ಕರಾವಳಿ

ಕೆ.ಪಿ.ಟಿ: ಇಂದು ಯುಜಿಸಿಇಟಿ ಕೌನ್ಸೆಲಿಂಗ್ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಜೂ. 28. ವೃತ್ತಿಪರ ಕೋರ್ಸ್‍ ಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆ.ಇ.ಎ.) ಮುಖಾಂತರ 2025-26ನೇ ಸಾಲಿನ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಪ್ರವೇಶ ಪ್ರಕ್ರಿಯೆಗೆ ಕುರಿತಂತೆ ಅರಿವು ಮೂಡಿಸುವ ಸಂಬಂಧ ವಿದ್ಯಾರ್ಥಿಗಳಿಗೆ ಯು.ಜಿ.ಸಿ.ಇ.ಟಿ. ಕೌನ್ಸೆಲಿಂಗ್ ಕುರಿತು ತಿಳುವಳಿಕೆ ನೀಡಲು ಜೂನ್ 28ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1.30 ರವರೆಗೆ ನಗರದ ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್(ಕೆ.ಪಿ.ಟಿ)ನಲ್ಲಿ ಯು.ಜಿ.ಸಿ.ಇ.ಟಿ 2025 – ಸೀಟು ಹಂಚಿಕೆ ಮಂಥನ ಕಾರ್ಯಾಗಾರವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆ.ಇ.ಎ.) ರವರ ಸಹಕಾರದೊಂದಿಗೆ ಆಯೋಜಿಸಲಾಗಿದೆ. […]

ಕೆ.ಪಿ.ಟಿ: ಇಂದು ಯುಜಿಸಿಇಟಿ ಕೌನ್ಸೆಲಿಂಗ್ ಕಾರ್ಯಾಗಾರ Read More »

ಕರಾವಳಿ

ಕಡಲ್ಕೊರೆತ ಪ್ರದೇಶಗಳಿಗೆ ಸ್ಪೀಕರ್ ಯುಟಿಕೆ ಭೇಟಿ

(ನ್ಯೂಸ್ ಕಡಬ) newskadaba.com ಜೂ. 28. ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಫರೀದ್ ಅವರು ಉಳ್ಳಾಲದ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಬಟ್ಟಂಪಾಡಿಯಲ್ಲಿ  ಕಡಲ್ಕೊರೆತಕ್ಕೀಡಾದ ಪ್ರದೇಶಗಳಿಗೆ ಅವರು ಭೇಟಿ ನೀಡಿದರು.   ಈ ಪ್ರದೇಶದಲ್ಲಿ ತಾತ್ಕಾಲಿಕ ತಡೆಗೋಡೆ ನಿರ್ಮಿಸಲಾಗುತ್ತಿದೆ. ತಾಲೂಕು ವ್ಯಾಪ್ತಿಯಲ್ಲಿ ಕಡಲಕೊರೆತ ಪ್ರದೇಶಗಳಲ್ಲಿ ತಾತ್ಕಾಲಿಕ ತಡೆಗೋಡೆ ನಿರ್ಮಿಸಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದರು. ಗುಣಮಟ್ಟದ ಕಾಮಗಾರಿ ನಿರ್ವಹಿಸಲು ಅವರು ಅಧಿಕಾರಿಗಳಿಗೆ ಸೂಚಿಸಿದರು.

ಕಡಲ್ಕೊರೆತ ಪ್ರದೇಶಗಳಿಗೆ ಸ್ಪೀಕರ್ ಯುಟಿಕೆ ಭೇಟಿ Read More »

ಕರಾವಳಿ

ಕೆಂಪೇಗೌಡರ ಚಿಂತನೆಗಳನ್ನು ಯುವ ಜನತೆ ಅನುಸರಿಸಲು ಕರೆ

(ನ್ಯೂಸ್ ಕಡಬ) newskadaba.com ಜೂ. 28. ನಾಡಪ್ರಭು ಕೆಂಪೇಗೌಡರ ಅಂದಿನ ದೂರದೃಷ್ಟಿಯ ಆಡಳಿತವು ಆಧುನಿಕ ಬೆಂಗಳೂರನ್ನು ವಿಶ್ವಮಾನ್ಯಕ್ಕೆ ತಲುಪಿಸಿದೆ ಎಂದು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದ್ದಾರೆ. ಅವರು ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇದರ ಸಂಯುಕ್ತ ಆಶ್ರಯದಲ್ಲಿ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಸಹಕಾರದೊಂದಿಗೆ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕೆಂಪೇಗೌಡರ ಯೋಚನಾಬದ್ಧ ಆಡಳಿತದಿಂದಾಗಿ ಬೆಂಗಳೂರಿನಲ್ಲಿ ನೂರಾರು ಕೆರೆಗಳು ನಿರ್ಮಾಣಗೊಂಡು,

