ಕರಾವಳಿ

ತೊಕ್ಕೊಟ್ಟು-ಮುಡಿಪು ರಸ್ತೆ ಅಭಿವೃದ್ಧಿಗೆ 30 ಕೋಟಿ ರೂ ಅನುದಾನ ಬಿಡುಗಡೆ- ಯು.ಟಿ ಖಾದರ್

(ನ್ಯೂಸ್ ಕಡಬ) newskadaba.com ಉಳ್ಳಾಲ, ನ. 15. ತೊಕ್ಕೊಟ್ಟು-ಮುಡಿಪು ರಸ್ತೆ ಅಭಿವೃದ್ಧಿಗೆ 30 ಕೋಟಿ ರೂಪಾಯಿ, ಮಂಗಳೂರು ವಿಧಾನಸಭಾ ಕ್ಷೇತ್ರದ ವಿವಿಧ ರಸ್ತೆಗಳ ಅಭಿವೃದ್ಧಿಗೆ ಸರಕಾರದಿಂದ ಅರುವತ್ತು ಲಕ್ಷ ರೂಪಾಯಿ ಅನುದಾನ ಬಿಡುಗಡೆಯಾಗಿದೆಯೆಂದು ವಿದಾನಸಭೆಯ ಸಭಾಧ್ಯಕ್ಷ ಯು.ಟಿ ಖಾದರ್ ಹೇಳಿಕೆ ನೀಡಿದ್ದಾರೆ. ಅವರು ಉಳ್ಳಾಲ ನಗರಸಭಾ ವ್ಯಾಪ್ತಿಯ ಕೆರೆಬೈಲ್ ಪ್ರದೇಶದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಕಾಂಕ್ರಿಟ್ ರಸ್ತೆ ಮತ್ತು ತಡೆಗೋಡೆ ಕಾಮಗಾರಿಗೆ ಗುರುವಾರ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, […]

ತೊಕ್ಕೊಟ್ಟು-ಮುಡಿಪು ರಸ್ತೆ ಅಭಿವೃದ್ಧಿಗೆ 30 ಕೋಟಿ ರೂ ಅನುದಾನ ಬಿಡುಗಡೆ- ಯು.ಟಿ ಖಾದರ್ Read More »

ಕರಾವಳಿ

ಶಬರಿಮಲೆ ದೇವಾಲಯದಲ್ಲಿ ಇಂದಿನಿಂದ ಮಂಡಲ ಪೂಜೆ, ಡಿ.26 ರವರೆಗೆ ದರ್ಶನಕ್ಕೆ ಅವಕಾಶ

(ನ್ಯೂಸ್ ಕಡಬ) newskadaba.com ಶಬರಿಮಲೆ, ನ. 15.ಶಬರಿಮಲೆಯಲ್ಲಿ ಮಂಡಲ ಪೂಜೆಗಾಗಿ ನ.15ರಂದು ದೇವಸ್ಥಾನ ತೆರೆಯಲಿದ್ದು, ಡಿ.26ರ ತನಕ ದರ್ಶನಕ್ಕೆ ಅವಕಾಶವಿದೆ. ನಿತ್ಯ 70000 ಜನರಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲು ದೇಗುಲದ ಆಡಳಿತ ಮಂಡಳಿ ನಿರ್ಧರಿಸಿದ್ದು, ಒಂದು ವೇಳೆ ಜನಸಂದಣಿ ತೀರಾ ಹೆಚ್ಚಾದಲ್ಲಿ ಅರ್ಧಗಂಟೆ ಕಾಲ ದರ್ಶನದ ಸಮಯ ವಿಸ್ತರಿಸಲು ಚಿಂತಿಸಲಾಗಿದೆ. ಈಗಾಗಲೇ ವರ್ಚುವಲ್‌ ಕ್ಯೂ ಮೂಲಕ ಲಕ್ಷಾಂತರ ಭಕ್ತರು ನ.15- ಡಿ.29ರವರೆಗಿನ ಸಮಯವನ್ನು ಮುಂಗಡವಾಗಿ ಭೇಟಿಗಾಗಿ ಕಾದಿರಿಸಿದ್ದಾರೆ. ಇದರ ಜೊತೆಗೆ , ಪಂಪಾ, ಎರುಮೆಲಿ, ವಂದಿಪೆರಿಯಾರ್‌ಗಳಲ್ಲಿಯೂ ನಿತ್ಯ

