ಕರಾವಳಿ

ಮಂಗಳೂರು: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

(ನ್ಯೂಸ್ ಕಡಬ) newskadaba.com ಕಡಬ, ನ.21. ಮಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಗುರುವಾರದಂದು ಬೆಳಿಗ್ಗೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಎಸ್ ಪಿ ನಟರಾಜ್ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಮೂರು ವಾಹನಗಳಲ್ಲಿ ಆಗಮಿಸಿ ಕಚೇರಿ ಮತ್ತು ಮನೆ ಮೇಲೆ ದಾಳಿ ನಡೆಸಿದೆ. ಮನೆ, ಕಚೇರಿ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ ಅಧಿಕಾರಿಗಳ ತಂಡ ಮಂಗಳೂರಿನ ವೆಲೆನ್ಸಿಯಾದಲ್ಲಿರುವ ಮನೆಗೆ ಹಾಗೂ ನಗರದ ಮಲ್ಲಿಕಟ್ಟೆಯಲ್ಲಿರುವ ಕಚೇರಿ ಮೇಲೆ ದಾಳಿ […]

ಮಂಗಳೂರು: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ Read More »

ಕರಾವಳಿ, ಕರ್ನಾಟಕ

ಇಂದಿನಿಂದ ನವೆಂಬರ್ 23ರ ವರೆಗೆ ಕಡಬದ ‘ಬಿರಿಯಾನಿ ಹೌಸ್‌’ನಲ್ಲಿ ಸ್ಪೆಷಲ್ ವಿಂಟರ್ ಆಫರ್ ➤ ಮೂರು ದಿನಗಳ ಕಾಲ ವಿಶೇಷ ರಿಯಾಯಿತಿ

(ನ್ಯೂಸ್ ಕಡಬ) newskadaba.com ಕಡಬ, ನ.21. ಇಲ್ಲಿನ ಸೈಂಟ್ ಜೋಕಿಮ್ಸ್ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಬಿರಿಯಾನಿ ಹೌಸ್ ಫ್ಯಾಮಿಲಿ ರೆಸ್ಟೋರೆಂಟ್ ನಲ್ಲಿ ಇಂದಿನಿಂದ (ನ.21) ಶನಿವಾರದ ವರೆಗೆ ಸ್ಪೆಷಲ್ ವಿಂಟರ್ ಆಫರ್ ನಡೆಯಲಿದೆ. 8 ಪೀಸ್ ಫುಲ್ ಅಲ್-ಫಹಾಮ್, ಪರೋಟಾ 6 ಅಥವಾ 3 ಬಟರ್ ನಾನ್ ಅಥವಾ 4 ತಂದೂರಿ ರೊಟ್ಟಿ, 600ml ಹನಾ, ಮಯನೀಸ್ ಮತ್ತು ಸಲಾಡ್ ಕೇವಲ 499 ರೂ., – 4 ಪೀಸ್ ಅಲ್-ಫಹಾಮ್, ಪರೋಟಾ 4 ಅಥವಾ 2

ಇಂದಿನಿಂದ ನವೆಂಬರ್ 23ರ ವರೆಗೆ ಕಡಬದ ‘ಬಿರಿಯಾನಿ ಹೌಸ್‌’ನಲ್ಲಿ ಸ್ಪೆಷಲ್ ವಿಂಟರ್ ಆಫರ್ ➤ ಮೂರು ದಿನಗಳ ಕಾಲ ವಿಶೇಷ ರಿಯಾಯಿತಿ Read More »

ಕರಾವಳಿ

ನಕ್ಸಲ್ ವಿಕ್ರಂ ಗೌಡನ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ ಪಲ್ಟಿ

(ನ್ಯೂಸ್ ಕಡಬ) newskadaba.com ಉಡುಪಿ ನ. 20. ಎನ್‌ಕೌಂಟರ್‌ನಲ್ಲಿ ಮೃತಪಟ್ಟಿರುವ  ನಕ್ಸಲ್‌ ನಾಯಕ ವಿಕ್ರಂ ಗೌಡನ ಮೃತದೇಹವನ್ನು ಅಂತ್ಯಸಂಸ್ಕಾರಕ್ಕಾಗಿ ತೆಗೆದುಕೊಂಡು ಹೋಗುತ್ತಿದ್ದ ಅಂಬುಲೆನ್ಸ್‌ ಪಲ್ಟಿಯಾದ ಘಟನೆ ಹೆಬ್ರಿಯ ಕೂಡ್ಲು ಸಮೀಪ ನಡೆದಿದೆ. ಬೆಳಗ್ಗೆ ಮಣಿಪಾಲದ ಕೆಎಂಸಿಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಅಂತ್ಯಸಂಸ್ಕಾರಕ್ಕಾಗಿ ಮಣಿಪಾಲದಿಂದ ಕೂಡ್ಲುವಿಗೆ ಮೃತದೇಹವನ್ನು ಅಂಬುಲೆನ್ಸ್‌ ಮೂಲಕ ಸಾಗಿಸುವ ವೇಳೆ ವೇಗವಾಗಿ ಸಾಗಿಸುತ್ತಿದ್ದಾಗ ದಿಢೀರ್‌ ದನ ರಸ್ತೆಗೆ ಅಡ್ಡ ಬಂದಿದೆ. ದನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಬದಿಗೆ ಅಂಬುಲೆನ್ಸ್‌ ಚಲಾಯಿಸಿದಾಗ ಪಲ್ಟಿಯಾಗಿದೆ. ಆದರೆ

