ಕರಾವಳಿ

ಮೀನುಗಾರಿಕೆ ಮಾಡುತ್ತಿರುವ ವೇಳೆ ಮೃತ್ಯು: ಇಲಾಖೆ ವತಿಯಿಂದ ಕುಟುಂಬಕ್ಕೆ 8 ಲಕ್ಷ ರೂ. ಪರಿಹಾರ

(ನ್ಯೂಸ್ ಕಡಬ) newskadaba.com ಕುಂದಾಪುರ, ನ. 23. ಬೀಜಾಡಿ ಮೀನುಗಾರರ ಸಹಕಾರಿ ಸಂಘದ ಸದಸ್ಯರಾದ ಕೋಣಿ ಗ್ರಾಮದ ನಿವಾಸಿ ವನಜಾ ಅವರು ಹೊಳೆಯಲ್ಲಿ ಮೀನುಗಾರಿಕೆ ಮಾಡುತ್ತಿರುವಾಗ ಮೃತಪಟ್ಟಿದ್ದು, ಮೃತರ ವಾರಸುದಾರರಾದ ಪತಿ ವಾಸು ಪೂಜಾರಿ ಅವರಿಗೆ ಮೀನುಗಾರಿಕಾ ಇಲಾಖೆಯ ಸಂಕಷ್ಟ ಪರಿಹಾರ ನಿಧಿಯಿಂದ ಪರಿಹಾರ ಧನ ರೂ.8 ಲಕ್ಷ ದೊರಕಿದೆ. ವಿಶ್ವ ಮೀನುಗಾರಿಕೆ ದಿನಾಚರಣೆಯ ಅಂಗವಾಗಿ ಮುರ್ಡೇಶ್ವರದಲ್ಲಿ ನಡೆದ ಸಮಾರಂಭದಲ್ಲಿ ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಮತ್ತು ಮೀನುಗಾರಿಕಾ ಸಚಿವರಾದ ಮಂಕಾಳ ಎಸ್.ವೈದ್ಯ ಅವರು ವಾಸು ಪೂಜಾರಿ ಅವರಿಗೆ […]

ಮೀನುಗಾರಿಕೆ ಮಾಡುತ್ತಿರುವ ವೇಳೆ ಮೃತ್ಯು: ಇಲಾಖೆ ವತಿಯಿಂದ ಕುಟುಂಬಕ್ಕೆ 8 ಲಕ್ಷ ರೂ. ಪರಿಹಾರ Read More »

ಕರಾವಳಿ, ಕ್ರೈಮ್ ನ್ಯೂಸ್

ಗುಂಡ್ಯ: ಬೆಳ್ಳಂಬೆಳಗ್ಗೆ ಸರಣಿ ಅಪಘಾತ- ಇಪ್ಪತ್ತಕ್ಕೂ ಹೆಚ್ಚು ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ನ. 23. ಖಾಸಗಿ ಬಸ್, ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಇಪ್ಪತ್ತಕ್ಕೂ ಹೆಚ್ಚುಮಂದಿ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಶನಿವಾರದಂದು ನಸುಕಿನ ಜಾವ ನಡೆದಿದೆ. ಬೆಂಗಳೂರು ಮೂಲದ ಕಾಲೇಜು ವಿದ್ಯಾರ್ಥಿಗಳು ಕುಂದಾಪುರಕ್ಕೆ ಪ್ರವಾಸಕ್ಕೆಂದು ತೆರಳಿ ಹಿಂತಿರುಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿ ಕೆಎಸ್ಸಾರ್ಟಿಸಿ ಬಸ್ ಗೆ ಢಿಕ್ಕಿ ಹೊಡೆದಿದೆ. ಈ ವೇಳೆ ಹಿಂದಿನಿಂದ

