ಕರಾವಳಿ

ಮಂಗಳೂರು: ಬೊಂದೆಲ್ ಸಂತ ಲಾರೆನ್ಸರ ಚರ್ಚ್ ಗೆ ತ್ರಿವಳಿ ಸಂಭ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 13.  ಮಂಗಳೂರಿನಿಂದ ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಹಾದಿಯಲ್ಲಿ ಮಂಗಳೂರಿನಿಂದ 8 ಕಿ.ಮೀ ದೂರದಲ್ಲಿ ಪ್ರಕೃತಿಯ ಮಡಿಲಲ್ಲಿ ಕಂಗೊಳಿಸುವ ಬೊಂದೆಲ್ ಎಂಬಲ್ಲಿ ರಸ್ತೆಯ ಬಲ ಪಾರ್ಶ್ವದಲ್ಲಿ ಇರುವ ಸಂತ ಲಾರೆನ್ಸರ ಸುಂದರ ದೇವಾಲಯ ಹಾಗೂ ಪುಣ್ಯಕ್ಷೇತ್ರ ಹಲವಾರು ಭಕ್ತಾಭಿಮಾನಿಗಳನ್ನು ತನ್ನತ್ತ ಸೆಳೆಯುತ್ತಿದೆ. ಈಗಾಗಲೇ ನೂರು ಸಂವತ್ಸರಗಳನ್ನು ಪೂರೈಸಿದ ಈ ಚರ್ಚ್ ಹಾಗೂ ಪುಣ್ಯಕ್ಷೇತ್ರಕ್ಕೆ ಇದೀಗ ತ್ರಿವಳಿ ಸಂಭ್ರಮ. ಈ ಬಗ್ಗೆ ಮಂಗಳೂರಿನ ಪತ್ರಿಕಾ ಭವನದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಲಾಗಿದ್ದು, […]

ಮಂಗಳೂರು: ಬೊಂದೆಲ್ ಸಂತ ಲಾರೆನ್ಸರ ಚರ್ಚ್ ಗೆ ತ್ರಿವಳಿ ಸಂಭ್ರಮ Read More »

ಕರಾವಳಿ

ಕಡಬ: ವೃದ್ದ ದಂಪತಿ ವಾಸವಿದ್ದ ಮನೆಯನ್ನು ಕೆಡವಿದ ಅಧಿಕಾರಿಗಳು..!

(ನ್ಯೂಸ್ ಕಡಬ) newskadaba.com ಕಡಬ, ನ. 13. ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿ ಆರು ವರ್ಷಗಳಿಂದ ವಾಸವಿದ್ದ ವೃದ್ದ ದಂಪತಿಗಳ ಮನೆಯೊಂದನ್ನು ಪೊಲೀಸ್ ನೇತೃತ್ವದಲ್ಲಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ನೆಲಸಮ ಮಾಡಿದ ಅಮಾನವೀಯ ಘಟನೆ ತಾಲೂಕಿನ ಕೌಕ್ರಾಡಿ ಎಂಬಲ್ಲಿ ನಡೆದಿದೆ. ರಾಧಮ್ಮ ಮತ್ತು ಮುತ್ತುಸ್ವಾಮಿ ದಂಪತಿ ಮನೆಯನ್ನು ಬುಧವಾರ ಏಕಾಏಕಿ ಧ್ವಂಸಗೊಳಿಸಲಾಗಿದೆ. ಮೂಲತಃ ಚಿತ್ರದುರ್ಗ ಜಿಲ್ಲೆಯ ಹಟ್ಟಿ ನಿವಾಸಿಗಳಾಗಿದ್ದ ದಂಪತಿ ಕೂಲಿ ಕೆಲಸಕ್ಕಾಗಿ ಕರಾವಳಿಗೆ ಆಗಮಿಸಿ ಕಡಬ ತಾಲೂಕಿನ ಉಪ್ಪಿನಂಗಡಿ ಹೋಬಳಿಯ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ಸರ್ಕಾರಿ

