ಕರಾವಳಿ

ಪುತ್ತೂರು : ಆಟೋ ರಿಕ್ಷಾ-ಕೆಎಸ್ ಆರ್ ಟಿಸಿ ಬಸ್ ನಡುವೆ ಭೀಕರ ಅಪಘಾತ – ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಮಾ. 03 ಬೆಂಗಳೂರು: ಕೆಎಸ್ ಆರ್ ಟಿಸಿ ಬಸ್ಸಿಗೆ ಆಟೋ ರಿಕ್ಷಾವೊಂದು ಡಿಕ್ಕಿ ಹೊಡೆದು ರಿಕ್ಷಾದಲ್ಲಿದ್ದ ಇಬ್ಬರು ಮೃತಪಟ್ಟ ಹಾಗೂ ಚಾಲಕ ಗಂಭೀರಗೊಂಡ ದಾರುಣ ಘಟನೆ ನಗರದ ಹೊರವಲಯದ ಮಂಜಲ್ಪಡ್ಪು ಎಂಬಲ್ಲಿನ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಸಂಜೆ ನಡೆದಿದೆ. ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ಸಿಗೆ ಪುತ್ತೂರು ಕಡೆಯಿಂದ ಕಬಕ ಕಡೆಗೆ ಕೆದಂಬಾಡಿ ಗ್ರಾಮದ ಮಹಮ್ಮದ್ ಎಂಬವರು ಚಲಾಯಿಸಿಕೊಂಡು ಹೋಗುತ್ತಿದ್ದ ರಿಕ್ಷಾ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಟೋ ರಿಕ್ಷಾ ಪಲ್ಟಿಯಾಗಿದ್ದು, ಅದರಲ್ಲಿ […]

ಪುತ್ತೂರು : ಆಟೋ ರಿಕ್ಷಾ-ಕೆಎಸ್ ಆರ್ ಟಿಸಿ ಬಸ್ ನಡುವೆ ಭೀಕರ ಅಪಘಾತ – ಇಬ್ಬರು ಮೃತ್ಯು Read More »

ಕರಾವಳಿ

ಬಂಟ್ವಾಳ: ಪಿಯುಸಿ ವಿದ್ಯಾರ್ಥಿ ನಾಪತ್ತೆ ಪ್ರಕರಣ: ಫರಂಗಿಪೇಟೆ ಜಂಕ್ಷನ್ ನಲ್ಲಿ ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಾ. 01 ಫರಂಗಿಪೇಟೆ ಸಮೀಪದ ಕಿದೆಬೆಟ್ಟು ಪದ್ಮನಾಭ ಮಡಿವಾಳ ಅವರ ಮಗ ಪಿಯುಸಿ ವಿದ್ಯಾರ್ಥಿ ದಿಗಂತ್ ಅವರ ನಿಗೂಡ ನಾಪತ್ತೆಯಾಗಿ 5 ದಿನಗಳು ಕಳೆದರೂ ಪೊಲೀಸ್ ಇಲಾಖೆ ಹಾಗೂ ಸರಕಾರದ ಯಾವುದೇ ರೀತಿಯ ಕಾರ್ಯಾಚರಣೆ ಯಶಸ್ವಿ ಕಾಣದೆ ಇರುವುದರಿಂದ ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಫರಂಗಿಪೇಟೆ ಜಂಕ್ಷನ್ ನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ಬಂಟ್ವಾಳ: ಪಿಯುಸಿ ವಿದ್ಯಾರ್ಥಿ ನಾಪತ್ತೆ ಪ್ರಕರಣ: ಫರಂಗಿಪೇಟೆ ಜಂಕ್ಷನ್ ನಲ್ಲಿ ಬೃಹತ್ ಪ್ರತಿಭಟನೆ Read More »