ಕೆಂಪೇಗೌಡರ ಚಿಂತನೆಗಳನ್ನು ಯುವ ಜನತೆ ಅನುಸರಿಸಲು ಕರೆ Read More »

ಕರಾವಳಿ

ಮದುವೆಯಾಗುವುದಾಗಿ ನಂಬಿಸಿ ಮೋಸ ಗಂಡು ಮಗುವಿಗೆ ಜನ್ಮವಿತ್ತ ವಿದ್ಯಾರ್ಥಿನಿ..!

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 28. ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಗರ್ಭವತಿಯನ್ನಾಗಿಸಿದ ಪ್ರಕರಣದ ಸಂತ್ರಸ್ತೆ ಶುಕ್ರವಾರದಂದು ರಾತ್ರಿ ಗಂಡು ಮಗುವಿಗೆ ಜನ್ಮ ನೀಡಿರುವ ಕುರಿತು ವರದಿಯಾಗಿದೆ. ವರದಿಯ ಪ್ರಕಾರ, ಪುತ್ತೂರು ಬಪ್ಪಳಿಗೆ ನಿವಾಸಿ ಶ್ರೀಕೃಷ್ಣ ಜೆ.ರಾವ್ ಎಂಬಾತ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆಸಿಕೊಂಡು ಬಲವಂತದ ದೈಹಿಕ ಸಂಪರ್ಕ ಬೆಳೆಸಿ ಇದೀಗ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವುದಾಗಿ ಸಂತ್ರಸ್ತೆ ನೀಡಿದ್ದ ದೂರಿನ ಮೇರೆಗೆ ಜೂ.25ರಂದು ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ

ಮದುವೆಯಾಗುವುದಾಗಿ ನಂಬಿಸಿ ಮೋಸ ಗಂಡು ಮಗುವಿಗೆ ಜನ್ಮವಿತ್ತ ವಿದ್ಯಾರ್ಥಿನಿ..! Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಲ ತಡಿಯಲ್ಲೊಂದು ವರ್ಷ ವೈಭವ ಸಾಹಿತ್ಯ ಸಂಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 28. ಎಲ್ಲೆಡೆಯೂ ಮಳೆ, ಪ್ರವಾಹ, ಪ್ರಕೃತಿ ವಿಕೋಪ, ಅಪಘಾತ, ಯುದ್ಧ ಇಂತಹ ಅನಾಹುತಗಳ ಬಗ್ಗೆಯೇ ಕೇಳಲ್ಪಡುತ್ತಿರುವ ಇಂತಹ ಸಂದರ್ಭದಲ್ಲಿ ನಗರದಿಂದ ದೂರವಾದ ಕಡಲತಡಿಯ ಪ್ರಶಾಂತವಾದ ವಾತಾವರಣದಲ್ಲಿ ಸಾಹಿತಿಗಳು ಸೇರಿಕೊಂಡು ಎಲ್ಲವನ್ನೂ ಮರೆತು ಒಟ್ಟಾಗಿ ಕುಳಿತು ಒಂದಿಷ್ಟು ಕವಿತೆ, ಸಂಗೀತ, ಹರಟೆಗಳನ್ನು ಮಾಡುವುದರಿಂದ ಮನಸ್ಸು ಪ್ರಫುಲ್ಲಿತವಾಗುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ  ಕನ್ನಡ ಸಾಹಿತ್ಯ ಪರಿಷತ್ ಮಂಗಳೂರು ತಾಲೂಕು ಘಟಕದ ಅಧ್ಯಕ್ಷರಾದ ಡಾ. ಮಂಜುನಾಥ ರೇವಣಕರರು ಅಭಿಪ್ರಾಯಪಟ್ಟರು. ಅವರು ಚೂಂತಾರು ಸರೋಜಿನಿ ಭಟ್

