ಕರಾವಳಿ

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಡಿ. 23 ಸುಳ್ಯ: ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಭಾನುವಾರ ಸಂಜೆ ನಡುಗಲ್ಲು ಸಮೀಪ ನಡೆದಿದೆ. ಸುಳ್ಯ ಕಡೆಯಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಪಾವಂಜೆಯ ರವಿಪ್ರಸಾದ್ ಮತ್ತು ಅವರ ಮನೆಯವರಿದ್ದ ಕಾರು ಸುಬ್ರಹ್ಮಣ್ಯ-ಜಾಲ್ಸೂರು ರಸ್ತೆಯ ನಡುಗಲ್ಲು ಬಳಿ ನಿಯಂತ್ರಣ ತಪ್ಪಿ ರಸ್ತೆಯ ಎಡಬದಿಯ ಮಣ್ಣಿನ ಬರೆಗೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ. ಸ್ಥಳೀಯರು ಕಾರಿನಲ್ಲಿದ್ದ ರವಿಪ್ರಸಾದ್, ಅವರ ಪತ್ನಿ ಮತ್ತು ಮಗುವನ್ನು ರಕ್ಷಿಸಿದ್ದಾರೆ. ರವಿಪ್ರಸಾದ್ ಅವರಿಗೆ […]

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಪ್ರಯಾಣಿಕರು ಅಪಾಯದಿಂದ ಪಾರು Read More »

ಕರಾವಳಿ

ಕುಂದಾಪುರ: ಸಮುದ್ರ ಪಾಲಾಗಿದ್ದ ಜಸ್ಕಿ ರೈಡರ್ ಶವ ಪತ್ತೆ

(ನ್ಯೂಸ್ ಕಡಬ) newskadaba.com ಡಿ. 23 ಮಂಗಳೂರು: ಸಮುದ್ರ ಪಾಲಾಗಿದ್ದ ಜಸ್ಕಿ ರೈಡರ್ ಶವ ಪತ್ತೆ, ಶನಿವಾರ ಸಂಜೆ ತ್ರಾಸಿ ಬೀಚ್ ಸಮುದ್ರ ತೀರದಲ್ಲಿ ಸಮುದ್ರದಲ್ಲಿ ನಾಪತ್ತೆ ಆಗಿದ್ದ ಜಾಸ್ಕಿ ರೈಡರ್ ರೋಹಿದಾಸ್ ಯಾನೆ ರವಿ 41 ಶವ 36 ಗಂಟೆಗಳ ಬಳಿಕ ಸಮೀಪದ ಹೊಸಪೇಟೆ ರುದ್ರ ಭೂಮಿಯ ಹಿಂಭಾಗದ ಸಮುದ್ರ ತೀರದಲ್ಲಿ ಪತ್ತೆ ಆಗಿದೆ. ಸ್ಥಳೀಯ ಮೀನುಗಾರರಾದ ಶಾಸ ಖಾರ್ವಿ ಹಾಗು ಮೋಹನ ಖಾರ್ವಿ ಇವರು ಇಂದು ಬೆಳಿಗ್ಗೆ 3 ಗಂಟೆ ಸುಮಾರಿಗೆ ಮೀನುಗಾರಿಕೆ ತೆರಳಲು ಹೋಗುತ್ತಿದ್ದಾಗ

ಕುಂದಾಪುರ: ಸಮುದ್ರ ಪಾಲಾಗಿದ್ದ ಜಸ್ಕಿ ರೈಡರ್ ಶವ ಪತ್ತೆ Read More »

