ಕರಾವಳಿ

ಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ; ಸ್ಥಳ ಮಹಜರು ವೇಳೆ ಪರಾರಿಗೆ ಯತ್ನ, ಆರೋಪಿ ಕಾಲಿಗೆ ಗುಂಡೇಟು

(ನ್ಯೂಸ್ ಕಡಬ) newskadaba.com ಜ.22 :  ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಲ್ಲಿ ಬಂಧಿಸಲ್ಪಟ್ಟ ಆರೋಪಿಗಳನ್ನು ಮಂಗಳೂರಿಗೆ ಕರೆತಂದು ಸ್ಥಳ ಮಹಜರು ನಡೆಸುವುದಕ್ಕಾಗಿ ಉಳ್ಳಾಲಕ್ಕೆ ಕರೆದೊಯ್ಯಲಾಗಿತ್ತು. ಈ ವೇಳೆ ಪರಾರಿಯಾಗಲು ಯತ್ನಿಸಿದ ಆರೋಪಿ ಕಣ್ಣನ್ ಮಣಿ (35) ಎಂಬಾತನ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಮೂವರು ಪೊಲೀಸರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ದರೋಡೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ತಂಡವು ಜನವರಿ 20 ರಂದು ತಮಿಳುನಾಡಿನಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದು, ಆರೋಪಿಗಳಲ್ಲಿ ಒಬ್ಬರಾದ ಮುಂಬೈನ […]

ಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ; ಸ್ಥಳ ಮಹಜರು ವೇಳೆ ಪರಾರಿಗೆ ಯತ್ನ, ಆರೋಪಿ ಕಾಲಿಗೆ ಗುಂಡೇಟು Read More »

ಕರಾವಳಿ

ಧರ್ಮಸ್ಥಳ ಕ್ಷೇತ್ರ, ಧರ್ಮಾಧಿಕಾರಿ ಕುಟುಂಬ ವಿರುದ್ಧ ಮಾನಹಾನಿ ಹೇಳಿಕೆ ನೀಡದಂತೆ ಹೈಕೋರ್ಟ್ ಆದೇಶ

(ನ್ಯೂಸ್ ಕಡಬ) newskadaba.com ಜ.22 ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಅವರ ಕುಟುಂಬ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಬಂಧಿಸಿದ ಸಂಸ್ಥೆಗಳ ವಿರುದ್ಧ ಯಾವುದೇ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಅವರ ಅನುಯಾಯಿಗಳಿಗೆ ಸೂಚಿಸಿ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಸೋಮವಾರ, ನ್ಯಾ. ಆರ್. ದೇವದಾಸ್ ಅವರ ಏಕಸದಸ್ಯ ಪೀಠ ಈ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ಸಭೆಗಳಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಡಾ. ಡಿ.

ಧರ್ಮಸ್ಥಳ ಕ್ಷೇತ್ರ, ಧರ್ಮಾಧಿಕಾರಿ ಕುಟುಂಬ ವಿರುದ್ಧ ಮಾನಹಾನಿ ಹೇಳಿಕೆ ನೀಡದಂತೆ ಹೈಕೋರ್ಟ್ ಆದೇಶ Read More »

ಕರಾವಳಿ

ಸುಳ್ಯ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 21ನೇ ಆರೋಪಿಯನ್ನು ಬಂಧಿಸಿದ ಎನ್ ಐಎ

(ನ್ಯೂಸ್ ಕಡಬ) newskadaba.com ಜ.22 ಸುಳ್ಯ : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದು, ಪ್ರಕರಣದಲ್ಲಿ ಬಂಧಿತರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಬಂಧಿತ ವ್ಯಕ್ತಿ ಅತೀಕ್ ಅಹ್ಮದ್ ನನ್ನು ಜನವರಿ 20 ರಂದು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಈಗ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸದಸ್ಯ ಎಂದು ಗುರುತಿಸಲಾದ ಅಹ್ಮದ್, ಜುಲೈ 2022 ರಲ್ಲಿ

ಸುಳ್ಯ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 21ನೇ ಆರೋಪಿಯನ್ನು ಬಂಧಿಸಿದ ಎನ್ ಐಎ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಅಮೃತ್ ಭಾರತ್ ಯೋಜನೆಯಲ್ಲಿ ಮಂಗಳೂರು-ಸುಬ್ರಹ್ಮಣ್ಯ ರೈಲ್ವೇ ಹಳಿ ನಡುವೆ ನಿರ್ಮಾಣವಾಗುತ್ತಿವೆ ನಾಲ್ಕು ಮೇಲ್ಸೇತುವೆಗಳು