ಶಬರಿಮಲೆ ದೇವಾಲಯದಲ್ಲಿ ಇಂದಿನಿಂದ ಮಂಡಲ ಪೂಜೆ, ಡಿ.26 ರವರೆಗೆ ದರ್ಶನಕ್ಕೆ ಅವಕಾಶ Read More »

ಕರಾವಳಿ

ಅಡಿಕೆ ಮರದಿಂದ ಬಿದ್ದು ಕಾರ್ಮಿಕ ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 15. ಅಡಿಕೆ ಮರ ಹತ್ತಿ ಅಡಿಕೆ ಕೀಳುತ್ತಿದ್ದ ಕಾರ್ಮಿಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ಮರದಿಂದ ಬಿದ್ದು ಮೃತಪಟ್ಟ ಘಟನೆ ಪಾಣೆಮಂಗಳೂರಿನ ಬೋಳಂಗಡಿಯಲ್ಲಿ ನಡೆದಿದೆ. ಮೃತಪಟ್ಟ ಕಾರ್ಮಿಕನನ್ನು ಬೋಳಂಗಡಿ ಮಜಲ್ ಮನೆ ನಿವಾಸಿ ಜೋನ್ ಲೋಬೊ(45) ಎಂದು ಗುರುತಿಸಲಾಗಿದೆ. ಅವರು ನ. 13ರಂದು ಬೋಳಂಗಡಿ ಪದ್ಮನಾಭ ಪ್ರಭು ಅವರ ತೋಟದಲ್ಲಿ ಅಡಿಕೆ ಕೀಳುತ್ತಿದ್ದ ಸಂದರ್ಭದಲ್ಲಿ ಅಡಿಕೆ ಮರದಿಂದ ಬಿದ್ದಿದ್ದಾರೆ. ತಕ್ಷಣ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ

ಅಡಿಕೆ ಮರದಿಂದ ಬಿದ್ದು ಕಾರ್ಮಿಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮನೆಯಲ್ಲಿ ಸಂಗ್ರಹಿಸಿಟ್ಟ ಲಕ್ಷಾಂತರ ರೂಪಾಯಿ ಮೌಲ್ಯದ ಅಕ್ರಮ ಗೋವಾ ಮದ್ಯ ವಶಕ್ಕೆ

(ನ್ಯೂಸ್ ಕಡಬ) newskadaba.com ನ. 14. ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಅಕ್ರಮ ಗೋವಾ ಮದ್ಯವನ್ನು ಅಬಕಾರಿ ಇಲಾಖೆಯ ಅಧಿಕಾರಿಗಳು ಕಾರ್ಕಳ ತಾಲೂಕಿನ ಬೋಳ ಗ್ರಾಮದಲ್ಲಿ ವಶಕ್ಕೆ ಪಡೆದಿದ್ದಾರೆ. ಕಾರ್ಕಳ ತಾಲೂಕಿನ ಬೋಳ ಗ್ರಾಮದ ಅವಿನಾಶ್ ಮಲ್ಲಿ ಎಂಬವರಿಗೆ ಸಂಬಂಧಿಸಿದ ಎರಡು ಮನೆಗಳ ಮೇಲೆ ದಾಳಿ ನಡೆಸಿದ ಉಡುಪಿ ಅಬಕಾರಿ ಇಲಾಖೆಯ ಅಧಿಕಾರಿಗಳು ಸುಮಾರು 250ಕ್ಕೂ ಅಧಿಕ ಬಾಕ್ಸ್ ಗಳನ್ನು ವಶಕ್ಕೆ ಪಡೆದಿದ್ದು, ವಶಕ್ಕೆ ಪಡೆದ ಮದ್ಯದ ಮೌಲ್ಯ ಲಕ್ಷಾಂತರ ರೂಪಾಯಿ ಆಗಿರುತ್ತದೆ. ಆರೋಪಿಗಳು ಗೋವಾದಿಂದ

