ಕರಾವಳಿ

ಪುತ್ತೂರು: ರಬ್ಬರ್ ಟ್ಯಾಪಿಂಗ್‌ಗೆ ತೆರಳಿದ್ದ ವೇಳೆ ಕಾಡಾನೆ ದಾಳಿ: ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಎ. 29:  ಪುತ್ತೂರು : ಇಲ್ಲಿನ ಕೊಳ್ತಿಗೆ ಗ್ರಾಮದ ಕಣಿಯಾರು ಮಲೆ ಅರ್ತಿಯಡ್ಕ ಸಿಆರ್‌ಸಿ ಕಾಲನಿ ಬಳಿ ಕಾಡಾನೆ ದಾಳಿಗೆ ತುತ್ತಾಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಪೆರ್ಲಂಪಾಡಿ ಸಮೀಪದ ಅರ್ತಿಯಡ್ಕ ಎಂಬಲ್ಲಿನ ನಿವಾಸಿ ಮೃತಪಟ್ಟ ಮಹಿಳೆ. ಮಂಗಳವಾರ ಮುಂಜಾನೆ ಮಹಿಳೆ ಸಹಿತ ಮೂವರು ರಬ್ಬರ್‌ ಟ್ಯಾಪಿಂಗ್‌ಗೆ ಮಾಡಲು ತೆರಳಿದ್ದರು. ಈ ಸಂದರ್ಭದಲ್ಲಿ ಕಣಿಯಾರು ಮಲೆ ಎಂಬಲ್ಲಿ ಅವರನ್ನು ಆನೆ ಅಟ್ಟಿಸಿಕೊಂಡು ಬಂದಿತ್ತು. ಈ ವೇಳೆ ಉಳಿದ ಇಬ್ಬರು ಓಡಿ ತಪ್ಪಿಸಿಕೊಂಡಿದ್ದರು. […]

ಪುತ್ತೂರು: ರಬ್ಬರ್ ಟ್ಯಾಪಿಂಗ್‌ಗೆ ತೆರಳಿದ್ದ ವೇಳೆ ಕಾಡಾನೆ ದಾಳಿ: ಮಹಿಳೆ ಮೃತ್ಯು Read More »

ಕರಾವಳಿ

ರೈಲ್ವೆ ಪರೀಕ್ಷೆಯಲ್ಲಿ ತಾಳಿ, ಜನಿವಾರ ತೆಗೆಸದಿರಲು ಸಚಿವ ವಿ. ಸೋಮಣ್ಣ ಸೂಚನೆ

(ನ್ಯೂಸ್ ಕಡಬ) newskadaba.com ಎ. 28 ಮಂಗಳೂರು: ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಜನಿವಾರ ಮತ್ತು ಮಂಗಳಸೂತ್ರ ತೆಗೆಸಬಾರದು ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪರೀಕ್ಷೆಗೆ ಹಾಜರಾಗುವವರು ಧಾರ್ಮಿಕ ಸಂಕೇತಗಳು ಮತ್ತು ಮಂಗಳಸೂತ್ರವನ್ನು ತೆಗೆದು ಬರಬೇಕು ಎಂದು ಪ್ರವೇಶ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಇದಕ್ಕೆ ಹಿಂದೂ ಪರ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಸಿಇಟಿ ಪರೀಕ್ಷೆಯಲ್ಲಿ ಉಂಟಾದ ಜನಿವಾರ ವಿವಾದದಿಂದಾಗಿ ಇದಕ್ಕೆ ಇನ್ನಷ್ಟು ಕಾವು

ರೈಲ್ವೆ ಪರೀಕ್ಷೆಯಲ್ಲಿ ತಾಳಿ, ಜನಿವಾರ ತೆಗೆಸದಿರಲು ಸಚಿವ ವಿ. ಸೋಮಣ್ಣ ಸೂಚನೆ Read More »