ಗುಂಡ್ಯ: ಬೆಳ್ಳಂಬೆಳಗ್ಗೆ ಸರಣಿ ಅಪಘಾತ- ಇಪ್ಪತ್ತಕ್ಕೂ ಹೆಚ್ಚು ಮಂದಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಮರ್ಧಾಳದ ಹೊಟೇಲ್‌ ‘ಎಲೈಟ್ಸ್ ಮಂದಿ’ಯಲ್ಲಿ 5 ದಿನಗಳ ಭರ್ಜರಿ ಆಫರ್

(ನ್ಯೂಸ್ ಕಡಬ) newskadaba.com ನ. 22. ಸುಬ್ರಹ್ಮಣ್ಯ- ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪ ಕಾರ್ಯಾಚರಿಸುತ್ತಿರುವ ಕಡಬ ತಾಲೂಕಿನ ಏಕೈಕ ಮಂದಿ ಬಿರಿಯಾನಿ ಹೋಟೆಲ್ “ಎಲೈಟ್ಸ್ ಮಂದಿ ಹೋಟೆಲ್ & ಜ್ಯೂಸ್ ಪಾಯಿಂಟ್‌” ನಲ್ಲಿ ಇಂದಿನಿಂದ (ನ.22) ನವೆಂಬರ್ 26ರ ಮಂಗಳವಾರದವರೆಗೆ ಐದು ದಿನಗಳ ಕಾಲ ಭರ್ಜರಿ ಆಫರ್ ನಡೆಯಲಿದೆ. ಫುಲ್ ಅಲ್-ಫಹಮ್, 600ml ಹನಾ ಡ್ರಿಂಕ್ಸ್ ಕೇವಲ 430 ರೂ., 1/2 ಅಲ್-ಫಹಮ್, 250ml ಹನಾ ಡ್ರಿಂಕ್ಸ್ ಕೇವಲ 230 ರೂ., ಚಿಕನ್ ನೂಡಲ್ಸ್, 2

ಮರ್ಧಾಳದ ಹೊಟೇಲ್‌ ‘ಎಲೈಟ್ಸ್ ಮಂದಿ’ಯಲ್ಲಿ 5 ದಿನಗಳ ಭರ್ಜರಿ ಆಫರ್ Read More »

ಕರಾವಳಿ

ಬಂಟ್ವಾಳದಲ್ಲಿ ನ. 24, 25 ರಂದು ಎಐಸಿಸಿಟಿಯು ಪ್ರಥಮ ಕರ್ನಾಟಕ ರಾಜ್ಯ ಸಮ್ಮೇಳನ

(ನ್ಯೂಸ್ ಕಡಬ)com ಬಂಟ್ವಾಳ, ನ.22. ಕರ್ನಾಟಕದಲ್ಲಿ ಹಲವು ದಶಕಗಳಿಂದಲೂ ಕಾರ್ಮಿಕರ ಕಲ್ಯಾಣಕ್ಕಾಗಿ ಮತ್ತು ಶ್ರಮ ಜೀವಿಗಳ ಅಧಿಕಾರಕ್ಕಾಗಿ ಹೋರಾಟ ನಡೆಸುತ್ತಿರುವ ಎಐಸಿಸಿಟಿಯು ತನ್ನ ಮೊದಲನೇ ರಾಜ್ಯ ಸಮ್ಮೇಳನವನ್ನು ನ. 24, 25 ರಂದು ಬಂಟ್ವಾಳ ತಾಲೂಕು ಬಿ.ಸಿ .ರೋಡಿನ ಅಂಬೇಡ್ಕರ್ ಭವನದಲ್ಲಿಆಯೋಜಿಸಿದೆ. ಎರಡು ದಿನಗಳ ಕಾಲ ನಡೆಯಲಿರುವ ಈ ಸಮ್ಮೇಳನವು ನವೆಂಬರ್ 24 ಭಾನುವಾರ ಬೆಳಿಗ್ಗೆ 10 ಗಂಟೆಗೆ ಬಿ.ಸಿ.ರೋಡ್ ಕೈಕಂಬದಿಂದ ಶ್ರಮಜೀವಿಗಳ ಅಧಿಕಾರದತ್ತ ಜಾಥಾದಿಂದ ಆರಂಭಗೊಳ್ಳಲಿದ್ದು ಡಾ। ಬಿ. ಆರ್. ಅಂಬೇಡ್ಕರ್ ಭವನದಲ್ಲಿ “ಕರ್ನಾಟಕದಲ್ಲಿ ಕ್ರಾಂತಿಕಾರಿ