ಕರಾವಳಿ

ಮುಂದಿನ ಎರಡು ದಿನ ದಕ್ಷಿಣ ಕನ್ನಡ ಉಡುಪಿಯಲ್ಲಿ ಉಷ್ಣ ಅಲೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಫೆ. 28 ಬೆಂಗಳೂರು: ಮುಂದಿನ ಎರಡು ದಿನಗಳ ಕಾಲ ಕರ್ನಾಟಕದ ಕರಾವಳಿಯಲ್ಲಿ ಉಷ್ಣಅಲೆ ಬೀಸಲಿದ್ದು, ಬಿಸಿಲ ಝಳ ವಿಪರೀತ ಹೆಚ್ಚಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಎಚ್ಚರಿಕೆ ನೀಡಿದೆ. ಹಲವಾರು ಪ್ರದೇಶಗಳಲ್ಲಿ ತಾಪಮಾನವು ಈಗಾಗಲೇ 40 ಡಿಗ್ರಿ ಸೆಲ್ಸಿಯಸ್ ದಾಟಿದ್ದು, ಮತ್ತಷ್ಟು ಏರಿಕೆಯಾಗುವ ನಿರೀಕ್ಷೆಯಿರುವುದರಿಂದ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳು ಸಾರ್ವಜನಿಕರನ್ನು ಒತ್ತಾಯಿಸಿದ್ದಾರೆ. ತೀವ್ರವಾದ ಶಾಖದ ಅಲೆಯಿಂದಾಗಿ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ

ಮುಂದಿನ ಎರಡು ದಿನ ದಕ್ಷಿಣ ಕನ್ನಡ ಉಡುಪಿಯಲ್ಲಿ ಉಷ್ಣ ಅಲೆ ಎಚ್ಚರಿಕೆ Read More »

ಕರಾವಳಿ

ಮಂಗಳೂರು : ದಕ್ಷಿಣ ಕನ್ನಡದಲ್ಲಿ 5,000 ಮಕ್ಕಳಲ್ಲಿ ದೃಷ್ಟಿ ಸಮಸ್ಯೆ ಪತ್ತೆ

(ನ್ಯೂಸ್ ಕಡಬ) newskadaba.com ಫೆ. 27 ದಕ್ಷಿಣ ಕನ್ನಡದಲ್ಲಿ 5,000 ಮಕ್ಕಳಲ್ಲಿ ದೃಷ್ಟಿ ಸಮಸ್ಯೆಗಳು ಪತ್ತೆಯಾಗಿದ್ದು, ಈಗ ಪ್ರತಿದಿನ 4,000 ಕ್ಕೂ ಹೆಚ್ಚು ಮಕ್ಕಳು ಕನ್ನಡಕ ಧರಿಸುವುದು ಅನಿವಾರ್ಯವಾಗಿದೆ. ಈ ಸಮಸ್ಯೆ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳ ಮೇಲೆ ಮಾತ್ರವಲ್ಲದೆ ಖಾಸಗಿ ಶಾಲೆಗಳ ವಿದ್ಯಾರ್ಥಿಗಳಲ್ಲಿಯೂ ಸಹ ವ್ಯಾಪಕವಾಗಿದೆ, ಅಲ್ಲಿ ಈ ಸಮಸ್ಯೆ ಎರಡು ಪಟ್ಟು ವ್ಯಾಪಕವಾಗಿದೆ. 6 ರಿಂದ 16 ವರ್ಷ ವಯಸ್ಸಿನ ಮಕ್ಕಳಲ್ಲಿ ದೃಷ್ಟಿ ದೋಷಗಳ ಹರಡುವಿಕೆ ಹೆಚ್ಚಾಗಿದೆ. ಕೆಲವು ಮಕ್ಕಳಿಗೆ ಸೌಮ್ಯ ದೃಷ್ಟಿ ಸಮಸ್ಯೆಗಳಿದ್ದರೆ, ಇತರರಿಗೆ ತಕ್ಷಣದ

ಮಂಗಳೂರು : ದಕ್ಷಿಣ ಕನ್ನಡದಲ್ಲಿ 5,000 ಮಕ್ಕಳಲ್ಲಿ ದೃಷ್ಟಿ ಸಮಸ್ಯೆ ಪತ್ತೆ Read More »