ನಕ್ಸಲ್ ವಿಕ್ರಂ ಗೌಡನ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ ಪಲ್ಟಿ Read More »

ಕರಾವಳಿ

ಅಂಗನವಾಡಿ ಶಾಲೆ ಎದುರು ನಿಲ್ಲಿಸಿದ್ದ ಕಾರು ಬೆಂಕಿಗೆ ಆಹುತಿ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 20.  ಅಂಗನವಾಡಿ ಶಾಲೆಯ ಎದುರು ನಿಲ್ಲಿಸಿದ್ದ ಕಾರೊಂದು ಬೆಂಕಿ ಹೊತ್ತಿಕೊಂಡು ಸುಟ್ಟು ಭಸ್ಮವಾದ ಘಟನೆ ಸುರತ್ಕಲ್ ವ್ಯಾಪ್ತಿಯ ಕಾನಕಟ್ಲ ಬಳಿ ಇಂದು ಸಂಭವಿಸಿದೆ. ಅಂಗನವಾಡಿ ಹಾಗೂ ಇತರೆ ಕಟ್ಟಡಗಳ ಬಳಿ ನಿಲ್ಲಿಸಿದ್ದ ಕಾರು ಬೆಂಕಿಗೆ ಆಹುತಿಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಕೂಡಲೇ ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದು, ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ದಳದವರ ಕಾರ್ಯಾಚರಣೆಯ ಹೊರತಾಗಿಯೂ ಇಡೀ ಕಾರು ಸುಟ್ಟು ಭಸ್ಮವಾಗಿದೆ. ಇನ್ನು ಸಮೀಪದ

ಅಂಗನವಾಡಿ ಶಾಲೆ ಎದುರು ನಿಲ್ಲಿಸಿದ್ದ ಕಾರು ಬೆಂಕಿಗೆ ಆಹುತಿ Read More »

ಕರಾವಳಿ

ವಿಟ್ಲ:ನೇಣುಬಿಗಿದು ವ್ಯಕ್ತಿಯೋರ್ವರು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಟ್ಲ, ನ. 20. ವಿಟ್ಲ ಸಮೀಪದ ಕುಂಡಡ್ಕದ ಮರುವಾಳ ನಿವಾಸಿ ತಿಮ್ಮಪ್ಪ ಪೂಜಾರಿಯವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೃತರು ನ.19ರಂದು ಸಂಜೆ ಮನೆಯಿಂದ ಹೊರ ಹೋದವರು ಬಳಿಕ ಮರಳಿ ಮನೆಗೆ ಬಾರದೆ ನಾಪತ್ತೆಯಾಗಿದ್ದರು. ಅವರಿಗಾಗಿ ಮನೆಮಂದಿ ಹುಟುಕಾಟ ನಡೆಸಿದಾಗ ಮನೆ ಸಮೀಪದ ಗುಡ್ಡದಲ್ಲಿ ತಿಮ್ಮಪ್ಪ ಪೂಜಾರಿಯವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ವಿಟ್ಲ:ನೇಣುಬಿಗಿದು ವ್ಯಕ್ತಿಯೋರ್ವರು ಆತ್ಮಹತ್ಯೆ Read More »

