ಕರಾವಳಿ

ಹರೀಶ್ ಪೂಂಜಾ ವಿರುದ್ಧ FIR ದಾಖಲು

(ನ್ಯೂಸ್ ಕಡಬ) newskadaba.com, ಮೇ.05: ಶ್ರೀ ಗೋಪಾಲಕೃಷ್ಣ ದೇವಸ್ಥಾನ ಭಟ್ರಬೈಲು ತೆಕ್ಕಾರು ಇಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭಾ ವೇದಿಕೆಯಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರು ‘ಗ್ರಾಮದ ಮುಸ್ಲಿಮರ ಬಗ್ಗೆ ಮಾನಹಾನಿಕಾರ ಮತ್ತು ಕೋಮು ಪ್ರಚೋದನೆಯಿಂದ ಕೂಡಿದ ದ್ವೇಷ ಭಾಷಣ ಮಾಡಿದ್ದಾರೆ’ ಎಂದು ಆರೋಪಿಸಿ, ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ. ಈ ದೂರಿನಡಿ ಪೊಲೀಸರು ಎಫ್‌ಐಆ‌ರ್ ದಾಖಲಿಸಿಕೊಂಡಿದ್ದಾರೆ. ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಶನಿವಾರ ರಾತ್ರಿ ಜರುಗಿದ್ದು, ಕಾರ್ಯಕ್ರಮದಲ್ಲಿ ಹರೀಶ್ ಪೂಂಜಾ ಮಾತನಾಡಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ಹರೀಶ್ ಪೂಂಜಾ ವಿರುದ್ಧ FIR ದಾಖಲು Read More »

ಕರಾವಳಿ

ಕರಾವಳಿಯಲ್ಲಿ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ರಚನೆ: ಡಾ.ಪರಮೇಶ್ವರ್

(ನ್ಯೂಸ್ ಕಡಬ) newskadaba.com, ಮೇ.03. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಸಂಬಂಧ ಒಟ್ಟು 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಯಾವುದೇ ಕಾರಣಕ್ಕೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಶಾಂತಿ ಕದಡುವುದಕ್ಕೆ ಬಿಡುವುದಿಲ್ಲ. ಯಾವುದೇ ಸಮುದಾಯದ ಕೋಮುವಾದಿಗಳಿಗೂ ಕಾನೂನು ಉಲ್ಲಂಘಿಸಲು ಬಿಡಲ್ಲ. ಇಂಥಹ ಘಟನೆ ಮರುಕಳಿಸಬಾರದು ಎಂಬ ಕಾರಣಕ್ಕೆ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ರಚಿಸಲಾಗುವುದು. ಇದು ಆ್ಯಂಟಿ ನಕ್ಸಲ್ ಪಡೆಯ ರೀತಿಯಲ್ಲೇ ಕೆಲಸ

ಕರಾವಳಿಯಲ್ಲಿ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ರಚನೆ: ಡಾ.ಪರಮೇಶ್ವರ್ Read More »

ಕರಾವಳಿ

ಸುಹಾಸ್ ಹತ್ಯೆ : ಮಂಗಳೂರಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ ಗೃಹ ಸಚಿವ ಪರಮೇಶ್ವರ್

(ನ್ಯೂಸ್ ಕಡಬ) newskadaba.com, ಮೇ.03. ಬೆಂಗಳೂರು: ಹಿಂದು ಸಂಘಟನೆಗಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಶಂಕಿತ ಎಂಟು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಖುದ್ದು ಮಂಗಳೂರಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಮತ್ತೊಂದೆಡೆ ರಾಜ್ಯದ ಹಲವು ಸೂಕ್ಷ್ಮ ಜಿಲ್ಲೆಗಳಲ್ಲಿ ಪೊಲೀಸರು ವಿಶೇಷ ಪೆರೇಡ್ ಮೂಲಕ ಮುನ್ನೆಚ್ಚರಿಕೆ ವಹಿಸಿದ್ದಾರೆ. ಮೊನ್ನೆ ರಾತ್ರಿ 8.30ರ ಸುಮಾರಿನಲ್ಲಿ ಸುಹಾಸ್ ಶೆಟ್ಟಿಯನ್ನು ಜನ ಸಂದಣಿ ಇರುವ ಪ್ರದೇಶದಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ತಕ್ಷಣವೇ ಬಿರುಸಿನ ಕಾರ್ಯಾಚರಣೆ

