಮುಂದಕ್ಕೆ ರಾಜಕೀಯ ರಹಿತವಾಗಿ ಹೋರಾಟ ನಡೆಸಲು

ಕೆಂಪುಕಲ್ಲು ಪಾಯ ಬಂದ್- ಲಾರಿ ಮಾಲಕರಿಂದ ಬೃಹತ್ ಪ್ರತಿಭಟನೆಗೆ ನಿರ್ಧಾರ Read More »

ಕರಾವಳಿ

ಪುತ್ತೂರು ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಆಶಾಜ್ಯೋತಿ ಪುತ್ತೂರಾಯ ವರ್ಗಾವಣೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 30. ವಿವಿಧ ಸಂಘ ಸಂಸ್ಥೆಗಳ ಮೂಲಕ ಸರಕಾರಿ ಆಸ್ಪತ್ರೆಗೆ ಹಲವು ಸೌಲಭ್ಯಗಳನ್ನು ನೀಡುವ ಮೂಲಕ ಜನಪ್ರಿಯತೆ ಗಳಿಸಿದ್ದ ಪುತ್ತೂರು ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಆಶಾಜ್ಯೋತಿ ಪುತ್ತೂರಾಯ ಅವರು ಮಡಿಕೇರಿ ಜಿಲ್ಲಾಸ್ಪತ್ರೆಗೆ  ವರ್ಗಾವಣೆಗೊಳ್ಳಲಿದ್ದಾರೆ. ಇದರ ಜೊತೆಗೆ ಅರಿವಳಿಕೆ ತಜ್ಞೆ ಡಾ.ಜಯಕುಮಾರಿ ಅವರು ತುಮಕೂರು ಜಿಲ್ಲಾಸ್ಪತ್ರೆಗೆ, ದಂತ ತಜ್ಞ ಡಾ.ಜೈದೀಪ್ ಅವರು ಸಕಲೇಶಪುರ ತಾಲೂಕು ಆಸ್ಪತ್ರೆಗೆ ಹಾಗೂ ಅರಿವಳಿಕೆ ತಜ್ಞೆ ಡಾ.ಶ್ವೇತಾ ಸುಳ್ಯ ಸರಕಾರಿ ಆಸ್ಪತ್ರೆಗೆ ವರ್ಗಾವಣೆಗೊಳ್ಳಲಿದ್ದಾರೆ. ಇತ್ತೀಚೆಗಷ್ಟೇ ವೈದ್ಯರುಗಳ ಕುರಿತು ಕೌನ್ಸಿಲ್

ಪುತ್ತೂರು ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಆಶಾಜ್ಯೋತಿ ಪುತ್ತೂರಾಯ ವರ್ಗಾವಣೆ Read More »

ಕರಾವಳಿ

ಶ್ರೀನಿವಾಸ ಪೋರ್ಟ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 30. ಅಂತರಾಷ್ಟ್ರೀಯ ವೈದ್ಯರ ದಿನದ ಅಂಗವಾಗಿ, ಶ್ರೀನಿವಾಸ ಪೋರ್ಟ್ ಆಸ್ಪತ್ರೆ, SIMSRC ನ ಸಹಯೋಗದೊಂದಿಗೆ ಜುಲೈ 1, 2025ರಂದು ತನ್ನ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಪಣಂಬೂರಿನ ಶ್ರೀನಿವಾಸ ಪೋರ್ಟ್ ಆಸ್ಪತ್ರೆ ಆವರಣದಲ್ಲಿ ಆಯೋಜಿಸಲು ನಿರ್ಧರಿಸಿದೆ.   ಈ ಶಿಬಿರವು ಬೆಳಿಗ್ಗೆ 9:00ರಿಂದ ಮಧ್ಯಾಹ್ನ 1:00 ಗಂಟೆಯವರೆಗೆ ನಡೆಯಲಿದ್ದು, ಸಾರ್ವಜನಿಕರಿಗೆ ಮುಕ್ತವಾಗಿ ಲಭ್ಯವಿರಲಿದೆ.   ವೈದ್ಯರ ನಿಸ್ವಾರ್ಥ ಸೇವೆಗೆ ಗೌರವ ಸಲ್ಲಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶಿಬಿರದ

ಶ್ರೀನಿವಾಸ ಪೋರ್ಟ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ Read More »

ಕರಾವಳಿ

ಎಸ್.ಸಿ.ಎಸ್ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 30. ಎಸ್.ಸಿ.ಎಸ್ ಆಸ್ಪತ್ರೆ ಮಂಗಳೂರು ಹಾಗೂ ಭಾರತೀಯ ರೆಡ್‍ ಕ್ರಾಸ್ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲೆ ಇದರ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರವನ್ನು ಶನಿವಾರದಂದು ಆಸ್ಪತ್ರೆಯ ಸಭಾಂಗಣದಲ್ಲಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದಂತಹ ಡಾ.ಜೀವರಾಜ್ ಸೊರಕೆಯವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.   ಮಂಗಳೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಅಗತ್ಯವಿರುವ ರಕ್ತವನ್ನು ಪೂರೈಸುವ ಸದುದ್ದೇಶದಿಂದ ಈ ಶಿಬಿರವನ್ನು ಹಮ್ಮಿಕೊಳಲಾಯಿತು. ರಕ್ತದಾನವು ಶೇಷ್ಠದಾನವಾಗಿದ್ದು, ಪ್ರತಿಯೊಬ್ಬರ ರಕ್ತದಾನವೂ ಸಹ ಹಲವರ ಜೀವವನ್ನು ಉಳಿಸಲು ಸಹಾಯಕವಾಗುತ್ತದೆ