ಕಡಬ: ವೃದ್ದ ದಂಪತಿ ವಾಸವಿದ್ದ ಮನೆಯನ್ನು ಕೆಡವಿದ ಅಧಿಕಾರಿಗಳು..! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಅನಾರೋಗ್ಯಕ್ಕೆ ತುತ್ತಾಗಿ ಯುವ ಕಬ್ಬಡ್ಡಿ ಆಟಗಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ. 13.  ಉಜಿರೆ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ, ಯುವ ಪ್ರತಿಭೆ ಚಿನ್ಮಯ ಗೌಡ ಪಿ.ಕೆ. (18) ಅವರು ಅನಾರೋಗ್ಯದಿಂದ ನ.12ರಂದು ಕೊನೆಯುಸಿರೆಳೆದಿದ್ದಾರೆ. ಮೂಲತಃ ಮಂಡ್ಯದವರಾದ ಚಿನ್ಮಯ ಗೌಡ ಹಾಸ್ಟೆಲ್‌ನಲ್ಲಿದ್ದು, ಉಜಿರೆ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಉತ್ತಮ ಕಬಡ್ಡಿ ಪಟುವಾಗಿದ್ದ ಅವರು ಕಾಲೇಜಿಗೆ ಹಲವಾರು ಪ್ರಶಸ್ತಿಗಳನ್ನು ಗೆದ್ದುಕೊಟ್ಟಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಡ್ಯದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ದುರಾದೃಷ್ಟವಶಾತ್ ಚಿಕಿತ್ಸೆ

ಅನಾರೋಗ್ಯಕ್ಕೆ ತುತ್ತಾಗಿ ಯುವ ಕಬ್ಬಡ್ಡಿ ಆಟಗಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಲಾಕಪ್ ಡೆತ್: ಪಿಎಸ್ಐ, ಹೆಡ್ ಕಾನ್ ಸ್ಟೇಬಲ್ ಅಮಾನತು

(ನ್ಯೂಸ್ ಕಡಬ) newskadaba.com ನ. 13. ಬ್ರಹ್ಮಾವರ ಠಾಣೆಯಲ್ಲಿ ನವೆಂಬರ್ 10ರಂದು ನಡೆದ ಲಾಕಪ್ ಡೆತ್ ಘಟನೆಯ ಹಿನ್ನೆಲೆ ಬ್ರಹ್ಮಾವರ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕ ಮಧು ಬಿ.ಇ ಮತ್ತು ಹೆಡ್ ಕಾನ್‌ಸ್ಟೇಬಲ್ ಸುಜಾತಾ ಅವರನ್ನು ಅಮಾನತುಗೊಳಿಸಲಾಗಿದೆ. ಮೃತ ಬಿಜು ಮೋಹನ್ ಎಂಬಾತನನ್ನು, ಬ್ರಹ್ಮಾವರ ಠಾಣಾ ವ್ಯಾಪ್ತಿಯ ಚೇರ್ಕಾಡಿ ಗ್ರಾಮದಲ್ಲಿ ನಡೆದ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 9 ರಂದು ಬಂಧಿಸಲಾಗಿತ್ತು. ಪೊಲೀಸ್ ಕಸ್ಟಡಿಯಲ್ಲಿದ್ದಾಗ ಅವರು ಮೃತಪಟ್ಟಿದ್ದರು. ಘಟನೆ ಸಂಬಂಧ ಬಿಜು ಮೋಹನ್ ಅವರ ಕುಟುಂಬಸ್ಥರು ಬ್ರಹ್ಮಾವರ

ಲಾಕಪ್ ಡೆತ್: ಪಿಎಸ್ಐ, ಹೆಡ್ ಕಾನ್ ಸ್ಟೇಬಲ್ ಅಮಾನತು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ಪತ್ನಿ, ಮಗುವನ್ನು ಕೊಂದು ಪತಿ ಆತ್ಮಹತ್ಯೆ ಪ್ರಕರಣ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ನ. 13. ನಗರದ ಪಕ್ಷಿಕೆರೆ ಎಂಬಲ್ಲಿ ಪತ್ನಿ, ಮಗುವನ್ನು ಕೊಂದು ಪತಿ ಆತ್ಮಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಇಬ್ಬರು ಆರೋಪಿಗಳು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹತ್ಯೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಆರೋಪದಲ್ಲಿ ಮೃತ ಕಾರ್ತಿಕ್ ತಾಯಿ ಶ್ಯಾಮಲಾ ಭಟ್ ಹಾಗೂ ಸಹೋದರಿ ಕಣ್ಮಣಿಯವರನ್ನು ಬಂಧಿಸಲಾಗಿದೆ. ಬಂಧಿತ ಇಬ್ಬರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸುವ ಮೊದಲೇ ಇಬ್ಬರು ಆರೋಪಿಗಳು ತಲೆ‌ತಿರುಗಿ ಬಿದ್ದಿದ್ದು, ಈ ಹಿನ್ನಲೆ ಇಬ್ಬರನ್ನೂ ಮೂಡಬಿದ್ರೆಯ ಖಾಸಗಿ ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದಾರೆ. ಆತ್ಮಹತ್ಯೆಗೂ ಮುನ್ನ ಕೌಟುಂಬಿಕ

