ಕರಾವಳಿ

ಕಡಬ: ಟ್ಯಾಂಕ್ ಕುಸಿತದ ಭೀತಿ ಮನೆ ಖಾಲಿ ಮಾಡುವಂತೆ ಗ್ರಾಮ ಪಂಚಾಯತ್ ನೋಟೀಸ್

(ನ್ಯೂಸ್ ಕಡಬ) newskadaba.com ಜೂ. 19. ಕೊಯಿಲ ಜನತಾ ಕಾಲೊನಿಯ ಕೊಯಿಲ ಗ್ರಾ.ಪಂ. ಅಧೀನದಲ್ಲಿರುವ ಕುಡಿಯುವ ನೀರು ಸರಬರಾಜು ಯೋಜನೆಯ ಬೃಹತ್ ಟ್ಯಾಂಕೊಂದು ಕುಸಿತದ ಸಂಭವದ ಹಿನ್ನೆಲೆಯಲ್ಲಿ ಟ್ಯಾಂಕ್ ಸಮೀಪದಲ್ಲಿರುವ 6 ಮನೆಯವರಿಗೆ ಮನೆ ಖಾಲಿ ಮಾಡುವಂತೆ ಕೊಯಿಲ ಗ್ರಾಮ ಪಂಚಾಯತ್ ನೋಟಿಸ್ ನೀಡಿದೆ. 1996ರಲ್ಲಿ ವಿಶ್ವ ಬ್ಯಾಂಕ್ ಕುಡಿಯುವ ನೀರು ಯೋಜನೆಯಡಿ ನಿರ್ಮಾಣವಾಗಿರುವ ಈ ಟ್ಯಾಂಕ್, 50 ಸಾವಿರ ಲೀಟರ್ ಸಾಮರ್ಥ್ಯವನ್ನು ಹೊಂದಿದೆ. ಟ್ಯಾಂಕ್‌ನ ಬುಡದಿಂದಲೇ 15 ಅಡಿ ಎತ್ತರದಲ್ಲಿ ಗುಡ್ಡ ಇದ್ದು, ಭಾರೀ ಮಳೆಗೆ […]

ಕಡಬ: ಟ್ಯಾಂಕ್ ಕುಸಿತದ ಭೀತಿ ಮನೆ ಖಾಲಿ ಮಾಡುವಂತೆ ಗ್ರಾಮ ಪಂಚಾಯತ್ ನೋಟೀಸ್ Read More »

ಕರಾವಳಿ

ಕೆಂಪುಕಲ್ಲು ಮತ್ತು ಮರಳು ಕೊರತೆ- ಕಟ್ಟಡ ಕಾರ್ಮಿಕರ ಸಂಕಷ್ಟಕ್ಕೆ ಪರಿಹಾರ ಒದಗಿಸುವಂತೆ ಸರಕಾರಕ್ಕೆ ಮನವಿ

(ನ್ಯೂಸ್ ಕಡಬ) newskadaba.com ಜೂ. 19. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕೆಂಪು ಕಲ್ಲು, ಮರಳು ಹಾಗೂ ಜಲ್ಲಿಯ ಕೊರತೆಯಿಂದಾಗಿ ಕೂಲಿ ಕಾರ್ಮಿಕರು ತೊಂದರೆ ಅನುಭವಿಸುಂತಾಗಿದ್ದು, ಮನೆ ನಿರ್ಮಾಣದಲ್ಲಿ ತೊಡಗಿಸಿಕೊಂಡವರು ಸಾಮಗ್ರಿಗಳ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿ ದಾರಿ ಕಾಣದಂತಾಗಿದ್ದಾರೆ. ಇದರಿಂದ ಕಟ್ಟಡ ಕಾರ್ಮಿಕರು ಸೇರಿದಂತೆ ಕಟ್ಟಡ ಸಾಮಗ್ರಿಗಳ ಮಳಿಗೆಯ ಮಾಲೀಕ ಹಾಗೂ ಕಾರ್ಮಿಕರಿಗೂ ಕೆಲಸವಿಲ್ಲದಂತಾಗಿದ್ದು, ಜೀವನದ ದಾರಿ ದುಸ್ತರವಾಗಿದೆ. ನಿಗದಿತ ಅವಧಿಯಲ್ಲಿ ನಡೆಯಬೇಕಾಗಿದ್ದ ಸರಕಾರಿ ವಲಯದ ಕಾಮಗಾರಿಗಳು ಸಾಮಾಗ್ರಿಗಳ ಕೊರತೆಯಿಂದಾಗಿ ಅರ್ಧಕ್ಕೆ ನಿಂತಿದ್ದು, ಇದನ್ನು ನಂಬಿಕೊಂಡಿರುವ ಕೂಲಿ ಕಾರ್ಮಿಕ

