ಕರಾವಳಿ

ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ ಉಚಿತ ಅಲ್ಪಾವಧಿ ಕೌಶಲ್ಯ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 14. ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆ.ಜಿ.ಟಿ.ಟಿ.ಐ.)ಯಲ್ಲಿ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡಗಳ ಆಸಕ್ತ ಅರ್ಹ ಅಭ್ಯರ್ಥಿಗಳಿಗೆ ಉಚಿತ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಿಸ್ಕೊ ಸರ್ಟಿಫೈಡ್ ನೆಟ್‍ವರ್ಕ್ ಅಸೋಸಿಯೇಟ್ (ಸಿ.ಸಿ.ಎನ್.ಎ), ಸಿಸ್ಕೊ ಐ.ಟಿ. ಎಸೆನ್ಸಿಯಲ್ಸ್, ಬೇಸಿಕ್ ವೆಲ್ಡಿಂಗ್, ಟಿಗ್ ವೆಲ್ಡಿಂಗ್, ಮಿಗ್ ವೆಲ್ಡಿಂಗ್, ರೆಫ್ರಿಜರೇಶನ್ ಮತ್ತು ಏರ್ ಕಂಡೀಷನಿಂಗ್, ಟ್ಯಾಲಿ ಪ್ರೈಮ್ ಹಾಗೂ ಕಾರ್ಕಳದ ಸರ್ಕಾರಿ ಪಾಲಿಟೆಕ್ನಿಕ್ ಆವರಣದಲ್ಲಿರುವ ಕೆಜಿಟಿಟಿಐ ವಿಸ್ತರಣಾ ಕೇಂದ್ರದಲ್ಲಿ ಹೆಚ್ಚುವರಿಯಾಗಿ ಸಿ.ಎನ್.ಸಿ […]

ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ ಉಚಿತ ಅಲ್ಪಾವಧಿ ಕೌಶಲ್ಯ ತರಬೇತಿ Read More »

ಕರಾವಳಿ

ಜೂನ್ 18 ರಂದು ಲೀಡ್ ಬ್ಯಾಂಕ್ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 14. ಲೀಡ್ ಬ್ಯಾಂಕ್ ಯೋಜನೆಗಳ ಜಿಲ್ಲಾ ಸಲಹಾ ಸಮಿತಿ ಸಭೆಯು ಜೂನ್ 18ರಂದು ಬೆಳಿಗ್ಗೆ 10:30 ಗಂಟೆಗೆ ಮತ್ತು ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ ಸಭೆ 11:30 ಗಂಟೆಗೆ ದಕ್ಷಿಣ ಕನ್ನಡ ಲೋಕಸಭೆ ಸದಸ್ಯ ಕ್ಯಾ.ಬ್ರಿಜೇಶ್ ಚೌಟ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್.ಕೆ ಸಭೆಯಲ್ಲಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

ಜೂನ್ 18 ರಂದು ಲೀಡ್ ಬ್ಯಾಂಕ್ ಸಭೆ Read More »

ಕರಾವಳಿ

ಹೋಟೆಲ್ ಗಳಲ್ಲಿ ಗ್ರಾಹಕರಿಗೆ ಸುರಕ್ಷಿತ ಕುಡಿಯುವ ನೀರು ಒದಗಿಸುವಂತೆ ಜಿಲ್ಲಾ ಪಂಚಾಯತ್ ಸಿಇಒ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 14. ಹೋಟೆಲ್,ವಸತಿ ಗೃಹ, ಬಾರ್ & ರೆಸ್ಟೋರೆಂಟ್‍ಗಳಲ್ಲಿ ಗ್ರಾಹಕರಿಗೆ ಸುರಕ್ಷಿತ ಕುಡಿಯುವ ನೀರು/ಆಹಾರ ಒದಗಿಸುವ ಮೂಲಕ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಲು ಕ್ರಮವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್.ಕೆ ಸೂಚಿಸಿದ್ದಾರೆ. ಅವರು ಜಿಲ್ಲಾ ಪಂಚಾಯತ್‍ನಲ್ಲಿ ಗುರುವಾರ ನಡೆದ ಜಿಲ್ಲಾ ಕಣ್ಗಾವಲು ಮತ್ತು ಕಾರ್ಯಕಾರಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕುಡಿಯುವ ನೀರಿನ ಮಾದರಿಯನ್ನು ಕಾಲಕಾಲಕ್ಕೆ ಪರೀಕ್ಷಿಸಿ ಗುಣಮಟ್ಟವನ್ನು ದೃಢೀಕರಿಸಿ ಶುದ್ಧೀಕರಣಕ್ಕೆ ಬೇಕಾದ ಮೌಲ್ಯಮಾಪನಾ ಕ್ರಮಗಳನ್ನು ಅನುಸರಿಸಿ,

