ಕರಾವಳಿ

ಕಾರು, ಬಸ್ ನಡುವೆ ಅಪಘಾತ – ವಾಹನಗಳು ಜಖಂ

(ನ್ಯೂಸ್ ಕಡಬ) newskadaba.com ಜೂ. 27. ಕಾರು ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಸಂಪಾಜೆ ಸಮೀಪದ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ದೇವರಕೊಲ್ಲಿ ಸಮೀಪ ಗುರುವಾರ ರಾತ್ರಿ ನಡೆದಿದೆ. ಸುಳ್ಯ ಕಡೆಯಿಂದ ಮೈಸೂರು ಕಡೆ ತೆರಳುತ್ತಿದ್ದ ಕಾರು ಮತ್ತು ಮೈಸೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಡುವೆ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಅಪಘಾತದಲ್ಲಿ ಕಾರು ಹಾಗೂ ಬಸ್ ಎರಡೂ ವಾಹನಗಳು ಜಖಂಗೊಂಡಿದೆ.

ಕಾರು, ಬಸ್ ನಡುವೆ ಅಪಘಾತ – ವಾಹನಗಳು ಜಖಂ Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯಾರ್ಥಿಯ ಆಂತರ್ ಶಕ್ತಿ ಉದ್ದೀಪನ ಕಾರ್ಯದಿಂದ ಜ್ಞಾನಾತ್ಮಕ ವಿಕಾಸ ಸಾಧ್ಯ- ಲಯನ್ಸ್ ಕ್ಲಬ್ ಅಧ್ಯಕ್ಷ ಶಶಿಧರ ಪಳಂಗಾಯ

(ನ್ಯೂಸ್ ಕಡಬ) newskadaba.com ಕಡಬ, ಜೂ. 27. ಸೈಂಟ್ ಜೋಕಿಮ್ಸ್ ಪದವಿ ಪೂರ್ವ ಕಾಲೇಜಿನ ಪ್ರಸ್ತುತ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವು ಸಂಸ್ಥೆಯ ಸಭಾಂಗಣದಲ್ಲಿ ನೆರವೇರಿತು. ಇದರ ಮುಖ್ಯ ಅತಿಥಿಯಾಗಿ ಆಗಮಿಸಿದ ಪಂಜ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಶಶಿಧರ ಪಳಂಗಾಯ ಅವರು ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿದರು. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ಭೌತಿಕವಾದ ಹಾಗೂ ಬೌದ್ಧಿಕವಾದ ಅಂತಸತ್ವ ಇರುತ್ತದೆ. ಅಂತರ್ ಶಕ್ತಿಯನ್ನು ಉದ್ದೀಪನ ಗೊಳಿಸುವ ರಚನಾತ್ಮಕ ಕಾರ್ಯಕ್ರಮಗಳು ಅವರ

ವಿದ್ಯಾರ್ಥಿಯ ಆಂತರ್ ಶಕ್ತಿ ಉದ್ದೀಪನ ಕಾರ್ಯದಿಂದ ಜ್ಞಾನಾತ್ಮಕ ವಿಕಾಸ ಸಾಧ್ಯ- ಲಯನ್ಸ್ ಕ್ಲಬ್ ಅಧ್ಯಕ್ಷ ಶಶಿಧರ ಪಳಂಗಾಯ Read More »

ಕರಾವಳಿ

ಪೌಷ್ಟಿಕ ಆಹಾರ ಪೂರೈಕೆಯಲ್ಲಿ ಪ್ರಗತಿ ಸಾಧಿಸಲು ಜಿಪಂ ಸಿಇಒ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 27.  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ಗುರುವಾರದಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ಆನಂದ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮ ಯೋಜನೆಯ ಪ್ರಗತಿ ಪರಿಶೀಲಿಸಿ, ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಗತಿ ತೀರಾ ಕಡಿಮೆ ಇದೆ. ಶೀಘ್ರವಾಗಿ ಪೌಷ್ಟಿಕ ಆಹಾರ ಪೂರೈಸುವ ಕಾರ್ಯಕ್ರಮದಲ್ಲಿ

ಪೌಷ್ಟಿಕ ಆಹಾರ ಪೂರೈಕೆಯಲ್ಲಿ ಪ್ರಗತಿ ಸಾಧಿಸಲು ಜಿಪಂ ಸಿಇಒ ಸೂಚನೆ Read More »

