ಕರಾವಳಿ

ಉಪ್ಪಿನಂಗಡಿ: ನಿಲ್ಲಿಸಿದ್ದ ಗ್ಯಾಸ್ ಟ್ಯಾಂಕರ್ ಏಕಾಏಕಿ ಮುಂದಕ್ಕೆ ಚಲಿಸಿ ಹೆದ್ದಾರಿ ಬದಿಗೆ ಪಲ್ಟಿ

(ನ್ಯೂಸ್ ಕಡಬ)com ಜ.25 ಪ್ರಯಾಗ್ ರಾಜ್: ಚಾಲಕ ನಿಲ್ಲಿಸಿ ಹೋಗಿದ್ದ ಗ್ಯಾಸ್ ಟ್ಯಾಂಕರ್ ಏಕಾಏಕಿ ಮುಂದಕ್ಕೆ ಚಲಿಸಿ ಹೆದ್ದಾರಿ ಬದಿಗೆ ಮಗುಚಿ ಬಿದ್ದ ಘಟನೆ 34 ನೆಕ್ಕಿಲಾಡಿಯ ಬೊಳ್ಳಾರು ಎಂಬಲ್ಲಿನ ಮಂಗಳೂರು- ಬೆಂಗಳೂರು ರಾ ಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ. ಈ ಸಂದರ್ಭ ಟ್ಯಾಂಕರ್ ನಿಂದ ಯಾವುದೇ ಗ್ಯಾಸ್ ಸೋರಿಕೆಯಾಗದ್ದರಿಂದ ಸಂಭವನೀಯ ಅನಾಹುತ ತಪ್ಪಿದಂತಾಗಿದೆ. ಗ್ಯಾಸ್ ತುಂಬಿದ್ದ ಬುಲೆಟ್ ಟ್ಯಾಂಕರ್ ಮಂಗಳೂರಿನಿಂದ ತಮಿಳುನಾಡಿಗೆ ತೆರಳುತ್ತಿತ್ತು. ಈ ನಡುವೆ ಟ್ಯಾಂಕರ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಹೀಗಾಗಿ […]

ಉಪ್ಪಿನಂಗಡಿ: ನಿಲ್ಲಿಸಿದ್ದ ಗ್ಯಾಸ್ ಟ್ಯಾಂಕರ್ ಏಕಾಏಕಿ ಮುಂದಕ್ಕೆ ಚಲಿಸಿ ಹೆದ್ದಾರಿ ಬದಿಗೆ ಪಲ್ಟಿ Read More »

ಕರಾವಳಿ

ಬೆಂಗಳೂರು: HAL ವಿಮಾನ ನಿಲ್ದಾಣವನ್ನು ಮತ್ತೆ ತೆರೆಯಲು ಸಂಸದ ತೇಜಸ್ವಿ ಸೂರ್ಯ ಒತ್ತಾಯ

(ನ್ಯೂಸ್ ಕಡಬ) newskadaba.com ಜ.25 ಬೆಂಗಳೂರು: HAL ವಿಮಾನ ನಿಲ್ದಾಣವನ್ನು ಮತ್ತೆ ತೆರೆಯಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುಬೇಕೆಂದು ಸಂಸದ ತೇಜಸ್ವಿ ಸೂರ್ಯ ನವದೆಹಲಿಯಲ್ಲಿ ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ಮನವಿ ಮಾಡಿದರು. ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ಆಯ್ದ ಸಂಸತ್ ಸದಸ್ಯರನ್ನು ಒಳಗೊಂಡಿದ್ದು, ಕೇಂದ್ರ ಸರ್ಕಾರದ ಆದಾಯ ಮತ್ತು ವೆಚ್ಚವನ್ನು ಲೆಕ್ಕಪರಿಶೋಧನೆ ಕೆಲಸ ಮಾಡುತ್ತದೆ. TNIE ಜೊತೆ ಮಾತನಾಡಿದ ತೇಜಸ್ವಿಸೂರ್ಯ, ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಸೂಕ್ತ ಸ್ಥಳವನ್ನು ಗುರುತಿಸಲು ನಡೆಯುತ್ತಿರುವ ಕ್ರಮದೊಂದಿಗೆ ಈ ಮನವಿಯನ್ನು ಪರಿಗಣಿಸಬಹುದು ಎಂದು ಹೇಳಿದರು. ನಗರದಲ್ಲಿ ಮೂರು

