ಕರಾವಳಿ

ಕ್ಯಾ. ಬ್ರಿಜೇಶ್ ಚೌಟ ಸಾರಥ್ಯದ ಮಂಗಳೂರು ಕಂಬಳಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಡಿ. 28: ಕ್ಯಾ. ಬ್ರಿಜೇಶ್ ಚೌಟ ಸಾರಥ್ಯದಲ್ಲಿ ನಡೆಯುವ 8 ನೇ ವರ್ಷದ ರಾಮ ಲಕ್ಷ್ಮಣ ಕಂಬಳಕ್ಕೆ ಕ್ಯಾಪ್ಟನ್ ಪ್ರಾಂಜಲ್ ಅವರ ತಂದೆ ಎಂಆರ್ ಪಿಎಲ್ ನ ಮಾಜಿ ಆಡಳಿತ ನಿರ್ದೇಶಕ ವೆಂಕಟೇಶ್ ಅವರು ಶನಿವಾರ ನಗರದ ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕರೆಯಲ್ಲಿ ಚಾಲನೆ ನೀಡಿದರು. ಮಂಗಳೂರು ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್ ಧರ್ಮ, ಶ್ರೀ ಬ್ರಹ್ಮಬೈದರ್ಕಳ ಗರೋಡಿಯ ಮೋಕ್ತೆಸರ ಚಿತ್ತರಂಜನ ಗರೋಡಿ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, […]

ಕ್ಯಾ. ಬ್ರಿಜೇಶ್ ಚೌಟ ಸಾರಥ್ಯದ ಮಂಗಳೂರು ಕಂಬಳಕ್ಕೆ ಚಾಲನೆ Read More »

ಕರಾವಳಿ

ಮಂಗಳೂರು: ಆರ್‌ಪಿಸಿ ಆನ್‌ಲೈನ್ ವಂಚನೆಗೆ ಬಲಿಯಾದ 24 ವರ್ಷದ ಯುವಕ

(ನ್ಯೂಸ್ ಕಡಬ) newskadaba.com ಡಿ. 28: ದಕ್ಷಿಣ ಕನ್ನಡದಲ್ಲಿ ಇತ್ತೀಚಿನ ಹಗರಣವು RPC ಅಪ್ಲಿಕೇಶನ್ ಅನ್ನು ಒಳಗೊಂಡಿತ್ತು, ಇದು ಬಳಕೆದಾರರಿಗೆ ವೀಡಿಯೊಗಳನ್ನು ನೋಡುವ ಮೂಲಕ ಹಣ ಗಳಿಸುವ ಅವಕಾಶವನ್ನು ನೀಡುತ್ತದೆ. ಆರಂಭದಲ್ಲಿ, ಹಲವಾರು ವ್ಯಕ್ತಿಗಳು ಭಾಗವಹಿಸಿದರು ಮತ್ತು ಸ್ವಲ್ಪ ಹಣವನ್ನು ಗಳಿಸಿದರು. ಆದಾಗ್ಯೂ, ಸಂಘಟಿತ ಕಾರ್ಯಕ್ರಮಗಳು ಮತ್ತು ಲಾಭದಾಯಕ ಆದಾಯದ ಭರವಸೆಗಳೊಂದಿಗೆ ಯೋಜನೆಯು ಶೀಘ್ರದಲ್ಲೇ ದೊಡ್ಡ ಜಾಲವಾಗಿ ಬೆಳೆಯಿತು. ಇದರಿಂದ ಹಲವರು ಕೋಟ್ಯಂತರ ರೂ.ಗಳನ್ನು ಈ ಹಗರಣದಲ್ಲಿ ತೊಡಗಿಸಿದ್ದಾರೆ. ಡಿ.24ರಂದು ಆರ್ ಪಿಸಿ ಆ್ಯಪ್ ಸ್ಥಗಿತಗೊಂಡಿದ್ದು, ಅದೇ

