ಕರಾವಳಿ

ಉಡುಪಿ: ಹೂಡೆಯಲ್ಲಿ ಗೂಡ್ಸ್ ವಾಹನಕ್ಕೆ ಬೆಂಕಿ; ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com ಡಿ. 17 ಉಡುಪಿ: ತೆಂಗಿನಕಾಯಿ ಕತ್ತ ಸಾಗಿಸುತ್ತಿದ್ದ ವಾಹನಕ್ಕೆ ತಡರಾತ್ರಿ ಬೆಂಕಿ ತಗುಲಿ ಸುಟ್ಟ ಘಟನೆ ಉಡುಪಿಯ ಹೂಡೆಯಲ್ಲಿ ಸಂಭವಿಸಿದೆ. ವಿದ್ಯುತ್ ತಂತಿ ತಗುಲಿ ಶಾರ್ಟ್ ಸರ್ಕ್ಯೂಟ್ ಆದ ಕಾರಣ ಘಟನೆ ನಡೆದಿದೆ ಎಂದು ಸಾರ್ವಜನಿಕರು ಅಭಿಪ್ರಾಯ ಪಟ್ಟಿದ್ದಾರೆ. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪಕ್ಕದಲ್ಲೆ ವಸತಿ, ಹೊಟೇಲ್, ಕೆಫೆಯಿದ್ದು ಬೆಂಕಿ ವ್ಯಾಪಿಸಿದರೆ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಆದರೆ ಸೂಕ್ತ ಸಮಯದಲ್ಲಿ ಅಗ್ನಿ ಶಾಮಕ ದಳದ […]

ಉಡುಪಿ: ಹೂಡೆಯಲ್ಲಿ ಗೂಡ್ಸ್ ವಾಹನಕ್ಕೆ ಬೆಂಕಿ; ತಪ್ಪಿದ ಅನಾಹುತ Read More »

ಕರಾವಳಿ

ಬಿಳಿನೆಲೆಯ ವ್ಯಕ್ತಿ ರೈಲಿನಿಂದ ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಡಿ. 17 ಬಂಟ್ವಾಳ: ರೈಲಿನಿಂದ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ಬಂಟ್ವಾಳ ನಗರ ಪೋಲಿಸ್ ಠಾಣಾ ವ್ಯಾಪ್ತಿಯ ತುಂಬೆ ಸಮೀಪದ ನೆತ್ತರಕೆರೆ ಎಂಬಲ್ಲಿ ನಡೆದಿದೆ. ಮೃತರನ್ನು ಕಡಬ ತಾಲೂಕಿನ ಬಿಳಿನೆಲೆ ಗೂನಡ್ಕ ನಿವಾಸಿ ಶಶಿಕುಮಾರ್ ಎಸ್. ಎಂದು ಗುರುತಿಸಲಾಗಿದೆ.ರಾತ್ರಿ ಸುಮಾರು 11 ಗಂಟೆಯ ವೇಳೆ ಸುಬ್ರಮಣ್ಯದಿಂದ ಮಂಗಳೂರಿಗೆ ತೆರಳುತ್ತಿದ್ದ ಪಂಚಗಂಗಾ ಎಕ್ಸ್ ಪ್ರೆಸ್ ನಿಂದ ಕೆಳಗೆ ಬಿದ್ದು ಈತ ಸಾವನ್ನಪ್ಪಿದ್ದಾರೆ. ಶಶಿಕುಮಾರ್ ಅವರು ರೈಲಿನ ಮೆಟ್ಟಿಲಿನ ಮೇಲೆ ಕುಳಿತು ಪ್ರಯಾಣಿಸುತ್ತಿದ್ದರು. ಇದೇ

ಬಿಳಿನೆಲೆಯ ವ್ಯಕ್ತಿ ರೈಲಿನಿಂದ ಬಿದ್ದು ಮೃತ್ಯು Read More »

