ಕರಾವಳಿ

ಪಡಿತರ ದಾರರ ಗಮನಕ್ಕೆ: ರಾಜ್ಯಾದ್ಯಂತ ಬೆಳಗ್ಗೆ 6 ರಿಂದ ರಾತ್ರಿ 10 ಗಂಟೆಯವರೆಗೆ ಪಡಿತರ ಅಂಗಡಿ ಓಪನ್‌!

(ನ್ಯೂಸ್‌ ಕಡಬ) newskadaba.com,  ಜು. 24: ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ನ್ಯಾಯಬೆಲೆ (ಪಡಿತರ) ಅಂಗಡಿಗಳು ಪ್ರತಿದಿನ ಬೆಳಿಗ್ಗೆ 6:00 ರಿಂದ ರಾತ್ರಿ 10:00 ಗಂಟೆಯವರೆಗೆ ಕಡ್ಡಾಯವಾಗಿ ತೆರೆದಿರಬೇಕು ಎಂದು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆದೇಶಿಸಿದೆ. ದಾಸ್ತಾನು ತಲುಪಿದ್ದರೂ ಫಲಾನುಭವಿಗಳಿಗೆ ಪಡಿತರ ಸಿಗಲು ವಿಳಂಬವಾಗುತ್ತಿದೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಜುಲೈ ತಿಂಗಳ ಪಡಿತರ ವಿತರಣೆಯನ್ನು ತಿಂಗಳ ಅಂತ್ಯದೊಳಗೆ ಪೂರ್ಣಗೊಳಿಸಲು ಸೂಚಿಸಲಾಗಿದೆ.ಈ ನಿರ್ದೇಶನವನ್ನು ಮಳಿಗೆಗಳ ವಿತರಕರು ಉಲ್ಲಂಘಿಸಿದರೆ ಅಥವಾ ನಿಗದಿತ […]

ಪಡಿತರ ದಾರರ ಗಮನಕ್ಕೆ: ರಾಜ್ಯಾದ್ಯಂತ ಬೆಳಗ್ಗೆ 6 ರಿಂದ ರಾತ್ರಿ 10 ಗಂಟೆಯವರೆಗೆ ಪಡಿತರ ಅಂಗಡಿ ಓಪನ್‌! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರೀ ಮಳೆ ಹಿನ್ನೆಲೆ- ಇಂದು (ಜು. 24) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಜು. 24. ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜು. 24ರ ಶುಕ್ರವಾರ ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭಾರೀ ಮಳೆ ಹಿನ್ನೆಲೆ- ಇಂದು (ಜು. 24) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ

ಪಿಜಕಳ: ಆರೋಗ್ಯ ತಪಾಸಣ ಶಿಬಿರ, ಶಾಲಾ ಕೈತೋಟ ಉದ್ಘಾಟನೆ ಮಕ್ಕಳಿಗೆ ಕೃಷಿ ಸಂಸ್ಕೃತಿಯತ್ತ ಒಲವು ಮೂಡಿಸಬೇಕು: ಬೆಳ್ಳಿಪ್ಪಾಡಿ ರಾಜೇಂದ್ರ ರೈ

(ನ್ಯೂಸ್ ಕಡಬ) newskadaba.com ಜು. 23. ಗ್ರಾಮೀಣ ಪ್ರದೇಶದ ಮಕ್ಕಳು ಕೂಡ ಕೃಷಿಯ ಬಗ್ಗೆ  ಆಸಕ್ತಿ ವಹಿಸದಿರುವುದು ವಿಷಾದದ ಸಂಗತಿಯಾಗಿದೆ. ಶಿಕ್ಷಣದ ಜೊತೆಗೆ ಮಕ್ಕಳಿಗೆ ಕೃಷಿ ಸಂಸ್ಕೃತಿಯತ್ತ ಒಲವು ಮೂಡಿಸುವ ಕಾರ್ಯಕ್ರಮಗಳು ನಡೆಯಬೇಕು ಎಂದು ಬ್ಯಾಂಕ್‌ ಆಫ್‌ ಬರೋಡ ಸಂಯೋಜಿತ ವಿಜಯ ಗ್ರಾಮೀಣ ಅಭಿವೃದ್ಧಿ  ಪ್ರತಿಷ್ಠಾನದ ಕಾರ್ಯದರ್ಶಿ ಬೆಳ್ಳಿಪ್ಪಾಡಿ ರಾಜೇಂದ್ರ ರೈ ಅವರು ಅಭಿಪ್ರಾಯಪಟ್ಟರು.   ಅವರು  ಕಡಬ ತಾಲೂಕಿನ ಪಿಜಕಳ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬ್ಯಾಂಕ್‌ ಆಫ್‌ ಬರೋಡ ಸಂಯೋಜಿತ ವಿಜಯ ಗ್ರಾಮೀಣ ಅಭಿವೃದ್ಧಿ