ಮಂಗಳೂರು: ಆರ್‌ಪಿಸಿ ಆನ್‌ಲೈನ್ ವಂಚನೆಗೆ ಬಲಿಯಾದ 24 ವರ್ಷದ ಯುವಕ Read More »

ಕರಾವಳಿ

ಪುತ್ತೂರು: ಕಾರು ಹೊಂಡಕ್ಕೆ ಉರುಳಿ ಬಿದ್ದು ಮೂವರು ದಾರುಣ ಮೃತ್ಯು

(ನ್ಯೂಸ್ ಕಡಬ) newskadaba.com ಡಿ. 28: ಕಾರೊಂದು ಹೊಂಡಕ್ಕೆ ಉರುಳಿ ಬಿದ್ದು ಮೂವರು ಮೃತಪಟ್ಟ ಘಟನೆ ಪರ್ಲಡ್ಕ ಜಂಕ್ಷನ್ ಬಳಿಯ ಬೈಪಾಸ್ ರಸ್ತೆಯಲ್ಲಿ ಸಂಭವಿಸಿದೆ. ಸುಳ್ಯ ಜಟ್ಟಿಪಳ್ಳ ನಿವಾಸಿಗಳಾದ ಅಣ್ಣು ನಾಯ್ಕ್, ಚಿದಾನಂದ್, ರಮೇಶ್ ನಾಯ್ಕ್ ಮೃತರು ಎಂದು ತಿಳಿದು ಬಂದಿದೆ. ಇವರು ಸುಳ್ಯದಿಂದ ಪುತ್ತೂರಿನ ಪುಣಚಕ್ಕೆ ಆಗಮಿಸುತ್ತಿದ್ದ ವೇಳೆ ಬೆಳಗ್ಗಿನ ಜಾವ ಪರ್ಲಡ್ಕದಲ್ಲಿ ಈ ಅಪಘಾತ ಸಂಭವಿಸಿದೆ. ನಿದ್ದೆಯ ಮಂಪರಿನಲ್ಲಿ ಅಪಘಾತ ನಡೆದಿರುವುದಾಗಿ ಶಂಕೆ ವ್ಯಕ್ತಪಡಿಸಲಾಗಿದೆ. ಇನ್ನು ಬೈಪಾಸ್ ರಸ್ತೆಯ ಪರ್ಲಡ್ಕ ಜಂಕ್ಷನ್ ಬಳಿಯಲ್ಲೇ ಘಟನೆ

ಪುತ್ತೂರು: ಕಾರು ಹೊಂಡಕ್ಕೆ ಉರುಳಿ ಬಿದ್ದು ಮೂವರು ದಾರುಣ ಮೃತ್ಯು Read More »

ಕರಾವಳಿ

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಶ್ರೀರಾಮಚಂದ್ರ ಪ್ರೌಢಶಾಲೆಗೆ ಡೆಸ್ಕ್ ಹಾಗೂ ಬೆಂಚ್ ವಿತರಣೆ

(ನ್ಯೂಸ್ ಕಡಬ) newskadaba.com ಡಿ. 27. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ತಾಲೂಕಿನ ಪೆರ್ನೆ ವಲಯದ ‌ಪೆರ್ನೆ ಅಯೋಧ್ಯಾ ನಗರ ಶ್ರೀ ರಾಮಚಂದ್ರ ಪ್ರೌಢ ಶಾಲೆಯಲ್ಲಿ ಯೋಜನೆಯ ವತಿಯಿಂದ ಡೆಸ್ಕ್ ಹಾಗೂ ಬೆಂಚ್ ವಿತರಣೆ ಕಾರ್ಯಕ್ರಮ ನಡೆಯಿತು. ಇದರ ಉದ್ಘಾಟನೆಯನ್ನು ವಲಯಾಧ್ಯಕ್ಷರಾದ ರಾಬರ್ಟ್ ಫೆರ್ನಾಂಡಿಸ್ ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿದರು. ದಕ್ಷಿಣ ಕನ್ನಡ-2 ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್ ರವರು ಶಾಲಾ ಮಕ್ಕಳಿಗೆ ಡೆಸ್ಕ್ ಬೆಂಚ್ ಗಳನ್ನು ಹಸ್ತಾಂತರಿಸಿ “ಪೂಜ್ಯರ ಕನಸಿನಂತೆ ಗ್ರಾಮೀಣ ಪ್ರದೇಶದ