ಮನೆಯಲ್ಲಿ ಸಂಗ್ರಹಿಸಿಟ್ಟ ಲಕ್ಷಾಂತರ ರೂಪಾಯಿ ಮೌಲ್ಯದ ಅಕ್ರಮ ಗೋವಾ ಮದ್ಯ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕುಸಿದುಬಿದ್ದು ಉಪನ್ಯಾಸಕಿ ಮೃತ್ಯು – 5 ಜನರಿಗೆ ಅಂಗಾಂಗ ದಾನ

(ನ್ಯೂಸ್ ಕಡಬ) newskadaba.com ನ. 14. ಕುಸಿದುಬಿದ್ದು ತೀವ್ರ ಅಸ್ವಸ್ಥರಾಗಿ ನಗರದ ಸಂತ ಅಲೋಶಿಯಸ್‌ ಕಾಲೇಜಿನ ಉಪನ್ಯಾಸಕಿ, ಬಜಪೆ ನಿವಾಸಿ ಗ್ಲೋರಿಯಾ ರೋಡ್ರಿಗಸ್‌ ಅವರು ಮೃತಪಟ್ಟಿದ್ದು, ಅವರ ಅಂಗಾಂಗವನ್ನು ದಾನಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.   ನ. 08ರಂದು ಕಾಲೇಜಿನಲ್ಲಿ ಮೆಟ್ಟಿಲು ಇಳಿಯುತ್ತಿದ್ದಾಗ ತಲೆಸುತ್ತು ಬಂದು ಬಿದ್ದ ಪರಿಣಾಮ ಅವರ ತಲೆಗೆ ಗಂಭೀರ ಗಾಯವಾಗಿತ್ತು. ಕೂಡಲೇ ಅವರನ್ನು ಕಂಕನಾಡಿ ಫಾದರ್‌ ಮುಲ್ಲರ್‌ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ನಡುವೆ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ನುರಿತ ವೈದ್ಯರ ತಂಡ ತಿಳಿಸಿದ್ದರು.

ಕುಸಿದುಬಿದ್ದು ಉಪನ್ಯಾಸಕಿ ಮೃತ್ಯು – 5 ಜನರಿಗೆ ಅಂಗಾಂಗ ದಾನ Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಶ್ರೀಕೃಷ್ಣ ಮಠದಲ್ಲಿ ಲಕ್ಷದೀಪೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ನ. 14. ಉಡುಪಿ ಶ್ರೀಕೃಷ್ಣ ಮಠದಲ್ಲಿ ನವೆಂಬರ್ 13ರಂದು ಲಕ್ಷದೀಪೋತ್ಸವ ಆಚರಿಸಲಾಯಿತು. ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಉತ್ಥಾನ ದ್ವಾದಶಿ ನಿಮಿತ್ತ ಶ್ರೀಕೃಷ್ಣ ಮಠದಲ್ಲಿ ತೆಪ್ಪೋತ್ಸವ ಮತ್ತು ವಾರ್ಷಿಕ ರಥೋತ್ಸವ ಉದ್ಘಾಟನೆಗೊಂಡಿತು. ಬೆಳಿಗ್ಗೆ ತುಳಸಿ ಪೂಜೆ ಮತ್ತು ಸಂಜೆ ಕ್ಷೀರಾಭಿಷೇಕ (ಹಾಲು ವಿಸರ್ಜನೆ) ಪೂಜೆಯೊಂದಿಗೆ ಉತ್ಸವವು ಪ್ರಾರಂಭವಾಯಿತು. ಸಂಜೆಯ ವಿಧಿವಿಧಾನಗಳು ಮಧ್ವ ಸರೋವರದ ಕೇಂದ್ರ ಮಂಟಪದಲ್ಲಿ ಕ್ಷೀರಾಭಿಷೇಕವನ್ನು ಒಳಗೊಂಡಿತ್ತು, ಅಲ್ಲಿ ಶ್ರೀ ಸುಗುಣೇಂದ್ರ ತೀರ್ಥ