ಪಿಜಕಳ: ಆರೋಗ್ಯ ತಪಾಸಣ ಶಿಬಿರ, ಶಾಲಾ ಕೈತೋಟ ಉದ್ಘಾಟನೆ ಮಕ್ಕಳಿಗೆ ಕೃಷಿ ಸಂಸ್ಕೃತಿಯತ್ತ ಒಲವು ಮೂಡಿಸಬೇಕು: ಬೆಳ್ಳಿಪ್ಪಾಡಿ ರಾಜೇಂದ್ರ ರೈ Read More »

ಕರಾವಳಿ

ಅಂತಾರಾಷ್ಟ್ರೀಯ ಗಡಿ ಉಲ್ಲಂಘನೆ: ಶ್ರೀಲಂಕಾ ನೌಕಾಪಡೆಯಿಂದ 9 ಭಾರತೀಯ ಮೀನುಗಾರರ ಬಂಧನ

(ನ್ಯೂಸ್‌ ಕಡಬ) newskadaba.com,  ಜು.23 “ಅಂತಾರಾಷ್ಟ್ರೀಯ ಸಮುದ್ರ ಗಡಿ ರೇಖೆ ಉಲ್ಲಂಘಿಸಿ ಮೀನುಗಾರಿಕೆ ನಡೆಸುತ್ತಿದ್ದ 9 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದೆ.” “ಬುಧವಾರ ಸಂಜೆ ತಲೈಮನ್ನಾರ್‌ ಉತ್ತರ ಭಾಗದ ಶ್ರೀಲಂಕಾ ಜಲಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದ ಲಂಕಾ ನೌಕಾಪಡೆ, ಮೀನುಗಾರರೊಂದಿಗೆ ಅವರ ಟ್ರಾಲರ್ ದೋಣಿಯನ್ನೂ ವಶಕ್ಕೆ ಪಡೆದುಕೊಂಡಿದೆ. ಕಾರ್ಯಾಚರಣೆ ವೇಳೆ 50ಕ್ಕೂ ಹೆಚ್ಚು ಭಾರತೀಯ ಬೋಟ್‌ಗಳು ಗಡಿ ದಾಟಿರುವುದು ಪತ್ತೆಯಾಗಿದೆ ಎಂದು ನೌಕಾಪಡೆ ತಿಳಿಸಿದೆ.” “ಬಂಧಿತ ಮೀನುಗಾರರನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಮನ್ನಾರ್ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳಿಗೆ

ಅಂತಾರಾಷ್ಟ್ರೀಯ ಗಡಿ ಉಲ್ಲಂಘನೆ: ಶ್ರೀಲಂಕಾ ನೌಕಾಪಡೆಯಿಂದ 9 ಭಾರತೀಯ ಮೀನುಗಾರರ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಬ್ಯಾಂಕ್ ಮೇಲ್ಛಾವಣಿ ಕೊರೆದು ಕಳವಿಗೆ ಯತ್ನಿಸಿದ್ದ ಆರೋಪಿ ಪೋಲಿಸರ ವಶಕ್ಕೆ

(ನ್ಯೂಸ್‌ ಕಡಬ) newskadaba.com,  ಜು.23 ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್‌ನಲ್ಲಿ ಮೇಲ್ಛಾವಣಿ ಕೊರೆದು ಹಣ ಹಾಗೂ ಚಿನ್ನಾಭರಣ ಕಳವು ಮಾಡಲು ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಾರಿಪಳ್ಳ ನಿವಾಸಿ ಮೊಹಮ್ಮದ್ ಶಾಖಿರ್ (33) ಎಂದು ಗುರುತಿಸಲಾಗಿದೆ.ಕಳೆದ ಜುಲೈ 13ರಂದು ಕೆನರಾ ಬ್ಯಾಂಕ್ ಕಟ್ಟಡದ ಮೇಲ್ಛಾವಣಿ ಕೊರೆದು ಕಳವಿಗೆ ಯತ್ನಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.ಜುಲೈ 22ರಂದು