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಶ್ರೀರಾಮಚಂದ್ರ ಪ್ರೌಢಶಾಲೆಗೆ ಡೆಸ್ಕ್ ಹಾಗೂ ಬೆಂಚ್ ವಿತರಣೆ Read More »

ಕರಾವಳಿ

ಕಾಸರಗೋಡು: ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಡಿ. 26 ಕಾಸರಗೋಡು : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನೀರ್ಚಾಲು ಸಮೀಪದ ಮಾನ್ಯ ದಲ್ಲಿ ನಡೆದಿದೆ. ಮಾನ್ಯ ಅಯ್ಯಾಂಗಾವು ನ ವಿಜೇಶ್ (38) ಮೃತ ಪಟ್ಟವರು. ಮನೆಯ ಕೋಣೆ ಯಲ್ಲಿ ಗುರುವಾರ ಬೆಳಿಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಸ್ಪತ್ರೆಗೆ ತಲಪಿಸಿದರೂ ಆಗಲೇ ಮೃತಪಟ್ಟಿದ್ದರು. ಬದಿಯಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

ಕಾಸರಗೋಡು: ಯುವಕ ಆತ್ಮಹತ್ಯೆ Read More »

ಕರಾವಳಿ

ಕುಂದಾಪುರ: ಹುಟ್ಟೂರಿಗೆ ತಲುಪಿದ “ಯೋಧ ಅನೂಪ್ ಪೂಜಾರಿ”ಯವರ ಪಾರ್ಥಿವ ಶರೀರ

(ನ್ಯೂಸ್ ಕಡಬ)com ಡಿ. 26 ಕುಂದಾಪುರ: ಜಮ್ಮು-ಕಾಶ್ಮೀರದಲ್ಲಿ ನಡೆದ ದುರಂತದಲ್ಲಿ ಹುತಾತ್ಮರಾದ ಕುಂದಾಪುರ ಸಮೀಪದ ಬೀಜಾಡಿಯಯೋಧ ಅನೂಪ್ ಪೂಜಾರಿ ಪಾರ್ಥಿವ ಶರೀರವು ಇಂದು ಅವರ ಹುಟ್ಟೂರಿಗೆ ತಲುಪಿದೆ. ಅನೂಪ್ ಪೂಜಾರಿ ಅವರ ಪಾರ್ಥಿವ ಶರೀರ ಉಡುಪಿಯಿಂದ ಬೆಳಗ್ಗೆ ಬೀಜಾಡಿಗೆ ರವಾನೆ ಮಾಡಲಾಯಿತು. ತೆಕ್ಕಟ್ಟೆಯಿಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅನೂಪ್ ಅಂತಿಮ ಯಾತ್ರೆ ನಡೆಯಲಿದೆ. ಅಂತಿಮ ಯಾತ್ರೆಯಲ್ಲಿ ಸಾವಿರಾರು ಜನ ಭಾಗಿಯಾಗುವ ನಿರೀಕ್ಷೆ ಇದೆ. ಅಂತಿಮ ಯಾತ್ರೆ ಮುಗಿಸಿ ಹುತಾತ್ಮ ಯೋಧನ ದೇಹವನ್ನು ಕುಟುಂಬಕ್ಕೆ ಹಸ್ತಾಂತರ ಮಾಡಲಾಗುವುದು. ಬೀಜಾಡಿ

ಕುಂದಾಪುರ: ಹುಟ್ಟೂರಿಗೆ ತಲುಪಿದ “ಯೋಧ ಅನೂಪ್ ಪೂಜಾರಿ”ಯವರ ಪಾರ್ಥಿವ ಶರೀರ Read More »