ಬಂಟ್ವಾಳದಲ್ಲಿ ನ. 24, 25 ರಂದು ಎಐಸಿಸಿಟಿಯು ಪ್ರಥಮ ಕರ್ನಾಟಕ ರಾಜ್ಯ ಸಮ್ಮೇಳನ Read More »

ಕರಾವಳಿ

ಮಂಗಳೂರು: ಬಾಲಕಿಯ ಮೇಲೆ ಅತ್ಯಾಚಾರ; ಗರ್ಭಪಾತ ಮಾಡಿಸಿದ್ದ ವ್ಯಕ್ತಿಗೆ 20ವರ್ಷ ಶಿಕ್ಷೆ, ದಂಡ

(ನ್ಯೂಸ್ ಕಡಬ) newskadaba.comಮಂಗಳೂರು, ನ.22. ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಗರ್ಭಪಾತ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿ ಅಪರಾಧಿಯಾದ ಬೆಳ್ತಂಗಡಿ ಕಡಿರುದ್ಯಾವರ ಗ್ರಾಮದ ಕೊಪ್ಪದಗಂಡಿ ಮನೆಯ ಕೆ. ಸುಧೀರ್  ಎಂಬಾತನಿಗೆ 20 ವರ್ಷಗಳ ಜೈಲು ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್‌ಟಿಎಸ್‌ಸಿ-2 ಪೋಕ್ಸೋ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಮಂಗಳೂರು: ಬಾಲಕಿಯ ಮೇಲೆ ಅತ್ಯಾಚಾರ; ಗರ್ಭಪಾತ ಮಾಡಿಸಿದ್ದ ವ್ಯಕ್ತಿಗೆ 20ವರ್ಷ ಶಿಕ್ಷೆ, ದಂಡ Read More »

ಕರಾವಳಿ

ಬೆಳ್ತಂಗಡಿ: ಹೊಸ ಬಗೆಯ ಪ್ಯಾಂಟ್ ಧರಿಸಿದ್ದಕ್ಕೆ ಪಡ್ಡೆ ಹುಡುಗರಿಂದ ಅವಮಾನ: ಯುವಕ ಆತ್ಮಹತ್ಯೆಗೆ ಯತ್ನ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.22. ಯುವಕನೊಬ್ಬ ತನ್ನ ವಿನೂತನ ಶೈಲಿಯ ಜೀನ್ಸ್ ಪ್ಯಾಂಟ್ ಧರಿಸಿ ನ.21 ರಂದು ಮಧ್ಯಾಹ್ನ ಬೆಳ್ತಂಗಡಿ ಸಂತೆಕಟ್ಟೆ ಮಾರುಕಟ್ಟೆಗೆ ಬಂದಾಗ ಮೂವರು ಯುವಕರು ಆತನನ್ನು ಅವಮಾನ ಮಾಡಿದ ಹಿನ್ನೆಲೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪಣಕಜೆ ನಿವಾಸಿ ಮುಹಮ್ಮದ್ ಹಾಯಿಫ್ ಎಂಬವರ ಪುತ್ರ ಶಾಹಿಲ್ ಆತ್ಮಹತ್ಯೆಗೆ ಯತ್ನಿಸಿದ ಯುವಕ. ಈತ ತನ್ನ ವಿನೂತನ ಶೈಲಿಯ ಜೀನ್ಸ್ ಪ್ಯಾಂಟ್ ಧರಿಸಿ ನ.21 ರಂದು ಮಧ್ಯಾಹ್ನ ಬೆಳ್ತಂಗಡಿ ಸಂತೆಕಟ್ಟೆ ಮಾರುಕಟ್ಟೆಗೆ ಬಂದಿದ್ದ.