ಕರಾವಳಿ

ಮಂಗಳೂರು: ಮೊಟ್ಟಮೊದಲ ‘ರೋಬೋಟಿಕ್ ಬಟರ್‌ಫ್ಲೈ’ ಶೋಗೆ ಚಾಲನೆ

(ನ್ಯೂಸ್ ಕಡಬ) newskadaba.com ಡಿ. 23 ಮಂಗಳೂರು: ಡಿಸೆಂಬರ್ 21 ರಿಂದ ಜನವರಿ 19 ರವರೆಗೆ ನಡೆಯುವ ಒಂದು ತಿಂಗಳ ಕರಾವಳಿ ಉತ್ಸವದ ಅಂಗವಾಗಿ ಕದ್ರಿ ಪಾರ್ಕ್‌ನಲ್ಲಿ ಆಯೋಜಿಸಿರುವ ಮೊಟ್ಟ ಮೊದಲ ‘ರೋಬೋಟಿಕ್ ಬಟರ್‌ಫ್ಲೈ ಶೋ’ ಅನ್ನು ಶಾಸಕ ವೇದವ್ಯಾಸ್ ಕಾಮತ್ ಮತ್ತು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಭಾನುವಾರ ಉದ್ಘಾಟಿಸಿದರು. ರೋಬೋಟಿಕ್ ಚಿಟ್ಟೆಗಳು, ಇರುವೆಗಳು, ಜೀನು ನೊಣ್ಣ ಮತ್ತಿತರ ಚಿತ್ರಣವನ್ನು ಪ್ರದರ್ಶನದಲ್ಲಿ ನೋಡಬಹುದಾಗಿದೆ. ಪ್ರತಿದಿನ ಸಂಜೆ 4 ರಿಂದ ರಾತ್ರಿ 9 ರವರೆಗೂ ಈ ಪ್ರದರ್ಶನವನ್ನು

ಮಂಗಳೂರು: ಮೊಟ್ಟಮೊದಲ ‘ರೋಬೋಟಿಕ್ ಬಟರ್‌ಫ್ಲೈ’ ಶೋಗೆ ಚಾಲನೆ Read More »

ಕರಾವಳಿ

ಬಂಟ್ವಾಳ: ಶಾಲಾ ವಾರ್ಷಿಕೋತ್ಸವಕ್ಕೆ ಬಂದಿದ್ದ ಯುವತಿಯ ಮೇಲೆ ಅತ್ಯಾಚಾರ; ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಡಿ. 23: ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವತಿಯೋರ್ವಳ ಮೇಲೆ ಯುವಕನೋರ್ವ ಅತ್ಯಾಚಾರ ಮಾಡಿದ ಘಟನೆ ನಡೆದಿರುವ ಬಗ್ಗೆ ತಡವಾಗಿ ವರದಿಯಾಗಿದ್ದು, ಅತ್ಯಾಚಾರ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತೃತ್ವದ ತಂಡ ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ನಾವೂರ ನಿವಾಸಿ ಜಯಂತ ಎಂಬಾತ ಆರೋಪಿಯಾಗಿದ್ದು, ಸದ್ಯ ಜೈಲುವಾಸ ಆನುಭವಿಸುತ್ತಿದ್ದಾನೆ. ಡಿ. 14 ರಂದು ನಾವೂರು ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ನೋಡುಲು ಮನೆಯವರ ಜೊತೆ ತೆರಳಿದ್ದ ಯುವತಿಯನ್ನು ಆರೋಪಿ ಜಯಂತ

ಬಂಟ್ವಾಳ: ಶಾಲಾ ವಾರ್ಷಿಕೋತ್ಸವಕ್ಕೆ ಬಂದಿದ್ದ ಯುವತಿಯ ಮೇಲೆ ಅತ್ಯಾಚಾರ; ಆರೋಪಿ ಅರೆಸ್ಟ್ Read More »

ಕರಾವಳಿ

ಶ್ರೀ.ಕ್ಷೇ.ಧ.ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಿಟ್ಲ ತಾಲೂಕಿನ ಸೇವಾ ಪ್ರತಿನಿಧಿಗಳಿಗೆ ಸಾಮರ್ಥ್ಯಾಭಿವೃದ್ಧಿ ತರಬೇತಿ

