ಕರಾವಳಿ

ಉಡುಪಿ: ಕಸದ ರಾಶಿಯಲ್ಲಿ ದೊರೆತ ಅಪರಿಚಿತ ಶವದ ಗುರುತು ಪತ್ತೆ

(ನ್ಯೂಸ್ ಕಡಬ) newskadaba.com ಡಿ. 02. ಉಡುಪಿ:  ಹೆಬ್ರಿ ಕೆಳಪೇಟೆಯ  ಮೂರು ರಸ್ತೆ ಬಳಿ ಕಸದ ರಾಶಿಯಲ್ಲಿ ನ. 30ರಂದು ಕೊಳೆತ ಸ್ಥಿತಿಯಲ್ಲಿ ದೊರೆತ ಅಪರಿಚಿತ ಶವದ ಗುರುತು ಪತ್ತೆಯಾಗಿದೆ. ಕೊಳೆತ ಸ್ಥಿತಿಯಲ್ಲಿ ದೊರೆತ ಶವವನ್ನು ಮೂಲತಃ  ಹೆಬ್ರಿ ಸಂತೆಕಟ್ಟೆ ನಿವಾಸಿ ರಾಜೀವ ಪಾಣರ  ಅವರದ್ದು ಎಂದು ಗುರುತಿಸಲಾಗಿದೆ. ಮೃತ ರಾಜೀವ ಅವರು ಬೆಳಂಜೆಯ ಬಾಡಿಗೆ ಮನೆ ಒಂದರಲ್ಲ ವಾಸವಿದ್ದರು. ವಿಪರೀತ ಮದ್ಯಪಾನ ಚಟ ಹೊಂದಿದ್ದ ಇವರು ದಿನ ಮನೆಗೆ ಹೋಗದೆ ಬಸ್ ತಂಗುದಾಣ ಬಳಿ ಇರುತ್ತಿದ್ದರು […]

ಉಡುಪಿ: ಕಸದ ರಾಶಿಯಲ್ಲಿ ದೊರೆತ ಅಪರಿಚಿತ ಶವದ ಗುರುತು ಪತ್ತೆ Read More »

ಕರಾವಳಿ

ಅರಣ್ಯ ಇಲಾಖೆಯ ಸಿಬ್ಬಂದಿ ಕಚೇರಿಯೊಳಗೆ ಕುಸಿದು ಬಿದ್ದು ಮೃತ್ಯು..!

(ನ್ಯೂಸ್ ಕಡಬ) newskadaba.com ನ. 30. ರಾತ್ರಿ ಸಮಯದಲ್ಲಿ ಕರ್ತವ್ಯದಲ್ಲಿರುವಾಗಲೇ ಅರಣ್ಯ ಇಲಾಖೆಯ ದಿನಗೂಲಿ ಸಿಬ್ಬಂದಿಯೋರ್ವ ಕಚೇರಿಯೊಳಗೆ ಕುಸಿದು ಬಿದ್ದು ಮೃತಪಟ್ಟ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ಮೃತಪಟ್ಟವರನ್ನು ವೀರಕಂಬಗ್ರಾಮದ ಮಜ್ಜೋನಿ ದಿವಂಗತ ಕೃಷ್ಣಪ್ಪ ಮೂಲ್ಯರ ಪುತ್ರ ಜಯರಾಮ‌ ಮೂಲ್ಯ(45) ಎಂದು ಗುರುತಿಸಲಾಗಿದೆ. ಅವರು ಕಳೆದ ಸುಮಾರು 30 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನ.29ರಂದು ರಾತ್ರಿ ಪಾಳಿಯಲ್ಲಿ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸಂಜೆ ವೇಳೆ ಇವರಿಗೆ ತಲೆಸುತ್ತು ಬರುವ ವಿಚಾರ ಇಲಾಖೆಯ

