ಕರಾವಳಿ

ಕೆದಿಲ ಶೌರ್ಯ ವಿಪತ್ತು ತಂಡದಿಂದ ಹಿಂದೂ ರುದ್ರಭೂಮಿ ಸ್ವಚ್ಛತೆ

(ನ್ಯೂಸ್ ಕಡಬ) newskadaba.com ಡಿ. 20. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಗಾಂಧಿನಗರದಲ್ಲಿನ ಹಿಂದೂ ರುದ್ರ ಭೂಮಿಯನ್ನು ಸ್ವಚ್ಛಗೊಳಿಸಲಾಯಿತು. ಈ ಸಂದರ್ಭ ಕೆದಿಲ ಒಕ್ಕೂಟದ ಸದಸ್ಯರಾದ ಜಗದೀಶ, ಶೀನಪ್ಪ, ವೆಂಕಪ್ಪ, ಗಿರೀಶ ಹಾಗೂ ಕೆದಿಲ “B” ಒಕ್ಕೂಟದ ಸೇವಾಪ್ರತಿನಿಧಿ ಜಯಂತಿರವರು ಉಪಸ್ಥಿತರಿದ್ದರು.

ಕೆದಿಲ ಶೌರ್ಯ ವಿಪತ್ತು ತಂಡದಿಂದ ಹಿಂದೂ ರುದ್ರಭೂಮಿ ಸ್ವಚ್ಛತೆ Read More »

ಕರಾವಳಿ

ಮಂಗಳೂರು: ಹೊಸ ವರ್ಷಾಚರಣೆ ಪ್ರಯುಕ್ತ ಮಾರ್ಗಸೂಚಿ ಪ್ರಕಟ

(ನ್ಯೂಸ್ ಕಡಬ) newskadaba.com ಡಿ. 20. ಹೊಸ ವರ್ಷಾಚರಣೆಯ ಪ್ರಯುಕ್ತ ಸಾರ್ವಜನಿಕ ಹಿತಾಸಕ್ತಿಯ ಹಿನ್ನೆಲೆ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಿ ಆದೇಶಿಸಲಾಗಿದೆ. ಹೊಸ ವರ್ಷಕ್ಕೆ ಮಾರ್ಗಸೂಚಿಗಳು:- ಎಲ್ಲಾ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಕ್ಲಬ್‌ಗಳು, ರೆಸಾರ್ಟ್‌ಗಳು ಮತ್ತು ಇತರ ಸಂಸ್ಥೆಗಳು ಹೊಸ ವರ್ಷದ ಹಬ್ಬಗಳನ್ನು ಆಯೋಜಿಸಲು ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಿಂದ ಪೂರ್ವ ಅನುಮತಿ ಪಡೆಯಬೇಕು. ಅರ್ಜಿಗಳನ್ನು 23-12-2024 ರಂದು ಸಂಜೆ 5:00 ಗಂಟೆಯ ಒಳಗಾಗಿ ಸಲ್ಲಿಸಬೇಕು. ಹೊಸ ವರ್ಷದ ಕಾರ್ಯಕ್ರಮ ರಾತ್ರಿ 12:00

ಮಂಗಳೂರು: ಹೊಸ ವರ್ಷಾಚರಣೆ ಪ್ರಯುಕ್ತ ಮಾರ್ಗಸೂಚಿ ಪ್ರಕಟ Read More »

ಕರಾವಳಿ

ಮಂಗಳೂರು: ಅಡುಗೆ ಅನಿಲ ಸೋರಿಕೆ; 2 ಮಹಿಳೆಯರಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಡಿ. 19 ಮಂಗಳೂರು : ಅಡುಗೆ ಮನೆಯ ಸಿಲಿಂಡರ್‌ನಿಂದ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹತ್ತಿಕೊಂಡ ಪರಿಣಾಮ ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡ ಘಟನೆ ತಡಂಬೈಲ್ ವೆಂಕಟರಮಣ ಕಾಲನಿಯಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದೆ. ಮನೆಯ ಯಜಮಾನ ವಾಮನ ಅವರ ಪತ್ನಿ ವಸಂತಿ (68) ಮತ್ತು ವಾಮನ ಅವರ ಅಕ್ಕ ಪುಷ್ಪಾ (72) ಗಾಯಾಳುಗಳು. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಸಂತಿ ಅವರು ಗ್ಯಾಸ್ ಸೋರಿಕೆಯಾಗಿರುವುದನ್ನು ಗಮನಿಸದೆ ಮಧ್ಯಾಹ್ನ ಅಡುಗೆ ಕೋಣೆಗೆ ಹೋಗಿ ಸ್ಟವ್‌ಗೆ