(ನ್ಯೂಸ್ ಕಡಬ) newskadaba.com ಡಿ. 20. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ B.C ಟ್ರಸ್ಟ್(ರಿ.) ವತಿಯಿಂದ ವಿಟ್ಲ ವ್ಯಾಪ್ತಿಯ 64 ಕಾರ್ಯಕ್ಷೇತ್ರದ 64 ಸೇವಪ್ರಾತಿನಿಧಿಗಳಿಗೆ ತಮ್ಮ ಕಾರ್ಯಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಲು ಸಾಮರ್ಥ್ಯ ಅಭಿವೃದ್ಧಿ ತರಬೇತಿ ಹಮ್ಮಿಕೊಂಡಿದ್ದು ಈ ತರಬೇತಿ ಕಾರ್ಯಗಾರವನ್ನು ಕೇಂದ್ರ ಕಚೇರಿ ಸೇವಾಪ್ರತಿ ವಿಭಾಗದ ಯೋಜನಾಧಿಕಾರಿ ಶ್ರೀ ಶಿವಪ್ರಸಾದ್ ವಿಧಿವತ್ತಾಗಿ ಉದ್ಘಾಟಿಸಿದರು.   ಯೋಜನೆಯ ಜಿಲ್ಲಾ ನಿರ್ದೇಶಕರಾದ ಶ್ರೀ ಪ್ರವೀಣ್ ಕುಮಾರ್, ಧರ್ಮಸ್ಥಳದ ಹಿನ್ನೆಲೆ ಹಾಗೂ ನಡೆದು ಬಂದ ದಾರಿ, ಯೋಜನೆಯ ಕಾರ್ಯಕ್ರಮಗಳ ಬಗ್ಗೆ

ಶ್ರೀ.ಕ್ಷೇ.ಧ.ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಿಟ್ಲ ತಾಲೂಕಿನ ಸೇವಾ ಪ್ರತಿನಿಧಿಗಳಿಗೆ ಸಾಮರ್ಥ್ಯಾಭಿವೃದ್ಧಿ ತರಬೇತಿ Read More »

ಕರಾವಳಿ

ಕಾರವಾರ : ಕೋಲಾರದಿಂದ ಗೋಕರ್ಣ ಪ್ರವಾಸಕ್ಕೆ ಬಂದಿದ್ದ ಬಸ್ ಪಲ್ಟಿ; 30 ವಿದ್ಯಾರ್ಥಿಗಳಿಗೆ ಗಾಯ

(ನ್ಯೂಸ್ ಕಡಬ) newskadaba.com ಡಿ. 20: ಕಾರವಾರ : ಕೋಲಾರದಿಂದ ಗೋಕರ್ಣ ಪ್ರವಾಸಕ್ಕೆ ಬಂದಿದ್ದ ಬಸ್ ಪಲ್ಟಿಯಾಗಿ 30 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಹೊನ್ನಾವರ ಮುಗ್ವಾ ಅರೊಳ್ಳೀ ಕ್ರಾಸ್ ಬಳಿ ಗುರುವಾರ ಮಧ್ಯರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ. ಮಾಲೂರು ಮಾಸ್ತಿಹಳ್ಳ ಪ್ರೌಢಶಾಲೆಯಿಂದ ಪ್ರವಾಸಕ್ಕೆ ಬಂದಿದ್ದ ಕರ್ನಾಟಕ ಪ್ರೌಢಶಾಲಾ ವಿದ್ಯಾರ್ಥಿಗಳಿದ್ದ ಬಸ್‌ ವಾಪಸ್ಸಾಗುವ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ. ಗಾಯಗೊಂಡ ವಿದ್ಯಾರ್ಥಿಗಳಿಗೆ ಹೊನ್ನಾವರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ನಾಲ್ವರು ಮಕ್ಕಳ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದ್ದು, ಅವರನ್ನು ಮಣಿಪಾಲಕ್ಕೆ

ಕಾರವಾರ : ಕೋಲಾರದಿಂದ ಗೋಕರ್ಣ ಪ್ರವಾಸಕ್ಕೆ ಬಂದಿದ್ದ ಬಸ್ ಪಲ್ಟಿ; 30 ವಿದ್ಯಾರ್ಥಿಗಳಿಗೆ ಗಾಯ Read More »