ಹೋಟೆಲ್ ಗಳಲ್ಲಿ ಗ್ರಾಹಕರಿಗೆ ಸುರಕ್ಷಿತ ಕುಡಿಯುವ ನೀರು ಒದಗಿಸುವಂತೆ ಜಿಲ್ಲಾ ಪಂಚಾಯತ್ ಸಿಇಒ ಸೂಚನೆ Read More »

ಕರಾವಳಿ, ಕರ್ನಾಟಕ

ಮೀನುಗಾರರಿಗೆ ಮನೆ ನಿರ್ಮಾಣ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 14. ಮೀನುಗಾರಿಕೆ ಇಲಾಖೆ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಗೆ ‘ಮತ್ಸ್ಯಾಶ್ರಯ’ ಯೋಜನೆಯಡಿ ವಸತಿ ರಹಿತ ಮೀನುಗಾರರಿಗೆ ಮನೆ ನಿರ್ಮಾಣ ಮಾಡಲು ಸಹಾಯಧನ ನೀಡುವ ಕುರಿತು ಒಟ್ಟು 200 ಮನೆಗಳು ಹಂಚಿಕೆಯಾಗಿರುತ್ತದೆ. ಈ ಬಗ್ಗೆ ಅರ್ಹ ವಸತಿ ರಹಿತ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಫಲಾನುಭವಿಗಳು ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ನಗರದ ಉರ್ವಾಸ್ಟೋರ್ ಜಿಲ್ಲಾ ಪಂಚಾಯತ್ ಆವರಣದಲ್ಲಿರುವ ಮೀನುಗಾರಿಕೆ ಸಹಾಯಕ ನಿರ್ದೇಶಕರು ಅಥವಾ ಪುತ್ತೂರು ತಾಲೂಕು ಪಂಚಾಯತ್ ಕಾರ್ಯಾಲಯದಲ್ಲಿರುವ ಮೀನುಗಾರಿಕೆ ಸಹಾಯಕ

ಮೀನುಗಾರರಿಗೆ ಮನೆ ನಿರ್ಮಾಣ: ಅರ್ಜಿ ಆಹ್ವಾನ Read More »

ಕರಾವಳಿ

ವೈದ್ಯಕೀಯ ಶಿಕ್ಷಣ ಸಚಿವ ಜೂನ್ 17ರಂದು ಜಿಲ್ಲೆಗೆ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 14. ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ  ಡಾ.ಶರಣಪ್ರಕಾಶ್ ಆರ್ ಪಾಟೀಲ ಜೂನ್ 17 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ. ಅಂದು ಬೆಳಿಗ್ಗೆ 7:30ಕ್ಕೆ ಮಂಗಳೂರು ಆಗಮನ, 11ಗಂಟೆಗೆ ವಳಚಿಲ್ ಶ್ರೀನಿವಾಸ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕ್ಯಾಂಪಸ್‍ನಲ್ಲಿ ಆಯೋಜಿಸಿದ ”ಸೆಂಟರ್ ಫಾರ್ ಫ್ಯೂಚರ್ ಸ್ಕಿಲ್ಸ್” ಉದ್ಘಾಟನಾ ಕಾರ್ಯಕ್ರಮ, ಮಧ್ಯಾಹ್ನ 12:30ಕ್ಕೆ ರಾಜೀವ ಗಾಂಧಿ ಆರೋಗ್ಯ ವಿ.ವಿ ಪ್ರಾದೇಶಿಕ ಕೇಂದ್ರಕ್ಕೆ ಭೇಟಿ, ಮಧ್ಯಾಹ್ನ 1 ಗಂಟೆಗೆ ಬೈಕಂಪಾಡಿ ಇಂಡಸ್ಟ್ರಿಯಲ್

ವೈದ್ಯಕೀಯ ಶಿಕ್ಷಣ ಸಚಿವ ಜೂನ್ 17ರಂದು ಜಿಲ್ಲೆಗೆ ಭೇಟಿ Read More »