ಬಂಟ್ವಾಳ: ಬ್ಯಾಂಕ್ ಮೇಲ್ಛಾವಣಿ ಕೊರೆದು ಕಳವಿಗೆ ಯತ್ನಿಸಿದ್ದ ಆರೋಪಿ ಪೋಲಿಸರ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಹೆಲಿಕಾಪ್ಟರ್ ಹಾರಾಟ ಕಂಡು ಆತಂಕಗೊಂಡ ಜನ; NSG ಮಾಕ್‌ಡ್ರಿಲ್ ಎಂದು ಅಧಿಕಾರಿಗಳ ಸ್ಪಷ್ಟನೆ

(ನ್ಯೂಸ್‌ ಕಡಬ) newskadaba.com,  ಜು.23: ಮಂಗಳೂರಿನ ವಿವಿಧ ಭಾಗಗಳಲ್ಲಿ, ವಿಶೇಷವಾಗಿ ಬಹುಮಹಡಿ ಕಟ್ಟಡಗಳ ಸಮೀಪ ಹೆಲಿಕಾಪ್ಟರ್ ತೀರ ಕಡಿಮೆ ಎತ್ತರದಲ್ಲಿ ಸಂಚರಿಸಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು. ಇದು ರಾಷ್ಟ್ರೀಯ ಭದ್ರತಾ ಪಡೆ (NSG) ನಡೆಸುತ್ತಿರುವ ಭಯೋತ್ಪಾದನಾ ವಿರೋಧಿ ಅಣಕು ಕಾರ್ಯಾಚರಣೆಯ ಭಾಗವಾಗಿದ್ದು, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಸಂಜೆ ನಡೆಯಲಿರುವ ಪೂರ್ಣ ಪ್ರಮಾಣದ ಕವಾಯತಿಗೆ ಮುನ್ನ ಸನ್ನದ್ಧತೆ ಹಾಗೂ ಭದ್ರತಾ ಸಂಸ್ಥೆಗಳ ನಡುವಿನ ಸಮನ್ವಯತೆಯನ್ನು ಪರಿಶೀಲಿಸಲು ಈ ಪರೀಕ್ಷಾರ್ಥ ಹಾರಾಟ ನಡೆಸಲಾಗಿದೆ.ತುರ್ತು ಸಂದರ್ಭಗಳನ್ನು ಎದುರಿಸುವ

ಮಂಗಳೂರು: ಹೆಲಿಕಾಪ್ಟರ್ ಹಾರಾಟ ಕಂಡು ಆತಂಕಗೊಂಡ ಜನ; NSG ಮಾಕ್‌ಡ್ರಿಲ್ ಎಂದು ಅಧಿಕಾರಿಗಳ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅರಂತೋಡು: ಬೈಕ್ – ಕಾರು ನಡುವೆ ಭೀಕರ ಅಪಘಾತ; ಸವಾರ ಗಂಭೀರ, ಆಸ್ಪತ್ರೆಗೆ ದಾಖಲು

(ನ್ಯೂಸ್‌ ಕಡಬ) newskadaba.com, ಜು.23  : ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಬುಧವಾರ ತಡರಾತ್ರಿ ನಡೆದಿದೆ. ಬೈಕ್ ಸವಾರನನ್ನು ಅರಂತೋಡು ಗ್ರಾಮದ ಬಿಳಿಯಾರು ಬನ ಸುಬ್ರಾಯ ಅವರ ಮಗ ಸಂತೋಷ್ ಎಂದು ಗುರುತಿಸಲಾಗಿದೆ….. ಅಪಘಾತದಲ್ಲಿ ಬೈಕ್ ಸವಾರ ಸಂತೋಷ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರ ಸಹಕಾರದೊಂದಿಗೆ ಗಾಯಾಳುವನ್ನು ತಕ್ಷಣವೇ ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅರಂತೋಡು: ಬೈಕ್ – ಕಾರು ನಡುವೆ ಭೀಕರ ಅಪಘಾತ; ಸವಾರ ಗಂಭೀರ, ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಾಳೆ(ಜು. 23) ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಜು. 22. ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ನಾಳೆ ಗುರುವಾರ (ಜು.23) ರಂದು ಜಿಲ್ಲೆಯಾದ್ಯಂತ ಎಲ್ಲಾ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಆದೇಶ ಹೊರಡಿಸಿದ್ದಾರೆ. ಈ ಆದೇಶದಂತೆ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಮತ್ತು ಪದವಿ ಪೂರ್ವ ಕಾಲೇಜುಗಳಿಗೆ