ಬೆಂಗಳೂರು: HAL ವಿಮಾನ ನಿಲ್ದಾಣವನ್ನು ಮತ್ತೆ ತೆರೆಯಲು ಸಂಸದ ತೇಜಸ್ವಿ ಸೂರ್ಯ ಒತ್ತಾಯ Read More »

ಕರಾವಳಿ

ಉಡುಪಿ: ಮಲ್ಪೆಯಲ್ಲಿ 36.9 ಲಕ್ಷ ರೂ. ಮೌಲ್ಯದ ಮೊಬೈಲ್ ಟವರ್ ಕಳವು; ದೂರು ದಾಖಲು

(ನ್ಯೂಸ್ ಕಡಬ) newskadaba.com ಜ.25 : ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಬ್ರಹ್ಮಾವರ ಹೋಬಳಿಯ ಕಲ್ಯಾಣಪುರ ಗ್ರಾಮದಲ್ಲಿ ಮೊಬೈಲ್ ಟವರ್ ಕಳವು ಪ್ರಕರಣವೊಂದು ವರದಿಯಾಗಿದೆ. ಜಿಟಿಎಲ್ ಮೊಬೈಲ್ ಕಂಪನಿಗೆ ಸೇರಿದ ಮೊಬೈಲ್ ಟವರ್ ಅನ್ನು ಕಲ್ಯಾಣಪುರದಲ್ಲಿ ಸ್ಥಾಪಿಸಿದ ಸ್ಥಳದಿಂದ ಕಳವು ಮಾಡಲಾಗಿದೆ ಎಂದು ವರದಿಯಾಗಿದೆ. ಜಿಟಿಎಲ್ ಇನ್‌ಫ್ರಾಸ್ಟ್ರಕ್ಚರ್ ಪ್ರೈವೇಟ್ ಲಿಮಿಟೆಡ್‌ನ ಅಧಿಕೃತ ಅಧಿಕಾರಿ ಸಂದೀಪ್ ಎಂಬವರು ಈ ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಿಸಿದ್ದಾರೆ. 2023ರ ಮಾರ್ಚ್ 31 ರಂದು ಕಂಪನಿಯ ತಂತ್ರಜ್ಞರು ನಡೆಸಿದ ದಿನನಿತ್ಯದ ಪರಿಶೀಲನೆಯ ಸಂದರ್ಭದಲ್ಲಿ ಸರ್ವೆ ನಂಬರ್ 232/2b2-p2

ಉಡುಪಿ: ಮಲ್ಪೆಯಲ್ಲಿ 36.9 ಲಕ್ಷ ರೂ. ಮೌಲ್ಯದ ಮೊಬೈಲ್ ಟವರ್ ಕಳವು; ದೂರು ದಾಖಲು Read More »

ಕರಾವಳಿ

ಉಡುಪಿ: ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿಯ ಬಗ್ಗೆ ಮಾಹಿತಿಗೆ ಪೊಲೀಸರ ಮನವಿ

(ನ್ಯೂಸ್ ಕಡಬ) newskadaba.com ಜ.25 ಉಡುಪಿ: ಐದು ವರ್ಷದ ಬಾಲಕಿಗೆ ಅಪರಿಚಿತ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ಉಡುಪಿ ನಗರದ ಪಿಪಿಸಿ ಸಮೀಪದ ಓಣಿಯಲ್ಲಿ ಗುರುವಾರ ಮಧ್ಯಾಹ್ನ ವೇಳೆ ನಡೆದಿದೆ. ಸುಮಾರು 30 ವರ್ಷದ ಯುವಕ ಈ ಕೃತ್ಯ ಎಸಗಿದ್ದು, ಈ ಬಗ್ಗೆ ಬಾಲಕಿಯ ಪೋಷಕರು ನೀಡಿದ ದೂರಿನಂತೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಕುರಿತು ತ್ವರಿತ ಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ

ಉಡುಪಿ: ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿಯ ಬಗ್ಗೆ ಮಾಹಿತಿಗೆ ಪೊಲೀಸರ ಮನವಿ Read More »