ಕೆಂಪುಕಲ್ಲು ಮತ್ತು ಮರಳು ಕೊರತೆ- ಕಟ್ಟಡ ಕಾರ್ಮಿಕರ ಸಂಕಷ್ಟಕ್ಕೆ ಪರಿಹಾರ ಒದಗಿಸುವಂತೆ ಸರಕಾರಕ್ಕೆ ಮನವಿ Read More »

ಕರಾವಳಿ

ಮಳೆಹಾನಿಯಿಂದ ನಷ್ಟಕ್ಕೊಳಗಾದವರಿಗೆ ಸರಕಾರದ ಪರಿಹಾರ ವಿತರಣೆ- ಶಾಸಕ ಅಶೋಕ್ ರೈ

(ನ್ಯೂಸ್ ಕಡಬ) newskadaba.com ಜೂ. 19. ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಪಕ್ಕಾಮನೆ, ಕಚ್ಚಾಮನೆ, ಭಾಗಶ: ಹಾನಿ, ಪೂರ್ಣ ಹಾನಿ, ತೋಟ, ಬೆಳೆ, ಕೃಷಿ ಹಾನಿಗೊಳಗಾದ ಪುತ್ತೂರು ವಿಧಾನಸಭಾ ಕ್ಷೇತ್ರದ ಫಲಾನುಭವಿಗಳಿಗೆ ಕರ್ನಾಟಕ ಸರಕಾರದಿಂದ ಪರಿಹಾರ ಮೊತ್ತದ ಮೊದಲ ಕಂತಿನ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ. ಎರಡನೇ ಕಂತು ಬಾಕಿ ಇದ್ದವರಿಗೆ ಶೀಘ್ರದಲ್ಲೇ ಪಾವತಿಯಾಗಲಿದೆ. ಪೂರ್ಣವಾಗಿ ಮನೆ ಕಳೆದುಕೊಂಡವರಿಗೆ 1.20 ಲಕ್ಷ ಮತ್ತು ಭಾಗಶಃ ಹಾನಿಗೊಳಗಾದವರಿಗೆ 50 ಸಾವಿರ ರೂ ಪರಿಹಾರ ಮೊತ್ತವನ್ನು ಸರಕಾರ ಬಿಡುಗಡೆ ಮಾಡಿದ್ದು

ಮಳೆಹಾನಿಯಿಂದ ನಷ್ಟಕ್ಕೊಳಗಾದವರಿಗೆ ಸರಕಾರದ ಪರಿಹಾರ ವಿತರಣೆ- ಶಾಸಕ ಅಶೋಕ್ ರೈ Read More »

ಕರಾವಳಿ, ಕರ್ನಾಟಕ

ಮಂಗಳೂರು: ನೂತನ ಡಿಸಿ ದರ್ಶನ್ ಎಚ್.ವಿ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಜೂ. 19. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್ ವಿ ಅವರು ಬುಧವಾರದಂದು ಸಂಜೆ ಅಧಿಕಾರ ಸ್ವೀಕರಿಸಿದರು. ನಿರ್ಗಮನ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿದರು. ಮುಲ್ಲೈ ಮುಗಿಲನ್ ಅವರು 2023ರ ಜೂ.17ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಇದೀಗ 2 ವರ್ಷ ಪುರ್ಣಗೊಳಿಸಿರುವ ಬೆನ್ನಲ್ಲೇ ಅವರಿಗೆ ವರ್ಗಾವಣೆಯಾಗಿದೆ. 2016ರ ಐಎಎಸ್‌ ಬ್ಯಾಚ್‌ನ ಅಧಿಕಾರಿಯಾಗಿರುವ ದರ್ಶನ್‌ ಎಚ್‌.ವಿ ಅವರು ವಾಣಿಜ್ಯ ತೆರಿಗೆಗಳ ಇಲಾಖೆಯ

ಮಂಗಳೂರು: ನೂತನ ಡಿಸಿ ದರ್ಶನ್ ಎಚ್.ವಿ ಅಧಿಕಾರ ಸ್ವೀಕಾರ Read More »

ಕರಾವಳಿ

ಬೈಕ್ ಸ್ಕಿಡ್ ಆಗಿ ಯುವಕರಿಬ್ಬರಿಗೆ ಗಾಯ..!