(ನ್ಯೂಸ್ ಕಡಬ) newskadaba.com ಜ.21 ಕಡಬ: ಕೇಂದ್ರ ಸರಕಾರದ ಅಮೃತ್ ಭಾರತ್ ವಿಶೇಷ ಯೋಜನೆಯ ರೈಲ್ವೇ ಮೈಸೂರು ವಿಭಾಗದ ಮಂಗಳೂರು -ಸುಬ್ರಹ್ಮಣ್ಯ ಮಧ್ಯೆ ನಾಲ್ಕು ಕಡೆ ರೈಲ್ವೇ  ಮೇಲ್ಸೇತುವೆ ಕಾಮಗಾರಿ ನಡೆಯುತ್ತಿದ್ದು, ಮಾರ್ಚ್ ಅಂತ್ಯದೊಳಗೆ ಕಾಮಗಾರಿ ಮುಗಿಯಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ೨೦೨೪ ನೇ ಫೆಬ್ರವರಿ ೨೬ ರಂದು ದೇಶಾದ್ಯಾಂತ  ನನ್ನ ಕುಟುಂಬ ಸದಸ್ಯರಿಗೆ ೪೧ ಸಾವಿರ ಕೋಟಿ ರೂ ಮೌಲ್ಯದ ರೈಲ್ವೇ ಯೋಜನೆೆಗಳ ಉಡುಗೊರೆ ಎನ್ನುವ ಘೋಷಣೆಯೊಂದಿಗೆ  ಯೋಜನೆಗಳಿಗೆ ಚಾಲನೆ ನೀಡಿದ್ದರು. ಅಮೃತ ಭಾರತ್ ಸ್ಪೆಷಲ್

ಅಮೃತ್ ಭಾರತ್ ಯೋಜನೆಯಲ್ಲಿ ಮಂಗಳೂರು-ಸುಬ್ರಹ್ಮಣ್ಯ ರೈಲ್ವೇ ಹಳಿ ನಡುವೆ ನಿರ್ಮಾಣವಾಗುತ್ತಿವೆ ನಾಲ್ಕು ಮೇಲ್ಸೇತುವೆಗಳು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಾಸರಗೋಡು: ಕಯ್ಯಾರ್ ಕ್ರಿಸ್ತ ರಾಜ ಚರ್ಚ್ ನ ನೂತನ ಕಟ್ಟಡದ ಶಿಲಾನ್ಯಾಸ

(ನ್ಯೂಸ್ ಕಡಬ) newskadaba.com ಜ.18 ಮಂಗಳೂರು: ಕಯ್ಯಾರ್ ಕ್ರಿಸ್ತ ರಾಜ ಚರ್ಚ್ ನ ನೂತನ ಕಟ್ಟಡಕ್ಕೆ ಶನಿವಾರ (ಇಂದು) ಬೆಳಿಗ್ಗೆ ಕಾಸರಗೋಡು ವಲಯ ವಿಗಾರ್ ವಾರ್ ಫಾ.ಸ್ಟ್ಯಾನಿ ಪಿರೇರಾ ಶಿಲಾನ್ಯಾಸ ನೆರವೇರಿಸಿದರು. ವಾಸ್ತು ಶಿಲ್ಪಿ ಅನಿಲ್ ಲೋಬೊ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಕಯ್ಯಾರ್ ಚರ್ಚ್ ಧರ್ಮಗುರು ಫಾ. ವಿಶಾಲ್ ಮೋನಿಸ್, ಪಾಲನಾ ಸಮಿತಿ ಉಪಾಧ್ಯಕ್ಷ ರೋಶನ್ ಡಿ’ಸೋಜ, ಕಾರ್ಯದರ್ಶಿ ಝೀನಾ ಡಿ’ಸೋಜ, ಸಿಸ್ಟರ್ ಜಾಸ್ಮಿನ್ ಲೂವಿಸ್, ಸಿಸ್ಟರ್ ರೀನಾ ಸೆರಾವೊ, ಅಲ್ಫೋನ್ಸ್ ಡಿ’ಸೋಜ ಹಾಗೂ ಚರ್ಚ್ ಪಾಲನಾ ಸಮಿತಿ ಸದಸ್ಯರು