ಕರಾವಳಿ

ಮಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಡಿ. 16 ಮಂಗಳೂರು: ಮಂಗಳೂರಿನ ಸಿಟಿ ಸೆಂಟರ್  ಮಾಲ್ ಬಳಿ  ಚಲಿಸುತ್ತಿದ್ದ ಕಾರೊಂದು ಹಠಾತ್ತನೆ ಬೆಂಕಿಗಾಹುತಿಯಾದ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ. ಕಾರು ಚಲಿಸುತ್ತಿದ್ದ ವೇಳೆ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಕಾರಿನಲ್ಲಿದ್ದ ಪ್ರಯಾಣಿಕರು ಹೊರಬಂದು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಸ್ಥಳೀಯರು ಅಗ್ನಿಶಾಮಕಕ್ಕೆ ಕರೆ ಮಾಡಿದ್ದು ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕ ತಂಡ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.  

ಮಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು Read More »

ಕರಾವಳಿ
Death, deadbody, Waterfall

ಉಳ್ಳಾಲ: ಪಿಂಡ ಪ್ರದಾನಕ್ಕೆಂದು ಬಂದಿದ್ದ ಮಹಿಳೆ ಸಮುದ್ರಪಾಲು

(ನ್ಯೂಸ್ ಕಡಬ) newskadaba.com ಡಿ. 16 ಉಳ್ಳಾಲ: ತಂಗಿಯ ಗಂಡನ ಪಿಂಡ ಪ್ರದಾನ ವಿಧಿಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಮಹಿಳೆಯೊಬ್ಬರು ಸಮುದ್ರಪಾಲಾಗಿ ಮೃತಪಟ್ಟ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ದೇರೆಬೈಲ್ ನ ದಿವಂಗತ ಜಗದೀಶ್ ಭಂಡಾರಿ ಎಂಬವರ ಪತ್ನಿ ಉಷಾ ಮೃತಪಟ್ಟವರು. ಉಷಾ ಅವರ ತಂಗಿಯ ಪತಿ ನಿಧನರಾಗಿದ್ದು, ಇಂದು ಅವರ ಪಿಂಡ ಪ್ರದಾನ ವಿಧಿಗಾಗಿ ಕುಟುಂಬಸ್ಥರು ಸೋಮೇಶ್ವರಕ್ಕೆ ಬಂದಿದ್ದರು. ಇವರ ಜೊತೆಗೆ ಉಷಾ ಕೂಡಾ ಬಂದಿದ್ದರು. ಪಿಂಡ ಪ್ರದಾನದ ಬಳಿಕ ಸಮುದ್ರದಲ್ಲಿ ಸ್ನಾನ ಪ್ರಕ್ರಿಯೆ

ಉಳ್ಳಾಲ: ಪಿಂಡ ಪ್ರದಾನಕ್ಕೆಂದು ಬಂದಿದ್ದ ಮಹಿಳೆ ಸಮುದ್ರಪಾಲು Read More »

ಕರಾವಳಿ

ಕಾರ್ಕಳದಲ್ಲಿ ರಸ್ತೆ ಮೇಲಿನ ಜಲ್ಲಿಕಲ್ಲಿನ ರಾಶಿಗೆ ಡಿಕ್ಕಿ ಹೊಡೆದು ಕಾರು ಪಲ್ಟಿ – ಇಬ್ಬರಿಗೆ ಗಾಯ, ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಡಿ. 16 ಕಾರ್ಕಳ: ರಾಷ್ಟ್ರೀಯ ಹೆದ್ದಾರಿಯ ಬೇಕಾಬಿಟ್ಟಿ ಕಾಮಗಾರಿಯಿಂದಾಗಿ ರಸ್ತೆಯ ಮೇಲೆ ಹಾಕಿದ್ದ ಜಲ್ಲಿಕಲ್ಲಿನ ರಾಶಿಗೆ ಕಾರು ಡಿಕ್ಕಿ ಹೊಡೆದು, ಪಲ್ಟಿಯಾದ ಪರಿಣಾಮ ಪ್ರಯಾಣಿಕರೊಬ್ಬರು ಗಂಭೀರ ಸ್ವರೂಪದಲ್ಲಿ ಗಾಯಗೊಂಡಿರುವ ಘಟನೆ ಕಾರ್ಕಳದ ಸಾಣೂರು ಎಂಬಲ್ಲಿ ಸೋಮವಾರ ಮುಂಜಾನೆ ಸಂಭವಿಸಿದೆ. ಮೂಡಬಿದ್ರೆ ಮೂಲದ ತೇಜಸ್ ಹಾಗೂ ಪ್ರಸಾದ್ ಅಪಘಾತದ ಗಾಯಾಳುಗಳು. ಇಬ್ಬರು ಗಾಯಾಳುಗಳ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಬ್ರಹ್ಮಾವರದಲ್ಲಿ ನಡೆದಿದ್ದ ವಾಲಿಬಾಲ್ ಪಂದ್ಯಾವಳಿಯನ್ನು ಮುಗಿಸಿಕೊಂಡು ವಾಪಸ್ ಬರುವಾಗ ಕಾರ್ಕಳ ಸಮೀಪ ಸಾಣೂರು