ಕಡಲ ತಡಿಯಲ್ಲೊಂದು ವರ್ಷ ವೈಭವ ಸಾಹಿತ್ಯ ಸಂಜೆ Read More »

ಕರಾವಳಿ

ಶ್ರೀ.ಕ್ಷೇ.ಧ.ಗ್ರಾ.ಯೋಜನೆ ವತಿಯಿಂದ ವಿಟ್ಲದಲ್ಲಿ ತಂಬಾಕು ವಿರೋಧಿ ದಿನಾಚರಣೆ

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 27. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ವಿಟ್ಲ ತಾಲೂಕಿನ ಅಳಿಕೆ ವಲಯದ ಮುಳಿಯ ಕಲ್ಪವೃಕ್ಷ ಜ್ಞಾನ ವಿಕಾಸಕೇಂದ್ರದಲ್ಲಿ ತಂಬಾಕು ವಿರೋಧಿ ದಿನಾಚರಣೆ ಹಾಗೂ ಯೂಟ್ಯೂಬ್ ಬಗ್ಗೆ ಮಾಹಿತಿ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲಕೃಷ್ಣ ಕಾರಂತರವರು ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಸಮುದಾಯ ಅರೋಗ್ಯ ಇಲಾಖೆಯ ರಂಜಿತಾ ಭಾಗವಹಿಸಿದ್ದರು. ಈ ಸಂದರ್ಭ ಅಳಿಕೆ ವಲಯಾಧ್ಯಕ್ಷರು ರಾಜೇಂದ್ರ ರೈ, ಮುಳಿಯ ಒಕ್ಕೂಟ ಅಧ್ಯಕ್ಷರರಾದ ಉದಯ, ಕೇಂದ್ರದ ಅಧ್ಯಕ್ಷರಾದ ಶಾಲಿನಿ

ಶ್ರೀ.ಕ್ಷೇ.ಧ.ಗ್ರಾ.ಯೋಜನೆ ವತಿಯಿಂದ ವಿಟ್ಲದಲ್ಲಿ ತಂಬಾಕು ವಿರೋಧಿ ದಿನಾಚರಣೆ Read More »

ಕರಾವಳಿ

ಕಡಬ ತಾಲೂಕು ಆಡಳಿತ ವತಿಯಿಂದ ನಾಡಪ್ರಭು ಕೆಂಪೇಗೌಡ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 27. ರಾಜ್ಯದೆಲ್ಲೆಡೆ ಇಂದು ಸಡಗರ ಮತ್ತು ಸಂಭ್ರಮದಿಂದ ನಾಡಪ್ರಭು ಕೆಂಪೇಗೌಡ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆ ಶುಕ್ರವಾರದಂದು ಕಡಬ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಕಡಬ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ ನಾಡಪ್ರಭು ಕೆಂಪೇಗೌಡ ಅವರ 516ನೇ ಜಯಂತೋತ್ಸವ ಆಚರಿಸಲಾಯಿತು. ತಹಶೀಲ್ದಾರ್ ಪ್ರಭಾಕರ ಖಜೂರೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ಕೆಂಪೇ ಗೌಡರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖ ಭಾಷಣ ಮಾಡಿದ ನೆಲ್ಯಾಡಿ

ಕಡಬ ತಾಲೂಕು ಆಡಳಿತ ವತಿಯಿಂದ ನಾಡಪ್ರಭು ಕೆಂಪೇಗೌಡ ದಿನಾಚರಣೆ Read More »

ಕರಾವಳಿ

ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 68.3 ಲಕ್ಷ ರೂ. ವಂಚನೆ- ದೂರು ದಾಖಲು