ಕರಾವಳಿ

ಮಂಗಳೂರು: ಸಲೂನ್ ಮೇಲೆ ದಾಳಿ ಪ್ರಕರಣ; ಆರೋಪಿಗಳಿಗೆ ಫೆ.7ರವರೆಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಜ.25 ಬೆಂಗಳೂರು: ನಗರದ ಯುನಿಸೆಕ್ಸ್ ಸಲೂನ್ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಮಂದಿಗೆ ನ್ಯಾಯಾಲಯ ಫೆಬ್ರವರಿ 7ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಯುನಿಸೆಕ್ಸ್ ಸೆಲೂನ್‌ನಲ್ಲಿ ಅನೈತಿಕ ದಂಧೆ ನಡೆಯುತ್ತಿದೆ ಎಂದು ಆರೋಪಿಸಿ ರಾಮಸೇನೆ ಕಾರ್ಯಕರ್ತರು ನಗರ ಗುರುವಾರ ಮಧ್ಯಾಹ್ನ ವೇಳೆ ದಾಳಿ ನಡೆಸಿದ್ದರು. ಸ್ಥಳೀಯ ಮುಖಂಡ ಪ್ರಸಾದ್ ಅತ್ತಾವರ ನೇತೃತ್ವದ ಕಾರ್ಯಕರ್ತರು ಬೆಜೈ ಬಳಿ ಕಾರ್ಯಾಚರಿಸುತ್ತಿದ್ದ ಯುನಿಸೆಕ್ಸ್ ಸಲೂನ್‌ಗೆ ನುಗ್ಗಿ ಸೆಲೂನ್‌ನಲ್ಲಿದ್ದ ಪೀಠೋಪಕರಣಗಳು ಮತ್ತು ಗಾಜುಗಳನ್ನು ಒಡೆದು ಹಾಕಿ

ಮಂಗಳೂರು: ಸಲೂನ್ ಮೇಲೆ ದಾಳಿ ಪ್ರಕರಣ; ಆರೋಪಿಗಳಿಗೆ ಫೆ.7ರವರೆಗೆ ನ್ಯಾಯಾಂಗ ಬಂಧನ Read More »

ಕರಾವಳಿ

ಕಾರ್ಕಳ : ಟೆಂಪೋಗೆ ಸರ್ಕಾರಿ ಬಸ್‌ ಢಿಕ್ಕಿ – 10ಕ್ಕೂ ಹೆಚ್ಚು ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಜ.23  ಕಾರ್ಕಳ: ಕಾರ್ಕಳದ ಸನೂರಿನಲ್ಲಿ ಗುರುವಾರ ಬೆಳಿಗ್ಗೆ ನಿಂತಿದ್ದ ಟೆಂಪೋಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬೆಳಗಾವಿಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಚಿಕ್ಕೋಡಿ ಡಿಪೋದಿಂದ ಹೊರಟಿದ್ದ ಸರ್ಕಾರಿ ಬಸ್ ರಸ್ತೆ ಬದಿಯಲ್ಲಿ ನಿಂತಿದ್ದ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಸನೂರಿನ ರಾಮ ಮಂದಿರದ ಬಳಿ ಈ ಘಟನೆ ನಡೆದಿದೆ. ಪರಿಣಾಮ ಬಸ್‌ನ ಮುಂಭಾಗದ ಭಾಗವು ತೀವ್ರವಾಗಿ ಹಾನಿಗೊಳಗಾಗಿದ್ದು, ಹಲವಾರು ಪ್ರಯಾಣಿಕರು ಮತ್ತು ಚಾಲಕರಿಗೆ ಗಾಯಗಳಾಗಿವೆ. ಸ್ಥಳೀಯರು ತಕ್ಷಣ ಗಾಯಾಳುಗಳನ್ನು

ಕಾರ್ಕಳ : ಟೆಂಪೋಗೆ ಸರ್ಕಾರಿ ಬಸ್‌ ಢಿಕ್ಕಿ – 10ಕ್ಕೂ ಹೆಚ್ಚು ಮಂದಿಗೆ ಗಾಯ Read More »

