ಕರಾವಳಿ

ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಹೂಟ್ಟೂರು ಸನ್ಮಾನ

(ನ್ಯೂಸ್ ಕಡಬ) newskadaba.com ನ. 16. ಪತ್ರಕರ್ತ ಪ್ರಭಾಕರ ಆಚಾರ್ಯ ಅವರಿಗೆ ಪ್ರಶಸ್ತಿ ಸಿಕ್ಕಿದ್ದು, ಅವರು ಗ್ರಾಮೀಣ ಭಾಗದ ಚಿತ್ತೂರಿನಲ್ಲಿ ಹುಟ್ಟಿ ಬ್ರಹ್ಮಾವರದಲ್ಲಿ ಪತ್ರಿಕೋದ್ಯಮ ಆರಂಭಿಸಿದರು. ಅವರು ಸಾತ್ವಿಕ ಬರವಣಿಗೆಯ ಮೂಲಕ ಹೆಸರು ಪಡೆದು, ಉಡುಪಿ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದಿದ್ದಾರೆ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಮಾರಣಕಟ್ಟಿ ಶ್ರೀ ಬ್ರಹ್ಮಲಿಂಗೇಶ್ವರ ಸಭಾ ಭವನದಲ್ಲಿ ಚಿತ್ತೂರು ಗ್ರಾಮಸ್ಥರು ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರ ನೇತ್ರತ್ವದಲ್ಲಿ ಉಡುಪಿ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ […]

ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಹೂಟ್ಟೂರು ಸನ್ಮಾನ Read More »

ಕರಾವಳಿ

ಮಂಗಳೂರು: ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ರಜತ ಮಹೋತ್ಸ ಆಚರಣೆ

(ನ್ಯೂಸ್ ಕಡಬ) newskadaba.com ನ. 16. ವೈದ್ಯಕೀಯ ಶಿಕ್ಷಣದಲ್ಲಿ 25 ವರ್ಷಗಳ ಸ್ಮರಣಾರ್ಥ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ರಜತ ಮಹೋತ್ಸವದ ಸಮಾರೋಪ ಸಮಾರಂಭವು ಶುಕ್ರವಾರದಂದು ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್‌ನಲ್ಲಿ ಜರಗಿತು. ಈ ಸಂದರ್ಭದಲ್ಲಿ, ಫಾದರ್ ಮುಲ್ಲರ್ ಅವರು ಡೀಮ್ಡ್-ಟು-ಬಿ ವಿಶ್ವವಿದ್ಯಾಲಯವಾಗಲು ಪ್ರಕ್ರಿಯೆಯ ಪ್ರಾರಂಭವನ್ನು ಗಣ್ಯರು ಅನುಮೋದಿಸಿದರು. ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ನಿರ್ದೇಶಕ ಫಾದರ್ ರಿಚರ್ಡ್ ಅಲೋಶಿಯಸ್ ಕೊಯೆಲೊ, ಎಫ್‌ಎಂಎಂಸಿಯ ಆಡಳಿತಾಧಿಕಾರಿ ಫಾ.ಅಜಿತ್ ಬಿ ಮೆನೆಜಸ್, ಡೀನ್ ಡಾ.ಆಂಟೋನಿ ಸಿಲ್ವನ್ ಡಿಸೋಜಾ ಮತ್ತು ಬಿಷಪ್

ಮಂಗಳೂರು: ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ರಜತ ಮಹೋತ್ಸ ಆಚರಣೆ Read More »

ಕರಾವಳಿ

ಮಂಗಳೂರು ವಿವಿಯ ಆಡಳಿತದ ವಿರುದ್ಧ ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 15. ಮಂಗಳೂರು ವಿಶ್ವವಿದ್ಯಾಲಯದ ವಿರುದ್ಧ ವಿದ್ಯಾರ್ಥಿ ಸಮೂಹವು ಸಿಡಿದೆದ್ದಿದೆ. ಅಂಕಪಟ್ಟಿಯ ಸಮಸ್ಯೆ, ಅವೈಜ್ಞಾನಿಕ ಕಾಲೇಜುಗಳ ಶುಲ್ಕಗಳ ಹೆಚ್ಚಳ, ಪರೀಕ್ಷಾ ಶುಲ್ಕ  ಹೆಚ್ಚಳ ಯುಯುಸಿಎಂಎಸ್ ನಲ್ಲಿರುವ ಗೊಂದಲಗಳು ಮತ್ತು ವಿಶ್ವವಿದ್ಯಾನಿಲಯದಲ್ಲಿರುವ ಹಲವು ಸಮಸ್ಯೆಗಳನ್ನು ಖಂಡಿಸಿ ಎಬಿವಿಪಿ ನೇತೃತ್ವದಲ್ಲಿ ಕೊಣಾಜೆ ಮಂಗಳಗಂಗೋತ್ರಿಯ ಆಡಳಿತ ಕಚೇರಿ ಎದುರುಗಡೆ ಬೃಹತ್ ಪ್ರತಿಭಟನೆ ನಡೆಯಿತು. ಜಿಲ್ಲೆಯ ವಿವಿಧ ಕಾಲೇಜಿನಿಂದ ಪ್ರತಿಭಟನೆಗೆ ಆಗಮಿಸಿರುವ ವಿದ್ಯಾರ್ಥಿಗಳು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ. ಬಸ್ ಮೂಲಕ ತಂಡೋಪತಂಡವಾಗಿ