ಸುಹಾಸ್ ಹತ್ಯೆ : ಮಂಗಳೂರಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ ಗೃಹ ಸಚಿವ ಪರಮೇಶ್ವರ್ Read More »

ಕರಾವಳಿ, ಕರ್ನಾಟಕ

ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ 8 ಮಂದಿ ಆರೋಪಿಗಳು ವಶಕ್ಕೆ

(ನ್ಯೂಸ್ ಕಡಬ) newskadaba.com, ಮೇ.03. ಮಂಗಳೂರಿನಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಬಜಪೆ ಠಾಣೆ ಪೊಲೀಸರು ಘಟನೆ ನಡೆದ 24 ಗಂಟೆಯೊಳಗೆ 8 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ಪತ್ತೆಗಾಗಿ ಮಂಗಳೂರು ಪೊಲೀಸ್ ಆಯುಕ್ತರಾದ ಅನುಪಮ್ ಅಗರವಾಲ್ ರವರು ಐದು ತಂಡಗಳನ್ನು ರಚಿಸಿದ್ದರು. ಈ ತಂಡಗಳು ಘಟನೆ ನಡೆದ ದಿನದಿಂದ ಇದುವರೆಗೂ ಹಲವು ಮಾತಿಗಳನ್ನು ಕಲೆಹಾಕಿ ಮಂಗಳೂರಿನಲ್ಲೇ ಅವಿತು ಕುಳಿತಿದ್ದ ಎಂಟು ಮಂದಿ ಶಂಕಿತರನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ

ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ 8 ಮಂದಿ ಆರೋಪಿಗಳು ವಶಕ್ಕೆ Read More »

ಕರಾವಳಿ

ಸುಹಾಸ್ ಶೆಟ್ಟಿ ಕೊಲೆ : ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಭಾವನೆ ಕೆರಳಿಸಿದವರ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com, ಮೇ.03. ಮಂಗಳೂರು: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ನಿಪದವು ಬಳಿ ನಡೆದ ಸುಹಾಸ್ ಶೆಟ್ಟಿ ಹತ್ಯೆ ಸಂಬಂಧವಾಗಿ ಕೆಲವು ಸಾಮಾಜಿಕ ಜಾಲತಾಣಗಳಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ಉಂಟುಮಾಡುವ ಉದ್ದೇಶದಿಂದ ಕೆಲವು ವ್ಯಕ್ತಿಗಳು ಹಾಗೂ ಗ್ರೂಪುಗಳು ಸಾಮಾಜಿಕ ಮಾಧ್ಯಮದ ಮೂಲಕ ಒಂದು ಸಮುದಾಯವನ್ನು ಮತ್ತೊಂದು ಸಮುದಾಯದ ವಿರುದ್ಧ ದ್ವೇಷ ಭಾವನೆ ಹುಟ್ಟುವಂತೆ ಪೋಸ್ಟ್ ಮಾಡುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ ಠಾಣೆಗಳಲ್ಲಿ ಕೆಳಗಿನಂತೆ ಪ್ರಕರಣಗಳನ್ನುದಾಖಲಿಸಿದೆ.