ಕರಾವಳಿ

ಕಾರು- ಆಟೋರಿಕ್ಷಾ ನಡುವೆ ಅಪಘಾತ ರಿಕ್ಷಾ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಎ. 20. ಕಾರು ಹಾಗೂ ಆಟೋ ರಿಕ್ಷಾದ ನಡುವೆ ಅಪಘಾತ ಸಂಭವಿಸಿದ ಪರಿಣಾಮ ರಿಕ್ಷಾ ಚಾಲಕ ಮೃತಪಟ್ಟ ಘಟನೆ ನೆಲ್ಯಾಡಿ ಸಮೀಪದ ವಾಲ್ತಾಜೆ ಎಂಬಲ್ಲಿ ಸಂಭವಿಸಿದೆ. ಮೃತ ಚಾಲಕನನ್ನು ಗುಂಡ್ಯದ ಪ್ರಭಾಕರ್ ಎಂದು ತಿಳಿದುಬಂದಿದ್ದು, ಗುಂಡ್ಯದಿಂದ ನೆಲ್ಯಾಡಿ‌ ಕಡೆಗೆ ಆಟೋರಿಕ್ಷಾದಲ್ಲಿ ತೆರಳುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬಂದ‌ಕಾರು ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಕಾರು- ಆಟೋರಿಕ್ಷಾ ನಡುವೆ ಅಪಘಾತ ರಿಕ್ಷಾ ಚಾಲಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಬ್ರಹ್ಮಾವರ : ಟಿಪ್ಪರ್ ಢಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರೆ ಮೃತ್ಯು

(ನ್ಯೂಸ್ ಕಡಬ) newskadaba.com, ಎ.04  ಬೆಂಗಳೂರು: ಬ್ರಹ್ಮಾವರ : ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66 ರ ಮಾಬುಕಳ ಸೇತುವೆ ಸಮೀಪ ನಡೆದ ಭೀಕರ ಅಪಘಾತದಲ್ಲಿ ಮಹಿಳೆಯೊರ್ವರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಮಮ್ತಾಜ್‌ (44) ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಮಾಬುಕಳ ಸೇತುವೆ ಸಮೀಪ ಸ್ಕೂಟರ್ ಮತ್ತು ಟಿಪ್ಪ‌ರ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ

ಬ್ರಹ್ಮಾವರ : ಟಿಪ್ಪರ್ ಢಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರೆ ಮೃತ್ಯು Read More »

ಕರಾವಳಿ

ರಾಘವೇಶ್ವರ ಭಾರತಿ ಸ್ವಾಮೀಜಿ ಅತ್ಯಾಚಾರ ಪ್ರಕರಣ ರದ್ದುಗೊಳಿಸಿ- ಹೈಕೋರ್ಟ್ ಆದೇಶ

(ನ್ಯೂಸ್ ಕಡಬ) newskadaba.com, ಎ.04 ಬೆಂಗಳೂರು: ಗೋಕರ್ಣದ ಶ್ರೀ ರಾಮಚಂದ್ರಾಪುರ ಮಠದ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತಿ ಸ್ವಾಮಿಗಳ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿದೆ. ಆಪಾದಿತ ಘಟನೆಗಳನ್ನು ವರದಿ ಮಾಡುವಲ್ಲಿ ಒಂಬತ್ತು ವರ್ಷಗಳ ಗಮನಾರ್ಹ ವಿಳಂಬವನ್ನು ಉಲ್ಲೇಖಿಸಿ ಈ ಆದೇಶವನ್ನು ಹೊರಡಿಸಲಾಗಿದೆ. 2006ರಲ್ಲಿ 15 ವರ್ಷದ ಅಪ್ರಾಪ್ತಿಯಾಗಿದ್ದಾಗ ಹಾಗೂ 2012ರಲ್ಲಿ ಎರಡನೇ ಬಾರಿ ರಾಘವೇಶ್ವರ ಭಾರತಿ ಸ್ವಾಮೀಜಿ ತನ್ನ ಶಿಷ್ಯಯ ಮೇಲೆ ಅತ್ಯಾಚಾರ ಎಸಗಿದ್ದರು ಎಂಬ ಆರೋಪ ಕೇಳಿಬಂದಿತ್ತು. ಕರ್ನಾಟಕ

ರಾಘವೇಶ್ವರ ಭಾರತಿ ಸ್ವಾಮೀಜಿ ಅತ್ಯಾಚಾರ ಪ್ರಕರಣ ರದ್ದುಗೊಳಿಸಿ- ಹೈಕೋರ್ಟ್ ಆದೇಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಹೆದ್ದಾರಿಗಳಲ್ಲಿ ಅನಧಿಕೃತ ಫ್ಲೆಕ್ಸ್ ಬೋರ್ಡ್‌ಗಳ ವಿರುದ್ಧ ಕ್ರಮ ಕೈಗೊಳ್ಳಿ – NHAI ಎಚ್ಚರಿಕೆ