ಮಂಗಳೂರಿನಲ್ಲಿ ಪತ್ನಿ, ಮಗುವನ್ನು ಕೊಂದು ಪತಿ ಆತ್ಮಹತ್ಯೆ ಪ್ರಕರಣ- ಇಬ್ಬರ ಬಂಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬಾಲಕಿಯೊಂದಿಗೆ ಅನುಚಿತ ವರ್ತನೆ -ಆರೋಪಿಗೆ ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ನ. 13. 9 ವರ್ಷದ ಹಿಂದೆ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗೆ ಶಿಕ್ಷೆ ಹಾಗೂ ದಂಡ ವಿಧಿಸಿ ಕೋರ್ಟ್ ಆದೇಶಿಸಿದೆ. ಪುತ್ತೂರು ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸರಿತಾ ಡಿ. ಅವರ ಪೀಠ ಈ ಪ್ರಕರಣದ ವಿಚಾರಣೆ ನಡೆಸಿದ್ದು, ಆರೋಪಿಗೆ ಶಿಕ್ಷೆ, ದಂಡ ವಿಧಿಸಿ ಆದೇಶ ನೀಡಿದೆ. ಆರೋಪಿಯು 2015ರ ಡಿ. 4ರಂದು ಕಬಕ ಗ್ರಾಮದಲ್ಲಿ ನಡೆದು ಹೋಗುತ್ತಿದ್ದ ಬಾಲಕಿಯನ್ನು ಕೈ ಹಿಡಿದು ಎಳೆದು ಅನುಚಿತವಾಗಿ ವರ್ತಿಸಿದ್ದ. ಈ ವೇಳೆ

ಬಾಲಕಿಯೊಂದಿಗೆ ಅನುಚಿತ ವರ್ತನೆ -ಆರೋಪಿಗೆ ಶಿಕ್ಷೆ ಪ್ರಕಟ Read More »

ಕರಾವಳಿ, ಕ್ರೈಮ್ ನ್ಯೂಸ್

ತಾಯಿ-ಮಗುವಿನ ಆರೋಗ್ಯ ರಕ್ಷಣೆಗೆ ಮೊಬೈಲ್ ಕರೆ ಸಂದೇಶ

(ನ್ಯೂಸ್ ಕಡಬ) newskadaba.com ನ. 13. 9 ವರ್ಷದ ಹಿಂದೆ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗೆ ಶಿಕ್ಷೆ ಹಾಗೂ ದಂಡ ವಿಧಿಸಿ ಕೋರ್ಟ್ ಆದೇಶಿಸಿದೆ. ಪುತ್ತೂರು ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸರಿತಾ ಡಿ. ಅವರ ಪೀಠ ಈ ಪ್ರಕರಣದ ವಿಚಾರಣೆ ನಡೆಸಿದ್ದು, ಆರೋಪಿಗೆ ಶಿಕ್ಷೆ, ದಂಡ ವಿಧಿಸಿ ಆದೇಶ ನೀಡಿದೆ. ಆರೋಪಿಯು 2015ರ ಡಿ. 4ರಂದು ಕಬಕ ಗ್ರಾಮದಲ್ಲಿ ನಡೆದು ಹೋಗುತ್ತಿದ್ದ ಬಾಲಕಿಯನ್ನು ಕೈ ಹಿಡಿದು ಎಳೆದು ಅನುಚಿತವಾಗಿ ವರ್ತಿಸಿದ್ದ. ಈ ವೇಳೆ

ತಾಯಿ-ಮಗುವಿನ ಆರೋಗ್ಯ ರಕ್ಷಣೆಗೆ ಮೊಬೈಲ್ ಕರೆ ಸಂದೇಶ Read More »