ಮಂಗಳೂರು ವಿವಿಯ ಆಡಳಿತದ ವಿರುದ್ಧ ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ Read More »

ಕರಾವಳಿ

ನಾಪತ್ತೆಯಾಗಿದ್ದ ವೃದ್ಧರೋರ್ವರ ಮೃತದೇಹ ರೈಲು ಹಳಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ನ. 14.  ಸಜೀಪ ಮುನ್ನೂರು ಗ್ರಾಮದ ನಾಗವಳಚ್ಚಿಲ್‌ನ ವೃದ್ಧರೊಬ್ಬರು ನ. 5ರಂದು ಮನೆಯಿಂದ ಹೊರ ಹೋದವರು ಮರಳಿ ಬಾರದೆ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ದಿನ ಉಳ್ಳಾಲದ ರೈಲು ಹಳಿಯಲ್ಲಿ ಪತ್ತೆಯಾದ ಮೃತದೇಹ ಅವರದ್ದೇ ಎಂದು ತಡವಾಗಿ ಬೆಳಕಿಗೆ ಬಂದಿದೆ. ಮೃತ ದುರ್ದೈವಿಯನ್ನು ನಾಗವಳಚ್ಚಿಲ್ ನಿವಾಸಿ ಉಗ್ಗಪ್ಪ ಪೂಜಾರಿ (70) ಎಂದು ಗುರುತಿಸಲಾಗಿದೆ. ಉಗ್ಗಪ್ಪ ಪೂಜಾರಿ ನ. 5ರಂದು ಪಾಣೆಮಂಗಳೂರಿನ ಬ್ಯಾಂಕ್‌ಗೆ ಹೋಗಿ ತನ್ನ ವೃದ್ಧಾಪ್ಯ ವೇತನ ಪಡೆದುಕೊಂಡು ವಾಪಸ್ಸು ಮನೆಗೆ ಬಂದಿದ್ದರು. ಬಳಿಕ

ನಾಪತ್ತೆಯಾಗಿದ್ದ ವೃದ್ಧರೋರ್ವರ ಮೃತದೇಹ ರೈಲು ಹಳಿಯಲ್ಲಿ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪತಿ ತೀರಿಕೊಂಡ ಬಳಿಕ ಮನನೊಂದು ಪತ್ನಿ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.com ನ. 14. ಕಳೆದ ತಿಂಗಳ ಹಿಂದೆ ಗಂಡ ತೀರಿಕೊಂಡ ಬಳಿಕ ಮಾಸಿಕವಾಗಿ ಕೊರಗುತ್ತಿದ್ದಂತ ಅಂಗನವಾಡಿ ಟೀಚರ್ ಮನೆ ಸಮೀಪದ ಬಾವಿಗೆಹಾರಿ ಆತ್ಮಹತ್ಯೆಗೈದ ಘಟನೆ ಮಿಯ್ಯಾರು ಕುಂಟಿಬೈಲ್ ಮಂಜಡ್ಕ ಎಂಬಲ್ಲಿ ನಡೆದಿದೆ. ಸೌಮ್ಯ(39) ಎಂಬವರು ಆತ್ಮಹತ್ಯೆಗೆ ಶರಣಾದವರು. ಮಿಯ್ಯಾರು ಚರ್ಚ್ ಬಳಿಯ ಅಂಗನವಾಡಿಯಲ್ಲಿ ಟೀಚರ್ ಆಗಿ ಕಳೆದ 15 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಇಬ್ಬರು ಹೆಣ್ಣು ಮಕ್ಕಳೊಂದಿಗೆ ಸಂಸಾರ ನಡೆಸುತ್ತಿದ್ದ ಇವರ ಪತಿ ಒಂದು ತಿಂಗಳ ಹಿಂದೆ ಮೃತಪಟ್ಟಿದ್ದರು. ಇದರಿಂದ ನೊಂದಿದ್ದ ಸೌಮ್ಯ ಮನೆ ಸಮೀಪದ

ಪತಿ ತೀರಿಕೊಂಡ ಬಳಿಕ ಮನನೊಂದು ಪತ್ನಿ ಆತ್ಮಹತ್ಯೆಗೆ ಶರಣು..! Read More »