(ನ್ಯೂಸ್ ಕಡಬ) newskadaba.com , ಏ.03: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ರಸ್ತೆಬದಿಗಳಲ್ಲಿ ಮಾತ್ರವಲ್ಲದೆ ಫ್ಲೈಓವರ್‌ಗಳಲ್ಲಿಯೂ ಅನಧಿಕೃತ ಫ್ಲೆಕ್ಸ್ ಬೋರ್ಡ್‌ಗಳನ್ನು ಅಳವಡಿಸುವುದರ ವಿರುದ್ಧ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಕಠಿಣ ಎಚ್ಚರಿಕೆ ನೀಡಿದೆ. ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಧಿಕಾರ ತಿಳಿಸಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ NHAI ಯ ಯೋಜನಾ ನಿರ್ದೇಶಕ ಅಬ್ದುಲ್ ಜಾವೇದ್ ಅಜ್ಮಿ, ಹೆದ್ದಾರಿಗಳು, ಫ್ಲೈಓವರ್‌ಗಳು ಮತ್ತು ಜಂಕ್ಷನ್‌ಗಳಲ್ಲಿ ಹಾಕಲಾದ ಫ್ಲೆಕ್ಸ್ ಬೋರ್ಡ್‌ಗಳ ಕುರಿತು ದೂರುಗಳು ದಾಖಲಾಗಿವೆ ಎಂದು ದೃಢಪಡಿಸಿದರು. ಹೆದ್ದಾರಿ ಸಂಬಂಧಿತ

ಮಂಗಳೂರು : ಹೆದ್ದಾರಿಗಳಲ್ಲಿ ಅನಧಿಕೃತ ಫ್ಲೆಕ್ಸ್ ಬೋರ್ಡ್‌ಗಳ ವಿರುದ್ಧ ಕ್ರಮ ಕೈಗೊಳ್ಳಿ – NHAI ಎಚ್ಚರಿಕೆ Read More »

ಕರಾವಳಿ

ಬೆಳ್ತಂಗಡಿ: ಕಾಡಿನಲ್ಲಿ ಹೆಣ್ಣು ಮಗು ಪತ್ತೆ ಪ್ರಕರಣ: ಮಗುವಿನ‌ ಹೆತ್ತವರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com , ಏ.03: ಬೆಳ್ತಂಗಡಿಯ ಬೆಳಾಲು ಗ್ರಾಮದ ಕಾಡಿನಲ್ಲಿ 3 ತಿಂಗಳ ಹೆಣ್ಣು ಮಗುವೊಂದು ಪತ್ತೆಯಾದ ಪ್ರಕರಣಕ್ಕೆ ರೋಚಕ ತಿರುವು ಲಭಿಸಿದೆ. ಮಗು ಬೆಳಾಲು ನಿವಾಸಿಯದ್ದು ಎಂಬುವುದು ಬಹಿರಂಗಗೊಂಡಿದೆ. ಇದೀಗ ಪ್ರಕರಣದಲ್ಲಿ ಮಗುವಿನ ಪೋಷಕರನ್ನು ಧರ್ಮಸ್ಥಳ ಪೊಲೀಸರು ಪತ್ತೆ  ಹಚ್ಚಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮಾಯ ನಿವಾಸಿ ತಿಮ್ಮಪ್ಪ ಗೌಡರ ಮಗ‌ ಧರ್ಮಸ್ಥಳದಲ್ಲಿ ಸೆಕ್ಯೂರಿಟಿ ಕೆಲಸ ಮಾಡುತ್ತಿದ್ದ ರಂಜಿತ್ ಗೌಡ (27) ಮತ್ತು ಧರ್ಮಸ್ಥಳ ಗ್ರಾಮದ ಕೊಲಂಗಾಜೆಯ ಸುಶ್ಮಿತಾ

ಬೆಳ್ತಂಗಡಿ: ಕಾಡಿನಲ್ಲಿ ಹೆಣ್ಣು ಮಗು ಪತ್ತೆ ಪ್ರಕರಣ: ಮಗುವಿನ‌ ಹೆತ್ತವರು ಪೊಲೀಸ್ ವಶಕ್ಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾದ ಸಂಸದ ಕ್ಯಾ.ಚೌಟ

(ನ್ಯೂಸ್ ಕಡಬ) newskadaba.com , ಏ.03: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಮ್ಮ ತಂದೆ-ತಾಯಿ ಜತೆಗೆ ನಿನ್ನೆ ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ್ದಾರೆ. ಭೇಟಿ ಬಳಿಕ ಪ್ರತಿಕ್ರಿಯಿಸಿರುವ ಸಂಸದ ಕ್ಯಾ ಚೌಟ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ನನ್ನ ಹೆತ್ತವರ ಜತೆಗೆ ಭೇಟಿ ಮಾಡುವ ಅವಕಾಶ ಲಭಿಸಿರುವುದು ಬದುಕಿನಲ್ಲಿನ ಬಹಳ ಖುಷಿಯ ಹಾಗೂ ಸಂತೃಪ್ತಿಯ ಭಾವವನ್ನು ಮೂಡಿಸಿದೆ. ಅವರೊಂದಿಗಿನ ಈ ಭೇಟಿ ವೇಳೆ ಹಲವು ವಿಚಾರಗಳ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾದ ಸಂಸದ ಕ್ಯಾ.ಚೌಟ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು : ಮನೆಯ ಕಿಟಿಕಿ ಮುರಿದು 1 ಕೆ.ಜಿ. ಚಿನ್ನಾಭರಣ ಕದ್ದೊಯ್ದ ಕಳ್ಳರು