ಬೆಳ್ತಂಗಡಿ: ಹೊಸ ಬಗೆಯ ಪ್ಯಾಂಟ್ ಧರಿಸಿದ್ದಕ್ಕೆ ಪಡ್ಡೆ ಹುಡುಗರಿಂದ ಅವಮಾನ: ಯುವಕ ಆತ್ಮಹತ್ಯೆಗೆ ಯತ್ನ Read More »

ಕರಾವಳಿ

ಮಂಗಳೂರು: ಯು.ಟಿ ಖಾದರ್ ನಿಂದ ಕಲಾಪರ್ಬ ದ ಲಾಂಛನ, ಕರಪತ್ರ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ.22. ಶರಧಿ ಪ್ರತಿಷ್ಠಾನದ ವತಿಯಿಂದ ಜ.11 ಮತ್ತು 12 ರಂದು ಮಂಗಳೂರಿನ ಕದ್ರಿ ಪಾರ್ಕ್‌ನಲ್ಲಿ ನಡೆಯಲಿರುವ ‘ಕಲಾ ಪರ್ಬ’ದ ಲಾಂಛನ ಮತ್ತು ಕರಪತ್ರವನ್ನು ಬುಧವಾರ ನಗರದ ವಿಷ್ಣು ವೈಭವ ಹೊಟೇಲ್‌ನಲ್ಲಿ ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್ ರವರು ಬಿಡುಗಡೆಗೊಳಿಸಿದರು. ಎಳೆಯ ಕಲಾವಿದರಿಗೆ ಸ್ಪೂರ್ತಿ ನೀಡಲು ‘ಕಲಾ ಪರ್ಬ’ ಆಯೋಜಿಸಿರುವುದು ಶ್ಲಾಘನೀಯ. ಕದ್ರಿ ಪಾರ್ಕ್‌ನ ಒಟ್ಟು ಅಭಿವೃದ್ದಿ ಹಾಗೂ ಪಾರ್ಕ್ನ ಒಳಗೆ ವಿವಿಧ ಕಲಾ ಚಟುವಟಿಕೆಗೆ ಅವಕಾಶ ಕಲ್ಪಿಸಲು 1 ಕೋಟಿ ರೂ. ಮೀಸಲಿಡುವ ಬಗ್ಗೆ

ಮಂಗಳೂರು: ಯು.ಟಿ ಖಾದರ್ ನಿಂದ ಕಲಾಪರ್ಬ ದ ಲಾಂಛನ, ಕರಪತ್ರ ಬಿಡುಗಡೆ Read More »

ಕರಾವಳಿ

ವಿಷಹಾರ ಸೇವಿಸಿ 35ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

(ನ್ಯೂಸ್ ಕಡಬ) newskadaba.com ಕಾಸರಗೋಡು, ನ.22. ವಿಷಾಹಾರ ಸೇವನೆಯಿಂದ ಅಸ್ವಸ್ಥಗೊಂಡ 35 ಕ್ಕೂ ಅಧಿಕ ವಿದ್ಯಾರ್ಥಿಗಳು ಕಾಸರಗೋಡು ನಗರದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದ ಘಟನೆ ಗುರುವಾರ ನಡೆದಿದೆ. ಅಲಂಪಾಡಿ ಹಯರ್ ಸೆಕಂಡರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯಲ್ಲಿ ಸಂಜೆ ವಿದ್ಯಾರ್ಥಿಗಳಿಗೆ ಹಾಲು ವಿತರಿಸಲಾಗಿದ್ದು, ಬಳಿಕ ಮನೆಗೆ ಬಂದ ವಿದ್ಯಾರ್ಥಿಗಳು ವಾಂತಿ ಹಾಗೂ ಇನ್ನಿತರ ರೀತಿಯಲ್ಲಿ ಅಸ್ವಸ್ಥತೆ ಕಂಡು ಬಂದಿದೆ.ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಕಾಸರಗೋಡು ಜನರಲ್ ಆಸ್ಪತ್ರೆ, ಚೆಂಗಳ ಸಹಕಾರಿ ಆಸ್ಪತ್ರೆ ಹಾಗೂ ವಿದ್ಯಾನಗರ, ಕಾಸರಗೋಡು ನಗರದ