ಕಾಸರಗೋಡು: ಕಯ್ಯಾರ್ ಕ್ರಿಸ್ತ ರಾಜ ಚರ್ಚ್ ನ ನೂತನ ಕಟ್ಟಡದ ಶಿಲಾನ್ಯಾಸ Read More »

ಕರಾವಳಿ

ಮಂಗಳೂರು : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ – ಆರೋಪಿಗೆ 20 ವರ್ಷ ಜೈಲು ಶಿಕ್ಷೆ, 1 ಲಕ್ಷ ರೂ. ದಂಡ

(ನ್ಯೂಸ್ ಕಡಬ) newskadaba.com ಜ.18 ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಅದನ್ನು ವೀಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ್ದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್ಟಿಎಸ್‌ಸಿ-2 ಪೋಕ್ಸೋ ವಿಶೇಷ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶ ಮಾನು ಕೆ.ಎಸ್‌. ಅವರು 20 ವರ್ಷಗಳ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಹೆಬ್ರಿ ಮುದ್ರಾಡಿಯ ಅಶ್ವತ್ಥ್ (22) ಶಿಕ್ಷೆಗೊಳಗಾದ ಆರೋಪಿ. ಇನ್‌ಸ್ಟಾಗ್ರಾಂ ಮೂಲಕ ಬಾಲಕಿಯ ಸ್ನೇಹ ಬೆಳೆಸಿದ ಅಶ್ವತ್ಥ್

ಮಂಗಳೂರು : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ – ಆರೋಪಿಗೆ 20 ವರ್ಷ ಜೈಲು ಶಿಕ್ಷೆ, 1 ಲಕ್ಷ ರೂ. ದಂಡ Read More »

ಕರಾವಳಿ

ಮಂಗಳೂರು: ಸ್ಕೂಟರ್-ಟೆಂಪೊ ನಡುವೆ ಅಪಘಾತ; ಸವಾರ ಸಾವು

(ನ್ಯೂಸ್ ಕಡಬ) newskadaba.com: ಸ್ಕೂಟರ್ ಮತ್ತು ಟೆಂಪೊ ನಡುವೆ ಅಪಘಾತ ಸಂಭವಿಸಿ, ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಡುಪದವು ಬಳಿ ಇಂದು ಬೆಳಗ್ಗೆ ನಡೆದಿದೆ. ಕೊಣಾಜೆ ಗ್ರಾಮದ ನಡುಪದವು ಕಾಟುಕೋಡಿ ನಿವಾಸಿ ಮೊಯ್ದೀನ್ ಕುಂಞಿ ಬಾವು ಎಂಬವರ ಪುತ್ರ ಅಬೂಬಕರ್ ಸಿದ್ದೀಕ್ ರಝ್ವಿ(22) ಮೃತಪಟ್ಟವರು. ದೇರಳಕಟ್ಟೆ ಕಡೆಯಿಂದ ತೆರಳುತ್ತಿದ್ದ ಸ್ಕೂಟರ್ ಮತ್ತು ಮುಡಿಪು ಕಡೆಯಿಂದ ತೊಕ್ಕೊಟ್ಟಿನತ್ತ ಬರುತ್ತಿದ್ದ ಟೆಂಪೊ ನಡುವೆ ಈ ಅಪಘಾತ ನಡೆದಿದೆ. ಅಪಘಾತದ ತೀವ್ರತೆಗೆ ಸ್ಕೂಟರ್ ಭಾಗಶಃ ಟೆಂಪೊದೊಳಗೆ ನುಗ್ಗಿದ

ಮಂಗಳೂರು: ಸ್ಕೂಟರ್-ಟೆಂಪೊ ನಡುವೆ ಅಪಘಾತ; ಸವಾರ ಸಾವು Read More »

ಕರಾವಳಿ

ಮಂಗಳೂರು: ಕೋಟೆಕರ್ ಬ್ಯಾಂಕ್ ದರೋಡೆ: ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ತುರ್ತು ಸಭೆ- ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ

(ನ್ಯೂಸ್ ಕಡಬ) newskadaba.com: ಕೋಟೆಕರ್ ಉಲ್ಲಾಳದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿಗಳು ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ ನೀಡಿದರು. ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಪಶ್ಚಿಮ ರೇಂಜ್ ನ ಐಜಿ ಅಮಿತ್, ಪೊಲೀಸ್ ಆಯುಕ್ತ ಸಿಂಗ್, ಅನುಪಮ್ ಅಗರವಾಲ್, ಎಸ್.ಪಿ ಯತೀಶ್ , ಡಿವೈಎಸ್ ಪಿ ಸೇರಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಘಟನೆಯ ಕುರಿತಂತೆ ಸಮಗ್ರ ಮಾಹಿತಿ ಪಡೆದ