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 19. ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಯುವಕರಿಬ್ಬರು ಗಂಭೀರ ಗಾಯಗೊಂಡ ಘಟನೆ ಚಂದಳಿಕೆ ಸಮೀಪ ಕಲ್ಲಕಟ್ಟ ಎಂಬಲ್ಲಿ ನಡೆದಿದೆ. ಗಾಯಾಳುಗಳನ್ನು ಹರ್ಷ ಮತ್ತು ನಾಗೇಶ್ ಎಂದು ಗುರುತಿಸಲಾಗಿದ್ದು, ಸದ್ಯ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.

ಬೈಕ್ ಸ್ಕಿಡ್ ಆಗಿ ಯುವಕರಿಬ್ಬರಿಗೆ ಗಾಯ..! Read More »

ಕರಾವಳಿ, ಕ್ರೈಮ್ ನ್ಯೂಸ್

ನೇತ್ರಾವದಿ ನದಿ ದಡದಲ್ಲಿ ಮೊಸಳೆ ಪತ್ತೆ- ಆತಂಕದಲ್ಲಿ ಸ್ಥಳೀಯರು

(ನ್ಯೂಸ್ ಕಡಬ) newskadaba.com ಜೂ. 19. ಕುಮಾರಧಾರ ನದಿ ದಡದಲ್ಲಿ ಮೊಸಳೆಯೊಂದು ಪ್ರತ್ಯಕ್ಷವಾಗಿದ್ದು, ಹಾಗೆಂದು ಮೊಸಳೆ ನೋಡಲು ಹೋದ ಜನರನ್ನು ಕಂಡ ಮೊಸಳೆಯು ಬಾಯಗಳಿಸಿ ಆಕ್ರಮಣಕಾರಿ ರೀತಿಯಲ್ಲಿ ಜನರ ಕಡೆ ನೋಡಿ ನದಿ ನೀರಿಗೆ ಇಳಿದು ಹೋದ ಘಟನೆ ಬುಧವಾರ ಸಂಜೆ ಉಪ್ಪಿನಂಗಡಿಯಲ್ಲಿ ನಡೆದಿದೆ.   ಇಲ್ಲಿನ ಶೇಖಬ್ಬ ಹಾಜಿ ಎಂಬವರ ಮನೆಯ ಬಳಿ ಕುಮಾರಧಾರ ನದಿಗೆ ಇಳಿಯುವ ದಾರಿಯ ಬಳಿ ನದಿ ದಡದಲ್ಲಿ ಮೊಸಳೆಯು ವಿಶ್ರಾಂತಿ ಪಡೆಯುವುದನ್ನು ದೂರದಿಂದ ಗಮನಿಸಿದ ಮಕ್ಕಳು ಇದನ್ನು ಸ್ಥಳೀಯ ನಿವಾಸಿಗಳಾದ

ನೇತ್ರಾವದಿ ನದಿ ದಡದಲ್ಲಿ ಮೊಸಳೆ ಪತ್ತೆ- ಆತಂಕದಲ್ಲಿ ಸ್ಥಳೀಯರು Read More »

ಕರಾವಳಿ
crime, arrest, suspected

ಅಪಾಯಕಾರಿ ಬಸ್ ಚಾಲನೆ- ಚಾಲಕನ ಬಂಧನ

(ನ್ಯೂಸ್ ಕಡಬ) newskadaba.com ಜೂ. 19. ಬಸ್ ಚಾಲಕನೊಬ್ಬ ಅಪಾಯಕಾರಿ ಹಾಗೂ ಅಜಾಗರೂಕತೆಯ ಚಾಲನೆಯಿಂದ ವಾಹನ ಚಲಾಯಿಸಿ ಪ್ರಯಾಣಿಕರು ಮತ್ತು ಸಾರ್ವಜನಿಕರಲ್ಲಿ ಭಯ ಸೃಷ್ಟಿಸಿರುವ ವಿಡಿಯೋ ಜೂನ್ 17ರಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಸ್ತೆ ಸುರಕ್ಷತೆ ಬಗ್ಗೆ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ವಿಡಿಯೋ ವೈರಲ್ ಆದ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಉಡುಪಿ ಸಂಚಾರ ಪೊಲೀಸರು ತನಿಖೆ ನಡೆಸಿ ಆರೋಪಿ ಚಾಲಕ ದೇವರಾಜ್ ಎಂಬಾತನನ್ನು ಬಂಧಿಸಿದ್ದಾರೆ. ಇವರು ಶ್ರೀ ದುರ್ಗಾಂಬಾ ಬಸ್ ಅನ್ನು ಎನ್‌ಎಚ್ 169ಎ ಸಾರ್ವಜನಿಕ ರಸ್ತೆಯ