ಕಾರ್ಕಳದಲ್ಲಿ ರಸ್ತೆ ಮೇಲಿನ ಜಲ್ಲಿಕಲ್ಲಿನ ರಾಶಿಗೆ ಡಿಕ್ಕಿ ಹೊಡೆದು ಕಾರು ಪಲ್ಟಿ – ಇಬ್ಬರಿಗೆ ಗಾಯ, ಓರ್ವ ಗಂಭೀರ Read More »

ಕರಾವಳಿ

‘ಕಾಡಾನೆಗಳನ್ನು ಗುಂಡಿಕ್ಕಿ ಸಾಯಿಸಬೇಕು’ ಎಂದು ಬೇಜವಾಬ್ದಾರಿ ಹೇಳಿಕೆ ನೀಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕ್ಷಮೆ ಕೇಳಬೇಕು’- ನವೀನ್ ಸಾಲ್ಯಾನ್

(ನ್ಯೂಸ್ ಕಡಬ) newskadaba.com ಡಿ. 16 ಉಡುಪಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ “ಕಾಡಾನೆಗಳನ್ನು ಗುಂಡಿಕ್ಕಿ ಸಾಯಿಸಬೇಕು” ಎಂದು ಬೇಜವಾಬ್ದಾರಿ ಹೇಳಿಕೆ ನೀಡುತ್ತಿರುವ ಇವರು ಶಾಸಕ ಸ್ಥಾನಕ್ಕೆ ನಾಲಾಯಕ್,  ಅರಣ್ಯ ಭೂಮಿಯಲ್ಲಿ ನಡೆಯುತ್ತಿರುವ ಎಸ್ಟೇಟ್ ಗಳ ಒತ್ತುವರಿಯ ಅಕ್ರಮ ಗಣಿಗಾರಿಕೆ, ಅಕ್ರಮ ಹೋಂ ಸ್ಟೇಗಳನ್ನು ತೆರವುಗೊಳಿಸಲು ಧೈರ್ಯ ಮಾಡಲಿ ಎಂದು ಯುವ ಕಾಂಗ್ರೆಸ್ ಮುಖಂಡ ನವೀನ್ ಸಾಲ್ಯಾನ್ ಆಗ್ರಹಿಸಿದ್ದಾರೆ. ಈ ಬಗ್ಗೆ ಹೇಳಿಕೆ ನೀಡುವ ಶಾಸಕ ಹರೀಶ್ ಪೂಂಜಾ ಕಾಡನ್ನು ಒತ್ತುವರಿ ಮಾಡಿಕೊಂಡು ಪರಿಸರ ನಾಶ ಪಡಿಸುತ್ತಿರುವ

‘ಕಾಡಾನೆಗಳನ್ನು ಗುಂಡಿಕ್ಕಿ ಸಾಯಿಸಬೇಕು’ ಎಂದು ಬೇಜವಾಬ್ದಾರಿ ಹೇಳಿಕೆ ನೀಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕ್ಷಮೆ ಕೇಳಬೇಕು’- ನವೀನ್ ಸಾಲ್ಯಾನ್ Read More »