ಕರಾವಳಿ

ಬಿಸಿಗಾಳಿಯ ಭೀತಿ: ಕರಾವಳಿ ಕರ್ನಾಟಕದಲ್ಲಿ ಯೆಲ್ಲೋ ಅಲರ್ಟ್

(ನ್ಯೂಸ್ ಕಡಬ) newskadaba.com ಫೆ. 26: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಬಿಸಿಗಾಳಿ/ ಯಲ್ಲೋ ಎಚ್ಚರಿಕೆಯನ್ನು ನೀಡಿದ್ದು, ತಾಪಮಾನದಲ್ಲಿ ಗಣನೀಯ ಏರಿಕೆಯಾಗುವ ಎಚ್ಚರಿಕೆಯನ್ನು ನೀಡಿದೆ. ಫೆ.26 ಮತ್ತು 27 ರಂದು ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರಕನ್ನಡ  ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರ ವಾತಾವರಣದ ಬಗ್ಗೆ ಎಚ್ಚರಿಕೆ ನೀಡಲಾಗಿದ್ದು, ಗರಿಷ್ಠ ತಾಪಮಾನವು ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಕಳೆದ ಕೆಲವು ದಿನಗಳಿಂದ ಕರಾವಳಿ ಕರ್ನಾಟಕದಲ್ಲಿ ತಾಪಮಾನದಲ್ಲಿ ತೀವ್ರ ಏರಿಕೆಯಾಗಿದೆ. ಫೆಬ್ರವರಿಯಾಗಿದ್ದರೂ, ಸಾಮಾನ್ಯವಾಗಿ ತಂಪಾದ ಹವಾಮಾನದೊಂದಿಗೆ ಸಂಬಂಧಿಸಿದ ಒಂದು ತಿಂಗಳು,

ಬಿಸಿಗಾಳಿಯ ಭೀತಿ: ಕರಾವಳಿ ಕರ್ನಾಟಕದಲ್ಲಿ ಯೆಲ್ಲೋ ಅಲರ್ಟ್ Read More »

ಕರಾವಳಿ

ಮಲಬಾರ್ ಗೋಲ್ಡ್ ಮತ್ತು ಡೈಮಂಡ್ಸ್ ನಿಂದ ವಿದ್ಯಾರ್ಥಿ ವೇತನ ವಿತರಣೆ

(ನ್ಯೂಸ್ ಕಡಬ) newskadaba.com ಫೆ. 26: ಮಂಗಳೂರು: ಮಲಬಾರ್ ಗೋಲ್ಡ್ ಮತ್ತು ಡೈಮಂಡ್ಸ್   ನ ಮಂಗಳೂರು  ಶಾಖೆಯಿಂದ  ಸಿಅಸ್ಆರ್  ಯೋಜನೆಯಡಿ ಜಿಲ್ಲೆಯ ಸರ್ಕಾರಿ ಶಾಲೆಗಳ 462 ಕಾಲೇಜು ವಿದ್ಯಾರ್ಥಿಯನಿಯರಿಗೆ 37.28  ಲಕಷ ರೂಪಾಯಿ ಮೊತ್ತದ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ನಡೆಯಿತು. ‘ಶಿಕ್ಷಣ ಸಬಲೀಕರಣ, ಮಹಿಳಾ ಸಬಲೀಕರಣ’ ಎಂಬ ಧ್ಯೇಯ ವಾಕ್ಯದಡಿ ನಡೆದ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಮಂಗಳೂರು ಸ್ಟೋರ್ ಮುಖ್ಯಸ್ಥ ಶರತ್‌ ಚಂದ್ರನ್, ಸಂಸ್ಥೆಯು ತನ್ನ ಲಾಭಾಂಶದ ಶೇ. 5ರಷ್ಟನ್ನು ಪ್ರತಿವರ್ಷ ಸಿಎಸ್‌ಆರ್ ಯೋಜನೆಯಡಿ

ಮಲಬಾರ್ ಗೋಲ್ಡ್ ಮತ್ತು ಡೈಮಂಡ್ಸ್ ನಿಂದ ವಿದ್ಯಾರ್ಥಿ ವೇತನ ವಿತರಣೆ Read More »