ಉಡುಪಿ: ಶ್ರೀಕೃಷ್ಣ ಮಠದಲ್ಲಿ ಲಕ್ಷದೀಪೋತ್ಸವ ಆಚರಣೆ Read More »

ಕರಾವಳಿ

’ಕರ್ನಾಟಕ ಸೇರಿದಂತೆ ಯಾವುದೇ ರಾಜ್ಯಕ್ಕೂ ಕೇಂದ್ರ ಸರಕಾರ ಮಲತಾಯಿ ಧೋರಣೆ ಮಾಡಿಲ್ಲ’-  ನಿರ್ಮಲಾ ಸೀತಾರಾಮನ್

(ನ್ಯೂಸ್ ಕಡಬ) newskadaba.com ನ. 14. ಕರ್ನಾಟಕ ಸೇರಿದಂತೆ ಯಾವುದೇ ರಾಜ್ಯಕ್ಕೂ ಕೇಂದ್ರ ಸರಕಾರ ಮಲತಾಯಿ ಧೋರಣೆ ಮಾಡಿಲ್ಲ. ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು ಮಾಡುತ್ತಿರುವ ಆರೋಪ ಆಧಾರರಹಿತವಾದದ್ದು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಮಂಗಳೂರಿನ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ಬುಧವಾರ ಸಿಟಿಜನ್ ಕೌನ್ಸಿಲ್ ವತಿಯಿಂದ ಹಮ್ಮಿಕೊಳ್ಳಲಾದ ಅನೌಪಚಾರಿಕ ಸಂವಾದ ಸಮಾರಂಭದಲ್ಲಿ ಮಾತನಾಡಿದ ಅವರು, ಭಾರತ ಜಗತ್ತಿನಲ್ಲೇ ಐದನೇ ಅತಿದೊಡ್ಡ ಆರ್ಥಿಕತೆ ಯಾಗಿರುವುದಕ್ಕೆ ಪರಿಣಾಮಕಾರಿ ನಾಯಕತ್ವ ಹಾಗೂ ರಾಷ್ಟ್ರದ ನೀತಿಗಳೂ ಕಾರಣವಾಗಿವೆ. ಮೂರನೇ

’ಕರ್ನಾಟಕ ಸೇರಿದಂತೆ ಯಾವುದೇ ರಾಜ್ಯಕ್ಕೂ ಕೇಂದ್ರ ಸರಕಾರ ಮಲತಾಯಿ ಧೋರಣೆ ಮಾಡಿಲ್ಲ’-  ನಿರ್ಮಲಾ ಸೀತಾರಾಮನ್ Read More »

ಕರಾವಳಿ
crime, arrest, suspected

ಅಸುರಕ್ಷಿತ ಡಾಮರು, ಜಲ್ಲಿ ಸಾಗಾಟ: ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ನ. 14. ಡಾಮರು, ಜಲ್ಲಿ ಸಾಗಿಸುತ್ತಿದ್ದ ಕೇರಳ ನೋಂದಣಿಯ ಲಾರಿಯೊಂದನ್ನು ಮಣಿಪಾಲ ಠಾಣಾ ಪೊಲೀಸರು ವಶಕ್ಕೆ ಪಡೆದು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿರುವ ಕುರಿತು ವರದಿಯಾಗಿದೆ. ಲಾರಿಯು ಜಲ್ಲಿ ತುಂಬಿಸಿಕೊಂಡು ಪೆರಂಪಳ್ಳಿ ರಸ್ತೆ ಮೂಲಕ ಸಾಗುತ್ತಿದ್ದ ವೇಳೆ ಜಲ್ಲಿಗಳು ರಸ್ತೆಗೆ ಬಿದ್ದು, ಇತರ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗಿತ್ತು. ಈ ಕುರಿತು ಸಾರ್ವಜನಿಕರು ಪೊಲೀಸರಿಗೆ ಕರೆ ಮಾಡಿ ತಿಳಿಸಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಅಂಬಾಗಿಲು ಕಡೆಗೆ ಹೋಗುತಿದ್ದ ಲಾರಿಯನ್ನು ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ.