ಕರಾವಳಿ

ಕುಂದಾಪುರದ ಅನೂಪ್ ಪೂಜಾರಿ ಸೇರಿ ಐವರು ಯೋಧರು ಹುತಾತ್ಮ

(ನ್ಯೂಸ್ ಕಡಬ) newskadaba.com ಡಿ.25 ಕುಂದಾಪುರ: ಗಡಿಕಾಯುವ ಸಂದರ್ಭ ರಸ್ತೆ ಅಪಘಾತವೊಂದರಲ್ಲಿ ಸೇನಾ ಟ್ರಕ್ ಪಲ್ಟಿಯಾಗಿ ಐದು ಜನ ಯೋಧರು ಸಾವನ್ನಪ್ಪಿದ ದುರಂತ ಘಟನೆ ಪೂಂಚ್ ಜಿಲ್ಲೆಯ ಮೆಂಧರ್ ಪ್ರದೇಶದ ಬಲ್ನೋಯಿ ಎಂಬಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಸಾವನ್ನಪ್ಪಿದ ಐವರಲ್ಲಿ ಒಬ್ಬ ಯೋಧನನ್ನು ಕುಂದಾಪುರ ಬೀಜಾಡಿಯ ನಿವಾಸಿ ಚಂದು ಪೂಜಾರಿ, ನಾರಾಯಣ ಪೂಜಾರಿ ದಂಪತಿಗಳ ಪುತ್ರ ಅನೂಪ್ ಪೂಜಾರಿ (31) ಎಂದು ಗುರುತಿಸಲಾಗಿದೆ. ವಿವಾಹಿತವಾಗಿರುವ ಅನೂಪ್ ಅವರಿಗೆ 2 ವರ್ಷದ ಹೆಣ್ಣು ಮಗುವಿದೆ. ಅನೂಪ್ ಅವರು

ಕುಂದಾಪುರದ ಅನೂಪ್ ಪೂಜಾರಿ ಸೇರಿ ಐವರು ಯೋಧರು ಹುತಾತ್ಮ Read More »

ಕರಾವಳಿ

ನಕಲಿ ಚಿನ್ನ ಅಡವಿರಿಸಿ 2.11 ಕೋ.ರೂ. ಸಾಲ ಪಡೆದು ವಂಚನೆ

(ನ್ಯೂಸ್ ಕಡಬ) newskadaba.com ಡಿ. 25 ಮಂಗಳೂರು: ವ್ಯಕ್ತಿಯೋರ್ವ ನಕಲಿ ಚಿನ್ನ ಅಡವಿಟ್ಟು ಎರಡು ಕೋಟಿಗೂ ಅಧಿಕ ಹಣ ಸಾಲ ಪಡೆದು ವಂಚಿಸಿರುವ ಪ್ರಕರಣ ಮಂಗಳೂರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರ ಮಂಗಲ ಗ್ರಾಮದ ಅಬೂಬ್ಕರ್‌ ಸಿದ್ದಿಕ್‌ ಇಲ್ಲಿನ ಮಂಗಳೂರು ಸಮಾಜ ಸೇವಾ ಸಹಕಾರಿ ಸಂಘಕ್ಕೆ ವಂಚಿಸಿರುವ ಆರೋಪ ಕೇಳಿಬಂದಿದೆ. ಈತ 500 ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು 2,11,89,800 ರೂ. ಸಾಲ ಪಡೆದು, ಮೋಸ ಮಾಡಿದ್ದಾನೆ. ಹೀಗಾಗಿ, ಸಿದ್ದಿಕ್‌, ಬ್ಯಾಂಕ್‌ ಆಡಳಿತ ಮಂಡಳಿ ಮತ್ತು

ನಕಲಿ ಚಿನ್ನ ಅಡವಿರಿಸಿ 2.11 ಕೋ.ರೂ. ಸಾಲ ಪಡೆದು ವಂಚನೆ Read More »