(ನ್ಯೂಸ್ ಕಡಬ) newskadaba.com , ಏ.02 : ಮನೆಯೊಂದರ ಕಿಟಿಕಿಯನ್ನು ಮುರಿದು ಮನೆಯೊಳಗೆ ಲಾಕರ್‌ನಲ್ಲಿದ್ದ ಸುಮಾರು 1 ಕೆ.ಜಿ. ಚಿನ್ನಾಭರಣ ಕಳವು ಮಾಡಲಾದ ಘಟನೆ ಬಜ್ಪೆಯ ಪೆರ್ಮುದೆ ಪೇಟೆಯಲ್ಲಿ ನಡೆದಿದೆ. ಪೆರ್ಮುದೆಯ ಜಾನ್ವಿನ್‌ ಪಿಂಟೋ  ವರ ಮನೆಯಿಂದ ಈ ಕಳ್ಳತನ ನಡೆದಿದೆ. ಅಜಾನ್ವಿನ್‌ ಪಿಂಟೋ ಹಾಗೂ ಅವರ ಪುತ್ರ ಪ್ರವೀಣ್‌ ಪಿಂಟೋ ಕುವೈಟ್‌ನಲ್ಲಿದ್ದಾರೆ. ಮನೆಯಲ್ಲಿ ಯಾರೂ ಇರಲಿಲ್ಲ. ಇವರ ಮನೆಯ ಸುತ್ತ 16 ಸಿಸಿ ಕ್ಯಾಮೆರಾ ಇದ್ದರೂ, ಕೆಮರಾ ಇಲ್ಲದ ಕಡೆಯಿಂದ ಬಂದು ಕೆಮರಾದ ದಿಕ್ಕನ್ನು ಬದಲಿಸಿ

ಮಂಗಳೂರು : ಮನೆಯ ಕಿಟಿಕಿ ಮುರಿದು 1 ಕೆ.ಜಿ. ಚಿನ್ನಾಭರಣ ಕದ್ದೊಯ್ದ ಕಳ್ಳರು Read More »

ಕರಾವಳಿ

ಬಂಗಾರದ ದರ 10 ಗ್ರಾಮ್‌ಗೆ 91,000 ರೂ

(ನ್ಯೂಸ್ ಕಡಬ) newskadaba.com , ಏ.02  ಹೊಸದಿಲ್ಲಿ: ಬಂಗಾರದ ದರ ಏ. 1ರಂದು ಹೊಸ ದಾಖಲೆಯ ಎತ್ತರಕ್ಕೇರಿದೆ. ಪ್ರತಿ 10 ಗ್ರಾಮ್‌ ಚಿನ್ನದ ದರ ಬರೋಬ್ಬರಿ 91,000 ರೂ.ಗೆ ಜಿಗಿದಿದೆ. ಬೆಂಗಳೂರಿನಲ್ಲಿ 24 ಕ್ಯಾರಟ್‌ನ ಪ್ರತಿ ಗ್ರಾಮ್‌ ಬಂಗಾರದ ದರ 9,284 ರುಪಾಯಿಗೆ ಏರಿಕೆಯಾಗಿದೆ. ಹಾಗಾದರೆ ನಿರಂತರವಾಗಿ ಬಂಗಾರದ ದರ ಏರುತ್ತಿರುವುದು ಏಕೆ? ಇದಕ್ಕೆ ಮೊದಲ ಕಾರಣ ಜಾಗತಿಕ ಆರ್ಥಿಕ ಪರಿಸ್ಥಿತಿಯ ಅನಿಶ್ಚಿತತೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಘೋಷಿಸಿರುವ ಟಾರಿಫ್‌ ವಾರ್ ಜತೆಗೆ ಹಣದುಬ್ಬರ ಕೂಡ

ಬಂಗಾರದ ದರ 10 ಗ್ರಾಮ್‌ಗೆ 91,000 ರೂ Read More »

ಕರಾವಳಿ
Scroll to Top