ಕರಾವಳಿ

‘ಡಿ.25, 26 ಕ್ಕೆ ಕೆ.ವಿ.ಜಿ. ಸುಳ್ಯ ಹಬ್ಬ ಆಚರಣೆ’ – ಡಾ.ಎನ್.ಎ. ಜ್ಞಾನೇಶ್

(ನ್ಯೂಸ್ ಕಡಬ) newskadaba.com ಡಿ. 14 ಸುಳ್ಯ: ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ಆಧುನಿಕ ಸುಳ್ಯದ ಭವ್ಯ ಶಿಲ್ಪಿ ಡಾ. ಕುರುಂಜಿ ವೆಂಕಟ್ರಮಣ ಗೌಡರ 96ನೇ ಜಯಂತ್ಯೋತ್ಸವ, ಕೆ.ವಿ.ಜಿ. ಸುಳ್ಯ ಹಬ್ಬ ಆಚರಣೆಯು ಡಿ.25 ಮತ್ತು 26 ರಂದು ನಡೆಯಲಿದೆ ಎಂದು ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಅಧ್ಯಕ್ಷ ಡಾ.ಎನ್.ಎ. ಜ್ಞಾನೇಶ್ ತಿಳಿಸಿದ್ದಾರೆ. ಸುಳ್ಯ ಪ್ರೆಸ್‌ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆವಿಜಿ ಕಾನೂನು ಮಹಾ ವಿದ್ಯಾಲಯದ ವಠಾರದಲ್ಲಿ ನಡೆಯುವ

‘ಡಿ.25, 26 ಕ್ಕೆ ಕೆ.ವಿ.ಜಿ. ಸುಳ್ಯ ಹಬ್ಬ ಆಚರಣೆ’ – ಡಾ.ಎನ್.ಎ. ಜ್ಞಾನೇಶ್ Read More »

ಕರಾವಳಿ

ಪುತ್ತೂರು ಕೆಎಸ್ಸಾರ್ಟಿಸಿ ಡಿಪೋ ವ್ಯಾಪ್ತಿಯ ಹೊರಗುತ್ತಿಗೆ ಚಾಲಕರಿಗೆ ವೇತನ ಕಡಿತ ಆರೋಪ; ಬಸ್ ಸಂಚಾರ ಅಸ್ತವ್ಯಸ್ತ

(ನ್ಯೂಸ್ ಕಡಬ) newskadaba.com ಡಿ. 14: ಪುತ್ತೂರು: ಪುತ್ತೂರು ಕೆಎಸ್ಸಾರ್ಟಿಸಿ ಡಿಪೋ ವ್ಯಾಪ್ತಿಯ ಹೊರಗುತ್ತಿಗೆ ಚಾಲಕರಿಗೆ  ವೇತನದಲ್ಲಿ ಅರ್ಧಕ್ಕಿಂತಲೂ ಅಧಿಕಪಟ್ಟು ಕಡಿತ ಮಾಡುತ್ತಿರುವ  ಗುತ್ತಿಗೆ ಸಂಸ್ಥೆಯ  ಕ್ರಮವನ್ನು ವಿರೋಧಿಸಿ  ಹೊರಗುತ್ತಿಗೆ ಚಾಲಕರು ದಿಢೀರ್ ಕೆಲಸ ಸ್ಥಗಿತಗೊಳಿಸಿರುವ ಘಟನೆ ವರದಿಯಾಗಿದೆ. ಹೊರಗುತ್ತಿಗೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 60 ಬಸ್ ಚಾಲಕರ ಪೈಕಿ 40 ಮಂದಿ ಶುಕ್ರವಾರ ರಾತ್ರಿಯಿಂದ ಕೆಲಸ ಸ್ಥಗಿತಗೊಳಿಸಿದ್ದಾರೆ. ಇದರಿಂದ ಪುತ್ತೂರು ಕೆಎಸ್ಸಾರ್ಟಿಸಿ ಡಿಪೋದ ಬಸ್ ಸೇವೆ ಅಸ್ತವ್ಯಸ್ತಗೊಂಡಿದೆ ಎಂದು ತಿಳಿದುಬಂದಿದೆ. ಪುತ್ತೂರು ಕೆಎಸ್ಸಾರ್ಟಿಸಿ ಡಿಪೋದ ಬಸ್ ಗಳಲ್ಲಿ