ಮಂಗಳೂರು: ಅಡುಗೆ ಅನಿಲ ಸೋರಿಕೆ; 2 ಮಹಿಳೆಯರಿಗೆ ಗಂಭೀರ ಗಾಯ Read More »

ಕರಾವಳಿ

ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿ..!

(ನ್ಯೂಸ್ ಕಡಬ) newskadaba.com ಡಿ. 19. ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಟ್ರಾವೆಲ್ ವಾಹನವೊಂದು ರಾಷ್ಟ್ರೀಯ ಹೆದ್ದಾರಿ ಮಂಗಳೂರು-ಬೆಂಗಳೂರು ಹೆದ್ದಾರಿಯ ಫರಂಗಿಪೇಟೆ ಎಂಬಲ್ಲಿ ಪಲ್ಟಿಯಾದ ಘಟನೆ ನಡೆದಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿರುವ ಟಿ.ಟಿ.ವಾಹನ ಬೆಳಿಗ್ಗೆ 6:30ರ ಸುಮಾರಿಗೆ ಫರಂಗಿಪೇಟೆ ಜಂಕ್ಷನ್ ನಲ್ಲಿ ಡಿವೈಡರ್ ಮೇಲೆ ಏರಿ ಬಳಿಕ ಹೆದ್ದಾರಿಗೆ ಪಲ್ಟಿಯಾಗಿದೆ. ಟಿ.ಟಿ.ಯಲ್ಲಿ ಸುಮಾರು 10 ಮಂದಿ ಪ್ರಯಾಣಿಕರಿದ್ದು, ಯಾವುದೇ ಪ್ರಾಣಾಯಾವಿಲ್ಲದೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಬೆಳಗ್ಗಿನ ಹೊತ್ತು ಚಾಲಕ ನಿದ್ಧೆ ಮಂಪರಿನಲ್ಲಿ ನಿಯಂತ್ರಣ ಕಳೆದು ಡಿವೈಡರ್

ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿ..! Read More »

ಕರಾವಳಿ, ಕ್ರೈಮ್ ನ್ಯೂಸ್

ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ – ಅಧಿಕಾರಿಗಳಿಂದ ಕಾರ್ಯಾಚರಣೆ, ದಂಡ

(ನ್ಯೂಸ್ ಕಡಬ) newskadaba.com ಡಿ. 19. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ವಿರುದ್ಧ ಜಂಟಿ ಕಾರ್ಯಾಚರಣೆ ನಡೆಸಿದ ಆರೋಗ್ಯ ಇಲಾಖೆ ಮತ್ತು ಪೊಲೀಸರ ತಂಡವು,  51 ಪ್ರಕರಣಗಳನ್ನು ದಾಖಲಿಸಿ, ದಂಡ ವಿಧಿಸಿದೆ. ನಗರದ ಫಳ್ನೀರ್, ಅತ್ತಾವರ, ಹಂಪನಕಟ್ಟೆ, ಆರ್.ಟಿ.ಓ ಪರಿಸರದಲ್ಲಿ ಕಾರ್ಯಾಚರಣೆ ನಡೆಸಿದ ತಂಡವು ಹೋಟೆಲ್, ಕೆಫೆ, ಟೀ ಸ್ಟಾಲ್, ಅಂಗಡಿ ವಠಾರ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಬಹಿರಂಗವಾಗಿ ಸಿಗರೇಟ್ ಸೇದುತ್ತಿದ್ದವರಿಗೆ ತಲಾ ರೂ. 200 ವರೆಗೆ ದಂಡ ವಿಧಿಸಿದೆ. ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನ ಕಾಯಿದೆ(ಕೋಪ್ಟಾ)

ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ – ಅಧಿಕಾರಿಗಳಿಂದ ಕಾರ್ಯಾಚರಣೆ, ದಂಡ Read More »

ಕರಾವಳಿ

ಜಮ್ಮು ಮತ್ತು ಕಾಶ್ಮೀರ: ಭದ್ರತಾ ಪಡೆಗಳಿಂದ ಎನ್ಕೌಂಟರ್ – ಐವರು ಉಗ್ರರ ಹತ್ಯೆ

(ನ್ಯೂಸ್ ಕಡಬ) newskadaba.com ಡಿ. 19 ಮುಂಬೈ: ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್ ನಡೆದಿದ್ದು ಐವರು ಉಗ್ರರ ಹತ್ಯೆಯಾಗಿದೆ ಎಂದು ವರದಿಯಾಗಿದೆ. ಕುಲ್ಗಾಮ್ ಜಿಲ್ಲೆಯಲ್ಲಿ ಗುರುವಾರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎನ್​ಕೌಂಟರ್​ನಲ್ಲಿ ಯೋಧರು ಐವರು ಉಗ್ರರನ್ನು ಸದೆಬಡಿದಿದ್ದಾರೆ ಎಂದು ಹೇಳಿದ್ದಾರೆ. ಬುಧವಾರ ರಾತ್ರಿ ಜಿಲ್ಲೆಯ ಬೇಹಿಬಾಗ್ ಪ್ರದೇಶದ ಕಡದರ್‌ನಲ್ಲಿ ಶಂಕಿತ ಭಯೋತ್ಪಾದಕರು ಇರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿವೆ

ಜಮ್ಮು ಮತ್ತು ಕಾಶ್ಮೀರ: ಭದ್ರತಾ ಪಡೆಗಳಿಂದ ಎನ್ಕೌಂಟರ್ – ಐವರು ಉಗ್ರರ ಹತ್ಯೆ Read More »

ಕರಾವಳಿ

ಯುವ ಸಮಾಲೋಚಕರ ನೇಮಕಾತಿ : ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಡಿ. 19. ಜನ ಆರೋಗ್ಯ ಸಂಸ್ಥೆ ಎಪಿಡೀಮಿಯಾಲಜಿ ವಿಭಾಗ, ನಿಮಾನ್ಸ್, ಬೆಂಗಳೂರು ಇವರಿಂದ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ  ಅನುದಾನಿತ ಯೋಜನೆಯಾದ “ಯುವ ಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಯುವ ಸ್ಪಂದನ ಸೇವೆಗಳ ಸಮಗ್ರ ಅಭಿವೃದ್ದಿ ಮತ್ತು ಅನುಷ್ಠಾನ ಯೋಜನೆ” ಯುವ ಸ್ಪಂದನ ಅಡಿಯಲ್ಲಿ ಯುವ ಪರಿವರ್ತಕರ  ಹಾಗೂ ಯುವ ಸಮಾಲೋಚಕರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಗೆ 4 ಯುವ ಪರಿವರ್ತಕರು ಹಾಗೂ ಒಬ್ಬರು ಯುವ ಸಮಾಲೋಚಕರ ಅಗತ್ಯವಿದೆ. ಶೈಕ್ಷಣಿಕ ಅರ್ಹತೆ :

ಯುವ ಸಮಾಲೋಚಕರ ನೇಮಕಾತಿ : ಅರ್ಜಿ ಆಹ್ವಾನ Read More »