ಅರಣ್ಯ ಇಲಾಖೆಯ ಸಿಬ್ಬಂದಿ ಕಚೇರಿಯೊಳಗೆ ಕುಸಿದು ಬಿದ್ದು ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಅಪರಾಧ ವಿಭಾಗದ ಡಿಸಿಪಿ ಆಗಿ ದಿನೇಶ್ ಕುಮಾರ್ ನೇಮಕ

(ನ್ಯೂಸ್ ಕಡಬ) newskadaba.com ನ. 30. ಬೆಂಗಳೂರಿನ ಸಿಐಡಿ ಎಸ್‌ಪಿಯಾಗಿದ್ದ ಕೆ ರವಿಶಂಕರ್ ಅವರನ್ನು ಮಂಗಳೂರಿನ ಡಿಸಿಪಿ (ಅಪರಾಧ ಮತ್ತು ಸಂಚಾರ) ಬಿಪಿ ದಿನೇಶ್ ಕುಮಾರ್ ಅವರ ಸ್ಥಾನಕ್ಕೆ ನಿಯೋಜಿಸಿ ಆದೇಶ ಹೊರಡಿಸಲಾಗಿದೆ. ಸರ್ಕಾರದ ಅಧೀನ ಕಾರ್ಯದರ್ಶಿ ಬಿ ಕೆ ಭುವನೇಂದ್ರ ಕುಮಾರ್ ಅವರು ಹೊರಡಿಸಿರುವ ಆದೇಶದಂತೆ ಡಿಸಿಪಿ ಬಿ ಪಿ ದಿನೇಶ್ ಕುಮಾರ್ ಅವರ ಮುಂದಿನ ನಿಯೋಜನೆಗಾಗಿ ಪೊಲೀಸ್ ಪ್ರಧಾನ ಕಚೇರಿಗೆ ವರದಿ ಮಾಡಲು ಸೂಚನೆ ನೀಡಲಾಗಿದೆ.    

ಮಂಗಳೂರು: ಅಪರಾಧ ವಿಭಾಗದ ಡಿಸಿಪಿ ಆಗಿ ದಿನೇಶ್ ಕುಮಾರ್ ನೇಮಕ Read More »

ಕರಾವಳಿ

ವಿಶ್ವ ಪ್ರಸಿದ್ಧ ತ್ರಾಸಿ-ಮರವಂತೆ ಬೀಚ್‌ನಲ್ಲಿ ಸ್ಕೈ ಡೈನಿಂಗ್ ಆರಂಭ

(ನ್ಯೂಸ್ ಕಡಬ) newskadaba.com ನ. 30. ವಿಶ್ವ ಪ್ರಸಿದ್ಧ ತ್ರಾಸಿ – ಮರವಂತೆ ಬೀಚ್‌ನಲ್ಲಿ ವಿನೂತನವಾದ ಸ್ಕೈ ಡೈನಿಂಗ್ ನವೆಂಬರ್ 29ರಿಂದ ಆರಂಭಗೊಂಡಿದೆ. ಮಂಗಳೂರಿನ ಪಣಂಬೂರು ಬಳಿಕ ಇದು ರಾಜ್ಯದ ಎರಡನೇ ಸ್ಕೈ ಡೈನಿಂಗ್ ತಾಣವಾಗಿದೆ. ಇದನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಗುರುರಾಜ ಗಂಟಿಹೊಳೆ ಅವರು, ಈ ಹೊಟೇಲ್ ಆರಂಭದಿಂದಾಗಿ ಜಿಲ್ಲೆಯ ಪ್ರವಾಸೋದ್ಯಮ ಚಟುವಟಿಕೆಗೆ ಅನುಕೂಲವಾಗಲಿದೆ ಎಂದು ತಿಳಿಸಿದರು. ಇದರಲ್ಲಿ 90-100 ಮೀಟರ್ ಎತ್ತರದಲ್ಲಿ ಕುಳಿತು ಸೌಪರ್ಣಿಕಾ ನದಿ ಹಾಗೂ ಅರಬ್ಬೀ ಸಮುದ್ರವನ್ನು ನೋಡುತ್ತಾ ತಿನಿಸನ್ನು ಸವಿಯಬಹುದು.