ಪುತ್ತೂರು ಕೆಎಸ್ಸಾರ್ಟಿಸಿ ಡಿಪೋ ವ್ಯಾಪ್ತಿಯ ಹೊರಗುತ್ತಿಗೆ ಚಾಲಕರಿಗೆ ವೇತನ ಕಡಿತ ಆರೋಪ; ಬಸ್ ಸಂಚಾರ ಅಸ್ತವ್ಯಸ್ತ Read More »

ಕರಾವಳಿ

ಕಾನೂನು ನನಗೂ ಒಂದೇ, ಸ್ವಾಮೀಜಿಗೂ ಒಂದೇ: ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಡಿ. 14 ಕಾನೂನು ನನಗೂ ಒಂದೇ, ಸ್ವಾಮೀಜಿಗೂ ಒಂದೇ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಳಗಾವಿಯಲ್ಲಿ ಕಳೆದ ಮಂಗಳವಾರ 2ಎ ಮೀಸಲಾತಿಗೆ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಪಂಚಮಸಾಲಿ ಲಿಂಗಾಯತ ಹೋರಾಟದ ವೇಳೆ ನಡೆದ ಲಾಠಿ ಚಾರ್ಜ್ ಸಮರ್ಥಿಸಿದ್ದಾರೆ. ಸಿಂದಗಿ ಶಾಸಕ ಅಶೋಕ ಮನಗೂಳಿ ಪುತ್ರಿ ವಿವಾಹದಲ್ಲಿ ಪಾಲ್ಗೊಂಡು ಇಲ್ಲಿ ತಂಗಿದ್ದ ಅವರು ಶುಕ್ರವಾರ ಮಾತನಾಡಿ, ಸುವರ್ಣ ಸೌಧಕ್ಕೆ ನುಗ್ಗಲು ಮುಂದಾದರು. ಕಲ್ಲು ಹೊಡೆದರು. ನನ್ನ ಬಳಿ ಫೋಟೊಗಳಿವೆ.

ಕಾನೂನು ನನಗೂ ಒಂದೇ, ಸ್ವಾಮೀಜಿಗೂ ಒಂದೇ: ಸಿಎಂ ಸಿದ್ದರಾಮಯ್ಯ Read More »

ಕರಾವಳಿ

ಕಾರ್ಕಳ: ಹೃದಯಾಘಾತದಿಂದ ರಾಜ್ಯಮಟ್ಟದ ಕಬಡ್ಡಿ ಆಟಗಾರ ನಿಧನ

(ನ್ಯೂಸ್ ಕಡಬ) newskadaba.com ಡಿ. 14 ಕಾರ್ಕಳ: ರಾಜ್ಯಮಟ್ಟದ ಕಬಡ್ಡಿ ಆಟಗಾರ, ಮುಟ್ಲುಪಾಡಿ, ನಡುಮನೆ ನಿವಾಸಿ ಪ್ರೀತಂ ಶೆಟ್ಟಿ(26) ಹೃದಯಾಘಾತದಿಂದ ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ. ಪ್ರೀತಂ ಶೆಟ್ಟಿ ಮಂಡ್ಯದಲ್ಲಿ ಶುಕ್ರವಾರ ನಡೆದಿದ್ದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಿದ್ದರು. ಆಟವಾಡುತ್ತಿದ್ದ ವೇಳೆ ಅವರಿಗೆ ತೀವ್ರ ಎದೆ ನೋವು ಕಾಣಿಸಿಕೊಂಡಿದೆ. ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಹೃದಯಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತರು ತಾಯಿ ಮತ್ತು ಓರ್ವ ಸಹೋದರನನ್ನು ಅಗಲಿದ್ದಾರೆ.

ಕಾರ್ಕಳ: ಹೃದಯಾಘಾತದಿಂದ ರಾಜ್ಯಮಟ್ಟದ ಕಬಡ್ಡಿ ಆಟಗಾರ ನಿಧನ Read More »

ಕರಾವಳಿ
Scroll to Top