ಕರಾವಳಿ

ಮಂಗಳೂರು- ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯಕ್ಕೆ ವಿಸ್ತರಣೆ

(ನ್ಯೂಸ್ ಕಡಬ) newskadaba.com ಫೆ. 26: ಮಂಗಳೂರು: ದಕ್ಷಿಣ ಕನ್ನಡ  ಜಿಲ್ಲೆಯ ರೈಲು ಪ್ರಯಾಣಿಕರ ಬಹಳ ವರ್ಷಗಳ ಬೇಡಿಕೆಯನ್ನು ಈಡೇರಿಸಲು ರೈಲ್ವೆ ಇಲಾಖೆ ಮುಂದಾಗಿದೆ. ಮಂಗಳೂರು- ಕಬಕ ಪುತ್ತೂರು ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯ ರೋಡ್ ತನಕ ವಿಸ್ತರಣೆ ಮಾಡಲು ರೈಲ್ವೆ ಇಲಾಖೆ ಅನುಮತಿ ನೀಡಿದೆ. ಈ ಕುರಿತು ಕೇಂದ್ರ ರೈಲ್ವೆ ಸಚಿವರಿಗೆ ಹಲವು ಬಾರಿ ಮನವಿ ಮಾಡಲಾಗಿತ್ತು. ಈ ರೈಲು ಸೇವೆ ವಿಸ್ತರಣೆಯಿಂದ ಪ್ರತಿನಿತ್ಯ ಸಂಚಾರ ನಡೆಸುವ ಸಾವಿರಾರು ಜನರಿಗೆ ಅನುಕೂಲವಾಗಲಿದೆ. ಸುಮಾರು 18 ವರ್ಷಗಳಿಂದ ಮಂಗಳೂರು-ಕಬಕ ಪುತ್ತೂರು ಪ್ಯಾಸೆಂಜರ್ ರೈಲನ್ನು

ಮಂಗಳೂರು- ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯಕ್ಕೆ ವಿಸ್ತರಣೆ Read More »

ಕರಾವಳಿ

ಮಲ್ಪೆ: ಸೈಂಟ್ ಮೇರಿಸ್ ದ್ವೀಪದ ಬಳಿ ವಿದೇಶಿ ಮೀನುಗಾರಿಕೆ ಬೋಟ್ ವಶ

(ನ್ಯೂಸ್ ಕಡಬ) newskadaba.com ಫೆ. 25 ಮಲ್ಪೆ: ಮಲ್ಪೆ ಸೈಂಟ್ ಮೇರಿಸ್ ದ್ವೀಪದ ಬಳಿ ಸಂಶಯಾಸ್ಪದವಾಗಿ ಸಂಚರಿಸುತ್ತಿದ್ದ ವಿದೇಶಿ ಬೋಟನ್ನು ಕರಾವಳಿ ಕಾವಲು ಪೊಲೀಸ್ ಹಾಗೂ ಮಂಗಳೂರು ಕೋಸ್ಟ್ ಗಾರ್ಡ್ ವಶಕ್ಕೆ ಪಡೆದುಕೊಂಡಿದ್ದು, ಅದರಲ್ಲಿದ್ದ ಮೂವರು ತಮಿಳುನಾಡು ಮೂಲದ ಮೀನುಗಾರರನ್ನು ಬಂಧಿಸಲಾಗಿದೆ. ಬಂಧಿತರನ್ನು ಭಾರತೀಯ ಮೂಲದ ತಮಿಳುನಾಡು ನಿವಾಸಿಗಳೆನ್ನಲಾದ ಜೇಮ್ಸ್ ಫ್ರಾಂಕ್ಲಿನ್, ರಾಬಿನ್ ಸ್ಟನ್, ಡಿರೋಸ್ ಅಲ್ಫೋನ್ಸ್ ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಪ್ರಕರಣದ ಹೆಚ್ಚಿನ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ.

ಮಲ್ಪೆ: ಸೈಂಟ್ ಮೇರಿಸ್ ದ್ವೀಪದ ಬಳಿ ವಿದೇಶಿ ಮೀನುಗಾರಿಕೆ ಬೋಟ್ ವಶ Read More »

ಕರಾವಳಿ

ಬಂಟ್ವಾಳ: ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಕಾರು; ವೃದ್ಧೆ ಮೃತ್ಯು