ಕರಾವಳಿ, ಕರ್ನಾಟಕ

ಔಷಧ ವ್ಯವಸ್ಥೆ – ಬಣ್ಣದ ಫಲಕ ಪ್ರದರ್ಶಿಸಲು ಸೂಚನೆ

(ನ್ಯೂಸ್ ಕಡಬ) newskadaba.com ನ. 13. ರೋಗಿಗಳು ಮತ್ತು ಸಾರ್ವಜನಿಕರಿಗೆ ಮತ್ತು ವೈದ್ಯಕೀಯ ಸಂಸ್ಥೆಗಳಲ್ಲಿ ಅಭ್ಯಾಸ ಮಾಡುತ್ತಿರುವ ಔಷಧ ವ್ಯವಸ್ಥೆಯನ್ನು ಸುಲಭವಾಗಿ ಗುರುತಿಸಲು ಅಲೋಪತಿ ಚಿಕಿತ್ಸಾ ಪದ್ದತಿಯನ್ನು ಮಾಡುತ್ತಿರುವವರು ಆಕಾಶ ನೀಲಿ ಬಣ್ಣದ ಫಲಕ ಹಾಗೂ ಆಯುಷ್ ಚಿಕಿತ್ಸಾ ಪದ್ದತಿ ಅನುಸರಿಸುವವರು ತಿಳಿ ಹಸಿರು ಬಣ್ಣದ ಫಲಕವನ್ನು ಅಳವಡಿಸಿ ಅದರಲ್ಲಿ ನಿಗದಿತ ಮಾಹಿತಿಯನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಔಷಧ ವ್ಯವಸ್ಥೆ – ಬಣ್ಣದ ಫಲಕ ಪ್ರದರ್ಶಿಸಲು ಸೂಚನೆ Read More »

ಕರಾವಳಿ

ತಾಯಿ-ಮಗುವಿನ ಆರೋಗ್ಯ ರಕ್ಷಣೆಗೆ ಮೊಬೈಲ್ ಕರೆ ಸಂದೇಶ

(ನ್ಯೂಸ್ ಕಡಬ) newskadaba.com ನ. 13. ಕೇಂದ್ರ ಸರ್ಕಾರವು 4 ತಿಂಗಳು ಮೇಲ್ಪಟ್ಟ ಗರ್ಭಿಣಿ ಮಹಿಳೆಯ ಹಾಗೂ ಒಂದು ವರ್ಷದೊಳಗಿನ ಮಕ್ಕಳಿಗೆ ಕುಟುಂಬದ ಸದಸ್ಯರು ವಹಿಸಬೇಕಾದ ಕಾಳಜಿ, ಲಸಿಕೆ ಒದಗಿಸುವಿಕೆ ಹಾಗೂ ಇತರೆ ತಪಾಸಣೆ ಕೈಗೊಳ್ಳಲು ಸಹಾಯಕವಾಗುವ ದಿಶೆಯಲ್ಲಿ ದೇಶಾದ್ಯಂತ ಎಲ್ಲಾ ಭಾಷೆಗಳಲ್ಲಿ ವಿನೂತನ ಕಾರ್ಯಕ್ರಮ “ಕಿಲ್ಕಾರಿ” ಮೊಬೈಲ್ ಕರೆ ಆರಂಭಿಸಲಾಗಿದೆ ಎಂದು ರಾಜ್ಯ ಕಿಲ್ಕಾರಿ ಸಂಯೋಜಕಿ ಡಾ|| ಅಶ್ವಿನಿ ತಿಳಿಸಿದ್ದಾರೆ. ಕಿಲ್ಕಾರಿಯು ಗರ್ಭಿಣಿಯರು, ತಾಯಂದಿರು ಮತ್ತು ಅವರ ಕುಟುಂಬಗಳಿಗೆ ಸಂತಾನೋತ್ಪತ್ತಿ, ನವಜಾತ ಶಿಶುಗಳು ಮತ್ತು ಮಕ್ಕಳ

ತಾಯಿ-ಮಗುವಿನ ಆರೋಗ್ಯ ರಕ್ಷಣೆಗೆ ಮೊಬೈಲ್ ಕರೆ ಸಂದೇಶ Read More »

ಕರಾವಳಿ

ಪಿಲಿಕುಳ ಕಂಬಳ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ನ. 13. ಗ್ರಾಮ ಪಂಚಾಯತ್ ಚುನಾವಣೆಯ ಹಿನ್ನಲೆ ಜಿಲ್ಲಾಡಳಿತ ವತಿಯಿಂದ ನವೆಂಬರ್ 17ಮತ್ತು 18ರಂದು ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಪಿಲಿಕುಳ ನಿಸರ್ಗಧಾಮದಲ್ಲಿ ಆಯೋಜಿಸಲಾಗಿದ್ದ ಪಿಲಿಕುಳ ಕಂಬಳೋತ್ಸವವನ್ನು ಮುಂದೂಡಲಾಗಿದೆ. ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ಆದೇಶದನ್ವಯ ಗ್ರಾಮ ಪಂಚಾಯತ್ ಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸಲು ಘೋಷಿಸಿದ್ದು, ಚುನಾವಣಾ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನವೆಂಬರ್ 16ರಿಂದ 26ರವರೆಗೆ ಜಾರಿಯಲ್ಲಿರುತ್ತದೆ.

ಪಿಲಿಕುಳ ಕಂಬಳ ಮುಂದೂಡಿಕೆ Read More »

ಕರಾವಳಿ
Scroll to Top