ಕರಾವಳಿ

ಮಂಗಳೂರು: ಖ್ಯಾತ ಪತ್ರಕರ್ತ, ಚಿಂತಕ ವಿ ಟಿ ರಾಜಶೇಖರ್ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 20. ಖ್ಯಾತ ಪತ್ರಕರ್ತ, ಲೇಖಕ, ಚಿಂತಕ ಹಾಗು ದಲಿತ್ ವಾಯ್ಸ್ ನಿಯತಕಾಲಿಕದ ಸ್ಥಾಪಕ ಸಂಪಾದಕ ವಿ ಟಿ ರಾಜಶೇಖರ್ ಅವರು ಬುಧವಾರ ಬೆಳಗ್ಗೆ ಕೊನೆಯುಸಿರೆಳದಿದ್ದಾರೆ. ಕೆಲವು ವರ್ಷಗಳಿಂದ ಮಂಗಳೂರಿನ ಶಿವಭಾಗ್ ನಲ್ಲಿ ನಿವೃತ್ತ ಜೀವನ ನಡೆಸುತ್ತಿದ್ದ ಅವರು ಇತ್ತೀಚಿಗೆ ಅಸೌಖ್ಯದಿಂದ ಬಳಲುತ್ತಿದ್ದರು. ಇದೀಗ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಇಂಡಿಯನ್ ಎಕ್ಸ್ ಪ್ರೆಸ್ ನಲ್ಲಿ ಎರಡು ದಶಕಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದ ಅವರು ಬಳಿಕ ದಲಿತರ ಧ್ವನಿಯಾಗಿ ಕೆಲಸ

ಮಂಗಳೂರು: ಖ್ಯಾತ ಪತ್ರಕರ್ತ, ಚಿಂತಕ ವಿ ಟಿ ರಾಜಶೇಖರ್ ಇನ್ನಿಲ್ಲ Read More »

ಕರಾವಳಿ

ಸುಳ್ಯದಲ್ಲಿ ತಡ ರಾತ್ರಿ ಹೋಗುತ್ತಿದ್ದ ವಾಹನಕ್ಕೆ ಎದುರುಗೊಂಡ ಎರಡು ಕಾಡಾನೆಗಳು: ಚಾಲಕ ಮಾಡಿದ್ದೇನು?

(ನ್ಯೂಸ್ ಕಡಬ) newskadaba.com ಸುಳ್ಯ, ನ. 20. ಸುಳ್ಯ- ಸುಬ್ರಹ್ಮಣ್ಯದ ಕಾಡಂಚಿನ ಪ್ರದೇಶಗಳಲ್ಲಿ ರಾತ್ರಿ ಸಾಮಾನ್ಯವಾಗಿ ಕಾಡಾನೆಗಳು ಓಡಾಟ ಮಾಡುವುದು ಸಾಮಾನ್ಯವಾಗಿದೆ. ಇದೀಗ ಸುಳ್ಯದ ಮರ್ಕಂಜದಲ್ಲಿ ತಡ ರಾತ್ರಿ ಮುಖ್ಯ ರಸ್ತೆಯಲ್ಲಿಯೇ ಕಾಡಾನೆ ಸಂಚರಿಸಿದೆ. ಮೈಸೂರಿನಂತ ಬಾಡಿಗೆಗೆ ತೆರಳಿ ವಾಪಾಸು ಬರುತ್ತಿದ್ದ ವಾಹನವೊಂದಕ್ಕೆ ಹೈದಂಗೂರು ರಸ್ತೆಯ ಮಧ್ಯೆ 2 ಕಾಡಾನೆಗಳು ಎದುರಾದ ಘಟನೆ ನ. 17ರಂದು ನಡೆದಿದ್ದು ಚಾಲಕ ಜಾಣತನದಿಂದ ಆನೆಗಳು ಹೋದ ಬಳಿಕ ವಾಹನವನ್ನು ಚಲಾಯಿಸಿಕೊಂಡು ಮುಂದೆ ಸಾಗಿದ್ದಾರೆ. ಯಶಸ್ವಿ ಹೆಸರಿನ ವ್ಯಾನ್ ಪ್ರಯಾಣಿಕರನ್ನು ಬಿಟ್ಟು

ಸುಳ್ಯದಲ್ಲಿ ತಡ ರಾತ್ರಿ ಹೋಗುತ್ತಿದ್ದ ವಾಹನಕ್ಕೆ ಎದುರುಗೊಂಡ ಎರಡು ಕಾಡಾನೆಗಳು: ಚಾಲಕ ಮಾಡಿದ್ದೇನು? Read More »

ಕರಾವಳಿ

ಪದವಿನಂಗಡಿ: ಸರಣಿ ಅಪಘಾತ; ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 20. ಮಂಗಳೂರಿನ ಪದವಿನಂಗಡಿಯಲ್ಲಿ ಕಾರು ಡಿಕ್ಕಿ ಹೊಡೆದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಮಂಗಳವಾರ ಮದ್ಯಾಹ್ನ ಸಂಭವಿಸಿದೆ. ಜಯಶೀಲ ಮೃತಪಟ್ಟವರು ಎಂದು ತಿಳಿದು ಬಂದಿದೆ. ಜಯಶೀಲರವರು ರಸ್ತೆಬದಿ ನಿಂತಿದ್ದ ವೇಳೆ ಕಾರು ಬಂದು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಯ ವೀಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ರಸ್ತೆ ಬದಿ ನಿಲ್ಲಿಸಿದ್ದ ಕಾರು ಏಕಾಏಕೀ ಬಂದು ಮುಂದೆ ನಿಂತಿದ್ದ ಕಾರೊಂದಕ್ಕೆ ಡಿಕ್ಕಿ ಹೊಡೆದು, ಆ ಕಾರು ಮತ್ತೊಂದು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಸರಣಿ

ಪದವಿನಂಗಡಿ: ಸರಣಿ ಅಪಘಾತ; ಮಹಿಳೆ ಮೃತ್ಯು Read More »

ಕರಾವಳಿ

ಕೆನರಾ ಇಂಜಿನಿಯರಿಂಗ್ ಕಾಲೇಜು ನೂತನ ಇನ್ಕ್ಯುಬೇಶನ್ ಸೆಂಟರ್ ಸೆಕ್ಷನ್ ಇನ್ಫಿನಿಟಿ 8 ಫೌಂಡೇಶನ್ ಒಪ್ಪಂದ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 20. ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜು ನೂತನ ಇನ್ಕ್ಯುಬೇಶನ್ ಸೆಂಟರ್ ಹಾಗೂ ಸ್ಟಾರ್ಟ್ ಅಪ್ ಇಕೋಸಿಸ್ಟಮ್ ವೃದ್ಧಿಗಾಗಿ ಸೆಕ್ಷನ್ ಇನ್ಫಿನಿಟಿ 8 ಫೌಂಡೇಶನ್ ಪರಸ್ಪರ ಒಪ್ಪಂದ ಮಾಡಿಕೊಂಡಿವೆ. ಕೆನರಾ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಅಮ್ಮೆಂಬಳ ಸುಬ್ಬರಾವ್ ಪೈ ಅವರ ಜನ್ಮದಿನಾಚರಣೆಯ ಸುದಿನ ಅವರ ಉದ್ಯಮಶೀಲತೆಯ ಪರಂಪರೆಯನ್ನು ಮುಂದಿನ ಯುವ ಪೀಳಿಗೆಗಾಗಿ ಮುನ್ನಡೆಸುವ ಸಂಕಲ್ಪದೊಂದಿಗೆ ನ.19ರಂದು ಈ ಒಪ್ಪಂದ ಮಾಡಿಕೊಳ್ಳಲಾಗಿದೆ. ಕೆನರಾ ಸಿಬಿಎಸ್ಸಿ ಆಡಳಿತ ಮಂಡಳಿಯ ಸಭಾಂಗಣದಲ್ಲಿ ಜರುಗಿದ ಈ ಸಮಾರಂಭದಲ್ಲಿ

ಕೆನರಾ ಇಂಜಿನಿಯರಿಂಗ್ ಕಾಲೇಜು ನೂತನ ಇನ್ಕ್ಯುಬೇಶನ್ ಸೆಂಟರ್ ಸೆಕ್ಷನ್ ಇನ್ಫಿನಿಟಿ 8 ಫೌಂಡೇಶನ್ ಒಪ್ಪಂದ Read More »

ಕರಾವಳಿ

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 14. ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಪ್ರಸಿದ್ಧ ಯಾತ್ರಾ ಸ್ಥಳ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸೋಮವಾರ ಭೇಟಿ ನೀಡಿದರು. ಪತ್ನಿ ಸಮೇತ ದೇಗುಲಕ್ಕೆ ಆಗಮಿಸಿದ ಅವರು, ಆಶ್ಲೇಷ ಬಲಿ ಪೂಜೆ, ಮಹಾಪೂಜೆ ಹಾಗೂ ಅಭಿಷೇಕ ನೆರವೇರಿಸಿದರು. ಈ ವೇಳೆ, ಸೂರ್ಯಕುಮಾರ್ ಯಾದವ್ ದಂಪತಿಗೆ ದೇವಸ್ಥಾನದ ವತಿಯಿಂದ ಗೌರವಾರ್ಪಣೆ ಮಾಡಲಾಯಿತು. ಈ ಹಿಂದೆ ಭಾರತ ಕ್ರಿಕೆಟ್ ತಂಡ ಟಿ20 ವಿಶ್ವಕಪ್ ಗೆದ್ದ ಬಳಿಕ ಸೂರ್ಯಕುಮಾರ್ ಯಾದವ್ ಉಡುಪಿಯ

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಭೇಟಿ Read More »

ಕರಾವಳಿ
Scroll to Top