ಕರಾವಳಿ

ಮಂಗಳೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯಿಂದ ಪಡಿತರ ಅಂಗಡಿಗಳಿಗೆ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 27.  ಕರ್ನಾಟಕ ಸರ್ಕಾರದ ಗ್ಯಾರೆಂಟಿ ಯೋಜನೆಗಳು ಅನುಷ್ಠಾನಗೊಂಡಿದ್ದು, 5 ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖ ಯೋಜನೆಯಾದ ಅನ್ನಭಾಗ್ಯ ಯೋಜನೆಯು ಸರ್ಮಪಕವಾಗಿ ಅನುಷ್ಟಾನಗೊಳ್ಳುತ್ತಿರುವ ಬಗ್ಗೆ ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುರೇಂದ್ರ ಕಂಬಳಿ ನೇತೃತ್ವದಲ್ಲಿ ನಾಗೂರಿ, ಅಡ್ಯಾರ್, ಮಲ್ಲೂರು, ಬೊಂಡಂತಿಲ, ನೀರುಮಾರ್ಗ, ಮೇರ್ಲಪದವು, ಪೆರ್ಮಂಕಿ ಉಳಾಯಿಬೆಟ್ಟು ಮತ್ತಿತರ ಕಡೆ ಪಡಿತರ ಅಂಗಡಿಗಳಿಗೆ ಭೇಟಿ ನೀಡಲಾಯಿತು. ನ್ಯಾಯಬೆಲೆ ಅಂಗಡಿಗಳಲ್ಲಿ ಸ್ವಚ್ಚತೆ ಕಾಪಾಡುವಂತೆ, ನ್ಯಾಯಬೆಲೆ ಅಂಗಡಿಗಳಲ್ಲಿ ಫಲಕ ಅಳವಡಿಸುವಂತೆ, ನಿರ್ದಿಷ್ಟ ಅಂಗಡಿಯ

ಮಂಗಳೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯಿಂದ ಪಡಿತರ ಅಂಗಡಿಗಳಿಗೆ ಭೇಟಿ Read More »

ಕರಾವಳಿ

ಸಹಕಾರ ಡಿಪ್ಲೊಮಾ ಕೋರ್ಸ್ ಪ್ರವೇಶ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 27. 2025ನೇ ಜುಲೈ 1 ರಿಂದ ಪ್ರಾರಂಭವಾಗುವ 6 ತಿಂಗಳ ಅವಧಿಯ ರೆಗ್ಯೂಲರ್ ಮತ್ತು ದೂರಶಿಕ್ಷಣ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ ಮೆಂಟ್ ಕೋರ್ಸ್‍ ಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಸಾಮಾನ್ಯ ಹಾಗೂ ಪ.ಜಾತಿ/ಪ.ಪಂಗಡದ ಅಭ್ಯರ್ಥಿಗಳಿಂದ ಮತ್ತು ಎಲ್ಲಾ ವಿವಿಧ ಸಹಕಾರ ಸಂಘ/ಬ್ಯಾಂಕ್‍ ಗಳ ಉದ್ಯೋಗಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಲು ಕೊನೆಯ ದಿನ ಜುಲೈ 10. ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ, ಪ್ರವೇಶ

ಸಹಕಾರ ಡಿಪ್ಲೊಮಾ ಕೋರ್ಸ್ ಪ್ರವೇಶ: ಅರ್ಜಿ ಆಹ್ವಾನ Read More »

ಕರಾವಳಿ

ಶಾಲಾ ಕಾಲೇಜುಗಳಲ್ಲಿ ಮಾದಕ ವ್ಯಸನದ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಜೂ. 27. ಶಾಲಾ-ಕಾಲೇಜುಗಳ ಮಕ್ಕಳು ಮಾದಕ ದ್ರವ್ಯಗಳಿಗೆ ಬಲಿಯಾಗುವ ಸಾಧ್ಯತೆ ಹೆಚ್ಚಾಗಿರುವುದರಿಂದ ಮಕ್ಕಳಿಗೆ ಮುಂದೆ ಸಂಭವಿಸುವ ಅನಾಹುತಗಳ ಅರಿವು ಮೂಡಿಸಲು ಅಧಿಕಾರಿಗಳು ಹೆಚ್ಚಿನ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಸೂಚಿಸಿದರು. ಅವರು ಗುರುವಾರದಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ನಾರ್ಕೋ ಕೋ ಆರ್ಡಿನೇಷನ್ ಸೆಂಟರ್‍ ನ ಜಿಲ್ಲಾಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಾಲಾ ಕಾಲೇಜುಗಳಲ್ಲಿ ಮಾದಕ ದ್ರವ್ಯಗಳ ಆಕರ್ಷಣೆಗೊಳಗಾಗುವ ಸಾಧ್ಯತೆ ಹೆಚ್ಚಾಗಿರುವುದರಿಂದ ಇದರ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಬೇಕು.

ಶಾಲಾ ಕಾಲೇಜುಗಳಲ್ಲಿ ಮಾದಕ ವ್ಯಸನದ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ

ಕಡಬ: ಸರಸ್ವತಿ ವಿದ್ಯಾಲಯದಲ್ಲಿ ಶಾಲಾ ಪ್ರಾರಂಭೋತ್ಸವ ಮತ್ತು SSLC ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಜೂ. 27. ಇಲ್ಲಿನ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ ನೂತನವಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳ ಪ್ರವೇಶೋತ್ಸವ ಮತ್ತು ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮವು ಹನುಮಾನ್‍ ನಗರದ ಯಾದವಶ್ರೀ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.) ಇದರ ಕಾರ್ಯದರ್ಶಿಗಳಾದ ಶ್ರೀ ಎಂ ಕೃಷ್ಣ ಭಟ್ ವಹಿಸಿ, ಕಾಡಿನಲ್ಲಿ ಮಲ್ಲಿಗೆ ಹೇಗೆ ಮೌನವಾಗಿ ಅರಳುತ್ತದೆಯೋ ಅದೇ ರೀತಿ ಈ ಸಂಸ್ಥೆಯಲ್ಲಿ ಸಂಸ್ಕಾರ ಅರಳುತ್ತದೆ. ಶಿಕ್ಷಕರು ಮತ್ತು ಪೋಷಕರು ವಿದ್ಯಾರ್ಥಿಗಳ