ವಿಶ್ವ ಪ್ರಸಿದ್ಧ ತ್ರಾಸಿ-ಮರವಂತೆ ಬೀಚ್‌ನಲ್ಲಿ ಸ್ಕೈ ಡೈನಿಂಗ್ ಆರಂಭ Read More »

ಕರಾವಳಿ

ಕಾರು- ಲಾರಿ ನಡುವೆ ಅಪಘಾತ: ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ನ. 30. ನೂತನ ಸೇತುವೆಯಲ್ಲಿ ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ ಘಟನೆ ನ. 29 ರಂದು ರಾತ್ರಿ ಸುಮಾರು 7 ಗಂಟೆಗೆ ನಡೆದಿದೆ. ಬಿ.ಸಿ.ರೋಡಿನಿಂದ ಮೆಲ್ಕಾರ್ ಕಡೆಗೆ ಸಂಚರಿಸುತ್ತಿದ್ದ ಲಾರಿ ಹಾಗೂ ಪಾಣೆಮಂಗಳೂರು ಕಡೆಯಿಂದ ಬರುತ್ತಿದ್ದ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಕಾರು ಜಖಂಗೊಂಡಿದೆಯಾದರೂ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಯಾವುದೇ ಗಾಯವಿಲ್ಲದೆ ಪಾರಾಗಿದ್ದಾರೆ. ಚತುಷ್ಪತ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಾಣೆಮಂಗಳೂರು ಸೇತುವೆಯ ಪಕ್ಕ ಹೊಸ ಸೇತುವೆ ಕಾಮಗಾರಿ ಪೂರ್ಣಗೊಂಡು ಇದೀಗ

ಕಾರು- ಲಾರಿ ನಡುವೆ ಅಪಘಾತ: ಅಪಾಯದಿಂದ ಪಾರು Read More »

ಕರಾವಳಿ

ನಕ್ಸಲ್ ವಿಕ್ರಂ ಗೌಡ ಎನ್ ಕೌಂಟರ್ ನಕಲಿ ಅಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

(ನ್ಯೂಸ್ ಕಡಬ) newskadaba.com ಉಡುಪಿ, ನ. 30. ನಕ್ಸಲ್ ವಿಕ್ರಂ ಗೌಡ ಎನ್ಕೌಂಟರ್ ನಕಲಿ ಅಲ್ಲ. ಎನ್ಕೌಂಟರ್ ನಕಲಿ ಎಂದು ಅನುಮಾನ ಪಡುವುದು ಬೇಡ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟಪಡಿಸಿದ್ದಾರೆ.   ನಕ್ಸಲೈಟನ್ನು ಬೇರು ಸಮೇತ ಕಿತ್ತು ಹಾಕಬೇಕು. ಇದು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಿಲುವು. ಪರ ವಿರೋಧ ಚರ್ಚೆ ಎಲ್ಲಾ ಸಂದರ್ಭದಲ್ಲಿ ಇರುತ್ತದೆ. ಸರ್ಕಾರ ಕಾನೂನು ಚೌಕಟ್ಟಿನಲ್ಲಿ ಕೆಲಸ

ನಕ್ಸಲ್ ವಿಕ್ರಂ ಗೌಡ ಎನ್ ಕೌಂಟರ್ ನಕಲಿ ಅಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ Read More »