ಕರಾವಳಿ

ನೂತನ ಕಾರಾಗೃಹ ನಿರ್ಮಾಣ: ಗೃಹ ಸಚಿವರ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 14.  ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಮುಡಿಪು ಕುರ್ನಾಡು ಸಮೀಪ ನಿರ್ಮಾಣಗೊಳ್ಳುತ್ತಿರುವ ನೂತನ ಜಿಲ್ಲಾ ಕಾರಾಗೃಹ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿದರು. ನಿರ್ಮಾಣ ಹಂತದ ಕಟ್ಟಡ ವೀಕ್ಷಿಸಿದ ಅವರು ಕಾಮಗಾರಿಗಳ ಮಾಹಿತಿ ಪಡೆದರು. ಕಾಮಗಾರಿಯನ್ನು ಉತ್ತಮ ಗುಣಮಟ್ಟದಲ್ಲಿ ತ್ವರಿತಗತಿಯಲ್ಲಿ ನಡೆಸಿ ಆದಷ್ಟು ಬೇಗನೆ ಪೂರ್ಣಗೊಳಿಸಬೇಕು ಎಂದು ಅವರು ಸೂಚಿಸಿದರು. ಕಾರಾಗೃಹದ ಆವರಣ ಗೋಡೆ ಸೇರಿದಂತೆ ಅತ್ಯುನ್ನತ ಭದ್ರತಾ ವ್ಯವಸ್ಥೆ ನೂತನ ಕಾರಾಗೃಹ ಸಂಕೀರ್ಣದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.  ಕಾರಾಗೃಹ

ನೂತನ ಕಾರಾಗೃಹ ನಿರ್ಮಾಣ: ಗೃಹ ಸಚಿವರ ಭೇಟಿ Read More »

ಕರಾವಳಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯಿಂದ ಮನೆ ದುರಸ್ತಿಗೆ ಹತ್ತು ಸಾವಿರ ಅನುದಾನ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 14. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕು ಬಿಳಿನೆಲೆ ವಲಯದ ಬಿಳಿನೆಲೆ ಕಾರ್ಯಕ್ಷೇತ್ರದ ವ್ಶಾಪ್ತಿಯ ದುರ್ಗಾಂಬಿಕಾ ಸ್ವಸಹಾಯ ಸಂಘದ ಸದಸ್ಶೆ ಶ್ರೀಮತಿ ವಾಮನಕೃಷ್ಣರವರ ವಾಸದ ಮನೆಯು ಭಾರೀ ಗಾಳಿ ಮಳೆಗೆ ಹಾನಿಯಾಗಿದ್ದು, ಮನೆಯ ದುರಸ್ತಿಗಾಗಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯಿಂದ ಪೂಜ್ಶ ವೀರೇಂದ್ರ ಹೆಗ್ಗಡೆಯವರು ಹತ್ತು ಸಾವಿರ ಅನುದಾನವನ್ನು ಮಂಜೂರಾತಿ ಮಾಡಿರುತ್ತಾರೆ. ಈ ಮಂಜೂರಾತಿ ಪತ್ರವನ್ನು ಬಿಳಿನೆಲೆ ಗ್ರಾಮಪಂಚಾಯತ್ ಅಧ್ಶಕ್ಷರಾದ ಶ್ರೀಮತಿ ಶಾರದಾರವರು ವಾಮನ ಕೃಷ್ಣರವರ ಕುಟುಂಬದ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯಿಂದ ಮನೆ ದುರಸ್ತಿಗೆ ಹತ್ತು ಸಾವಿರ ಅನುದಾನ ವಿತರಣೆ Read More »