ಅಸುರಕ್ಷಿತ ಡಾಮರು, ಜಲ್ಲಿ ಸಾಗಾಟ: ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಕಸ್ತೂರಿ ರಂಗನ್ ಜಾರಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯಿಂದ ನಾಳೆ (ನ.15) ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ನ. 14. ಕಸ್ತೂರಿ ರಂಗನ್ ವರದಿ ಜಾರಿಯನ್ನು ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ನೇತೃತ್ವದಲ್ಲಿ ನ.15(ಶುಕ್ರವಾರ) ರಂದು ಬೆಳಗ್ಗೆ 10.30ಕ್ಕೆ ನಡೆಯಲಿರುವ ಬೃಹತ್ ಪ್ರತಿಭಟನಾ ಸಭೆಯಲ್ಲಿ ಬಾಧಿತ ಗ್ರಾಮಗಳಿಂದ ಸಾವಿರಾರು ಜನರು ಭಾಗವಹಿಸಿಲಿದ್ದಾರೆ ಎಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ ಹೇಳಿದರು. ಈ ಕುರಿತು ಬುಧವಾರದಂದು ಕಡಬದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಬಾಧಿತ ಗ್ರಾಮಗಳ ವ್ಯಾಪ್ತಿಯಲ್ಲಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿ ಗುಂಡ್ಯದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ

ಕಸ್ತೂರಿ ರಂಗನ್ ಜಾರಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯಿಂದ ನಾಳೆ (ನ.15) ಬೃಹತ್ ಪ್ರತಿಭಟನೆ Read More »

ಕರಾವಳಿ

ಪತ್ನಿ ಜೊತೆ ರಿಯಲ್‌ ಎಸ್ಟೇಟ್‌ ಉದ್ಯಮಿ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.com ನ. 14. ಪತ್ನಿ ಜೊತೆ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ನೇಣಿಗೆ ಶರಣಾದ ಘಟನೆ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ. ಮೃತ ದಂಪತಿಯನ್ನು ಕೊಪ್ಪ ನಿವಾಸಿ ಜಯಣ್ಣ ಅವರ ಪುತ್ರ ಸುರೇಶ್ (40) ಹಾಗೂ ಅವರ ಪತ್ನಿ ಪಲ್ಲವಿ (28) ಎಂದು ಗುರುತಿಸಲಾಗಿದೆ.  ಬೈಲುಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಹೊನ್ನೂರು ಕಾವಲ್‌ನಲ್ಲಿರುವ ಜಮೀನಿನ ಹಳೆಯ ಖಾಲಿ ಮನೆಯೊಂದರಲ್ಲಿ ದಂಪತಿ ನೇಣಿಗೆ ಶರಣಾಗಿದ್ದಾರೆ. ರಿಯಲ್ ಎಸ್ಟೇಟ್ ಮಾಫಿಯಾದ ಒತ್ತಡ, ಉದ್ಯಮದಲ್ಲಿ‌ ನಷ್ಟ, ಸಾಲಗಾರರ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ

ಪತ್ನಿ ಜೊತೆ ರಿಯಲ್‌ ಎಸ್ಟೇಟ್‌ ಉದ್ಯಮಿ ಆತ್ಮಹತ್ಯೆಗೆ ಶರಣು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top