ಕರಾವಳಿ

ಬಂಟ್ವಾಳ : ಪರಿಶಿಷ್ಟ ಜಾತಿ, ಪಂಗಡಗಳ ಪರಿಸರದಲ್ಲಿ ತ್ಯಾಜ್ಯ ಸಂಗ್ರಹ – ಉಗ್ರ ಹೋರಾಟದ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಡಿ. 20: ಪರಿಶಿಷ್ಟ ಜಾತಿ, ಪಂಗಡಗಳ ಪರಿಸರದಲ್ಲಿ ತ್ಯಾಜ್ಯ ಸಂಗ್ರಹವಾಗುತ್ತಿದೆ. ತಕ್ಷಣ ಕ್ರಮಕೈಗೊಳ್ಳದಿದ್ದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಕರ್ನಾಟಕ ದಲಿತ ಹೋರಾಟ ಸಮಿತಿ ಜಿಲ್ಲಾ ಸಂಚಾಲಕ ಎಸ್.ಪಿ. ಆನಂದ ಎಚ್ಚರಿಕೆ ನೀಡಿದ್ದಾರೆ. ಬಾಳೆಪುಣಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಕ್ಕುದಕಟ್ಟೆ ಕೊರಗರ ಕಾಲನಿಯ ಆಸು ಪಾಸಿನ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಹಾಗೂ ಸಾರ್ವಜನಿಕರು ವಾಸಿಸುವ ಮನೆಗಳ ಪಕ್ಕದಲ್ಲಿ ಬೇರೆ ಬೇರೆ ಕಡೆಗಳಿಂದ ತ್ಯಾಜ್ಯಗಳನ್ನು ಶೇಖರಿಸಿ 20 ಅಡಿ ಆಳದ ಹೊಂಡದಲ್ಲಿ ಹಾಕುತ್ತಿದ್ದಾರೆ.

ಬಂಟ್ವಾಳ : ಪರಿಶಿಷ್ಟ ಜಾತಿ, ಪಂಗಡಗಳ ಪರಿಸರದಲ್ಲಿ ತ್ಯಾಜ್ಯ ಸಂಗ್ರಹ – ಉಗ್ರ ಹೋರಾಟದ ಎಚ್ಚರಿಕೆ Read More »

ಕರಾವಳಿ

ಬೆಳ್ತಂಗಡಿ: ಬೈಕಿಗೆ ಕಾರು ಢಿಕ್ಕಿ; ಚಿಕಿತ್ಸೆಗೆ ಸ್ಪಂದಿಸದೇ ಯುವಕ ಸಾವು

(ನ್ಯೂಸ್ ಕಡಬ) newskadaba.com ಡಿ. 20: ಎನ್.ಆರ್.ಪುರದಲ್ಲಿ ಬೈಕಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಯುವಕ ಮೃತಪಟ್ಟ ಘಟನೆ ಡಿ.19ರಂದು ಸಂಭವಿಸಿದೆ. ಬೆಳ್ತಂಗಡಿ ತಾಲೂಕಿನ ಓಡಿಲ್ನಾಳದ ಕುಂದಲಿಕೆ ನಿವಾಸಿ ಸಜೇಶ್ ಮೃತ ಯುವಕ. ಯುವಕ ಎನ್. ಆರ್. ಪುರ ಬಳಿ ಅಲ್ಯೂಮಿನಿಯಂ ಪ್ಯಾಬ್ರಿಕೇಶನ್ ಕೆಲಸಕ್ಕೆ ತೆರಳಿದ್ದು ಗುರುವಾರ ಮಧ್ಯಾಹ್ನ ಕೆಲಸದಿಂದ ಊಟಕ್ಕೆಂದು ತೆರಳುತಿದ್ದ. ಈ ವೇಳೆ ಎದುರಿನಿಂದ ಬಂದ ಕಾರು ಬೈಕಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಸಜೇಶ್ ಗಂಭೀರ ಗಾಯಗೊಂಡಿದ್ದಾರೆ. ಬಳಿಕ ಅವರನ್ನು

ಬೆಳ್ತಂಗಡಿ: ಬೈಕಿಗೆ ಕಾರು ಢಿಕ್ಕಿ; ಚಿಕಿತ್ಸೆಗೆ ಸ್ಪಂದಿಸದೇ ಯುವಕ ಸಾವು Read More »