ಕರಾವಳಿ

ಕಾಸರಗೋಡು: ಸೂಪರ್ ಮಾರ್ಕೆಟ್‌ಗೆ ನುಗ್ಗಿದ ಕಾಡುಹಂದಿ

(ನ್ಯೂಸ್ ಕಡಬ) newskadaba.com ಡಿ. 25 ಕಾಸರಗೋಡು: ಕಾಡುಹಂದಿಯೊಂದು ಸೂಪರ್ ಮಾರ್ಕೆಟ್‌ಗೆ ನುಗ್ಗಿದ ಘಟನೆ ಕುಂಬಳೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಕುಂಬಳೆ ಪೇಟೆಯಲ್ಲಿರುವ ಸೂಪರ್ ಪಾಯಿಂಟ್ ಹೈಪರ್ ಮಾರ್ಕೆಟ್ ನೊಳಗೆ ಮಂಗಳವಾರ ರಾತ್ರಿ 9 ಗಂಟೆಯ ವೇಳೆ ಕಾಡು ಹಂದಿ ಸೂಪರ್ ಮಾರ್ಕೆಟ್ ಗೆ ನುಗ್ಗಿದೆ. ಈ ವೇಳೆ ಬೆರಳೆಣಿಕೆಯ ಗ್ರಾಹಕರು ಹಾಗೂ ಸಿಬ್ಬಂದಿಗಳು ಮಾತ್ರ ಎನ್ನಲಾಗಿದೆ. ಅನಿರೀಕ್ಷಿತವಾಗಿ ಒಳಗೆ ಬಂದ ಹಂದಿಯನ್ನು ಕಂಡು ಗಲಿಬಿಲಿಗೊಂಡ ಸಿಬ್ಬಂದಿಗಳು ಹಾಗೂ ಇತರರು ಬೊಬ್ಬೆ ಹಾಕುವಷ್ಟರಲ್ಲಿ ಹಂದಿ ಹೊರಕ್ಕೆ ಓಡಿ

ಕಾಸರಗೋಡು: ಸೂಪರ್ ಮಾರ್ಕೆಟ್‌ಗೆ ನುಗ್ಗಿದ ಕಾಡುಹಂದಿ Read More »

ಕರಾವಳಿ

ಅಮೆರಿಕಾದಲ್ಲಿ ಶಿವರಾಜ್ ಕುಮಾರ್ ರಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

(ನ್ಯೂಸ್ ಕಡಬ) newskadaba.com ಡಿ. 25  ಬೆಂಗಳೂರು:  ಅನಾರೋಗ್ಯದ ಕಾರಣ ಅಮೇರಿಕಾದಲ್ಲಿನ ಆಸ್ಪತ್ರೆಗೆ ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ನಟ ಶಿವರಾಜ್ ಕುಮಾರ್ ಅವರಿಗೆ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ಇದೀಗ ಮುಂದಿನ ಹಂತದ ಚಿಕಿತ್ಸೆಗಳಿಗಾಗಿ ಅಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಗೊತ್ತಾಗಿದೆ. ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಅವರು ಅನಾರೋಗ್ಯದ ಕಾರಣ ಅಮೇರಿಕಾದ ಪ್ಲೋರಿಡಾದಲ್ಲಿರುವಂತ ಮಿಯಾಮಿ ಕ್ಯಾನ್ಸರ್ ಇನ್ಟಿಟ್ಯೂಟ್ ಗೆ ಶಸ್ತ್ರ ಚಿಕಿತ್ಸೆಗಾಗಿ ದಾಖಲಾಗಿದ್ದರು. ಇದೀಗ ಅವರಿಗೆ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದು, ಯಶಸ್ವಿಯಾಗಿದೆ ಎನ್ನಲಾಗಿದೆ. ಅವರ ಲಕ್ಷಾಂತರ ಅಭಿಮಾನಿಗಳ

ಅಮೆರಿಕಾದಲ್ಲಿ ಶಿವರಾಜ್ ಕುಮಾರ್ ರಿಗೆ ಯಶಸ್ವಿ ಶಸ್ತ್ರಚಿಕಿತ್ಸೆ Read More »

ಕರಾವಳಿ
Scroll to Top