ಕರಾವಳಿ

ಮರ್ಧಾಳ ಗುಡ್ ಶೆಫರ್ಡ್ ಆಂಗ್ಲಮಾಧ್ಯಮ ಶಾಲೆಯಲ್ಲಿ ಮಕ್ಕಳಿಗೆ ಪರಿಸರ ಕಾಳಜಿ ಮಾಹಿತಿ ಕಾರ್ಯಾಗಾರ ಮಗುವಿನ ಜನುಮದಿನ ಗಿಡನಾಟಿ ಮಾಡಿ ಆಚರಿಸಿ- ವಲಯಾರಣ್ಯಾಧಿಕಾರಿ ಅಪೂರ್ವ ಮಾವಿನಕಟ್ಟೆ ಸಲಹೆ

(ನ್ಯೂಸ್ ಕಡಬ) newskadaba.com ಜ. 23. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕು ಬಿಳಿನೆಲೆ ವಲಯದ ವತಿಯಿಂದ ಮರ್ಧಾಳದ ಗುಡ್ ಶೆಫರ್ಡ್ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳಿಗೆ ‘ಪರಿಸರದ ಮಹತ್ವ- ಮಕ್ಕಳ ಜವಾಬ್ದಾರಿ ಮಾಹಿತಿ’ ಕಾರ್ಯಕ್ರಮವು ನಡೆಯಿತು. ಸುಬ್ರಹ್ಮಣ್ಶ ವಲಯ ಅರಣ್ಶಾಧಿಕಾರಿ ಅಪೂರ್ವ ಮಾವಿನಕಟ್ಟೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯಿಂದ ನಡೆಸಿರುವ ಶಾಲಾ ಮಕ್ಕಳಿಗೆ ಪರಿಸರ ಮಾಹಿತಿ ಕಾರ್ಯಕ್ರಮದಲ್ಲಿ ತಾಲೂಕಿನ ಅನೇಕ ಶಾಲೆಗಳಲ್ಲಿ ಮಾಹಿತಿಗಾರನಾಗಿ ಪಾಲ್ಗೊಂಡಿದ್ದೇನೆ.

ಮರ್ಧಾಳ ಗುಡ್ ಶೆಫರ್ಡ್ ಆಂಗ್ಲಮಾಧ್ಯಮ ಶಾಲೆಯಲ್ಲಿ ಮಕ್ಕಳಿಗೆ ಪರಿಸರ ಕಾಳಜಿ ಮಾಹಿತಿ ಕಾರ್ಯಾಗಾರ ಮಗುವಿನ ಜನುಮದಿನ ಗಿಡನಾಟಿ ಮಾಡಿ ಆಚರಿಸಿ- ವಲಯಾರಣ್ಯಾಧಿಕಾರಿ ಅಪೂರ್ವ ಮಾವಿನಕಟ್ಟೆ ಸಲಹೆ Read More »

ಕರಾವಳಿ

ಬಿಳಿನೆಲೆ ಪ್ರೌಢಶಾಲೆಗೆ ಧರ್ಮಸ್ಥಳ ಯೋಜನೆಯಿಂದ ಡೆಸ್ಕ್ ಮತ್ತು ಬೆಂಚ್ ವಿತರಣೆ ಗುಣಮಟ್ಟದ ವಿದ್ಯಾರ್ಜನೆಗೆ ಪೂಜ್ಯರು ನೀಡಿದ ಡೆಸ್ಕ್ ಬೆಂಚ್ ಸಹಕಾರಿ- ಮೇಲ್ವಿಚಾರಕ ರವಿಪ್ರಸಾದ್ ಆಲಾಜೆ