ಕರಾವಳಿ

ಮಂಗಳೂರು: ಡಿ.22ರಂದು ಕದ್ರಿಪಾರ್ಕ್‌ನಲ್ಲಿ ವೈನ್ ಮೇಳ

(ನ್ಯೂಸ್ ಕಡಬ) newskadaba.com ಡಿ. 20:ಮಂಗಳೂರು ನಗರದ ಕದ್ರಿ ಪಾರ್ಕ್ನಲ್ಲಿ ನಡೆದಿದ್ದ ಎರಡು ವಾರಾಂತ್ಯಗಳಲ್ಲಿ ನಡೆದ ವೈನ್ ಮೇಳಕ್ಕೆ ಗ್ರಾಹಕರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು, ಕ್ರಿಸ್ಮಸ್ ಹಬ್ಬ ಹಾಗೂ ಹೊಸ ವರ್ಷದ ಅಂಗವಾಗಿ ಗ್ರಾಹಕರಿಂದ ಬಂದ ಬೇಡಿಕೆ ಹಿನ್ನೆಲೆಯಲ್ಲಿ ಡಿ.22ರಂದು ಮತ್ತೆ ಕದ್ರಿ ಪಾರ್ಕ್‌ನಲ್ಲಿ ಬೆಳಗ್ಗೆ 10:30ರಿಂದ ರಾತ್ರಿ 9:30 ಗಂಟೆ ತನಕ ವೈನ್ ಮೇಳ ಆಯೋಜಿಸಲಾಗಿದೆ. ರತ್ನಾಸ್ ವೈನ್ ಗೇಟ್ ಹಾಗೂ ಶೂಲಿನ್ ಗ್ರೂಪ್ ಮಂಗಳೂರು ಪ್ರಾಯೋಜಕತ್ವದಲ್ಲಿ ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ ಹಾಗೂ ತೋಟಗಾರಿಕಾ

ಮಂಗಳೂರು: ಡಿ.22ರಂದು ಕದ್ರಿಪಾರ್ಕ್‌ನಲ್ಲಿ ವೈನ್ ಮೇಳ Read More »

ಕರಾವಳಿ

ಮಂಗಳೂರು-ಪುತ್ತೂರು ಪ್ಯಾಸೆಂಜರ್‌ ರೈಲು ಸುಬ್ರಹ್ಮಣ್ಯಕ್ಕೆ ವಿಸ್ತರಣೆ: ಅಧಿಕೃತ ಅನುಮೋದನೆಯೊಂದೆ ಬಾಕಿ

(ನ್ಯೂಸ್ ಕಡಬ) newskadaba.com ಡಿ. 20: ಮಂಗಳೂರು- ಪುತ್ತೂರು ಪ್ಯಾಸೆಂಜರ್‌ ರೈಲನ್ನು ಸುಬ್ರಹ್ಮಣ್ಯದವರೆಗೆ ವಿಸ್ತರಿಸುವ ಬಹು ಕಾಲದ ಬೇಡಿಕೆಗೆ ಕೊನೆಗೂ ನೈಋತ್ಯ ಮತ್ತು ದಕ್ಷಿಣ ರೈಲ್ವೇ ವಲಯಗಳಿಂದ ಅನು ಮೋದನೆ ಸಿಕ್ಕಿದ್ದು, ಪ್ರಸ್ತಾವನೆಯನ್ನು ಈಗ ಅನುಮತಿಗಾಗಿ ರೈಲ್ವೇ ಮಂಡಳಿಗೆ ಸಲ್ಲಿಸಲಾಗಿದೆ. ದಶಕಗಳ ಹಿಂದೆ ಮೀಟರ್‌ ಗೇಜ್‌ ಕಾಲದಲ್ಲಿ ಸುಬ್ರಹ್ಮಣ್ಯದಿಂದ ಬೆಳಗ್ಗೆ ಮತ್ತು ಸಂಜೆ ಹೊತ್ತು ಮಂಗಳೂರು ವರೆಗೆ 2005ನೇ ಇಸವಿ ತನಕ 06484/85 ಹಾಗೂ 06486/87 ಪ್ಯಾಸೆಂಜರ್‌ ರೈಲು ಸಂಚರಿಸುತ್ತಿತ್ತು.ಹಳಿ ಪರಿವರ್ತನೆಯ ಅನಂತರ ಇದು ಪುತ್ತೂರಿನವರೆಗೆ ಮಾತ್ರ

ಮಂಗಳೂರು-ಪುತ್ತೂರು ಪ್ಯಾಸೆಂಜರ್‌ ರೈಲು ಸುಬ್ರಹ್ಮಣ್ಯಕ್ಕೆ ವಿಸ್ತರಣೆ: ಅಧಿಕೃತ ಅನುಮೋದನೆಯೊಂದೆ ಬಾಕಿ Read More »

ಕರಾವಳಿ
Scroll to Top