ಕರಾವಳಿ

ಪರಿಶಿಷ್ಟ ಪಂಗಡದವರಿಗೆ ಡ್ರೋನ್ ತರಬೇತಿ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಡಿ. 19. ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವೀಡಿಯೋಗ್ರಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಗೆ ಡ್ರೋನ್ ತರಬೇತಿಗೆ ಅರ್ಜಿ ಸಲ್ಲಿಸಲು ಡಿಸೆಂಬರ್ 23ರ ವರೆಗೆ ಅವಧಿ ವಿಸ್ತರಿಸಲಾಗಿದೆ. ಅಭ್ಯರ್ಥಿಯು ದಕ್ಷಿಣ ಕನ್ನಡ ಜಿಲ್ಲೆಯ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ತರಬೇತಿ ಪಡೆಯಲು ಪುರುಷರಿಗೆ 18 ರಿಂದ 35 ವರ್ಷ, ಮಹಿಳೆಯರಿಗೆ 18 ರಿಂದ 40 ವರ್ಷಗಳಾಗಿರಬೇಕು. ಅಭ್ಯರ್ಥಿಯ ಕುಟುಂಬದ ಆದಾಯ ರೂ.2.50 ಮೀರಿರಬಾರದು.

ಪರಿಶಿಷ್ಟ ಪಂಗಡದವರಿಗೆ ಡ್ರೋನ್ ತರಬೇತಿ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ Read More »

ಕರಾವಳಿ

ಮಕ್ಕಳ ಕಾನೂನುಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸೂಚನೆ

(ನ್ಯೂಸ್ ಕಡಬ) newskadaba.com ಡಿ. 19. ಮಕ್ಕಳ ಸಂರಕ್ಷಣೆಗಾಗಿ ಜಾರಿಯಾದ ಕಾಯಿದೆಗಳು ಕೇವಲ ಅಧಿಕಾರಿಗಳ ತರಬೇತಿ, ಕಾರ್ಯಾಗಾರ, ಸಭೆಗಳಿಗೆ ಮಾತ್ರ ಸೀಮಿತವಾಗದೆ ಕಾರ್ಯರೂಪಕ್ಕೆ ತರುವಲ್ಲಿ ಪ್ರತಿಯೊಬ್ಬ ಅಧಿಕಾರಿಯೂ ಸ್ವ-ಇಚ್ಚೆಯಿಂದ ಕೆಲಸ ಮಾಡಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಡಾ. ತಿಪ್ಪೇಸ್ವಾಮಿ ಕೆ.ಟಿ ತಿಳಿಸಿದ್ದಾರೆ. ಅವರು ಸೋಮವಾರ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾ ಕಾನೂನು

ಮಕ್ಕಳ ಕಾನೂನುಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸೂಚನೆ Read More »

ಕರಾವಳಿ

ಕರಾವಳಿ ಉತ್ಸವದಲ್ಲಿ ಸಾಂಪ್ರದಾಯಿಕತೆ, ಸಂಸ್ಕೃತಿ ಅನಾವರಣ- ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ಡಿ. 19. ಹಲವು ವರ್ಷಗಳ ಬಳಿಕ ನಡೆಯಲಿರುವ ಕರಾವಳಿ ಉತ್ಸವದ ಕಾರ್ಯಕ್ರಮಗಳಲ್ಲಿ ಕರಾವಳಿಯ ನೈಜ ಸಂಸ್ಕೃತಿ ಸಾಹಿತ್ಯ, ಉಡುಗೆ ತೊಡುಗೆಗಳು  ಹಾಗೂ ಸಾಂಪ್ರದಾಯಿಕ ತಿಂಡಿ ತಿನಿಸುಗಳ ಪ್ರದರ್ಶನ ಮತ್ತು ಮಾರಾಟದ ಅಪೂರ್ವ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ತಿಳಿಸಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕರಾವಳಿ ಉತ್ಸವ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರಾವಳಿ ಉತ್ಸವದಿಂದ ಕರಾವಳಿಯ ನೈಜ ಸಂಸ್ಕೃತಿಯ ಅನಾವರಣಗೊಳ್ಳಲಿದೆ. ಈ ನಿಟ್ಟಿನಲ್ಲಿ

ಕರಾವಳಿ ಉತ್ಸವದಲ್ಲಿ ಸಾಂಪ್ರದಾಯಿಕತೆ, ಸಂಸ್ಕೃತಿ ಅನಾವರಣ- ಜಿಲ್ಲಾಧಿಕಾರಿ Read More »

ಕರಾವಳಿ
Scroll to Top