(ನ್ಯೂಸ್ ಕಡಬ) newskadaba.com ಬಿಳಿನೆಲೆ, ಜ. 23. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಡಬ ತಾಲೂಕು ಬಿಳಿನೆಲೆ ವಲಯ ಇದರ ವತಿಯಿಂದ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಗೆ 10 ಜೊತೆ ಬೆಂಚು ಹಾಗೂ ಡೆಸ್ಕುಗಳನ್ನು ಹಸ್ತಾಂತರಿಸಲಾಯಿತು. ಬಿಳಿನೆಲೆ ವಲಯ ಮೇಲ್ವಿಚಾರಕರಾದ ರವಿಪ್ರಸಾದ್ ಆಲಾಜೆ ಇವರು ಗೋಪಾಲಕೃಷ್ಣ ಪ್ರೌಡಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಶ್ರೀ ಕೃಷ್ಣ ಶರ್ಮ ಹಾಗೂ ಶಾಲಾ ಮುಖ್ಯ ಗುರುಗಳಾದ ಶ್ರೀ ಸತ್ಯ ಶಂಕರ ಭಟ್ ಇವರಿಗೆ ಡೆಸ್ಕ್ ಬೆಂಚ್ ಹಸ್ತಾಂತರಿಸಿ ಮಾತನಾಡಿ, ಧರ್ಮಸ್ಥಳದ ಧರ್ಮಾಧಿಕಾರಿ

ಬಿಳಿನೆಲೆ ಪ್ರೌಢಶಾಲೆಗೆ ಧರ್ಮಸ್ಥಳ ಯೋಜನೆಯಿಂದ ಡೆಸ್ಕ್ ಮತ್ತು ಬೆಂಚ್ ವಿತರಣೆ ಗುಣಮಟ್ಟದ ವಿದ್ಯಾರ್ಜನೆಗೆ ಪೂಜ್ಯರು ನೀಡಿದ ಡೆಸ್ಕ್ ಬೆಂಚ್ ಸಹಕಾರಿ- ಮೇಲ್ವಿಚಾರಕ ರವಿಪ್ರಸಾದ್ ಆಲಾಜೆ Read More »

ಕರಾವಳಿ

ಸುಳ್ಯ : ಕಾರು ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಜ.22 : ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೆರಾಜೆ ಸಮೀಪದ ಕಲ್ವೆರ್ಪೆಯಲ್ಲಿ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಬುಧವಾರ ವರದಿಯಾಗಿದೆ. ಬೈಕ್ ಮಡಿಕೇರಿ ಕಡೆಯಿಂದ ಮಂಗಳೂರು ಕಡೆ ತೆರಳುತ್ತಿತ್ತು. ಕಾರು ಸುಳ್ಯದಿಂದ ಸಂಪಾಜೆ ಕಡೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ‌. ಗಾಯಾಳು ಬೈಕ್ ಸವಾರನನ್ನು ಅಸ್ಪತ್ರೆಗೆ ಕರೆದೊಯ್ಯಲಾಗಿದೆ.ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

ಸುಳ್ಯ : ಕಾರು ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಗಂಭೀರ Read More »

ಕರಾವಳಿ

ಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ; ಸ್ಥಳ ಮಹಜರು ವೇಳೆ ಪರಾರಿಗೆ ಯತ್ನ, ಆರೋಪಿ ಕಾಲಿಗೆ ಗುಂಡೇಟು

(ನ್ಯೂಸ್ ಕಡಬ) newskadaba.com ಜ.22 :  ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಲ್ಲಿ ಬಂಧಿಸಲ್ಪಟ್ಟ ಆರೋಪಿಗಳನ್ನು ಮಂಗಳೂರಿಗೆ ಕರೆತಂದು ಸ್ಥಳ ಮಹಜರು ನಡೆಸುವುದಕ್ಕಾಗಿ ಉಳ್ಳಾಲಕ್ಕೆ ಕರೆದೊಯ್ಯಲಾಗಿತ್ತು. ಈ ವೇಳೆ ಪರಾರಿಯಾಗಲು ಯತ್ನಿಸಿದ ಆರೋಪಿ ಕಣ್ಣನ್ ಮಣಿ (35) ಎಂಬಾತನ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಮೂವರು ಪೊಲೀಸರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ದರೋಡೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ತಂಡವು ಜನವರಿ 20 ರಂದು ತಮಿಳುನಾಡಿನಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದು, ಆರೋಪಿಗಳಲ್ಲಿ ಒಬ್ಬರಾದ ಮುಂಬೈನ

ಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ; ಸ್ಥಳ ಮಹಜರು ವೇಳೆ ಪರಾರಿಗೆ ಯತ್ನ, ಆರೋಪಿ ಕಾಲಿಗೆ ಗುಂಡೇಟು Read More »

ಕರಾವಳಿ
Scroll to Top