ಕರಾವಳಿ, ಕ್ರೈಮ್ ನ್ಯೂಸ್

ಕಸ್ತೂರಿ ರಂಗನ್ ಜಾರಿ ವಿರೋಧಿಸಿ ಪ್ರತಿಭಟನಾ ಸಭೆ ಆರಂಭ

(ನ್ಯೂಸ್ ಕಡಬ) newskadaba.com ಗುಂಡ್ಯ, ನ. 15. ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ದ.ಕ ಕರ್ನಾಟಕ ಇದರ ಆಶ್ರಯದಲ್ಲಿ ಕಸ್ತೂರಿ ರಂಗನ್ ವರದಿಯ ವಿರುದ್ಧ ಬೃಹತ್ ಪ್ರತಿಭಟನಾ ಸಭೆಯು ಶುಕ್ರವಾರದಂದು ಬೆಳಗ್ಗೆ 11 ಗಂಟೆಗೆ ಗುಂಡ್ಯದಲ್ಲಿ ಆರಂಭಗೊಂಡಿದೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು. ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಸಕಲೇಶಪುರ ಶಾಸಕ ಸಿಮೆಂಟ್ ಮಂಜು, ಮಾಜಿ ಶಾಸಕ ಸಂಜೀವ ಮಠಂದೂರು, ಸಾಮಾಜಿಕ

ಕಸ್ತೂರಿ ರಂಗನ್ ಜಾರಿ ವಿರೋಧಿಸಿ ಪ್ರತಿಭಟನಾ ಸಭೆ ಆರಂಭ Read More »

ಕರಾವಳಿ

ಶಕ್ತಿ ಯೋಜನೆಯಡಿಯಲ್ಲಿ ಗಂಡು ಮಕ್ಕಳಿಗೂ ಉಚಿತ ಪ್ರಯಾಣ: ಡಿಕೆಶಿ ಸುಳಿವು

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 15.  ಕಾಂಗ್ರೆಸ್ ಸರ್ಕಾರವು ಈಗಾಗಲೇ ಶಕ್ತಿ ಯೋಜನೆಯಡಿಯಲ್ಲಿ ಹೆಣ್ಣು ಮಕ್ಕಳಿಗೆ ಉಚಿತ ಬಸ್ ಪ್ರಯಾಣ ವ್ಯವಸ್ಥೆ ಕಲ್ಪಿಸಿದೆ. ಇದೀಗ ಶಕ್ತಿ ಯೋಜನೆಯಡಿ ವಯೋಮಿತಿಗೊಳಪಡಿಸಿ ಗಂಡು ಮಕ್ಕಳಿಗೂ ರಾಜ್ಯ ಸಾರಿಗೆ ಬಸ್ಸುಗಳಲ್ಲಿ ಉಚಿತ ಸಂಚಾರಕ್ಕೆ ಅವಕಾಶ ನೀಡುವ ಬಗ್ಗೆ ಸರ್ಕಾರದಲ್ಲಿ ಚರ್ಚಿಸಿ ಮುಂದೆ ಕ್ರಮ ವಹಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ. ದೇಶದ ಪ್ರಥಮ ಪ್ರಧಾನಿ ಜವಾಹರ್ ಲಾಲ್ ನೆಹರು ಅವರ 135ನೇ ಜಯಂತಿ ಹಾಗೂ ಮಕ್ಕಳ ದಿನಾಚರಣೆಯ

ಶಕ್ತಿ ಯೋಜನೆಯಡಿಯಲ್ಲಿ ಗಂಡು ಮಕ್ಕಳಿಗೂ ಉಚಿತ ಪ್ರಯಾಣ: ಡಿಕೆಶಿ ಸುಳಿವು Read More »