ವಿಷಹಾರ ಸೇವಿಸಿ 35ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ Read More »

ಕರಾವಳಿ

ಮಂಗಳೂರು: ಟ್ರಾಯ್ನಿಂದ ಕರೆ ಮಾಡಿರುವುದಾಗಿ ನಂಬಿಸಿ 1.71 ಕೋಟಿ ರೂ.ವಂಚನೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ.21. ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ನಿಂದ ಕರೆ ಮಾಡಿರುವುದಾಗಿ ತಿಳಿಸಿ, ಮೊಬೈಲ್ ಸಿಮ್ ಖರೀದಿ ಮಾಡಿ ಕಾನೂನು ಬಾಹಿರ ಚಟುವಟಿಕೆ ನಡೆಸುತ್ತಿರುವ ಬಗ್ಗೆ ಆರೋಪಿಸಿ 1.71 ಕೋ.ರೂ. ವಂಚಿಸಿರುವ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನ. 11ರಂದು ದೂರುದಾರರಿಗೆ ಅಪರಿಚಿತ ವ್ಯಕ್ತಿಯೋರ್ವ ಟ್ರಾಯ್ ಪ್ರತಿನಿಧಿ ಎಂದು ಕರೆ ಮಾಡಿದ್ದು, ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್ ನಂಬರ್ ರಿಜಿಸ್ಟರ್ ಆಗಿದೆ. ಮುಂಬೈನ ಅಂಧೇರಿ (ಪೂ)ದಲ್ಲಿ ಅದರ ಮೂಲಕ ಹಲವು

ಮಂಗಳೂರು: ಟ್ರಾಯ್ನಿಂದ ಕರೆ ಮಾಡಿರುವುದಾಗಿ ನಂಬಿಸಿ 1.71 ಕೋಟಿ ರೂ.ವಂಚನೆ Read More »

ಕರಾವಳಿ

ಮಕ್ಕಳನ್ನು ಬೈಕಿನಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆ ಕಾಡಾನೆ ದಾಳಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ.21. ಮಕ್ಕಳನ್ನು ಬೈಕಿನಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಘಟನೆ ಶಿಶಿಲದಲ್ಲಿ   ನಡೆದಿದೆ.ಶಿಶಿಲ ಗ್ರಾಮದ ಕಳ್ಳಾಜೆ ನಿವಾಸಿ ವಸಂತ ಗೌಡ ಎಂಬವರ ಇಂದು ಬೆಳಗ್ಗೆ ತನ್ನ ಇಬ್ಬರು ಮಕ್ಕಳಾದ ಲಾವ್ಯಾ ಹಾಗೂ ಅದ್ವಿತ್ ರನ್ನು ಶಿಬಾಜೆ ಗ್ರಾಮದ ಪೆರ್ಲ ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಶನಿವಾರ ಬೆಳಗ್ಗೆ 8:30ರ ಸುಮಾರಿಗೆ ವಸಂತ ಗೌಡ ಬೈಕಿನಲ್ಲಿ ಮಕ್ಕಳನ್ನು ಕೂರಿಸಿಕೊಂಡು ಹೋಗುತ್ತಿದ್ದ ವೇಳೆ ರಸ್ತೆಯ ತಿರುವಿನ ಮಧ್ಯೆ ಏಕಾಏಕಿ

ಮಕ್ಕಳನ್ನು ಬೈಕಿನಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆ ಕಾಡಾನೆ ದಾಳಿ Read More »

ಕರಾವಳಿ
Scroll to Top