ಕರಾವಳಿ

ಮಂಗಳೂರು: AI- ಬಳಸಿ ಸ್ಪ್ಯಾಮ್‌ ಕರೆಗಳಿಗೆ ಕಡಿವಾಣ ಹಾಕಿದ ಏರ್‌ಟೆಲ್‌ ನೆಟ್‌ವರ್ಕ್‌

(ನ್ಯೂಸ್ ಕಡಬ) newskadaba.com ಮಂಗಳೂರು, ನ. 30. ಭಾರ್ತಿ ಏರ್‌ಟೆಲ್‌ನ ಹೊಸ AI ಚಾಲಿತ ಸ್ಪ್ಯಾಮ್ ಪತ್ತೆ ಮಾಡುವ ವ್ಯವಸ್ಥೆಯು ಕರ್ನಾಟಕದ ಗ್ರಾಹಕರಿಗೆ ಹೆಚ್ಚು ಅಗತ್ಯವಿರುವ ಪರಿಹಾರವನ್ನು ಒದಗಿಸಿದೆ. ಪ್ರಾರಂಭವಾದ 63 ದಿನಗಳಲ್ಲಿ, ಈ ಪ್ರವರ್ತಕ ಟೆಲಿಕಾಂ ಪರಿಹಾರವು ಕರ್ನಾಟಕದಲ್ಲಿ 682 ಮಿಲಿಯನ್ ಸಂಭಾವ್ಯ ಸ್ಪ್ಯಾಮ್ ಕರೆಗಳು ಮತ್ತು 46 ಮಿಲಿಯನ್ ಸ್ಪ್ಯಾಮ್ SMS ಸಂದೇಶಗಳನ್ನು ಯಶಸ್ವಿಯಾಗಿ ಗುರುತಿಸಿದೆ. ಕರ್ನಾಟಕದಲ್ಲಿನ ಎಲ್ಲಾ ಏರ್‌ಟೆಲ್ ಮೊಬೈಲ್ ಗ್ರಾಹಕರು ಈಗ ಸೇವೆಯನ್ನು ವಿನಂತಿಸುವ ಅಥವಾ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳದೆಯೇ ಉಚಿತ

ಮಂಗಳೂರು: AI- ಬಳಸಿ ಸ್ಪ್ಯಾಮ್‌ ಕರೆಗಳಿಗೆ ಕಡಿವಾಣ ಹಾಕಿದ ಏರ್‌ಟೆಲ್‌ ನೆಟ್‌ವರ್ಕ್‌ Read More »

ಕರಾವಳಿ

ಕಡಬ: ಚಾರ್ವಾಕದ ಕುಮಾರಧಾರ ನದಿಯಲ್ಲಿ ಅಕ್ರಮ ಮರಳುಗಾರಿಕೆ- ಗ್ರಾಮಸ್ಥರ ಆಕ್ರೋಶ

(ನ್ಯೂಸ್ ಕಡಬ) newskadaba.com ಕಡಬ, ನ. 30. ಚಾರ್ವಾಕ ಗ್ರಾಮದ ಕುಮಾರಧಾರ ನದಿಯಲ್ಲಿ ನಡೆಯುವ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರು ಸಿಡಿದೆದ್ದಿದ್ದು, ಇದೀಗ ಬೋಟ್ ಕಟ್ಟಿ ಹಾಕಿದವರ ವಿರುದ್ದ ಕೇಸು ದಾಖಲಿಸುವ ಬಗ್ಗೆ ಬಂದ ಸುದ್ದಿಯ ಹಿನ್ನೆಲೆ ಶುಕ್ರವಾರ ಸಂಜೆ ಕಡಬ ಠಾಣೆಗೆ ಗ್ರಾಮಸ್ಥರು ಆಗಮಿಸಿದ ಘಟನೆ ನಡೆದಿದೆ. ಚಾರ್ವಾಕ ಕುಂಬ್ಲಾಡಿ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖರು ಊರವರು ಸೇರಿ ಚಾರ್ವಾಕ ಗ್ರಾಮದ ಭಾಗದಲ್ಲಿ ಮರಳುಗಾರಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದಲ್ಲದೆ, ನಿರ್ಣಯವನ್ನೂ ಮಾಡಿದ್ದರು. ಎರಡು ದಿನದ ಹಿಂದೆ ಚಾರ್ವಾಕ