ಅಪಾಯಕಾರಿ ಬಸ್ ಚಾಲನೆ- ಚಾಲಕನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ನಿವೃತ್ತ ಸೈನಿಕ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜೂ.18. ಭಾರತೀಯ ಸೇನೆಯಿಂದ ನಿವೃತ್ತಿ ಪಡೆದು ಊರಿನಲ್ಲಿ ನೆಲೆಸಿದ್ದ ಸೈನಿಕರೋರ್ವರು ಡಿಢೀರ್ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ ಘಟನೆ ಬುಧವಾರ ರಾತ್ರಿ ಕಡಬದಲ್ಲಿ ನಡೆದಿದೆ. ಮೃತರನ್ನು ಮೂಲತಃ ಕೊಂಬಾರು ನಿವಾಸಿ ಪ್ರಸ್ತುತ ಕಳಾರ ಸಮೀಪದ ಅಲಾರ್ಮೆಯಲ್ಲಿ ವಾಸವಾಗಿದ್ದ ರಂಗಸ್ವಾಮಿ ಎಂಬವರ ಪುತ್ರ ನಿವೃತ್ತ ಸೈನಿಕ ಪ್ರಭಾಕರನ್ ಎಂದು ಗುರುತಿಸಲಾಗಿದೆ. ಒಂದು ವರ್ಷದ ಹಿಂದಷ್ಟೇ ಸೇನೆಯಿಂದ ನಿವೃತ್ತಿ ಪಡೆದು ಊರಿಗೆ ಆಗಮಿಸಿದ್ದ ಅವರು ಹೆತ್ತವರೊಂದಿಗೆ ಕುಟುಂಬ ಸಮೇತರಾಗಿ ವಾಸವಿದ್ದರು. ರಂಗಸ್ವಾಮಿ ಮತ್ತು‌ ಸೆಲ್ಲಾಯಿ ದಂಪತಿಗಳಿಗೆ

ಕಡಬ: ನಿವೃತ್ತ ಸೈನಿಕ ಹೃದಯಾಘಾತದಿಂದ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಅನಾರೋಗ್ಯದಿಂದಿದ್ದ ಆಟೋ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಜೂ. 18. ಬಿಳಿನೆಲೆ ಗ್ರಾಮದ ಚೆಂಡೆಹಿತ್ತು ನಿವಾಸಿ ದಿ.ಮೇದಪ್ಪ ಗೌಡರ ಪುತ್ರ, ರಿಕ್ಷಾ ಚಾಲಕ ಚೇತನ್ ರವರು ಅಲ್ಪಕಾಲದ ಅನಾರೋಗ್ಯದಿಂದ ಮಂಗಳವಾರದಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಚೇತನ್ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಕೆಲ ದಿನಗಳ ಹಿಂದೆ ಕಡಬದ ಆಸ್ಪತ್ರೆಯೊಂದರಲ್ಲಿ ತಪಾಸಣೆ ವೇಳೆ ಜಾಂಡೀಸ್ ಇರುವುದು ಪತ್ತೆಯಾಗಿದೆ. ನಂತರ ಅವರು ಅವರು ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಕಡಬ: ಅನಾರೋಗ್ಯದಿಂದಿದ್ದ ಆಟೋ ಚಾಲಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಅಕ್ರಮ ಜೂಜಾಟ ಆಡುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿ 9 ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ಜೂ. 18. ಮನೆಯೊಂದರಲ್ಲಿ ಅಕ್ರಮವಾಗಿ ಜೂಜಾಟ ಆಡುತ್ತಿದ್ದ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ ಮತ್ತು ಸಿಬ್ಬಂದಿ ದಾಳಿ ನಡೆಸಿ ಒಂಬತ್ತು ಮಂದಿಯನ್ನು ಬಂಧಿಸಿದ ಘಟನೆ ಓಡಿಳ್ನಾಳ ಗ್ರಾಮದ ಪಣೆಜಾಲು ಎಂಬಲ್ಲಿ ನಡೆದಿದೆ. ದಾಳಿ ಸಂದರ್ಭ ಜೂಜಾಟದಲ್ಲಿ ನಿರತರಾಗಿದ್ದ ಒಂಬತ್ತು ಮಂದಿಯನ್ನು ಬಂಧಿಸಲಾಗಿದ್ದು, ಜೊತೆಗೆ ಸ್ಥಳದಲ್ಲಿ ಜೂಜಾಟಕ್ಕೆ ಬಳಸಲಾಗಿದ್ದ ಎಲೆಗಳು, 6 ಮೊಬೈಲ್ ಫೋನ್, 2 ಬೈಕ್, 1 ಆಟೋ ರಿಕ್ಷಾ ಹಾಗೂ 26,778

ಅಕ್ರಮ ಜೂಜಾಟ ಆಡುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿ 9 ಮಂದಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top