(ನ್ಯೂಸ್ ಕಡಬ) newskadaba.com ಜೂ. 27. ಆನ್‌ ಲೈನ್ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭದ ಭರವಸೆ ನೀಡಿ 68.3 ಲಕ್ಷ ರೂ.ಗಳಿಗೂ ಹೆಚ್ಚು ಹಣವನ್ನು ವರ್ಗಾಯಿಸಿಕೊಂಡು ವಂಚನೆ ಮಾಡಿರುವ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.   ದೂರಿನ ಪ್ರಕಾರ, ಅಪರಿಚಿತರು ಅಜಿತ್ ಕುಮಾರ್ ಎಂಬವರನ್ನು ‘372 SCBI ಇನ್ವೆಸ್ಟಿಂಗ್ ಲ್ಯಾಬ್’ ಎಂಬ ವಾಟ್ಸಾಪ್ ಗುಂಪಿಗೆ ಸೇರಿಸಿ ಬಳಿಕ, ಗುಂಪಿನ ಸದಸ್ಯರು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ ಪ್ರೋತ್ಸಾಹಿಸುವ ಸಂದೇಶಗಳನ್ನು ಕಳುಹಿಸಿದ್ದಾರೆ.

ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 68.3 ಲಕ್ಷ ರೂ. ವಂಚನೆ- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಕ್ಲಬ್ ಗಳಲ್ಲಿ ಹಣ ಪಣಕ್ಕಿಟ್ಟು ಜೂಜಾಟ ನಿಷೇಧ- ಪೊಲೀಸರಿಂದ ಪರಿಶೀಲನೆ

(ನ್ಯೂಸ್ ಕಡಬ) newskadaba.com ಜೂ. 27. ಮಾನ್ಯತೆ ಪಡೆದಿರುವ ಕ್ಲಬ್‌ ಗಳಲ್ಲಿ ಹಣ ಪಣಕ್ಕಿಟ್ಟು ಜೂಜಾಟ ನಡೆಸುವುದನ್ನು ಸಂಪೂರ್ಣವಾಗಿ ನಿಲ್ಲಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಸೂಚನೆ ನೀಡಿರುವ ಹಿನ್ನೆಲೆ ಪೊಲೀಸರು ಪುತ್ತೂರಿನ ವಿವಿಧ ಕ್ಲಬ್‌ ಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಕ್ಲಬ್‌ಗಳು ಹಲವು ನಿಯಮಗಳನ್ನು ಪಾಲಿಸಿಕೊಂಡು ನಡೆಯುತ್ತಿವೆ. ಅಲ್ಲಿ ಕ್ಯಾರಂ, ಇಸ್ಪೀಟ್ ಆಟಗಳನ್ನು ಆಡಬಹುದು. ಆದರೆ ಯಾವುದೇ ಕಾರಣಕ್ಕೂ ಹಣವನ್ನು ಪಣವಾಗಿಟ್ಟು ಆಡುವಂತಿಲ್ಲ ಎಂಬ ಎಸ್ಪಿಯವರ ಸ್ಪಷ್ಟ ಸೂಚನೆ ಹಿನ್ನಲೆ ಪೊಲೀಸರು ಕ್ಲಬ್‌

ಕ್ಲಬ್ ಗಳಲ್ಲಿ ಹಣ ಪಣಕ್ಕಿಟ್ಟು ಜೂಜಾಟ ನಿಷೇಧ- ಪೊಲೀಸರಿಂದ ಪರಿಶೀಲನೆ Read More »

ಕರಾವಳಿ

ಕಾರು, ಬಸ್ ನಡುವೆ ಅಪಘಾತ – ವಾಹನಗಳು ಜಖಂ

(ನ್ಯೂಸ್ ಕಡಬ) newskadaba.com ಜೂ. 27. ಕಾರು ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಸಂಪಾಜೆ ಸಮೀಪದ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ದೇವರಕೊಲ್ಲಿ ಸಮೀಪ ಗುರುವಾರ ರಾತ್ರಿ ನಡೆದಿದೆ. ಸುಳ್ಯ ಕಡೆಯಿಂದ ಮೈಸೂರು ಕಡೆ ತೆರಳುತ್ತಿದ್ದ ಕಾರು ಮತ್ತು ಮೈಸೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಡುವೆ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಅಪಘಾತದಲ್ಲಿ ಕಾರು ಹಾಗೂ ಬಸ್ ಎರಡೂ ವಾಹನಗಳು ಜಖಂಗೊಂಡಿದೆ.

ಕಾರು, ಬಸ್ ನಡುವೆ ಅಪಘಾತ – ವಾಹನಗಳು ಜಖಂ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top