ಮಂಗಳೂರು: ಕೋಟೆಕರ್ ಬ್ಯಾಂಕ್ ದರೋಡೆ: ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ತುರ್ತು ಸಭೆ- ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ Read More »

ಕರಾವಳಿ

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಸಿಎಂ ಸಿದ್ದರಾಮಯ್ಯ ಶಂಕು ಸ್ಥಾಪನೆ

(ನ್ಯೂಸ್ ಕಡಬ) newskadaba.com ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಬಜೆಟ್ ನಲ್ಲಿ ಘೋಷಿಸಿದ್ದಂತೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಶುಕ್ರವಾರ ಶಂಕು ಸ್ಥಾಪನೆ ನೆರವೇರಿಸಿ ಮತ್ತೊಮ್ಮೆ ನುಡಿದಂತೆ ನಡೆದ ಮುಖ್ಯಮಂತ್ರಿ ಎನ್ನುವ ಹೆಗ್ಗಳಿಕೆಯನ್ನು ಮುಂದುವರೆಸಿದ್ದಾರೆ. ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, ರಾಜೀವ್ ಗಾಂಧಿ ವಿವಿ, ಏಷ್ಯಾದ ಅತ್ಯಂತ ದೊಡ್ಡ ಆರೋಗ್ಯ ವಿಶ್ವ ವಿದ್ಯಾಲಯ ಆಗಿದೆ. 3.5 ಲಕ್ಷ ವೈದ್ಯ ವಿದ್ಯಾರ್ಥಿಗಳಿರುವ ಅತ್ಯಂತ ದೊಡ್ಡ ಆರೋಗ್ಯ ವಿವಿ ಇದಾಗಿದೆ. ಆದ್ದರಿಂದ ಗುಣಮಟ್ಟದ ವೈದ್ಯರನ್ನು

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಸಿಎಂ ಸಿದ್ದರಾಮಯ್ಯ ಶಂಕು ಸ್ಥಾಪನೆ Read More »

ಕರಾವಳಿ, ಕರ್ನಾಟಕ

ತಾರಸಿಯಿಂದ ಬಿದ್ದು ವಿದ್ಯಾರ್ಥಿ ದಾರುಣ ಸಾವು

(ನ್ಯೂಸ್ ಕಡಬ) newskadaba.com ಮಣಿಪಾಲ: ಮಣಿಪಾಲದ ಖಾಸಗಿ ಸಂಸ್ಥೆಯೊಂದರ ಮೂರನೇ ವರ್ಷದ ಬಿಕಾಂ ವಿದ್ಯಾರ್ಥಿಯೊಬ್ಬ ಸಂಗೀತ ಕೇಳುತ್ತಾ ತಾರಸಿಯ ಗೋಡೆಯಿಂದ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ವಿದ್ಯಾರ್ಥಿ ಕಾರ್ತಿಕ್ (21) ಮೃತ ದುರ್ದೈವಿ. ಉಡುಪಿಯ ಬಡಗುಬೆಟ್ಟು ಗ್ರಾಮದ ನಿವಾಸಿ ರಶ್ಮಿತಾ (27) ಎಂಬುವರು ನೀಡಿದ ದೂರಿನಂತೆ ಅವರ ಕಿರಿಯ ಸಹೋದರ ಕಾರ್ತಿಕ್ ದಾರುಣವಾಗಿ ಸಾವನ್ನಪ್ಪಿದ್ದಾನೆ. ಕಾರ್ತಿಕ್‌ಗೆ ಅಧ್ಯಯನದ ನಂತರ ಸಂಗೀತ ಕೇಳುವುದು ಅಭ್ಯಾಸವಿತ್ತು ಎಂದು ಅವರು ತಿಳಿಸಿದ್ದಾರೆ. ಜನವರಿ 12 ರಂದು, ರಾತ್ರಿ ಊಟದ ನಂತರ,

ತಾರಸಿಯಿಂದ ಬಿದ್ದು ವಿದ್ಯಾರ್ಥಿ ದಾರುಣ ಸಾವು Read More »

ಕರಾವಳಿ
Scroll to Top