ಎಸ್.ಸಿ.ಎಸ್ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ Read More »

ಕರಾವಳಿ

ಪುತ್ತಿಗೆ ಸರಕಾರಿ ಪ್ರಾಥಮಿಕ ಶಾಲೆಗೆ ಕುಡಿಯುವ ನೀರಿನ ಘಟಕ ಹಸ್ತಾಂತರ

(ನ್ಯೂಸ್ ಕಡಬ) newskadaba.com ಕಡಬ, ಜೂ. 30. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಕಡಬ ತಾಲೂಕು ನೆಲ್ಯಾಡಿ ವಲಯ ವ್ಶಾಪ್ತಿಯ ಕೊಣಾಜೆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪುತ್ತಿಗೆ ಇಲ್ಲಿಗೆ ಶುದ್ಧ ಕುಡಿಯುವ ನೀರಿನ ಘಟಕದ ಹಸ್ತಾಂತರ ಕಾರ್ಯಕ್ರಮ ನಡೆಯಿತು.   ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಡಬ ತಾಲೂಕು ಯೋಜನಾಧಿಕಾರಿ ಶ್ರೀ ಪ್ರಕಾಶ್ ಕುಮಾರ್ ರವರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾದಿಕಾರಿಯವರು ಮಂಜೂರು ಮಾಡಿರುವ ಶುದ್ದ ಕುಡಿಯುವ ನೀರಿನ ಘಟಕವನ್ನು ಹಸ್ತಾಂತರಿಸಿ

ಪುತ್ತಿಗೆ ಸರಕಾರಿ ಪ್ರಾಥಮಿಕ ಶಾಲೆಗೆ ಕುಡಿಯುವ ನೀರಿನ ಘಟಕ ಹಸ್ತಾಂತರ Read More »

ಕರಾವಳಿ

9, 10ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪಡೆಯಲು ಅವಕಾಶ ಕಲ್ಪಿಸಿಕೊಡುವಂತೆ ಎಂ. ಪಿ. ಮೊಯಿದಿನಬ್ಬ ಆಗ್ರಹ

(ನ್ಯೂಸ್ ಕಡಬ) newskadaba.com ಜೂ. 30. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿದ್ದ ಮೆಟ್ರಿಕ್ ಪೂರ್ವ ಅಲ್ಪಸಂಖ್ಯಾತ 9 ಮತ್ತು 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ  ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪಡೆಯಲು ಅವಕಾಶ ಕಲ್ಪಿಸಿಕೊಡುವಂತೆ ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಮಾಜಿ ಅಧ್ಯಕ್ಷ ಎಂ. ಪಿ. ಮೊಯಿದಿನಬ್ಬ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.     ಕಳೆದ ಶೈಕ್ಷಣಿಕ ವರ್ಷದಲ್ಲಿ ಕೂಡ ಎಸ್ ಎಸ್ ಪಿ ಪೋರ್ಟಲ್ ನಲ್ಲಿ 9 ಮತ್ತು 10 ನೇ ತರಗತಿಯಲ್ಲಿ

9, 10ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪಡೆಯಲು ಅವಕಾಶ ಕಲ್ಪಿಸಿಕೊಡುವಂತೆ ಎಂ. ಪಿ. ಮೊಯಿದಿನಬ್ಬ ಆಗ್ರಹ Read More »

ಕರಾವಳಿ

ಕುಕ್ಕೆ ಸುಬ್ರಹ್ಮಣ್ಯಕ್ಕೆ ಕುಟುಂಬ ಸಮೇತ ಭೇಟಿ ನೀಡಿದ ಅಣ್ಣಾಮಲೈ

(ನ್ಯೂಸ್‌ ಕಡಬ) newskadaba.com ಜು.29 : ಬಿಜೆಪಿ ತಮಿಳುನಾಡು ಘಟಕದ ಮಾಜಿ ಅಧ್ಯಕ್ಷ ಹಾಗೂ ಮಾಜಿ ಐಪಿಎಸ್‌ ಅಧಿಕಾರಿ ಕೆ.ಅಣ್ಣಾಮಲೈ ಅವರು ಇಂದು ತಮ್ಮ ಕುಟುಂಬಸಮೇತರಾಗಿ ನಾಡಿನ ಪ್ರಸಿದ್ಧ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ಅಣ್ಣಾಮಲೈ ಅವರು ಶ್ರೀ ಸಂಪುಟ ನರಸಿಂಹಸ್ವಾಮಿ ಸುಬ್ರಹ್ಮಣ್ಯ ಮಠದಲ್ಲಿ ಆಶ್ಲೇಷ ಬಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಪತ್ನಿ, ಮಕ್ಕಳು ಹಾಗೂ ಇತರೆ ಕುಟುಂಬ ಸದಸ್ಯರು ಉಪಸ್ಥಿತರಿದ್ದರು. ಪೂಜೆ ಮುಗಿಸಿದ ನಂತರ ಶ್ರೀ ವಿದ್ಯಾಪ್ರಸನ್ನ ತೀರ್ಥ

ಕುಕ್ಕೆ ಸುಬ್ರಹ್ಮಣ್ಯಕ್ಕೆ ಕುಟುಂಬ ಸಮೇತ ಭೇಟಿ ನೀಡಿದ ಅಣ್ಣಾಮಲೈ Read More »

ಕರಾವಳಿ
Scroll to Top