(ನ್ಯೂಸ್ ಕಡಬ) newskadaba.com ಫೆ. 25 ಬಂಟ್ವಾಳ: ಮಗನ ಅಂಗಡಿ ಹೊರಗೆ ಕುಳಿತುಕೊಂಡಿದ್ದ ವೃದ್ದೆಯೋರ್ವರಿಗೆ ಕಾರೊಂದು ಢಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಪಾಲೆದಮರ ಎಂಬಲ್ಲಿ ಫೆ.23 ರಂದು ನಡೆದಿದೆ. ವಾಮದಪದವು ನಿವಾಸಿ ಸುಮತಿ(91) ಮೃತಪಟ್ಟ ವೃದ್ದೆ. ಪುತ್ರ ಮಂಜುನಾಥ್ ಅವರ ದಿನಸಿ ಅಂಗಡಿಯ ಹೊರಗಡೆ ಕುರ್ಚಿಯಲ್ಲಿ ಕುಳಿತುಕೊಂಡಿದ್ದರು. ಫೆ.23ರಂದು ಸಾಯಂಕಾಲ ಸುಮಾರು 6.45 ರ ಹೊತ್ತಿಗೆ ಬಂಟ್ವಾಳ ಮಣಿಹಳ್ಳ ಕಡೆಯಿಂದ ವಾಮದಪದವು ಕಡೆಗೆ ಶೋಭಾ ಅವರು ಚಲಾಯಿಸಿಕೊಂಡ ಬಂದ ಕಾರು ನಿಯಂತ್ರಣ ತಪ್ಪಿ ಅಂಗಡಿಯ ಕಡೆಗೆ ನುಗ್ಗಿ

ಬಂಟ್ವಾಳ: ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಕಾರು; ವೃದ್ಧೆ ಮೃತ್ಯು Read More »

ಕರಾವಳಿ

ಬಿಎಲ್‌ಆರ್ ವಿಮಾನ ನಿಲ್ದಾಣದಲ್ಲಿ ವೈದ್ಯಕೀಯ ಸೇವೆಗಳಿಗಾಗಿ ಮಣಿಪಾಲ್ ಆಸ್ಪತ್ರೆಯು ಬಿಐಎಎಲ್ ಜೊತೆ ಪಾಲುದಾರಿಕೆ

(ನ್ಯೂಸ್ ಕಡಬ) newskadaba.com ಫೆ. 25: ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (BLR ವಿಮಾನ ನಿಲ್ದಾಣ) ಹೊಸ ವಿಮಾನ ನಿಲ್ದಾಣ ವೈದ್ಯಕೀಯ ಕೇಂದ್ರವನ್ನು ಸ್ಥಾಪಿಸಲು ಮಣಿಪಾಲ್ ಆಸ್ಪತ್ರೆಯು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (BIAL) ನೊಂದಿಗೆ ಕೈಜೋಡಿಸಿದೆ. ಈ ಸೌಲಭ್ಯವು ಪ್ರಯಾಣಿಕರು ಮತ್ತು ವಿಮಾನ ನಿಲ್ದಾ ಣದ ಸಿಬ್ಬಂದಿಗೆ 24/7 ವೈದ್ಯಕೀಯ ಸಹಾಯವನ್ನು ಒದಗಿಸುತ್ತದೆ. ಈ ಅತ್ಯಾಧುನಿಕ ಸೌಲಭ್ಯವು ದಿನದ 24 ಗಂಟೆಯೂ (24/7) ತೆರೆದಿರುತ್ತದೆ, ಮತ್ತು ವೈದ್ಯ ರೊಂದಿಗೆ ಸಮಾ ಲೋಚನೆ, ಪ್ರಥಮ ಚಿಕಿತ್ಸೆ, ಎಕ್ಸ್-ರೇ, ಅಲ್ಟ್ರಾಸೌಂಡ್

ಬಿಎಲ್‌ಆರ್ ವಿಮಾನ ನಿಲ್ದಾಣದಲ್ಲಿ ವೈದ್ಯಕೀಯ ಸೇವೆಗಳಿಗಾಗಿ ಮಣಿಪಾಲ್ ಆಸ್ಪತ್ರೆಯು ಬಿಐಎಎಲ್ ಜೊತೆ ಪಾಲುದಾರಿಕೆ Read More »

ಕರಾವಳಿ, ಕರ್ನಾಟಕ
Scroll to Top