ಕಡಬ: ಚಾರ್ವಾಕದ ಕುಮಾರಧಾರ ನದಿಯಲ್ಲಿ ಅಕ್ರಮ ಮರಳುಗಾರಿಕೆ- ಗ್ರಾಮಸ್ಥರ ಆಕ್ರೋಶ Read More »

ಕರಾವಳಿ

ವಾಯುಭಾರ ಕುಸಿತ: ಕರಾವಳಿಯಲ್ಲಿ ಚಳಿಯ ಹೆಚ್ಚಳ ಸಾಧ್ಯತೆ ಹವಾಮಾನ ಇಲಾಖೆ ಮುನ್ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 30. ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿಯ ಗ್ರಾಮೀಣ ಭಾಗದಲ್ಲಿ ಗುರುವಾರ ರಾತ್ರಿ ಹೆಚ್ಚು ಚಳಿಯ ಅನುಭವವಾಗಿದ್ದು, ಮುಂದಿನ ಒಂದು ವಾರಕ್ಕೂ ಅಧಿಕ ಕಾಲ ಚಳಿಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ದಕ್ಷಿಣ

ವಾಯುಭಾರ ಕುಸಿತ: ಕರಾವಳಿಯಲ್ಲಿ ಚಳಿಯ ಹೆಚ್ಚಳ ಸಾಧ್ಯತೆ ಹವಾಮಾನ ಇಲಾಖೆ ಮುನ್ಸೂಚನೆ Read More »

ಕರಾವಳಿ

ಬಾಂಗ್ಲಾದಲ್ಲಿ ಬಂಧಿಸಲ್ಪಟ್ಟ ಚಿನ್ಮಯ ಕೃಷ್ಣದಾಸ ಪ್ರಭು ಬಿಡುಗಡೆಗೆ ಒತ್ತಾಯಿಸಿ ಮಂಗಳೂರಿನಲ್ಲಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ನ. 29. ಮಂಗಳೂರು:  ಬಾಂಗ್ಲಾದೇಶದಲ್ಲಿ ಬಂಧಿಸಲ್ಪಟ್ಟ ಧಾರ್ಮಿಕ ಮುಖಂಡ ಚಿನ್ಮಯ ಕೃಷ್ಣದಾಸ ಪ್ರಭು ಅವರನ್ನು ಬಿಡುಗಡೆಗೊಳಿಸಬೇಕು, ಬಾಂಗ್ಲಾದ ಹಿಂದೂಗಳಿಗೆ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ಮಂಗಳೂರಿನ ಮಿನಿ ವಿಧಾನ ಸೌಧದ ಎದುರು ಇಂದು ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಮಾತನಾಡಿದ ವಿಹೆಚ್ ಪಿ ಕರ್ನಾಟಕ ದಕ್ಷಿಣ ಪ್ರಾಂತ ಅಧ್ಯಕ್ಷ ಡಾ. ಎಂ.ಬಿ.ಪುರಾಣಿಕ್ ಅವರು, ಬಾಂಗ್ಲಾದಿಂದ ಹಿಂದೂಗಳನ್ನು ಹೊರ ದಬ್ಬುವ ಷಡ್ಯಂತ್ರ ನಡೆಯುತ್ತಿದೆ. ಜಗತ್ತಿನಲ್ಲಿ ಶಾಂತಿಗಾಗಿ ಹುಟ್ಟಿದ ಇಸ್ಕಾನ್

ಬಾಂಗ್ಲಾದಲ್ಲಿ ಬಂಧಿಸಲ್ಪಟ್ಟ ಚಿನ್ಮಯ ಕೃಷ್ಣದಾಸ ಪ್ರಭು ಬಿಡುಗಡೆಗೆ ಒತ್ತಾಯಿಸಿ ಮಂಗಳೂರಿನಲ್ಲಿ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ
Scroll to Top