ಕರಾವಳಿ

ಶ್ರೀಮಂತ ದೇಶಗಳಿಗೆ 5.6 ಲಕ್ಷ ಭಾರತೀಯರು ವಲಸೆ

(ನ್ಯೂಸ್ ಕಡಬ) newskadaba.com ಮುಂಬೈ, ನ. 15. ಭಾರತೀಯರಲ್ಲಿ ಅಮೆರಿಕ, ಇಂಗ್ಲೆಂಡ್ ಮತ್ತು ಕೆನಡಾದಂಥ ದೇಶಗಳಿಗೆ ವಲಸೆ ಹೋಗುವ ಪ್ರವೃತ್ತಿಯು ಹೆಚ್ಚಿದ್ದು, 2022ರಲ್ಲಿ ಒಟ್ಟು 5.6 ಲಕ್ಷ ಮಂದಿ ಈ ಸಮೃದ್ಧ ದೇಶಗಳಿಗೆ ವಲಸೆ ಹೋಗಿದ್ದಾರೆ. ಆರ್ಥಿಕ ಸಹಕಾರ ಮತ್ತು ಅಭಿವೃದ್ಧಿ ಸಂಸ್ಥೆ ದೇಶಗಳ ಹೊಸ ವಲಸೆಗಾರರಾಗಿ, ಅಂತರಾಷ್ಟ್ರೀಯ ವಿದ್ಯಾರ್ಥಿಗಳಾಗಿ, ಪೌರತ್ವ ಪಡೆದವರ ಪಟ್ಟಿಯಲ್ಲಿ ಭಾರತೀಯರು ಗಣನೀಯ ಸಂಖ್ಯೆಯಲ್ಲಿದ್ದಾರೆ. ಆದರೆ ಈ ದೇಶಗಳು ಪ್ರಸ್ತುತ ಅನುಸರಿಸುತ್ತಿರುವ ರಕ್ಷಣಾತ್ಮಕ ನೀತಿಯಿಂದಾಗಿ ಈ ಮುಕ್ತ ಮಾರ್ಗ ಕಿರಿದಾಗುತ್ತಿದೆ. 2022ರಲ್ಲಿ 5.6

ಶ್ರೀಮಂತ ದೇಶಗಳಿಗೆ 5.6 ಲಕ್ಷ ಭಾರತೀಯರು ವಲಸೆ Read More »

ಕರಾವಳಿ

ನೇರ ನಗದು ವರ್ಗಾವಣೆ ಮೂಲಕ ರೈತರಿಗೆ 2100 ಕೋಟಿ ರೂ ಬೆಳೆ ವಿಮೆ ಪಾವತಿ: ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 15. ನೇರ ನಗದು ವರ್ಗಾವಣೆ ಮೂಲಕ ರಾಜ್ಯದ ರೈತರಿಗೆ 2100 ಕೋಟಿ ರೂ ಬೆಳೆ ವಿಮೆ ಪಾವತಿ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಗುರುವಾರ ಹೇಳಿದೆ. ರಾಜ್ಯದಲ್ಲಿ ಸುಮಾರು 78 ಲಕ್ಷಕ್ಕೂ ಹೆಚ್ಚು ರೈತರು ಹಾಗೂ 125 ಲಕ್ಷಕ್ಕೂ ಹೆಚ್ಚು ಕೃಷಿ ಕಾರ್ಮಿಕರು ಕೃಷಿಯಲ್ಲಿ ತೊಡಗಿದ್ದಾರೆ. ರಾಜ್ಯ ಸರಕಾರ ಕೃಷಿಗೆ ಗರಿಷ್ಠ ಆದ್ಯತೆ ನೀಡಿದೆ. ಹಿಂದಿನ ಸಾಲಿನಲ್ಲಿ ಸುಮಾರು 1,000 ಕೋಟಿ ರೂ. ಸಬ್ಸಿಡಿಯೊಂದಿಗೆ ಯಂತ್ರೋಪಕರಣ, ನೀರಾವರಿ ಸಲಕರಣೆಗಳನ್ನು ವಿತರಿಸಿದೆ.

ನೇರ ನಗದು ವರ್ಗಾವಣೆ ಮೂಲಕ ರೈತರಿಗೆ 2100 ಕೋಟಿ ರೂ ಬೆಳೆ ವಿಮೆ ಪಾವತಿ: ರಾಜ್ಯ ಸರ್ಕಾರ Read More »

ಕರಾವಳಿ

ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಮರ- ವಾಹನ ಸಂಚಾರಕ್ಕೆ ತಡೆ

(ನ್ಯೂಸ್ ಕಡಬ) newskadaba.com ನ. 14. ರಾಜೆಯ ಕಲ್ಬರ್ಪೆ ಬಳಿ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ಗುರುವಾರ ರಾತ್ರಿ ಮರ ಬಿದ್ದ ಹಿನ್ನೆಲೆಯಲ್ಲಿ ರಸ್ತೆ ತಡೆ ಉಂಟಾಯಿತು. ಒಂದುವರೆ ಗಂಟೆಯ ಬಳಿಕ ಮರವನ್ನು ತೆರವುಗೊಳಿಸಿದ ಹಿನ್ನಲೆಯಲ್ಲಿ ರಸ್ತೆ ವಾಹನಗಳ ಸಂಚಾರಕ್ಕೆ ಮುಕ್ತವಾಯಿತು. ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಸ್ಥಳೀಯರು ಸೇರಿ ಮರವನ್ನು ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ತಮಿಳುನಾಡು ಮೂಲದ ದೋಸ್ತ್ ವಾಹನವೊಂದು ಸಂಚಾರ ಮಾಡುತ್ತಿದ್ದ ಸಮಯದಲ್ಲಿಯೇ ಈ ಮರ ಬಿದ್ದಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ

ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಮರ- ವಾಹನ ಸಂಚಾರಕ್ಕೆ ತಡೆ Read More »

ಕರಾವಳಿ
Scroll to Top