ನಾಳೆ(ಜು. 23) ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ

ಆಗಸ್ಟ್ 8 ಮತ್ತು 9ರಂದು ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ

(ನ್ಯೂಸ್ ಕಡಬ) newskadaba.com ಜು. 23. ಕರ್ನಾಟಕ ಅನಿವಾಸಿ ಭಾರತೀಯರ ಒಕ್ಕೂಟ ಜಿದ್ದಾ ಘಟಕದ ವತಿಯಿಂದ ಕರ್ನಾಟಕ ಮಾರ್ವಾಡಿ ಯೂತ್ ಫೆಡರೇಶನ್ ಬೆಂಗಳೂರು, ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ರೋಶನಿ ನಿಲಯ ಮಂಗಳೂರು ಸಹಯೋಗದೊಂದಿಗೆ ಆಗಸ್ಟ್ 8 ಮತ್ತು 9ರಂದು ಅಂಗವೈಕಲ್ಯ ವಿಕಲಚೇತನರ ಭವಿಷ್ಯದ ಜೀವನಕ್ಕಾಗಿ ಉಚಿತ ಕೃತಕ ಕೈ–ಕಾಲು ಜೋಡಣಾ ಶಿಬಿರ ನಗರದ ವೆಲೆನ್ಸಿಯಾ ಜೆಪ್ಪುನಲ್ಲಿರುವ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಶನಿ ನಿಲಯದ ಸಭಾಂಗಣದಲ್ಲಿ ನಡೆಯಲಿದೆ.        ಉತ್ತಮ ಗುಣಮಟ್ಟದ ಹಗುರ

ಆಗಸ್ಟ್ 8 ಮತ್ತು 9ರಂದು ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ Read More »

ಕರಾವಳಿ

ಮೆದುಳಿನ ಆರೋಗ್ಯದ ಅರಿವು ಪ್ರತಿಯೊಬ್ಬರಿಗೂ ಅಗತ್ಯ

(ನ್ಯೂಸ್ ಕಡಬ) newskadaba.com ಜು. 23. ಪ್ರತಿ ವರ್ಷವೂ ವಿಶ್ವ ಮೆದುಳು ದಿನ–ಇದನ್ನು ವಿಶ್ವದಾದ್ಯಂತ ಆಚರಿಸಲಾಗುತ್ತಿದೆ. ಈ ದಿನವು ನಮಗೆ ಮೆದುಳಿನ ಮಹತ್ತವನ್ನು ತಿಳಿಸುವ ದಿನವಾಗಿದೆ. ಮೆದುಳು ನಮ್ಮ ಶರೀರದಲ್ಲಿ ಅತ್ಯಂತ ಬೆಲೆ ಬಾಳುವ ಒಂದು ಅಂಗ. ನಮ್ಮ ಯೋಚನೆ, ಕಲಿಕೆ, ನೆನಪು, ಅರ್ಥಪೂರ್ಣ ಸಂವಹನ, ಸೂಕ್ತ ನಿರ್ಧಾರ ಹೀಗೆ ದಿನದ ಹೆಚ್ಚಿನ ಚಟುವಟಿಕೆಗಳಲ್ಲಿ ಇದು ಪ್ರಧಾನ ಪಾತ್ರ ವಹಿಸುತ್ತದೆ. ಈ ಮಹತ್ವದ ಹೊರತಾಗಿಯೂ ಹೃದಯ, ಮಧುಮೇಹದಂಥ ರೋಗಗಳಿಗೆ ಕೊಡುವಷ್ಟು ಪ್ರಾಮುಖ್ಯವನ್ನು ಮೆದುಳಿಗೆ ಸಂಬಂಧಿಸಿದ ರೋಗಗಳಿಗೆ ನಾವು

ಮೆದುಳಿನ ಆರೋಗ್ಯದ ಅರಿವು ಪ್ರತಿಯೊಬ್ಬರಿಗೂ ಅಗತ್ಯ Read More »

ಕರಾವಳಿ
Scroll to Top