ಕಡಬ: ಸರಸ್ವತಿ ವಿದ್ಯಾಲಯದಲ್ಲಿ ಶಾಲಾ ಪ್ರಾರಂಭೋತ್ಸವ ಮತ್ತು SSLC ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮ Read More »

ಕರಾವಳಿ

ಕಡಬ: ಅಡಿಗ ಮೋಟಾರ್ಸ್ ನಲ್ಲಿ ಹೊಸ TVS ಜುಪಿಟರ್ 125 DT ಹಾಗೂ ಐಕ್ಯೂಬ್ EV ಬಿಡುಗಡೆ ಇನ್ಮುಂದೆ TVS EV ವಾಹನಗಳ ಸರ್ವೀಸ್ ಕಡಬದಲ್ಲಿ ಲಭ್ಯ..!

(ನ್ಯೂಸ್ ಕಡಬ) newskadaba.com ಕಡಬ, ಜೂ. 27. ಭಾರತದ ಪ್ರಮುಖ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಟಿವಿಎಸ್ ಮೋಟಾರ್ ಕಂಪನಿಯ ಅಧಿಕೃತ ಡೀಲರ್ ಆಗಿರುವ ಕಡಬದ ಅಡಿಗ ಟಿವಿಎಸ್ ನಲ್ಲಿ ಹೊಸ ಜುಪಿಟರ್ 125 ಡ್ಯುಯಲ್-ಟೋನ್ ಹಾಗೂ ಬಜೆಟ್ ಸ್ನೇಹಿ ಹೊಸ ಐಕ್ಯೂಬ್-EV ವಾಹನಗಳನ್ನು ಬಿಡುಗಡೆ ಮಾಡಲಾಯಿತು. ಹಿರಿಯ ವಕೀಲರು ಹಾಗೂ ನೋಟರಿ ಶ್ರೀ ಮನೋಹರ್ ಸಬಳೂರು ಮತ್ತು ಉದ್ಯಮಿ ಹಾಗೂ ಸಾಮಾಜಿಕ ಮುಖಂಡರಾದ ಶ್ರೀ ಶ್ರೀಕೃಷ್ಣ ಎಂ.ಆರ್ ಅವರು ಹೊಸ ವಾಹನಗಳನ್ನು ಅನಾವರಣಗೊಳಿಸಿದರು. ಸಂಸ್ಥೆಯ ಮಾಲಕರಾದ

ಕಡಬ: ಅಡಿಗ ಮೋಟಾರ್ಸ್ ನಲ್ಲಿ ಹೊಸ TVS ಜುಪಿಟರ್ 125 DT ಹಾಗೂ ಐಕ್ಯೂಬ್ EV ಬಿಡುಗಡೆ ಇನ್ಮುಂದೆ TVS EV ವಾಹನಗಳ ಸರ್ವೀಸ್ ಕಡಬದಲ್ಲಿ ಲಭ್ಯ..! Read More »

ಕರಾವಳಿ

ಜುಲೈ 1 ರಂದು ಜೋಕಟ್ಟೆ ಗ್ರಾಮಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ಜೋಕಟ್ಟೆ ಗ್ರಾಮ ಪಂಚಾಯತ್‍ನ 2025-26ನೇ ಪ್ರಥಮ ಹಂತದ ಗ್ರಾಮ ಸಭೆಯು ಜುಲೈ 1 ರಂದು ಬೆಳಿಗ್ಗೆ 11 ಗಂಟೆಗೆ ಪಂಚಾಯತ್‍ನ ಆಯುಷ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಜೋಕಟ್ಟೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜುಲೈ 1 ರಂದು ಜೋಕಟ್ಟೆ ಗ್ರಾಮಸಭೆ Read More »

ಕರಾವಳಿ

ಮುನ್ನೂರು: ಜುಲೈ 1 ರಂದು ಗ್ರಾಮ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ಉಳ್ಳಾಲ ತಾಲೂಕು ಮುನ್ನೂರು ಗ್ರಾಮ ಪಂಚಾಯತ್‍ ನ 2025-26ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಜುಲೈ 1ರಂದು ಬೆಳಿಗ್ಗೆ 10.30 ಗಂಟೆಗೆ ಮುನ್ನೂರು ಸುಭಾಸ್ ನಗರ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು  ಮುನ್ನೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುನ್ನೂರು: ಜುಲೈ 1 ರಂದು ಗ್ರಾಮ ಸಭೆ Read More »

ಕರಾವಳಿ
Scroll to Top