ಕರಾವಳಿ

ಜನಾಕ್ರೋಶಕ್ಕೆ ಮಣಿದ ಪುರಸಭೆ ಪಾಣೆಮಂಗಳೂರು ಸೇತುವೆ ಸಂಚಾರಕ್ಕೆ ಮುಕ್ತ

(ನ್ಯೂಸ್ ಕಡಬ) newskadaba.com ಜೂ. 13. ಪಾಣೆಮಂಗಳೂರು ಉಕ್ಕಿನ ಸೇತುವೆಯಲ್ಲಿ ಸಂಚಾರ ನಿರ್ಬಂಧ ಮಾಡಿ ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್ ಆದೇಶ ಹೊರಡಿಸಿದ್ದರು. ಇದರ ಬೆನ್ನಲ್ಲೇ ಈ ಸೇತುವೆ ಜನಸಾಮಾನ್ಯರ ಬಹುಮುಖ್ಯ ಸಂಪರ್ಕ ಕೊಂಡಿಯಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಬಗ್ಗೆ ಸಾಮಾನ್ಯ ಸಭೆಯಲ್ಲಿ ಬಿರುಸಿನ ಚರ್ಚೆ ನಡೆದು ದ್ವಿಚಕ್ರ ಹಾಗು ತ್ರಿಚಕ್ರ ವಾಹನ ಸಂಚಾರಕ್ಕೆ ಅನುಮತಿ ನೀಡಬೇಕು ಎಂದು ಪುರಸಭಾ ಸದಸ್ಯ ಇದ್ರೀಸ್ ಪಿ.ಜೆ ಆಗ್ರಹಿಸಿ ಸಭಾತ್ಯಾಗ ಮಾಡಿದ್ದರು. ಸಾರ್ವಜನಿಕರ ಮನವಿಯ ಮೇರೆಗೆ ಸೇತುವೆಯ

ಜನಾಕ್ರೋಶಕ್ಕೆ ಮಣಿದ ಪುರಸಭೆ ಪಾಣೆಮಂಗಳೂರು ಸೇತುವೆ ಸಂಚಾರಕ್ಕೆ ಮುಕ್ತ Read More »

ಕರಾವಳಿ

ಮನಪಾ ನೂತನ ಆಯುಕ್ತರಾಗಿ ಮುಹಮ್ಮದ್ ನಝೀರ್ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ‌. 13. ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಆಯುಕ್ತರಾಗಿ ಮುಹಮ್ಮದ್ ನಝೀರ್ ಅವರು ಗುರುವಾರದಂದು ಅಧಿಕಾರ ಸ್ವೀಕರಿಸಿದರು.ನಿರ್ಗಮನ ಆಯುಕ್ತೆ ನೂರ್ ಜಹಾನ್ ಖಾನಂ ಅವರು ಅಧಿಕಾರ ಹಸ್ತಾಂತರಿಸಿದರು. ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ಜಂಟಿ ನಿರ್ದೇಶಕರಾಗಿದ್ದ ಮುಹಮ್ಮದ್ ನಝೀರ್ ಅವರನ್ನು ನಿಯೋಜಿಸಿ ಸರಕಾರ ಜೂ.10ರಂದು ಆದೇಶ ಹೊರಡಿಸಿತ್ತು.

ಮನಪಾ ನೂತನ ಆಯುಕ್ತರಾಗಿ ಮುಹಮ್ಮದ್ ನಝೀರ್ ಅಧಿಕಾರ ಸ್ವೀಕಾರ Read More »

ಕರಾವಳಿ

ಕಡಬ: ವರ್ಗಾವಣೆಗೊಂಡ ಪೊಲೀಸರಿಗೆ ಭೀಮ್ ಆರ್ಮಿ ವತಿಯಿಂದ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಜೂ. 13. ಕಡಬ ಪೊಲೀಸ್ ಠಾಣೆಯಿಂದ ವಿವಿಧ ಕಡೆ ವರ್ಗಾವಣೆಗೊಂಡ ಆರು ಮಂದಿ ಪೊಲೀಸ್ ಸಿಬ್ಬಂದಿಗಳನ್ನು ಕರ್ನಾಟಕ ರಾಜ್ಯ ಭೀಮ್ ಆರ್ಮಿ ಭಾರತ್ ಏಕತಾ ಮಿಷನ್ ತಾಲೂಕು ಘಟಕದ ವತಿಯಿಂದ ಗುರುವಾರದಂದು ಠಾಣೆಯಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಠಾಣಾ ಉಪನಿರೀಕ್ಷಕ ಅಭಿನಂದನ್ ಮಾತನಾಡಿ, ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿಗಳು ವರ್ಗಾವಣೆಗೊಂಡು ಬೇರೆ ಕಡೆ ಹೋಗುತ್ತಿರುವ ಸಂದರ್ಭದಲ್ಲಿ ಸಂಘಟನೆ ಮೂಲಕ ಮಾಡುತ್ತಿರುವ ಈ ಗೌರವ ನಿಜಕ್ಕೂ ಸ್ಮರಣೀಯವಾದದ್ದು. ಇನ್ನಷ್ಟು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಲು

ಕಡಬ: ವರ್ಗಾವಣೆಗೊಂಡ ಪೊಲೀಸರಿಗೆ ಭೀಮ್ ಆರ್ಮಿ ವತಿಯಿಂದ ಸನ್ಮಾನ Read More »

ಕರಾವಳಿ
Scroll to Top