ಸುಹಾಸ್ ಶೆಟ್ಟಿ ಕೊಲೆ : ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಭಾವನೆ ಕೆರಳಿಸಿದವರ ವಿರುದ್ದ ಪ್ರಕರಣ ದಾಖಲು Read More »

ಕರಾವಳಿ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ – ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ

(ನ್ಯೂಸ್ ಕಡಬ) newskadaba.com, ಮೇ.03. 2024-2025ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಶೇ.66.1ರಷ್ಟು ಅಂದರೆ ಕಳೆದ ವರ್ಷಕ್ಕಿಂತ 8% ಫಲಿತಾಂಶ ಹೆಚ್ಚಾಗಿದೆ. ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಕ್ರಮವಾಗಿ 91.12% ಮತ್ತು 89.96% ಫಲಿತಾಂಶದೊಂದಿಗೆ ರಾಜ್ಯದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದಿವೆ. ಕಲಬುರಗಿ ಜಿಲ್ಲೆ ಕೊನೆಯ ಸ್ಥಾನ ಪಡೆದುಕೊಂಡಿದೆ. 22 ವಿದ್ಯಾರ್ಥಿಗಳು 625 ಅಂಕಗಳಲ್ಲಿ 625 ಅಂಕಗಳನ್ನು ಗಳಿಸುವ ಮೂಲಕ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ – ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ Read More »

ಕರಾವಳಿ

ಕಡಬ: ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ ಕಡಬದಲ್ಲಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಮೇ.02. ಮಂಗಳೂರಿನ ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ ವಿ.ಹಿಂ.ಪ. ದ.ಕ ಜಿಲ್ಲಾ ಬಂದ್ ಗೆ ಕರೆ ನೀಡಿದ್ದು ಕಡಬದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವಠಾರದಲ್ಲಿ ಸೇರಿದ ಕಾರ್ಯಕರ್ತರು ಬಳಿಕ ರಸ್ತೆ ತಡೆ ನಡೆಸಿ ರಸ್ತೆಯಲ್ಲಿ ಟಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಕಡಬ ಪೋಲಿಸರು ಬಂದೋಬಸ್ತು ಏರ್ಪಡಿಸಿದ್ದಾರೆ. ಕಡಬ ಪೇಟೆಯಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್

ಕಡಬ: ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ ಕಡಬದಲ್ಲಿ ಪ್ರತಿಭಟನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಗುಂಪು ಹತ್ಯೆ ಘಟನೆಗೆ ಸಂಬಂಧಿಸಿದಂತೆ ಪ್ರಚೋದನಕಾರಿ ಸುಳ್ಳು ಪೋಸ್ಟ್: ಮಂಗಳೂರು ಪೊಲೀಸರಿಂದ 3 ಕೇಸ್ ದಾಖಲು

(ನ್ಯೂಸ್ ಕಡಬ) newskadaba.com ಮೇ.01: ಮಂಗಳೂರು: ಮಂಗಳೂರಿನ ಕುಡುಪುನಲ್ಲಿ ಇತ್ತೀಚೆಗೆ ನಡೆದ ಗುಂಪು ಹತ್ಯೆ ಘಟನೆಗೆ ಸಂಬಂಧಿಸಿದಂತೆ ನಗರದಲ್ಲಿ ಅಶಾಂತಿ ಉಂಟುಮಾಡುವ ಉದ್ದೇಶದಿಂದ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ನಕಲಿ ಮತ್ತು ಪ್ರಚೋದನಕಾರಿ ವಿಷಯ ಪೋಸ್ಟ್ ಮಾಡಿದವರ ವಿರುದ್ಧ ಮಂಗಳೂರು ನಗರ ಪೊಲೀಸರು ಪ್ರಕರಣಗಳನ್ನು ದಾಖಲಿಸಿದ್ದಾರೆ. ಕುಡುಪು ಬಳಿ ಇತ್ತೀಚೆಗೆ ನಡೆದ ದಿನಗೂಲಿ ಕಾರ್ಮಿಕನ ಹತ್ಯೆಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸುಳ್ಳು ಮತ್ತು ದಾರಿತಪ್ಪಿಸುವ ಮಾಹಿತಿ ಹರಿದಾಡುತ್ತಿರುವುದು ಕಂಡುಬಂದಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್

ಗುಂಪು ಹತ್ಯೆ ಘಟನೆಗೆ ಸಂಬಂಧಿಸಿದಂತೆ ಪ್ರಚೋದನಕಾರಿ ಸುಳ್ಳು ಪೋಸ್ಟ್: ಮಂಗಳೂರು ಪೊಲೀಸರಿಂದ 3 ಕೇಸ್ ದಾಖಲು Read More »

ಕರಾವಳಿ

ಮಂಗಳೂರು : ನೇತ್ರಾವತಿ ಒಡಲಿಗೆ ಕಲುಷಿತ ನೀರು – ಜಾಗೃತ ಹಿರಿಯ ನಾಗರಿಕರ ತಂಡದಿಂದ ಸಮೀಕ್ಷೆ

(ನ್ಯೂಸ್ ಕಡಬ) newskadaba.com ಎ. 30: ನೇತ್ರಾವತಿ ನದಿಗೆ ಕಲುಷಿತ ನೀರು ಸೇರುವ ವಿಚಾರಕ್ಕೆ ಸಂಬಂಧಿಸಿ ಮಾಧ್ಯಮಗಳಲ್ಲಿ ಈ ಕುರಿತು ಬಿತ್ತರವಾದ ವರದಿಗಳನ್ನು ಗಮನಿಸಿ, ಮಂಗಳೂರಿನ ಜಾಗೃತ ಹಿರಿಯ ನಾಗರಿಕರ ತಂಡವೊಂದು ಬಂಟ್ವಾಳದ ಪ್ರದೇಶಗಳಲ್ಲಿ ಸಮೀಕ್ಷೆ ನಡೆಸಿತು. ಪ್ರತ್ಯಕ್ಷ ಭೇಟಿ ಸಂದರ್ಭ ನದಿಯ ಒಡಳಿಗೆ ತ್ಯಾಜ್ಯ ಸೇರುವುದನ್ನು ಗಮನಿಸಿದ ತಂಡ, ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಸಲ್ಲಿಸಿ, ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.

ಮಂಗಳೂರು : ನೇತ್ರಾವತಿ ಒಡಲಿಗೆ ಕಲುಷಿತ ನೀರು – ಜಾಗೃತ ಹಿರಿಯ ನಾಗರಿಕರ ತಂಡದಿಂದ ಸಮೀಕ್ಷೆ Read More »

ಕರಾವಳಿ

ಮಂಗಳೂರು: ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ 500 ಕ್ವಿಂಟಾಲ್ ಅಕ್ಕಿ ಜಪ್ತಿ

(ನ್ಯೂಸ್ ಕಡಬ) newskadaba.com ಎ. 30: ನಗರದ ಖಾಸಗಿ ಕಾಲೇಜಿನ ಹಿಂಭಾಗದಲ್ಲಿರುವ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಸುಮಾರು 500 ಕ್ವಿಂಟಾಲ್ ಅಕ್ಕಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಸಾರ್ವಜನಿಕರಿಂದ ಬಂದ ದೂರುಗಳ ಆಧಾರದ ಮೇಲೆ, ಇಲಾಖೆಯ ಉಪ ನಿರ್ದೇಶಕಿ ಅನಿತಾ ವಿ. ಮಡ್ಲೂರು ಅವರ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. “ಬಾಡಿಗೆ ಗೋದಾಮಿನಲ್ಲಿ ಬಾಸುಮತಿ, ಸೋನಾ ಮಸೂರಿ, ಜೀರಾ ರೈಸ್ ಮತ್ತು ತೌಡು ಅಕ್ಕಿ ಸೇರಿದಂತೆ ವಿವಿಧ ಬ್ರಾಂಡ್‌ಗಳ ಅಕ್ಕಿ ಚೀಲಗಳಿದ್ದವು. ಇದರ ಜೊತೆಗೆ,

ಮಂಗಳೂರು: ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ 500 ಕ್ವಿಂಟಾಲ್ ಅಕ್ಕಿ ಜಪ್ತಿ Read More »

ಕರಾವಳಿ
Scroll to Top